Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ಕೊರಟಗೆರೆ: ಕಲ್ಪತರು ನಾಡಿಗೆ ಅಕ್ಷರ ಜ್ಞಾನ ನೀಡಿದ ಶ್ರೀಮಠ ನಮ್ಮ ಹೆಮ್ಮೆಯ ಸಿದ್ದಗಂಗಾ ಕ್ಷೇತ್ರ.. ಟೀ ಅಂಗಡಿಯಲ್ಲಿ ಚಹಾ ಮಾಡುತ್ತಿದ್ದ ಸಾಮಾನ್ಯ ಮನುಷ್ಯ ಇಂದು ದೇಶದ ಪ್ರಧಾನಿ.. ನಮ್ಮ ಮಕ್ಕಳು ಸರಕಾರಿ ಕೆಲಸ ಪಡೆಯದಿದ್ರು ಪರವಾಗಿಲ್ಲ—ಭಾರತ ದೇಶವನ್ನು ಪೂಜಿಸುವ ಉತ್ತಮ ಪ್ರಜೆಯಾದ್ರೇ ಸಾಕು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ನರಸಾಪುರದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಮತ್ತು ಸಿ.ಎನ್.ದುರ್ಗ ಹೋಬಳಿಯ ನೇಗಲಾಲದ ಇಂದಿರಾ ಗಾಂಧಿ ವಸತಿಶಾಲೆಯ ನೂತನ ಕಟ್ಟಡದ ಉದ್ಘಾಟನೆ ನೇರವೇರಿಸಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಪವಾಡ ಪುರುಷ. ಗ್ರಾಮೀಣ ಮಕ್ಕಳ ಶಿಕ್ಷಣಕ್ಕಾಗಿ ಕೋಟಿಗಟ್ಟಲೆ ಸುರಿದು ಸರಕಾರ ಹೈಟೆಕ್ ಶಾಲೆ ನಿರ್ಮಾಣ ಮಾಡಿದೆ. ವಿಶ್ವಕ್ಕೆ ಮಾನವ ಸಂಪನ್ಮೂಲ ನೀಡುವ ದೇಶ ನಮ್ಮದು. ಶೈಕ್ಷಣಿಕ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡಿದೆ. ನಮ್ಮೂರಲ್ಲೆ ವ್ಯವಸಾಯಕ್ಕೆ ಜನರೇ ಸಿಗುತ್ತಿಲ್ಲ. ತಂತ್ರಜ್ಞಾನ ಹೆಚ್ಚಾಗಿದೆ ಆದರೇ ಶ್ರಮ ಇಲ್ಲದಿದ್ದರೇ ಆಗೋದಿಲ್ಲ ಎಂದು ಹೇಳಿದರು. ಕೊರಟಗೆರೆ ಶಾಸಕ…
ತುರುವೇಕೆರೆ: ಪಟ್ಟಣದಲ್ಲಿ ತಾಲೂಕು ಕಚೇರಿ ಮುಂಭಾಗ ಕೊಬ್ಬರಿಗೆ ಇಪ್ಪತ್ತು ಸಾವಿರ ನಿಗದಿ ಬೆಲೆಗೆ ಒತ್ತಾಯಿಸಿ ತೆಂಗು ಮತ್ತು ಬೆಳೆಗಾರರ ಸಂಘದ ಅಧ್ಯಕ್ಷರಾದ ಎನ್.ಆರ್.ಜಯರಾಮ್ ಗ್ರೇಡ್ 2 ತಹಶೀಲ್ದಾರ್ ಗೆ ಮನವಿ ಪತ್ರ ನೀಡಿದರು. ಈ ವೇಳೆ ಮಾತನಾಡಿದ ಜಯರಾಮ್, ಕೊಬ್ಬರಿ ಬೆಲೆ ಜನವರಿ ತಿಂಗಳಲ್ಲಿ ಕ್ವಿಂಟಾಲ್ ಗೆ 18ರಿಂದ 19 ಸಾವಿರದ ಆಸು ಪಾಸಿನಲ್ಲಿತ್ತು. ನಂತರದ ತಿಂಗಳುಗಳಲ್ಲಿ ಹಂತ ಹಂತವಾಗಿ ಇಳಿದು 11 ಸಾವಿರಕ್ಕೆ ಬಂದು ನಿಂತಿದೆ. ತೆಂಗಿನ ಮರಗಳಲ್ಲಿ ಹೊಂಬಾಳೆ ಹೊಡೆದು ಎಳೆನೀರು, ತೆಂಗಿನಕಾಯಿ ಕಿತ್ತು ಕೊಬ್ಬರಿ ಮಾಡುವ ಒಟ್ಟಿಗೆ ಎರಡು ವರ್ಷ ಕಾಲಾವಕಾಶ ಬೇಕಾಗುತ್ತದೆ.ಈ ಕಾರಣಕ್ಕಾಗಿ ರೈತರಿಗೆ ವರ್ಷಕ್ಕೆ 13 ರಿಂದ 14,000 ಖರ್ಚನ್ನು ಮಾಡುತ್ತಾರೆ ಇದರಿಂದ ಲಾಭಕ್ಕಿಂತ ಅಸಲು ಹೆಚ್ಚಾಗುತ್ತದೆ ಎಂದರು. ಸರ್ಕಾರ ಕೂಡಲೇ ರೈತ ಬೆಳೆದ ಕೊಬ್ಬರಿಯ ಖರೀದಿಯನ್ನು ನಪೆಡ್ ಮೂಲಕ ಖರೀದಿಸಿ, ಪ್ರತಿ ಕ್ವಿಂಟಾಲ್ ಗೆ 20,000 ನಿಗದಿತ ಬೆಲೆಯನ್ನು ನೀಡಬೇಕು. ಇಲ್ಲದಿದ್ದಲ್ಲಿ ತಾಲೂಕಿನ ಎಲ್ಲಾ ರೈತ ಸಂಘಟನೆಗಳ ಹಾಗೂ ವಿವಿಧ ರಾಜಕೀಯ ಪಕ್ಷಗಳ…
ಮ್ಯಾಂಡಸ್ ಚಂಡಮಾರುತದಿಂದಾಗಿ ಚಳಿ ಹೆಚ್ಚಾಗಿದ್ದು, ಇದರಿಂದ ಮಕ್ಕಳಲ್ಲಿ ಜ್ವರ, ಉಸಿರಾಟ ಸಮಸ್ಯೆ, ವೈರಲ್ ಬ್ರಾಂಕೋ ನ್ಯೂಮೋನಿಯಾ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ದಿಢೀರ್ ಏರಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ನಿರಂತರ ಜ್ವರ, ಕೆಮ್ಮು, ನೆಗಡಿ, ಪ್ರಜ್ಞೆ ಕಳೆದುಕೊಳ್ಳುವುದು ಸೇರಿದಂತೆ ಮಕ್ಕಳು ಆಹಾರವನ್ನು ಸರಿಯಾಗಿ ಸೇವನೆ ಮಾಡದೆ ಇದ್ದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ ಎಂದಿದ್ದಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 40% ಹೆಚ್ಚಿದೆ. ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಅಪಾಯ ಖಂಡಿತ. ಸಾಧ್ಯವಾದಷ್ಟು ಬಿಸಿ ನೀರು ಕುಡಿಯೋದಕ್ಕೆ ಕೊಡಿ, ಮಳೆಯಲಿ ನೆನೆಯಲು ಬಿಡಬೇಡಿ, ಕೋಲ್ಡ್ ಅಥವಾ ತಣ್ಣನೆಯ ಪದಾರ್ಥ ಕೊಡಬೇಡಿ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುರುವೇಕೆರೆ: ತಾಲೂಕಿಗೆ ಇದೇ ತಿಂಗಳು 12ನೇ ತಾರೀಕಿನಂದು ಜಾತ್ಯತೀತ ಜನತಾದಳದ ಪಂಚ ರತ್ನ ರಥಯಾತ್ರೆ ಆಗಮಿಸಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇನ್ನು ಅನೇಕ ಮುಖಂಡರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈಗಾಗಲೇ ತುಮಕೂರು ಜಿಲ್ಲೆಗೆ ಈ ರಥಯಾತ್ರೆ ಆಗಮಿಸಿ, ಗುಬ್ಬಿ, ಶಿರಾ, ಮಧುಗಿರಿ, ಪಾವಗಡದಲ್ಲಿ ಯಾತ್ರೆ ಮುಗಿದಿದ್ದು, 12ರಂದು ತುರುವೇಕೆರೆ ತಾಲೂಕಿನ, ಗ್ರಾಮಗಳಿಗೆ ಆಗಮಿಸಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವುದು, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ, ರೈತರಿಗೆ ಆಧುನಿಕ ತಂತ್ರಜ್ಞಾನದ ಕೃಷಿ ಪದ್ಧತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣ ವ್ಯವಸ್ಥೆ, ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ ಜೊತೆಗೆ ಯುವಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ, ವಸತಿ ಇಲ್ಲದವರಿಗೆ ಸರಕಾರದಿಂದಲೇ ವಸತಿ ಕಟ್ಟಿಸಿ ಕೊಡುವ ಯೋಜನೆ ಹಾಗೂ ಸ್ತ್ರೀಶಕ್ತಿ ಸಂಘದ ಎಲ್ಲಾ ಸಾಲವನ್ನು…
ಕೊರಟಗೆರೆ: ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಪೊಲೀಸರ ದೌರ್ಜನ್ಯವನ್ನ ಖಂಡಿಸಿ ಕೊರಟಗೆರೆ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತ್ತು ಎಂದು ವಕೀಲರ ಸಂಘದ ಅಧ್ಯಕ್ಷ ಬಿ.ಎಲ್.ನಾಗರಾಜು ತಿಳಿಸಿದರು. ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯಾದ ಅವರಣದ ಮುಂಭಾಗದಲ್ಲಿ ತಾಲ್ಲೂಕು ವಕೀಲರ ಸಂಘದ ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಡಿ.3ರಂದು ಮಂಗಳೂರಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಯುವ ವಕೀಲ ಕುಲದೀಪ್ ಶಟ್ಟಿ ಅವರ ಮೇಲೆ ಅಮಾನುಷವಾಗಿ ವರ್ತನೆ ಮಾಡಿ, ವಕೀಲರ ವೃತ್ತಿ ಭಾಂದವರಿಗೆ ಅವಮಾನ ಮಾಡಿದ್ದಾರೆ. ಅವರ ತಾಯಿ ಕಾಡಿಬೇಡಿ ಕೈಮುಗಿದುಕೊಂಡರೂ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ವಕೀಲ ಎಂದರೂ ಸಹ ನೀನು ನ್ಯಾಯಲಯದಲ್ಲಿ ವಾದ ಮಾಡು ಎಂದು ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಈ ಕೂಡಲೇ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಹಿರಿಯ ವಕೀಲ ಟಿ.ಕೃಷ್ಣಮೂರ್ತಿ ಮಾತನಾಡಿ, ಮಂಗಳೂರಿನಲ್ಲಿ ಯುವ ವಕೀಲ ಕುಲದೀಪ್ ಶಟ್ಟಿ ಅವರನ್ನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಏಕಾಏಕಿ ಅವರ ಮನೆಗೆ ನುಗ್ಗಿ…
ಮಂಡ್ಯದಲ್ಲಿ ಅಯ್ಯಪ್ಪ ಭಕ್ತರೊಬ್ಬರು ವಿಶೇಷವಾಗಿ ಶಬರಿಮಲೆ ಯಾತ್ರೆ ಕೈಗೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಅವರು ಪ್ರತಿ ವರ್ಷ ತುಮಕೂರಿನ ಮಧುಗಿರಿಯವರೆಗೆ ಪಾದಯಾತ್ರೆ ಮಾಡುತ್ತ ಬಂದಿದ್ದಾರೆ. ಈ ಬಾರಿ ನಟ ದಿ. ಪುನೀತ್ ರಾಜ್ಕುಮಾರ್ ಚಿತ್ರವುಳ್ಳ ಬಾವುಟ ಹಿಡಿದು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಗಂಗಾಧರ್ ಬೆಳೆ ನಷ್ಟದಿಂದ ಕಂಗಾಲಾಗಿ ಅಯ್ಯಪ್ಪನಿಗೆ ಹರಕೆಯನ್ನ ಹೊತ್ತುಕೊಂಡಿದ್ದರು. ಶಬರಿಮಲೆಗೆ ಪಾದಯಾತ್ರೆ ಮಾಡಿದ ಬಳಿಕ ಎಲ್ಲವೂ ಶುಭವೇ ಆಗಿತ್ತು. ಕಳೆದ ಬಾರಿ ಶಬರಿಮಲೆಗೆ ಹೋಗುವಾಗ ಪುನೀತ್ ರಾಜ್ ಕುಮಾರ್ ಮೃತಪಟ್ಟಿದ್ದರು. ಅಯ್ಯಪ್ಪನ ದರ್ಶನದ ಬಳಿಕ ನೇರವಾಗಿ ಅಪ್ಪು ಸಮಾಧಿಗೆ ಗಂಗಾಧರ್ ಭೇಟಿ ಕೊಟ್ಟಿದ್ದರು. ಈ ಹಿನ್ನಲೆ ಪ್ರತಿ ವರ್ಷ ಹರಕೆ ತೀರಿಸುವ ಸಲುವಾಗಿ ಹಾಗೂ ಅಪ್ಪುವಿನ ಆತ್ಮಕ್ಕೆ ಶಾಂತಿ ಸಿಗಲೆಂದು ಪಾದಯಾತ್ರೆ ಮಾಡುತ್ತಿದ್ದಾರೆ. ಮಧುಗಿರಿಯಿಂದ ಶಬರಿಮಲೆಗೆ ಕಾಲ್ನಡಿಗೆಯ ಮೂಲಕವೇ ಪಾದ ಯಾತ್ರೆ ಮಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
18ರಿಂದ 25 ವರ್ಷದವರಿಗೆ ಉಚಿತವಾಗಿ ಕಾಂಡೋಮ್ ಒದಗಿಸಲು ಫ್ರಾನ್ಸ್ ಸರ್ಕಾರ ನಿರ್ಧರಿಸಿದೆ. ಫಾರ್ಮಸಿಗಳು 18ರಿಂದ 25 ವರ್ಷ ವಯಸ್ಸಿನವರಿಗೆ ಫ್ರೀಯಾಗಿ ಕಾಂಡೋಮ್ ನೀಡುತ್ತವೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಘೋಷಿಸಿದ್ದಾರೆ. ಔಷಧಾಲಯಗಳಲ್ಲಿ ಜನವರಿ 1ರಿಂದ 18ರಿಂದ 25 ವರ್ಷದವರಿಗೆ ಕಾಂಡೋಮ್ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮ್ಯಾಕ್ರನ್ ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದಾರೆ. ಲೈಂಗಿಕವಾಗಿ ಹರಡುವ ರೋಗಗಳ (ಎಸ್ಟಿಡಿ) ಹರಡುವಿಕೆ ಕಡಿಮೆ ಮಾಡುವ ಪ್ರಯತ್ನದಲ್ಲಿ ಫ್ರಾನ್ಸ್ನ ಯುವಜನರು ಕಾಂಡೋಮ್ಗಳನ್ನು ಉಚಿತವಾಗಿ ಪಡೆಯಬಹುದು. ಫ್ರೆಂಚ್ ಆರೋಗ್ಯ ಅಧಿಕಾರಿಗಳ ಪ್ರಕಾರ, ದೇಶದಲ್ಲಿ 2020 ಮತ್ತು 2021ರಲ್ಲಿ ಅನಗತ್ಯ ಗರ್ಭಧಾರಣೆ ದರವು ಶೇಕಡಾ 30ರಷ್ಟು ಏರಿಕೆಯಾಗಿದೆ. ಹೀಗಾಗಿ ಫ್ರೆಂಚ್ ಸರ್ಕಾರವು 25 ವರ್ಷದೊಳಗಿನ ಎಲ್ಲಾ ಮಹಿಳೆಯರಿಗೆ ಉಚಿತ ಜನನ ನಿಯಂತ್ರಣವನ್ನು ನೀಡಲು ಪ್ರಾರಂಭಿಸಿತು. ಆರ್ಥಿಕ ತೊಂದರೆಗಳಿಂದಾಗಿ ಯುವತಿಯರು ಗರ್ಭನಿರೋಧಕವನ್ನು ತ್ಯಜಿಸುವುದನ್ನು ತಡೆಯಲು 18 ವರ್ಷದೊಳಗಿನವರಿಗೆ ಉದ್ದೇಶಿಸಿರುವ ಕಾರ್ಯಕ್ರಮವನ್ನು ವಿಸ್ತರಿಸಿದೆ. ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಮತ್ತು ಕೋವಿಡ್ ಲಸಿಕೆಯ ಬೂಸ್ಟರ್…
ಮಂಡ್ಯದಲ್ಲಿ ಅಯ್ಯಪ್ಪ ಭಕ್ತರೊಬ್ಬರು ವಿಶೇಷವಾಗಿ ಶಬರಿಮಲೆ ಯಾತ್ರೆ ಕೈಗೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಅವರು ಪ್ರತಿ ವರ್ಷ ತುಮಕೂರಿನ ಮಧುಗಿರಿಯವರೆಗೆ ಪಾದಯಾತ್ರೆ ಮಾಡುತ್ತ ಬಂದಿದ್ದಾರೆ. ಈ ಬಾರಿ ನಟ ದಿ. ಪುನೀತ್ ರಾಜ್ಕುಮಾರ್ ಚಿತ್ರವುಳ್ಳ ಬಾವುಟ ಹಿಡಿದು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಗಂಗಾಧರ್ ಬೆಳೆ ನಷ್ಟದಿಂದ ಕಂಗಾಲಾಗಿ ಅಯ್ಯಪ್ಪನಿಗೆ ಹರಕೆಯನ್ನ ಹೊತ್ತುಕೊಂಡಿದ್ದರು. ಶಬರಿಮಲೆಗೆ ಪಾದಯಾತ್ರೆ ಮಾಡಿದ ಬಳಿಕ ಎಲ್ಲವೂ ಶುಭವೇ ಆಗಿತ್ತು. ಕಳೆದ ಬಾರಿ ಶಬರಿಮಲೆಗೆ ಹೋಗುವಾಗ ಪುನೀತ್ ರಾಜ್ ಕುಮಾರ್ ಮೃತಪಟ್ಟಿದ್ದರು. ಅಯ್ಯಪ್ಪನ ದರ್ಶನದ ಬಳಿಕ ನೇರವಾಗಿ ಅಪ್ಪು ಸಮಾಧಿಗೆ ಗಂಗಾಧರ್ ಭೇಟಿ ಕೊಟ್ಟಿದ್ದರು. ಈ ಹಿನ್ನಲೆ ಪ್ರತಿ ವರ್ಷ ಹರಕೆ ತೀರಿಸುವ ಸಲುವಾಗಿ ಹಾಗೂ ಅಪ್ಪುವಿನ ಆತ್ಮಕ್ಕೆ ಶಾಂತಿ ಸಿಗಲೆಂದು ಪಾದಯಾತ್ರೆ ಮಾಡುತ್ತಿದ್ದಾರೆ. ಮಧುಗಿರಿಯಿಂದ ಶಬರಿಮಲೆಗೆ ಕಾಲ್ನಡಿಗೆಯ ಮೂಲಕವೇ ಪಾದ ಯಾತ್ರೆ ಮಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪ್ರೀಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬೆಂಚು ಕಾಯಿಸಿದ್ದರಿಂದ ಪೋರ್ಚುಗಲ್ ತಂಡದ ಕೋಚ್ ವಿರುದ್ಧ ಅಸಮಾಧಾನ ಹೊರಹಾಕಿರುವ ವಿಶ್ವದ ಅಗ್ರಮಾನ್ಯ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಟೂರ್ನಿಯಿಂದ ಹೊರಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಸ್ವಿಜರ್ ಲೆಂಡ್ ವಿರುದ್ಧದ ಪಂದ್ಯದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಕಣಕ್ಕಿಳಿಸದೇ ಬೆಂಚಿನಲ್ಲಿ ಕೂರಿಸಿದ್ದರು. ಇದೀಗ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಅಲ್ಪ ಸಮಯ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಕೋಚ್ ನಡೆಯಿಂದ ಬೇಸರಗೊಂಡಿರುವ ಕ್ರಿಸ್ಟಿಯಾನೊ ರೊನಾಲ್ಡೊ ಆಡಲು ಅವಕಾಶ ನೀಡದೇ ಇದ್ದರೆ ವಿಶ್ವಕಪ್ ನಿಂದ ಹೊರನಡೆಯುವುದಾಗಿ 37 ವರ್ಷದ ಕ್ರಿಸ್ಟಿಯಾನೊ ರೊನಾಲ್ಡೊ ಎಚ್ಚರಿಕೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಪೋರ್ಚುಗಲ್ ಫುಟ್ಬಾಲ್ ಸಂಸ್ಥೆ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಬೆದರಿಕೆ ಹಾಕಿಲ್ಲ. ವಿಶ್ವಕಪ್ ನಲ್ಲಿ ತಂಡದ ಜೊತೆ ಅವರು ಇರಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಗಾಲಿ ಜನಾರ್ದನ ರೆಡ್ಡಿ ಬೇರೆ ಪಕ್ಷ ಕಟ್ಟುವುದಿಲ್ಲ, ಒಂದು ವೇಳೆ ಪಕ್ಷ ಕಟ್ಟಿದರೆ ಸ್ನೇಹ ಬೇರೆ ಪಕ್ಷ ಬೇರೆ. ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಸ್ನೇಹ ಮತ್ತು ಪಕ್ಷ ಎರಡನ್ನೂ ಒಟ್ಟಾಗಿಯೇ ಇರುವಂತೆ ಮಾಡುತ್ತೇನೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಜನಾರ್ದನ ರೆಡ್ಡಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕರಲ್ಲೊಬ್ಬರು. ಅವರು ಈ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಕಟ್ಟುವ ಪ್ರಶ್ನೆಯೇ ಇಲ್ಲ. ಪಕ್ಷದೊಳಗೇ ಇರುತ್ತಾರೆ ಎಂದೂ ಪತ್ರಕರ್ತರ ಪ್ರಶ್ನೆಗೆ ರಾಮುಲು ಉತ್ತರಿಸಿದ್ದಾರೆ. ಸಾರಿಗೆ ಇಲಾಖೆಯ ನಿಗಮಗಳ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ. ಸಿಬ್ಬಂದಿ ಕೊರತೆ ನೀಗಿಸಲು 2 ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆಯನ್ನು ಹೆಚ್ಚಿಸಲು ಆದ್ಯತೆ ನೀಡಲಾಗುತ್ತಿದೆ. 30 ಸಾವಿರ ಬಸ್ಗಳನ್ನು ಬದಲಾಗಿ ಹೊಸ ಬಸ್ ಖರೀದಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಗಂಗಾವತಿ ನಗರದಲ್ಲಿ ಇತ್ತೀಚೆಗಷ್ಟೇ ಮನೆ ಖರೀದಿ ಮಾಡಿರುವ ಜನಾರ್ದನ ರೆಡ್ಡಿ, ನಗರಸಭೆ ಬಿಜೆಪಿ ಸದಸ್ಯ ರಮೇಶ ಚೌಡ್ಕಿ ಹಾಗೂ ಹಲವು ಮುಖಂಡರ…