Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಹುಕ್ಕೇರಿ : ಬೆನ್ನು ನೋವು, ಸೊಂಟ ನೋವಿನಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಶಿರಗಾಂವ ಗ್ರಾಮದಲ್ಲಿ ನಡೆದಿದೆ. ಈರಪ್ಪ ರಾಯಪ್ಪ ಚೌಗಲಾ (41) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಸ್ಥಳೀಯ ಅವರಗೋಳ ಗ್ರಾಮದ ಖಾಸಗಿ ಬ್ಯಾಂಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈರಪ್ಪ ಚೌಗಲಾ ಬಹಳ ದಿನಗಳಿಂದ ಬೆನ್ನು ನೋವು, ಸೊಂಟ ನೋವಿನಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಈರಪ್ಪನಿಗೆ ಎರಡು ಹೆಣ್ಣು ಮಕ್ಕಳು ಒಂದು ಗಂಡು ಮಗು ಇದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ. ಘಟನೆ ಸಂಬಂಧ ಹುಕ್ಕೇರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಅರಣ್ಯಾಧಿಕಾರಿಗಳು ಗಾಳಿಯಲ್ಲಿ ಫೈರಿಂಗ್ ಮಾಡಿ ಎಚ್ಚರಿಕೆ ನೀಡಿದರೆ ಗಂಧಚೋರರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರದ ಎಚ್.ಎನ್ ಕಾವಲ್ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬುಧವಾರ ಸಂಜೆ ನಾಗಮಂಗಲ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಹಾಸನ ಮೂಲದ ಗಂಧದ ಮರ ಕಳ್ಳರಾದ ಗೋವಿಂದಪ್ಪ ಹಾಗೂ ಆತನ ಮಕ್ಕಳಾದ ಶಂಕರ್ ಮತ್ತು ಕುಮಾರ್ ಗಂಧದ ಮರ ಕಡಿಯಲು ಬಂದಿದ್ದಾರೆ. ಈ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಮರಗಳ್ಳರನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಸಾಕಯ್ಯ ಅವರ ಮೇಲೆ ಮರಗಳ್ಳರು ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳು ಮತ್ತೊಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗೋವಿಂದಪ್ಪನಿಗೆ ಗುಂಡಿನ ಚೂರುಗಳು ತಗುಲಿ ಗಾಯಗಳಾಗಿವೆ. ಮತ್ತಿಬ್ಬರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗಾಯಾಳುಗಳಾದ ಅರಣ್ಯ…
ಧಾರವಾಡ: ಜಿಲ್ಲೆಯ ನೀರಲಕಟ್ಟಿ ಗ್ರಾಮದ ನಿವಾಸಿ ಮಹಿಳೆಯೊಬ್ಬರು 1 ವರ್ಷ 6 ತಿಂಗಳ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಜಿಲ್ಲೆಯ ನೀರಲಕಟ್ಟಿ ಗ್ರಾಮದಲ್ಲಿ ನಡೆದಿದೆ. ನೀರಲಕಟ್ಟಿ ಗ್ರಾಮದ ನಿವಾಸಿಯಾದ ರುಕ್ಮಾವ್ವಾ ದುರ್ಗಪ್ಪ ಭಜಂತ್ರಿ ಇವರ ಮಗಳಾದ ಸ್ವಾತಿ ಅಶೋಕ ಭಜಂತ್ರಿ ನಾಪತ್ತೆಯಾದವರು ಎಂದು ಗುರುತಿಸಲಾಗಿದೆ. ನವೆಂಬರ್ 25 ರಂದು ರಾತ್ರಿ 2:30 ಗಂಟೆಗೆ ಮನೆಯಿಂದ ಇವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸ್ವಾತಿ ಭಜಂತ್ರಿ(26) ಎತ್ತರ 4.5, ಸದೃಡ ಮೈ ಕಟ್ಟು, ಸಾದಾಗೆಂಪು ಮೈ ಬಣ್ಣ, ಕಪ್ಪು ಕೂದಲು ಹೊಂದಿದ್ದಾರೆ. ನಾಪತ್ತೆಯಾದ ವೇಳೆ ಬಿಳಿ ಬಣ್ಣದ ಚೂಡಿದಾರ ಧರಿಸಿದ್ದು, ಕನ್ನಡ ಹಾಗೂ ಕೊರಮಾ ಭಾಷೆ ಮಾತನಾಡುತ್ತಾಳೆ. 1 ವರ್ಷ 6 ತಿಂಗಳ ಮಗು ಅರುಣ್, ಸಾದಾಗೆಂಪು ಮೈ ಬಣ್ಣ, ಕಪ್ಪು ಕೂದಲು, ಮಗು ಕೆಂಪು ಅಂಗಿ ಕಪ್ಪು ಶಾರ್ಟ ಪ್ಯಾಂಟ್ ಧರಿಸಿದ್ದಾನೆ ಇವರ ಬಗ್ಗೆ ಸುಳಿವು ಸಿಕ್ಕಲ್ಲಿ, ಕುಲಗೋಡ ಠಾಣೆ ದೂರವಾಣ ಸಂಖ್ಯೆ 08334-222233 ಅಥವಾ ಇ-ಮೇಲ್ ಐಡಿ kulgodgm@ksp.gov.in ಗೆ ಸಂಪರ್ಕಿಸಬಹುದು ಎಂದು ಕುಲಗೋಡ…
ಬೆಳಗಾವಿ : ನಗರದ ಗೋಗಟೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟವನ್ನು ಪ್ರದರ್ಶನ ಮಾಡಿದ್ದಕ್ಕೆ ಇತರೆ ಕೆಲ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದು ಹಾಗೂ ದೂರು ದಾಖಲಿಸಲು ಹೋದಾಗ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಕರವೇ ನಾರಾಯಣ ಗೌಡ ಬಣದಿಂದ ಪ್ರತಿಭಟನೆ ನಡೆದಿದೆ. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಾಥ್ ನೀಡಿದ್ದು, ಹೆದ್ದಾರಿ ತಡೆ ನಡೆಸಿದೆ. ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಹಲ್ಲೆ ಮಾಡಿದ ಸಹಪಾಠಿಗಳ ವಿರುದ್ಧ ಹಾಗೂ ಠಾಣೆಯಲ್ಲಿ ದರ್ಪ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಬೆಳಗಾವಿ-ಗೋವಾ ರಾಜ್ಯ ಹೆದ್ದಾರಿ ತಡೆದು ಕರವೇ ಪ್ರತಿಭಟನೆ ನಡೆಸುತ್ತಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಾಥ ನೀಡಿದೆ. ಬೆಳಗಾವಿಯ ಆರ್ಪಿಡಿ ವೃತ್ತದಲ್ಲಿ ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿರುವ ಕಾರಣಕ್ಕೆ ಗೋವಾ-ಬೆಳಗಾವಿ ಹೆದ್ದಾರಿಯಲ್ಲಿ ಟ್ರಾಫಿಕ್ ಕಿರಿಕಿರಿ ಉಂಟಾಗಿದೆ. ಮುಂಜಾಗ್ರತಾ ಕ್ರಮವಾಗಿ ಪ್ರಥಮ, ದ್ವಿತೀಯ ವರ್ಷದ…
ಅಹಮದಾಬಾದ್: ಗುಜರಾತ್ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿ ಆಯಂಬುಲೆನ್ಸ್ಗೆ ದಾರಿಬಿಟ್ಟುಕೊಟ್ಟಿದ್ದಾರೆ. ಚುನಾವಣೆ ಪ್ರಚಾರದ ಭಾಗವಾಗಿ ಪ್ರಧಾನಿ ಮೋದಿ ಅವರು ಅಹಮದಾಬಾದ್ನಲ್ಲಿ ಬೃಹತ್ ರೋಡ್ ಶೋ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್ಐ ಟ್ವಿಟರ್ನಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೀಕ್ಷಿಸಿರುವ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ಪಟ್ಟಣದ ಬೀದಿ ಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಒತ್ತಾಯಿಸಿ ವ್ಯಾಪಾರಿಗಳು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಮಸಾಲ ಜಯರಾಮ್, ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಲು ತೀರ್ಮಾನ ಕೈಗೊಂಡಿದ್ದಾರೆ. ಪಟ್ಟಣ ಪಂಚಾಯಿತಿ ಅನುದಾನ ಮತ್ತು ಶಾಸಕರ ನಿಧಿ ಬಳಕೆ ಮಾಡಿಕೊಂಡು ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನು ಬೀದಿಬದಿ ವ್ಯಾಪಾರಿಗಳಿಗೆ ಸ್ಥಿರವಾಗಿ ಅಂಗಡಿ ಮುಂಗಟ್ಟು ಗಳನ್ನು ಮಾಡಲು ಶಾಸಕರು ತೀರ್ಮಾನ ಕೈಗೊಂಡಿದ್ದು, ಶಾಸಕರ ತೀರ್ಮಾನಕ್ಕೆ ವ್ಯಾಪಾರಿಗಳ ಸಂಘದ ಅಧ್ಯಕ್ಷರು ಮತ್ತು ವ್ಯಾಪಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. 15 ದಿನಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಿಗೆ ಮಸಾಲ ಜಯರಾಮ್ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಯಾದ ರೇಣು ಕುಮಾರ್, ಕೊಂಡಜ್ಜಿ ವಿಶ್ವನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಸಿಬ್ಬಂದಿ ವರ್ಗಗಳು ಸ್ಥಳದಲ್ಲಿ ಉಪಸ್ಥಿತರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಆಂಟೋನಿ ಬೇಗೂರು ಹ್ಯೂಮನ್ ಇಮ್ಯೂನೊಡಿಫಿಶಿಯನ್ಸಿ ವೈರಸ್ – ಎನ್ನುವುದು ಎಚ್.ಐ.ವಿ. (HIV)ಯ ವಿಸ್ತೃತರೂಪ. ಹ್ಯೂಮನ್ (ಮಾನವ) – ಅಂದರೆ ಈ ವೈರಸ್ ಮನುಷ್ಯರನ್ನು ಮಾತ್ರ ಬಾಧಿಸುತ್ತದೆ ಎಂದರ್ಥ. ಇಮ್ಯೂನೊಡಿಫಿಶಿಯನ್ಸಿ (ರೋಗ ನಿರೋಧಕ ಕೊರತೆ) ಅಂದರೆ – ದೇಹದ ರೋಗನಿರೋಧಕ ಶಕ್ತಿ ಕ್ಷೀಣಿಸಿದೆ ಎಂದರ್ಥ. ವೈರಸ್ ಅಂದರೆ ರೋಗ ನಿರೋಧಕ ಶಕ್ತಿಯನ್ನು ಕ್ಷೀಣಿಸುವಂತೆ ಮಾಡುವ ಒಂದು ಸೂಕ್ಷ್ಮಾಣುಜೀವಿ. ಏಡ್ಸ್ ಎಂದರೆ ಅಕ್ವಯರ್ಡ್ ಇಮ್ಯೂನೊ ಡಿಫೀಶಿಯನ್ಸಿ ಸಿಂಡ್ರೋಮ್. ಅಂದರೆ ಇದು ಮಾನವನು ಎಚ್.ಐ.ವಿ. ಎಂಬ ವೈರಸ್ನಿಂದ ಸೋಂಕಿತಗೊಂಡಿದ್ದಾನೆ, ಇದು ಆನುವಂಶಿಕವಾದುದಲ್ಲ ಎಂಬುದನ್ನು ತಿಳಿಸುತ್ತದೆ. ಇಮ್ಯೂನ್ ಡಿಫೀಶಿಯನ್ಸಿ (ರೋಗ ನಿರೋಧಕ ಕೊರತೆಯ ಸಿಂಡ್ರೋಮ್ (ರೋಗ ಲಕ್ಷಣಕೂಟ) – ಅಂದರೆ ವ್ಯಕ್ತಿಯು ಎಚ್.ಐ.ವಿ.ಯಿಂದ ಸೋಂಕಿತನಾಗಿದ್ದಾನೆ ಮತ್ತು ಅದು ಉಲ್ಬಣಿತ ಸ್ಥಿತಿಯನ್ನು ತಲುಪಿದೆ ಎಂದು ಸೂಚಿಸುವ ಲಕ್ಷಣ ಅಥವಾ ಕಾಯಿಲೆಗಳ ಸಮೂಹ. ಹರಡುವ ವಿಧಾನಗಳು: ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಎಚ್.ಐ.ವಿ. ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ೨. ಹೆತ್ತವರಿಂದ, ಸೋಂಕಿತ ತಾಯಿಯಿಂದ ಮಗುವಿಗೆ ಗರ್ಭಾವಸ್ಥೆಯಲ್ಲಿ, ಪ್ರಸವ ಸಮಯದಲ್ಲಿ ಮತ್ತು ಎದೆಹಾಲು…
ಮೇಯುತ್ತಿದ್ದ ಹಸುವಿನ ಮೇಲೆ ಅತ್ಯಾಚಾರವೆಸೆಗಿದ ವಿಕೃತ ಕಾಮಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ದೇವಯ್ಯ ಎನ್ನುವವರಿಗೆ ಸೇರಿದ್ದ ಹಸು ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಅಬೂಬಕ್ಕರ್ ಸಿದ್ದಿಕಿ (40) ಬಂಧಿತ ಆರೋಪಿ. 15 ದಿನಗಳಿಂದ ಅಂದಗೋವೆಗೆ ಬೈಕ್ನಲ್ಲಿ ಆಗಮಿಸುತ್ತಿದ್ದ ಅಬುಬಕ್ಕರ್, ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆಯಲ್ಲಿ ಹಸುವಿನ ಜೊತೆ ಸೆಕ್ಸ್ ಮಾಡಿದ್ದ. ಹೀಗೆ ಒಂದು ದಿನ ಹೊಲದಲ್ಲಿ ಮೇಯುತ್ತಿದ್ದ ಹಸುವಿನೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಅಬೂಬಕ್ಕರ್ ಸಿಕ್ಕಿಬಿದ್ದಿದ್ದಾನೆ. ದೇವಯ್ಯ ಮೂರು ಹಸುಗಳನ್ನ ಗದ್ದೆಯಲ್ಲಿ ಕಟ್ಟುತ್ತಿದ್ದರು. ಘಟನೆ ಬಳಿಕ ಗಬ್ಬದ ಹಸು ಕರುವಿಗೆ ಜನ್ಮ ನೀಡಿದೆ. ಜನಿಸುತ್ತಲೇ ಕರು ಮೃತಪಟ್ಟಿದೆ. ಗಬ್ಬದ ಹಸುವಿನ ಜೊತೆಗೂ ಸೆಕ್ಸ್ ನಡೆಸಿರುವ ಶಂಕೆ ವ್ಯಕ್ತವಾಗಿದೆ. ದೇವಯ್ಯ ಸುಂಟಿಕೊಪ್ಪ ಪೊಲಿಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ಅಬುಬಕ್ಕರ್ ಮತ್ತು ಹಸುವಿಗೆ ವೈದ್ಯಕೀಯ ಪರೀಕ್ಷೆಗೊಳಪಡಿಸಿ ತನಿಖೆ ಮುಂದುವರಿಸಿದ್ದಾರೆ. ನವೆಂಬರ್ 27ರಂದು ಮಧ್ಯಾಹ್ನ ಸುಂಟಿಕೊಪ್ಪ ಸಂತೆಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದಾಗ ಗದ್ದೆಯ ದಾರಿಯಲ್ಲಿ ಒಂದು ಕೆಂಪು…
ತಂದೆಗೆ ಪೊಲೀಸ್ ಕಾನ್ ಸ್ಟೇಬಲ್ ಹಲ್ಲೆ ಮಾಡುತ್ತಿರುವುದನ್ನು ನೋಡಿ ತಡೆಯಲು ಆಗದ ಕಾರಣ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ. ಛತ್ತೀಸ್ ಘಡದ ಬಿಲಾಸ್ ಪುರ್ ಜಿಲ್ಲೆಯಲ್ಲಿ ಬಿನ್ಸ್ ಬೋಡ್ ಗ್ರಾಮದ ನಿವಾಸಿ 23 ವರ್ಷದ ಹರೀಶ್ ಚಂದ್ರ ಜಿಂಡ್ಲೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹರೀಶ್ ಚಂದ್ರ ಜಿಂಡ್ಲೆ ಬೈಕ್ ಬಾಲಕಿಯೊಬ್ಬಳಿಗೆ ಡಿಕ್ಕಿ ಹೊಡೆದಿತ್ತು. ಈ ಸಂಬಂಧ ಶಾಲಾ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಮನೆಗೆ ಭೇಟಿ ನೀಡಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಅಲ್ಲದೇ ತಂದೆಯನ್ನು ಠಾಣೆಗೆ ಕರೆದೊಯ್ದಿದ್ದರು. ಹರೀಶ್ ಚಂದ್ರ ಪೊಲೀಸ್ ಠಾಣೆಗೆ ಹೋದಾಗ ಪೊಲೀಸ್ ಕಾನ್ ಸ್ಟೇಬಲ್ ತಂದೆಯನ್ನು ಥಳಿಸುತ್ತಿದ್ದರು. ಇದನ್ನು ನೋಡಿದ ಕೂಡಲೇ ರೈಲ್ವೆ ನಿಲ್ದಾಣಕ್ಕೆ ಹೋಗಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಸಣ್ಣ ಪ್ರಕರಣದಲ್ಲಿ ಕೀಳಾಗಿ ನಡೆದುಕೊಂಡಿದ್ದಾರೆ. ಅಪಘಾತ ಪ್ರಕರಣದಲ್ಲಿ ಅವನ ಪಾತ್ರ ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳದೇ ಮನೆಯವರಿಗೆ ಹಿಂಸೆ ನೀಡಿದ್ದರಿಂದ…
ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಬಸ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ರಾಜಧಾನಿಯಲ್ಲಿ ಅಪರಾಧ ಕೃತ್ಯಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮೊನ್ನೆಯಷ್ಟೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ತೆ ಬಸ್ ಗಾಗಿ ನಾಯಂಡಹಳ್ಳಿ ಸಮೀಪ ಕಾಯುತ್ತ ನಿಂತಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಶಾಲಾ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಆರೋಪಿ ಶಿವಕುಮಾರ್ಗೆ ಆಕೆಯ ಪರಿಚವಿದ್ದಿದ್ದರಿಂದ ಡ್ರಾಪ್ ಕೊಡುತ್ತೇನೆ ಎಂದು ಹೇಳಿದ್ದಾನೆ. ಹೀಗಾಗಿ ಸಂತ್ರಸ್ತೆ ಆರೋಪಿಯ ಬಸ್ ನಲ್ಲಿ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಮಹಿಳೆಯನ್ನು ನಾಗರಬಾವಿ ಸರ್ವಿಸ್ ರಸ್ತೆಗೆ ಕರೆದೊಯ್ದ ಅತ್ಯಾಚಾರವೆಸಗಿದ್ದಾನೆ. ಘಟನೆ ಬಳಿಕ ಸಂತ್ರಸ್ತೆ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಆಕೆಯ ಪುತ್ರ ಆರೋಪಿ ಶಿವಕುಮಾರ್ಗೆ ಥಳಿಸಿದ್ದಾನೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಲೇಔಟ್ ಪೊಲೀಸರು ಆರೋಪಿ ಶಿವಕುಮಾರ್ನನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…