Subscribe to Updates
Get the latest creative news from FooBar about art, design and business.
- ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ
- ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ
- ನಾವೀನ್ಯತೆ, ಆವಿಷ್ಠಾರ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
- ದನ ಮೇಯಿಸಲು ಹೋಗಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಶಿಸಿ ಸಾವು!
- ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್ ರೇವಣ್ಣಗೆ ಮತ್ತೆ ಸಂಕಷ್ಟ!
- ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: ನಾಲ್ವರು ಸಾವು
- ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ
- ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ
Author: admin
ತುರುವೇಕೆರೆ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಇರುವ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಜನೌಷಧಿ ಮಾರಾಟ ಮಳಿಗೆ ಕಳೆದ ಎರಡು ವರ್ಷಗಳಿಂದ ಮುಚ್ಚಿಟ್ಟು ಮತ್ತೆ ಕಳೆದ ಮೂರು ತಿಂಗಳಿನಿಂದ ಎಂ.ಎಸ್.ಐ ಎಲ್ ನವರು ಮಾರಾಟ ಮಳಿಗೆಯನ್ನು ತೆರೆದಿದ್ದು ಮಾರಾಟ ಮಾಡಲು ಒಬ್ಬ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಮಾಡಿಕೊಂಡಿದೆ. ಈ ಸಿಬ್ಬಂದಿ ಎಂಆರ್ ಪಿ ಬೆಲೆಗಿಂತ ಹೆಚ್ಚು ಬೆಲೆ ತೆಗೆದುಕೊಳ್ಳುತ್ತಿದ್ದು, ಇಂದು ತಾಲೂಕಿನ ದಂಡಿನಶಿವರ ಹೋಬಳಿಯ ಬೀಚನಹಳ್ಳಿ ಗ್ರಾಮದ ವಾಸಿ ಸುನಿಲ್ ಬಿನ್ ಚನ್ನಯ್ಯ ಎಂಬುವರು ಸರ್ಕಾರಿ ಆಸ್ಪತೆಗೆ ತನ್ನ ಬಾಣಂತಿ ಹೆಂಡತಿಯನ್ನು ವೈದ್ಯರ ಬಳಿ ಪರೀಕ್ಷೆ ಮಾಡಿಸಿದ್ದಾರೆ. ವೈದ್ಯರು ಮೆಡಿಸನ್ ಮತ್ತು ಮಾತ್ರೆಯನ್ನು ಬರೆದಿದ್ದು, ಮಾತ್ರೆಕೊಳ್ಳಲು ಈ ಜನೌಷಧಿ ಮಳಿಗೆಗೆ ಹೋಗಿ ಕೊಂಡುಕೊಂಡು ಬೆಲೆಕೇಳಿದಾಗ ಹೆಚ್ಚುಪಟ್ಟು ಪಡೆದಿರುವುದು ಕಂಡು ಬಂದಿದೆ. ಈ ಮಾತ್ರೆಯ ಲೇಬಲ್ ಮೇಲೆ 18 ರೂ. ಇದ್ದು ಆದರೆ ಈ ಮಾರಾಟ ಸಿಬ್ಬಂದಿ ಮಾತ್ರೆ ಲೇಬಲ್ 118 ಆಗಿ ಮಾರ್ಕರ್ ಪೆನ್ನಿನಲ್ಲಿ ಬರೆದಿರುವುದು ಬೆಳಕಿಗೆ ಬಂದಿದೆ. ಇದನ್ನು ಮತ್ತೆ ಸಿಬ್ಬಂದಿ…
ಹರ್ಯಾಣ: ಮೊಬೈಲ್ ಚಾರ್ಜ್ ಮಾಡಿ ಜೇಬಿನಲ್ಲಿ ಹಾಕಿದ ಕೆಲವೇ ನಿಮಿಷಗಳಲ್ಲಿ ಮೊಬೈಲ್ ಬ್ಲಾಸ್ಟ್ ಆಗಿ ಯುವಕ ಗಾಯಗೊಂಡ ಘಟನೆ ಹರ್ಯಾಣದಲ್ಲಿ ನಡೆದಿದ್ದು, ಯುವಕನನ್ನು ಆಸ್ಪತ್ರೆಗೆ ದಾಖಲಾಗಿದೆ. ಸ್ಫೋಟಗೊಂಡ ಮೊಬೈಲನ್ನು ಯುವಕ ಬಹಳ ಸಮಯದಿಂದ ಬಳಸುತ್ತಿದ್ದರು ಎನ್ನಲಾಗಿದೆ. ಬುಧವಾರ ಫೋನ್ ನ ಬ್ಯಾಟರಿ ಖಾಲಿಯಾದ ಕಾರಣ ಮೊಬೈಲ್ ಚಾರ್ಜಿಂಗ್ ಗೆ ಹಾಕಿದ್ದರು. ಚಾರ್ಜ್ ಮಾಡಿದ ನಂತರ, ಸ್ವಲ್ಪ ಹೊತ್ತು ಬಳಸಿ, ಪ್ಯಾಂಟ್ನ ಜೇಬಿಗೆ ಹಾಕಿಕೊಂಡಿದ್ದು, ಈ ವೇಳೆ ಮೊಬೈಲ್ ಏಕಾಏಕಿ ಸ್ಫೋಟಗೊಂಡಿದೆ. ಫೋನ್ ಬ್ಲಾಸ್ಟ್ ಆದ ಪರಿಣಾಮ ಯುವಕನ ಕಾಲಿಗೆ ತೀವ್ರವಾದ ಸುಟ್ಟಗಾಯಗಳಾಗಿವೆ. ಸದ್ಯ ಯುವಕನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಬಳಿಕ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯ ಕೋರಿದ್ದು ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ದ್ರೌಪದಿ ಮುರ್ಮು ಅವರಿಗೆ 5,121 ಮತಗಳು ಬಿದ್ದಿವೆ. ಈ ಮತಗಳ ಒಟ್ಟು ಮೌಲ್ಯ 5,77,777 ಆಗಿದೆ. ಇನ್ನು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ 1,058 ಮತಗಳು ಬಿದ್ದಿದ್ದು ಇದರ ಮೌಲ್ಯ 2,61,062 ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ಬೈಕ್ ಮೇಲೆ ಜಲ್ಲಿ ತುಂಬಿದ ಕ್ರಷರ್ ಲಾರಿ ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವನಿಗೆ ಗಂಭೀರವಾಗಿ ಗಾಯವಾದ ಘಟನೆ ಹುಚ್ಚನಟ್ಟಿ ಅಂಡರ್ ಪಾಸ್ ಬಳಿ ನಡೆದಿದೆ. ಹಳೇಪಾಳ್ಯದ ಪರಿಶಿಷ್ಟ ಜಾತಿ ಕಾಲೋನಿಯ 24 ವರ್ಷ ವಯಸ್ಸಿನ ರಂಗಸ್ವಾಮಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ರಂಗಸ್ವಾಮಿ ಅವರು ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ರಂಗಸ್ವಾಮಿ ಅವರು ಬೈಕ್ ನಲ್ಲಿ ಹಸುವಿಗೆ ಮೇವು ಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ರಷರ್ ಲಾರಿ ಬೈಕ್ ಸವಾರನ ಮೇಲೆಯೇ ಹರಿದಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಡರ್ ಪಾಸ್ ನಲ್ಲಿ ಯಾವುದೇ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಅಂಡರ್ ಪಾಸ್ ರಸ್ತೆಗೆ ಕನಿಷ್ಟ ಹಂಪ್ ಗಳು ಕೂಡ ಮಾಡದೇ ಹಾಗೆಯೇ ಬಿಡಲಾಗಿದ್ದು, ವಾಹನಗಳು ಅಡ್ಡದಿಡ್ಡಿಯಾಗಿ ಚಲಿಸುತ್ತಿವೆ. ಇದೀಗ ಪ್ರಾಣವೊಂದು ಬಲಿಯಾಗಿದೆ. ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬ ಒತ್ತಾಯಗಳು ಘಟನೆಯ…
ಸರಗೂರು: ತಾಲ್ಲೂಕಿನ ಇತ್ತೀಚಿನ ದಿನಗಳಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಮಾಡಿದ್ದು. ಆದರೆ ಕಳಪೆ ಕಾಮಗಾಯಿಂದಾಗಿ ರಸ್ತೆಗೆ ಹಾಕಿದ ಡಾಂಬಾರು ಕಿತ್ತು ಹೋಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಗನಹಳ್ಳಿ ಮಾರ್ಗವಾಗಿ ಆಡಹಳ್ಳಿ ಗ್ರಾಮಕ್ಕೆ ಹಾದುಹೋಗುವ ರಸ್ತೆ ಇದಾಗಿದ್ದು, ಕೆಲವು ತಿಂಗಳ ಹಿಂದೆ ರಸ್ತೆ ಕಾಮಗಾರಿ ಮಾಡಿದ್ದಾರೆ. ಆದರೆ ಇದೀಗ ಡಾಂಬರ್ ಕಿತ್ತುಹೋಗಿ ನೀರು ನಿಂತಿದ್ದು, ಪ್ರಯಾಣಿಕರ ಪ್ರಾಣಕ್ಕೆ ಕುತ್ತು ತರುವ ಸ್ಥಿತಿಯಲ್ಲಿದೆ. ಸರಗೂರು ಮತ್ತು ಹೆಚ್.ಡಿ.ಕೋಟೆ ತಾಲ್ಲೂಕಿಗೆ ಹೋಗುವ ಇದ್ದಾಗಿದ್ದು, ರೈತರು ಹಾಗೂ ಶಾಲೆ ಕಾಲೇಜು ಮಕ್ಕಳು ಆಡಹಳ್ಳಿ ಗ್ರಾಮಸ್ಥರು ಇದೆ ಮಾರ್ಗವಾಗಿ ತೆರಳುತ್ತಿದ್ದಾರೆ. ಕಳಪೆ ಕಾಮಗಾರಿಯಿಂದಾಗಿ ಇದೀಗ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜಿಲ್ಲಾ ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಹಾಗೂ ಗುತ್ತಿಗೆದಾರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ…
ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಲೊಯೋಲ ಪದವಿ ಕಾಲೇಜಿನ ತೃತೀಯ ಬಿಎ ತರಗತಿಯ ವಿದ್ಯಾರ್ಥಿಯಾದ ಅರವಿಂದ್ ಎನ್.ಎಸ್, ‘ಕರಾಟೆ’ ಯಲ್ಲಿ ತೋರಿದ ಅಪ್ರತಿಮ ಸಾಧನೆಯನ್ನು ಗುರುತಿಸಿ, ಇವರನ್ನು ದಕ್ಷಿಣ ಭಾರತೀಯ ರೈಲ್ವೆ ಸೇವೆಗೆ ಆಯ್ಕೆ ಮಾಡಿಕೊಂಡಿದೆ. ಅರವಿಂದ್, ಎನ್.ಎಸ್. ಕರಾಟೆಯಲ್ಲಿ ಒಂದು ನಿಮಿಷಕ್ಕೆ 340 ಪೂರ್ಣ ವಿಸ್ತರಣೆಯ ಪಂಚ್ಗಳಿಗಾಗಿ ‘ಇಂಟರ್ ನ್ಯಾಷನಲ್ ಬುಕ್ ರೆಕಾರ್ಡ್’ನ್ನು ಹೊಂದಿರುತ್ತಾರೆ. ಅಂತರ ಕಾಲೇಜಿನ ಕರಾಟೆ ಪಂದ್ಯದಲ್ಲಿ ಸ್ವರ್ಣಪದಕ, ಅಂತರ ವಿಶ್ವವಿದ್ಯಾಲಯ ಕರಾಟೆ ಪಂದ್ಯದಲ್ಲಿ ಕಂಚಿನ ಪದಕ ಮತ್ತು ಜೈನ್ ವಿಶ್ವವಿದ್ಯಾಲಯದಲ್ಲಿ ನಡೆದ ‘ಬೇಲೋ ಇಂಡಿಯಾ 2022ರ ಕರಾಟೆ ಪಂದ್ಯದಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ. ಪ್ರಸ್ತುತ ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳ ಕರಾಟೆ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಯನ್ನು ಗಮನಿಸಿದ ದಕ್ಷಿಣ ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಅವಕಾಶವನ್ನು ನೀಡಿದೆ. ಅರವಿಂದ್ ಎನ್.ಎಸ್. ಅವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಸಹಪಾಠಿಗಳು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಪ್ರಾಂಶುಪಾಲರ ಮಾತು: ನಮ್ಮ ಕಾಲೇಜು ವಿದ್ಯಾರ್ಥಿಗಳ ಸರ್ವಾಂಗೀಣ ಮತ್ತು ಗುಣಾತ್ಮಕ ಬೆಳವಣಿಗೆಗಾಗಿ ಉತ್ತಮವಾದ…
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಸರ್ಕಾರದ ಆದೇಶ ಆಧಾರಿಸಿ ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೆ ಮುಸ್ಲಿಂ ಸಮುದಾಯದವರು ತಮ್ಮದೆಯಾದ ಕಾಲೇಜು ಪ್ರಾರಂಭಿಸಲು ಮುಂದಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ಕಾಲೇಜು ಸ್ಥಾಪನೆಗೆ ಪಿಯುಸಿ ಮಂಡಳಿಗೆ ೧೪ ಅರ್ಜಿಗಳು ಬಂದಿದ್ದು, ಈ ಅರ್ಜಿಗಳ ಪೈಕಿ ೧೩ ಅರ್ಜಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆಗಳಿಗೆ ಸೇರಿರುವುದು ವಿಶೇಷ.ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಕಾಲೇಜುಗಳಿಗೆ ಬರುವಂತಿಲ್ಲ ಎಂಬ ಆದೇಶಕ್ಕೆ ಸಡ್ಡು ಹೊಡೆಯಲು ಮುಸ್ಲಿಂ ಸಮುದಾಯದವರು ತಮ್ಮದೇ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ಕಾಲೇಜು ಆರಂಭಿಸಲು ಅನುಮತಿ ಕೋರಿ ಸಲ್ಲಿಸಲಾಗಿರುವ ೧೪ ಅರ್ಜಿಗಳ ಪೈಕಿ ೨ ಅರ್ಜಿಗಳನ್ನು ಪಿಯು ಮಂಡಳಿ ವಿಲೇವಾರಿ ಮಾಡಿ ಕಾಲೇಜು ತೆರೆಯಲು ಅನುಮತಿ ನೀಡಿದೆ.ಅನುಮತಿ ನೀಡಿರುವ ಒಂದು ಪಿಯು ಕಾಲೇಜು ಗುರುಪುರದ ಮುಸ್ಲಿಂ ಶಿಕ್ಷಣ ಸಂಸ್ಥೆಗೆ ಸೇರಿದರೆ, ಮತ್ತೊಂದು ಸುಬ್ರಮಣ್ಯದ ಮುಸ್ಲಿಮೇತರ ಶಿಕ್ಷಣ ಸಂಸ್ಥೆಗೆ ಸೇರಿದ್ದಾಗಿದೆ.ಜಿಲ್ಲೆಯಲ್ಲಿ ಉಳಿದ ೧೨ ಮುಸ್ಲಿಂ ಆಡಳಿತದ…
ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ಆಡಳಿತಾರೂಢ ಬಿಜೆಪಿ ಜುಲೈ ೧೭ ಮತ್ತು ೧೮ ರಂದು ಮತದಾರರ ಶಾಸಕರ ಮೇಲೆ ಲಂಚ ಮತ್ತು ಇತರ ಪ್ರಚೋದನೆ ನೀಡುವ ಮೂಲಕ ಪ್ರಭಾವ ಬೀರಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಮತದಾರ ಶಾಸಕರಿಗೆ ಪಂಚತಾರಾ ಹೋಟೆಲ್ನಲ್ಲಿ ಐಷಾರಾಮಿ ವಸತಿ ಕಲ್ಪಿಸಲಾಗಿದೆ ಎಂದು ಆರೋಪಿಸಿದ್ದಾರೆ. ಎನ್ಡಿಎ ಅಭ್ಯರ್ಥಿ ಮುರ್ಮು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ವಿಧಾನಸಭೆಯ ಬಿಜೆಪಿ ಮುಖ್ಯ ಸಚೇತಕ ಸತೀಶ್ ರೆಡ್ಡಿ, ಸಚಿವರು ಮತ್ತು ಇತರರ ವಿರುದ್ಧ ದೂರು ದಾಖಲಾಗಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವ ಕುರಿತು…
ಅಕ್ರಮ ಕಲ್ಲು ಗಣಿಗಾರಿಕೆಯನ್ನು ಪ್ರಶ್ನಿಸಿದ್ದಕ್ಕೆ ಹರಿಯಾಣದಲ್ಲಿ ಡಿಎಸ್ಪಿ ಮೇಲೆ ವಾಹನ ಹರಿಸಿ ಕೊಲೆ ಮಾಡಿದ ಘಟನೆ ನಡುವೆಯೇ ಅಂಥಹದ್ದೇ ಇನ್ನೊಂದು ಕೃತ್ಯ ಜಾರ್ಖಂಡ್ನಲ್ಲಿ ಬೆಳಕಿಗೆ ಬಂದಿದೆ.ಜಾರ್ಖಂಡ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಸಬ್ ಇನ್ಸ್ಪೆಕ್ಟರ್ ನನ್ನು ಕೊಲೆ ಮಾಡಲಾಗಿದೆ. ವಾಹನ ತಪಾಸಣೆಯ ಸಂದರ್ಭದಲ್ಲಿ ಮಹಿಳಾ ಸಬ್ ಇನ್ಸ್ಪೆಕ್ಟರ್ ಸಂಧ್ಯಾ ಟೋಪ್ನೋ ಸಾವನ್ನಪ್ಪಿದ್ದಾರೆ. ಇವರನ್ನು ತೂಪುದಾನ ಪ್ರದೇಶದ ಪ್ರಭಾರಿಯಾಗಿ ನೇಮಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ. ಹರಿಯಾಣದಲ್ಲಿ ನಿನ್ನೆ ಅಕ್ರಮವಾಗಿ ನಡೆಸಲಾಗುತ್ತಿದ್ದ ಗಣಿ ಪ್ರದೇಶಕ್ಕೆ ತೆರಳಿ ತಪಾಸಣೆ ನಡೆಸುತ್ತಿದ್ದಾಗ ಪೊಲೀಸ್ ವಾಹನದ ಮೇಲೆ ಟ್ರಕ್ ಹತ್ತಿಸಿ ಡಿಎಸ್ಪಿಯನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಗೂಗಲ್ ವೆಬ್ಸೈಟ್ ಅನ್ನೇ ಬಂಡವಾಳ ಮಾಡಿಕೊಂಡು ಹಣ ವಂಚಿಸುತ್ತಿದ್ದ ನಾಲ್ವರು ಗ್ಯಾಂಗ್ ನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.ರಾಜಸ್ಥಾನ ಮೂಲದ ಪರನ್ ಸಿಂಗ್ ಚೌಹಾಣ್ (೨೫), ನರೇಂದ್ರ (೩೨), ಧರ್ಮೇಂದರ್ ಹಾಗೂ ಹರಿಯಾಣ ಮೂಲದ ಧರ್ಮವೀರ್ ಬಂಧಿತ ಗ್ಯಾಂಗ್ ನ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಆರೋಪಿಗಳು ವಾಹನ ಟ್ರಾನ್ಸ್ ಪೋರ್ಟ್ ಮಾಡುವ ನೆಪದಲ್ಲಿ ವಂಚನೆ ಮಾಡುತ್ತಿದ್ದರು. ಪ್ರತಿಷ್ಠಿತ ಕೊರಿಯರ್ ಕಂಪನಿಗಳ ಹೆಸರಲ್ಲಿ ಜಾಹಿರಾತು ನೀಡುತ್ತಿದ್ದರು. ಜಾಹಿರಾತಿನಲ್ಲಿ ತಮ್ಮ ಫೋನ್ ನಂಬರ್ ಹಾಕಿಕೊಳ್ಳುತ್ತಿದ್ದರು. ಟ್ರಾನ್ಸ್ ಪೋರ್ಟ್ ಮಾಡುವ ಮೊದಲು ಹಣ ಪಡೆಯುತ್ತಿದ್ದರು. ವಾಹನ ತೆಗೆದುಕೊಂಡು ತಮ್ಮ ಅಸಲಿ ಆಟ ಶುರು ಮಾಡುತ್ತಿದ್ದರು. ಮೊದಲೇ ಹಣ ಪಡೆಯುತ್ತಿದ್ದ ಆರೋಪಿಗಳು, ತಿಂಗಳು ಕಳೆದರೂ ವಾಹನ ಡೆಲಿವರಿ ಮಾಡದೇ ಕಳ್ಳಾಟವಾಡುತ್ತಿದ್ದರು. ಪ್ರಶ್ನೆ ಮಾಡಿದ್ದಕ್ಕೆ ಹೆಚ್ಚಿನ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದರು. ಇದೇ ರೀತಿ ವಂಚನೆಗೊಳಗಾಗಿದ್ದ ವ್ಯಕ್ತಿ ಈಶಾನ್ಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರುದಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬುಲೆಟ್ ಬೈಕ್…