Subscribe to Updates
Get the latest creative news from FooBar about art, design and business.
- ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
- ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
- ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
- ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
- ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
- ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
- ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
Author: admin
ರಾಜ್ಯದಲ್ಲಿ ಜೆಡಿಎಸ್ ಅಲೆ ಸೃಷ್ಠಿಯಾಗಿದೆ. ಹಳ್ಳಿ ಹಳ್ಳಿಗಳಲ್ಲಿ ಜೆಡಿಎಸ್ ಗೆ ಬೆಂಬಲ ವ್ಯಕ್ತವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಜೆಡಿಎಸ್ ಅಲೆ ಸೃಷ್ಠಿಯಾಗಿದೆ. ಹೆಚ್.ಡಿ ಕುಮಾರಸ್ವಾಮಿ ಸುಮ್ಮನೆ ಘೋಷಣೆ ಮಾಡ್ತಾನೆ ಅಂತಾರೆ. ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಅಂತಾ ಟೀಕೆ ಮಾಡುತ್ತಾರೆ. ಜೆಡಿಎಸ್ ಗೆ ಹಳ್ಳಿಗಳಲ್ಲಿ ಜನರ ಬೆಂಬಲ ವ್ಯಕ್ತಾಗಿದೆ. ಗೊಂದಲ ಸರಿಪಡಿಸಿ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದರು. ಜನರ ರಕ್ತಹೀರುವವರು ಎಂದಿದ್ದ ಸಚಿವ ಅಶ್ವಥ್ ನಾರಾಯಣ್ ಗೆ ತಿರುಗೇಟು ನೀಡಿದ ಹೆಚ್.ಡಿ ಕುಮಾರಸ್ವಾಮಿ, ಯಾರ ಬಗ್ಗೆ ಹೇಳಿದ್ದಾರೆ ಅಂತಾ ಗೊತ್ತಿಲ್ಲ. ನಮಗೆ ಅವರಷ್ಟು ತಿಳುವಳಿಕೆ ಇಲ್ಲ. ರಕ್ತ ಪಿಪಾಸುಗಳು ಅಂತಾ ಹೇಳಿದ್ದಾರೆ. ನಿನ್ನೆ ಬಿಜೆಪಿಯವರು ಯಾರನ್ನೋ ಸೇರಿಸಿಕೊಂಢ್ರಲ್ಲ ಅವರ ಇತಿಹಾಸ ತೆಗೆದು ನೋಡಿದ್ರೆ ಗೊತ್ತಾಗುತ್ತೆ ಯಾರು ರಕ್ತ ಹೀರುತ್ತಾ ಇದ್ದರು ಅಂತಾ ಎಂದು ಟಾಂಗ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣಾ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಅಭಿಷೇಕ್ ಮತ್ತು ಮಾರುತಿಗೌಡ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಕಾರ್ಡ್ ಹಂಚಿಕೆ ಏರಿಯಾ ಮ್ಯಾಪಿಂಗ್ ಮಾಡುತ್ತಿದ್ದರು. ಶಿವಾಜಿನಗರ, ಚಿಕ್ಕಪೇಟೆ ಪ್ರದೇಶದಲ್ಲಿ ಮ್ಯಾಪಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳು ರವಿಕುಮಾರ್ ಹೇಳುತ್ತಿದ್ದ ಕೆಲಸ ಮಾಡುತ್ತಿದ್ದರು. ಚಿಲುಮೆ ಸಂಸ್ಥೆಯಿಂದ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಈವರೆಗೆ 14 ಆರೋಪಿಗಳನ್ನ ಬಂಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗೂಗಲ್ ಕ್ರೋಮ್ವೆಬ್ ಬ್ರೌಸರ್ನಲ್ಲಿ ಭದ್ರತಾ ಲೋಪ ಕಂಡುಬಂದಿದ್ದು, ಕೂಡಲೇ ಅಪ್ಡೇಟ್ ಮಾಡಿಕೊಳ್ಳುವಂತೆ ಸಂಸ್ಥೆಯ ಸೈಬರ್ ಭದ್ರತೆ ಮತ್ತು ಸೆಕ್ಯುರಿಟಿ ವಿಭಾಗದ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಗೂಗಲ್ ಕ್ರೋಮ್ ಬಳಕೆದಾರರಿಗಾಗಿ ನೂತನ ಅಪ್ಡೇಟ್ ಒಂದನ್ನು ಬಿಡುಗಡೆ ಮಾಡಿದೆ. ಅದನ್ನು ಡೌನ್ಲೋಡ್ ಮಾಡಿಕೊಂಡು, ಅಪ್ಡೇಟ್ ಮಾಡಿಕೊಳ್ಳಿ ಎಂದು ಕಂಪೆನಿ ತಿಳಿಸಿದೆ. ಲಿನಕ್ಸ್ ಮತ್ತು ವಿಂಡೋಸ್ ಬಳಕೆದಾರರಿಗೆ 107.0.5304.121/.122 ಹೊಸ ಅಪ್ಡೇಟ್ ಲಭ್ಯವಿದ್ದು, ಬಳಕೆದಾರರು ಮೆನುವಿಗೆ ಹೋಗಿ ಅಲ್ಲಿರುವ ಸೆಟ್ಟಿಂಗ್ಸ್ ಆಯ್ಕೆ ಮೂಲಕ ಎಬೌಟ್ ಕ್ರೋಮ್ ಎಂದಿರುವುದನ್ನು ಕ್ಲಿಕ್ ಮಾಡಬೇಕು. ಬಳಿಕ ಗೂಗಲ್ ಕ್ರೋಮ್ ಇತ್ತೀಚಿನ ಆವೃತ್ತಿಗೆ ಅಪ್ಡೇಟ್ ಮಾಡಿಕೊಳ್ಳಿ. ಹೊಸ ಅಪ್ಡೇಟ್ ಬಳಕೆ ಮಾಡುವುದರಿಂದ ಹ್ಯಾಕಿಂಗ್ ಸಾಧ್ಯತೆಯನ್ನು ತಪ್ಪಿಸಬಹುದು. ಕ್ರೋಮ್ ಮೂಲಕ ವೈರಸ್, ಮಾಲ್ವೇರ್ ನಿಮ್ಮ ಕಂಪ್ಯೂಟರ್ ಪ್ರವೇಶಿಸುವುದನ್ನು ತಡೆಯಬಹುದು ಎಂದು ಸೈಬರ್ ಭದ್ರತೆ ಮತ್ತು ಸೆಕ್ಯುರಿಟಿ ವಿಭಾಗದ ತಜ್ಞರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 6 ರಿಂದ 12 ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲು ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ಮಧ್ಯಪ್ರದೇಶದ ವೈದ್ಯೆ, ಸಾಮಾಜಿಕ ಕಾರ್ಯಕರ್ತೆ ಜಯಾ ಠಾಕೂರ್ ಅವರ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಪೀಠವು, ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಶುಚೀಕರಣ ಮತ್ತು ನೈರ್ಮಲ್ಯದ ಪ್ರಮುಖ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಾಯವನ್ನು ಕೋರಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಎರಡನೇ ವಿವಾಹಕ್ಕೆ ನಿರಾಕರಿಸಿದ್ದಕ್ಕೆ ಮಾಜಿ ಪ್ರೇಯಸಿಗೆ ಆಟೋ ಚಾಲಕ ಚಾಕು ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಇಂದಿರಾನಗರ ನಿವಾಸಿ ಅಮುದಾ ಚೂರಿ ಇರಿತದಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಚಾಲಕ ನವಾಝ್ ಚೂರಿ ಇರಿದು ಪರಾರಿಯಾಗಿದ್ದಾನೆ. ಕೆಲ ವರ್ಷಗಳ ಹಿಂದೆ ಅಮುದಾ ಹಾಗೂ ನಯಾಝ್ ಪ್ರೀತಿಸುತ್ತಿದ್ದರು. ಈ ನಡುವೆ ನವಾಝ್ ಬೇರೆ ಮದುವೆಯಾಗಿತ್ತು. ಅಮುದಾ ಏಳುಮಲೈ ಎಂಬಾತನ ಜೊತೆ ಮದುವೆಯಾಗಿದ್ದರು. ಇತ್ತೀಚೆಗೆ ಮಾಜಿ ಪ್ರೇಮಿಗಳು ಪರಸ್ಪರ ಸಂಪರ್ಕಕ್ಕೆ ಬಂದಿದ್ದು, ನಿನ್ನ ಗಂಡ ಸರಿ ಇಲ್ಲ. ಹಾಗಾಗಿ ಎರಡನೇ ಮದುವೆ ಆಗುವಂತೆ ನವಾಝ್ ಒತ್ತಡ ಹೇರಿದ್ದಾನೆ. ಆದರೆ ಇದಕ್ಕೆ ಅಮುದಾ ನಿರಾಕರಿಸಿದ್ದರಿಂದ ಈ ಕೃತ್ಯ ಎಸಗಿದ್ದಾನೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪ್ರೇಯಸಿ ಶ್ರದ್ಧಾ ವಾಕರ್ ಳ ಹತ್ಯೆ ಮಾಡಿದ ಅಫ್ತಾಬ್ ಪೂನೂವಾಲಾನನ್ನು ಫೋರೊನ್ಸಿಕ್ ಲ್ಯಾಬ್ ಗೆ ಕರೆದೊಯ್ಯುವಾಗ ಗುಂಪೊಂದು ವಾಹನದ ಮೇಲೆ ದಾಳಿ ಮಾಡಿದ್ದು, ನಮ್ಮ ವಶಕ್ಕೆ ನೀಡಿದರೆ 70 ತುಂಡುಗಳಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದೆ. ಸೋಮವಾರ ಸಂಜೆ ಸುಮಾರು 15 ಮಂದಿಯ ಗುಂಪು ಮಾರಕಾಸ್ತ್ರಗಳಿಂದ ವಾಹನದ ಮೇಲೆ ದಾಳಿ ಮಾಡಿದೆ. ಖಡ್ಗವನ್ನು ಹಿಡಿದಿದ್ದ ಗುಂಪು ವಾಹನವನ್ನು ಹಿಂಬಾಲಿಸಿಕೊಂಡು ಬಂದು ಈ ಕೃತ್ಯ ಎಸಗಿದೆ. ನಮ್ಮ ಸೋದರಿಯನ್ನು ಆಫ್ತಾಬ್ 35 ತುಂಡುಗಳಾಗಿ ಕತ್ತರಿಸಿ ಕೊಲೆ ಮಾಡಿದ್ದಾನೆ. ನಮ್ಮ ವಶಕ್ಕೆ ನೀಡಿದರೆ ಆತನನ್ನು 70 ತುಂಡುಗಳಾಗಿ ಕತ್ತರಿಸುತ್ತೇವೆ ಎಂದು ಉದ್ರಿಕ್ತ ಗುಂಪು ಆಕ್ರೋಶ ವ್ಯಕ್ತಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಸಂಭವಿಸಿದೆ. ನೆಲಮಂಗಲ ತಾಲೂಕಿನ ಮರಳುಕುಂಟೆ ಗ್ರಾಮದ ಮಹೇಶ್ (27) ಮತ್ತು ಮಾರುತಿ (24) ಮೃತ ದುರ್ದೈವಿಗಳು. ಮಧುರೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಗ್ರಾಮಕ್ಕೆ ಬೈಕ್ ನಲ್ಲಿ ಹಿಂತಿರುಗುತ್ತಿದ್ದಾಗ ದೊಡ್ಡಬಳ್ಳಾಪುರದ ಬಳಿಯ ಎಂಎಸ್ ಜಿಪಿ ಘಟಕಕ್ಕೆ ಕಸ ಸುರಿಯಲು ಬೆಂಗಳೂರಿಂದ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿಗೆ ಹೊಡೆದಿದೆ. ಇದರಿಂದ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಂತರ ಚಾಲಕ ಸ್ಥಳದಿಂದ ಪರಾರಿಯಾಗುತ್ತಿದ್ದು, ಹಿಂಬದಿಯಲ್ಲಿ ಬರುತ್ತಿದ್ದ ಕಾರಿನ ಚಾಲಕ ಬೆನ್ನತ್ತಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಲಾರಿಯ ಚಾಲಕ ಪಾನಮತ್ತನಾಗಿದ್ದು, ತಡೆದು ನಿಲ್ಲಿಸಲು ಹೋದ ಕಾರಿಗೂ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತ ಯುವಕರ ಶವವನ್ನು ತೆರವು ಮಾಡಲು ಬಿಡದೆ, ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರು…
ತರಗತಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಪ್ರಾಧ್ಯಾಪಕರೊಬ್ಬರು ಟೆರರಿಸ್ಟ್ ಎಂದು ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಎಂಐಟಿ ಕಾಲೇಜಿನಲ್ಲಿ ನಡೆದಿದ್ದು, ವೀಡಿಯೊ ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ಅಮಾನತು ಮಾಡಲಾಗಿದೆ. ನವೆಂಬರ್ 26ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಪ್ರಾಧ್ಯಾಪಕ ಮುಸ್ಲಿಮರು ಟೆರರಿಸ್ಟ್ ಗಳು ಎಂದು ವಿದ್ಯಾರ್ಥಿಯನ್ನು ನಿಂದಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿ ಆಕ್ಷೇಪ ವ್ಯಕ್ತಪಡಿಸಿದ್ದು, ಮುಸ್ಲಿಂ ಕಮ್ಯೂನಿಟಿಯನ್ನು ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯವಾಗಿ ಈ ರೀತಿ ಮಾತನಾಡಬೇಡಿ ಎಂದು ತಿರುಗೇಟು ನೀಡಿದ್ದಾನೆ. ವಿದ್ಯಾರ್ಥಿ ಕೆರಳುತ್ತಿದ್ದಂತೆ ಪ್ರಾಧ್ಯಾಪಕರು ವಿದ್ಯಾರ್ಥಿ ತನ್ನ ಮಗನಂತೆ ಎಂದು ಹೇಳಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ `ನೀವು ನಿಮ್ಮ ಮಗನಿಗೆ ಹೀಗೆ ಮಾತನಾಡುತ್ತೀರಾ? ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತೀರಾ? ನೀವು ಎಷ್ಟು ಜನರ ಮುಂದೆ ನನ್ನನ್ನು ಹಾಗೆ ಕರೆಯುತ್ತೀರಿ? ಇದು ತರಗತಿ, ನೀವು ವೃತ್ತಿಪರರಾಗಿ ಕಲಿಸುತ್ತಿದ್ದೀರಿ, ಮುಸ್ಲಿಮನಾಗಿ ದಿನನಿತ್ಯ ಇದನ್ನು ಎದುರಿಸುವುದು ತಮಾಷೆಯಲ್ಲ. ನೀವು ನನ್ನನ್ನು ಹಾಗೆ ಕರೆಯಬೇಡಿ” ಎಂದು ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದಾನೆ. ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ವಿಷಾದ ವ್ಯಕ್ತಪಡಿಸಿ,…
ಟೆಲಿಕಾಂ ದೈತ್ಯ ಕಂಪನಿಯಾದ ಬೆಂಗಳೂರು ಸೇರಿ 12 ನಗರಗಳಲ್ಲಿ ಏರ್ ಟೆಲ್ ನಿಂದ 5ಜಿ ಸೇವೆ ಈಗಾಗಲೇ ಆರಂಭವಾಗಿದೆ. ಏರ್ ಟೆಲ್ ಹಾಗೂ ಜಿಯೊ ಕಂಪನಿಗಳು ಪ್ರತಿದಿನ ಒಂದು ನಗರವನ್ನು 5ಜಿ ಸೇವೆಗೆ ಸೇರ್ಪಡೆಗೊಳಿಸುತ್ತಿದ್ದು, ಇದುವರೆಗೆ 12 ನಗರಗಳಲ್ಲಿ 5ಜಿ ಸೇವೆ ಆರಂಭಗೊಂಡಿದೆ. ಬೆಂಗಳೂರು, ದೆಹಲಿ, ಸಿಲುಗುರಿ, ಹೈದರಾಬಾದ್, ವರಣಾಸಿ, ಮುಂಬೈ, ನಾಗ್ಪುರ್, ಚೆನ್ನೈ, ಗುರ್ ಗಾಂವ್, ಪಾಣಿಪತ್, ಗುವಾಹತಿ ನಗರಗಳಲ್ಲಿ ಈಗಾಗಲೇ 5ಜಿ ಸೇವೆ ಲಭ್ಯವಾಗಿದೆ. ಬಿಹಾರದ ಪಾಟ್ನಾದಲ್ಲಿ ಕೆಲವು ಪ್ರದೇಶಗಳಲ್ಲಿ ಮಾತ್ರ 5ಜಿ ಸೇವೆ ಲಭ್ಯವಾಗಿದ್ದು, ಪೂರ್ಣ ಪ್ರಮಾಣದಲ್ಲಿ ಇನ್ನೂ ಲಭ್ಯವಾಗಿಲ್ಲ. ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ಧಾಣ, ಪೂನಾದ ಲೊಹೆಂಗೆ ವಿಮಾನ ನಿಲ್ದಾಣ, ವಾರಣಾಸಿ ಲಾಲ್ ಬಹದ್ದೂರ್ ಶಾಸ್ತ್ರಿ, ನಾಗ್ಪುರ ಬಾಬಾ ಸಾಹೇಬ್ ಅಂಬೇಡ್ಕರ್ ವಿಮಾನ ನಿಲ್ದಾಣ ಮತ್ತು ಪಾಟ್ನಾ ವಿಮಾನ ನಿಲ್ದಾಣಗಳಲ್ಲಿ 5ಜಿ ಸೇವೆ ಲಭ್ಯವಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಮಧುಗಿರಿ: ಶಿವಸೇನೆ ಪುಂಡರ ಅಟ್ಟಹಾಸವನ್ನು ಖಂಡಿಸುತ್ತಾ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದ ಘಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣ ಮಧುಗಿರಿ ತಾಲೂಕು ಘಟಕದ ವತಿಯಿಂದ.ತಾಲೂಕು ಅಧ್ಯಕ್ಷರಾದ ಶ್ರೀ ಪಾಂಡುರಂಗಯ್ಯನವರ ನೇತೃತ್ವದಲ್ಲಿ ಖಂಡಿಸಲಾಯಿತು. ಎಂಇ ಎಸ್ ಸಂಘಟನೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಮಧ್ಯವಸ್ತಿಕೆ ವಹಿಸಿ ಕೂಡಲೇ ಮಹಾರಾಷ್ಟ್ರ ಬೆಳಗಾವಿ ಗಡಿ ಭಾಗದ ಸಮಸ್ಯೆಯನ್ನು ಅತೀ ಶೀಘ್ರದಲ್ಲಿ ಬಗೆಹರಿಸಿ ಕೊಡಬೇಕೆಂದು ಉಪಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಗಡಿ ಭಾಗದಲ್ಲಿ ಮೊನ್ನೆ ಮಹಾರಾಷ್ಟ್ರ ರಾಜ್ಯದ ಶಿವಸೇನೆ ಪುಂಡರು, ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದು, ಕಲ್ಲುತೂರಾಟ ನಡೆಸಿ ಗಾಜುಗಳನ್ನು ಹೊಡೆದಿರುವಂತ ಘಟನೆ ಖಂಡನೀಯ, ಶಿವಸೇನೆ ಪುಂಡರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹಾಕಿ ಕೂಡಲೇ ಬಂಧಿಸಬೇಕು ಉಪ ವಿಭಾಗಾಧಿಕಾರಿಗಳಾದಂತ ರಿಷಿ ಆನಂದ್ ಅವರಿಗೆ ಮನವಿ ನೀಡಲಾಯಿತು. ಕ ರ ವೇ ಅಲ್ಪಸಂಖ್ಯಾತರ ತಾಲೂಕು ಅಧ್ಯಕ್ಷರಾದ…