Author: admin

ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವಕ್ಕೆ ಭಾನುವಾರ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು. ಶಿಷ್ಟ ಹಾಗೂ ಬುಡಕಟ್ಟು ಸಂಸ್ಕೃತಿ ಮೇಳೈಸಿರುವ ನಾಡಿನ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶದಿಂದಲೂ ಸಾವಿರಾರು ಭಕ್ತರು ಆಗಮಿಸಿದರು. ಚಿತ್ರದುರ್ಗ ಜಿಲ್ಲಾಡಳಿತ ಜಾತ್ರೆಗಾಗಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿತು. ಕಳೆದ ಮಾರ್ಚ್ 16ರಂದು ರಥಕ್ಕೆ ಕಳಸ ಸ್ಥಾಪನೆ ಮತ್ತು ರಾತ್ರಿ ಗಜವಾಹನೋತ್ಸವ ನಡೆಯಿತು.  ಗುರುವಾರ ಸಿಂಹ ವಾಹನೋತ್ಸವ, ಶುಕ್ರವಾರ ಅಶ್ವವಾಹನೋತ್ಸವ ನಡೆಯಿತು.  ಮಾರ್ಚ್ 19ರಂದು ರಥಕ್ಕೆ ತೈಲಾಭಿಷೇಕ  ನಡೆಯಿತು. ಮಾರ್ಚ್ 20ರಂದು ಪ್ರಾತಃ ಕಾಲದಲ್ಲಿ ವೃಷಭ ವಾಹನದೊಂದಿಗೆ ಚಿಕ್ಕ ರಥೋತ್ಸವ ಭಾನುವಾರದಂದು ನಡೆಯಿತು. ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ ರವರ ಆದೇಶದ ಪ್ರಕಾರ “ರಥೋತ್ಸವಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ದೇವಾಲಯದ ಇಒ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು ಕೈಗೊಂಡರು. ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ…

Read More

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಕೋಟೆ ನಾಯಕನಹಳ್ಳಿಯಲ್ಲಿ ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ರಾಜರತ್ನ ಪುನೀತ್ ರಾಜ್ ಕುಮಾರ್ ಮತ್ತು ಸಂಘಟನೆಯ ಸಂಸ್ಥಾಪಕ ಯುವ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ರವರ ಹುಟ್ಟುಹಬ್ಬದ ಅಂಗವಾಗಿ ವಿಭಾಗೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಕುಮಾರ್  ಆಸ್ಪತ್ರೆಯ ವೈದ್ಯ ಡಾ.ಜಿ.ಎಸ್.ಶ್ರೀಧರ್, ಸಮಾಜ ಸೇವಕ ಬಿ.ಆರ್.ಶಶಿಧರ್ ಮತ್ತು ನಿವೃತ್ತ ಶಿಕ್ಷಕ ಎಂ.ಆರ್.ಸೋಮಶೇಖರ್  ಬ್ಯಾಟ್ ಬೀಸುವುದರ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ. ಕುಮಾರ್, ಕಾಂಗ್ರೆಸ್ ಯುವ ಮುಖಂಡ ನಿಖಿಲ್ ರಾಜು,ಸಂಘಟನೆ ಯುವ ಘಟಕದ ಜಿಲ್ಲಾಧ್ಯಕ್ಷ ಶ್ರೀಧರ್ ,ಉಪಾಧ್ಯಕ್ಷ ಬಿ.ಬಿ. ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ತಾಲ್ಲೂಕು  ಕಾರ್ಯದರ್ಶಿ ರವಿ ಹಿಂಡಿಸ್ಕೆರೆ, ನಗರ ಕಾರ್ಯದರ್ಶಿ ಲೋಕೇಶ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಉಮಾಶಂಕರ್, ಕಾರ್ಯದರ್ಶಿ ಭರತ್, ಗ್ರಾಮ ಪಂಚಾಯತ್ ಸದಸ್ಯರಾದ ಜಗನ್ನಾಥ,ಕಲ್ಯಾಣಮ್ಮ, ಬನಶಂಕ್ರಮ್ಮ,ಓಂಕಾರ ಸ್ವಾಮಿ  ಮತ್ತು ನರಸಿಂಹಯ್ಯ   ಮುಖಂಡರಾದ ಗಂಗಾಧರ್,ಡಾ.ಬಸವಪ್ರಸಾದ್, ಪ್ರಶಾಂತ್ ಸಂಘಟನೆ ಜಿಲ್ಲಾ ಪದಾಧಿಕಾರಿಗಳಾದ ಇಮ್ರಾನ್, ಯೂನಸ್ ಮತ್ತು ಯುವ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ರವರ ನೇತೃತ್ವದಲ್ಲಿ  ಧರ್ಮಪುರ ಹೋಬಳಿಯ ಪಿ.ಡಿ.ಕೋಟೆ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಪಂಚಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ  ಪುಟ್ಟಸ್ವಾಮಿಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ  ಸಂದರ್ಭದಲ್ಲಿ  ಮಾತನಾಡಿದ ಪುಟ್ಟಸ್ವಾಮಿಗೌಡ, ಡಿ ಸುಧಾಕರ್ ರವರ ನೇತೃತ್ವದಲ್ಲಿ ನನ್ನನ್ನು ಆಯ್ಕೆ ಮಾಡಲಾಗಿದೆ. 2023ರಲ್ಲಿ ಸುಧಾಕರ್ ಅವರು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಸ್ಪಷ್ಟವಾಗುತ್ತಿದೆ. ಪಕ್ಷ ಹಾಗೂ ಜನರೊಂದಿಗೆ ಕೆಲಸ ಮಾಡುವುದಾಗಿ ಅವರು ಇದೇ ವೇಳೆ ತಿಳಿಸಿದರು. ಈ ಸಂದರ್ಭದಲ್ಲಿ ಪಿ.ಡಿ.ಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ, ಅಭಿಮತ ಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಗಾಂಧಿನಗರ ಮಹಂತೇಶ್, ಸಿದ್ಧಾರ್ಥ್  ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್.,  ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತುಮಕೂರು: ಜಿಲ್ಲೆಯಲ್ಲಿ ಎರಡು ತಲೆಮಾರುಗಳಿಂದ ಭೂಮಿ ವಸತಿಗಳ ಸಮಸ್ಯೆಗಳನ್ನು ತಾಲ್ಲೂಕು ಮತ್ತು ತುಮಕೂರು ಜಿಲ್ಲಾಡಳಿತ ಬಗೆಹರಿಸಿರುವುದಿಲ್ಲ  ಈ ಹಿನ್ನೆಲೆಯಲ್ಲಿ  ಹಂದ್ರಾಳ್ ನಾಗಭೂಷನ್ ಅವರ ನೇತೃತ್ವದಲ್ಲಿ ಇಂದಿನಿಂದ ಇಂದಿನಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಾವಿರಾರು ಜನರು ಭೂಮಿ ಮತ್ತು ವಸತಿಗಾಗಿ ಅರ್ಜಿಗಳನ್ನು ಹಾಕಿಕೊಂಡು ಇಂದು, ನಾಳೆ ಭೂಮಿ ವಸತಿಗೆ  ಸಾಗುವಳಿ ಹಕ್ಕುಪತ್ರ ಸಿಗಬಹುದು ಎಂಬ ಆಶಾಭಾವನೆಯಿಂದ ಕಾಯುತ್ತಿದ್ದಾರೆ. ಭೂಮಿಗಾಗಿ ಅನೇಕ ಬಾರಿ ಕಛೇರಿಯಿಂದ ಕಛೇರಿಗಳಿಗೆ ಅಲೆದರೂ ಕೂಡ ಇದುವರೆಗೂ ಅರ್ಹರಿಗೆ ಭೂಮಿ ವಸತಿ ದೊರೆತಿಲ್ಲ. ರಾಜ್ಯ ಸೇರಿದಂತೆ ತುಮಕೂರು ಜಿಲ್ಲೆಯ ಈ ಭೂಮಿ ವಸತಿ ಸಮಸ್ಯೆಗಳನ್ನು ಬಗೆಹರಿಸಲು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ  ಹೆಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ವಸತಿ ಹೋರಾಟ ಸಮಿತಿಯಿಂದ 2018 ನೇ ಸಾಲಿನಿಂದ ಅನೇಕ ಬಾರಿ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ತಾಲ್ಲೂಕು ಕಛೇರಿಗಳ ಮುಂದೆ ಪ್ರತಿಭಟನೆಗಳು ನಡೆಸಿದ್ದರೂ ಕೂಡ ಇದುವರೆಗೂ ಸಮಸ್ಯೆಗಳು ಬಗೆಹರಿದಿಲ್ಲ. ಹೀಗಾಗಿ ಭೂಮಿ ಮತ್ತು ವಸತಿ ಸಮಿತಿಯು ಈಗಾಗಲೇ ಜಿಲ್ಲಾಡಳಿತದ ಗಮನಕ್ಕೆ ತಂದಿರುವ…

Read More

ತುಮಕೂರು: ಪಾವಗಡ ತಾಲೂಕು ಪಳವಳ್ಳಿ  ಕಟ್ಟೆ ಕೆರೆಯ ಬಳಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ  ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡಲು ಗೃಹ  ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ಜಿಲ್ಲಾ  ಶಸ್ತ್ರ ಚಿಕಿತ್ಸಕ ಡಾ.ಟಿ.ಎ. ವೀರಭದ್ರಯ್ಯ ಅವರಿಗೆ ಸೂಚನೆ ನೀಡಿದರು. ಅಪಘಾತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿರುವ 19 ಮಂದಿಯ ಆರೋಗ್ಯ ವಿಚಾರಿಸಿ ಸಮಾಧಾನ ಹೇಳಿದ ನಂತರ ಅಧಿಕಾರಿಗಳ  ಸಭೆ ನಡೆಸಿ ಮಾತನಾಡಿದ ಅವರು ಚಾಲಕನ ಅಜಾಗರೂಕತೆಯಿಂದ  ನಿಯಂತ್ರಣ ತಪ್ಪಿ ಸಂಭವಿಸಿದ ಬಸ್ ಅಪಘಾತದಲ್ಲಿ ಈವರೆಗೆ ಮರಣ ಹೊಂದಿದ 6  ಮಂದಿ ವಾರಸುದಾರರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು  ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ಹೇಳಿದರು. ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಹೆಚ್ಚಿನ  ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಚಿಕಿತ್ಸಾ  ವೆಚ್ಚವನ್ನೂ ಸಹ ಸರ್ಕಾರದಿಂದಲೇ ಭರಿಸಲಾಗುವುದು. ಆಸ್ಪತ್ರೆಗೆ  ದಾಖಲಾದ ಗಾಯಾಳುಗಳಿಗೆ ಔಷಧಿಗಾಗಿ ಹೊರಗಡೆ ಚೀಟಿ ಬರೆದುಕೊಡದೆ ಜಿಲ್ಲಾಸ್ಪತ್ರೆಯಲ್ಲಿಯೇ ಒದಗಿಸಬೇಕು ಹಾಗೂ  ಜಿಲ್ಲಾಸ್ಪತ್ರೆ ವತಿಯಿಂದಲೇ…

Read More

ಪಾವಗಡ:  ತಾಲ್ಲೂಕು ಪಳ್ಳವಳ್ಳಿ ಕಟ್ಟೆ ಮೇಲೆ ನಡೆದ ಅಪಘಾತದ ಹಿನ್ನೆಲೆಯಲ್ಲಿ  ರಾಜ್ಯ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ವಿ.ಎಸ್.ಉಗ್ರಪ್ಪ, ಕೆಪಿಸಿಸಿ ಓಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಮೈಲಾರ ರೆಡ್ಡಿ ಮತ್ತಿತರ ಮುಖಂಡರು ಜೊತೆಗಿದ್ದರು. ವರದಿ: ದೇವರಹಟ್ಟಿ ನಾಗರಾಜ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB  

Read More

ತುಮಕೂರು: ಪಾವಗಡ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರಿ ಬಸ್ಸುಗಳನ್ನು ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.  ಪಾವಗಡ ಸಮೀಪ ಬಸ್ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಬೇಕು,  ಗಾಯಗೊಂಡಿರುವ ರೋಗಿಗಳಿಗೆ ಪರಿಹಾರ ಕೊಡಬೇಕು ಹಾಗೂ ಈ ಭಾಗದಲ್ಲಿ ಹೆಚ್ಚಿನ ಸರ್ಕಾರಿ ಬಸ್ಸುಗಳನ್ನು ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ತುಮಕೂರು ಜೆಡಿಎಸ್  ಜಿಲ್ಲಾಧ್ಯಕ್ಷ ಆರ್ಸಿ ಅಂಜನಪ್ಪ, ಬೆಳ್ಳಿ ಲೋಕೇಶ್, ಪಾವಗಡದ ತಿಮ್ಮರಾಯಪ್ಪ, ಗುಬ್ಬಿ ನಾಗರಾಜು ಸೇರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರ ಕ್ಕೆ ಬಿ.ಎಸ್.ನಾಗರಾಜ್ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ ಅದರಂತೆ ಸ್ಥಳೀಯ ಮುಖಂಡರ ಜೊತೆ ಗೂಡಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಳ್ಳಿಪಾಳ್ಯ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ಭಾಗವಹಿಸಿ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಈ ಬಾರಿ 2023  ಯಾವುದೇ ಪಕ್ಷದ ಅಂಗಿಲ್ಲದೆ ಸ್ವಾತಂತ್ರ್ಯವಾಗಿ ಪಕ್ಷ ಅಧಿಕಾರಕ್ಕೆ ತರಲು ರಾಜ್ಯದ ಎಲ್ಲಾ ಭಾಗದಲ್ಲಿ ಸಂಘಟನೆ ಮಾಡಲು ಬದ್ದರಾಗಿದ್ದೇವೆ ಎಂದರು. ನೀರಾವರಿ ಯೋಜನೆ ಅನುಷ್ಠಾನ ದ  ಸಲುವಾಗಿ 180 ಕ್ಷೇತ್ರ ಗಳಲ್ಲಿ ಪಂಚರತ್ನ ಮತ್ತು ಜನತಾ ಜನಧಾರೆ  ಯೋಜನೆಗಳನ್ನು ಜನತೆಗೆ ಪರಿಚಯಿಸುವ ಮೂಲಕ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ತರಲಾಗುವುದು ಎಂದರು. ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಫಘಾತ ನೊಂದ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಕುಟುಂಬಕ್ಕೆ ಧೈರ್ಯ ತುಂಬಲು ತೆರಳಿದ್ದೇನೆ ಎಂದರು. ಇದೇ ವೇಳೆಯಲ್ಲಿ ಜೆಡಿಎಸ್ ಪಕ್ಷದ…

Read More

ಗುಬ್ಬಿ: ಗುಬ್ಬಿಯ ಪದವಿಪೂರ್ವ ಕಾಲೇಜು ಅವ್ಯವಸ್ಥೆಯ ಅಗರವಾಗಿದ್ದು, ಎಲ್ಲಿ ನೋಡಿದರಲ್ಲಿ ಕಸಕಡ್ಡಿಗಳು ತುಂಬಿದೆ. ನೀರಿನ ಟ್ಯಾಂಕ್ ಬಳಿಯೇ ನಳ್ಳಿ ಇದ್ದು, ಇಲ್ಲಿಯೇ ವಿದ್ಯಾರ್ಥಿಗಳು ತಟ್ಟೆ ಕೂಡ ತೊಳೆಯುತ್ತಿದ್ದಾರೆ. ಈ ಪ್ರದೇಶ ಕೆಸರಿನಿಂದ ಕೂಡಿದ್ದು, ಕೊಳಚೆಯಾಗಿ ಮಾರ್ಪಟ್ಟಿದೆ. ಶಾಲೆಯ ನೈರ್ಮಲ್ಯದ ಬಗ್ಗೆ ಗಮನ ಹರಿಸಬೇಕಾದ ಶಾಲೆಯ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ. ಅಷ್ಟೇ ಏಕೆ, ಇದೇ ಪದವಿಪೂರ್ವ ಕಾಲೇಜಿಗೆ ಅಧ್ಯಕ್ಷರಾಗಿರುವ ಸ್ಥಳೀಯ ಶಾಸಕ ಎಸ್.ಆರ್.ಶ್ರೀನಿವಾಸ್ ಇದೇ ಪ್ರದೇಶದಲ್ಲಿ ಕಾರಿನಲ್ಲಿ ಓಡಾಡುತ್ತಿದ್ದರೂ, ಇದೊಂದು ಗಂಭೀರವಾದ ಸಮಸ್ಯೆ ಎನ್ನುವುದು ಅವರಿಗೆ ತಿಳಿಯದಿರುವುದು ದುರಂತವೇ ಸರಿ. ಈ ಶಾಲೆಯು ಶಾಲಾ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 204 ರಲ್ಲಿ ರಾಜ್ಯ ನಾಯಕರುಗಳು ಈ ದಾರಿಯಲ್ಲಿ ಓಡಾಡುತ್ತಿದ್ದಾರೆ. ಆದರೆ ಬಿದ್ದು ಹೋಗಿರುವ ಶಾಲೆಯ ಕಾಂಪೌಂಡ್ ಸರಿಪಡಿಸಲು ಇಲ್ಲಿಯವರೆಗೂ ಶಾಲಾ ಆಡಳಿತ ಮಂಡಳಿ ಯಾವುದೇ ಕ್ರಮ ಕಗೊಳ್ಳದೇ ಇರುವುದು ಒಂದೆಡೆಯಾದರೆ, ರಾತ್ರಿ ವೇಳೆಯಲ್ಲಿ ಈ ಶಾಲೆ…

Read More

ತುಮಕೂರು: ವಾಹನ ತಪಾಸಣೆ ವೇಳೆ ಎ.ಎಸ್.ಐಗೆ ಬೈಕ್ ಸವಾರನೊಬ್ಬ ಗುದ್ದಿದ ಘಟನೆ ನಡೆದಿದ್ದು, ಪರಿಣಾಮವಾಗಿ ಎ.ಎಸ್. ಐ ನಂಜೇಗೌಡ ಹಾಗೂ ಬೈಕ್ ಸವಾರನಿಗೆ ಗಾಯವಾಗಿದೆ. ಬೆಳ್ಳಾವಿ ಬಳಿಯ ಚನ್ನೆನಹಳ್ಳಿ ಗೇಟ್ ಬಳಿ ಎ.ಎಸ್. ಐ ನಂಜೇಗೌಡ ಹಾಗೂ ಸಿಬ್ಬಂದಿ  ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಸವಾರನೊಬ್ಬ ಪೊಲೀಸರನ್ನು ಕಂಡು ಗಾಬರಿಗೊಂಡಿದ್ದು, ಪರಿಣಾಮವಾಗಿ ಬೈಕ್ ನಿಯಂತ್ರಣ ಕಳೆದುಕೊಂಡು ನಂಜೇಗೌಡ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮವಾಗಿ ಎ.ಎಸ್.ಐ ನಂಜೇಗೌಡ ಹಾಗೂ ಬೈಕ್ ಸವಾರ  ಇಬ್ಬರು ಕೂಡ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎ.ಎಸ್. ಐ ನಂಜೇಗೌಡ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಬೈಕ್ ಸವಾರ ಕೂಡ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿ: ಉದಯ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More