Subscribe to Updates
Get the latest creative news from FooBar about art, design and business.
- ಯುವಕರಿಗೆ ತಂತ್ರಜ್ಞಾನ ವ್ಯಸನವಾಗಿದೆ: ಪ್ರೊ.ಎಂ.ವೆಂಕಟೇಶ್ವರಲು
- ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ
- ಜನವರಿ 6ರಿಂದ ಮಧ್ಯಂತರ ವಿದ್ಯುತ್ ವ್ಯತ್ಯಯ
- ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ
- ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಅದ್ದೂರಿಯಾಗಿ ನೆರವೇರಿದ ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ
- 26 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಡೆಂಗ್ಯೂ ಜ್ವರದಿಂದ ಬಾಲಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಕುಟುಂಬಸ್ಥರಿಂದ ಪ್ರತಿಭಟನೆ
Author: admin
ಚಾಮರಾಜನಗರ: ಕನ್ನಡ ಚಿತ್ರರಂಗದ ಅಮೂಲ್ಯ ರತ್ನ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಜನರು ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೇ ಸ್ವಯಂ ಪ್ರೇರಿತರಾಗಿ ಬಂದ್ ನಡೆಸಿ, ತಮ್ಮ ಮೆಚ್ಚಿನ ನಟನಿಗೆ ಗೌರವ ನೀಡಿದ್ದಾರೆ. ಇನ್ನೂ ನಗರದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಪೋಸ್ಟರ್ ಗಳನ್ನು ಹಾಕಲಾಗಿದೆ. ಅಪ್ಪು ಅಭಿಮಾನಿಗಳು ಅವರ ಭಾವಚಿತ್ರವನ್ನು ಹಿಡಿದುಕೊಂಡು ಬೈಕ್ ಗಳಲ್ಲಿ ತೆರಳಿ ವಿಶೇಷವಾದ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ನಿನ್ನೆ ಜಿಮ್ ಸಂದರ್ಭದಲ್ಲಿ ಅಸ್ವಸ್ಥರಾಗಿ ಹೃದಯಾಘಾತದಿಂದ ನಿಧನರಾಗಿದ್ದರು. ಪುನೀತ್ ಅವರ ನಿಧನಕ್ಕೆ ದೇಶಾದ್ಯಂತ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದು, ಮತ್ತೋರ್ವ ಅಪ್ಪು ಫೋಟೋಗೆ ಪೂಜೆ ಸಲ್ಲಿಸಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿಯ ಶಿಂದೊಳ್ಳಿಯ ಕನಕದಾಸ ನಗರದ 33 ವರ್ಷ ವಯಸ್ಸಿನ ವ್ಯಕ್ತಿ ಪರುಶರಾಮ ಹನುಮಂತ ದೇಮಣ್ಣ ಪುನೀತ್ ಸಾವಿನ ಸುದ್ದಿಯಿಂದ ತೀವ್ರವಾಗಿ ನೊಂಡಿದ್ದು, ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಇನ್ನೂ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 26 ವರ್ಷ ವಯಸ್ಸಿನ ರಾಹುಲ್ ಗಾಡಿವಡ್ಡರ ಎಂಬ ಯುವಕ ಪುನೀತ್ ಅವರ ನಿಧನದಿಂದ ತೀವ್ರವಾಗಿ ನೊಂದು ಪುನೀತ್ ಫೋಟೋಗೆ ಪೂಜೆ ಸಲ್ಲಿಸಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಾವು ಎನ್ನುವುದು ಯಾರ ಕೈಯಲ್ಲಿಯೂ ಇಲ್ಲ. ಹುಟ್ಟಿದ ಮನುಷ್ಯ ಸಾಯುವುದು ಪ್ರಕೃತಿಯ ನಿಯಮವಾಗಿದೆ. ಇಂತಹ ಸಂದರ್ಭದಲ್ಲಿ ಅವರ ಪ್ರೀತಿ ಪಾತ್ರರು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಸರಿಯಲ್ಲ. ಎಲ್ಲರಿಗೂ ಅವರದ್ದೇ ಆದ ಕುಟುಂಬಗಳಿವೆ ಎನ್ನುವುದನ್ನು ಯೋಚಿಸಬೇಕಿದೆ. ಸಾವು ಪ್ರಕೃತಿದತ್ತವಾಗಿ ಬರುತ್ತದೆ. ಆತ್ಮಹತ್ಯೆ ಎಂದಿಗೂ ಸೂಕ್ತವಾದ ನಿರ್ಧಾರವಾಗಲು ಅಥವಾ ಅಭಿಮಾನವಾಗಲು ಸಾಧ್ಯವಿಲ್ಲ. ಹಾಗಾಗಿ ಯಾರೂ…
ನವದೆಹಲಿ: ಅಪ್ರೆಂಟಿಸ್ ಶಿಪ್ ಆಯ್ಕೆಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದ್ದು, 6,100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ. ಜುಲೈ 26 ಅರ್ಜಿಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಗಸ್ಟ್ ನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಪ್ರೆಂಟಿಸ್ ಶಿಪ್ ಆಯ್ಕೆಗಾಗಿ ಪದವೀಧರರು ಅರ್ಜಿಸಲ್ಲಿಸಬಹುದಾಗಿದೆ. ಇನ್ನೂ ತರಬೇತಿ ಅವಧಿ ಒಂದು ವರ್ಷವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಎಸ್ ಬಿಐ ವೆಬ್ ಸೈಟ್ https://sbi.co.in/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ದಕ್ಷಿಣ ಕನ್ನಡ/ಉಡುಪಿ: ಬೆಂಗಳೂರಿನ ಮಹಾಬೋಧಿ ಲೋಕಶಾಂತಿ ಬುದ್ಧ ವಿಹಾರದ 54 ಬೌದ್ಧ ಬಿಕ್ಕುಗಳ ತಂಡ ಕರಾವಳಿ ಪ್ರವಾಸವು ಅಕ್ಟೋಬರ್ 12ರಿಂದ 15ರವರೆಗೆ ವಿವಿಧ ಪ್ರೇಕ್ಷಣೀಯ ಸ್ಥಳಗಳಲ್ಲಿ ನಡೆಯಿತು. ಮಂಗಳೂರು ಬೌದ್ಧ ಮಹಾಸಭಾ ಮತ್ತು ಉಡುಪಿ ಬೌದ್ಧ ಮಹಾಸಭಾ ಇದರಲ್ಲಿ ಭಾಗಿಯಾಗಿತ್ತು. ಅಕ್ಟೋಬರ್ 13ರಂದು ಡಾ.ಮದನ್ ನಾಯಕ್ ಅವರ ಧ್ಯಾನ ಕೇಂದ್ರ(ಶ್ರೀಕೃಷ್ಣ ಧ್ಯಾನ ಕೇಂದ್ರ)ಕ್ಕೆ ಭೇಟಿ, ಬಳಿಕ ದಮ್ಮೋಪದೇಶ ನೀಡಲಾಯಿತು. ಮಂಗಳೂರು ಬೌದ್ಧ ಮಹಾಸಭಾ ಹಾಗೂ ಉಡುಪಿ ಬೌದ್ಧ ಮಹಾಸಭಾ ಭಾಗಿಯಾಗಿದ್ದರು. ಒಟ್ಟು 54 ಬಿಕ್ಕುಗಳು ಭಾಗಿಯಾಗಿದ್ದರು. ಆ ಬಳಿಕ ಡಾ.ಬಿ.ಆರ್.ಅಂಬೇಡ್ಕರ್ ಭವನ ಪೇಜಾವರಕ್ಕೆ ಭೇಟಿ ನೀಡಿ ಬುದ್ಧವಂದನೆ ಮತ್ತು ದಮ್ಮೋಪದೇಶ ನಡೆಸಲಾಯಿತು. ಆ ಬಳಿಕ ಬೈಕಂಪಾಡಿಯ ಪ್ರೈಮಸಿ ಕ್ಯಾಂಡಲ್ ಫ್ಯಾಕ್ಟರಿಗೆ ಭೇಟಿ ನೀಡಿ ಜಾಗೃತಿ ಕಾರ್ಯಕ್ರಮ ನಡೆಯಿತು. ಬಳಿಕ ಪಣಂಬೂರು ಬೀಚ್ ಗೆ ಭೇಟಿ ನೀಡಿದರು. 14ರಂದು ಡಾ.ಎಂ.ವಿಜಯಬಾಣ ಶೆಟ್ಟಿ ಅವರ ಮುನಿಯಾಲ್ ಆಯುರ್ವೇದಿಕ್ ಕಾಲೇಜು ಮಣಿಪಾಲ್ ನ ಹೊಸ ಕಟ್ಟದಲ್ಲಿ ಬುದ್ಧವಂದನೆ ಹಾಗೂ ದಮ್ಮೋಪದೇಶ ನೆರವೇರಿಸಲಾಯಿತು. ಬಳಿಕ ಸೈಂಟ್ ಮೇರಿಸ್…
ರೋಗನಿರೋಧಕ ಶಕ್ತಿ ಎಂದರೆ ಥಟ್ಟನೆ ನೆನಪಾಗುವುದು ಬೆಳ್ಳುಳ್ಳಿ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬೆಳ್ಳುಳ್ಳಿ ಹೆಚ್ಚಿಸುತ್ತದೆ. ಅನೇಕ ಪೋಷಕಾಂಶಗಳನ್ನು ಹೊಂದಿರುವ ಬೆಳ್ಳುಳ್ಳಿಯಲ್ಲಿ ಹಲವು ಔಷಧೀಯ ಗುಣಗಳು ಕೂಡ ಇವೆ. ಬೆಳ್ಳುಳ್ಳಿಯು ರಕ್ತದೊತ್ತಡವನ್ನು ತಡೆಯುತ್ತದೆ. ಈ ಮೂಲಕ ನಮ್ಮ ದೇಹದಲ್ಲಿರುವ ರಕ್ತನಾಳಗಳಿಗೆ ಆಗಬಹುದಾಗಿರುವ ಸಾಮಾನ್ಯ ಹಾನಿಗಳನ್ನು ತಡೆಯುತ್ತದೆ. ನಮ್ಮ ದೇಹದಲ್ಲಿರುವ ಅನಗತ್ಯ ಕೊಬ್ಬುಗಳನ್ನು ತೆಗೆದು ಹಾಕಲು ಇದು ಸಹಾಯಕವಾಗಿದೆ. ಮುಖ್ಯವಾಗಿ ಬೆಳ್ಳುಳ್ಳಿ ಸೇವೆಯು ಹೃದಯ ಸಂಬಂಧಿ ಕಾಯಿಲೆಗಳಿಂದ ಉಂಟಾಗಬಹುದಾಗಿರುವ ಅಪಾಯವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಬಿ 6, ಸಿ, ಫೈಬರ್ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಪೋಷಕಾಂಶಗಳನ್ನು ಬೆಳ್ಳುಳ್ಳಿ ಹೊಂದಿದೆ. ನಮ್ಮ ದೇಹವು ಸುಸ್ಥಿತಿಯಲ್ಲಿರಲು, ನಮ್ಮ ಜೀರ್ಣಕ್ರಿಯೆಯಲ್ಲಿಯೂ ಬೆಳ್ಳುಳ್ಳಿ ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ ಆಹಾರದಲ್ಲಿ ಬೆಳ್ಳುಳ್ಳಿಯನ್ನು ನಮ್ಮ ಮಿತಿಯೊಳಗೆ ಬಳಸುವುದು ಉತ್ತಮ.
ಸತೀಶ್ ಕಕ್ಕೆಪದವು ಸುಮಾರು 450 ವರ್ಷಗಳ ಹಿಂದೆ ಇಟ್ಟೆ ಕೊಪ್ಪ ಪೆರಿಯ ಮಂಜವು ಕಾಲುವೆ ಯೊಂದರ ಇಕ್ಕೆಡೆಗಳಲ್ಲಿ ಎರಡು ಊರುಗಳ ಜೋಡಣೆಯಾಗಿದ್ದು, “ಮನ್ಸರ” ( ಸಂವಿಧಾನ ಜಾರಿಯಾದ ನಂತರ/ ಜಾತಿ ದೃಢೀಕರಣ ಪಡೆಯುವ ಪ್ರಕ್ರಿಯೆ ಆರಂಭವಾದ ಮೇಲೆ ಪ್ರಸ್ತುತ ಜಾತಿಪಟ್ಟಿಯ ಪ್ರಕಾರ ಹೊಲೆಯ, ಹಸಲರು, ಪಾಲೆ, ತೋಟಿ, ಆದಿ ದ್ರಾವಿಡ, ಆದಿ ಕರ್ನಾಟಕ ) ಸಾವಿರಾರು ಒಕ್ಕಲುಗಳು/ ಬಿಡಾರಗಳು ಈ ಪ್ರದೇಶದಲ್ಲಿ ಇದ್ದವು ಎಂಬುದನ್ನು ತಲೆಮಾರುಗಳಿಂದ ಕೇಳಿ ತಿಳಿಯಬಹುದಾಗಿದೆ. ಮೂಲತಃ ಪ್ರಕೃತಿ ಆರಾಧಕರಾಗಿದ್ದ ಇವರು ಮೂಡಣ ದಿಕ್ಕಿಗೆ ನಮಿಸಿ ಸೂರ್ಯ ನಮಸ್ಕಾರ ದೊಂದಿಗೆ ದಿನಚರಿಯನ್ನು ಆರಂಭಿಸುವುದು ವಾಡಿಕೆಯಾಗಿತ್ತು. ಮನ್ಸರ ಸಾಮಾಜಿಕ ಸಾಂಸ್ಕೃತಿಕ ರಾಜಕೀಯ ಚಟುವಟಿಕೆಗಳು ಇಟ್ಟೆಕೊಪ್ಪ ಪೆರಿಯ ಮಂಜದಲ್ಲೇ ಕೇಂದ್ರೀಕೃತವಾಗಿತ್ತು. ಕಡಲ ಕಿನಾರೆಯಿಂದ ಸಹ್ಯಾದ್ರಿ ಬೆಟ್ಟಗಳ ಆಚೆಗೂ ಹತ್ತವ್ವ ಮಕ್ಕಳಿಗೂ ಹದಿನಾರು ಬರಿಯರಿಗೂ ಕೇಂದ್ರ ಇದಾಗಿತ್ತು. ಜಾತಿಯೊಳಗಿನ ಆಚಾರ ವಿಚಾರಗಳು ಏಕಾಭಿಪ್ರಾಯವಾಗಿ ಇಲ್ಲಿಂದಲೇ ನಿಯಂತ್ರಿತವಾಗುತ್ತಿತ್ತು. ಆಂತರಿಕ ಕಲಹ ಉದ್ಭವಿಸಿದಾಗ ಸಾರ್ವಜನಿಕ ಪಂಚಾಯತಿ ಕಟ್ಟೆಗೆ ತಲುಪುವ ಮುನ್ನ ಜಾತಿ ಕೂಡುಗಟ್ಟಿನ ಪಂಚಾಯತಿ ಕಟ್ಟೆಯಲ್ಲಿ…
ಕರಂಗೋಲು ಕುಣಿತ: ಅದರ ಸಾಮಾಜಿಕ ಮತ್ತು ಅಲೌಕಿಕ ನೆಲೆಗಳು: ಸಂಚಿಕೆ: 2 ಲೇಖಕರು ರಘು ಧರ್ಮಸೇನ ( ಈ ಅಧ್ಯಯನವು ಆದಿ ದ್ರಾವಿಡ ಸಮುದಾಯದ ಮೇಲಿನ ಸುಮಾರು ಹದಿನೈದು ವರ್ಷಗಳ ಜನಾಂಗೀಕ ಅಧ್ಯಯನದ ಫಲಶ್ರುತಿಯಾಗಿದೆ..ಅಧ್ಯಯನ ಸಂದರ್ಭದಲ್ಲಿ ಬಾಬು ಬಳ್ಲಾಜೆ ಅಂತಹ ಹಲವಾರು ಪಾಡ್ದನಕಾರರು ಹಾಗೂ ಆದಿ ದ್ರಾವಿಡ ಸಮುದಾಯದ ಹಲವಾರು ಮಾಹಿತಿದಾರರನ್ನು ಸಂದರ್ಶನ ಮಾಡಿ ಅವರು ಕೊಟ್ಟ ಮಾಹಿತಿಗಳನ್ನು ಅಧ್ಯಯನದಲ್ಲಿ ಬಳಕೆ ಮಾಡಲಾಗಿದೆ ) ಕರಂಗೋಲು ಪಾಡ್ದನ ಪಠ್ಯಗಳನ್ನು ಗಂಭೀರವಾಗಿ ವಿಶ್ಲೇಷಣೆಗಳಿಗೆ ಒಳಪಡಿಸಿದರೆ ಅದರ ಸಾಮಾಜಿಕ, ಧಾರ್ಮಿಕತೆ, ಐತಿಹಾಸಿಕ ಹಾಗೂ ಜನಾಂಗೀಕ ನೆಲೆಗಳ ಅರ್ಥ ಮತ್ತು ಮಹತ್ವಗಳು ನಮ್ಮ ಅರಿವಿಗೆ ಗೋಚರಿಸಬಹುದು. ಇಲ್ಲದಿದ್ದರೆ ಬರೀ ಅದರ ಆಚರಣಾತ್ಮಕ ವಿಧಾನಗಳ ವಿವರಗಳಿಗೆ ತ್ರಪ್ತಿಪಟ್ಟುಕೊಳ್ಳಬಹುದು. ಡಾ.ವಾಮನ ನಂದಾವರರು ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ಸಂಪಾದಿಸಿದ ಕರಂಗೋಲು ಹಾಡನ್ನು ಉಲ್ಲೇಖಿಸುತ್ತಾರೆ. ಆ ಹಾಡು ಹೀಗೆ ಸಾಗುತ್ತದೆ; ಓ ಪೊಲಿಯೇ ಪೊಲ್ಯರೆ ಪೋ ಪುವ್ವೆ ಪೊಂಡುಲ್ಲಯ ಓ ಮಾಯಿತ ಪುಣ್ಣಮೆ ಮಾಯಿಡೇ ಪೋತುಂಡೇ ಓ ಸುಗ್ಗಿದ ಪುಣಮೆ ಸುಗ್ಗಿಢೇ…
ಮಹಾನಾಯಕ ಡಾಟ್ ಇನ್(www.mahanayaka.in) ಅಂತರ್ಜಾಲ ಮಾಧ್ಯಮವು 2020 ಅಕ್ಟೋಬರ್ 20ರಂದು ಓದುಗರಿಂದಲೇ ಲೋಕಾರ್ಪಣೆಯಾಯಿತು. ಇದೀಗ ಮಹಾನಾಯಕ ಅಂತರ್ಜಾಲ ಮಾಧ್ಯಮ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮಹಾನಾಯಕ ಮಾಧ್ಯಮವನ್ನು ಬಹಳಷ್ಟು ಪ್ರೀತಿಯಿಂದ ಜನರು ಸ್ವೀಕರಿಸಿದ್ದಾರೆ. ಮಾಧ್ಯಮದ ಉತ್ತಮ ಅಂಶಗಳನ್ನು ಗಮನಿಸಿ ನಮ್ಮನ್ನು ಪ್ರೋತ್ಸಾಹಿಸಿದ್ದಾರೆ. ತಪ್ಪುಗಳು ಕಂಡು ಬಂದಾಗ ನಮ್ಮ ಗಮನಕ್ಕೆ ತಂದು ಅವುಗಳನ್ನು ತಿದ್ದುವ ಕೆಲಸವನ್ನೂ ಮಾಡಿದ್ದಾರೆ. ಹೀಗೆ ಓದುಗರಿಂದಲೇ ಉದ್ಘಾಟನೆಗೊಂಡ ಮಹಾನಾಯಕ ಮಾಧ್ಯಮ ಕೇವಲ ಒಂದೇ ವರ್ಷಗಳಲ್ಲಿ ಲಕ್ಷಾಂತರ ಓದುಗರ ಅಚ್ಚುಮೆಚ್ಚಿನ ತಾಣವಾಗಿದೆ. ಓದುಗರ ಈ ಪ್ರೀತಿ ವಿಶ್ವಾಸಕ್ಕೆ ಮಹಾನಾಯಕ ಬಳಗ ಆಭಾರಿಯಾಗಿದೆ. ಈ ಒಂದು ವರ್ಷಗಳ ಅವಧಿಯಲ್ಲಿ ಸಾವಿರಾರು ಆನ್ ಲೈನ್ ಮಾಧ್ಯಮಗಳ ನಡುವೆಯೇ ಮಹಾನಾಯಕ ಮಾಧ್ಯಮವನ್ನು ಓದುಗರು ಪ್ರತ್ಯೇಕವಾಗಿ ಗುರುತಿಸಿದ್ದಾರೆ. ಸರ್ಕಾರದ, ಜನಪ್ರತಿನಿಧಿಗಳ ತಪ್ಪುಗಳನ್ನು ಎತ್ತಿತೋರಿಸಲು ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಬಳಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೋಷಿತ ಜನರ ಸಂಕಷ್ಟಗಳು, ದಲಿತ ದೌರ್ಜನ್ಯಗಳು, ಅಸ್ಪೃಷ್ಯತೆ ಆಚರಣೆ, ಕೋಮುವಾದ, ಧಾರ್ಮಿಕ ಅಸಮಾನತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮೊದಲಾದ ಘಟನೆಗಳ ಸಂದರ್ಭದಲ್ಲಿ ಜಾತಿ,…
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಸಂಬಂಧ ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ. ಇನ್ನೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ. ಶುಕ್ರವಾರ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ವೈದ್ಯರ ನಿರಂತರ ಚಿಕಿತ್ಸೆಯ ಬಳಿಕವೂ ಪುನೀತ್ ರಾಜ್ ಕುಮಾರ್ ಅವರು ಚೇತರಿಸಿಕೊಳ್ಳದೇ ನಿಧನರಾಗಿದ್ದಾರೆ.
ತಿಪಟೂರು: ರಸ್ತೆ ಅಪಘಾತದಿಂದ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಹಿನ್ನವಳ್ಳಿ ಹೋಬಳಿಯ ಬಳುವನೇರಳು ಗೇಟ್ ನಲ್ಲಿ ನಡೆದಿದೆ. ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮಿತ್ತ ಬಳುವನೇರಲು ಗ್ರಾಮದ ಕಡೆಯಿಂದ ತಿಪಟೂರಿಗೆ ಹೋಗುತ್ತಿದ್ದಾಗ ಗೇಟ್ ನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು (ಟಾಟಾ ಮಹೀಂದ್ರ ) ಗಾಡಿಯು ಒಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ಹೊನ್ನವಳ್ಳಿ ಪೋಲಿಸ್ ಠಾಣೆಯ ಸಿಬ್ಬಂದಿಗಳು ಗೇಟ್ ನಲ್ಲಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ದಂಡ ಹಾಕುತ್ತಾರೆಂಬ ಭಯದಿಂದ ಅತಿವೇಗವಾಗಿ ಬಂದ ಕಾರು ಬೈಕ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ತಿಳಿದ ಕೂಡಲೇ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರುಗಳು ಗೇಟ್ ನಲ್ಲಿ ಶವಗಳನ್ನಿರಿಸಿ, ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ಈ…