Subscribe to Updates
Get the latest creative news from FooBar about art, design and business.
- ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ
- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
- ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
- ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
Author: admin
ಬಾಗಲಕೋಟೆ: ನಾನೇನಾದ್ರೂ ತಪ್ಪು ಮಾಡಿದ್ದರೆ ಚೌಡೇಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ ಅಂದರೆ ಶಿಕ್ಷೆಯಿಂದ ಮುಕ್ತಿ ನೀಡಲಿ ಇದುವೇ ನನ್ನ ಪ್ರಾರ್ಥನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, 15 ದಿನದಲ್ಲಿ ಇದಕ್ಕೊಂದು ರೂಪ ಬರುತ್ತದೆ ಎಂದುಕೊಂಡಿದ್ದೇನೆ. ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಕೇಂದ್ರದ ಬಿಜೆಪಿ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ವಿಧಾನಪರಿಷತ್ ಟಿಕೆಟ್ ಗಾಗಿ ಬಡಿದಾಡಿದರು. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗುಂಪುಗಳಿವೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಚಾಮರಾಜನಗರ: ಪಠ್ಯ ಪುಸ್ತಕ ವಿಚಾರವನ್ನು ರಾಜಕೀಯಗೊಳಿಸಲು ಹಾಗೂ ಹಿಂದೂ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರವಾಗಿ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಬುಧವಾರ ಮತ ಯಾಚಿಸಿದ ಅವರು, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ, ಎಲ್ಲ ಸಮಯದಲ್ಲೂ ಯಾವುದೇ ಪರಿಷ್ಕರಣೆಯಾದಾಗ ಗೊಂದಲಗಳಿರುತ್ತವೆ. ವೈಚಾರಿಕವಾಗಿ ವಸ್ತುನಿಷ್ಠವಾಗಿ ವಾದ ಮಾಡಲು ಹತಾಶರಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ನವರು ಹಿಜಾಬ್ ಅನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಪ್ರಯತ್ನಿಸಿ ವಿಫಲರಾದರು. ಕೋವಿಡ್ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸಿದಾಗ ಈ ರೀತಿಯ ಮಾತುಗಳನ್ನಾಡಿ ವಿಫಲರಾದರು. ಉತ್ತರ ಪ್ರದೇಶ ಚುನಾವಣೆ ಬಳಿಕ ಕಾಂಗ್ರೆಸ್ ದೇಶದಲ್ಲಿ ಎಲ್ಲೂ ಇಲ್ಲದಾಗಿಬಿಡುತ್ತದೆಯೋ ಎಂಬ ಭಯ ಶುರುವಾಗಿ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬಳ್ಳಾರಿ: ಬಿಜೆಪಿ ಪಕ್ಷದ ದೊಡ್ಡ ಶಕ್ತಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಸೈಡ್ ಲೈನ್ ಮಾಡುವ ಮಾತೇ ಇಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಸ್ಯಡಿಯೂರಪ್ಪನವರು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಪಕ್ಷದ ದೊಡ್ಡ ಶಕ್ತಿ. ಅವರ ಶಕ್ತಿ ಕುಗ್ಗಿಸುವ ಕೆಲಸ ಪಕ್ಷದಲ್ಲಿ ಎಂದೂ ನಡೆಯುವುದಿಲ್ಲ ಎಂದರು. ವಿಧಾನಸಭೆ ಚುನಾವಣೆ ಹತ್ತಿರ ಇರುವ ಕಾರಣ ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಎಂಎಲ್ ಸಿ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಬದ್ದವಾದ ಪಕ್ಷ. ವಿಜಯೇಂದ್ರ ಅವರನ್ನು ಗುರುತಿಸುವ ಕೆಲಸ ಪಕ್ಷ ಮಾಡಲಿದೆ ಎಂದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಅವಕಾಶ ಕಲ್ಪಿಸಬೇಕೆಂದು ಪಕ್ಷದ ಚಿಂತನೆಯಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೊಪ್ಪಳ: ದತ್ತಪೀಠದ ಹೆಸರಲ್ಲಿ ಸಂಸದ, ಶಾಸಕರಾಗಿ ಅಧಿಕಾರಕ್ಕೆ ಬಂದವರು ಈಗೇನು ಮಾಡುತ್ತಿದ್ದಾರೆ ? ಅಲ್ಲಿ ಮುಸ್ಮಾನರು ನಮಾಜು ಮಾಡ್ತಾರೆ, ಮಾಂಸದ ಊಟ ಮಾಡ್ತಾರೆಂದರೇ ಏನರ್ಥ ? ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದತ್ತಪೀಠದಲ್ಲಿ ಮುಸ್ಮಾನರು ನಮಾಜು ಮಾಡ್ತಾರೆ, ಮಾಂಸದ ಊಟ ಮಾಡ್ತಾರೆ ಎಂದರೆ ಏನರ್ಥ ? ಪೀಠದ 200 ಮೀಟರ್ ವ್ಯಾಪ್ತಿಯಲ್ಲಿ ನಮಾಜು ಮಾಡಬಾರದು, ಮಾಂಸದ ಊಟ ಮಾಡಬಾರದು ಎನ್ನುವ ನಿಯಮ ಇದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ. ದತ್ತ ಪೀಠದಿಂದಲೇ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಗೆದ್ದಿದ್ದಾರೆ. ಈಗ ಅವರೇನು ಮಾಡ್ತಿದ್ದಾರೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದರು. ಅಲ್ಲಿ ಧಾರ್ಮಿಕ ದತ್ತಿ ಇಲಾಖೆಯು ಪೀಠದ ಅಧಿಕಾರಿಯನ್ನು ಕಿತ್ತೊಗೆಯಬೇಕು. ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ನಮ್ಮಂತ ಹೋರಾಟಗಾರರಿಗೆ, ಹಿಂದುತ್ವವಾದಿಗಳಿಗೆ ರಾಜಕೀಯ ಬಾಗಿಲು ಮುಚ್ಚಿದೆ. ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ. ಬಿಜೆಪಿಗೆ ಯಾವುದೇ ಹಿಂದೂತ್ವ ಇಲ್ಲ. ಯೋಗಿ ಆದಿತ್ಯನಾಥ ತರ ರಾಜ್ಯದಲ್ಲಿ…
ಕೊಪ್ಪಳ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಬಗ್ಗೆ ಮಾತನಾಡಿದ ಅವರು, ಮಂದಿರ ನಿರ್ಮಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿದೆ ಎಂದು ಹೇಳಿದರು. ಕಾನೂನು ಎಲ್ಲಾ ನಾಗರಿಕರಿಗೆ ಸಮಾನವಾಗಿರಬೇಕು ಎಂಬ ಕಾರಣಕ್ಕಾಗಿ ಏಕರೂಪ ನಾಗರಿಕ ಸಂಹಿತೆಯನ್ನು ತರಲು ಬಿಜೆಪಿ ಬದ್ಧವಾಗಿದೆ ಎಂದು ಅವರು ಇದೇ ವೇಳೆ ಅವರು ಹೇಳಿದರು. ಪ್ರಸ್ತುತ ಯಾವುದೇ ಕೋಮು ಅಥವಾ ಧಾರ್ಮಿಕ ಪೂರ್ವಾಗ್ರಹವಿಲ್ಲದೆ ಅಪರಾಧ ಕೃತ್ಯಗಳಿಗೆ ಸಮಾನವಾಗಿ ಶಿಕ್ಷೆಯನ್ನು ನೀಡಲಾಗುತ್ತದೆ. ಅಂತೆಯೇ, ನಾಗರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಪರಾಧಿಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಸಚಿವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಹಿರಿಯೂರು: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಕಾರಿಗೆ ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಶಾಸಕರ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಹಿರಿಯೂರು ಮಾರ್ಗ ಮಧ್ಯೆ ತೆರಳುತ್ತಿದ್ದ ವೇಳೆ ಅತೀ ವೇಗ ಹಾಗೂ ಅಜಾಗರೋಕತೆಯಿಂದ ಬಂದ ಕಾರೊಂದು ಶಾಸಕರ ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಎಡ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯ ಅಧಿಕಾರಿ ಪಿ ಎಸ್ ಐ ಶಶಿಕಲಾ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆಹಾರ ನಿರೀಕ್ಷಕರು , ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಹಿರಿಯೂರು ಸಿರಿಗನ್ನಡ ನಾಡು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿತ್ತು. ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಾದ ರಂಜಿತ ಲಾಡ್ಜ್ ಬಳಿಯಿಂದ ಮೆರವಣಿಗೆ ಆರಂಭಿಸಿ, ತಾಲ್ಲೂಕು ಕಛೇರಿಯವರೆಗೂ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ ಹಿರಿಯೂರು ಕಂದಾಯ, ಆಹಾರ ನಿರೀಕ್ಷಕರು ಹಾಗೂ ಶಿಕ್ಷಣಾಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಸಿರಿಗನ್ನಡನಾಡು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಕುಂದ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಕಂದಾಯ, ಆಹಾರ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿ ಯಾವುದೇ ಸಮಸ್ಯೆ ತೆಗೆದುಕೊಂಡು ಹೋದರೂ ಉಡಾಫೆಯ ಮಾತುಗಳನ್ನಾಡುತ್ತಾರೆ. ಸರ್ಕಾರದಿಂದ ಬಡವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಮಾಹಿತಿ ಕೇಳಿದರೆ ದರ್ಪದ ಉತ್ತರ ನೀಡುತ್ತಾರೆ.…
ಗುಬ್ಬಿ: ಲಾರಿಯೊಂದಕ್ಕೆ ಮತ್ತೊಂದು ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪಟ್ಟಣದ ಹೊರವಲಯದ ಸಿಂಗೋನಹಳ್ಳಿ ಬ್ರಿಡ್ಜ್ ಬಳಿ ಬೆಳಿಗ್ಗೆ ಮುಂದೆ ಸಾಗುತ್ತಿದ್ದ ಲಾರಿಗೆ ಕೋಳಿ ಸಾಗಾಟದ ಲಾರಿ ವೇಗವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಪರಿಣಾಮವಾಗಿ ಲಾರಿಯಲ್ಲಿದ್ದ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಲಾರಿ ಚಾಲಕ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದು, ಲಾರಿಯ ಹಾರನ್ ಮೊಳಗುತ್ತಲೇ ಇದ್ದ ದೃಶ್ಯ ಕಂಡು ಬಂದಿದೆ. ಲಾರಿಯ ಸಿಗ್ನಲ್ ಕೂಡ ಆನ್ ನಲ್ಲಿರುವುದು ಪತ್ತೆಯಾಗಿದ್ದು, ಭೀಕರತೆಯಿಂದ ಕೂಡಿದೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಬಿ.ಕೋಡಿಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶೌಚಾಲಯವಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಒತ್ತಡಕ್ಕೆ ಭೇಟಿ ನೀಡಿ ಕಣ್ಣೊರೆಸುವ ಕೆಲಸ ಮಾಡಿದ್ದೀರಿ ಎಂದು ಫೋಷಕ ಚಿಕ್ಕೇಗೌಡ ಅಧಿಕಾರಿಗಳನ್ನು ತರಾಟೆಗೆತ್ತಕೊಂಡಿದ್ದು, ಹೆಣ್ಣು ಮಕ್ಕಳ ಕಿರಿಕಿರಿ ಅರ್ಥವಾಗುತ್ತಿಲ್ಲ. ನಿಮ್ಮ ಮನೆ ಮಕ್ಕಳನ್ನು ಇಲ್ಲಿಗೆ ಸೇರಿಸಿ ಆಗ ಬಡ ಮಕ್ಕಳ ಸಮಸ್ಯೆ ತಿಳಿಯುತ್ತೆ ಎಂದು ಸ್ಥಳೀಯ ಪೋಷಕ ಚಿಕ್ಕೇಗೌಡ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಪಟ್ಟಣದ ಬಿಇಓ ಕಚೇರಿಯಲ್ಲಿ ನಡೆಯಿತು. ಸರ್ಕಾರಿ ಶಾಲೆಯಲ್ಲಿ ಕೃಷಿಕ ವರ್ಗದ ಮಕ್ಕಳೇ ಹೆಚ್ಚಾಗಿ ಕುಗ್ರಾಮದ ಶಾಲೆಗಳು ಬಳಸುತ್ತಾರೆ. ಶೌಚಾಲಯವಿಲ್ಲದೆ ಇಲ್ಲಿನ ಮಕ್ಕಳು ಬೇಲಿ ಸಾಲಿಗೆ ಸರದಿಯಲ್ಲಿ ಹೋಗುತ್ತಾರೆ. ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳ ಪರದಾಟ ಹೇಳತೀರದು. ಶೌಚಾಲಯ ಶಿಕ್ಷಣ ಸಚಿವರ ಗಮನಕ್ಕೆ ತರಲಾಗಿತ್ತು. ವಿಡಿಯೋ ಸಂವಾದದಲ್ಲಿ ಸಚಿವರೇ ಆಸಕ್ತಿ ವಹಿಸಿ ಬಿಇಒ ಗೆ ಹೇಳಿ . ನಾಲ್ಕು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಶೌಚಾಲಯ…
ತಿಪಟೂರು: ವ್ಯಾಪಾರಿಗಳು ಹಾಗೂ ರೈತರುಗಳು ಸಹಕಾರಿ ಸಂಘದಲ್ಲಿ ಸಾಲ ಪಡೆದು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿ ಸಹಕಾರಿ ಸಂಘವನ್ನು ಇಂದುಶ್ರೀ ಗುರುಪರದೇಶಿ ಕೇಂದ್ರ ಅವರು ತಿಳಿಸಿದರು. ತಿಪಟೂರು ನಗರದಲ್ಲಿ ಶ್ರೀ ಗುರು ಪರದೇಶಿ ಕೇಂದ್ರ ಸೌಂದರ್ಯ ಪತ್ತಿನ ಸಹಕಾರ ಸಂಘವನ್ನು ಉದ್ಘಾಟನೆಗೊಳಿಸಿ ಮಾತನಾಡಿದ ಶ್ರೀಗಳು, ವ್ಯಾಪಾರಿಗಳು ಮತ್ತು ರೈತರ ಹಿತದೃಷ್ಟಿಯಿಂದ ಸಹಕಾರ ಸಂಘವನ್ನು ತೆರೆದಿದ್ದು, ಸಾಲ ಪಡೆದ ಸದಸ್ಯರು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿದರೆ, ಮುಂದಿನ ಕಷ್ಟಸುಖಗಳಿಗೆ ನಿಮಗೆ ಹೆಚ್ಚು ಸಾಲ ಸಿಗುತ್ತದೆ. ಸಂಘವನ್ನು ಬೆಳೆಸುವ ಜವಾಬ್ದಾರಿ ನಿಮ್ಮದು ಎಂದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಮಾಜಿ ಶಾಸಕ ಕೆ ಷಡಕ್ಷರಿ ಎಪಿಎಂಸಿ ನಿರ್ದೇಶಕ ಕಂಚಗಟ್ಟ ಮಧುಸೂದನ್ ಚೌಡೇಶ್ವರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ್ ಮಾದಿಹಳ್ಳಿ ಪ್ರಕಾಶ್ ನಾಗರಾಜ್ ಗಂಗನಘಟ್ಟ ಯೋಗಾನಂದ ಶಿವಪ್ರಸಾದ್ ಮುಂತಾದವರಿದ್ದರು ಇದ್ದರು ವರದಿ: ಆನಂದ, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…