Author: admin

ಮಧುಗಿರಿ:  ತಾಲೂಕು  ವಾಸವಿ ಯುವತಿಯರ ಸಂಘ , ಆರ್ಯ ವೈಶ್ಯ ಮಂಡಳಿ ಮತ್ತು ಎಲ್ಲಾ ಆರ್ಯ ವೈಶ್ಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇತ್ತೀಚೆಗೆ ವಾಸವಿ ಜಯಂತಿಯ ಅಂಗವಾಗಿ ” ವಾಸವಿ ಶತ ಕಂಠ ಗೀತ ಗಾಯನ”,  “108 ವಿಧ ನೈವೇದ್ಯ ಸಮರ್ಪಣೆ” ಮತ್ತು  ” 108 ವಿಧದ ಹೂಗಳ ಅಲಂಕಾರ, ಹಾಗೂ 108 ಜನ ಮಹಿಳೆಯರಿಂದ ಸಾಂಪ್ರದಾಯಿಕ ಉಡುಗೆ ತೊಟ್ಟು, 108 ನಿಮಿಷಗಳ ಕಾಲ ಗೀತಗಾಯನ ನಡೆಸಿದ್ದರು.  ಈ ಕಾರ್ಯಕ್ರಮವು  ತೆಲುಗು ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ಸ್ಥಾನ ಪಡೆದಿದೆ.  ಅಂದಿನ ಕಾರ್ಯಕ್ರಮದಲ್ಲಿ ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಗೀತಾಫಣೀಶ್,  ನಿವೇದಿತಾ ಮಧು, ಸ್ವಪ್ನಾ ಸತೀಶ್, ಲಲಿತಾ ರಾಘವೇಂದ್ರ, ಆರ್ಯವೈಶ್ಯ ಮಂಡಳಿಯ ಗೌರವಾಧ್ಯಕ್ಷ ಡಿ.ಜಿ.ಶಂಕರನಾರಾಯಣ ಶೆಟ್ಟಿ,  ಅಧ್ಯಕ್ಷ ಕೆ.ಎನ್.ಶ್ರೀನಿವಾಸ್ ಮೂರ್ತಿ, ಭಾಗವಹಿಸಿದ್ದರು.  ತೆಲುಗು ಬುಕ್ ಆಫ್ ರೆಕಾರ್ಡ್ ಪ್ರಶಂಸಾ ಪತ್ರವನ್ನು ತಗ್ಗೀಹಳ್ಳಿ ರಾಮಕೃಷ್ಣ ಮಠದ ರಮಾನಂದ ಚೈತನ್ಯ ಸ್ವಾಮೀಜಿ ಸಂಘದ ಪದಾಧಿಕಾರಿಗಳಿಗೆ ನೀಡಿ ಗೌರವಿಸಿದ್ದಾರೆ ವರದಿ : ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ…

Read More

ಚಿಕ್ಕನಾಯ್ಕನಹಳ್ಳಿ:  ತಾಲೂಕು ಹುಳಿಯಾರು ಹೋಬಳಿ ಡಿಂಕನಹಳ್ಳಿ ಗ್ರಾಮದಲ್ಲಿ ಕೆಪಿಟಿಸಿಎಲ್ ವತಿಯಿಂದ 400ಕೆವಿ ಸ್ವಿಚಿಂಗ್ ಸ್ಟೇಷನ್ ಕಾಮಗಾರಿಯಿಂದ ನೂರಾರು ರೈತರಿಗೆ ತೊಂದರೆಯಾಗುತ್ತಿದ್ದು ಸರ್ಕಾರ ಕೂಡಲೇ ಸ್ವಿಚಿಂಗ್ ಸ್ಟೇಷನ್ ಬೇರೆಡೆಗೆ ಸ್ಥಳಾಂತರಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ತಿಪಟೂರು ಗ್ರಾಮದೇವತೆ ಶ್ರೀಕೆಂಪಮ್ಮದೇವಿ ದೇವಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ದೊಡ್ಡಪೇಟೆ ಬಿ.ಹೆಚ್. ರಸ್ತೆ ಮೂಲಕ ಸಾಗಿ ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರಸಲ್ಲಿಸಲಾಯಿತು. ಪ್ರತಿಭಟನಾ ನಿರತರನ್ನ ಉದೇಶಿಸಿ ಮಾತನಾಡಿದ ಭಾರತೀಯ ಕಿಸಾನ್ ಮೋರ್ಚ ಜಿಲ್ಲಾಧ್ಯಕ್ಷ ಕೋಡಿಹಳ್ಳಿ ಜಗದೀಶ್ ಮಾತನಾಡಿ,  ಸರ್ಕಾರ ಹುಳಿಯಾರು ಹೋಬಳಿ ಡಿಂಕನಹಳ್ಳಿ ಗ್ರಾಮದಲ್ಲಿ 400ಕೆವಿ ಸಾಮರ್ಥ್ಯದ ಸ್ವಿಚ್ಚಿಂಗ್ ಸ್ಟೇಷನ್ ಪ್ರಾರಂಭಿಸುತ್ತಿದ್ದು ಈ ಯೋಜನೆಯಿಂದ ಡಿಂಕನಹಳ್ಳಿ ಸೇರಿದಂತೆ ಸುತ್ತಮುತ್ತಲ ನೂರಾರು ಫಲವತ್ತಾದ ಕೃಷಿ ಜಮೀನು ಹಾಳಾಗುತ್ತಿದೆ ಎಂದರು. ಫಲಭರಿತ ತೆಂಗು, ಅಡಿಕೆ, ಬಾಳೆ ತೇಗ ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬೆಳೆಗಳು ನಷ್ಟವಾಗುತ್ತದೆ. ಆದರಿಂದ ಸರ್ಕಾರ ಬಂಜರು ಭೂಮಿ ಇರುವಂತಹ ಕಡೆಗೆ ಸ್ಥಳಾಂತರ ಮಾಡಿ ಅಲ್ಲಿಯ…

Read More

ಮೈಸೂರು:  ಮಹಿಳೆಯೊಬ್ಬಳು ಬಸ್ ನಿಲ್ದಾನದಲ್ಲಿ ಯುವಕನ ಕೈಗೆ ಮಗು ಕೊಟ್ಟು ನಾಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಳೆದ 15 ದಿನಗಳ ಹಿಂದೆ ರಾಯಚೂರು ಬಸ್‌ ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯೊಬ್ಬರು ತನ್ನ ಕೈಗೆ ಗಂಡು ಮಗು ಕೊಟ್ಟು ಪರಾರಿ ಆಗಿದ್ದಾರೆ ಎಂದು ಎಚ್. ಕೋಟೆಯ ಯುವಕ ರಘು ಕಥೆಕಟ್ಟಿದ್ದು,ನಂತರ ಆ ಮಗುವನ್ನು ಮೈಸೂರಿನ ಲಷ್ಕರ್‌ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದ. ಪ್ರಕರಣ ದಾಖಲಿಸಿದ ಪೋಲಿಸರು ತನಿಖೆ ಆರಂಭಿಸಿದ್ದು ಪೊಲೀಸರಿಗೆ ಆ ಮಗುವನ್ನು ತಂದುಕೊಟ್ಟಿದ್ದ ರಘು ಹಾಗೂ ಆ ಮಗುವಿನ ತಾಯಿಯ ನಿಜವಾದ ಸಂಬಂಧವನ್ನು ಕಂಡುಹಿಡಿದಿದ್ದಾರೆ. ಮಗುವಿನ ತಾಯಿಗೆ ರಘು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಆತನಿಗೆ ಆ ಮಹಿಳೆಯೊಂದಿಗೆ ಒಡನಾಟ ಹೊಂದಿದ್ದನು. ಇದು ಮಹಿಳೆಯ ಗಂಡನಿಗೂ ಕೂಡ ತಿಳಿದಿತ್ತು. ಇವರಿಬ್ಬರ ಪ್ರೀತಿಗೆ ಮಗು ಅಡ್ಡಿಯಾಗುತ್ತದೆ ಎಂದು ಮಗುವನ್ನು ದೂರ ಮಾಡುವ ಯೋಜನೆ ಮಾಡಿದ ರಘು ಕಥೆಯನ್ನು ಸೃಷ್ಟಿಸಿದ್ದ.ಆದರೆ ಈತನ ನಡೆಯಿಂದ ಅನುಮಾನಗೊಂಡ ಪೊಲೀಸರು, ಮಗುವಿನ ತಂದೆಯನ್ನು ಪತ್ತೆ ಮಾಡಿ ವಿಚಾರಿಸಿದಾಗ ಇವರಿಬ್ಬರ…

Read More

ಚಂಡೀಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿ ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಲಾಗಿದೆ. ಪಂಜಾಬ್‌ ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು ಕೇವಲ ಎರಡು ತಿಂಗಳಾಗಿದ್ದು ಮಾನ್ಸಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ 52 ವರ್ಷದ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವುದಾಗಿ ಮುಖ್ಯಮಂತ್ರಿಗಳೇ ಘೋಷಿಸಿದರು. ತನ್ನ ಇಲಾಖೆಯ ಟೆಂಡರ್‌ಗಳು ಮತ್ತು ಖರೀದಿಗಳಲ್ಲಿ ಸಿಂಗ್ಲಾ ಶೇಕಡಾ 1 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆಯಿಡುತ್ತಿದ್ದಾರೆ ಎಂದು ತಿಳಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾನ್ ಹೇಳಿದರು. ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೂ ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದು ಸಿಂಗ್ಲಾ ಅವರನ್ನು ಪಂಜಾಬ್ ಪೋಲಿಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಭಗವಂತ್ ಮಾನ್ ಸರ್ಕಾರವು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂಬುದನ್ನು ಇದು ಪ್ರತಿಪಾದಿಸಿದೆ. ‘ನನ್ನ ಸರ್ಕಾರದ ಓರ್ವ ಸಚಿವ ತಮ್ಮ ಇಲಾಖೆಯ ಪ್ರತಿ ಟೆಂಡರ್ ಅಥವಾ ಖರೀದಿಯಿಂದ ಶೇಕಡಾ ಒಂದರಷ್ಟು ಕಮಿಷನ್ ಕೇಳುತ್ತಿರುವ ಬಗ್ಗೆ…

Read More

ಬೆಂಗಳೂರು: ಆ್ಯಸಿಡ್ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಕೊನೆಯ ಹಂತದ ಸರ್ಜರಿ ನಡೆಸಿದ್ದು, ಯುವತಿಗೆ ಆರೋಗ್ಯ ಸುಧಾರಿಸಲು ಎರಡು ತಿಂಗಳ ಕಾಲವಕಾಶ ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಇಂದು ಹೈ ಲೆವೆಲ್ ಎಕ್ಯೂಪ್ಮೆಂಟ್ ಬಳಸಿ ಸರ್ಜರಿ ಮಾಡಲಾಗಿದೆ. ಇನ್ನು ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಸಚಿವ ಡಾ. ಸುಧಾಕರ್‌ ಆರೋಗ್ಯ ವಿಚಾರಿಸಿದ್ದಾರೆ. ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್‌ನನ್ನು ಪೊಲೀಸರು ಕರೆ ತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದರು. ಸದ್ಯ ಆತನ ಪರಿಸ್ಥಿತಿಯ ಫೋಟೋವನ್ನು ಕಂಡ ಸಂತ್ರಸ್ತೆ ಯುವತಿ ಖುಷಿಪಟ್ಟಿದ್ದು,ತನ್ನ ಈ ಸ್ಥಿತಿಗೆ ಕಾರಣನಾದವನ ಗತಿಯನ್ನು ಕಂಡು ಆತ್ಮಸ್ಥೈರ್ಯ ಹೆಚ್ಚಿಸಿಕೊಂಡಿದ್ದಾಳೆ ಎನ್ನಲಾಗಿದೆ. “ಯುವತಿಗೆ ಸ್ಕಿನ್‌ ಬ್ಯಾಂಕ್‌ ನಿಂದ ಸ್ಕಿನ್‌ ನೀಡಲಾಗುವುದು.ಆ್ಯಸಿಡ್ ದಾಳಿಯಿಂದ ಶೇ.35ರಷ್ಟು ದೇಹದ ಭಾಗಗಳು ಸುಟ್ಟುಹೋಗಿವೆ. ಸಂತ್ರಸ್ತೆಯ ಸ್ಥಿತಿ ಸ್ಪಲ್ಪ ಕ್ಲಿಷ್ಟಕರವಾಗಿದೆ.…

Read More

ಪಾವಗಡ:  ಪಾವಗಡ ತಾಲೂಕಿನಲ್ಲಿ ಭರಣಿ ಮಳೆ ಉತ್ತಮವಾಗಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ  ಸಾಗುತ್ತಿದೆ.  ಪಾವಗಡ ಜನತೆಯ ರೈತರು ಇಲಾಖೆಯಲ್ಲಿ ನೀಡುತ್ತಿರುವ ಬಿತ್ತನೆ ಬೀಜಗಳು ವಿವಿಧ ತಳಿಗಳಾದ ಶೇಂಗಾ, ಹೆಸರು, ಕಾಳು, ಹಲಸಂದೆ, ತೊಗರಿ, ಭತ್ತ, ರಾಗಿ ಇನ್ನು ಮುಂತಾದ ಬಿತ್ತನೆ ಬೀಜಗಳನ್ನು ಪಡೆದು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ  ವೆಂಕಟರಮಣಪ್ಪ ಕರೆ ನೀಡಿದರು. ಕೃಷಿ ಉನ್ನತ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು  ಮಾತನಾಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯ ಮೂರ್ತಿ ಕೃಷಿ ಇಲಾಖೆ ಅಧಿಕಾರಿಗಳ ರಾಮಾಂಜಿನಪ್ಪ, ವೇಣು, ಮಧು ಸಂಸದ್ ಸಂಸ್ಥೆಯ ಪರವಾಗಿ ಕೆ ಹೋ ಎಫ್ ಬಾಲಾಜಿ ಹಾಗೂ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಂತಾದ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು. ಕೆ.ಓ.ಎಫ್.ಬಾಲಾಜಿ ಹಾಗೂ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಂತಾದ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ:  ರಾಮಪ್ಪ ಸಿ.ಕೆ. ಪುರ,  ಪಾವಗಡ…

Read More

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷಕ್ಕೆ ಬಲ ನೀಡುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರದಲ್ಲಿ ಭಾಗವಹಿಸುವಂತೆ ಇತ್ತೀಚೆಗೆ ಉದಯಪುರದಲ್ಲಿ ನಡೆದ ಚಿಂತನ ಶಿಬಿರದಲ್ಲಿ ಪಕ್ಷದ ರಾಜ್ಯ ಮುಖಂಡರ ನಿಯೋಗ ಮನವಿ ಸಲ್ಲಿಸಿದೆ. ಅವರು ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಅವರು ಹೇಳಿದರು. ಇತ್ತೀಚೆಗಷ್ಟೇ ಉದಯಪುರದಲ್ಲಿ ನಡೆದ ಪಕ್ಷದ ಚಿಂತನ ಶಿಬಿರದಲ್ಲಿ ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಅವರನ್ನು ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ, ಪ್ರಿಯಾಂಕಾ ಸ್ಪರ್ಧಿಸುವುದರಿಂದ ಪಕ್ಷದ ನೈತಿಕತೆ ಹೆಚ್ಚುತ್ತದೆ 2023 ರ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ಪಕ್ಷಕ್ಕೆ ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ. ಎಂಎಲ್‌ಸಿ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದೇವೆ ಎಂದು ಹೇಳಿದರು.…

Read More

ಸರಗೂರು: ಅರಣ್ಯ ಹಕ್ಕು ಕಾಯಿದೆ 2006ರ ನಿಯಮ 2008ರ ತಿದ್ದುಪಡಿ 2012ರ ಕಾಯ್ದೆ ಅನುಷ್ಠಾನ ಹಾಗೂ ದರಖಾಸ್ಸು ಸಮಿತಿಗೆ ಬುಡಕಟ್ಟು ಸಮುದಾಯಗಳ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಸರಗೂರು ತಾಲೂಕು ವ್ಯಾಪ್ತಿಯಲ್ಲಿ 52 ಹಾಡಿಗಳಿದ್ದು, ಜೇನುಕುರುಬ, ಯರವ, ಸೋಲಿಗ, ಕಾಡುಕುರುಬ ಸಮುದಾಯಗಳು ಸ್ವತಂತ್ರ ಪೂರ್ವದಲ್ಲಿ ಬಂಡೀಪುರ, ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ವಾಸಿಮಾಡುತ್ತಿದ್ದು, 1972ರ ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಹಾಗೂ ನುಗು ಅಣೆಕಟ್ಟೆ ನಿರ್ಮಿಸುವಾಗ ಸಮುದಾಯಗಳ ಅಭಿವೃದ್ಧಿ ಮತ್ತು ಪುನರ್ವಸತಿ ಬಗ್ಗೆ ಸರಕಾರ ಯಾವುದೇ ಯೋಜನೆ ರೂಪಿಸಿದೆ ಏಕಾಏಕಿ ಹೊರತಂದು ಸಮುದಾಯಗಳನ್ನು ಅತಂತ್ರ ಪರಿಸ್ಥಿತಿಗೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ನಾನಾ ಘೋಷಣೆ ಕೂಗಿದರು. ನಿವಾಸಿಗಳಿಗೆ ಪುನರ್ವಸತಿ ಒದಗಿಸಲು ಕಾನೂನಿನಲ್ಲಿ ಅವಕಾಶವಿದ್ದರೂ ಜಡ್ಡುಕಟ್ಟಿದ ಆಡಳಿತ ವ್ಯವಸ್ಥೆ ನೊಂದ ಆದಿವಾಸಿ ಸಮುದಾಯಗಳಿಗೆ ನ್ಯಾಯ ಒದಗಿಸಲು ವಿಳಂಬನೀತಿ ಅನುಸರಿಸಿ ಅರಣ್ಯ ಹಕ್ಕು ಕಾಯಿದೆಯನ್ನು ಅನುಷ್ಠಾನಗೊಳಿಸುವಲ್ಲಿ…

Read More

ಚಿತ್ತದುರ್ಗ:  ಜಿಲ್ಲೆಯ ಹಿರಿಯೂರು ತಾಲೂಕಿನ ಶ್ರೀಶೈಲ ಸರ್ಕಲ್ ಗೆ ಹೋಗುವ ರಸ್ತೆ ಬದಿಯಲ್ಲಿರುವ ಮತ್ತು ಕೆ ಎಮ್  ಕೊಟ್ಟಿಗೆಯ ಹಳೇ ವಾಲ್ಮಿಕಿ ಭವನದ ಬಳಿ ಇರುವಂತಹ ವಿದ್ಯುತ್ ಟಿಸಿ  ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮವನ್ನು ಕೈಗೊಳ್ಳದೇ ಸಾರ್ವಜನಿಕರ ಪ್ರಾಣದ ಜೊತೆಗೆ ಚೆಲ್ಲಾಟವಾಡು್ತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ. ರಸ್ತೆ ಬದಿ ಇರುವ ಟಿಸಿ ಕೈಗೆಟಕುವ ಅಂತರದಲ್ಲಿದೆ. ಸಾರ್ವಜನಿಕರು ಸ್ವಲ್ಪ ಮೈಮರೆತು ಮುಟ್ಟಿದರೂ, ಅನಾಹುತವೇ ನಡೆದುಹೋಗಬಹುದು. ವಿದ್ಯಾರ್ಥಿಗಳು, ಪುಟ್ಟ ಮಕ್ಕಳು ಕಂಬವನ್ನು ಸ್ಪರ್ಶಿಸಿದರೆ, ಅವರ ಪ್ರಾಣಕ್ಕೆ ಯಾರು ಹೊಣೆ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ. ಹಿರಿಯೂರು ತಾಲೂಕಿನಲ್ಲಿ ಈ ರೀತಿಯ ಟಿಸಿಗಳು ಎಲ್ಲೆಂದರಲ್ಲಿ ಕಾಣ ಸಿಗುತ್ತವೆ. ಸಾರ್ವಜನಿಕರ ಸುರಕ್ಷತೆಗೆ ಕಿಂಚಿತ್ತೂ  ಗಮನ ಹರಿಸಲಾಗಿಲ್ಲ. ಟಿಸಿಯ ಸಮೀಪದಲ್ಲೇ ಗಿಡಗಳು ಬೆಳೆದಿವೆ. ಆಕಸ್ಮತ್ ವಿದ್ಯುತ್ ಗಿಡಗಳಿಗೆ ಸ್ಪರ್ಶಿಸಿದರೆ, ಅದನ್ನು ಜನರೋ, ಪ್ರಾಣಿಗಳೋ ಸ್ಪರ್ಶಿಸಿದರೆ, ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆಗಳಿವೆ. ಟಿಸಿಗಳ ಸುತ್ತಮುತ್ತ ಜನರು ಹೋಗದಂತೆ ಸುರಕ್ಷತೆ ಕ್ರಮವನ್ನು ಸಂಬಂಧಪಟ್ಟವರು ಅಳವಡಿಸಬೇಕು. ಈ ಬಗ್ಗೆ ಸ್ಥಳೀಯ ಶಾಸಕರು ಅಧಿಕಾರಿಗಳನ್ನು…

Read More

ಧಾರವಾಡದ ಭೀಕರ ಅಪಘಾತ ಮರೆಯಾಗುವ ಮೊದಲೇ ಹುಬ್ಬಳ್ಳಿ ನಗರದ ಹೊರವಲಯದ ರೇವಡಿಹಾಳ ಕ್ರಾಸ್ ಮೇಲ್ಸೇತುವೆ ಬಳಿ ಖಾಸಗಿ ಬಸ್ ಮತ್ತು ಅಕ್ಕಿ ಚೀಲ ಹೇರಿಕೊಂಡು ಹೊರಟಿದ್ದ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, 8 ಮಂದಿ ಸಾವಿಗೀಡಾಗಿದ್ದಾರೆ. ಬಸ್ ಚಾಲಕನು ಟ್ರ್ಯಾಕ್ಟರ್ ಹಿಂದಿಕ್ಕಿ ಮುಂದೆ ಸಾಗುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜ, ಪ್ರಯಾಣಿಕರಾದ ಇಚಲಕರಂಜಿಯ ಬಾಬಾಸಾ ಅಣ್ಣಾಸಾ ಚೌಗಲೆ, ಚಿಕ್ಕೋಡಿಯ ಬಾಬೂಸಾಬ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರೆಲ್ಲ ಬಹುತೇಕರೆಲ್ಲ ಬಸ್ಸಿನ ಪ್ರಯಾಣಿಕರಾಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5 

Read More