Subscribe to Updates
Get the latest creative news from FooBar about art, design and business.
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
- ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
- ರಾಹುಲ್ ಗಾಂಧಿ ಅವರಿಗೆ ಕಾಮನ್ ಸೆನ್ಸ್ ಇಲ್ಲ: ಆರ್.ಅಶೋಕ್ ವಾಗ್ದಾಳಿ
- ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
- ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
Author: admin
ಕೋಲಾರ: ಒಂದೂವರೆ ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ನಡೆದಿದೆ. ತಾಯಿ ಕೀರ್ತಿ (23), ಹಾಗೂ ಮಗಳು ಯೋಗಾಶ್ರೀ ಮೃತಪಟ್ಟವರಾಗಿದ್ದಾರೆ. ಈ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರಂಭಿಸಿದ್ದಾರೆ. ಈ ಮಧ್ಯೆ ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ಕೀರ್ತಿಯ ಪತಿ ಸುಧಾಕರ್ ಎಂಬವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಬಳಿಕ ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಗುಬ್ಬಿ: ಪೆದ್ದನಹಳ್ಳಿ ದಲಿತ ಯುವಕರ ಹತ್ಯೆಯ ಮುಖ್ಯ ಆರೋಪಿಗಳನ್ನು ರಕ್ಷಣೆ ಮಾಡುವಲ್ಲಿ ಸ್ಥಳೀಯ ಶಾಸಕರು ಮುಂದಾಗಿದ್ದಾರೆ ಹೆಣ್ಣೂರು ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಪೆದ್ದನಹಳ್ಳಿ ಯಲ್ಲಿ ನಡೆದ ಇಬ್ಬರು ದಲಿತ ಯುವಕನ ದಾರುಣ ಹತ್ಯೆಯಲ್ಲಿ ಶಾಮೀಲಾಗಿರುವ ಮುಖ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತಾಳಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಆರೋಪಿಸಿದರು. ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದ ದಲಿತ ಯುವಕರ ಹತ್ಯೆಯನ್ನು ಖಂಡಿಸಿ ಇಂದು ನಗರದ ಪ್ರವಾಸಿ ಮಂದಿರದಿಂದ ಹೊರಟಂತಹ ಕಾಲ್ನಡಿಗೆ ಜಾಥಾ ಹಾಗೂ ತುಮಕೂರು ಚಾಲೋ ಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ ನಡೆಯುತ್ತಿದ್ದರೂ ಸರ್ಕಾರ ದಲಿತರ ರಕ್ಷಣೆ ಮಾಡಲು ಮುಂದಾಗುತ್ತಿಲ್ಲ ಪೆದ್ದನಹಳ್ಳಿ ಪ್ರಕರಣಗಳು ಗಂಭೀರವಾಗಿ ನಡೆದರೂ ಸಹ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ನಿರ್ಲಕ್ಷ ತಾಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿ ಬಿಡಿಸುವಂತಹ ಘಟನೆ ಆಗಿದ್ದರು ಸಹ…
ಪಟ್ನಾ: ರಾಜ್ಯದಲ್ಲಿನ ಸರ್ವಪಕ್ಷಗಳ ಅಭಿಪ್ರಾಯ ಪಡೆದ ಬಳಿಕ ‘ಜಾತಿ’ ಸಮೀಕ್ಷೆ ಕಾರ್ಯವನ್ನು ತಮ್ಮ ಸರ್ಕಾರ ಶೀಘ್ರವೇ ಕೈಗೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿದ್ದಾರೆ. ಜಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಮೇ 27ರಂದು ಸರ್ವಪಕ್ಷಗಳ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ. ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆ ಕುರಿತು ಸರ್ವಪಕ್ಷಗಳ ಸಭೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಕ್ರೋಡೀಕರಿಸುತ್ತೇವೆ. ಬಳಿಕ ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸಂಪುಟದ ಮುಂದಿಡಲಾಗುತ್ತದೆ ಎಂದು ತಿಳಿಸಿದರು. ಮೇ 27ರಂದು ಉದ್ದೇಶಿಸಿರುವ ಸರ್ವಪಕ್ಷಗಳ ಸಭೆಗೆ ಕೆಲವು ಪಕ್ಷಗಳು ಸಮ್ಮತಿಸಿವೆ. ಕೆಲವು ಪಕ್ಷಗಳು ಇನ್ನಷ್ಟೇ ಉತ್ತರ ನೀಡಬೇಕಿದೆ. ಈ ಕುರಿತ ಪ್ರಸ್ತಾವನೆಯನ್ನು ಸಂಪುಟದ ಮುಂದಿಟ್ಟ ಬಳಿಕ, ಜಾತಿ ಆಧಾರಿತ ಸಮೀಕ್ಷೆ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ಶಾಲಾ ಹಾಗೂ ಕಾಲೇಜು ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಬಿ.ಸಿ.ನಾಗೇಶ್, ನಮ್ಮ ಸರ್ಕಾರದ ಕೆಲಸಗಳನ್ನು ಸಹಿಸಿಕೊಳ್ಳದೇ ಅನಾವಶ್ಯಕವಾಗಿ ಸುಳ್ಳು ಪ್ರಚಾರ ಮಾಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ದ್ವಿತೀಯ ಪಿಯುಸಿ ಇತಿಹಾಸ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದರು. ಕಳೆದ ವರ್ಷ ಹಲವರು ಕಾರಣಗಳಿಂದ ಶಾಲೆ ಆರಂಭವಾಗಲ್ಲ ಎಂದಿದ್ದರು. ಶಾಲೆ ಪ್ರಾರಂಭ ಎಂದಾಗಲೂ ಕೋವಿಡ್ ನೆಪ ಹೇಳಿದ್ದರು. ಬಡವರ ಪ್ರಾಣದ ಜತೆ ಚೆಲ್ಲಾಟ ಎಂದಿದ್ದರು. ಶಾಲೆಯಲ್ಲಿನ ಬಡ ವಿದ್ಯಾರ್ಥಿಗಳ ವ್ಯಾಸಂಗ ಗಮನಿಸಿ ಸರ್ಕಾರ ಶಾಲೆ ಪ್ರಾರಂಭಿಸಿತು. ಹಿಜಾಬ್ ವಿಚಾರದಲ್ಲಿ ತಗಾದೆ ತೆಗೆದರು. ಅದು ಸರಿಯಾಗಲಿಲ್ಲ. ಕೋರ್ಟ್ ಆದೇಶ ಬಂದಾಗ ಅದನ್ನೂ ಸಹಿಸಲಿಲ್ಲ. ಬೊಮ್ಮಾಯಿ ಸರ್ಕಾರದ ಕೆಲಸಗಳನ್ನು ಸಹಿಸದೇ ವಿರೋಧ ಪಕ್ಷದವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಿತ 29 ಮಂದಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸುವ ಮೂಲಕ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಹಿತ 29 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಈ ಸಂಬಂಧ ಮೇ 24ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕು ಎಂದು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ನಿಂದ ಸಮನ್ಸ್ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಟಿಯಾಲ: 1988 ರ ರೋಡ್ ರೇಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಸೋಮವಾರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸಿಧು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಭಾರೀ ಭದ್ರತೆಯಲ್ಲಿ ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ನವಜೋತ್ ಸಿಧು ಜೈಲಿನಲ್ಲಿ ವಿಶೇಷ ಆಹಾರಕ್ರಮವನ್ನು ಬಯಸಿದ್ದಾರೆ ಎಂದು ಕ್ರಿಕೆಟಿಗ-ರಾಜಕಾರಣಿಯ ವಕೀಲ ಎಚ್ ಪಿಎಸ್ ವರ್ಮಾ ಅವರು ಹೇಳಿದ್ದಾರೆ. ವೈದ್ಯರ ತಂಡ ಆಸ್ಪತ್ರೆಯಲ್ಲಿ ನವಜೋತ್ ಸಿಧು ಅವರ ವಿವರವಾದ ವೈದ್ಯಕೀಯ ಪರೀಕ್ಷೆಯನ್ನು ನಡೆಸುತ್ತದೆ ಎಂದು ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಅಣೆಕಟ್ಟೆಯನ್ನು ಏರಲು ಯತ್ನಿಸುತ್ತಿದ್ದ 20 ವರ್ಷದ ಯುವಕನೊಬ್ಬ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ನೀರು ಕೆಳಗೆ ಹರಿಯುತ್ತಿದ್ದಂತೆ ಯುವಕ ಅಣೆಕಟ್ಟಿನ ಗೋಡೆಯನ್ನು ಹತ್ತುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಅನೇಕ ಜನರು ಅಪಾಯಕಾರಿ ಸಾಧನೆಯನ್ನು ನೋಡುತ್ತಿರುವುದನ್ನು ಕಾಣಬಹುದು. ಅವನು ಸುಮಾರು 25 ಅಡಿ ಎತ್ತರವನ್ನು ತಲುಪಿದ ನಂತರ, ಅವನು ಜಾರಿ ಬೀಳುತ್ತಾನೆ ಮತ್ತು ಹತ್ತಿರದಲ್ಲಿ ಕಾಯುತ್ತಿದ್ದವರು ಬೊಬ್ಬೆ ಹೊಡೆಯುತ್ತಿರುವುದು ಕಂಡು ಬಂದಿದೆ. ಈ ಗೋಡೆಯು ಸುಮಾರು 50 ಅಡಿ ಎತ್ತರವಿದೆ ಎಂದು ಹೇಳಲಾಗಿದೆ. ಜಿಲ್ಲಾಡಳಿತದ ಎಚ್ಚರಿಕೆಯ ಹೊರತಾಗಿಯೂ ಗೋಡೆಯನ್ನು ಏರಲು ಪ್ರಯತ್ನಿಸಿದ ಯುವಕನ ವಿರುದ್ಧ ಈಗ ಪ್ರಕರಣ ದಾಖಲಿಸಲಾಗಿದೆ, ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ದಕ್ಷಿಣಕನ್ನಡ: ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ (66) ಅನಾರೋಗ್ಯದಿಂದ ತಡರಾತ್ರಿ ಸಿಂಗಪುರದಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರಕ್ಕೆ ಚಿಕಿತ್ಸೆಗೆ ತೆರಳಿದ್ದರು. ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷಗಳ ಕಾಲ ಡಾ.ಯಶೋವರ್ಮ ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಮೃತರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವಿ.ಹೆಗ್ಗಡೆಯವರ ಸಹೋದರರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಗುಬ್ಬಿ: ಪಟ್ಟಣದ ಸ್ವಚ್ಛತೆಗೆ ಎಲ್ಲರೂ ಕೂಡ ಕೈಜೋಡಿಸಬೇಕು ಇದರಿಂದ ಪಟ್ಟಣವನ್ನು ಸ್ವಚ್ಛಂದವಾಗಿ ಇಟ್ಟುಕೊಳ್ಳಬಹುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ ಕರೆ ನೀಡಿದರು. ಪಟ್ಟಣದ ವಿನಾಯಕ ನಗರದಲ್ಲಿ ಹೈನುಗಾರಿಕೆ ಮಾಡುತ್ತಿರುವ ಕುಟುಂಬವೊಂದು ಮನೆಯ ಪಕ್ಕದಲ್ಲಿಯೇ ಸಗಣಿ ತಿಪ್ಪೆಯನ್ನು ಹಾಕಿದ್ದರು. ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದಾಗಿ ತಿಪ್ಪೆ ದುರ್ವಾಸನೆಯಿಂದ ಕೂಡಿದ್ದರಿಂದ ನಾಗರೀಕರು ತಿಪ್ಪೆಯನ್ನು ತೆಗೆಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೂಡಲೇ ಕ್ರಮವಹಿಸಿ ಮಾತನಾಡಿದ ಅವರು , ಎಲ್ಲರ ಸಹಕಾರದಿಂದ ಸ್ವಚ್ಛ ಪರಿಸರವನ್ನು ನಿರ್ಮಿಸಬೇಕಾಗಿದೆ. ತಮ್ಮ ಮನೆಯ ಮುಂದೆ ಹಿಂದೆ ಸ್ವಚ್ಛತೆಯನ್ನು ಕಾಪಾಡಿ ಕೊಂಡಾಗ ರೋಗರುಜಿನಗಳಿಂದ ದೂರವಿರಬಹುದು ಹಾಗಾಗಿ ವಿನಾಯಕ ನಗರದಲ್ಲಿ ಹಾಕಿದಂತಹ ತಿಪ್ಪೆಯನ್ನು ಅಲ್ಲಿಂದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ ಅಲ್ಲಿನ ಜನರಿಗೆ ಸಮಸ್ಯೆ ಆಗದಂತೆ ಪಟ್ಟಣ ಪಂಚಾಯಿತಿ ಕ್ರಮವಹಿಸಿದೆ ಎಂದರು. ತಿಪ್ಪೆ ಹಾಕಿದ್ದ ರೈತ ಕುಟುಂಬಕ್ಕೂ ಸಹ ಪರಿಸರದ ಬಗ್ಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಬಗ್ಗೆ ಮಾಹಿತಿಯನ್ನು ನೀಡಿ ಅವರಿಂದ ಮತ್ತೊಮ್ಮೆ ಇಲ್ಲಿ ತಿಪ್ಪೆ ಆಗದಂತೆಮನವಿ ಮಾಡಿದ್ದೇನೆ ಎಂದು ತಿಳಿಸಿದರು. ವರದಿ: ಮಂಜುನಾಥ್, ಗುಬ್ಬಿ…
ತುಮಕೂರು: ಟಿಪ್ಪು ಓರ್ವ ದೇಶ ಭಕ್ತ. ಅವರು ಮತಾಂಧ ಆಗಿದ್ದರೆ ಹಿಂದೂ ದೇವಾಲಯಗಳು ಉಳಿಯುತ್ತಿತ್ತಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಡಿವಾಳ-ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮಗೆ ಗಾಂಧಿ ಹೇಳಿರುವ ಹಿಂದೂವಾದ ಬೇಕು. ಗೋಡ್ಸೆ ಹೇಳಿರುವ ಹಿಂದೂವಾದ ಬೇಡ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಾನು ಅಲ್ಪಸಂಖ್ಯಾತರ ಪರ ಮಾತಾಡಿದ್ರೆ ಈ ಸಂಘ ಪರಿವಾರವರು ನನಗೆ ನೀನೇನು ಮುಸ್ಲಿಂ ಜಾತಿಗೆ ಹುಟ್ಟಿದವನಾ? ಎಂದು ಕೇಳುತ್ತಾರೆ. ಧರ್ಮ ಧರ್ಮಗಳ ನಡುವೆ ಗೋಡೆ ಕಟ್ಟುವ ಕೆಲಸ ಸಂಘಪರಿವಾರ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಬಸವರಾಜ ಬೊಮ್ಮಾಯಿ ಮಾತ್ರ ಹಿಂದೂ ಅಲ್ಲ. ನಾನೂ ಕೂಡ ಹಿಂದೂ, ನನ್ನ ಅಪ್ಪ ಕೂಡ ಹಿಂದೂ. ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ. ಹಿಂದೆ ಗೋಮಾಂಸ ತಿಂತೀರಾ ಎಂದು ನನಗೆ ಕೇಳಿದ್ದರು. ಆ ವೇಳೆ ಆಹಾರ ನಮ್ಮ ಹಕ್ಕು ಅದನ್ನು ಕೇಳುವರು ನೀವ್ಯಾರು ಅಂತಾ ಕೇಳಿದ್ದೆ ಎಂದು ಅವರು ಹೇಳಿದರು. ಬಿನ್ ಲಾಡನ್ ಹೇಳಿರುವ ಇಸ್ಲಾಂ ಧರ್ಮ ಬೇಡ. ಪೈಗಂಬರ್ ಹೇಳಿರುವ…