Subscribe to Updates
Get the latest creative news from FooBar about art, design and business.
- ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
- ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
- 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
- ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
- ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ
- ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ
- ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ
- ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ
Author: admin
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ನಗರದ ಹೊರವಲಯದಲ್ಲಿ ನಿರ್ಮಿಸಲಾಗಿರುವ ‘ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ ಹಾಗೂ ಯೋಗ ಶಿಕ್ಷಣ ಸಂಸ್ಥೆಯನ್ನು ಅವರು ಉದ್ಘಾಟಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬೆಳಿಗ್ಗೆ 11:30ಕ್ಕೆ ಬರಲಿರುವ ಅವರು ಹೆಲಿಕಾಪ್ಟರ್ ಮೂಲಕ ನೆಲಮಂಗಲದಲ್ಲಿರುವ ಎಸ್ಡಿಎಂ ನಿಸರ್ಗ ಕೇಂದ್ರ ತಲುಪಲಿದ್ದಾರೆ. ರಾಜ್ಯಸಭಾ ಸದಸ್ಯರೂ ಆಗಿರುವ ಸಂಸ್ಥೆಯ ಮುಖ್ಯಸ್ಥರಾದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕ್ಷೇಮವನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಹ ಉಪಸ್ಥಿತರಿರಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸುಮೋಟೋ ಕೇಸ್ ದಾಖಲಿಸಲಾಗಿದೆ. ಚಿತ್ರದುರ್ಗದ ಎಸ್ ಪಿ ಅವರಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ ವರದಿ ನೀಡುವಂತೆ ಚಿತ್ರದುರ್ಗದ ಎಸ್ ಪಿ ಗೆ ನೋಟಿಸ್ ನೀಡಿದೆ. ಏಳು ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದ್ದು, ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 1 ಮತ್ತು 2ರಂದು ಕರ್ನಾಟಕ ಹಾಗೂ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು ಪ್ರಧಾನಿ ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ತುಳುನಾಡು ನಿರ್ಮಾತೃ ಪರಶುರಾಮನ ಪುತ್ಥಳಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮಾವೇಶದಲ್ಲಿ ಮೋದಿಗೆ ಉಡುಗೊರೆಯಾಗಿ ಪುತ್ಥಳಿ ನೀಡಲಾಗುತ್ತೆ. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಸಮಾವೇಶ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಕರೆತರಲು 2000 ಬಸ್ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ಬಳಿಕ 1 ಗಂಟೆ ಕಾಲ ರಾಜ್ಯ ಬಿಜೆಪಿ ನಾಯಕರ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜಾರ್ಖಂಡ್: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ನಡೆದಿದೆ. ಶಾಲಾ ಮಕ್ಕಳ ಒಂದು ದೊಡ್ಡ ಗುಂಪು ಉಪನ್ಯಾಸ ನೀಡುವಾಗ ಶಿಕ್ಷಕರನ್ನು ಮರಗಳಿಂದ ಕಟ್ಟಿಹಾಕಿ ಥಳಿಸಿದ್ದಾರೆ. ಆ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಅಸ್ಪಷ್ಟವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ, ನಾವು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇವೆ.ಎಲ್ಲಾ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ್ದೇವೆ. ನಾವು ಅಲ್ಲಿಗೆ ತಲುಪಿದಾಗ, ವಿದ್ಯಾರ್ಥಿಗಳು ಪ್ರಾಕ್ಟಿಕಲ್ಸ್ ನಲ್ಲಿ ತಮಗೆ ಬಹಳ ಕಡಿಮೆ ಅಂಕಗಳನ್ನು ನೀಡಲಾಗಿದೆ ಈ ಘಟನೆ ನಡೆದಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು: ಅಕ್ಕಿ ವ್ಯಾಪಾರಿ ಒಬ್ಬರಿಗೆ ಬೆದರಿಕೆ ಹಾಕಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಮೂಲದ ಆರು ಮಂದಿ ನಕಲಿ ಪತ್ರಕರ್ತರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಂಧಿತರನ್ನು ರಾಜು ಬಿ, ನಾಗರಾಜ ಸಿ, ಪ್ರದಿಪಗೌಡ, ಅರ್ಪಿತಾ, ಮಹಾದೇವಿ, ಮಘಾ ಎಸ್ ಎಂದು ಗುರುತಿಸಲಾಗಿದೆ. ಅಕ್ಕಿ ವ್ಯಾಪಾರಿ ವೀರೇಶ್ ಎನ್ನುವವರ ಅಂಗಡಿಗೆ ಕ್ಯಾಮೆರಾ ಮತ್ತು ಲೋಗೋ ಹಿಡಿದು ನೀವು ಅಕ್ರಮವಾಗಿ ಪಡಿತರ ಆಹಾರ ಧಾನ್ಯದ ಅಕ್ಕಿ ಮಾರಾಟ ಮಾಡುತಿದ್ದೀರಿ, ನಿಮ್ಮ ಬಗ್ಗೆ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿದರು. ಸುದ್ದಿ ಪ್ರಸಾರ ಮಾಡಬಾರದೆಂದರೆ, 5 ಲಕ್ಷ ರೂಪಾಯಿ ಕೊಡಿ, ಇಲ್ಲವಾದಲ್ಲಿ ಸುದ್ದಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ವಿರೇಶ್ ಕೂಡಲೇ ಪೊಲೀಸರಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಮುದಗಲ್ ಪೊಲೀಸರು ನಕಲಿ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ…
ದಾವಣಗೆರೆ: ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ.ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ತಕ್ಷಣ ತುರ್ತಾಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಡಾ.ಹರ್ಷಾ ಅವರು ಸಾವನ್ನಪ್ಪಿದರು. ಇತ್ತೀಚೆಗಷ್ಟೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಡಾ.ಹರ್ಷಾ ಅಧಿಕಾರ ಸ್ವೀಕರಿಸಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ. ನಾಳೆ ಮಧ್ಯಾಹ್ನ ಸ್ವಗ್ರಾಮ ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹುಬ್ಬಳ್ಳಿ : ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಹಿಂದೂ ಪರ ಸಂಘಟನೆಗಳು ಬೆಳಗ್ಗೆ 7.30ಕ್ಕೆ ಸರಳವಾಗಿ ಗಣೇಶನ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಮಯ ನಿಗದಿಯಾಗಿತ್ತು. ಆದರೆ ಬೆಳಿಗ್ಗೆ 7.30ಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದವನ್ನು ಇತ್ಯರ್ಥಪಡಿಸಿದ ಹೈಕೋರ್ಟ್, ರಾಣಿ ಚೆನ್ನಮ್ಮ ಗಣೇಶೋತ್ಸವ ಮಹಾಮಂಡಳಿ ಸಮಿತಿಗೆ ಗಣೇಶೋತ್ಸವದ ಜವಾಬ್ದಾರಿಯನ್ನು ನೀಡಿದೆ. ಈ ನಿಟ್ಟಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾನ ಮಾಡಲಿರುವ ಮಹಾಮಂಡಳಿ ಸಮಿತಿಯು ಎಲ್ಲ ಸಿದ್ಧತೆಗಳನ್ನು ನಡೆಸಿಕೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯಪುರ : ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ನಿಲ್ಲುವುದಿಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ 10 ಕೆಜಿ ಪಡಿತರ ಅಕ್ಕಿ ವಿತರಿಸುತ್ತಿದೆ. ಅಕ್ಕಿ ಜೊತೆಗೆ ಜೋಳ ಮತ್ತು ರಾಗಿಯನ್ನೂ ನೀಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆಯನ್ನು ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮ್ಯನವರು ಮತ್ತೆ ಮುಖ್ಯಮಂತ್ರಿ ಆದರೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಸೆ.2ರಂದು ಮಂಗಳೂರು ನಗರದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೆ.2ರಂದು ನಗರದ ಹಲವೆಡೆ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಗಳು ಇರುವ ಕಾರಣದಿಂದ ಜನ ಸಂಚಾರ ಮತ್ತು ವಾಹನ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಸೆ.2 ರಂದು ಪ್ರಧಾನಿ ಮೋದಿ ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಾಷಿಂಗ್ಟನ್ : ಏನನ್ನಾದರೂ ಮಾಡುವ ಉತ್ಸಾಹ ವ್ಯಕ್ತಿಗೆ ಅತ್ಯಂತ ವಿಶಿಷ್ಟವಾದ ಗುರುತನ್ನು ನೀಡುತ್ತದೆ. ಜಗತ್ತಿನಲ್ಲಿ ಪ್ರತಿಭೆಗೆ ಕೊರತೆಯಿಲ್ಲದಿದ್ದರೂ, ಅಪರೂಪವಾಗಿ ಕಂಡುಬರುವ ಕೆಲವು ಪ್ರತಿಭೆಗಳಿವೆ. ಅಂತಹ ಕೆಲವು ಪ್ರತಿಭೆಗಳೊಂದಿಗೆ ವ್ಯಕ್ತಿಯೊಬ್ಬರು ಇತಿಹಾಸವನ್ನು ಸೃಷ್ಟಿಸಿದ್ದಾರೆ. ವ್ಯಕ್ತಿಯೊಬ್ಬ ದೈತ್ಯ ಕುಂಬಳಕಾಯಿಯನ್ನು ಕೊರೆದು ಅದನ್ನು ದೋಣಿಯಾಗಿ ಬಳಸುವಲ್ಲಿ ಶೇ.100ರಷ್ಟು ಯಶಸ್ಸನ್ನು ಸಾಧಿಸಿದ್ದಾನೆ. ಡುವಾನ್ ಹ್ಯಾನ್ಸೆನ್ ಅವರು ತಮ್ಮ ಹೆಸರಿನಲ್ಲಿ ಈ ವಿಶಿಷ್ಟ ದಾಖಲೆಯನ್ನು ದಾಖಲಿಸಿದ ಯುನೈಟೆಡ್ ಸ್ಟೇಟ್ಸ್ನ ವ್ಯಕ್ತಿ. ಇವರು ಬೃಹತ್ ಟೊಳ್ಳಾದ ಕುಂಬಳಕಾಯಿಯಲ್ಲಿ ಕುಳಿತು ದೋಣಿಯಲ್ಲಿ 61 ಕಿ.ಮೀ ಪ್ರಯಾಣಿಸಿದ್ದಾರೆ. ಇದು ವಿಶ್ವದಲ್ಲೇ ಹೊಸ ದಾಖಲೆಯಾಗಿದೆ. ಆಲ್ ಡೇವ್ ಸಿಟಿ ಟ್ವಿಟ್ಟರ್ ಖಾತೆಯ ಪೋಸ್ಟ್ ಪ್ರಕಾರ, ಕುಂಬಳಕಾಯಿ ದೋಣಿಯಲ್ಲಿ ನೆಬ್ರಸ್ಕಾದ ಡುವಾನ್ ಹ್ಯಾನ್ಸೆನ್ ನದಿಯಾದ್ಯಂತ 61 ಕಿಲೋಮೀಟರ್ ಪ್ರಯಾಣಿಸಿದ್ದಾರೆ. ಈ ಕುಂಬಳಕಾಯಿ ಬೋಟ್ ಬಗ್ಗೆ ಜಗತ್ತಿನೆಲ್ಲಡೆ ಉತ್ಸಾಹ ಕೆರಳಿಸಿದ್ದಾರೆ. ಕುಂಬಳಕಾಯಿಯಿಂದ ಇವರಿಗೆ ಬೋಟ್ ಮಾಡುವ ಪರಿಕಲ್ಪನೆ ಹೇಗೆ ಬಂತು ಎನ್ನುವ ಬಗ್ಗೆ ವಿವರಣೆ ಕೂಡ ನೆಬ್ರಸ್ಕಾದ ಡುವಾನ್ ಹ್ಯಾನ್ಸೆನ್ ನೀಡಿದ್ದಾರೆ. ತಮ್ಮ ಕನಸನ್ನು ನನಸಾಗಿಸಿಕೊಂಡಿರುವುದಾಗಿ ನೆಬ್ರಸ್ಕಾದ…