Author: admin

ಗೊಂಡಾ : ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದು ಮತ್ತು ನಂತರ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಿರುವ ಘಟನೆ  ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ಪತಿ ಮೊಹಮ್ಮದ್ ಅದ್ನಾನ್  ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದರು ಮತ್ತು ನನಗೆ ಥಳಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಆರೋಪಿಯ ಹಿಂಸೆಯಿಂದ ಬೇಸತ್ತು ತವರು ಮನೆಯಲ್ಲಿ ವಾಸಿಸಲು ಪ್ರಾರಂಭಿಸಿರುವುದಾಗಿ ಪೊಲೀಸ್ ಸೂಪರಿಂಟೆಂಡೆಂಟ್ ಹೇಳಿದ್ದಾರೆ. ಮಂಗಳವಾರ ಆರೋಪಿ ಅದ್ನಾನ್ ಮತ್ತು ಅವರ ಸೋದರಸಂಬಂಧಿ ತನ್ನ ಅತ್ತೆಯ ಮನೆಗೆ ಹೋಗಿದ್ದು, ಇಬ್ಬರೂ ಮಹಿಳೆಯನ್ನು ಒಬ್ಬಂಟಿಯಾಗಿ ಇರುವುದನ್ನು ಗಮನಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಥಳಿಸಿ, ಕಾನೂನುಬಾಹಿರವಾದ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಲಾಗಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಹೇಳಿದ್ದಾರೆ. ಲಕ್ನೋ ಮೂಲದ ಆರೋಪಿಯಾಗಿರುವ ಮಹಿಳೆಯ ಪತಿ ಮೊಹಮ್ಮದ್ ಅದ್ನಾನ್ ನನ್ನು ಗುರುವಾರ ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆತನ ಸೋದರ ಸಂಬಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಸೋದರ ಸಂಬಂಧಿಯನ್ನು…

Read More

ಡಿವೈಡರ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು  ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಹನುಮಂತಪುರ ಬ್ರಿಡ್ಜ್​ ಬಳಿ ನಡೆದಿದೆ. ಅಪಘಾತದಲ್ಲಿ ಮೃತ ಪಟ್ಟವರನ್ನು ಹಾವೇರಿ ಜಿಲ್ಲೆಯ ಸಚಿನ್ (21) ಮಲ್ಲಿಕಾರ್ಜುನ್ (24)ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ವೇಳೆ ಹನುಮಂತಪುರದ ಬ್ರಿಡ್ಜ್​ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್  ಸವಾರರಿಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಗಳೂರು: ಸುರತ್ಕಲ್ ನ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಫಾಝಿಲ್ ಅಂತ್ಯಸಂಸ್ಕಾರಕ್ಕೆಸಾವಿರಾರು ಮಂದಿ ಭಾಗವಹಿಸಿದ್ದರು. ಪೊಲೀಸ್ ಬಿಗಿ ಭದ್ರತೆಯಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿತು. ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಹಾಸನದ ಎಸ್ ಪಿ ಹರಿರಾಂ ಶಂಕರ್ ಭದ್ರತೆಯ ಉಸ್ತುವಾರಿ ವಹಿಸಿದ್ದು,ಯಾವುದೇ ಅಹಿತಕರ ಘಟನೆ ಇಲ್ಲದೆ ಶಾಂತಿಯುತವಾಗಿ ಫಾಝಿಲ್ ದಫನ ಕಾರ್ಯ ನೆರವೇರಿತು. ಫಾಝಿಲ್ ಮನೆಗೆ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕ ಮೊಯಿದ್ದೀನ್ ಬಾವ, ಐವನ್ ಡಿಸೋಜಾ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಇರುವುದರಿಂದ ಸುರತ್ಕಲ್ ಪಣಂಬೂರು, ಮೂಲ್ಕಿ ಪ್ರದೇಶದಲ್ಲಿ ಸೆಕ್ಷನ್ ಜಾರಿಯಾಗಿದ್ದು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅಂಗಡಿ ಮುಂಗ್ಗಟ್ಟುಗಳನ್ನು ಮುಚ್ಚಲಾಗಿದೆ. ಶಾಸಕ ಯು.ಟಿ. ಖಾದರ್ ಮಾತನಾಡಿ, ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದರು. ಅಲ್ಲದೆ ಪರಿಹಾರ ವಿತರಣೆಯಲ್ಲಿ ಸರಕಾರ ಯಾವುದೇ ರೀತಿಯಲ್ಲಿ ತಾರತಮ್ಯ ತೋರಬಾರದು ಎಂದು ಒತ್ತಾಯಿಸಿದರು.ಫಾಝಿಲ್ ಕೊಲೆ…

Read More

ಪಾವಗಡ: ತಾಲೂಕಿನ ಹಲಸಂಗಿಯ ವೈ ಎನ್ ಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಬರುವ ಸಾಸಲಕುಂಟೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ದೇವರಾಜ್‌ ಮತ್ತು ದೈಹಿಕ ಶಿಕ್ಷಕಿ ಶ್ರೀಲಕ್ಷ್ಮೀ  ಮಕ್ಕಳೆದುರು ಆಕ್ಷೇಪಾರ್ಹ ವರ್ತನೆ ತೋರುತ್ತಿದ್ದಾರೆ ಎಂದು  ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮುಖ್ಯೋಪಾಧ್ಯಾಯ ದೇವರಾಜ್‌ ಮತ್ತು ದೈಹಿಕ ಶಿಕ್ಷಕಿ ಶ್ರೀಲಕ್ಷ್ಮೀ ಅವರು, ಮಕ್ಕಳ ಮುಂದೆಯೇ ಅಸಭ್ಯವಾಗಿ ಮಾತನಾಡುವುದು, ಮಕ್ಕಳ ಮುಂದೆಯೇ ಹೊಡೆದಾಡುವುದು,  ಕೆಲವು ಮಕ್ಕಳಲ್ಲಿ ಜಾತಿ ತಾರತಮ್ಯ ಮಾಡುವುದು. ವಿಶೇಷ ಶಾಲೆಯ ಹೆಸರಿನಲ್ಲಿ ಚಿಕನ್ ಪಾರ್ಟಿ ಮಾಡುವುದು ಹೀಗೆ ಹಲವಾರ ದುರ್ವರ್ತನೆಯನ್ನು ತೋರುತ್ತಿದ್ದಾರೆ ಎಂದು ಗ್ರಾಮದ ಯುವಕರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ಆಕ್ಷೇಪಾರ್ಹ ವರ್ತನೆಯಿಂದಾಗಿ ಪಕ್ಕದ ಹಳ್ಳಿಯ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಿಕ್ಷಕರ ಆಕ್ಷೇಪಾರ್ಹ ವರ್ತನೆಯಿಂದ ಬೇಸತ್ತ ಸಾಸಲಕುಂಟೆ ಗ್ರಾಮಸ್ಥರು ಶಾಲೆಯ ಬಳಿ ಬಂದು ಶಿಕ್ಷಕರನ್ನು ತರಾಟೆಗೆತ್ತಿಕೊಂಡಿದ್ದಾರಲ್ಲದೇ, ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದು, ಶಾಸಕರಾದ ವೆಂಕಟರಮಣಪ್ಪ, ವಿಧಾನ‌ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ…

Read More

ಮಧುಗಿರಿ: ಸರ್ಕಾರದ ಆದೇಶದಂತೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಜನಾಂಗದವರಿಗೆ ಉಚಿತವಾಗಿ 75 ಯೂನಿಟ್ ಗಳ ವಿದ್ಯುತ್ ಅನ್ನು ನೀಡುವುದಾಗಿ ಅದಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ  ಜಾತಿ ಮತ್ತು  ಪಂಗಡದವರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ತಿಂಗಳ 30ನೇ ತಾರೀಕು ಎಂದು ಯೋಜನೆ ಹೊರಡಿಸಿದೆ. ಅದರಂತೆ ಇಂದು ಮಧುಗಿರಿಯಲ್ಲಿ ಬೆಸ್ಕಾಂ ಕಚೇರಿಯಲ್ಲಿ ಎಲ್ಲಾ ಪರಿಶಿಷ್ಟ ಜಾತಿ ಪಂಗಡದವರಿಗೆ ಡೆಪಾಸಿಟ್ ಕಟ್ಟಲು ಹೇಳಿದಾಗ ಹಣ ಕಟ್ಟಿದ ನಂತರ ಅರ್ಜಿ ಸಲ್ಲಿಸಿ ಅರ್ಜಿಯ ಸ್ವೀಕೃತ ಪತ್ರ ನಕಲು ಕೇಳಿದಾಗ ನಾವು ಯಾವುದೇ ನಕಲನ್ನು ಕೊಡುವುದಿಲ್ಲ ಆ ರೀತಿಯಾಗಿ ನಮಗೆ ಆದೇಶವೂ ಇಲ್ಲ ಎಂದು ಅಲ್ಲಿ ಬಂದಿರುವಂತಹ ಅರ್ಜಿದಾರರಿಗೆ ಬೆದರಿಕೆಯ ರೀತಿಯಲ್ಲಿ ಉಡಾಫೆ ಉತ್ತರವನ್ನು ಸೀನಿಯರ್ ಅಸಿಸ್ಟೆಂಟ್ ಶಶಿಕಲಾ ಅವರು ನೀಡುತ್ತಿದ್ದಾರೆ. ಇದರಿಂದ ಕೆಂಡಮಂಡಲಗೊಂಡ ಸ್ಥಳೀಯ ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿ ಅರ್ಜಿ ಸಲ್ಲಿಸಲು ಅವಿದ್ಯಾವಂತರು ವಿದ್ಯಾವಂತರು ಆಗಮಿಸುತ್ತಾರೆ, ಆದರೆ ಅಧಿಕಾರಿಗಳು…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರನೇ ಬಾರಿಗೆ ನೆತ್ತರು ಹರಿದಿದ್ದು, ಮಸೂದ್, ಪ್ರವೀಣ್ ಹತ್ಯೆಯ ಬಳಿಕ ಇದೀಗ 23 ವರ್ಚ ವಯಸ್ಸಿನ ಫಾಜಿಲ್​ ಮಂಗಲಪೇಟೆ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿನ್ನೆ ರಾತ್ರಿ 7:30ರ ಸುಮಾರಿಗೆ ಸುರತ್ಕಲ್ ನ ನಗರ ಪ್ರದೇಶದಲ್ಲೇ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ಮಾರಣಾಂತಿಕ ಹಲ್ಲೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ಪಾಜಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಹಿನ್ನೆಲೆಯಲ್ಲಿ  ಸುರತ್ಕಲ್, ಪಣಂಬೂರು, ಬಜ್ಪೆ, ಮುಲ್ಕಿ ಸುತ್ತಮುತ್ತಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುರತ್ಕಲ್‌ನ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ರಾತ್ರಿಯಿಂದಲೇ ನಿರಂತವಾಗಿ ಗಸ್ತು ತಿರುಗುತ್ತಿದ್ದಾರೆ. ಯಾವುದೇ ಗಲಭೆಯಾಗದಂತೆ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ತುಮಕೂರು: ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಸಂಬಂಧ ರಾಜ್ಯ ಸರ್ಕಾರ  ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ ಎಂದು ತುಮಕೂರು ಜಿಲ್ಲಾ ಬಿಜೆಪಿ ಪಕ್ಷದ ಮಾಧ್ಯಮ ಪ್ರಕೊಷ್ಟದ ಜಿಲ್ಲಾ ಸಂಚಾಲಕರಾದ ಶಕುಂತಲಾ ನಟರಾಜ್ ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಬೆನ್ನಲ್ಲೇ  ರಾಜ್ಯದ್ಯಂತ  ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ಸ್ಥಾನಕ್ಕೆ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಅದರಂತೆ ತಾವು ಸಹ ಮಾಧ್ಯಮ ಪ್ರಕೊಸ್ಟದ ಜಿಲ್ಲಾ ಸಂಚಾಲಕರಾದ ಶಕುಂತಲಾ ನಟರಾಜ ರವರು ಸಹ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದವು ಈಗ ಪಕ್ಷದ ಕಾರ್ಯಕರ್ತರನ್ನು ಸಹ ಬಿಡದೆ ಹತ್ಯೆ ಮಾಡುತ್ತಿರುವುದರಿಂದ ಮನನೊಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರು ಸಹ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಮುಂದೆ ನಮಗೂ ಸಹ ಇಂತಹದ್ದೇ ಸ್ಥಿತಿ…

Read More

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಅವರೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಇಂಧನ ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೆಟ್ಟಾರು ಗ್ರಾಮದ ಪ್ರವೀಣ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಪ್ರವೀಣ್ ಕುಟುಂಬದವರಿಗೆ ಧೈರ್ಯ ಹೇಳಿದ ಸಿಎಂ ರಾಜ್ಯ ಬಿಜೆಪಿ ಸರ್ಕಾರ ನಿಮ್ಮೊಂದಿಗಿದೆ ಎಂದು ಅಭಯ ನೀಡಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ ಚೆಕ್ ಹಸ್ತಾಂತರಿಸಿದ್ದಾರೆ. ಭೇಟಿ ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದು ಕೊಲೆ ಮಾತ್ರ ಅಲ್ಲ, ಇದೊಂದು ದೇಶದ್ರೋಹದ ಕೆಲಸವಾಗಿದೆ. ಅತಿ ಶೀಘ್ರವೇ ಕೊಲೆ ಆರೋಪಿಗಳ ಬಂಧನವಾಗಲಿದೆ. ಇದನ್ನು ಕೇವಲ ಒಂದು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಬೆಂಗಳೂರು: ಬಿಜೆಪಿಯವರಿಗೆ ಸಾವಿನ ಮನೆ ರಾಜಕಾರಣ ಮಾಡೋದು ಇನ್ನೂ ತಪ್ಪಿಲ್ಲ. ಅವರ ಪಕ್ಷದ ಕಾರ್ಯಕರ್ತರು ಅವರ ಮೇಲೆ ತಿರುಗಿ ಬಿದ್ದಿದರಿಂದ ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮೇಲೆ‌ ಗೂಬೆ ಕೂರಿಸುವ ಕೆಲಸ ಬಿಟ್ಟು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದ್ದು ಅವರಿಗೆ ಬಿಟ್ಟಿದ್ದು. ಆದರೆ ಪ್ರಚೋದನಕಾರಿ ಹೇಳಿಕೆ ಕೊಟ್ಟು, ಕೊಟ್ಟು ಬಲಿ ತೆಗೆದುಕೊಂಡಿದ್ದಾರೆ ಎಂದು  ಅವರು ಗಂಭೀರ ಆರೋಪ ಮಾಡಿದರು. ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಮನೆ ಮೇಲೆ‌ ಅವರೇ ಕಲ್ಲು ಹೊಡೆದುಕೊಳ್ಳಬೇಕು. ಈ ಹಿಂದೆ ಈ ರೀತಿಯ ಸಾವು ಆಗಲಿ ಎಂದು ಕಾದು ಕುಳಿತಿದ್ದರು. ಹಿಂದೆ ವೈಯಕ್ತಿಕ ಸಾವುಗಳನ್ನು ರಾಜಕೀಯ ದ್ವೇಷ‌ದ ಸಾವುಗಳಾಗಿ ಮಾಡಿದ್ರು. ಹತ್ಯೆಗಳು ಎಲ್ಲಾ ಸರ್ಕಾರದಲ್ಲೂ ಆಗಿವೆ. ಆದರೆ ಹತ್ಯೆಗಳಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಅಂದುಕೊಂಡಂತೆಯೇ ‘ವಿಕ್ರಾಂತ್ ರೋಣ’ ಅದ್ದೂರಿಯಾಗಿ ರಿಲೀಸ್ ಆಗಿದೆ. ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಅವರ ಎಂಟ್ರಿ ಸೀನ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಎಲ್ಲ ಚಿತ್ರಮಂದಿರಗಳ ಎದುರಲ್ಲೂ ಸಡಗರ ಮನೆ ಮಾಡಿದೆ. ಪಟಾಕಿ ಹೊಡೆದು ಪ್ರೇಕ್ಷಕರು ಸಂಭ್ರಮಿಸುತ್ತಿದ್ದಾರೆ. ವಿಕ್ರಾಂತ್ ರೋಣ ಚಿತ್ರಕ್ಕೆ ಸಿನಿಪ್ರಿಯರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ವಿಶ್ವಾದ್ಯಂತ ಸಾವಿರಾರು ಸ್ಕ್ರೀನ್ ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಶ್ರೀಶೈಲ ಚಿತ್ರಮಂದಿರ ಹಾಗೂ ಪುಷ್ಪಾಂಜಲಿ ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ಚಿತ್ರ ಚಿತ್ರ ಬಿಡುಗಡೆಯಾಗಿದ್ದು, ಎರಡು ಚಿತ್ರ ಮಂದಿರಗಳಲ್ಲಿ ಚಿತ್ರ ಇದ್ದರೂ, ಟಿಕೆಟ್ ಖರೀದಿಗೆ ನೂಕು ನುಗ್ಗಲು ಕಂಡು ಬಂತು. ಕಿಚ್ಚ ಸುದೀಪ್ ಅಭಿನಯದ ವಿಕ್ರಂತ್ ರೋಣ ಸಿನಿಮಾ ವಿಶ್ವಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು , ಮೊದಲ ದಿನದ…

Read More