Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ತ್ರಿಪುರಾ : 15 ವರ್ಷದ ಬಾಲಕನೊಬ್ಬ ತನ್ನ ತಾಯಿ ಮತ್ತು ಸಹೋದರಿ ಸೇರಿದಂತೆ ಕುಟುಂಬದ ನಾಲ್ವರನ್ನು ಕೊಂದು, ಸೆಪ್ಟಿಕ್ ಟ್ಯಾಂಕ್ ನಲ್ಲಿ ಶವಗಳನ್ನು ಹೂತು ಹಾಕಿದ ಆಘಾತಕಾರಿ ಘಟನೆ ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ನಡೆದಿದೆ. ಧಲೈ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ದುರೈ ಶಿಬ್ ಬಾರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಅಜ್ಜ ಬಾದಲ್ ದೇಬನಾಥ್ (70), ತಾಯಿ ಸಮಿತಾ ದೇಬನಾಥ್ (32), ಚಿಕ್ಕಮ್ಮ ರೇಖಾ ದೇಬ್ (42) ಮತ್ತು 10 ವರ್ಷದ ಬಾಲಕಿ ಕೊಲೆಯಾಗಿದ್ದಾರೆ. ಆರೋಪಿ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ನಾಲ್ವರನ್ನು ಕೊಲೆ ಮಾಡಲಾಗಿದೆ. ಶವಗಳು ಮನೆಯ ಹಿಂದೆ ಸೆಪ್ಟಿಕ್ ಟ್ಯಾಂಕ್ ನಲ್ಲಿ ದೊರೆತಿವೆ. ಬಸ್ ಕಂಡೆಕ್ಟರ್ ಆಗಿರುವ ಬಾಲಕನ ತಂದೆ ಹರದನ್ ದೇಬನಾಥ್ ಮಧ್ಯರಾತ್ರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿ ಆನ್ ಲೈನ್ ಗೇಮ್ ವ್ಯಸನಿಯಾಗಿದ್ದ. ಇದಕ್ಕಾಗಿ ಮನೆಯಲ್ಲಿ ಆಗಾಗ್ಗೆ…
ಕಾರವಾರ: ಪಾಕಿಸ್ತಾನದಿಂದ ಅಕ್ರಮವಾಗಿ ಬಂದು ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ನೆಲಸಿದ್ದ ಪಾಕ್ ಮಹಿಳೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಖತೀಜಾ ಮೆಹರೀನ್ ಗೆ ಧಾರವಾಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ವಿಚಾರವಾಗಿ ಧಾರವಾಡ ಪೀಠದಲ್ಲಿ ವಿಚಾರಣೆ ಮಾಡಲಾಗಿದ್ದು, 1 ಲಕ್ಷ ಮೌಲ್ಯದ ಬಾಂಡ್ ಸಲ್ಲಿಸಬೇಕು, ಸಾಕ್ಷಿ ನಾಶಕ್ಕೆ ಯತ್ನಿಸಬಾರದು. ಪೂರ್ವಾನುಮತಿ ಇಲ್ಲದೇ ಬೇರೆ ಸ್ಥಳಕ್ಕೆ ಹೋಗಬಾರದು. ಹೀಗೆ ಹಲವು ಷರತ್ತು ವಿಧಿಸಿ ಪಾಕಿಸ್ತಾನ ಮಹಿಳೆಗೆ ಜಾಮೀನು ಮಂಜೂರು ಮಾಡಲಾಗಿದೆ. ಪಾಕ್ ಮಹಿಳೆ ಪಾಸ್ಪೋರ್ಟ್ ಹಾಗೂ ಇತರೆ ಯಾವುದೇ ದಾಖಲೆ ಇಲ್ಲದೇ ಭಾರತಕ್ಕೆ ಮಹಿಳೆ ನುಸುಳಿದ್ದಳು. ಈ ಹಿನ್ನೆಲೆ 2021ರಲ್ಲಿ ಗುಪ್ತಚರ ಇಲಾಖೆ, ಪೊಲೀಸರು ಖತೀಜಾಳನ್ನು ವಶಕ್ಕೆ ಪಡೆದಿದ್ದರು. ದಿ.ಜಾವೇದ್ ರುಕ್ನುದ್ದೀನ್ ಜೊತೆ ಮದುವೆಯಾಗಿದ್ದು, ಮೂವರು ಮಕ್ಕಳನ್ನು ದಂಪತಿ ಹೊಂದಿದ್ದರು. ಆದರೆ ಇತ್ತೀಚೆಗೆ ಹೃದಯಾಘಾತದಿಂದ ಪತಿ ಜಾವೇದ್ ಮೃತಪಟ್ಟಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ವಾಷಿಂಗ್ಟನ್: ಸಂಸತ್ತಿನ ಕೆಳಮನೆ ಜನಪ್ರತಿನಿಧಿ ಸಭೆಗೆ ನಡೆಯುತ್ತಿರುವ ಮಧ್ಯಂತರ ಚುನಾವಣೆಯಲ್ಲಿ ಬೆಳಗಾವಿ ಮೂಲದ ಉದ್ಯಮಿ ಥಾಣೇದಾರ್ ಸೇರಿದಂತೆ ಐವರು ಭಾರತೀಯರು ರೇಸ್ ನಲ್ಲಿದ್ದಾರೆ. ಅಲ್ಲದೇ ಭಾರತೀಯರೇ ಗೆಲ್ಲುವ ಸಾಧಿಸಲಿದ್ದಾರೆ ಎನ್ನಲಾಗಿದೆ. ಬೆಳಗಾವಿ ಮೂಲದವರಾದ ಥಾಣೆದಾರ್ ಉದ್ಯಮಿಯಾಗಿದ್ದು, ಹಲವು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಧ್ಯಂತರ ಚುನಾವಣೆಯಲ್ಲಿ ಇವರು ಕ್ಯಾಲಿಫೋರ್ನಿಯಾದ 7ನೇ ಜಿಲ್ಲೆಯಿಂದ ಸ್ಪರ್ಧಿಸುತ್ತಿದ್ದಾರೆ. ಇವರಲ್ಲದೇ ಅಮಿ ಬೇರಾ, ರಾಜಾ ಕೃಷ್ಣಮೂರ್ತಿ , ರೋ ಖನ್ನಾ ಮತ್ತು ಪ್ರಮಿಳಾ ಜೈಪಾಲ್ ಸಹ ವಿವಿಧ ಕ್ಷೇತ್ರಗಳಿಂದ ಚುನಾವಣಾ ರೇಸ್ನಲ್ಲಿದ್ದಾರೆ. ಇವರಲ್ಲಿ ಬೇರಾ ಅತ್ಯಂತ ಹಿರಿಯರಾಗಿದ್ದು, ಈವರೆಗೆ 6 ಬಾರಿ ಗೆಲುವು ಸಾಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೋಲಾರ : ಹೆಣ್ಣು ಮಗು ಹುಟ್ಟಿದ್ದಕ್ಕೆ ತಂದೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಶೆಟ್ಟಿಹಳ್ಳಿ ಗ್ರಾಮದ ಲೋಕೇಶ್ (34) ನೇಣಿಗೆ ಶರಣಾದ ವ್ಯಕ್ತಿ, ಮತ್ತೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕೇಶ್ ಗೆ ಈ ಮೊದಲು ಮೂವರು ಹೆಣ್ಣು ಮಕ್ಕಳು ಜನಿಸಿದ್ದರು. ಮತ್ತೆ 4 ನೇ ಮಗುವೂ ಕೂಡ ಹೆಣ್ಣು ಆಗಿರುವುದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ರಮೇಶ್ ಜಾರಕಿಹೊಳಿ ಜೆಡಿಎಸ್ ಗೆ ಬಂದರೆ ಸ್ವಾಗತ, ಜೆಡಿಎಸ್ ಪಕ್ಷ ಜನರಿಗಾಗಿ ಇರುವ ಪಕ್ಷ. ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ್ ಜಾರಕಿಹೊಳಿ ಅಥವಾ ಯಾರೇ ಬಂದರೂ ಸ್ವಾಗತ ಎಂದರು. ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜೆಡಿಎಸ್ ಕೆಲಸ ಮಾಡುತ್ತಿದೆ. ಇದು ಸರ್ವಜನಾಂಗದ ಶಾಂತಿಯ ತೋಟ ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ವಿಧಾನಸಭಾ ಚುನಾವಣೆಯಲ್ಲಿ ಈ ಭಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷ ಸಂಘಟಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬರುತ್ತಿದ್ದಾರೆ. ಜನರು ಸಾವಿರಾರು ಸಂಖ್ಯೆಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬಾಹುಬಲಿ 2 ಬಾಕ್ಸ್ ಆಫೀಸ್ ಗಳಿಕೆ ದಾಖಲೆಯನ್ನು ಕನ್ನಡದ ಕಾಂತಾರ ಸಿನೆಮಾ ಸರಿಗಟ್ಟಿದೆ. ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ನಿರ್ದೇಶನದ ಬಾಹುಬಲಿ 2 ಸಿನೆಮಾ ಪ್ರದರ್ಶನದ ಐದನೇ ವಾರದಲ್ಲಿ 40 ಕೋಟಿ ರೂ. ಗಳಿಸಿತ್ತು. ರಿಷಬ್ ಶೆಟ್ಟಿ ಅವರ ಕಾಂತಾರ ಐದನೇ ವಾರದ ಪ್ರದರ್ಶನದಲ್ಲಿ 65 ಕೋಟಿ ರೂ. ಗಳಿಸಿದೆ. ಅಂದ ಹಾಗೆ ಹಿಂದಿ ಸೇರಿದಂತೆ ದೇಶದ ಇತರ ಪ್ರಾದೇಶಿಕ ಭಾಷೆಗಳಲ್ಲಿ ಸಿನೆಮಾ ಡಬ್ ಮಾಡಲಾಗಿದ್ದು, ಪ್ರಪಂಚದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಕಾಂತಾರ ಸಿನಿಮಾದ ನಾಯಕ ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಾಯಕ ನಟಿ ಸಪ್ತಮಿ ಗೌಡ ಸೇರಿದಂತೆ ಚಿತ್ರ ತಂಡ ದಿಲ್ಲಿಯ ಇಂಡಿಯಾ ಗೇಟ್ಗೆ ಶನಿವಾರ ಭೇಟಿ ನೀಡಿ, ತಮ್ಮ ಸಿನೆಮಾ ಪ್ರಮೋಷನ್ ಕೈಗೊಂಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕನಕದಾಸ ಜಯಂತಿ, ಗುರುನಾನಕ್ ಜಯಂತಿ ಸೇರಿದಂತೆ ಹಲವು ಹಬ್ಬಗಳ ಹಿನ್ನೆಲೆಯಲ್ಲಿ ನಾಳೆಯಿಂದ ದೇಶದಲ್ಲಿ ಸತತ 5 ದಿನಗಳ ಕಾಲ ಬ್ಯಾಂಕುಗಳಿಗೆ ರಜೆ ಇರಲಿವೆ. ನವೆಂಬರ್ 6 : ಭಾನುವಾರ (ವಾರದ ರಜೆ), ನವೆಂಬರ್ 8 : ಗುರುನಾನಕ್ ಜಯಂತಿ, ವಂಗ್ಲಾ ಉತ್ಸವ, ನವೆಂಬರ್ 11 : ಕನಕದಾಸ ಜಯಂತಿ, ನವೆಂಬರ್ 12 : ಶನಿವಾರ (ತಿಂಗಳ ಎರಡನೇ ಶನಿವಾರ), ನವೆಂಬರ್ 13 : ಭಾನುವಾರ (ವಾರದ ರಜೆ), ನವೆಂಬರ್ 20 : ಭಾನುವಾರ (ವಾರದ ರಜೆ) ಹೀಗೆ ಸರಣಿ ರಜೆ ಹಿನ್ನೆಲೆಯಲ್ಲಿ ಬ್ಯಾಂಕ್ ಗ್ರಾಹಕರು ತಮ್ಮ ಕೆಲಸಗಳನ್ನು ಮುಂಚಿತವಾಗಿ ಪ್ಲಾನ್ ಮಾಡಿಕೊಳ್ಳಬೇಕಿದೆ. ಇವುಗಳ ಹೊರತಾಗಿ, ಭಾನುವಾರ ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರದಂದು ಬ್ಯಾಂಕುಗಳು ಮುಚ್ಚಿರುತ್ತವೆ. ನವೆಂಬರ್ 12, ನವೆಂಬರ್ 13, ನವೆಂಬರ್ 20, ನವೆಂಬರ್ 26 ಮತ್ತು ನವೆಂಬರ್ 27 ಈ ದಿನಗಳಲ್ಲಿ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿ ತಿರುಮಣಿ ಗ್ರಾ.ಪಂ. ವ್ಯಾಪ್ತಿಯ ಆರ್.ಅಚ್ಚಮ್ಮನಹಳ್ಳಿ ಗ್ರಾಮದ ಬಳಿ ಬೆಳೆಯಲಾಗಿದ್ದ ಸುಮಾರು 61 ಕೆ.ಜಿ. ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ಗ್ರಾಮದ ಸಿದ್ದಪ್ಪ(67) ಅವರನ್ನು ಬಂಧಿಸಲಾಗಿದೆ. ಸೋಲಾರ್ ಪ್ಲಾಂಟ್ ಬ್ಲಾಕ್ 34 ಪಕ್ಕದ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಮಾಹಿತಿ ಆಧರಿಸಿ ಸರ್ಕಲ್ ಇನ್ ಸ್ಪೆಕ್ಟರ್ ಕಾಂತರೆಡ್ಡಿ ನೇತ್ರತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿದೆ. ಆರೋಪಿಯನ್ನು ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿರುಮಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಖರ್ಗೆ ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೆಪಿಸಿಸಿ ವತಿಯಿಂದ ಇಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದ್ದು, ಇಂದು ಮಧ್ಯಾಹ್ನ 2:30 ಕ್ಕೆ ಸಮಾವೇಶ ಆರಂಭವಾಗಲಿದೆ.ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವ್ಯಾಜ್ಯಗಳ ಶೀಘ್ರ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ಸೇರಿದಂತೆ ಇತರೆ ಪೂರಕ ವ್ಯವಸ್ಥೆಗಳನ್ನು ಪೂರೈಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು. ಬೆಂಗಳೂರಿನ ವಕೀಲರ ಸಂಘ, ಲೋಕೋಪಯೋಗಿ ಇಲಾಖೆ ಹಾಗೂ ಕಟ್ಟಡ ಸಮಿತಿ ವತಿಯಿಂದ ಶನಿವಾರ ನಡೆದ ವಕೀಲರ ಭವನದ 5, 6 ಮತ್ತು 7ನೇ ಮಹಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಸಮಾಜದಲ್ಲಿ ಬಹಳಷ್ಟು ವ್ಯಾಜ್ಯಗಳಿವೆ. ಇಲ್ಲಿ ನ್ಯಾಯ ದೊರೆಯುವ ವ್ಯವಸ್ಥೆಯಲ್ಲಿಯೂ ಬದಲಾವಣೆ ಆಗಬೇಕಿದೆ. ಇದಕ್ಕಾಗಿ ಲೋಕ ಅದಾಲತ್ ಹಾಗೂ ಮಧ್ಯಸ್ಥಿಕೆಯಿಂದ ವ್ಯಾಜ್ಯಗಳನ್ನು ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು. ಬೆಂಗಳೂರು ವಕೀಲರ ಲೈಬ್ರರಿ ಡಿಜಿಟಲೀಕರಣಕ್ಕೆ ಸಹಕಾರ : ವಕೀಲರ ಭವನ ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿ, ಕುವೆಂಪು ರವರ ಹೆಸರಿಟ್ಟಿರುವುದು ಸಂತೋಷ ತಂದಿದೆ. ವಕೀಲರ ಭವನದಲ್ಲಿ ಮಹಿಳಾ ವಕೀಲರಿಗೆ ಪ್ರತ್ಯೆಕ ಕೊಠಡಿ ಮಾಡಿರುವುದು ಸಂತಸ ತಂದಿದೆ. ಮೊದಲು ದೊಡ್ಡ ಲೈಬ್ರರಿ ಇದ್ದರೆ ದೊಡ್ಡ ವಕೀಲ ಅಂತ ಭಾವಿಸುತ್ತಿದ್ದರು.ಇಂದು ಸಣ್ಣ ಗ್ರಾಮಪಂಚಾಯತಿಯ ಲೈಬ್ರರಿಯೂ ಡಿಜಿಟಲೈಸ್ ಆಗಿದೆ. ಬೆಂಗಳೂರು ವಕೀಲರ ಲೈಬ್ರರಿಯನ್ನು…