Subscribe to Updates
Get the latest creative news from FooBar about art, design and business.
- ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
- ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
- ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
- ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
- ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
- ಬಳ್ಳಾರಿ: ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
- “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
- ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು: ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
Author: admin
ನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ಹೈಯರ್ ಪ್ರೈಮರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೂವರು ಬಾಲಕಿಯರು ನಾಪತ್ತೆಯಾಗಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆಪ್ಟೆಂಬರ್ 6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಕ್ತೇಶ್ವರಿ , ವರುಣಿಕಾ, ನಂದಿನಿ ನಾಪತ್ತೆಯಾಗಿರುವ ಬಾಲಕಿಯರಾಗಿದ್ದಾರೆ. ಕಾಣೆಯಾಗಿ 9 ದಿನವಾದರೂ ಇನ್ನೂ ಬಾಲಕಿಯರು ಪತ್ತೆಯಾಗಿಲ್ಲ. ಮಕ್ಕಳ ಬಗ್ಗೆ ಕೇಳಿದರೇ ಆಡಳಿತ ಮಂಡಳಿಯವರು ಸರಿಯಾಗಿ ಹೇಳುತ್ತಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದಾರೆ. ಮನೆಯಲ್ಲಿ ಸಮಸ್ಯೆ ಎಂದು ಪತ್ರ?ಮನೆಯಲ್ಲಿ ಸಮಸ್ಯೆ ಹಾಗಾಗಿ ಮನೆ ಬಿಟ್ಟು ಹೋಗ್ತಿದ್ದೀವಿ. ಓದಲು ಇಷ್ಟವಿಲ್ಲ ಹಾಗಾಗಿ ಮನೆ ಬಿಟ್ಟು ಹೋಗ್ತಿದ್ದೀವಿ ಎಂದು ಪತ್ರ ಬರೆದಿದ್ದಾರಂತೆ ಬಾಲಕಿಯರು ಎಂಬ ಮಾಹಿತಿ ಸಿಕ್ಕಿದೆ. ಶಕ್ತೀಶ್ವರಿ 9 ನೇ ತರಗತಿ, ವರುಣಿಕ 10 ನೇ ತರಗತಿ, ನಂದಿನಿ 9 ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯರಾಗಿದ್ದಾರೆ. ಬೆಂಗಳೂರಿನ ಪುಲಕೇಶಿ ನಗರದಿಂದ ನಾಪತ್ತೆಯಾಗಿರುವ ವಿದ್ಯಾರ್ಥಿಗಳ ಪತ್ತೆಗೆ ವಿಶೇಷ ತಂಡವನ್ನು…
ಸವದತ್ತಿ : ಸವದತ್ತಿ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರು ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಪಾಸಣೆಗಾಗಿ ಚೆನ್ನೈಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಕ್ಕರೆ ಕಾಯಿಲೆ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಚೆನ್ನೈಯಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರು. ಹಾಗಾಗಿ, ಚೆನ್ನೈಯಲ್ಲಿ ಐಎಎಸ್ ಅಧಿಕಾರಿಯಾಗಿರುವ ಮಾಮನಿಯವರ ಸಹೋದರ ರಾಜಣ್ಣ ಮಾಮನಿ ಪುತ್ರನ ಮನೆಯಲ್ಲಿದ್ದು ವಿಶ್ರಾಂತಿ ಪಡೆದು ಮತ್ತೊಮ್ಮೆ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮತ್ತೊಮ್ಮೆ ತಪಾಸಣೆ ನಡೆಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಶಾಸಕರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಮಾಮನಿ ಕುಟುಂಬದ ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ್ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್(26) ಮತ್ತು ಎಚ್.ಕೆ. ಸುಶೀಲಾ (38) ಮೃತರು. ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಫಾರುಕ್ ಎಂಬುವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೆ ಅವರಿಗೆ ಸಂಕಷ್ಟ ಎದುರಾಗಿದೆ. ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಯಡಿಯೂರಪ್ಪಗೆ ಸಂಕಷ್ಟ ಉಂಟಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಪಕ್ಷವು ಪಕ್ಷಾಂತರದ ಯತ್ನವನ್ನು ತಡೆದ ಎರಡು ತಿಂಗಳ ನಂತರ, 11 ಶಾಸಕರಲ್ಲಿ ಎಂಟು ಮಂದಿ ಶಾಸಕರು ಬಿಜೆಪಿ ಸೇರಿದ್ದಾರೆ. ಹಿರಿಯ ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಈ ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆಯ ನಡುವೆಯೇ ಗೋವಾದಲ್ಲಿನ ಸಾಮೂಹಿಕ ಪಕ್ಷಾಂತರವು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಜುಗರವನ್ನುಂಟುಮಾಡಿದೆ. ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ದಿಗಂಬರ ಕಾಮತ್, ಮೈಕಲ್ ಲೋಬೋ, ದೇಲಿಲಾ ಲೋಬೋ, ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ಈಗ ಕೇವಲ 3 ಶಾಸಕರನ್ನು ಹೊಂದಿದ್ದು, ಬಿಜೆಪಿ ಸಂಖ್ಯೆ 28 ಕ್ಕೆ ಏರಿದೆ. ಕಾಂಗ್ರೆಸ್ ನ ಎಲ್ಲಾ ಶಾಸಕರು ಪ್ರಧಾನಿ ಮೋದಿ ಅವರ ಕೈಗಳನ್ನು ಬಲಪಡಿಸಲು ಪ್ರಯತ್ನಿಸುತ್ತಾರೆ ಎಂದು ಲೋಬೋ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬಳ್ಳಾರಿ: ಕಾಲುವೆಗೆ ಆಟೋ ಪಲ್ಟಿಯಾಗಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್ ಬಳಿ ನಡೆದಿದೆ. ಆಟೋದಲ್ಲಿ 9 ಕಾರ್ಮಿಕರು ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ತುಂಗಭದ್ರಾ ಕಾಲುವೆಗೆ ಆಟೋ ಪಲ್ಟಿಯಾಗಿದೆ. ಘಟನೆ ಸಂಬಂಧ ನಿಂಗಮ್ಮ, ದುರ್ಗಮ್ಮ, ಪುಷ್ಪಾವತಿ ಎಂಬುವವರ ಮೃತದೇಹಗಳು ಪತ್ತೆಯಾಗಿದ್ದು ಹೇಮಾವತಿ, ಶಿಲ್ಪಾ, ಮಹೇಶ್, ಭೀಮಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲು ತಪ್ಪಿಸಲು ಹೋಗಿ ಕಾಲುವೆಗೆ ಆಟೋ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕೋಡಿ: ಮಹಾರಾಷ್ಟ್ರ ಘಟ್ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕೃಷ್ಣಾ ನದಿ ಅಪಾಯ ಮಟ್ಟ ಮೀರಿ ಹರಿಯುವತ್ತಿರುವ ಹಿನ್ನೆಲೆ ಕುಡಚಿ- ಉಗಾರ್ ಬ್ರಿಜ್ಡ್ ಮುಳುಗಡೆ ಹಂತಕ್ಕೆ ತಲುಪಿದೆ ಬ್ರಿಡ್ಜ್ ಮುಳುಗಡೆಗೆ ಇನ್ನು 2 ಅಡಿ ಮಾತ್ರ ಬಾಕಿ ಇದ್ದು ಕೃಷ್ಣಾ ನದಿ ಅಕ್ಕ ಪಕ್ಕದ ಜನೆತೆಗೆ ಜಾಗೃತಿ ವಹಿಸುವಂತೆ ಸ್ಥಳೀಯ ತಾಲೂಕಾಡಳಿತ ಎಚ್ಚರಿಕೆ ನೀಡಿದೆ, ಕೊಯ್ನ್ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಕೃಷ್ಣಾ ನದಿ ಒಳ ಹರಿವಿನ ಪ್ರಮಾಣ ವೇಗದಲ್ಲಿದೆ. ಆದ್ದರಿಂದ ಸಮೀಪದ ಜನರು ಜಾಗ್ರತೆ ವಹಿಸಲು ಅಧಿಕಾರಿಗಳು ಸೂಚಿಸಿದ್ದಾರೆ, ಇನ್ನು ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು ಹಲವಾರು ಪ್ರದೇಶಗಳು ಮುಳುಗಡೆಯಾಗಿವೆ. ಅಂತೆಯೇ ಕೆಲವೆಡೆ ವರುಣರಾಯ ನಿಲುಗಡೆಯಿಂದ ಪರಿಸ್ಥಿತಿ ಯಥಾಸ್ಥಿತಿಗೆ ಮರುಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಪಂಪ್ ಸೆಟ್ ತರಲು ಹೋಗಿದ್ದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಮುಧೋಳ ತಾಲ್ಲೂಕಿನ ಒಂಟಗೋಡಿ ಗ್ರಾಮದಲ್ಲಿ ನಡೆದಿದೆ. ವಿಜಯ್ ಬಿರಾದಾರ (19) ಮೃತ ದುರ್ದೈವಿ. ಯುವಕ ದೊಡ್ಡಪ್ಪನ ಜೊತೆ ಪಂಪ್ಸೆಟ್ ತರಲು ಹೋಗಿದ್ದಾಗ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪೊಲೀಸ್ ಅಧಿಕಾರಿಗಳು ಹಾಗೂ ಮುಧೋಳ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಶವವನ್ನು ಹೊರ ತೆಗೆದಿದ್ದಾರೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಪೂರ್ಣ ಪ್ರಮಾಣ ಮನೆ ಬಿದ್ದವರಿಗೆ 24 ಗಂಟೆ ಒಳಗೆ ಪರಿಹಾರ ಕೊಡ್ತಾ ಇದೀವಿ. ಇಷ್ಟೊಂದು ಪ್ರಮಾಣದಲ್ಲಿ ಯಾರು ಹಣವನ್ನು ಕೊಟ್ಟಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾವು 2019ರಲ್ಲಿ 46,959 ಮನೆಗಳಿಗೆ 828.67 ರೂ. ಪರಿಹಾರ ಕೊಟ್ಟಿದ್ದೇವೆ. 2019ರಲ್ಲೇ ಬೆಳಗಾವಿಗೆ 120.05 ಕೋಟಿ ರೂ. ಕೊಟ್ಟಿದ್ದೇವೆ. ಇಷ್ಟು ಪ್ರಮಾಣದಲ್ಲಿ ಪರಿಹಾರವನ್ನು 75 ವರ್ಷದಲ್ಲಿ ಯಾರು ಒಂದೇ ಜಿಲ್ಲೆಗೆ ಕೊಟ್ಟಿಲ್ಲ. ಮೂರು ವರ್ಷದಲ್ಲೇ ಬೆಳಗಾವಿಗೆ 1726 ಕೋಟಿ ರೂಪಾಯಿ ನೀಡಿದ್ದೇವೆ ಎಂದರು. ಬೆಳೆ ಪರಿಹಾರದಲ್ಲಿ ನಮಗೆ ಹೊಲಕ್ಕೆ ಹೋಗಲು ಆಗ್ತಾ ಇಲ್ಲ. ಸರ್ವೇ ಮಾಡಲು ಆಗ್ತಾ ಇಲ್ಲ.ಹನಿಶ್ಚಿತವಾಗಿ ಸರ್ವೇ ಮಾಡ್ಬೇಕು ಅಂದ್ರೆ ಭೂಮಿ ಒಣಗಬೇಕು ಎಂದು ಹೇಳಿದರು. ಈ ವೇಳೆ ಶಾಸಕ ಶಿವಾನಂದ್ ಮಾತನಾಡಿ , ಮೊದಲನೇ ಕಂತಿನ ಹಣ ಬಿಡುಗಡೆ ಆಗಿದೆ. ಆದರೆ, ಎರಡು ಮತ್ತು ಮೂರನೇ ಕಂತಿನ ಹಣ ಆದಷ್ಟು ಬೇಗ ಬಿಡುಗಡೆ ಮಾಡ್ಬೇಕು ಎಂದು ಮನವಿ…
ಬೆಳಗಾವಿ : ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿದ್ದ ಬೆಳೆಹಾನಿಯ ಕುರಿತು ತಕ್ಷಣವೇ ಜಂಟಿ ಸಮೀಕ್ಷೆ ಕೈಗೊಂಡು 11,234 ರೈತರಿಗೆ ಒಟ್ಟಾರೆ 17.01 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜುಲೈ ಹಾಗೂ ಆಗಸ್ಟ್ ಮಾಹೆ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು.ತಕ್ಷಣವೇ ಕಾರ್ಯಪ್ರವೃತ್ತಗೊಂಡ ಜಿಲ್ಲಾಡಳಿತವು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅತ್ಯಂತ ತ್ವರಿತವಾಗಿ ರೈತರಿಗೆ ಪರಿಹಾರ ಒದಗಿಸಿದೆ. ಜಿಲ್ಲೆಯಲ್ಲಿ ಹೆಸರು, ಮೆಕ್ಕೆಜೋಳ, ಹತ್ತಿ, ಸೂರ್ಯಕಾಂತಿ, ಸೋಯಾಬಿನ್ ಮತ್ತಿತರ ಬೆಳೆಹಾನಿಯಾಗಿತ್ತು.ಜಂಟಿ ಸಮೀಕ್ಷೆ ಆಧರಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ಆಯಾ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಲಾಗಿದ್ದು, ನಾಳೆಯೇ ರೈತರ ಖಾತೆಗೆ ಹಣ ಜಮೆಯಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲೆಯ ಒಟ್ಟು 11,234 ರೈತರ ಖಾತೆಗೆ ಒಟ್ಟಾರೆ 17,01,01,195 ರೂಪಾಯಿ ಜಮೆಯಾಗಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…