Author: admin

ಬೆಂಗಳೂರು ಸೆಪ್ಟಂಬರ್ 21: ಹೆಚ್ಚುತ್ತಿರುವ ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ 15 ವರ್ಷಕ್ಕಿಂತಲೂ ಹಳೆಯದಾದ 80 ಲಕ್ಷ ಹಳೆಯ ವಾಹನಗಳನ್ನು ಸಂಚಾರಕ್ಕೆ ಅನರ್ಹಗೊಳಿಸಲು ಮುಂದಾಗಿದೆ. ಈ ಸಂಬಂಧ ‘ವಾಹನ ಗುಜರಿ ನೀತಿ- 2021’ ಅಳವಡಿಸಿಕೊಳ್ಳಲು ಮುಂದಾಗಿದೆ. ಇದು ಜಾರಿಯಾದರೆ ವಾಹನಗಳ ಮಾಲೀಕರು ವಾಹನಗಳನ್ನು ಗುಜರಿಗೆ ನೀಡಿ ಪ್ರಮಾಣ ಪತ್ರ ಪಡೆಯಬೇಕು. ಅದನ್ನು ಹೊಸ ವಾಹನಗಳಿಗೆ ಖರೀದಿ ವೇಳೆ ಸಲ್ಲಿಸಿದರೆ ಮೋಟಾರು ವಾಹನ ತೆರಿಗೆಯಲ್ಲಿ ರಿಯಾಯಿತಿ ಪಡೆಯಬಹುದಾಗಿದೆ. ರಾಜ್ಯದಲ್ಲಿ ನೋಂದಾಯಿತ 2.8 ಕೋಟಿ ವಾಹನಗಳಲ್ಲಿ 15 ವರ್ಷಕ್ಕಿಂತಲೂ ಹೆಚ್ಚು ಹಳೆಯದಾದ 80 ಲಕ್ಷಕ್ಕೂ ಅಧಿಕ ವಾಹನಗಳು ಇವೆ ಎಂದು ಅಂದಾಜಿಸಲಾಗಿದೆ. ಸಾರಿಗೆ ಇಲಾಖೆಯ ಪ್ರಕಾರ, ರಾಜಧಾನಿ ಬೆಂಗಳೂರಿನಲ್ಲೇ ಒಂದು ಕೋಟಿ ವಾಹನಗಳಿವೆ. ಈ ವರ್ಷದ ಮಾರ್ಚ್ ಮಾಸಾಂತ್ಯಕ್ಕೆ 29 ಲಕ್ಷ ವಾಹನಗಳು 15 ವರ್ಷಗಳ ಮಿತಿಯನ್ನು ದಾಟಿರುವುದು ಪತ್ತೆ ಆಗಿದೆ. ಹೆಚ್ಚಿನ ಮಾಲಿನ್ಯಕಾರಕವಾಗಿರುವ ಎರಡು ಸ್ಟ್ರೋಕ್ ಆಟೋರಿಕ್ಷಾಗಳು ಬೆಂಗಳೂರಲ್ಲಿ ಸಂಚಾರ ಸೇವೆ ನೀಡುತ್ತಿವೆ ಎಂದು ಇಲಾಖೆ ತಿಳಿಸಿದೆ. ಕೇಂದ್ರ ಗುಜರಿ…

Read More

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ತಡರಾತ್ರಿ ಡಿವೈಡರ್ ಮೇಲೆ ಮಲಗಿದ್ದ ಜನರ ಮೇಲೆ ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಸೀಮಾಪುರಿಯಲ್ಲಿರುವ ರೆಡ್ ಲೈಟ್ ಡಿಟಿಸಿ ಡಿಪೋವನ್ನು ದಾಟುವಾಗ ಅಪಘಾತ ಸಂಭವಿಸಿದೆ. ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಟ್ರಕ್ ಮಲಗಿದ್ದವರ ಮೇಲೆ ಹರಿದ ಬಳಿಕ ಅದೇ ವೇಗದಲ್ಲಿ ಎಸ್ಕೇಪ್ ಆಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಆರಂಭಿಸಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಬಳಿಕ ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೀಡಾದವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 4 ಮಂದಿಯನ್ನು ಜಿಟಿಬಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಾಲ್ವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಇನ್ನೊಬ್ಬರು ಪ್ರಾಥಮಿಕ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಮೃತ ನಾಲ್ವರನ್ನು ಕರೀಂ (52), ಚೋಟ್ಟೆ ಖಾನ್ಸ್ (25), ಶಾ…

Read More

ಹೈದರಾಬಾದ್: ಚೆನ್ನೈನ ಉದ್ಯಮಿ ಅಬ್ದುಲ್ ಘನಿ ಎಂಬುವವರು ತಿರುಪತಿ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನಕ್ಕೆ 1.02 ಕೋಟಿ ದೇಣಿಗೆ ನೀಡಿದ್ದಾರೆ. ಪತ್ನಿ ಸುಬೀನಾ ಬಾನು ಮತ್ತು ಮಕ್ಕಳೊಂದಿಗೆ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು 87 ಲಕ್ಷ ಹಾಗೂ ಎಸ್.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ 15 ಲಕ್ಷ ಒದಗಿಸಿದರು. ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು 1.02 ಕೋಟಿ ರೂ. ಮೊತ್ತದ ಡಿ.ಡಿ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ವೆಂಕಟೇಶ್ವರ, ಅಲ್ಲಾ, ಏಸು ಎಲ್ಲರೂ ಒಂದೇ ಎಂದು ನಂಬಿದ್ದೇನೆ. ನಾನು ವೆಂಕಟೇಶ್ವರ ಸ್ವಾಮಿಯ ಭಕ್ತ. ಸುಮಾರು 25 ವರ್ಷಗಳಿಂದ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಆರೋಗ್ಯ ವಿಚಾರಿಸಿ, ಕೆಲ ಹೊತ್ತು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಮಾಜಿ ಪ್ರಧಾನಿ ದೇವೇಗೌಡರನ್ನು ಒಂದು ತಿಂಗಳ ಹಿಂದೇಯೇ ನೋಡಲು ಬರಬೇಕಂದಿದ್ದೆ, ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು. ನಾನು ಕಂಡಂತೆ ಇಡೀ ರಾಜ್ಯವನ್ನು ಸುತ್ತಿದಂತಹ ವ್ಯಕ್ತಿ ಇದ್ದರೆ ಅದುವೇ ದೇವೇಗೌಡರು, ಅವರಿಗೆ ದೇವರು ಆರೋಗ್ಯ ಕೊಡಲಿ, ಚೆನ್ನಾಗಿಡಲಿ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ತಾಲ್ಲೂಕಿನ ಅಂದ್ರ ಗಡಿ ರಸ್ತೆಯಲ್ಲಿ ಅಬಕಾರಿ ಉಪ ಆಯುಕ್ತರು ತುಮಕೂರು ಜಿಲ್ಲೆ ತುಮಕೂರು ರವರ ನಿರ್ದೇಶನದಂತೆ ಉಪ ಅಧೀಕ್ಷಕರು ಮಾರ್ಗದರ್ಶನದಲ್ಲಿ ದಾಳಿ ನಡೆಸಿ 8 ಲೀಟರ್ ಶೇಂದಿ ವಶಪಡಿಸಿಕೊಳ್ಳಲಾಗಿದೆ. ಸೆಪ್ಟಂಬರ್ 20ರಂದು ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಶೇಂದಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ, 8 ಲೀಟರ್ ಶೇಂದಿ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ‘ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ವರದಿ : ಅಬಿದ್ ಮಧುಗಿರಿ  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಾರವಾರ: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯಲ್ಲಿ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿ ಅಯಾನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶಾಲೆಯ ಆವರಣದಲ್ಲಿದ್ದ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಹಕಾರ ಸಚಿವ ಎಸ್‌.ಟಿ ಸೋಮಶೇಖರ್ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು ಯಾವ ರೈತರು ಎಪಿಎಂಸಿ ಕಾಯ್ದೆ ವಾಪಸ್‌ ಪಡೆಯುವಂತೆ ಮನವಿ ಮಾಡಿಲ್ಲ. ಹಾಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಚಿವ ಎಸ್‌.ಟಿ ಸೋಮಶೇಖರ್ ಹೇಳಿದ್ದಾರೆ. ಇನ್ನೂ, ಅಕ್ಟೋಬರ್ 2 ರಿಂದ ಜಾರಿ ಯಶಸ್ವಿನಿ ಯೋಜನೆ ಜಾರಿಯಾಗಲಿದೆ ಅಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರ ಪ್ರಶ್ನೆಗೆ ಉತ್ತರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹೆಚ್.ಡಿ.ಕೋಟೆ: ಪ್ರಕೃತಿ ವಿಕೋಪದಡಿ ಮನೆಗಳ ಪರಿಹಾರ ವಿಚಾರದಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು  ಲಂಚ ಪಡೆಯುತ್ತಿದ್ದಾರೆ ಎಂಬ ದೂರು ನೀಡಲು ಹೋದವರ ಮೇಲೆ ಆಕ್ರೋಶಗೊಂಡ ತಹಶಿಲ್ದಾರ್ ರತ್ನಾಂಬಿಕಾ ಹೈಡ್ರಾಮ ಆಡಿದ ವಿಡಿಯೋ ವೈರಲ್ ಆಗಿದೆ. ಪ್ರಕೃತಿ ವಿರೋಪದಡಿ ಮನೆಗಳ ಪರಿಹಾರ ವಿಚಾರ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು  ಲಂಚ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಲು ರೈತ ಸಂಘದ ನಾಗರಾಜು ಮತ್ತು ದಸಂಸ ಶಿವಕುಮಾರ್ ತಹಶೀಲ್ದಾರ್ ಕಚೇರಿಗೆ ತೆರಳಿದ್ದರು. ಈ ವೇಳೆ ದೂರು ನೀಡಲು ಹೋದವರ ವಿರುದ್ಧವೇ ರತ್ನಾಂಬಿಕಾ ಆಕ್ರೋಶ ವ್ಯಕ್ತಪಡಿಸಿ ಹೈಡ್ರಾಮ ಆಡಿದ್ದಾರೆನ್ನಲಾಗಿದೆ. ಹೋರಾಟಗಾರರ ಜೊತೆಗೆ ವಾದಕ್ಕಿಳಿದ ತಹಶೀಲ್ದಾರ್ ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕೆಂಡಾಮಂಡಲವಾದ ತಹಶೀಲ್ದಾರ್ ಟೇಬಲ್ ಮೇಲಿದ್ದ ದಾಖಲೆಗಳನ್ನು ಎಸೆದು ಹೈಡ್ರಾಮ ಆಡಿದ್ದು, ಈ ವೇಳೆ ಕಚೇರಿ ಸಿಬ್ಬಂದಿ ಅವರನ್ನು ಸಮಾಧಾನ ಪಡಿಸಲು ಹರಸಾಹಸಪಟ್ಟಿದ್ದಾರೆ. ಈ ವೇಳೆ ಕಚೇರಿಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. ವರದಿ: ಮಲಾರ ಚಂದ್ರ, ಹಾದನೂರು ನಮ್ಮತುಮಕೂರು.ಕಾಂನ…

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿ ಡಾ.ವಿಷ್ಣುವರ್ಧನ್ ರವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವ ಮೂಲಕ ಆಚರಿಸಲಾಯಿತು. ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾ ಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರು ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತವಾಗಿದ್ದಾರೆ. ವಿಷ್ಣು ನೆನಪಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಅನೇಕ ಸಾಮಾಜಿಕ ಸೇವೆಗಳ ಮೂಲಕ ವಿಷ್ಣುದಾದಾ ಅವರನ್ನು ನೆನೆಯುವ ಕೆಲಸ ಅಭಿಮಾನಿಗಳು ಮಾಡುತ್ತಿದ್ದು, ರಾಜ್ಯದಾದ್ಯಂತ ಅಭಿಮಾನಿಗಳು ಹಬ್ಬದಂತೆ ಹುಟ್ಟುಹಬ್ಬ ಆಚರಿಸುತ್ತಿದ್ದು, ಇದೆ ರೀತಿ ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗಾ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಯಿತು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಇಂದು ಸಿಂಹಾಸನ ಜೋಡಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರಗೆ ಅರಮನೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದ್ದು ಸ್ಟ್ರಾಂಗ್ ರೂಂನಲ್ಲಿರುವ ಸಿಂಹಾಸನ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜೋಡಣೆ ಮಾಡಲಾಗುತ್ತಿದೆ. ದರ್ಬಾರ್ ಹಾಲ್‌ನಲ್ಲಿ ಪೂಜಾ ಕೈಂಕರ್ಯ ನೆರವೇರಿದ್ದು, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಣೆ, ಅರಮನೆಯ ಪುರೋಹಿತರ ಸಮ್ಮುಖದಲ್ಲಿ ಗಣಪತಿ ಹೋಮ, ಚಾಮುಂಡಿಪೂಜೆ, ಶಾಂತಿ ಹೋಮ ಮಾಡಲಾಗುತ್ತಿದೆ. ನವರಾತ್ರಿ ವೇಳೆ ರಾಜರು ಸಿಂಹಾಸನರೂಢರಾಗಿ ಖಾಸಗಿ ದರ್ಬಾರ್ ನಡೆಸುವ ಸಂಪ್ರದಾಯವಿದ್ದು ಅಂತೆಯೇ ಸೆ.26 ರಿಂದ ಖಾಸಗಿ ದರ್ಬಾರ್ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More