Subscribe to Updates
Get the latest creative news from FooBar about art, design and business.
- ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ | ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
- ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
- ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
- ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
- ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
- ಸರಗೂರು: ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
- ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
Author: admin
ಬೆಂಗಳೂರು: ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾಗಿದ್ದ ಚಿಕ್ಕಪೇಟೆಯ ಸರ್ಕಾರಿ ಪ್ರೌಢಶಾಲೆಯ ಕಟ್ಟಡವನ್ನು ಜಾಗದ ಸಮೇತ ಮಾರಾಟ ಮಾಡಲು ಕಂದಾಯ ಇಲಾಖೆ ಮುಂದಾಗಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆಯ ತಕರಾರನ್ನೂ ಲೆಕ್ಕಿಸದೇ ಬಹುಕೋಟಿ ಮೌಲ್ಯದ ಆಸ್ತಿಯನ್ನು ಮಾರಾಟ ಅಥವಾ ಹರಾಜು ಹಾಕಲು ನಿರ್ದೇಶನ ನೀಡುವಂತೆ ಕೋರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಂದಾಯ ಇಲಾಖೆಗೆ ಪತ್ರ ಬರೆದಿದ್ದಾರೆ. ನಗರದ ಬಹುಕೋಟಿ ಬೆಲೆ ಬಾಳುವ ಪ್ರದೇಶದಲ್ಲಿರುವ ಈ ಆಸ್ತಿಯು, ಶಾಲೆಗಾಗಿಯೇ ದಾನಿಗಳು ನೀಡಿದ ಜಾಗವಾಗಿದೆ. ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳು ಪ್ರತ್ಯೇಕವಾಗಿ ಶಾಲೆ ಇರುವ ಜಾಗ ಮತ್ತು ಕಟ್ಟಡದ ಮಾರುಕಟ್ಟೆ ಮೌಲ್ಯವನ್ನು ನಿಗದಿ ಮಾಡಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಕಂದಾಯ ಇಲಾಖೆ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಸರ್ಕಾರಿ ಶಾಲೆಯ ಭವಿಷ್ಯವೂ ನಿಂತಿದೆ. ಬೆಂಗಳೂರು ಉತ್ತರ ತಾಲ್ಲೂಕು ಚಿಕ್ಕಪೇಟೆ ಒಟಿಸಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ 77 ವರ್ಷಗಳಷ್ಟು ಹಳೆಯದು. 13,735 ಚದರಡಿ ವಿಸ್ತೀರ್ಣದ ಮೈದಾನದಲ್ಲಿ 1945ರಲ್ಲೇ ಪ್ರಾಥಮಿಕ, ಮಾಧ್ಯಮಿಕ ಶಾಲೆ ಆರಂಭವಾಗಿದ್ದವು. ಸ್ವಾತಂತ್ರ್ಯಾ ನಂತರ ಅದೇ…
ಚೆನ್ನೈ: ತಮಿಳುನಾಡಿನಲ್ಲಿ ಬೇರೂರಲು ಪ್ರಯತ್ನಿಸುತ್ತಿರುವ ಬಿಜೆಪಿ, ಇತ್ತೀಚೆಗೆ ಸಂಗೀತ ಮಾಂತ್ರಿಕ ಇಳಯರಾಜಾರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ರನ್ನು ರಾಜ್ಯಪಾಲರನ್ನಾಗಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಹಿಂದೆ ಹಲವು ಬಾರಿ ರಾಜಕೀಯಕ್ಕೆ ಬರುವ ಸುಳಿವು ಕೊಟ್ಟಿದ್ದ ರಜನಿಕಾಂತ್ ಕಡೆ ಕ್ಷಣದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು. ಮೊನ್ನೆ ಕೆಂಪುಕೋಟೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್, ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವರನ್ನು ಭೇಟಿ ಮಾಡಿದ್ರು. ಇದಕ್ಕೂ ಮುನ್ನ, ತಮಿಳುನಾಡು ರಾಜ್ಯಪಾಲರನ್ನು ರಜನಿಕಾಂತ್ ಭೇಟಿ ಮಾಡಿದ್ದರು. ಈ ಭೇಟಿಯಲ್ಲಿ ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾಗಿ ತಿಳಿಸಿದ್ದರು. ಆದರೆ, ನೇರವಾಗಿ ರಾಜಕೀಯಕ್ಕೆ ರಜನಿಕಾಂತ್ ಬರಲು ಒಪ್ಪದ ಕಾರಣ ಅವರನ್ನು ರಾಜ್ಯಪಾಲರನ್ನಾಗಿಸಲು ಬಿಜೆಪಿ ಪ್ಲಾನ್ ಮಾಡಿದೆ. ಇದಕ್ಕೆ ರಜನಿಕಾಂತ್ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಒಂದು ಕಡೆ ಇತ್ತೀಚೆಗೆ 5G ಸ್ಪೆಕ್ಟ್ರಮ್ (5G Spectrum) ಹರಾಜು ಮುಗಿದಿದೆ. ಅದೇ ಸಮಯದಲ್ಲಿ, ಈಗ ದೇಶದ 3 ದೊಡ್ಡ ಟೆಲಿಕಾಂ ಕಂಪನಿಗಳು (Telecom Company) ಕಳೆದ 2 ವರ್ಷಗಳಿಂದ 5G ನೆಟ್ವರ್ಕ್ ಅನ್ನು ಪರೀಕ್ಷಿಸುತ್ತಿವೆ ಮತ್ತು ಇದೀಗ Airtel, Jio, Vodafone Idea ಈಗ 5G ಅನ್ನು ಪ್ರಾರಂಭಿಸಲು ಸಿದ್ಧವಾಗಿವೆ. ಅದೇ ಸಮಯದಲ್ಲಿ, ಸ್ಪೆಕ್ಟ್ರಮ್ ಹರಾಜಿನ ನಂತರ, ಜಿಯೋ ಈಗ 5G ನೆಟ್ವರ್ಕ್ ಅನ್ನು ಪ್ರಾರಂಭಿಸುವುದರೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುವುದಾಗಿ ಹೇಳಿತ್ತು. ಅದೇ ಸಮಯದಲ್ಲಿ, ಜಿಯೋ ನಂತರ, ಏರ್ಟೆಲ್ ಕೂಡ ಇದೇ ರೀತಿಯ ಹೇಳಿಕೆಯನ್ನು ನೀಡಿತು. ಇದರಿಂದಾಗಿ ಜಿಯೋ ಮತ್ತು ಏರ್ಟೆಲ್ನ 5G ಬಿಡುಗಡೆಯನ್ನು ಆದಷ್ಟು ಬೇಗ ನಿರೀಕ್ಷಿಸಬಹುದು. ಆದಾಗ್ಯೂ, ವೊಡಾಫೋನ್ ಐಡಿಯಾ ಇನ್ನೂ 5G ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ನೀಡಿಲ್ಲ.5G ಬಗ್ಗೆ ಜಿಯೋದ ದೊಡ್ಡ ಘೋಷಣೆ ವಾಸ್ತವವಾಗಿ ರಿಲಯನ್ಸ್ ಜಿಯೋ 5G ಬಗ್ಗೆ ದೊಡ್ಡ ಘೋಷಣೆ ಮಾಡಿದೆ. ಹೌದು, ಶೀಘ್ರದಲ್ಲೇ ದೇಶದ 1,000 ನಗರಗಳಲ್ಲಿ 5G…
ಚಿಕ್ಕಮಗಳೂರು : ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯಗೆ ಮೊಟ್ಟೆ ಎಸೆದ ವಿಚಾರವಾಗಿ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಮಾತನಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಚಿಕ್ಕಮಗಳೂರು, ಶೃಂಗೇರಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಭೇಟಿಯಾಗಿದ್ದು, ಆ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಗಾಂಧಿಯನ್ನೇ ಕೊಂದು ಹಾಕಿದ್ದವರು ನನ್ನನ್ನು ಬಿಡುತ್ತಾರಾ. ಇನ್ನು ನಾನ್ಯಾವ ಲೆಕ್ಕಾ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಡಿದ್ದೆದ್ದಿದ್ದಾರೆ. ಸರ್ಕಾರ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಪರಿಹಾರದ ಭರವಸೆ ನೀಡುತ್ತಾರೆ ಆದರೆ ಇನ್ನೂ ಪರಿಹಾರ ಸಿಕ್ಕಿರೋದಿಲ್ಲ. ನನಗೆ ಯಾವುದೇ ಜೀವ ಬೆದರಿಕೆಯಿಲ್ಲ. ಜನರ ಆಶೀವಾರ್ದವಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಂಟಿಯಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು. ಯಡಿಯೂರಪ್ಪ ಅವರು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲೇ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು. ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರು ಹಾಲಿ ಮತ್ತು ಮಾಜಿ ಸಿಎಂಗಳಿಗೆ ಶಾಲು ಹೊದಿಸಿ ಗೌರವಿಸಿದರು. ಕಂದಾಯ ಸಚಿವ ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಇತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಮತ್ತೊಮ್ಮೆ ಮದುವೆ ಯಾಗಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿದ್ದು ಇದಕ್ಕೆ ಮೇಘನಾ ರಾಜ್ ಅತ್ಯಂತ ಸ್ಪಷ್ಟವಾದ ರಿಯಾಕ್ಷನ್ ನೀಡಿದ್ದಾರೆ. ಪ್ರೀತಿಸಿ ಮದುವೆಯಾದ ಮೇಘನಾ ಮತ್ತು ಚಿರು ಸರ್ಜಾ ಬದುಕು ಇನ್ನೇನು ಸ್ವರ್ಗಕ್ಕೆ ಕಿಚ್ಚು ಹಚ್ಚಬೇಕೇನ್ನುವ ಹಂತದಲ್ಲಿರುವಾಗಲೇ ನಡೆದ ಅವಘಡವೊಂದು ಇಡಿ ಬದುಕಿನ ನೆಮ್ಮದಿಯನ್ನೇ ಕಸಿದುಕೊಂಡಿತು. ಚಿರು ಸರ್ಜಾ ತೀವ್ರ ಹೃದಯಾಘಾತದಿಂದ ನಿಧನರಾದರು. ಈ ವೇಳೆ ನಟಿ ಮೇಘನಾ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಪ್ರೀತಿಸಿದ ಚಿರುವನ್ನು ಕಳೆದುಕೊಂಡು ಕಂಗಾಲಾದ ಮೇಘನಾ ಇದೇ ನೋವಿನಲ್ಲೇ ಮಗನನ್ನು ಹೆತ್ತು ಸಿಂಗಲ್ ಪೇರೇಂಟ್ ರೀತಿಯಲ್ಲಿ ಬೆಳೆಸುತ್ತ ಬರುತ್ತಿದ್ದಾರೆ. ಚಿರು ಹಾಗೂ ಮೇಘನಾ ಪ್ರೀತಿಯ ಪುತ್ರ ರಾಯನ್ ರಾಜ್ ಸರ್ಜಾ ಎರಡನೇ ವರ್ಷದ ಹೊಸ್ತಿಲಿನಲ್ಲಿರುವಾಗಲೇ ಮೇಘನಾ ಸರ್ಜಾ ಬಗ್ಗೆ ಹೊಸ ಬಗೆಯ ಸುದ್ದಿಯೊಂದು ಸದ್ದು ಮಾಡಲಾರಂಭಿಸಿದೆ.ಇತ್ತೀಚಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಮೇಘನಾ ರಾಜ್, ನನ್ನ ಸುತ್ತಲೂ ಇರುವ ಹಲವರು ನನಗೆ ಎರಡನೇ ಮದುವೆಯಾಗಲು ಸಲಹೆ ನೀಡುತ್ತಿದ್ದಾರೆ. ಆದರೆ ಒಂಟಿಯಾಗಿರಲು ಮತ್ತು ಒಂಟಿಯಾಗಿಯೇ ಮಗನನ್ನು…
ಬೆಂಗಳೂರು : ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆ ಹಿಂದುತ್ವವಾದಿಗಳಿಂದ ನನ್ನ ತಂದೆಗೆ ಜೀವ ಬೆದರಿಕೆ ಇದೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಸಾವರ್ಕರ್ ಒಬ್ಬ ಮೂಲಭೂತವಾದಿ ದೇಶವನ್ನು ಒಂದುಗೋಡಿಸುವ ಬಗ್ಗೆ ಹೋರಾಡಿದವರಲ್ಲ. ಅವರು ಮುಸ್ಲಿಂ, ಕ್ರಿಶ್ಚಿಯನ್ ಧರ್ಮದ ಬಗ್ಗೆ ದ್ವೇಷ ಇಟ್ಟುಕೊಂಡವರು. ಅವರು ಹೇಳಿಕೆ ನೀಡಿದ್ದು ತಪ್ಪಲ್ಲ. ಹಿಂಸಾತ್ಮಕ ಕೃತ್ಯ ನಡೆಸುವುದು ಆ ಸಂಘಟನೆಗಳಿಗೆ ಗೊತ್ತಿದೆ. ಹಿಂದುತ್ವವಾದಿಗಳಿಂದ ನನ್ನ ತಂದೆಗೆ ಜೀವ ಬೆದರಿಕೆ ಇದೆ. ಹೀಗಾಗಿ ಸರ್ಕಾರ ಸಿದ್ದರಾಮಯ್ಯವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸಮ್ಮೇಳನವು ಆಗಸ್ಟ್ 26ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಬೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಆರ್ ಪಿ ಐ ರಾಜ್ಯಾಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ತಿಳಿಸಿದರು. ಆರ್ ಪಿಐ ಪಕ್ಷದ ವತಿಯಿಂದ ತುಮಕೂರಿನ ಎಂ.ಜಿ. ರಸ್ತೆಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ತುಮಕೂರಿನಿಂದ 2 ಸಾವಿರಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾಮ್ ದಾಸ್ ಅಠವಳೆ ರವರ ಮುಖಂಡತ್ವದಲ್ಲಿ ದೇಶದ 31ರಾಜ್ಯಗಳಲ್ಲಿ ಪಕ್ಷವು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಇದೀಗ 10 ಲಕ್ಷ ಜನರ ಸದಸ್ಯತ್ವದ ಗುರಿಯ ಅಭಿಯಾನ ತುಮಕೂರು ಜಿಲ್ಲೆಯಲ್ಲಿ ನಡೆಸಲಾಗುತ್ತಿದೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು. ರಾಜ್ಯ ಸಮ್ಮೇಳನದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆ ಕುರಿತು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು…
ತುಮಕೂರು: ಕೃಷಿ ಯಂತ್ರಧಾರೆ ಯೋಜನೆಯಡಿ ಯಂತ್ರೋಪಕರಣಗಳ ಏಜೆನ್ಸಿ ರೈತರಿಗೆ ವಂಚನೆ ಮಾಡುತ್ತಿದೆ ಎಂದು ಭಾರತೀಯ ಕೃಷಿಕ ಸಮಾಜದ ತುಮಕೂರು ಜಿಲ್ಲಾ ಘಟಕ ಆರೋಪಿಸಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿರುವ ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷರಾದ ಕೋಡಿಹಳ್ಳಿ ಜಗದೀಶ್, ಕೃಷಿ ಯಂತ್ರಧಾರೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಅಧಿಕೃತ ಸಂಸ್ಥೆಗಳು ಯಂತ್ರೋಪಕರಣಗಳ ಏಜೆನ್ಸಿ ರೈತರಿಗೆ ವಂಚನೆ ಮಾಡಿ ಭ್ರಷ್ಟಾಚಾರ ನಡೆಸಿ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಪುಟ್ಟರಾಜು, ಶ್ರೀ ಸಂಧ್ಯಾ, ಪಾಂಡುರಂಗ, ರಾಜಣ್ಣ, ಆನಂದ್ ಮತ್ತಿತರು ಭಾಗವಹಿಸಿದ್ದರು. ವರದಿ: ದಾಸಾಲುಕುಂಟೆ ಸಿದ್ದರಾಜು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊಡಗಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶ ಮತ್ತು ಸಂತ್ರಸ್ತರ ಭೇಟಿಗೆ ತೆರಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರತಿಭಟನೆಯ ಜೊತೆ ಅವರ ಕಾರ್ ಗೆ ಮೊಟ್ಟೆ ಎಸೆದು ಅತಿರೇಕದ ವರ್ತನೆ ತೋರಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ರಾಜಕೀಯ ವಲಯದಲ್ಲಿ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರ್ಗೆ ಮೊಟ್ಟೆ ಎಸೆದ ಕೃತ್ಯವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಖಂಡಿಸಿದ ಬೆನ್ನಲ್ಲೇ ಇದೀಗ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಬಿಜೆಪಿ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮಾನ್ಯ ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡಗಿನಲ್ಲಿ ಮಳೆ ಹಾನಿ ಸಂತ್ರಸ್ತರ ಭೇಟಿಗೆ ತೆರಳಿದ್ದ ವೇಳೆ…