Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ
- ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!
- ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ
- ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!
- ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ
- ಹಾಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು!
- ಮಂಜು ಮುಸುಕಿದ ರಸ್ತೆ: ಕಾರು ಪಲ್ಟಿಯಾಗಿ ದಂಪತಿ ಸಾವು
- ಅನುದಾನ ಸದ್ಬಳಕೆ ಮಾಡಿ ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ: ಸರಗೂರು ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ
Author: admin
ಪಾವಗಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 390ನೇ ನಮ್ಮೂರು ನಮ್ಮ ಕೆರೆ ಹಸ್ತಾಂತರ ಮತ್ತು ಕೆರೆ ಅಂಗಳದಲ್ಲಿ ಅರಣ್ಯ ಸಸಿನಾಟಿ ಕಾರ್ಯಕ್ರಮ ನ್ಯಾಯದಗುಂಟೆ ಗ್ರಾಮ ಪಂಚಾಯತಿಯ ಕೊಡಿಗೆಹಳ್ಳಿ ಗ್ರಾಮದ ದೊಡ್ಡಕಟ್ಟೆಕೆರೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಾಸಕ ವೆಂಕಟರಮಣಪ್ಪರವರು ಕೆರೆಯ ಹಸ್ತಾಂತರ ಮಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೀನಪ್ಪ ಎಂ. ಕೆರೆಯ ನಾಮಫಲಕ ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಶೀನಪ್ಪ ಎಂ., 2021- 22 ನೇ ಸಾಲಿನಲ್ಲಿ ಕೋಡಿಗೆಹಳ್ಳಿ ದೊಡ್ಡಕಟ್ಟೆ ಕೆರೆಯಲ್ಲಿ 12 ಲಕ್ಷ ಖರ್ಚು ಮಾಡಿ ಹೂಳೆತ್ತಲಾಗಿದೆ. ತಾಲೂಕಿನಲ್ಲಿ 5 ಕೆರೆಗಳಿಗೆ 51.98 ಲಕ್ಷ ಮೊತ್ತವನ್ನು ವಿನಿಯೋಗ ಮಾಡಿ ಹೊಳು ಎತ್ತಲಾಗಿದೆ ಎಂದು ತಿಳಿಸಿದರು. ದೊಡ್ಡ ಕಟ್ಟೆಕೆರೆಯಲ್ಲಿ 33 ದಿನಗಳು ಕಾಮಗಾರಿ ಮಾಡಿದ್ದು, 22,698 ಲೋಡು ಫಲವತ್ತಾದ ಮಣ್ಣನ್ನು ಸುತ್ತಮುತ್ತಲಿನ ಜಮೀನುಗಳಿಗೆ ಹಾಕುವ ಮೂಲಕ ಜಮೀನಿನ ಫಲವತ್ತತೆಯನ್ನು ಹೆಚ್ಚಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ನಿರ್ದೇಶಕ ದಿನೇಶ್ ಡಿ., ವಲಯದ ಮೇಲ್ವಿಚಾರಕ ಮುಹ್ಮದ್, ಕೃಷಿ ಮೇಲ್ಕ್ಚಾರಕ ಬೋರಣ್ಣ, …
ಬೈಂದೂರು: ಅತೀ ವೇಗದಿಂದ ಬಂದ ಆ್ಯಂಬುಲೆನ್ಸ್ ವೊಂದು ಟೋಲ್ ಗೇಟ್ ನ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟರು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ಶಿರೂರಿನ ಟೋಲ್ ಗೇಟ್ ನಲ್ಲಿ ನಡೆದಿದೆ. ವಿಡಿಯೋದಲ್ಲಿ ಕಂಡು ಬಂದಂತೆ, ಆಂಬುಲೆನ್ಸ್ ಶಬ್ಧ ಕೇಳಿ ಟೋಲ್ ಗೇಟ್ ಸಿಬ್ಬಂದಿ ಆತುರಾತುರವಾಗಿ ರಸ್ತೆಯಲ್ಲಿರುವ ಬ್ಯಾರಿಕೇಡ್ ತೆರವುಗೊಳಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಾಗಲೇ ಆಂಬುಲೆನ್ಸ್ ಮುನ್ನುಗ್ಗಿ ಬಂದಿದ್ದು, ಸಿಬ್ಬಂದಿ ರಸ್ತೆಯಲ್ಲಿರುವ ಕಾರಣ ಏಕಾಏಕಿ ಬ್ರೇಕ್ ಹಾಕಿದ್ದು, ಈ ವೇಳೆ ಆಂಬುಲೆನ್ಸ್ ರಸ್ತೆಗೆ ಅಡ್ಡವಾಗಿ ಜಾರಿ, ಮಗುಚಿ ಬಿದ್ದಿದೆ. ಬಿದ್ದ ರಭಸಕ್ಕೆ ಆಂಬುಲೆನ್ಸ್ ನ ಹಿಂದಿನ ಬಾಗಿಲು ತೆರೆದುಕೊಂಡಿದ್ದು, ಆಂಬುಲೆನ್ಸ್ ನಲ್ಲಿದ್ದವರು ಹೊರಗೆ ಎತ್ತಿ ಎಸೆಯಲ್ಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ತುಮಕೂರು: ಹಾಲು ಹಾಗೂ ಮೊಸರಿನ ಮೇಲೆ ಹಾಕಲಾಗಿರುವ ಜಿಎಸ್ ಟಿಯನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಹೇಳಿಕೆ ನೀಡಿದ್ದಾರೆ. ದಿನ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾನು ಈ ಬಗ್ಗೆ ಕಾಮೆಂಟ್ ಮಾಡಿದ್ರೆ ಒಂದು ಪಕ್ಷದ ಎಂಎಲ್ ಎ ಎಂಬ ಭಾವನೆ ಬರುತ್ತದೆ. ಮುಂದಿನ ಚುನಾವಣೆಯಲ್ಲಿ 100 ಪರ್ಸೆಂಟ್ ಮನೆಗೆ ಕಳುಸುತ್ತಾರೆ ಎಂದರು. ಹಾಲು, ಮೊಸರಿನ ಮೇಲೆ ಜಿಎಸ್ಟಿ ಹಾಕುವುದು ಅವಮಾನ ಅಲ್ವಾ? ಮಕ್ಕಳು ಕುಡಿಯುವ ಹಾಲಿಗೂ ಜಿಎಸ್ ಟಿ ಹಾಕ್ತಾರೆ ಅಂದ್ರೆ ಏನ್ ಹೇಳೋದು? ರೈತರಿಗೆ ಪ್ರೋತ್ಸಾಹ ಧನ ಕೊಡಿ, ಆಮೇಲೆ ಜಿಎಸ್ ಟಿ ಹಾಕಿ ಎಂದು ಅವರು ಒತ್ತಾಯಿಸಿದರು. ಹಾಲು ಮೊಸರಿನ ಮೇಲೆ ಜಿಎಸ್ಟಿ ಹಾಕುವುದು ಸೂಕ್ತ ಅಲ್ಲ. ಇದು ತಪ್ಪು ನಿರ್ಧಾರ, ಸರ್ಕಾರ ವಾಪಸ್ ತೆಗೆದುಕೊಳ್ಳಬೇಕು. ಜಿಎಸ್ ಟಿ ಬಗ್ಗೆ ಕುಮಾರಸ್ವಾಮಿಯವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಶೀಘ್ರದಲ್ಲಿ ಜಿಲ್ಲಾ…
ಹಿರಿಯೂರು: ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕಸಬಾ ಹೋಬಳಿಯ ಕೂನಿಕೆರೆ ಎಂಬಲ್ಲಿ ನಡೆದಿದ್ದು, ಇದೀಗ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 4 ವರ್ಷಗಳ ಹಿಂದೆ ತಾಲ್ಲೂಕಿನ ಕಸಬಾ ಹೋಬಳಿಯ ಕೂನಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕೂನಿಕೆರೆ ಗ್ರಾಮದ ಕರಿಯಪ್ಪ ಮತ್ತು ಲಕ್ಷ್ಮಮ್ಮ ಅವರ ಮಗನಾದ ಅಂಜಿನಪ್ಪ ಜೊತೆಗೆ ಸಂತ್ರಸ್ತೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬಂಟನಗವಿ ಹಟ್ಟಿಯ ಮಹೇಶಮ್ಮ ಹಾಗೂ ರಾಮಪ್ಪ ಅವರ ಮಗಳಾದ ಅಂಜಲಿ ವಿವಾಹವಾಗಿದ್ದು, 6 ತಿಂಗಳುಗಳ ಕಾಲ ಮನೆಯವರು ಚೆನ್ನಾಗಿ ನೋಡಿಕೊಂಡಿದ್ದಾರೆ. ಬಳಿಕ ವರದಕ್ಷಿಣೆ ತರುವಂತೆ ಒತ್ತಾಯಿಸಿ ಅಂಜಲಿಯವರಿಗೆ ನಿರಂತರವಾಗಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಮದುವೆ ವೇಳೆ 20 ಸಾವಿರ ರೂಪಾಯಿ ವರದಕ್ಷಿಣೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ವರದಕ್ಷಿಣೆ ನಾವು ಕಡಿಮೆ ಪಡೆದುಕೊಂಡಿದ್ದೇವೆ. ಹೆಚ್ಚು ವರದಕ್ಷಿಣೆ ತರುವಂತೆ ಗಂಡನ ಮನೆಯವರು ಒತ್ತಾಯಿಸಿದ್ದು, ಸಂತ್ರಸ್ತೆ ಅಂಜಲಿಗೆ ನಿರಂತರವಾಗಿ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಭಾನುವಾರ ಬೆಳಿಗ್ಗೆ…
ಸರಗೂರು: ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಬಾಬು ಜಗಜೀವನರಾಂ ವಿಚಾರ ವೇದಿಕೆ ನೂತನ ಅಧ್ಯಕ್ಷರಾಗಿ ಕೊತ್ತೇಗಾಲ ತಿಮ್ಮಯ್ಯರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹೆಚ್.ಡಿ.ಕೋಟೆ ತಾಲ್ಲೂಕಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಮುಖಂಡರ ಸಮ್ಮುಖದಲ್ಲಿ ಬಾಬು ಜಗಜೀವನರಾಂ ವಿಚಾರ ವೇದಿಕೆ ನೂತನ ಅಧ್ಯಕ್ಷರಾಗಿ ಕೊತ್ತೇಗಾಲ ತಿಮ್ಮಯ್ಯ ಅವರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ ಕೊತ್ತೆಗಾಲ ತಿಮ್ಮಯ್ಯ ಮಾತನಾಡಿ, ಹೆಚ್. ಡಿ.ಕೋಟೆ ಮತ್ತು ಸರಗೂರು ಎರಡು ತಾಲ್ಲೂಕಿನ ನಮ್ಮ ಜನಾಂಗದ ಸಮುದಾಯ ಭವನಗಳನ್ನು ಹಾಗೂ ಜನಾಂಗದ ಸಮಸ್ಯೆಗಳನ್ನು ನಿವಾರಿಸಲು ಕೆಲಸ ಮಾಡುತ್ತೇನೆ ಎಂದರು. ಸಭೆಯಲ್ಲಿ ಮುಖಂಡರಾದ ಶಿವಯ್ಯ, ಪ್ರಕಾಶ್ ಹೀರಹಳ್ಳಿ, ಸೋಮುಪಾಟಿಲ್, ಗ್ರಾ.ಪಂ . ಸದಸ್ಯರಾದ ಮಹಾದೇವ, ನಾಗರಾಜು, ಚಲುವರಾಜು, ಬೆಟ್ಟಸ್ವಾಮಿ, ಕಾರ್ಯದರ್ಶಿಮಹೇಶ್, ಮಂಜುನಾಥ, ಜಯಕುಮಾರ್, ದೇವರಾಜು, ಸ್ವಾಮಿ, ಗೊವಿಂದರಾಜು, ಕರಿಯಯ್ಯ, ಮಹದೆವಯ್ಯ, ಕೆ.ಟಿ.ಸ್ವಾಮಿ, ಎಡತ್ತೊರೆ ಶಿವರಾಜು, ಮುಳ್ಳೂರು ಸಿದ್ದಪ್ಪ, ಶಿಶರಾಜು, ಶ್ರೀನಿವಾಸ, ರಾಜಣ್ಣ ಇನ್ನೂ ಮುಖಂಡರು ಭಾಗಿಯಾಗಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಕೊರಟಗೆರೆ: ಅಗ್ರಹಾರದ ಕೆರೆ ಏರಿ ಬಿರುಕು ಬಂದಿದ್ದು ಜನರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಅಗ್ರಹಾರ ಜಂಪೇನಹಳ್ಳಿ ಸೇರಿದಂತೆ ಕೊರಟಗೆರೆ ಪಟ್ಟಣದ ಜನತೆಗೆ ಭಾರೀ ಗಂಡಾತರ ಕಾದಿದೆ. ಅಗ್ರಹಾರ ಜಂಪೇನಹಳ್ಳಿ ಭಾಗದ ರೈತರಿಗೆ ಸೇರಿದ ತೋಟಗಳೆಲ್ಲ ಸಂಪೂರ್ಣ ನಾಶವಾಗುವ ಭೀತಿಯಲ್ಲಿ ಜನರು ಗಾಬರಿಗೊಂಡಿದ್ದಾರೆ. ಕೊರಟಗೆರೆ ಪಟ್ಟಣದ ಶೇ.90 ಭಾಗದಷ್ಟು ಜನರಿಗೆ ಕುಡಿಯುವ ನೀರಿನ ಮೂಲ ಮಾರ್ಗ ಅಗ್ರಹಾರದ ಕೆರೆ ಆಗಿದೆ. ಆದರೆ ಈ ಕೆರೆ ಏರಿ ಬಿರುಕು ಮೂಡಿರುವುದು ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಕೆರೆಗಳ ಜವಾಬ್ದಾರಿ ಹೊತ್ತಿರುವ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಗಳ ನಿರ್ಲಕ್ಷತನ ಇದಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೆರೆ ಏರಿ ಬಿರುಕು ಸುತ್ತಲೂ ಬೆಳೆದಿರುವ ದಟ್ಟ ಅರಣ್ಯದಿಂದಾಗಿ, ಗಿಡ ಮರಗಳಿಂದ ತುಂಬಿರುವ ಕೆರೆ ಏರಿ ಗಿಡ ಮರಗಳ ಬೇರಿನಿಂದ ಕೆರೆಯ ಏರಿ ಬಿರುಕು ಬಿಟ್ಟಿದೆ. ಇದನ್ನು ಕಂಡೂ ಕಾಣದಂತೆ ಇರುವ ಎಂಜಿನಿಯರ್ಗಳ ನಿರ್ಲಕ್ಷತನ ಎಷ್ಟರ ಮಟ್ಟಿಗೆ ಸರಿ ಎಂದು ಸ್ಥಳೀಯ ಜನರು ಹಾಗೂ ರೈತರು ಆಕ್ರೋಶ ಭರಿತರಾಗಿದ್ದಾರೆ.…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಕಿಡಿಕಾರಿದ್ದಾರೆ. ವಿದ್ಯುತ್ ಹರಿಸಿ ಆನೆಯೊಂದನ್ನು ಕೊಂದಿದ್ದಲ್ಲದೇ, ಅದರ ದಂತವನ್ನು ಮಾರಾಟ ಮಾಡಿದ ಆರೋಪಿಗಳ ರಕ್ಷಣೆಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಂಸದೆ ಮನೇಕಾ ಗಾಂಧಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಆನೆಯೊಂದನ್ನು ಕೊಲ್ಲಲಾಗಿತ್ತು. ಅಲ್ಲದೇ ಸತ್ತ ಆನೆ ದಂತವನ್ನು ಬೆಂಗಳೂರಿಗೆ ತಂದು ಮಾರಾಟ ಮಾಡಲು ಆರೋಪಿಗಳು ಪ್ರಯತ್ನಿಸಿದ್ದರು. ಈ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು, ಆನೆಯನ್ನು ವಿದ್ಯುತ್ ಹರಿಸಿ ಕೊಂದಿರುವುದನ್ನು ಒಪ್ಪಿಕೊಂಡಿದ್ದರು. ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಒತ್ತಡ ಹೇರಿದ್ದಾರೆ ಎಂದು ಪತ್ರ ಬರೆದಿದ್ದಾರೆ. ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಬಾರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಅಮೆರಿಕನ್ ಡಾಲರ್ ಎದುರು ಸದ್ಯ ವಿಶ್ವದ ಹಲವು ಕರೆನ್ಸಿಗಳು ಪಾತಾಳಕ್ಕೆ ಕುಸಿಯಲು ಆರಂಭವಾಗಿದ್ದು, ಇದಕ್ಕೆ ಭಾರತದ ರೂಪಾಯಿ ಕೂಡ ಹೊರತಾಗಿಲ್ಲ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಮೆರಿಕನ್ ಡಾಲರ್ ಎದುರು ಇಂದು ಭಾರತದ ರೂಪಾಯಿ ೮೦ರ ಗಡಿ ತಲುಪಿದ್ದು, ಸಹಜವಾಗಿಯೇ ಇದು ದೇಶದ ಆಮದಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೂಪಾಯಿ ಕುಸಿತದಿಂದ ಕೆಲವು ವಲಯಗಳಿಗೆ ಲಾಭ ಉಂಟಾಗಲಿದೆ. ವಿದೇಶಿ ಹೂಡಿಕೆದಾರರು ಭಾರತೀಯ ಶೇರುಗಳು ಮತ್ತು ಇತರ ಸ್ವತ್ತುಗಳ ಮಾರಾಟದಲ್ಲಿ ತೊಡಗಿರುವುದು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್ಗಳಲ್ಲಿ ವೌಲ್ಯ ಹೊಂದಿರುವ ಸ್ವತ್ತುಗಳತ್ತ ಸಾಗುತ್ತಿರುವುದು ಭಾರತೀಯ ರೂಪಾಯಿಗೆ ಹಾನಿಯನ್ನುಂಟು ಮಾಡಿದೆ. ಇದರ ಪರಿಣಾಮ ಸದ್ಯ ಡಾಲರ್ ಎದುರು ಭಾರತದ ರೂಪಾಯಿ ಕುಸಿದಿದೆ. ಆದರೆ ರಫ್ತು ಮಾಡುವ ವಲಯಗಳಿಗೆ ಡಾಲರ್ಗಳಲ್ಲಿ ಪಾವತಿಸಲಾಗುತ್ತದೆ ಆದ್ದರಿಂದ ಆ ಕಂಪೆನಿಗಳಿಗೆ ಲಾಭವಾಗಲಿದೆ. ಅಲ್ಲದೆ ವಿದೇಶಗಳಿಂದ ಹಣ ಕಳುಹಿಸುವ ಭಾರತೀಯರಿಗೆ ಇದರಿಂದ ಲಾಭವಾಗಲಿದೆ. ರಶ್ಯಾ-ಉಕ್ರೇನ್ ನಡುವಿನ ಯುದ್ದ, ಆಹಾರ ಕೊರತೆ ಭೀತಿ, ತೈಲ ಬೆಲೆ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಂದಾಗಿ…
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯ ವೇಳೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಯುವತಿಯರಿಗೆ ಬ್ರಾ ಗಳನ್ನು ತೆಗೆಯುವಂತೆ ಸೂಚಿಸಿದ ಪ್ರಕರಣ ಕುರಿತು ತನಿಖೆಗೆ ಆದೇಶಿಸಲಾಗಿದೆ. ಮಾನವ ಹಕ್ಕುಗಳ ಆಯೋಗ ಈ ಬಗ್ಗೆ ತನಿಖೆ ನಡೆಸಿ ೧೫ ದಿನಗಳಲ್ಲಿ ಕೊಲ್ಲಂ ಗ್ರಾಮಾಂತರ ಎಸ್ಪಿಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಬ್ರಾ ಗಳನ್ನು ತೆಗೆಯುವಂತೆ ಸಿಬ್ಬಂದಿ ಒತ್ತಾಯಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪೋಷಕರೂ ಕೂಡ ಸಿಡಿಮಿಡಿಗೊಂಡಿದ್ದಾರೆ. ಈ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನೀಟ್ ಪರೀಕ್ಷೆ ಬರೆದ ಮಹಿಳೆಯ ತಂದೆ ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದರು. ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಪುತ್ರಿ ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳ ಉಡುಪನ್ನು ತೆಗೆಯುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಇದರಿಂದಾಗಿ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕ ಹಿಂಸೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಾಥಮಿಕ ತಪಾಸಣೆಯ ಬಳಿಕ…
ವಿಜಯಪುರದಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣ ಇದೀಗ ಬಹಿರಂಗಗೊಂಡಿದೆ. ಈ ಪ್ರಕರಣ ಇಡೀ ಜಿಲ್ಲೆಯನ್ನೇ ಬೆಚ್ಚಿ ಬಿಳಿಸುವಂತೆ ಮಾಡಿದೆ. ವಿಜಯಪುರ ನಗರದ ಬಸವರಾಜ ಮಮದಾ ಪುರ ಇವರ ಪುತ್ರಿ ಪ್ರಿಯಾಂಕಾ ಇವಳನ್ನು, ತಮ್ಮ ಸಂಬಂಧಿಕ ರಲ್ಲಿಯೇ ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಹುಚ್ಚಪ್ಪಗೌಡ ಪಾಟೀಲ ಎನ್ನುವ ನೊಂದಿಗೆ 2008 ರಲ್ಲಿ ಮದುವೆ ಮಾಡಿ ಕೊಡಲಾಗಿತ್ತು. ಮದುವೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ನಂತರದ ದಿನಗಳಲ್ಲಿ ಇಬ್ಬರಲ್ಲಿಯೂ ಮನಸ್ತಾಪ ಉಂಟಾಗಿ ಪದೇಪದೇ ತವರು ಮನೆಗೆ ಬರುತ್ತಿ ದ್ದಳು, ಇತ್ತ ಕಡೆಪೋಷಕರೂ ಅವಳ ಮನವೊಲಿಸಿ ಗಂಡನ ಮನೆಗೆ ಬಿಟ್ಟು ಬರುತ್ತಿ ದ್ದರು. 2011ರ ವರೆಗೂ ಹೀಗೆಯೇ ಮುಂದು ವರೆದಿತ್ತು. ಒಂದು ದಿನ ಪ್ರಿಯಾಂಕ ನನಗೆ ಗಂಡನ ಜೊತೆಗೆ ಸಂಸಾರ ಮಾಡಲು ಇಷ್ಟವಿಲ್ಲ, ನಾನು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದೇನೆ ಎಂದು ಪೋಷಕರ ಬಳಿ ಹೇಳಿದ್ದಾಳೆ. ಆಗ ನಿನಗೆ ಮದುವೆಯಾಗಿದ್ದು, ಈ ರೀತಿಯಾಗಿ ಮಾಡು ವುದು ಸರಿಯಲ್ಲ ಎಂದು ಸಂಬಂಧಿಕರು ಎಲ್ಲ ರೀತಿಯ ಬುದ್ಧಿವಾದ…