Subscribe to Updates
Get the latest creative news from FooBar about art, design and business.
- ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
- ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
- ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
- “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
- ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
- ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
- ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
- ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
Author: admin
ಬಾಗಲಕೋಟೆ: ಗಂಡು ಮೇಕೆ ಹಾಲು ಕೊಡುತ್ತಿರುವ ವಿಚಿತ್ರ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆಯೊಂದು ನಿತ್ಯ ಹಾಲು ಕೊಡುತ್ತಿದೆ. ಪ್ರತಿನಿತ್ಯ ಒಂದು ಸಣ್ಣ ಬಟ್ಟಲಿನಷ್ಟು ಹಾಲನ್ನು ಕುರಿಗಾಹಿ ಪರಶುರಾಮ ಅವರು ಕರೆಯುತ್ತಿದ್ದಾರೆ. ಪರಶುರಾಮ ಅವರು ಗಂಡು ಮೇಕೆಯಿಂದ ಹಾಲು ಕರೆಯುತ್ತಿರುವ ದೃಶ್ಯ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗದಗ: ನೈರುತ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಜೈ ಮಹಾರಾಷ್ಟ್ರ ಎಂದು ನಮೂದಾಗಿರುವಂತ ಟಿಕೆಟ್ ಗಳನ್ನು ಪ್ರಯಾಣಿಕರಿಗೆ ವಿತರಿಸಿದ ಗದಗ ಘಟಕ ಹಾಗೂ ರೋಣಾ ಘಟಕದ ಸಾರಿಗೆ ಬಸ್ ನಲ್ಲಿ ನಡೆದಿದೆ. ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಇಂದು ಗದಗ ಘಟಕ ಹಾಗೂ ರೋಣಾ ಘಟಕದ ಸಾರಿಗೆ ಬಸ್ ನಲ್ಲಿ ವಿತರಿಸಿರುವಂತ ಟಿಕೆಟ್ ಗಳಲ್ಲಿ ಜೈ ಮಹಾರಾಷ್ಟ್ರ ಎಂಬುದಾಗಿ ಇದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ವಿತರಿಸಿದಂತ ಈ ಟಿಕೆಟ್ ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಂಬುದಾಗಿ ನಮೂದಿಸಬೇಕಿದ್ದಂತ ಟಿಕೆಟ್ ಪೇಪರ್ ನಲ್ಲಿ ಜೈ ಮಹಾರಾಷ್ಟ್ರ ಎಂಬುದಾಗಿ ನಮೂದಿಸಿರೋ ರೋಲ್ ನ ಟಿಕೆಟ್ ಗಳನ್ನು ಪ್ರಯಾಣಿಕರಿಗೆ ನೀಡಲಾಗಿದೆ. ಟಿಕೆಟ್ ವೈರಲ್ ಆಗುತ್ತಿದಂತೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಲಾಗಿದ್ದು, ಗದಗ ವಿಭಾಗದ ರೋಣಾ ಮತ್ತು ಗದ ಘಟಕದಲ್ಲಿ ಇಟಿಎಂ ಟಿಕೆಟ್ ಗಳು ಮಹಾರಾಷ್ಟ್ರ ಸಾರಿಗೆ…
ತಿಪಟೂರು: ವೀರಶೈವ ಲಿಂಗಾಯತ ನೌಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಕ್ಟೋಬರ್ 9ರಂದು ತಿಪಟೂರು ಗುರುಕುಲಾನಂದ ಆಶ್ರಮದಲ್ಲಿ ಲಿಂಗಾಯಿತ ಸಮಾಜದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಲಿಂಗಾಯಿತ ಸಮಾಜದ ನಿವೃತ್ತ ನೌಕರರನ್ನು ಸನ್ಮಾನಿಸಲಾಗುವುದು ಎಂದು ವೀರಶೈವ ಲಿಂಗಾಯಿತ ನೌಕರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಸ್ವಾಮಿ ತಿಳಿಸಿದರು ಈ ಕಾರ್ಯಕ್ರಮಕ್ಕೆ ಸಿರಿಗೆರೆ ಬೃಹನ್ಮಠ ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಹಾಗೂ ಶ್ರೀ ಇಮ್ಮಡಿ ಕರಿಬಸವ ದೇಶಿಯ ಕೇಂದ್ರ ಸ್ವಾಮೀಜಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು. ಮಾಜಿ ಶಾಸಕ ಕೆ. ಷಡಕ್ಷರಿ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸುವರು, ಕಾಂಗ್ರೆಸ್ ಮುಖಂಡ ಲೋಕೇಶ್ವರ್ ನಿವೃತ್ತ ನೌಕರರನ್ನು ಸನ್ಮಾನಿಸಲಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ನವೀನ್…
ಅರುಣಾಚಲ ಪ್ರದೇಶ : ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ಅವಘಡದಲ್ಲಿ ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ : ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಮತ್ತು ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ವತಿಯಿಂದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಪಾಠಶಾಲೆ ಮತ್ತು ಪ್ರೌಢಶಾಲೆಗಳ ಒಟ್ಟಾರೆ 92677 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅನ್ನಪೂರ್ಣ ಪೌಷ್ಟಿಕ ಆರೋಗ್ಯ ಮಿಕ್ಸ್ ವಿತರಿಸುವ ಯೋಜನೆ ಕಾರ್ಯಕ್ರಮವನ್ನು ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ಮತ್ತು ಜಪಾನಂದ ಸ್ವಾಮಿ ರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಜಪಾನಂದ ಸ್ವಾಮಿಜಿ ಮಾತನಾಡಿ, ನಾವು ತಿನ್ನುವ ಆಹಾರ ಎಷ್ಟು ಪೌಷ್ಟಿಕವಾಗಿದೆ ಅಥವಾ ನಮ್ಮ ಮಕ್ಕಳಿಗೆ ತಿನ್ನಲು ಕೊಡಿಸುತ್ತಿರುವ ತಿನಿಸು ಅವರ ಆರೋಗ್ಯಕ್ಕೆ ಪೂರಕವೇ ಎಂಬ ಬಗ್ಗೆ ಒಮ್ಮೆ ಕೂಡ ನಾವು ಯೋಚಿಸುವುದಿಲ್ಲ. ಇಂತಹ ಆಹಾರ ಪದ್ಧತಿಯಿಂದ ನಮ್ಮ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ನಾವು ಸಾರಾಸಗಟಾಗಿ ನಿರ್ಲಕ್ಷಿಸಿದ್ದೇವೆ. ಅಪೌಷ್ಟಿಕತೆ ಮಕ್ಕಳ ಮೇಲೆ ತೀರಾ ಪ್ರಮಾಣ ಬೀರುತ್ತಿದೆ ಆದ್ದರಿಂದ ಮಕ್ಕಳ ಪೌಷ್ಟಿಕತೆಯ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಕಾಳಜಿವಹಿಸಿ…
ಮಧುಗಿರಿ: ಕಳೆದ ಹಲವಾರು ವರ್ಷಗಳಿಂದ ಪಕ್ಷದ ಕಾರ್ಯಕರ್ತರ ಶ್ರಮದಿಂದ ಈ ದೇಶಾದ್ಯಂತ ಇಂದು ಬಿಜೆಪಿ ಪಕ್ಷ ಸಂಘಟನಾತ್ಮಕವಾಗಿ, ರಾಜಕೀಯವಾಗಿ ಬೆಳೆದು ಅಧಿಕಾರದ ಚುಕ್ಕಾಣಿ ಹಿಡಿದಿದೆ, ಸಂಘಟನಾ ಹಾಗೂ ದೇಶದ ಜನರ ಮೇಲೆ ಮೋದಿ ಅವರು ವಿಶ್ವಾಸ ಇಟ್ಕೊಂಡು ದೇಶದಲ್ಲಿ ಪರಿವರ್ತನೆ ಆಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ದಿಂದಯಲ್ ಜಿ ಕಂಡ ಅಂತ್ಯೋದಯ ಕಾರ್ಯಕ್ರಮ ಅನುಷ್ಠಾನಗೊಳ್ಳಬೇಕು ಎಂದಾಗ ಜನರು ಸಂಪೂರ್ಣ ಬೆಂಬಲ ಸೂಚಿಸಿ ಅಧಿಕಾರ ಕೊಟ್ಟಿದ್ದಾರೆ. ಹಿಂದೆ ಅಟಲ್ಜಿ ಅವರು ದೇಶದ ಪ್ರಧಾನಿಯಾಗಿದ್ದಾಗ ಈ ದೇಶವನ್ನು ಮುನ್ನಡೆಸಿ ಸಾಲದಲ್ಲಿ ಮುಳುಗಿದ ದೇಶವನ್ನು ಸಾಲ ಮುಕ್ತವಾಗಿ ಮಾಡಿ ದೇಶದ ಎಲ್ಲಾ ರಾಜ್ಯಗಳನ್ನು ಅಭಿವೃದ್ಧಿಪಡಿಸಲು ಚಿಂತೆ ಮಾಡಿದರು. ಅದೇ ರೀತಿ ಮೋದಿಯವರು ಸಹ ದೇಶದ ಜನಸಾಮಾನ್ಯರ ನೆಮ್ಮದಿಗೆ, ಅಭಿವೃದ್ಧಿಗೆ ಸಹಕರಣ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ದೇಶಭಕ್ತರ ಆಧಾರದ ಮೇಲೆ ದೇಶ ಕಟ್ಟಲು ಮುಂದಾಗಿದ್ದು ಆದ್ದರಿಂದ ನಮ್ಮ ಪಕ್ಷವು ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ತಿಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ,…
ನವದೆಹಲಿ, ಖಾಸಗಿ ಏಜೆನ್ಸಿಗಳ ಮೂಲಕ ಎಫ್ಎಂ ರೇಡಿಯೊ ಪ್ರಸಾರ ಸೇವೆಗಳ ವಿಸ್ತರಣೆಯ ನೀತಿ ಮಾರ್ಗಸೂಚಿಗಳಲ್ಲಿ ಒಳಗೊಂಡಿರುವ ಕೆಲವು ನಿಬಂಧನೆಗಳ ತಿದ್ದುಪಡಿಗಳನ್ನು ಸರ್ಕಾರ ಮಂಗಳವಾರ ಅನುಮೋದಿಸಿದೆ. ದೇಶದಲ್ಲಿ ಈಸ್ ಆಫ್ ಡೂಯಿಂಗ್ ಬಿಸಿನೆಸ್ಗೆ ದಾರಿ ಮಾಡಿಕೊಡುವ ಸಲುವಾಗಿ ತಿದ್ದುಪಡಿಗಳನ್ನು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಳೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂರು ತಿದ್ದುಪಡಿಗಳು ಒಟ್ಟಾಗಿ ಖಾಸಗಿ ಎಫ್ಎಂ ರೇಡಿಯೊ ಉದ್ಯಮವು ಆರ್ಥಿಕತೆಯನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಸಹಾಯ ಮಾಡುತ್ತದೆ. ಎಫ್ಎಂ ರೇಡಿಯೊ ಮತ್ತು ಮನರಂಜನೆಯನ್ನು ದೇಶದ ಮೂರನೇ ಶ್ರೇಣಿ ನಗರಗಳಿಗೆ ಮತ್ತಷ್ಟು ವಿಸ್ತರಿಸಲು ದಾರಿ ಮಾಡಿಕೊಡುತ್ತದೆ ಎಂದು ಸರ್ಕಾರ ಹೇಳಿದೆ. ಮಾರ್ಗಸೂಚಿಗಳಲ್ಲಿನ ತಿದ್ದುಪಡಿಗಳು ಇಂತಿವೆ. 15 ವರ್ಷಗಳ ಪರವಾನಗಿ ಅವಧಿಯಲ್ಲಿ ಅದೇ ಮ್ಯಾನೇಜ್ಮೆಂಟ್ ಗ್ರೂಪ್ನೊಳಗೆ ಎಂಎಫ್ ರೇಡಿಯೊ ಅನುಮತಿಗಳ ಪುನರ್ ರಚನೆಗಾಗಿ 3 ವರ್ಷದ ವಿಂಡೋ ಅವಧಿಯನ್ನು ತೆಗೆದುಹಾಕುವುದು. ಚಾನಲ್ ಹಿಡುವಳಿಯಲ್ಲಿ ಶೇಕಡಾ 15ರಷ್ಟು ರಾಷ್ಟ್ರೀಯ ಮಿತಿಯನ್ನು ತೆಗೆದುಹಾಕುವುದು. ಎಫ್ಎಂ ರೇಡಿಯೊ ನೀತಿಯಲ್ಲಿ…
ಉತ್ತರ ಪ್ರದೇಶದ ಔರೈಯಾದಲ್ಲಿನ ದಿಬಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಹೊಲವೊಂದರಲ್ಲಿ ಸೋಮವಾರ 17 ವರ್ಷದ ಬಾಲಕಿಯ ಬೆತ್ತಲೆ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಬಾಲಕಿಯ ಮನೆಯವರು ಆರೋಪಿಸಿದ್ದಾರೆ. ಈ ಬಗ್ಗೆ ಬಾಲಕಿಯ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಬೆಳಗ್ಗೆ ಮಲ ವಿಸರ್ಜನೆಗೆಂದು ಹೊರ ಹೋಗಿದ್ದ ಆಕೆ ಎಷ್ಟೋ ಹೊತ್ತಾದರೂ ಮನೆಗೆ ಬಾರದೇ ಇದ್ದುದರಿಂದ ಆಕೆಗಾಗಿ ಹುಡುಕಾಟ ನಡೆಸಿದ್ದು, ಈ ವೇಳೆ ಗದ್ದೆಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ಬಳಿಕ ಔರೈಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಚಾರು ನಿಗಮ್ ಅವರು ವಿಧಿವಿಜ್ಞಾನ ತಜ್ಞರೊಂದಿಗೆ ಗ್ರಾಮಕ್ಕೆ ಆಗಮಿಸಿದ್ದಾರೆ ಮತ್ತು ಪ್ರಕರಣವನ್ನು ಭೇದಿಸಲು ವಿಶೇಷ ಕಾರ್ಯಾಚರಣೆ ಗುಂಪು ಸೇರಿದಂತೆ 10 ಪೊಲೀಸ್ ತಂಡಗಳನ್ನು ನಿಯೋಜಿಸಿದರು. ಪೊಲೀಸರು ಶವವನ್ನು ಹೊತ್ತೊಯ್ಯುವ ಮತ್ತು ಬಾಲಕಿ ಹಿಂದೆ ಕುಟುಂಬಸ್ಥರು ಹೋಗುತ್ತಿರುವ ವಿಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ‘ಔರೈಯಾದಲ್ಲಿ 17 ವರ್ಷದ ಬಾಲಕಿಯ ಬೆತ್ತಲೆ…
ಹಿರಿಯೂರು: ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ತಹಶೀಲ್ದಾರ್ ಪ್ರಶಾಂತ ಕೆ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ದಸರಾ ಹಬ್ಬವನ್ನು ಸಡಗರ- ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ ಕೆ. ಪಾಟೀಲ , ಈ ಮೊದಲು ಬರೀ ಪೂಜಾ ಕಾರ್ಯಕ್ರಮಕ್ಕೆ ಸೀಮಿತವಾಗಿದ್ದ ದಸರಾ ಹಬ್ಬ, ಇದೇ ಮೊದಲ ಬಾರಿಗೆ ತಾಲೂಕು ಕಚೇರಿಯನ್ನು ತಳಿರುತೋರಣಗಳೊಂದಿಗೆ ಸಿಂಗರಿಸಿ, ವಿಶೇಷ ಪೂಜೆಯೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ನಗರದ ಪ್ರಸಿದ್ದ ದಕ್ಷಿಣಕಾಶಿ ಎಂದೇ ಹೆಸರಾದ ಶ್ರೀತೇರುಮಲ್ಲೇಶ್ವರಸ್ವಾಮಿಯ ಅಂಬಿನೋತ್ಸವ ಸಹ ನಡೆಯಲಿದ್ದು, ನಗರದ ತಾಲ್ಲೂಕು ಕಚೇರಿ ಸೇರಿದಂತೆ ತಾಲ್ಲೂಕು ಕಚೇರಿಯಿಂದ ಮುಖ್ಯಬೀದಿಯುದ್ಧಕ್ಕೂ ಹಾಗೂ ಶ್ರೀತೇರುಮಲ್ಲೇಶ್ವರ ದೇವಸ್ಥಾನದವರೆಗೆ ಸತತ 3 ದಿನಗಳ ಕಾಲ ವಿಶೇಷ ದೀಪಾಲಂಕಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬುದಾಗಿ ಇದೇ ವೇಳೆ ತಿಳಿಸಿದರು. ದಸರಾ ಹಿನ್ನೆಲೆಯಲ್ಲಿ ಕಚೇರಿಯ ಸಿಬ್ಬಂದಿ ಹೊಸ ಉಡುಗೆ, ತೊಡುಗೆ ತೊಟ್ಟು ಅದರಲ್ಲೂ ಮಹಿಳಾ ಸಿಬ್ಬಂದಿ ಹಸಿರುಸೀರೆಯನ್ನು ಉಟ್ಟು ಸಡಗರಸಂಭ್ರಮಗಳಿಂದ ಕಚೇರಿಯಲ್ಲಿ ಓಡಾಡುತ್ತಿದ್ದದ್ದು ಅತ್ಯಂತ ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಉಪತಹಶೀಲ್ದಾರರಾದ ಮಂಜಪ್ಪ ,…
ಮಧುಗಿರಿ: ತಾಲೂಕಿನ ದೊಡ್ಡೇರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಸಾರ್ವಜನಿಕರು ಪರದಾಡುತ್ತಿರುವ ಸ್ಥಿತಿಯಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಡ್ಯೂಟಿಯಲ್ಲಿರುವ ವೈದ್ಯರು ಹಾಗೂ ನರ್ಸ್ ಗಳು 3 ಗಂಟೆಗಳ ಡ್ಯೂಟಿ ಮುಗಿಸಿಕೊಂಡು ಹೋಗುತ್ತಿದ್ದಾರೆ. ಆ ಬಳಿಕ ಇಡೀ ಆಸ್ಪತ್ರೆ ವೈದ್ಯರು, ನರ್ಸ್ ಇಲ್ಲದೇ ಖಾಲಿ ಖಾಲಿಯಾಗಿರುವ ಪರಿಸ್ಥಿತಿ ಕಂಡು ಬಂದಿದೆ. ಇನ್ನೂ ಚಿಕಿತ್ಸೆ ಪಡೆಯಲು ಬರುವ ರೋಗಿಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೇವಲ ಹೆಸರಿಗಷ್ಟೇ ಆಸ್ಪತ್ರೆ ಇದ್ದಂತಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಈ ಭಾಗದ ಜನರಿಗೆ ಸರಿಯಾದ ಆರೋಗ್ಯ ಸೇವೆಗಳನ್ನು ಒದಗಿಸಲು ಮುಂದಾಗಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy