Author: admin

ಚಿತ್ರದುರ್ಗ: ಕುಷ್ಟರೋಗ ಪ್ರಕರಣ ನಿವಾರಣೆಯ ಕಾರ್ಯಕ್ರಮದ ಅಡಿಯಲ್ಲಿ  ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕಿ ಡಾಕ್ಟರ್ ರೇಖಾ ಎಸ್.  ಆರೋಗ್ಯ ಕಾರ್ಯಕರ್ತರು ಕುಷ್ಠರೋಗ ಪತ್ತೆ ಕಾರ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು. ಗೋನೂರು ಗ್ರಾಮದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತರು ಆಗಮಿಸಿ  ಕುಷ್ಟರೋಗದ ಬಗ್ಗೆ ಮಾಹಿತಿ ನೀಡಿದ್ದಾರೆಯೇ ಎಂದು ರೇಖಾ ಪರಿಶೀಲನೆ ನಡೆಸಿದರು. 2025ರ ವೇಳೆಗೆ ಕುಷ್ಟರೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿ ವರ್ಷವೂ  ನಿಯಂತ್ರಣಕ್ಕೆ ತರುವ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, 18 ದಿನಗಳ ಕಾಲ ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಕುಷ್ಟರೋಗ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಪರಿಶೀಲನೆ ಕಾರ್ಯಕ್ಕೆ ಅಧಿಕಾರಿಗಳು ಆರೋಗ್ಯ ಕಾರ್ಯಕರ್ತರು  ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಸಾಥ್ ನೀಡಿದರು. ಈ ವೇಳೆ  ಡಿ.ಎಲ್.ಒ.  ಡಾ.ರೂಪ ಆರ್. ಡಿ. ಎನ್. ಟಿ.,  ತಂಡದ ಎಂ. ಚಂದ್ರಪ್ಪ ವೈ. ತಿಪ್ಪೇಶ್,  ರಾಜೇಂದ್ರ ಪ್ರಸಾದ್,  ಕೆ. ಪಿ. ಎಂ. ಡಬ್ಲ್ಯೂ …

Read More

ಮಧುಗಿರಿ: ಪಟ್ಟಣದ ಶ್ರೀ ಮಲ್ಲೇಶ್ವರ ಸ್ವಾಮಿ ಹಾಗೂ ವೆಂಕಟರಮಣ ಸ್ವಾಮಿ ದೇವಸ್ಥಾನದ ಪಕ್ಕದ ಬಾಲ ಗಂಗಾಧರನಾಥ ತಿಲಕ್ ಮಂಟಪದಲ್ಲಿ ಶ್ರೀ ವಿದ್ಯಾ ಗಣಪತಿ ಮಹಾಮಂಡಳಿ ಮಧುಗಿರಿ ಇವರ ವತಿಯಿಂದ ಗಣೇಶೋತ್ಸವ ನಡೆಯಿತು. ಸುಮಾರು 9 ದಿನಗಳ ಕಾಲ ವಿಜೃಂಭಣೆಯಿಂದ ನಡೆದ ಗಣೇಶೋತ್ಸವದಲ್ಲಿ ಪ್ರತಿದಿನವೂ ಕೂಡ ಒಂದೊಂದು ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕೊನೆ ದಿನ ವಿಶೇಷ ಮೆರವಣಿಗೆಯೊಂದಿಗೆ ಶ್ರೀ ವಿದ್ಯ ಗಣಪತಿ ಮಹಾಮಂಡಳಿ ಸಮಿತಿ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲಾ ಪದಾಧಿಕಾರಿಗಳು ನಗರದ ಯುವಕರು ವಿನಾಯಕನನ್ನು ಪೂಜಿಸಿ ನಂತರ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ರಾಹುಲ್ ಕುಮಾರ್ ರವರಿಗೆ ಮಧುಗಿರಿ ನಗರದ ಜನತೆ ಹಾಗೂ ಪಕ್ಕದೂರಿನ ಗ್ರಾಮಸ್ಥರು ಸ್ವಾಗತಿಸಿ ವಿಶೇಷವಾಗಿ ಸನ್ಮಾನಿಸಲಾಯಿತು. ಅದ್ದೂರಿ ಮೆರವಣಿಗೆಯಲ್ಲಿ ನಾಸಿಕ್ ಡೋಲು, ಬೊಂಬೆ ಕುಣಿತ ಸದ್ದಿಗೆ ಮಕ್ಕಳು,ಯುವಕರು ಹಾಗೂ ಯುವತಿಯರು ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು. ತದನಂತರ ಒಕ್ಕಲಿಗರ ಭವನ ನೀರಿನ ತಟ್ಟಿಯಲ್ಲಿ ಗಣೇಶನನ್ನು ಶ್ರದ್ದಾ ಭಕ್ತಿಯಿಂದ ವಿಸರ್ಜನೆ…

Read More

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯದ್ಯಂತ ಭೀಮ ಯಾತ್ರೆ ಬಳಗದಿಂದ ಸದಸ್ಯತ್ವಕ್ಕೆ ಚಾಲನೆ ನೀಡಲಾಯಿತು. ತಾಲೂಕಿನ ಹಂಚಿಬರಟ್ಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭೀಮ ಯಾತ್ರೆ ಬಳಗ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭೀಮ ಯಾತ್ರೆ ಬಳಗದ ಸದಸ್ಯ ಪ್ರಕಾಶ್, ಭೀಮ ಯಾತ್ರೆ ಒಂದು ಸಮಾನತೆಯನ್ನು ಸಾರುತ್ತದೆ ಮತ್ತು ಯಾವುದೇ ರಾಜಕೀಯಕ್ಕೆ ಕಿವಿಕೊಡದೆ ಬಾಬಾ ಸಾಹೇಬರ ಸಮಾನತೆ ಸಂದೇಶಕ್ಕೆ ನಾವು ಬದ್ಧರಾಗಬೇಕೆಂದರು. ವಕೀಲ ರವಿ ಮಾತನಾಡಿ, ಭೀಮ ಯಾತ್ರೆ ಬಳಗ ಕೇವಲ ಒಂದು ಸಮಾಜಕ್ಕೆ ಸೀಮಿತವಲ್ಲ ಎಲ್ಲ ಜನಾಂಗದ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಈಗಿನ ಸಂದರ್ಭದಲ್ಲಿ ತಾಲೂಕಿನ ಸದಸ್ಯತ್ವ ನಡೆಯುತ್ತಿದೆ ಎಲ್ಲರೂ ಸದಸ್ಯ ಪಡೆದುಕೊಳ್ಳಿ ಎಂದು ಮನವಿ ಮಾಡಿದರು. ಇದೆ ಸಂದರ್ಭದಲ್ಲಿ ಪ್ರಸನ್ನ, ರಾಘವೇಂದ್ರ, ಪ್ರಕಾಶ್, ಶ್ರೀನಿವಾಸ್, ಜಗದೀಶ್, ಕುಮಾರಸ್ವಾಮಿ ಶಿವಕುಮಾರ್ ಮೊದಲಾದವರಿದ್ದರು. ಕಾರ್ಯಕ್ರಮದಲ್ಲಿ ಭೀಮ ಯಾತ್ರೆಯ ಸದಸ್ಯರಾದ ಶರಣಪ್ಪ ಜಿ. ರವೀಂದ್ರ ಡಿ. ಕುಮಾರಸ್ವಾಮಿ ಮಂಜುನಾಥ ಎಸ್. ರಘು ಆರ್. ಪ್ರಕಾಶ್ ಜೆ. ಪ್ರಸನ್ನ ಕೃಷ್ಣಮೂರ್ತಿ ರುದ್ರಮುನಿ ಶಾಂತಕುಮಾರ್ ಕಣಮೇಶ್ ನರಹರಿ ಜಯಪ್ಪ…

Read More

ಸರಗೂರು: ತಾಲ್ಲೂಕಿನ ಬಿ.ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲನಹಳ್ಳಿ ಗ್ರಾಮದಲ್ಲಿ ಅಕ್ರಂ ಪಾಷಾ ಎಂಬುವರ ಮನೆ ಆನೆಯೊಂದು ದಾಳಿ ನಡೆಸಿದ್ದು, ಬಾಗಿಲು ಮತ್ತು ಗೋಡೆಗೆ ಹಾನಿಯೆಸಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಮೋಳೆಯೂರು (ಶೀಗೊಡಿ) ವಲಯ ಕಾಡಿನಿಂದ ಬಂದ ಸಾಕಾಣೆ ಅಕ್ರಂ ಪಾಷಾ ಅವರ ಮನೆಯ ಮೇಲೆ ದಾಳಿ ನಡೆಸಿದೆ. ಆನೆ ದಾಳಿ ನಡೆಸುತ್ತಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರೂ ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯವಹಿಸಿದ್ದು, ಇದರಿಂದಾಗಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ ಘಟನೆ ನಡೆದಿದ್ದರೆ, ಅರಣ್ಯಾಧಿಕಾರಿಗಳು 11 ಗಂಟೆಯ ವೇಳೆಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಆಕ್ರೋಶಿತ ಜನರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆತ್ತಿಕೊಂಡರು. ಅಲ್ಲದೇ ನಷ್ಟಕ್ಕೊಳಗಾಗಿರುವ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಮಾತನಾಡಿದ ಅಧಿಕಾರಿ, ಇದು ಕಾಡಾನೆ ಅಲ್ಲ. ಇಂದು ಸಾಕಾಣೆ ಎಂದು ತಿಳಿಸಿದರು. ಮನೆಗೆ ಹಾನಿ ಮಾಡಿ, ಪದಾರ್ಥಗಳನ್ನು ನಾಶ ಮಾಡಿರುವ ಹಿನ್ನೆಲೆಯಲ್ಲಿ ನಮ್ಮ ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪರಿಹಾರವನ್ನು ನೀಡುತ್ತೆವೆ…

Read More

ತುಮಕೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು, ಮತ್ತು ಅನೇಕ ಅಂಬೇಡ್ಕರ್ ವಾದಿ ಸಂಘಟನೆಗಳು ಸೇರಿ ಸೆಪ್ಟಂಬರ್ 10ರಂದು ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಭೀಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಸುಮಾರು 12 ಗಂಟೆಯ ವೇಳೆಗೆ ಟೌನ್ ಹಾಲ್ ನಿಂದ ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಯಲಿದ್ದು, 2 ಗಂಟೆಗೆ ತುಮಕೂರು ಬಸ್ ನಿಲ್ದಾಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜ್ಞಾನಪ್ರಕಾಶ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಲಿದ್ದಾರೆ. ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಚಲನ ಚಿತ್ರ ನಟ ಚೇತನ್ ಅಹಿಂಸಾ ಅವರು ಭಾಗವಹಿಸಲಿದ್ದಾರೆ. ಉಳಿದಂತೆ ಹಲವು ಸಂಘಟನೆಗಳ ಮುಖಂಡರು, ಚಿಂತಕರು, ಅಂಬೇಡ್ಕರ್ ವಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಜನರಲ್ಲಿ ಧಾರ್ಮಿಕ ಭಾವನೆ ಬೆಳೆಸುವಲ್ಲಿ ಮತ್ತು ಮಹಿಳೆಯರನ್ನು ಸ್ವಾವಲಂಬಿಯಾಗಿಸುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಚಗಾಂವ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ‌. ಹೇಮಾವತಿ ವೀ ಹೆಗ್ಗಡೆಯವರ ವ್ಯಕ್ತಿತ್ವ ಅತ್ಯಂತ ಎತ್ತರದ್ದು. ಅವರ ದೂರದೃಷ್ಟಿ ಮತ್ತು ವಿಶಾಲ ಮನೋಭಾವದಿಂದಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ. ಒಂದು ಸರಕಾರದ ರೀತಿಯಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಹೆಬ್ಬಾಳಕರ್ ಹೇಳಿದರು. ಸಾಮೂಹಿಕ ಸತ್ಯನಾರಾಯಣ ಪೂಜಾ ವ್ಯವಸ್ಥಾಪನ ಸಮಿತಿ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕುದ್ರೆಮನಿ, ಕೊನೆವಾಡಿ, ಅತಿವಾಡ, ಬಾಚಿ ಹಾಗೂ ಪ್ರಗತಿಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಉಚಗಾಂವ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು…

Read More

ತೀವ್ರ ಹೃದಯಾಘಾತದಿಂದ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದರು. ಇಂದು ಅವರ ಮನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಉಮೇಶ್‌ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು. ಸಚಿವ ಉಮೇಶ್ ಕತ್ತಿ ನನ್ನ ಆತ್ಮೀಯ ಮಿತ್ರ. ಹೀಗಾಗಿ ನಾವು ಬೆಂಗಳೂರು ದೆಹಲಿಯಲ್ಲಿ ಅನೇಕ ಬಾರಿ ಮಾತುಕತೆ ನಡೆಸಿದ್ದೇನೆ. ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ್ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು. 40 ವರ್ಷಗಳ ಕಾಲದಿಂದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಅವರ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು. ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ, ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕೋಲಾರ: ಭಾರತ-ಪಾಕಿಸ್ತಾನ ಪಂದ್ಯಾವಳಿ ಸಂದರ್ಭದಲ್ಲಿ ಪಾಕ್ ಪರವಾಗಿ ಸ್ಟೇಟಸ್ ಹಾಕಿದ್ದಂತ ಮೂವರ ವಿರುದ್ಧ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಓರ್ವನನ್ನು ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸ ಪುರ ತಾಲೂಕಿನಲ್ಲಿ ನಡೆದಿದೆ. ಭಾರತ ಮತ್ತು ಪಾಕಿಸ್ತಾನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಬೆಂಬಲಿಸಿ ಸ್ಟೇಟಸ್ ಹಾಕಲಾಗಿತ್ತು. ಸೋಹೆಲ್, ತೋಹಿಬ್ ಪಾಷ ಹಾಗೂ ಮನ್ಸೂರ್ ಉಲ್ಲಾ ಎಂಬುವರು ಪಾಕ್ ಪರ ಸ್ಟೇಟಸ್ ಹಾಕಿದ್ದರು. ಇದನ್ನು ಗಮನಿಸಿದಂತ ಪುರಸಭೆಯ ನಾಮನಿರ್ದೇಶಿತ ಸದಸ್ಯ ರಾಮಾಂಜಿಯವರು ಶ್ರೀನಿವಾಸಪುರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಸೊಹೇಲ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನುಳಿದ ತೊಹೀಬ್ ಹಾಗೂ ಮನ್ಸೂರ್ ಹಾಗಿ ಹುಡುಕಾಟ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಾರವಾರ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರವಾರ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟ, ಐವರ ಸ್ಥಿತಿ ಗಂಭೀರ ಗಾಯಗೊಂಡ ಘಟನೆ ಗೋವಾ ರಾಜ್ಯದ ಕಾಣಕೋಣ ಬಳಿ ನಡೆದಿದೆ. ಸದ್ಯ ಗೋವಾದ ವಾಸ್ಕೊದಲ್ಲಿ ನೆಲೆಸಿರುವ ಉಲ್ಲಾಸ ನಾಗೇಕರ್ (64), ಇವರ ಪತ್ನಿ ವೀಣಾ ಉಲ್ಲಾಸ ನಾಗೇಕರ್ (60), ಪುತ್ರ ಹರೀಶ ಉಲ್ಲಾಸ ನಾಗೇಕರ್(35) ಮೃತರು. ಐವರು ಗಂಭೀರವಾಗಿ ಗಾಯಗೊಂಡಿದ್ದು, ದಕ್ಷಿಣ ಗೋವಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತಕ್ಕೀಡಾದ ಕಾರುಗಳು ನುಜ್ಜುಗುಜ್ಜಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಇತ್ತೀಚಿಗೆ ಆಂಧ್ರಪ್ರದೇಶದಲ್ಲಿ ಬಳಿಯಲ್ಲಿ ಗಾಂಜಾ ಗ್ಯಾಂಗ್ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಕಾರು ಅಪಘಾತಕ್ಕೆ ಈಡಾಗಿತ್ತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ಸಿಬ್ಬಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಈ ಬಳಿಕ ಎಚ್ಚೆತ್ತುಕೊಂಡಿರುವಂತ ರಾಜ್ಯ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ಡಿಜಿಪಿ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆ ಸೇರಿದಂತೆ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ, ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ತಿಳಿಸಲಾಗಿದೆ. ಪೊಲೀಸರ ಹಿತದೃಷ್ಠಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸಿ, ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More