Subscribe to Updates
Get the latest creative news from FooBar about art, design and business.
- ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
- ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
- ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
- ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
- ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
- ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
- ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
- ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
Author: admin
ಮಗು ಹುಟ್ಟುವ ಮೊದಲೇ ದತ್ತು ಸ್ವೀಕಾರಕ್ಕೆ ಒಪ್ಪಂದ ಮಾಡಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹಿಂದೂ ದಂಪತಿ ಮಗುವನ್ನು ಮುಂದೆ ಸಾಕಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮುಸ್ಲಿಂ ದಂಪತಿಗೆ ದತ್ತು ನೀಡಲು ಒಪ್ಪಂದ ಮಾಡಿಕೊಂಡ ಉಡುಪಿ ಪ್ರಕರಣ ವಿಚಾರಣೆ ವೇಳೆ ‘ಗರ್ಭದಲ್ಲಿರುವ ಮಗುವಿಗೆ ತನ್ನದೇ ಬದುಕು-ಹಕ್ಕು ಇದ್ದು, ಅದು ಜನ್ಮ ತಾಳುವ ಮೊದಲೇ ದತ್ತು ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಜತೆಗೆ ಮುಸ್ಲಿಂ ಧರ್ಮ ಕಾನೂನಿನಲ್ಲಿ ದತ್ತು ಸ್ವೀಕಾರಕ್ಕೆ ಮಾನ್ಯತೆಯಿಲ್ಲ’ ಎಂದು ಪೀಠ ತಿಳಿಸಿದೆ. ಪೋಷಕರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರ, ಗೋವಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಹಾರಾಷ್ಟ್ರದಲ್ಲಿ ಸುಮಾರು 75,000 ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ ನೆರವೇರಿಸಲಿದ್ದಾರೆ. ಶಿರಡಿ ಸಂಪರ್ಕಿಸುವ ಬಹುನಿರೀಕ್ಷಿತ 701 ಕಿಮೀ. ನಾಗುರ-ಮುಂಬಯಿ ಎಕ್ಸ್ಪ್ರೆಸ್ ಉದ್ಘಾಟಿಸುತ್ತಾರೆ. ನಾಗುರ ಮೆಟ್ರೋ ಮೊದಲ ಹಂತ, ನಾಗುರ-ಬಿಲಾಸ್ಪುರ ವಂದೇ ಭಾರತ್, ನಾಗುರ ಏಮ್ಸ್ಗೆ ಚಾಲನೆ ನೀಡುತ್ತಾರೆ. ಜತೆಗೆ ಗೋವಾದ 2ನೇ ಏರ್ಪೋರ್ಟ್ ಮೊಪದಲ್ಲಿ ಉದ್ಘಾಟಿಸಲಿದ್ದಾರೆ. ಉಭಯ ರಾಜ್ಯಗಳಲ್ಲಿ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಗೋವಾದ ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಈ ಏರ್ಪೋರ್ಟ್ ಅನ್ನು ಉನ್ನತ ದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿ ನಿರ್ಮಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.
ಹಿರಿಯ ನಟ ಶರತ್ ಕುಮಾರ್ ತೀವ್ರ ಅಸ್ವಸ್ಥ ಜನಪ್ರಿಯ ನಟ ಶರತ್ ಕುಮಾರ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅತಿಸಾರದಿಂದ ನಿರ್ಜಲೀಕರಣಕ್ಕೆ ಒಳಗಾಗಿದ್ದ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಹೀಗಾಗಿ, ಪ್ರಸ್ತುತ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ರಾಧಿಕಾ ಮತ್ತು ಮಗಳು ವರಲಕ್ಷ್ಮಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರು ಕನ್ನಡದ ಸಾರಥಿ, ಮೈನಾ, ಸಂತೆಯಲ್ಲಿ ನಿಂತ ಕಬೀರ, ಪುನೀತ್ ರಾಜ್ಕುಮಾರ್ ಅಭಿನಯದ ರಾಜಕುಮಾರ, ಸೀತಾರಾಮ ಕಲ್ಯಾಣ ಚಿತ್ರಗಳಲ್ಲಿ ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಪುಣೆಯ ಕಾರ್ಯಕ್ರಮಕ್ಕೆ ತೆರಳುವ ವೇಳೆ ತೆರಳುತ್ತಿರುವಾಗ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ವ್ಯಕ್ತಿಯೊಬ್ಬರು ಮಸಿ ಎರಚಿದ ಘಟನೆ ನಿನ್ನೆ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪುಣೆ ಮಹಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಮಹಾತ್ಮಾ ಪುಲೆ, ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಚಂದ್ರಕಾಂತ ಪಾಟೀಲ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಈ ಸಂಬಂಧ ಉದ್ಧವ್ ಠಾಕ್ರೆ ಅವರ ಶಿವಸೇನೆ ಗುಂಪು ಕೂಡ ಕಾರ್ಯಕ್ರಮದ ಸ್ಥಳದ ಬಳಿ ಪ್ರತಿಭಟನೆ ನಡೆಸಿ ಚಂದ್ರಕಾಂತ್ ಪಾಟೀಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಈ ಪ್ರತಿಭಟನೆಯಲ್ಲಿದ್ದ ಯುವಕನೋರ್ವ ಪಕ್ಕದಲ್ಲೇ ಬೆಂಗಾವಲು ಸಿಬ್ಬಂದಿಯಿದ್ದರೂ ಚಂದ್ರಕಾಂತ ಪಾಟೀಲರ ಮುಖಕ್ಕೆ ಮಸಿ ಎರಚಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಪೊಲೀಸರು ಯುವಕ ಹಾಗೂ ಪ್ರತಿಭಟನೆಯಲ್ಲಿದ್ದು ಕೃತ್ಯದಲ್ಲಿ ಜೊತೆಗಿದ್ದ ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ : ಬಡಜನರ ತುರ್ತು ಸೇವೆಗಾಗಿ ಸರಕಾರ ನೀಡಿರುವ ತುರ್ತುವಾಹನದ ನಿರ್ವಹಣೆ ವಿಫಲವಾಗಿದೆ. ಆರೋಗ್ಯ ಸಚಿವರು ತಕ್ಷಣ ತುರ್ತುವಾಹನದ ಅವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಬೇಕಿದೆ. ರಾಜ್ಯ ಸರಕಾರ ಗ್ರಾಮೀಣ ಪ್ರದೇಶದ ಬಡಜನರ ಆರೋಗ್ಯಕ್ಕೆ ತಕ್ಷಣ ರಕ್ಷಣೆ ನೀಡಬೇಕಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಆಗ್ರಹಿಸಿದ್ದಾರೆ. ಶನಿವಾರ ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿರತೆ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಯೋವೃದ್ದ ರೈತ ಮತ್ತು ಇಬ್ಬರು ಮಕ್ಕಳ ಆರೋಗ್ಯ ವಿಚಾರಿಸಿದ ನಂತರ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ನಂತರ ಚರ್ಚಿಸಿ ಮಾತನಾಡಿದರು. ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 3 ತುರ್ತುವಾಹನ, ತೋವಿನಕೆರೆ ಮತ್ತು ಕೋಳಾಲದಲ್ಲಿ ತಲಾ ಒಂದು ತುರ್ತುವಾಹನದ ಸೌಲಭ್ಯವಿದೆ. ತುರ್ತುವಾಹನ ಲಭ್ಯವಿದ್ದರೂ ಸಹ ಅಧಿಕಾರಿಗಳ ನಿರ್ವಹಣೆ ವಿಫಲತೆಯಿಂದ ಬಡಜನರಿಗೆ ಸಮಸ್ಯೆ ಸೃಷ್ಟಿಯಾಗಿದೆ. ಆರೋಗ್ಯ ಸಚಿವರು ತಕ್ಷಣ ತುರ್ತುಸೇವೆಯ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯ ಮಾಡಿದರು. ಅಪಘಾತ ಆದಾಗ ತುರ್ತುವಾಹನ ಬರೋದಿಲ್ಲ. ಗರ್ಭೀಣಿಯರ ಹೆರಿಗೆ ವೇಳೆಯು ಸಹಾಯಕ್ಕೆ ತುರ್ತಾಗಿ…
ಮೈಸೂರು: ನಾವು ಮನೆಯಲ್ಲಿ ಕೂತರು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸುತ್ತೇವೆ. ಆ ಚುನಾವಣೆಯಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ. ಆ ಕಾರಣದಿಂದ ಅವರು ಮನೆಯಲ್ಲೇ ಕೂತಿರುತ್ತಾರೆ ಎಂದು ವ್ಯಂಗ್ಯವಾಡಿದರು. ಇನ್ನು, ಪಕ್ಷ ಸಂಘಟನೆಯ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿದೆ. ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಹಾಗೂ ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಆಂಟೋನಿ ಬೇಗೂರು ಭೂಮಿ ಮೇಲೆದ್ದು ಗದರಿಸಿತು ಕಡಿದಾದ ಬೆಟ್ಟ ಮೇಲ್ಭಾಗವು ಸಾಕಷ್ಟು ಉದ್ದವಾಗಿದೆ ಎಲ್ಲೆಲ್ಲೂ ಹಸಿರು ಹೊದಿಕೆ ರಕ್ಷಣಾತ್ಮಕ ಗೋಡೆ ಸ್ವರ್ಗದ ರಥದಂತೆ…! ಬಿಳಿ ಮೋಡವನ್ನು ನುಡಿಸುತ್ತಿದೆ ಕಾನಮಠದ ಧಾಂತೇಕಂ ಪರಿಕಲ್ಪನೆ ಮೋಡಗಳು ಎಲ್ಲೆಡೆ ಇವೆ ಪರ್ವತದ ಬದಿಯಲ್ಲಿ ಸುರಿಯುವ ಮಳೆ ಅವರೋಹಣ ಪರ್ವತ ತೇವ ಹಿಮವನ್ನು ಸ್ಫಟಿಕೀಕರಿಸಿ ಪ್ರಯೋಜನವನ್ನು ಹುಡುಕುವ ಅವಧಿಯಲ್ಲಿ ನದಿ ನೀರಿನಲ್ಲಿ ಹಣ್ಣಾಗುತ್ತವೆ ಬೇಸಿಗೆ ಲಾಭದಾಯಕವಾಗಿದೆ ಈ ಪರ್ವತಗಳು ಶೇಖರಣಾ ಉಗ್ರಾಣವಲ್ಲವೇ? ಪರ್ವತವು ನೀಡಿದ ಚಿಲುಮೆ ನೀರು ಮತ್ತು ಉಪ್ಪುನೀರು ಮನುಕುಲದ ದೊಡ್ಡ ಭರವಸೆ ಪರ್ವತದ ಸೌಂದರ್ಯವನ್ನು ಆಸ್ವಾದಿಸಿದ ವ್ಯಕ್ತಿ ಇಲ್ಲಿ ಮಹಲು ಸಹ ಸ್ಥಾಪಿಸಲಾಗಿದೆ ಸಂತೋಷದ ಸ್ವಭಾವವೂ ಸತ್ತುಹೋಯಿತು ಒತ್ತಡದಿಂದ ಅವಳ ಉಸಿರು ಮುರಿದುಹೋಯಿತು ಹೆಚ್ಚುವರಿ ಶಾಖದಿಂದಾಗಿ ಒಟ್ಟು ಸಂಪನ್ಮೂಲಗಳು ವ್ಯರ್ಥವಾಗುತ್ತವೆ ಸಮುದ್ರಕ್ಕಾಗಿ ಕಾಯಿರಿ ಎದ್ದೇಳು ಮನುಷ್ಯ! ಪೂರ್ವ ಪಶ್ಚಿಮ ಘಟ್ಟಗಳು ಕೈ ಜೋಡಿಸಿ ಪೂಜಿಸು! ನೀಲಗಿರಿಯ ಭೂಮಿಯನ್ನು ರಕ್ಷಿಸುವುದು — ಇನ್ನು ಮುಂದೆ ಸ್ವಾರ್ಥ ಬಿಡು ಜಗತ್ತನ್ನು ಉಳಿಸಿ ನಿಮ್ಮ ಪೀಳಿಗೆಯನ್ನು ಹಿಂದಕ್ಕೆ ತೆಗೆದುಕೊಳ್ಳಿ..!…
ಸಾಮಾಜಿಕ ಕಾರ್ಯ ಕರ್ತ ಮಾಧವ ರಾವ್ ಬಾಗಲ್( 1895-1986) ಅವರು ದಿ 9/12/1950 ರಲ್ಲಿ ಕೊಲ್ಹಾಪುರದಲ್ಲಿ ಪ್ರಪ್ರಥಮವಾಗಿ ಡಾ. ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದ್ದರು.ಇದು ಡಾ.ಬಿ ಆರ್ ಅಂಬೇಡ್ಕರ್ ಅವರ ಜೀವಂತದ ಅವಧಿಯಲ್ಲೇ ನಡೆದದ್ದು.ಬಾಬಾಸಾಹೇಬರು ಈ ಮೂರ್ತಿಯ ದರ್ಶನ ಕೂಡಾ ಮಾಡಿದ್ದರು. ಮಹಾರಾಷ್ಟದ ಕೊಲ್ಹಾಪುರನಗರದಲ್ಲಿರುವ ಹಿಂದೂ ಚೌಕ್ ನಲ್ಲಿ ಈ ಮೂರ್ತಿ ಒಂದು ಐತಿಹಾಸಿಕ ಮೂರ್ತಿಯಾಗಿದೆ.ಇದು ವಿಶ್ವದ ಮೊಟ್ಟ ಮೊದಲ ಪ್ರತಿಮೆಯಾಗಿದೆ.1950 ಬಾಬಾಸಾಹೇಬರ ಮೂರ್ತಿಯನ್ನು ಅನಾವರಣ ಮಾಡಲಾಗಿತ್ತು.ಮಾಧವರಾವ್ ಬಾಗಲ್ ಅವರು ಸಮಿತಿಯ ಅಧ್ಯಕ್ಷರಾಗಿದ್ದರು.ಬಾಬಾಸಾಹೇಬರು ಬದುಕಿರುವಾಗಲೇ ಈ ಮೂರ್ತಿ ನಿರ್ಮಾಣ ಮಾಡಲಾಗಿದ್ದು ಇದನ್ನು ಬಾಳ್ ಚೌಹಾಣ ಅನ್ನುವವರು ತಯಾರಿಸಿದ್ದರು. ಅದೇ ರೀತಿಯಲ್ಲಿ ನಮ್ಮ ಮೂಲನಿವಾಸಿ ಅಂಬೇಡ್ಕರ್ ಸಂಘದವತಿಯಿಂದ 2ನೇ ಮೂರ್ತಿಯಾಗಿದ್ದು ಇದು 11/12/22ರಂದು ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮೂರ್ತಿ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ತಾವೆಲ್ಲರೂ ಬಂದು ಭಾಗವಹಿಸಿ. ನೀವು ಬನ್ನಿ ನಿಮ್ಮವರನ್ನು ಕರೆತನ್ನಿ ಈ ಕಾರ್ಯಕ್ರಮನ ಯಶಸ್ವಿಗೊಳ್ಳಿಸೋಣ… ಜೈ ಭೀಮ್ ಜೈ ಮೂಲನಿವಾಸಿ ಅಂಬೇಡ್ಕರ್ ಸಂಘ… ಇಂತೀ ನಿಮ್ಮ ಪಿ ಲೋಕೇಶ್ ನಮ್ಮತುಮಕೂರು.ಕಾಂನ…
ಕಾಂತಾರ ಸಿನಿಮಾ ಸಕ್ಸಸ್, ನಿರ್ದೇಶಕ ಹಾಗೂ ನಿರ್ಮಾಪಕರು ಮರುಚಿಂತಿಸುವಂತೆ ಮಾಡಿದೆ ಎಂದು ಖ್ಯಾತ ನಿರ್ದೇಶಕ ರಾಜಮೌಳಿ ಹೇಳಿದ್ದಾರೆ. ಕಾಂತಾರ ಸಕ್ಸಸ್ ಬಗ್ಗೆ ಮೊದಲ ಬಾರಿಗೆ ಮಾತನಾಡಿರುವ ರಾಜಮೌಳಿ, ಕಾಂತಾರ ಗಳಿಕೆ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹೆಚ್ಚು ಹಣ ಗಳಿಸಲು ಬಿಗ್ ಬಜೆಟ್ ಸಿನಿಮಾವನ್ನೇ ಮಾಡಬೇಕಿಲ್ಲ. ಕಡಿಮೆ ಬಜೆಟ್ನ, ಒಳ್ಳೆಯ ಫ್ಲ್ಯಾನ್ ಇರುವ ಸಿನಿಮಾ ಕೂಡ ಉತ್ತಮ ಕಲೆಕ್ಷನ್ ಮಾಡಬಹುದು. ಇದಕ್ಕೆ ಕಾಂತಾರ ಉತ್ತಮ ಉದಾಹರಣೆ ಎಂದು ರಾಜಮೌಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರಿಗೆ ಇದು ಎಕ್ಸಾಯಿಟ್ ಆಗಿರುತ್ತದೆ. ಆದರೆ ನಿರ್ದೇಶಕರಾಗಿ ನಾವು ಏನು ಮಾಡುತ್ತೀವಿ ಅಂತ ಮರುಚಿಂತಿಸಬೇಕಾಗಿದೆ’ ಎಂದು ಹೇಳಿದರು. ರಾಜಮೌಳಿ ಹೆಚ್ಚಾಗಿ ಬಿಗ್ ಬಜೆಟ್ ಸಿನಿಮಾಗಳನ್ನು ಮಾಡಿ ಸಕ್ಸಸ್ ಕಂಡವರು. ಇದೀಗ ಕಡಿಮೆ ಬಜೆಟ್ ನ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿ ಬೀಗುತ್ತಿರುವ ರೀತಿ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಾಂತಾರ ಸಕ್ಸಸ್ ಸಿನಿಮಾ ತಂತ್ರದ ಬಗ್ಗೆ ಮರುಚಿಂತಿಸುವಂತೆ ಮಾಡಿದೆ ಎಂದು ರಾಜಮೌಳಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಕಣ್ಣಿನ ದೃಷ್ಟಿಯನ್ನು ಹೆಚ್ಚಿಸಲು ಪ್ರತಿದಿನ ಜೇನುತುಪ್ಪವನ್ನು ಸೇವಿಸಿ > ತೆಂಗಿನಕಾಯಿ ಅಥವಾ ಎಳ್ಳಿನ ಎಣ್ಣೆಯಿಂದ ಪಾದದ ಅಡಿಭಾಗವನ್ನು ಹಗುರವಾಗಿ ಪ್ರತಿದಿನ ಮಸಾಜ್ ಮಾಡಿ > ದ್ವಿದಳ ಧಾನ್ಯಗಳು, ಮೊಟ್ಟೆಯಂತಹ ಪ್ರೋಟೀನ್ ಭರಿತ ಸೇವಿಸಿ > ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯಿರಿ ಖಾಲಿ ಹೊಟ್ಟೆಯಲ್ಲಿ ಕ್ಯಾರೆಟ್ ಜ್ಯೂಸ್ ಕುಡಿಯಿರಿ ಬಾದಾಮಿ, ವಾಲ್ ನಟ್ ಗಳನ್ನು ಆಹಾರದಲ್ಲಿ ಸೇರಿಸಿ. ವಾರಕ್ಕೆ ಒಮ್ಮೆಯಾದರೂ ಮಾಂಸಾಹಾರಿಗಳು ಮೀನನ್ನು ಸೇವಿಸಿದರೆ ಉತ್ತಮ ಕಾರಣ ಮೀನಿನಲ್ಲಿ ಒಮೆಗಾ-3 ಕೊಬ್ಬಿನ ಆಮ್ಲಗಳು ಇರುವುದರಿಂದ ಕಣ್ಣಿಗೆ ಉತ್ತಮವಾಗಿ ಇರುತ್ತದೆ. ಕಣ್ಣನ್ನು ಹತ್ತು ನಿಮಿಷಕ್ಕೆ ಒಂದು ಬಾರಿ ಅಥವಾ ಸಮಯ ಸಿಕ್ಕಾಗ ಕಣ್ಣನ್ನು ಮಿಟಿಕಿಸಿ ನಿಯಮಿತವಾಗಿ ಆಗ ಕಣ್ಣುಗಳು ಫ್ರೆಶ್ ಆಗಿ ಇರುತ್ತದೆ. ಮುಂಜಾನೆ ಅಥವಾ ಸಂಜೆಯ ವೇಳೆ ಬಿಸಿಲಿನಲ್ಲಿ ನೀವು ಇದ್ದಾಗ ಆಗ ಬರುವ ಸೂರ್ಯನ ಕಿರಣಗಳು ನಿಮ್ಮ ಕಣ್ಣುಗಳಿಗೆ ಉತ್ತಮ ಚಿಕಿತ್ಸೆ ಆಗಿರುತ್ತದೆ. ಮೊಬೈಲ್ ಹಾಗೂ ಕಂಪ್ಯೂಟರ್ ಬಳಸುವಾಗ ಬ್ರೈಟ್ನೆಸ್ ಕಡಿಮೆ ಇಟ್ಟು ಉಪಯೋಗಿಸಿ. ಪಾಲಕ್ ಸೊಪ್ಪನ್ನು ನಿಮ್ಮ…