Author: admin

ತುಮಕೂರು: ವಿದ್ಯಾರ್ಥಿನಿಯ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದಲ್ಲಿ ಶಿಕ್ಷನೋರ್ವನನ್ನು ಅಮಾನತು ಮಾಡಿದ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿಯಲ್ಲಿ ನಡೆದಿದೆ. ಸುರೇಶ್ ಎಂಬಾತ ಅಮಾನತ್ತಾದ ಶಿಕ್ಷಕನಾಗಿದ್ದು, ದೊಡ್ಡಹಟ್ಟಿ ಸರ್ಕಾರಿ ಶಾಲೆ ಶಿಕ್ಷಕನಾಗಿದ್ದಾನೆ. ಈತ ವಿದ್ಯಾರ್ಥಿಗಳ ಪೋಷಕರ ನಂಬರ್ ಪಡೆದು, ಅಶ್ಲೀಲ ಸಂದೇಶಗಳನ್ನು ಈ ಶಿಕ್ಷಕ ರವಾನಿಸುತ್ತಿದ್ದ ಎನ್ನಲಾಗಿದೆ. ಶಾಲೆಯ ಬಳಿಕ ತಾಯಂದಿರ ವಾಟ್ಸಾಪ್ ಗೆ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ ಈ ಶಿಕ್ಷಕನ ವಿರುದ್ಧ ಗ್ರಾಮದ ಮಹಿಳೆಯರು ಡಿಡಿಪಿಐಗೆ ದೂರು ನೀಡಿದ್ದರು. ಶಿಕ್ಷಕ ಸುರೇಶ್ ಗ್ರಾಮದ ಯುವಕರೊಂದಿಗೆ ಸೇರಿಕೊಂಡು ಪ್ರತಿನಿತ್ಯ ಪಾರ್ಟಿ ಮಾಡಿ ಮಾಡುತ್ತಿರುವ ಆರೋಪ ಕೂಡ ಜೇಲಿ ಬಂದಿದ್ದು, ಈ ಬಗ್ಗೆ ತನಿಖೆಯ ಬಳಿಕ ಮಧುಗಿರಿ ಡಿಡಿಪಿಐ ರೇವಣಸಿದ್ದಪ್ಪ ಶಿಕ್ಷಕನನ್ನು ಅಮಾನತುಗೊಳಿಸಿ ಕ್ರಮಕೈಗೊಂಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಸಾರಿಗೆಹಳ್ಳಿಯಲ್ಲಿ ನಡೆದಿದೆ‌. ಯೋಗಾನಂದ (45) ಎಂಬ ವ್ಯಕ್ತಿ ಬೆಳಿಗ್ಗೆ 7:30ರ ಹೊತ್ತಿಗೆ ಹೆಂಡತಿ ಮತ್ತು ಮಗುವಿನ ಜೊತೆ ಈಜಲು ಹೋಗಿದ್ದು, ಈಜಲಾಗದೆ, ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ತುರುವೇಕೆರೆ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿಗಳು ನೀರಿನಿಂದ ಶವವನ್ನು  ಹೊರ ತೆಗೆದಿದ್ದಾರೆ. ಈ ವೇಳೆ ದಂಡಿನ ಶಿವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ಜಯ ಕರ್ನಾಟಕ ಜನಪರ ವೇದಿಕೆಯ ಐ ಕೇರ್ ಬ್ರಿಗೇಡ್ ಸಂಸ್ಥೆಯ ಯುವ ಸಂಸ್ಥಾಪಕರಾದ ಪಿ.ಗುಣ ರಂಜನ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಭೂಗತ ಪ್ರಪಂಚದ ಕೆಲ ವ್ಯಕ್ತಿಗಳ ತಂಡವೊಂದು ಸಂಚು ರೂಪಿಸಿದೆ. ಆದ್ದರಿಂದ ಗೃಹ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಹತ್ಯೆಯ ಸಂಚು ರೂಪಿಸಿರುವ ತಂಡವನ್ನು ಪತ್ತೆಮಾಡಿ ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷರಾದ ವೆಂಕಟೇಶ್ ಒತ್ತಾಯಿಸಿದರು. ಪಟ್ಟಣದಲ್ಲಿ ನಡೆಸಲಾದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಐಟಿಯು ಮುಖಂಡ ಸತೀಶ್, ಪ್ರಗತಿಪರರನ್ನು ನಾಡು ನುಡಿ ಜಲದ ಬಗ್ಗೆ ಹೋರಾಟ ಮಾಡುತ್ತಿರುವ ಹೋರಾಟಗಾರರನ್ನೇ ಗುರಿಮಾಡಿಕೊಂಡು ಹತ್ಯೆಗೆ ಮುಂದಾಗಿರುವುದು ಖಂಡನೀಯ ಎಂದರು. ಗ್ರೇಡ್ 2 ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಇದೇ ವೇಳೆ ಮನವಿ ಸಲ್ಲಿಸಲಾಯಿತು.  ಈ ಪ್ರತಿಭಟನೆಯಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ , ಬೀದಿ ಬದಿ ವ್ಯಾಪಾರಿ ಸಂಘದ ಅಧ್ಯಕ್ಷರಾದ ಮಾರುತಿ ,ಕಟ್ಟಡ ಕಾರ್ಮಿಕರ  ಸಂಘಟನೆಯ ಕಾರ್ಯದರ್ಶಿ ಮಂಜುನಾಥ್ , …

Read More

ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ರಾಷ್ಟ್ರ ಮಟ್ಟದ ಪುರುಷರ,  ಮಹಿಳೆಯರ ಕಿರಿಯ ವಿಭಾಗದ 19 ವರ್ಷದೊಳಗಿನ ಡಾಡ್ಜ್ ಬಾಲ್ ಪಂದ್ಯಾವಳಿಯಲ್ಲಿ SBG VIDYALAYA ಮತ್ತು  PU COLLEGE ನ ವಿದ್ಯಾರ್ಥಿಗಳಾದ ಅಭಿಷೇಕ್ ,ಕೇಶವ ಮತ್ತು ಮಹಿಳೆಯರ ವಿಭಾಗದಲ್ಲಿ ಮಾನಸ( ಕರ್ನಾಟಕ ತಂಡದ ನಾಯಕಿ)  ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವುದರ ಮೂಲಕ ಪ್ರಥಮ ಸ್ಥಾನ ವನ್ನು ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮೊದಲ ರಾಜ್ಯ ಮಟ್ಟದ ಕಿರಿಯರ  DODGEBALL  ಪಂದ್ಯಾವಳಿಯಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಮಾಯಸಂದ್ರ ಶಾಖೆಯ ತುಮಕೂರು ಜಿಲ್ಲೆಯ SBG ವಿದ್ಯಾಲಯದ ಬಾಲಕಿಯಯರ ತಂಡ ಪ್ರಥಮ ಮತ್ತು  ಬಾಲಕರ ತಂಡ ದ್ವಿತೀಯ ಸ್ಥಾನ ವನ್ನು ಪಡೆದು ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮತ್ತು ದೈಹಿಕ ಶಿಕ್ಷಕರುಗಳಾದ C.P.ಉದಯ್ ಕುಮರ್, ಗಿರಿಧರ್ & ಶಂಕರ್’ರವರಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಅಭಿನಂದಿಸಿದರು. ವರದಿ : ವೆಂಕಟೇಶ…

Read More

ಮಾಯಸಂದ್ರ: ಕಳೆದ 4 ತಿಂಗಳಿನಿಂದ ಖಾಲಿ ಇದ್ದ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಮಾಯಸಂದ್ರದ ಅಧ್ಯಕ್ಷ ಸ್ಥಾನಕ್ಕೆ ಪಿ.ಎನ್.ಜವರೇಗೌಡರವರಿಗೆ ಸಂಸ್ಥಾಪಕ ಅಧ್ಯಕ್ಷರಾದ ಎನ್.ಆರ್.ಜಯರಾಮ್’ರವರು ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ಖಾಲಿ ಇದ್ದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ಅಧ್ಯಕ್ಷರನ್ನು ನೇಮಕ ಮಾಡಲಾಯಿತು. ಇದೇ ಸಂದರ್ಭದಲ್ಲಿ 2021-2022ರ ಸಾಲಿನ SSLC ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ  ಮಾಯಸಂದ್ರ ಹೋಬಳಿಯ ಬಿಂದು,ಮಹಾಲಕ್ಷ್ಮಿ ಮತ್ತು ತೇಜಸ್ವಿನಿ ಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಮಧ್ಯೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಾರ್ಯಕ್ರಮದ ನಂತರ ಸರ್ವರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಬೆಂಗಳೂರು: 5,300 ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ನೇಮಕಾತಿ ಆರಂಭಿಸುವಂತೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು 3 ವರ್ಷ ಗಳಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು. ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರಿಗೆ ಆರೋಗ್ಯ ವಿಮೆ ಸೌಲಭ್ಯವನ್ನು ವಿಸ್ತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಯಳಂದೂರು: ಮಗಳು ಯುವಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಪೋಷಕರು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಳ್ಳೇಗಾಲದ ಯಳಂದೂರು ತಾಲೂಕಿನಲ್ಲಿ ನಡೆದಿದೆ. ಕಳೆದ 5 ದಿನಗಳ ಹಿಂದೆ ಕಾಲೇಜಿಗೆ ತೆರಳಿದ್ದ ಮಗಳು ಯುವಕನೊಂದಿಗೆ ಪರಾರಿಯಾಗಿದ್ದಳು ಎನ್ನಲಾಗಿದೆ. ಘಟನೆಯಿಂದ ಆಘಾತಕ್ಕೊಳಗಾದ ದಂಪತಿ ಮನೆ ಬಿಟ್ಟು ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದಂಪತಿ ಮತ್ತು ಅವರ ಮಗಳು ಕಾಣೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಸಂಬಂಧಿಕರು ಕೊಳ್ಳೇಗಾಲ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಇದೀಗ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮೊನ್ನೆಯಷ್ಟೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿನ ಸಂತೇಪೇಟೆಯಲ್ಲಿರುವ ವಿನಾಯಕ ರೋಟರಿ ಆಯಿಲ್ ಮಿಲ್ ಮೂವತ್ತು ನಲವತ್ತು ವರ್ಷಗಳಿಂದ ನಡೆಸುತ್ತಿದ್ದರೂ, ಯಾವುದೇ ಪರವಾನಿಗೆ ಪಡೆಯದೇ ನಡೆಸಲಾಗುತ್ತಿದ್ದ ಬಗ್ಗೆ ನಮ್ಮ ತುಮಕೂರು ಮಾಧ್ಯಮದಲ್ಲಿ ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ  ಹಿರಿಯೂರಿನ ವಾರ್ಡ್ ನಂ.18 ರಲ್ಲಿ ಮತ್ತೊಂದು ಇಂತಹದ್ದೇ ಆಯಿಲ್ ಮಿಲ್ ಪತ್ತೆಯಾಗಿದೆ. ಆಯಿಲ್ ಮಿಲ್ ಗಳು ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆಸಬೇಕಾಗಿದೆ.  ಆದರೆ ಇಲ್ಲಿನ ಆಯಿಲ್ ಮಾಲೀಕರು ತಮ್ಮ ಲಾಭದಾಯಕ್ಕೋಸ್ಕರ ನಗರದ ಮಧ್ಯದಲ್ಲೇ ಆಯಿಲ್ ಮಿಲ್ ನಡೆಸುತ್ತಿದ್ದರೂ ಸಂಬಂಧ ಪಟ್ಟ ನಗರಸಭೆ ಆಡಳಿತ ಮಂಡಳಿಯ ಅಧಿಕಾರಿಗಳು , ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ, ವಾಯು ಮಾಲಿನ್ಯ ಇಲಾಖೆ, ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಮೌನವಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ. ನಗರ ಪ್ರದೇಶದಲ್ಲೇ ನ್ಯೂ ಕರ್ನಾಟಕ ಆಯಿಲ್ ಮಿಲ್  ನಡೆಸಲಾಗುತ್ತಿದೆ. ಇದರಿಂದಾಗಿ ಏನಾದರೂ ಅನಾಹುತ ನಡೆದರೆ ಯಾರು ಜವಾಬ್ದಾರಿ ಎಂದು ಕೇಳುವಂತಾಗಿದೆ.  ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಕ್ರಮಕೈಗೊಳ್ಳಬೇಕಿದೆ. ಆಯಿಲ್ ಮಿಲ್ ಗಳು ಇಂಡಸ್ಟ್ರಿಯಲ್ ಏರಿಯಾದಲ್ಲೆ…

Read More

ಶ್ರೀಲಂಕಾ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರವಾಗಿ ಮುಂದುವರಿದಿದೆ.  ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ದೇಶವು ಹಲವಾರು ಕ್ರಮಗಳನ್ನು ತೆಗೆದುಕೊಂಡರು ಪರಿಸ್ಥಿತಿ ಮಾತ್ರ ಇನ್ನೂ ಹತೋಟಿಗೆ ಬಂದಿಲ್ಲ. ಪೆಟ್ರೋಲ್ ಗಾಗಿ ಸಾಲುಗಟ್ಟಿ ನಿಂತವರಿಗೆ ಟೋಕನ್ ನೀಡಲಾಗಿದೆ.  ಶಾಲೆಗಳನ್ನು ಮುಚ್ಚಲಾಗಿದೆ.  ಸರ್ಕಾರಿ ನೌಕರರನ್ನು ಮನೆಯಿಂದಲೇ ಕೆಲಸ ಮಾಡಲು ಹೇಳಲಾಗುತ್ತಿದೆ. ಶ್ರೀಲಂಕಾವು ಒಟ್ಟು 22 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ.  ಆಹಾರ, ಔಷಧ, ಇಂಧನ ಖರೀದಿಸಲು ಹಣದ ಮೊರೆ ಹೋಗುವ ಪರಿಸ್ಥಿತಿ ಬಂದಿದೆ.ಜನರು ಇಂಧನಕ್ಕಾಗಿ ಹಲವರು ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಾಲ್ಕು ದಿನಗಳಿಂದ ಪಂಪ್ ಮುಂದೆ ಸರದಿಯಲ್ಲಿ ನಿಂತಿದ್ದೇನೆ.  ಚೆನ್ನಾಗಿ ನಿದ್ದೆ ಮಾಡಲಿಲ್ಲ ಮತ್ತು ಸರಿಯಾಗಿ ಊಟನೂ  ಮಾಡಿಲ್ಲ.  ಇದು 67 ವರ್ಷದ ಆಟೋರಿಕ್ಷಾ ಚಾಲಕನ ಮಾತು.  ನಮ್ಮ ಬಳಿ ಹಣವಿಲ್ಲ ಮತ್ತು ಕುಟುಂಬವನ್ನು ಪೋಷಿಸಲು ಸಾಧ್ಯವಿಲ್ಲ.  5 ಕಿ.ಮೀ ದೂರದ ಮನೆಗೆ ಹೋಗಲು ಇಂಧನವೂ ಇಲ್ಲ.ಈ ಸರದಿ ಸಾಲಿನಲ್ಲಿ 24 ನೇ ಸ್ಥಾನದಲ್ಲಿ ನಿಂತಿದ್ದ ಶೆಲ್ಟನ್ ಅವರ ಮಾತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.…

Read More

ತುರುವೇಕೆರೆ ಪಟ್ಟಣದಲ್ಲಿರುವ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೆಲ್ ಕಾಂತರಾಜು ರವರ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ರವರ 513 ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು  ನೂರಾರು ಬೆಂಬಲಿಗರೊಂದಿಗೆ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನಿಟ್ಟು ಪೂಜೆ ಸಲ್ಲಿಸಿ ಕೆಂಪೇಗೌಡರಿಗೆ ಅಧಿಕಾರವನ್ನು ಹಾಕಿ ಪುಷ್ಪಾರ್ಚನೆ ಮಾಡಲಾಯಿತು. ನಂತರ ಮಾತನಾಡಿದ ಕಾಂತರಾಜು,  ನಾಡು ಕಂಡ ಅತಿ ಶ್ರೇಷ್ಠ ಹಾಗೂ ದೃಢ ದೂರದೃಷ್ಟಿಯ ಆಡಳಿತಗಾರ, ಯೋಜನಾಬದ್ಧ ಬೆಂಗಳೂರು ನಗರವನ್ನು ನಿರ್ಮಿಸಿ, ಇದರ ಗತವೈಭವ ಸಾರಿದ ಸರ್ವಜನಾಂಗದ ಅಭ್ಯುದಯಕ್ಕಾಗಿ ಶ್ರಮಿಸಿದ ಮಹಾನ್ ಚೇತನ ಎಂದು ಕೊಂಡಾಡಿದರು.  ಈ ಕಾರ್ಯಕ್ರಮದಲ್ಲಿ ತಾಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರಸನ್ನ ಕುಮಾರ್, ಎಂ.ಡಿ ಮೂರ್ತಿ,  ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ  ಕೆ.ಎಚ್.ಹನುಮಂತಯ್ಯ, ತಾವರೆಕೆರೆ ದಾನಿ ಗೌಡ್ರು, ಬುಗುಡನಹಳ್ಳಿ ಕೃಷ್ಣಮೂರ್ತಿ, ಕಾಂಗ್ರೆಸ್ ತಾಲೂಕು ಮಹಿಳಾ ಘಟಕದ ಬಾಣಸಂದ್ರ ಲಕ್ಷ್ಮೀದೇವಮ್ಮ,ಟಿ.ಹೆಚ್. ಗುರುದತ್, ಗೋಣಿ ತುಮಕೂರು ಲಕ್ಷ್ಮಿಕಾಂತ್, ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಅಧ್ಯಕ್ಷ  ಹೆಚ್. ಎಸ್ .ಸುರೇಶ್,  ತಾಲೂಕು ಕಾರ್ಯಧ್ಯಕ್ಷ ಗವಿರಂಗಪ್ಪ, ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.…

Read More