Author: admin

ಪಿಎಸ್‌’ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ಪ್ರಮುಖ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲು ಮುಂದಾಗಿ 6 ಕೋಟಿ ಹಣ ಸಂಗ್ರಹದ ಜಾಡು ಪತ್ತೆ ಹಚ್ಚಲು ಹೊರಟಿರುವುದು ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್‌ಗೆ ಹಣ ನೀಡಿ ಒಪ್ಪಂದ ಮಾಡಿಕೊಂಡಿದ್ದ ಆರೋಪದಡಿ ಶರಣ ಬಸವೇಶ್ವರ ಆರ್ಟ್ಸ್, ಸೈನ್ಸ್, ಕಾಮರ್ಸ್ ಕಾಲೇಜು ಹಾಗೂ ಎಂ.ಎಸ್ ಇರಾನಿ ಕಾಲೇಜಿನಲ್ಲಿ ಪರೀಕ್ಷೆ ಎದುರಿಸಿದ್ದ ಅಭ್ಯರ್ಥಿಗಳಾದ ಕಲ್ಲಪ್ಪ, ಸಿದ್ದುಗೌಡ, ಈರಪ್ಪ, ಸೋಮನಾಥ, ರವಿರಾಜ, ಶ್ರೀಶೈಲ, ಭಗವಂತ್ ರಾಯ್ ನನ್ನು ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಸಿದ್ಧುಗೌಡ – ಆರ್.ಡಿ ಪಾಟೀಲ್ ಸಂಬಂಧಿ ಹಾಗೂ ಹೆಲ್ತ್ ಡಿಪಾರ್ಟ್‌ಮೆಂಟ್‌ನಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕಲ್ಲಪ್ಪ- ಪೊಲೀಸ್ ಕಾನ್ಸ್‌ ಟೇಬಲ್, ಸೋಮನಾಥ- ವ್ಯವಸಾಯ ಮಾಡಿಕೊಂಡಿದ್ದ. ಇನ್ನು ವಿಜಯ್ ಕುಮಾರ್ – ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ರವಿರಾಜ- ಮೊದಲ ರ್‍ಯಾಂಕ್ ಪಡೆದಿರುವ ಆರೋಪಿಯಾಗಿದ್ದಾನೆ. ಶ್ರೀಶೈಲ-…

Read More

ಕಾಮನ್‌ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ವಿಜೇತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಪೂಜಾ ಸಿಹಾಗ್ ಮತ್ತು ಪೂಜಾ ಗೆಹ್ಲೋಟ್ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರ ರಾಜಧಾನಿ ವಿಮಾನ ನಿಲ್ದಾಣದ ಹೊರಗೆ ಬೃಹತ್ ಜನಸಮೂಹ ಜಮಾಯಿಸಿ ಪದಕ ವಿಜೇತರನ್ನು ಸ್ವಾಗತಿಸಿ ಗೆಲುವಿಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಸ್ತಿಪಟು ಸಾಕ್ಷಿ ಮಲಿಕ್, ರಾಷ್ಟ್ರದ ಬೆಂಬಲ ಮತ್ತು ಪ್ರೀತಿಗೆ ಧನ್ಯವಾದ ಅರ್ಪಿಸಿದ್ದಾರೆ. “ಒಲಿಂಪಿಕ್ಸ್ ನಲ್ಲಿ ಮೊದಲ ಪದಕವಾಗಿರುವುದರಿಂದ ಸಂತೋಷವಾಗಿದೆ. ಬೆಂಬಲ ಮತ್ತು ಪ್ರೀತಿ ನೀಡಿದ ಭಾರತಕ್ಕೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ. ಕಂಚಿನ ಪದಕ ವಿಜೇತೆ ಪೂಜಾ ಸಿಹಾಗ್ , ಪದಕದ ಶ್ರೇಯವನ್ನು ತರಬೇತುದಾರರಿಗೆ ಅರ್ಪಿಸುವುದಾಗಿ ಹೇಳಿದ ಅವರು ಪದಕದೊಂದಿಗೆ ಮರಳಿ ಮನೆಗೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. ಕಂಚಿನ ಪದಕ ವಿಜೇತೆ ಪೂಜಾ ಗೆಹ್ಲೋಟ್ ಅವರು ತಮ್ಮ ಸಂತೋಷದ ಭಾವನೆ ವ್ಯಕ್ತಪಡಿಸಿ ದೇಶದ ಜನರಿಗೆ ಧನ್ಯವಾದ ಹೇಳಿದ್ದು ದೇಶಕ್ಕಾಗಿ ಪದಕ ಗೆಲ್ಲುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.…

Read More

ತಿಪಟೂರು: ತಾಲ್ಲೂಕಿನ ಕರಡಿ ಕೆರೆಯು ಕಳೆದ 15 ವರ್ಷಗಳಲ್ಲಿ 3 ನೇ ಬಾರಿ ಕೋಡಿ ಹರಿಯುತ್ತಿದ್ದು, ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ನಂತರ ಮಾತನಾಡಿದ ಅವರು, ತುಂಬಿದ ಕೆರೆ ಕಟ್ಟೆಗಳಿಗೆ, ನದಿಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ, ಮುಂದಿನ ದಿನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಕರಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೆ. ಆರ್.ದೇವರಾಜು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ವಸಂತಕುಮಾರಿ, ಉಪಾಧ್ಯಕ್ಷ ಮುನಿರಾಜು, ಸದಸ್ಯರಾದ ರವೀಶ್, ಕುಮಾರಯ್ಯ , ಕವಿತ, ಕಮಲಮ್ಮ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕವಿತ ಹಾಗೂ ಪಂಚಾಯ್ತಿ ಸಿಬ್ಬಂದಿ ಸೇರಿದಂತೆ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಗುಬ್ಬಿ : ಭಾರತ ದೇಶದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಪ್ರತಿಕವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಣೆ ಮಾಡಲಾಗುತ್ತದೆ. ಕೈಮಗ್ಗವು ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲವಾಗಿದೆ. ಇದು ದೇಶದ ಕೈಮಗ್ಗ ನೇಕಾರರನ್ನು ಗೌರವಿಸುವ ದಿನವೂ ಹೌದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ತುಮಕೂರು ಹಾಗೂ ರೇಷ್ಮೆ ಕೈಮಗ್ಗ ನೇಕಾರರ ಸಹಕಾರ ಸಂಘ ನಿಯಮಿತ ಕಲ್ಲೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಕೈಮಗ್ಗ ಸಪ್ತಾಹ ಆಚರಣೆ ಉದ್ಘಾಟನೆ ಮಾಡಿ ನಂತರ ಮಾತನಾಡಿದ ಅವರು, 2015 ರಿಂದ ನಾವು ನೇಕಾರರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ನಮ್ಮ ನೇಕಾರರನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಆಚರಣೆ ಮಾಡುತ್ತಾ ಬಂದಿದೆ. ಸರ್ಕಾರ ಕೈಮಗ್ಗದ ನಾಯಕರರಿಗೆ ಪ್ರತಿ ವರ್ಷ ಎರಡು ಸಾವಿರ ಸಹಾಯಧನ ವನ್ನು…

Read More

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಶಿಕ್ಷಣ ಸಚಿವರಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಒಂದು ವರ್ಷದ ಪ್ರಗತಿಯ ಮಾಹಿತಿಯನ್ನು ಹಂಚಿಕೊಂಡಿರುವ ಅವರು, ಶಾಲೆಗಳ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ. ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದರು. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಆಗಸ್ಟ್ ೭ ಕ್ಕೆ ಒಂದು ವರ್ಷ ಪೂರೈಸಿದ್ದೇನೆ. ಈ ಒಂದು ವರ್ಷದಲ್ಲಿ ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಅವರು ಹೇಳಿ, ಸಾಧನೆಯ ಪಟ್ಟಿಯನ್ನು ಜನರ ಮುಂದಿಟ್ಟಿದ್ದಾರೆ. ಅನುದಾನಿತ ಶಾಲೆಗಳಲ್ಲಿ 2015ರ ಡಿಸೆಂಬರ್ ೩೧ರ ಪೂರ್ವದಲ್ಲಿ ಖಾಲಿಯಾಗಿರುವ ಬೋಧಕರ ಹುದ್ದೆಗಳ ಭರ್ತಿಗೂ ಅನುಮತಿ ನೀಡಲಾಗಿದೆ. 2ಸಾವಿರಕ್ಕೂ ಹೆಚ್ಚು…

Read More

ನವದೆಹಲಿ: ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮೊಣಕಾಲಿನ ಸಮಸ್ಯೆಗೆ ಒಳಗಾಗಿರುವ ಶೋಯೇಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿರುವ ವಿಡಿಯೋ ಹಂಚಿಕೊಂಡಿದ್ದಾರೆ. ರೋಗಿಗಳ ಡ್ರೇಸ್‍ ಹಾಕಿಕೊಂಡು ಆಸ್ಪತ್ರೆಯ ಬೇಡ್‍ ಮೇಲೆ ಮಲಗಿರುವ ವಿಡಿಯೋವನ್ನು ಅಖ್ತರ್ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಸದ್ಯ ಮೊಣಕಾಲಿನ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ಶೀಘ್ರವೇ ಗುಣಮುಖರಾಗಲು ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ. ಆಸ್ಟ್ರೇಲಿಯಾದ ಮೆಲ್ಬೋರ್ನ್​ನ ಆಸ್ಪತ್ರೆಗೆ ದಾಖಲಾಗಿರುವ 46 ವರ್ಷದ ಅಖ್ತರ್ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಎರಡೂ ಮೊಣಕಾಲಿಗೆ 5-6 ಗಂಟೆಗಳ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನೀವೆಲ್ಲರೂ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಬೇಕು. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಚೇತರಿಸಿಕೊಳ್ಳುವಂತೆ ನನಗಾಗಿ ನೀವು ಪ್ರಾರ್ಥಿಸಬೇಕೆಂದು ಅಖ್ತರ್ ಮನವಿ ಮಾಡಿಕೊಂಡಿದ್ದಾರೆ. ಕ್ರಿಕೆಟ್‍ನಿಂದ ನಿವೃತ್ತಿಯಾಗಿ 11 ವರ್ಷ ಕಳೆದರೂ ನಾನು ಈಗಲೂ ಸಂಕಷ್ಟದಲ್ಲಿದ್ದೇನೆ. ನಾನು ಇನ್ನೂ ನಾಲ್ಕೈದು ವರ್ಷ ಆಡಬಹುದಿತ್ತು. ಆದರೆ ಹಾಗೆ ಮಾಡಿದರೆ ನಾನು ವೀಲ್…

Read More

ಬೆಂಗಳೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ(ಆಗಸ್ಟ್ 8) ಅಭಿಯಾನದ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ರಾಜ್ಯದಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಧ್ವಜ ವಿತರಣೆ ಕಾರ್ಯ ನಡೆಯುತ್ತಿದೆ. ಆಗಸ್ಟ್ 13ರಂದೇ ಧ್ವಜ ಹಾರಿಸುವ ಮೂಲಕ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದ ವಾತಾವರಣ ನಿರ್ಮಾಣವಾಗಬೇಕು ಎಂದು ಸೂಚಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಈ 3 ದಿನಗಳಂದು ಪ್ರತಿದಿನ ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಮನೆಗಳಲ್ಲಿ ಆಗಸ್ಟ್ 13ರಂದು ಧ್ವಜಾರೋಹಣ ಮಾಡಿದರೆ, 15ರವರೆಗೆ ಇರಿಸಬಹುದಾಗಿದೆ ಎಂದು ತಿಳಿಸಿದರು. ಮುಖ್ಯ…

Read More

ಬೆಂಗಳೂರು: ರಿಯಾಲಿಟಿ ಶೋ ಮೂಲಕ ರಾಜ್ಯದಲ್ಲಿ ಖ್ಯಾತಿ ಪಡೆದು ಬಳಿಕ ಬಾರ್ ಗಲಾಟೆ, ಕಿಡ್ನ್ಯಾಪ್ ಪ್ರಕರಣಗಳಲ್ಲಿ ಪೊಲೀಸರ ಅತಿಥಿಯಾಗಿದ್ದ ಸುನಾಮಿ ಕಿಟ್ಟಿ ಆತನ ಮೇಲೆ ಬಂದಿರುವ ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾನೆ. ಪಬ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯಿಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಸುನಾಮಿ ಕಿಟ್ಟಿ ಮತ್ತು ಸ್ನೇಹಿತ ಚೇತನ್ ಗೌಡ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ‌ ಪ್ರತಿಯಾಗಿ ಪ್ರಶಾಂತ್ ಎಂಬುವರಿಂದ ಪ್ರತಿ ದೂರು ದಾಖಲಾಗಿತ್ತು. ಮಾಧ್ಯಮಗಳಲ್ಲಿ ಈ ಸುದ್ದಿ ವರದಿಯಾಗುತ್ತಿದ್ದಂತೆ ಸುನಾಮಿ‌ ಕಿಟ್ಟಿ ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ್ದಾನೆ. ಜುಲೈ 24ರ ರಾತ್ರಿ ಚರ್ಚ್ ಸ್ಟ್ರೀಟ್​ನ ಪಬ್​​ ವೊಂದರಲ್ಲಿ ಪಾರ್ಟಿಗೆ ಸ್ನೇಹಿತ ಚೇತನ್ ಗೌಡ ಜೊತೆ ಹೋದಾಗ ಶ್ಯಾಂಪೆನ್ ಓಪನ್ ಮಾಡುವ ವಿಚಾರದಲ್ಲಿ‌‌ ಮಾತುಕತೆಯಾಗಿತ್ತು. ಅಲ್ಲಿ ಬೇರೆ ಏನು ಆಗಿಲ್ಲ. ಯಾವುದೇ ಗಲಾಟೆಯಲ್ಲಿ ನಾನು ಭಾಗಿಯಾಗಿಲ್ಲ. ಸ್ಟೇಷನ್ ಬೆಲ್‌ ಪಡೆದುಕೊಂಡು ಬಂದಿದ್ದೇನೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನೂ…

Read More

30 ವರ್ಷದ ಭಾರತೀಯ ಮೂಲದ ಮಹಿಳೆ ಮಂದೀಪ್ ಕೌರ್ ಮದುವೆಯ ನಂತರ ಉತ್ತಮ ಜೀವನವನ್ನು ಹುಡುಕಿಕೊಂಡು ನ್ಯೂಯಾರ್ಕ್‌ಗೆ ಹೋಗಿದ್ದರು. ಆದರೆ ತನ್ನ ಜೀವನ ಅಲ್ಲಿ ಮುಕ್ತಾಯವಾಗುತ್ತದೆ ಎಂದು ಅವರು ಭಾವಿಸಿರಲಿಲ್ಲ. ಕಳೆದ ದಿನ ವಿಡಿಯೋ ಮಾಡಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದರು. ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿತ್ತು. ಆದರೆ ಇದೀಗ ಮಹತ್ವದ ಮಾಹಿತಿ ಲಭಿಸಿದ್ದು, ಗಂಡು ಮಗುವಿಗೆ ಜನ್ಮ ನೀಡುವಂತೆ ಮಾನಸಿಕ ಹಿಂಸೆಯನ್ನೂ ಸಹ ಪತಿ ಆಕೆಗೆ ನೀಡುತ್ತಿದ್ದ ಎನ್ನಲಾಗಿದೆ. ಕೌರ್ ನೇಣು ಬಿಗಿದುಕೊಂಡು ತನ್ನ ಜೀವನವನ್ನು ಕೊನೆಗೊಳಿಸಿದ್ದಾಳೆ. ಆದರೆ ಪತಿ ರಂಜೋತ್ವೀರ್ ಸಿಂಗ್ ಸಂಧು ಅವರ ಕೈಯಲ್ಲಿ ಅವಳು ಎದುರಿಸಿದ ಚಿತ್ರಹಿಂಸೆಯ ನೋವಿನ ವಿವರಗಳನ್ನು ವಿವರಿಸುವ ಹೃದಯ ವಿದ್ರಾವಕ ವೀಡಿಯೊವನ್ನು ಬಿಡುಗಡೆ ಮಾಡಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ಈ ಪ್ರಕರಣ ಸಂಬಂಧ ಭಾರತ ಮತ್ತು ಅಮೆರಿಕಾದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾಧ್ಯಮ ಸಂಸ್ಥೆ ಎಎನ್‍ಐ ಜೊತೆ ಮಾತನಾಡಿದ ಸಂತ್ರಸ್ತೆಯ ಸಹೋದರಿ ಕುಲದೀಪ್ ಕೌರ್,…

Read More

ಮೂತ್ರಪಿಂಡಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗ್ವೆ, ಕಿಡ್ನಿ ನಮಗೆ ನಮ್ಮ ದೇಹದ ಅನೇಕ ಕಾರ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.ಆದ್ದರಿಂದ ಮೂತ್ರಪಿಂಡವನ್ನು ಆರೋಗ್ಯಕರವಾಗಿಡುವುದು ತುಂಬಾ ಮಹತ್ವದ್ದಾಗಿದೆ. ಮತ್ತೊಂದೆಡೆ, ಆರೋಗ್ಯಕರ ಆಹಾರ ಮತ್ತು ಸಾಕಷ್ಟು ನೀರು ಕುಡಿಯುವ ಮೂಲಕ ಮೂತ್ರಪಿಂಡವನ್ನು ಆರೋಗ್ಯಕರವಾಗಿರಿಸಿಕೊಳ್ಳಬಹುದು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ಕಿಡ್ನಿ ಹಾಳಾಗುವ ಅಪಾಯ ಕಡಿಮೆಯಾಗುತ್ತದೆ. ಇನ್ನೊಂದೆಡೆ ಕಿಡ್ನಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಲು ಕಿಡ್ನಿಯನ್ನು ಡಿಟಾಕ್ಸ್ ಮಾಡುವುದು ಕೂಡ ಮಹತ್ವದ್ದಾಗಿದೆ. ಇದಕ್ಕಾಗಿ ನಿಮ್ಮ ಆಹಾರದಲ್ಲಿ ನೀವು ಕೆಲವು ಪಾನೀಯಗಳನ್ನು ಶಾಮೀಲುಗೊಳಿಸಬೇಕು . ನಿಮ್ಮ ಕಿಡ್ನಿಯನ್ನು ನೀವು ಹೇಗೆ ಡಿಟಾಕ್ಸ್ ಮಾಡಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಕಿಡ್ನಿ ಡಿಟಾಕ್ಸ್ ಪಾನೀಯಗಳು ಸೇಬು-ವಿನೆಗರ್ ನಿಂದ ತಯಾರಿಸಿದ ಪಾನೀಯ: ಆಪಲ್ ಸೈಡರ್ ವಿನೆಗರ್‌ನಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ಮತ್ತು ಸಿಡ್ರಿಕ್ ಆಮ್ಲವು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಮತ್ತು ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದನ್ನು ಬಳಸಿ ಡಿಟಾಕ್ಸ್ ಪಾನೀಯವನ್ನು ತಯಾರಿಸಬಹುದು, ಇದಕ್ಕಾಗಿ ನೀವು ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ ಒಂದು ಚಮಚ ಆಪಲ್ ಸೈಡರ್ ವಿನೆಗರ್…

Read More