Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಕಾರ್ಯಕರ್ತ ಕನ್ನಯ್ಯ ಲಾಲ್ ನನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ರಾಜಸ್ಥಾನದ ಉದಯಪುರ್ ನಲ್ಲಿ ಅಮಾನುಷವಾಗಿ ಕನ್ನಯ್ಯ ಲಾಲ್ ನನ್ನು ಹತ್ಯೆ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಅವರ ಪ್ರತಿಕೃತಿಗಳನ್ನು ದಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಭಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ನೂಪುರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಒಂದನ್ನು ರಾಜಸ್ಥಾನದ ದರ್ಜಿಗ ಕನ್ನಯ್ಯ ಲಾಲ್ ತನ್ನ ಸ್ಟೇಟಸ್ ನಲ್ಲಿ ಹಾಕಿದ್ದೇ ದೊಡ್ಡ ಅಪರಾಧವೆಂದು ಭಾವಿಸಿದ ದುಷ್ಕರ್ಮಿಗಳು ಅವರ ಕುತ್ತಿಗೆಯನ್ನು ಸೀಳಿ ಹತ್ಯೆಗೈದು ವಿಕೃತಿ ಮೆರೆದಿದ್ದಾರೆ. ಜೊತೆಗೆ ತಾವೇ ಕೊಲೆ ಮಾಡಿರುವ ವಿಡಿಯೋ ಸಹ…
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದ ಹಿಂದೂ ಮುಸ್ಲಿಂ ಹಾಗೂ ಜೈನ ಧರ್ಮಗಳ ಸೌಹಾರ್ದತೆ, ಸೋದರತೆಯ ಸಮಾನಮನಸ್ಕರ ಹಾಗೂ ಸುತ್ತಮುತ್ತಲ ಗ್ರಾಮಸ್ಥರುಗಳ ವತಿಯಿಂದ ಜಾಮಿಯಾ ಸಮುದಾಯ ಭವನದಲ್ಲಿ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಉಪಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿ, ವಿಶ್ರಾಂತ ಜೀವನ ಸಾಗಿಸಿ ಇಹಲೋಕ ತ್ಯಜಿಸಿದ ಸ್ನೇಹಜೀವಿ ದಿವಂಗತ ಅಕ್ರಂ ಭಾಷಾ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಕ್ರಂ ಭಾಷಾ ಅಗಲಿಕೆಗೆ ಕಂಬನಿ ಮಿಡಿದ ಮಿತ್ರರು, ತಮ್ಮ ಅಧಿಕಾರವಧಿಯಲ್ಲಿ ಮಾಯಸಂದ್ರದ ಬಸದಿ ಯಾತ್ರೆ ನಿವಾಸ ಜಾಮಿಯಾ ಸಮುದಾಯ ಭವನ ಹಾಗೂ ಊರಿನ ತುಂಬಾ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಅನುದಾನ ನೀಡಿದ್ದರು ಹಾಗೂ ಅನೇಕ ಜನರಿಗೆ ಸಹಾಯ ಸಹಕಾರ ನೀಡಿದ್ದರು ಎಂದು ನೆನಪಿಸಿಕೊಂಡರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಂಗಳ ಗೌರಮ್ಮ ಹೊನ್ನಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ಅಜಿತ್ ಪ್ರಸಾದ್ ಜೈನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್. ಆರ್ .ಜಯರಾಮ್ , ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಮದನ್ ಕುಮಾರ್ ಜೈನ್ ,…
ತಿಪಟೂರು: ವಾಹನಗಳನ್ನು ಕಳವು ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ತಿಪಟೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವಾಹನಗಳನ್ನು ಬೆಂಗಳೂರು, ಹೊಸದುರ್ಗ, ಶಿವಮೊಗ್ಗ ,ತರೀಕೆರೆ, ದಾವಣಗೆರೆ ಸೇರಿದಂತೆ ಹಲವು ಕಡೆ ಕಳ್ಳತನ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ 10 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದೆ ಓಡಿಸುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದು, ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಬೈಕ್ ಕಳವು ಜಾಲದ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಭದ್ರಾವತಿ, ಸಂಜಯ್, ಕಾರ್ತಿಕ್, ಉಮೇಶ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ಇವರ ಬಳಿಯಿಂದ 10 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಡಿವೈಎಸ್ಪಿ ಸಿದ್ದಾರ್ಥ ಗೋಯಲ್ , ನಗರ ಠಾಣೆ ಇನ್ಸ್ಪೆಕ್ಟರ್ ಶ್ರೀಶೈಲಮೂರ್ತಿ, ಸಬ್ ಇನ್ಸ್ಪೆಕ್ಟರ್ ದ್ರಾಕ್ಷಾಯಿಣಿ ಕೆ., ಎಸ್ ಐ ನಿಶಾ, ಅಹ್ಮದ್ ಎ., ಶ್ರೀರಾಮಣ್ ಪೇದೆಗಳಾದ…
ಬೆಂಗಳೂರು: ಬೇಡಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಸಲುವಾಗಿ ಹೋರಾಟ ಹಿನ್ನೆಲೆ ಬೆಂಗಳೂರಿಗೆ ಹೊರಟಿದ್ದ ಪ್ರತಿಭಟನಾಕಾರರನ್ನು ಶಿರಾ ಟೋಲ್ ಗೇಟ್ ಬಳಿ ಪೊಲೀಸರು ತಡೆದಿದ್ದಾರೆ. ಇಂದು ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆಂದು ತೆರಳುತ್ತಿದ್ದವರನ್ನು ಪೊಲೀಸರು ಶಿರಾ ಟೋಲ್ ಗೇಟ್ ಬಳಿ ತಡೆದಿದ್ದಾರೆ. ಪ್ರತಿಭಟನಾಕಾರರ ಪೈಕಿ ಮಠಾಧೀಶರು ಕೂಡ ಇದ್ದು, ಮಠಾಧೀಶರನ್ನೂ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ನೂರಾರು ವಾಹನಗಳ ಮೂಲಕ ಪ್ರತಿಭಟನಾಕಾರರು ಬೆಂಗಳೂರಿಗೆ ಹೊರಟಿದ್ದರು. ಪ್ರತಿಭಟನಾಕಾರರನ್ನು ತಡೆದಿದ್ದರಿಂದ ಆಕ್ರೋಶಗೊಂಡ ಸಾವಿರಾರು ಪ್ರತಿಭಟನಾಕಾರರು ಸ್ಥಳದಲ್ಲೇ ಧರಣಿ ನಡೆಸುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಗುಬ್ಬಿ: ವಿದ್ಯುತ್ ಲೈನ್ ಗೆ ತೊಂದರೆಯಾಗುತ್ತಿದೆ ಎಂಬ ನೆಪವೊಡ್ಡಿ ಬೆಳೆದು ನಿಂತ ಅಡಿಕೆ ಹಾಗೂ ಎಲೆ ಅಂಬುಗಳನ್ನು ಬೆಸ್ಕಾಂ ಅಧಿಕಾರಿಗಳು ಕತ್ತರಿಸಿ ಹಾಕಿರುವ ಘಟನೆ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಗುಬ್ಬಿ ತಾಲೂಕು ಕಸಬಾ ಹೋಬಳಿಯ ಹಳೇಗುಬ್ಬಿ ಗ್ರಾಮದ ಗಂಗ ರೇವಣ್ಣ ರವರಿಗೆ ಸೇರಿದ ಸರ್ವೆ ನಂಬರ್ 101/4 ರಲ್ಲಿ ಬೆಸ್ಕಾಂನ ವಿದ್ಯುತ್ ತಂತಿಗಳು ತೋಟದ ಮಧ್ಯೆ ಭಾಗದಲ್ಲಿ ಸುಮಾರು ವರ್ಷಗಳಿಂದ ಇದ್ದರು ಸಹ ಅದನ್ನು ಪರ್ಯಾಯವಾಗಿ ಸ್ಥಳಾಂತರ ಮಾಡದೇ ಇಂದು ಬೆಸ್ಕಾಂ ಸಿಬ್ಬಂದಿ ತೋಟದಲ್ಲಿ ಕಾಡು ತೆರವುಗೊಳಿಸುವ ನೆಪದಲ್ಲಿ ಲೈನ್ ಮ್ಯಾನ್ ಗಳು ಹಾಗೂ ಎಸ್. ಓ ಜಮೀನಿನ ಮಾಲೀಕರಿಗೆ ಯಾವುದೇ ಯಾವುದೇ ಮಾಹಿತಿ ನೀಡದೆ ಏಕಾಏಕಿ ಸುಮಾರು ಎಂಟರಿಂದ 10 ಫಲ ಬಿಡುವ ಅಡಿಕೆ ಮರಗಳನ್ನು ಹಾಗೂ ಅಡಿಕೆ ಮರಕ್ಕೆ ಎಬ್ಬಿಸಿರುವ ಎಲೆ ಅಂಬು ಗಳನ್ನು ಸಹ ಮಾನವೀಯತೆ ಇಲ್ಲದೆ ನಿರ್ದಾಕ್ಷಿಣ್ಯವಾಗಿ ಕಡಿದು ಹಾಕಿ ದುರ್ವತನೆ ತೋರಿದ್ದಾರೆ ಎಂದು ರೈತ ಗಂಗ ರೇವಣ್ಣ ಮತ್ತು ಕುಟುಂಬದವರು ಅಳಲಲು ತೊಂಡಿಕೊಂಡಿದ್ದಾರೆ. ಸುಮಾರು…
ಗುಬ್ಬಿ: ತಾಲೂಕಿನ ಬೋಚಿಹಳ್ಳಿ ಗ್ರಾಮದಲ್ಲಿ ಸುಮಾರು 35 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಬಾಯಿಗೆ ಬಟ್ಟೆಯನ್ನು ತುರುಕಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ಮಹಿಳೆಯ ಬಾಯಿಗೆ ಬಟ್ಟೆ ತುರುಕಿಸಿ ಹತ್ಯೆ ಮಾಡಲಾಗಿರುವ ಸ್ಥಿತಿ ಕಂಡು ಬಂದಿದ್ದು, ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗಿಲ್ಲ. ಯಾರಿಗಾದರೂ ಚಹರೆ ತಿಳಿದು ಬಂದಲ್ಲಿ ಗುಬ್ಬಿ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸುವಂತೆ ಪೊಲೀಸ್ ವೃತ್ತ ನಿರೀಕ್ಷಕ ನದಾಫ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಜಿ ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯು ನಡೆಯಿತು. ತಾಲ್ಲೂಕು ದಂಡಾಧಿಕಾರಿ ನಹೀದಾ ಜಮ್ ಜಮ್, ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಜಿ ದೀಪಶ್ರೀ, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿ ಪಿ ಐ ಸಿದ್ದರಾಮೇಶ್ವರ್ ಮತ್ತು ಎಲ್ಲ ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಶಾಸಕರ ಡಾ.ಜಿ.ಪರಮೇಶ್ವರ್ ಆದೇಶ ನೀಡಿದರು. ಮೊದಲಿಗೆ ಕೃಷಿ ಇಲಾಖೆಯ ಎಡಿಎ ನಾಗರಾಜು ತಮ್ಮ ಇಲಾಖೆಯಲ್ಲಿ ಬರುವಂತಹ ಅನುದಾನಗಳನ್ನು ಮತ್ತು ಪೂರ್ಣಗೊಂಡಿರುವ ಅಭಿವೃದ್ಧಿ ಸಭೆಯಲ್ಲಿ ತಿಳಿಸಿದರು. ಕೃಷಿ ಹೊಂಡಗಳನ್ನು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಆದೇಶದ ಮೇರೆಗೆ ಸದ್ಯಕ್ಕೆ ಬಂದ್ ಮಾಡಲಾಗಿದೆ, ಕೃಷಿ ಹೊಂಡಗಳ ಅಭಿವೃದ್ಧಿಗೆ ಕಾರ್ಯ ಆಗುತ್ತಿಲ್ಲವೆಂದು ಅಸಮಾಧಾನವನ್ನು ವ್ಯಕ್ತಪಡಿಸಿದಾಗ, ಪರಮೇಶ್ವರ್ ಅವರು ಪ್ರತಿಕ್ರಿಯಿಸಿ ಕೂಡಲೇ ನನಗೆ ಪತ್ರವನ್ನು ಬರೆಯಿರಿ, ನಾನು ಸರ್ಕಾರದ ಗಮನಕ್ಕೆ ತಂದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ನಡೆದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಮೋಹನ್, ಸಮಾಜ ಸೇವಕ ಬಿ.ಆರ್.ಶಶಿಧರ್ ಮತ್ತು ಸೋಮಶೇಖರ್ (ಕೆಇಬಿ) ಮಾತನಾಡಿದರು. ಆಯೋಜಕ ಮತ್ತು ಅಧ್ಯಕ್ಷ ಬಿ.ಟಿ.ಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರಯ್ಯ, ಸದಸ್ಯ ರಮೇಶ್, ಸಂಘಟನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ನಗರ ಕಾರ್ಯದರ್ಶಿ ಲೋಕೇಶ್, ಅಲ್ಪಸಂಖ್ಯಾತರ ಘಟಕದ ಅನ್ವರ್, ಎಪಿಎಂಸಿ ಮಾಜಿ ಸದಸ್ಯ ಶಿವಕುಮಾರ್ ಮುಖಂಡರಾದ ಲಿಂಗರಾಜ್, ಗಂಗಾಧರ್,ಸಂಗೀತ ರಮೇಶ್,ಈಶ್ವರಪ್ಪ, ಜಯಣ್ಣ, ರೋಟರಿ ನಿರ್ದೇಶಕ ಗವಿಯಣ್ಣ, ಲಕ್ಷ್ಮಿ ಕ್ರಿಕೆಟರ್ಸ್ ನ ಚಿರಂಜೀವಿ ಮತ್ತು ರವಿ ಸೇರಿದಂತೆ ಸಂಘಟನೆ ಪದಾಧಿಕಾರಿಗಳು, ಗ್ರಾಮದ ಮುಖಂಡರುಗಳು ಹಾಗೂ ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು. ಈ ಪಂದ್ಯಾವಳಿಗೆ ಸುಮಾರು ಇಪ್ಪತ್ತಾರು ತಂಡಗಳು ಭಾಗವಹಿಸಿದ್ದು, ಮೊದಲನೇ ಬಹುಮಾನ 10.000/- ರೂಗಳನ್ನು ಸಾರ್ಥವಳ್ಳಿಯ ಲಕ್ಷ್ಮಿ ಕ್ರಿಕೆಟರ್ಸ್ ತಂಡ, ದ್ವಿತೀಯ ಬಹುಮಾನ 7,000/-ರೂಗಳನ್ನು ತಿಪಟೂರು…
ಕೊರಟಗೆರೆ: ತಿನ್ನುವ ಅನ್ನದಲ್ಲೂ ಧೂಳು, ಕುಡಿಯುವ ನೀರಿನಲ್ಲೂ ಧೂಳು.. ಹೌದು ಕೊರಟಗೆರೆ ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಬಿಕ್ಕೆಗುಟ್ಟೆ ಗ್ರಾಮದ ಬಳಿ ನಡೆಯುತ್ತಿರುವ ಕ್ರಷರ್ ಗಳ ಹಾವಳಿಯಿಂದ ಜನರು ಮಣ್ಣನ್ನು ತಮ್ಮ ಆಹಾರವಾಗಿ ಮತ್ತು ಕುಡಿಯುವ ನೀರಾಗಿ ಬಳಸುತ್ತಿದ್ದಾರೆ. ಜನರು ಮಾತ್ರವಲ್ಲದೇ ಅಮಾಯಕ ಮೂಕ ಪ್ರಾಣಿಗಳು ಧೂಳು ಸೇವಿಸುವಂತಾಗಿದೆ. ಇದರಿಂದ ಜನರು ಪ್ರಾಣ ಭೀತಿಯಲ್ಲಿ ದಿನ ನಿತ್ಯ ಜೀವನ ಕಳೆಯುವಂತಾಗಿದೆ. ಪ್ರತಿನಿತ್ಯ ಕ್ರಷರ್ ನಿಂದ ಸಿಡಿಸುವ ಸಿಡಿ ಮದ್ದುಗಳಿಂದಾಗಿ ಶಬ್ಧ ಮಾಲಿನ್ಯಉಂಟಾಗುವುದಷ್ಟೇ ಅಲ್ಲದೇ ಪಕ್ಕದಲ್ಲೇ ಇರುವ ಗ್ರಾಮಗಳಿಗೆ ಒಂದುನರಕವಾಗಿ ಪರಿಣಮಿಸಿದೆ. ಸದಾ ಧೂಳಿನಿಂದ ಕೂಡಿಕೊಂಡಿರುವ ಈ ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿ ಜನರು ಬೇರೆ ಪ್ರದೇಶಗಳಿಗೆ ಹೋಗುವುದೊಂದೇ ಬಾಕಿ ಉಳಿದಿದೆ. ಬಿಕ್ಕೆಗುಟ್ಟೆ ಗ್ರಾಮದಲ್ಲಿನ ಜನರು ಒಂದಿಲ್ಲೊಂದು ಖಾಯಿಲೆಯಿಂದ ಮರಣ ಹೊಂದುತ್ತಿದ್ದಾರೆ. ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಲೇ, ಸತ್ತವರಿಗೆ ಮಣ್ಣು ಹಾಕುತ್ತಿದ್ದಾರೆ. ಇನ್ನೊಂದೆಡೆ ಮೂಕ ಪ್ರಾಣಿಗಳ ವೇದನೆಯನ್ನು ಕೇಳುವವರು ಯಾರು? ಅವುಗಳಿಗೆ ಸರಿಯಾದ ಮೇವು ಸಿಗುತ್ತಿಲ್ಲ. ತಿನ್ನುವ ಹುಲ್ಲಿನ ಮೇಲೆ…
ಹಿರಿಯೂರು: ಮೈಸೂರು ಹುಲಿ ಟಿಪ್ಪು ಸುಲ್ತಾನ್ 230 ನೇ ಪುಣ್ಯಸ್ಮರಣೆಗೆ ಹಿರಿಯೂರು ನಗರದ ಜಾಮೀಯ ಮಸೀದಿಯ ಕಾರ್ಯದರ್ಶಿ ಮಹಮ್ಮದ್ ರಫೀಉಲ್ಲಾ ಹಾಗೂ ಅಧ್ಯಕ್ಷರಾದ ಬಿ.ಎಸ್.ನವಾಬ್ ಸಾಬ್ ರವರ ಅಧ್ಯಕ್ಷತೆಯಲ್ಲಿ ಚಾಲನೆ ನೀಡಲಾಯಿತು. ಹಿರಿಯೂರು ನಗರದ ದರ್ಗಾದಲ್ಲಿ ಟಿಪ್ಪು ಸುಲ್ತಾನ್ ಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಟಿಪ್ಪು ಅಭಿಮಾನಿಗಳ ಮಹಾ ವೇದಿಕೆ ಅಧ್ಯಕ್ಷ ಸಮೀವುಲ್ಲಾ, ಟಿಪ್ಪು ಸುಲ್ತಾನ್ ಕೊಡುಗೆಯನ್ನು ಯುವಜನರಿಗೆ ತಿಳಿಸಬೇಕಿದೆ. ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಯಾವುದೇ ವ್ಯಕ್ತಿಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಇದಲ್ಲದೆ ದೇಶಕ್ಕಾಗಿ ತನ್ನ ಮಕ್ಕಳನ್ನು ಬ್ರಿಟಿಷರಿಗೆ ಒತ್ತೆಯಿಟ್ಟ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಅಪಾರವಾದ ದೇಶ ಪ್ರೇಮ, ಆಡಳಿತ ಕೌಶಲ್ಯ, ಹೀಗೆ ಇವರ ಕೊಡುಗೆಗಳನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ ಎಂದರು. ಭಾರತವನ್ನು ಆಕ್ರಮಿಸಿದ್ದ ಬ್ರಿಟಿಷರನ್ನು ದೇಶದಿಂದ ಹೊಡೆದೋಡಿಸಲು ಮುಂದಾದ ಮೊದಲ ಸ್ವಾತಂತ್ರ್ಯ ಯೋಧ ಟಿಪ್ಪು ಸುಲ್ತಾನ್. ಅವರ ತಂದೆ ಹೈದರಾಲಿ ಮೈಸೂರು ರಾಜ್ಯದ ಸಂರಕ್ಷಣೆಗೆ ಯುದ್ಧ ಮಾಡಿದವರು.…