Subscribe to Updates
Get the latest creative news from FooBar about art, design and business.
- ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
- ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
- ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
- ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
- ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
- ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
- ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
- ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
Author: admin
ನವದೆಹಲಿ : ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಬಣಗಳಿಗೆ ಶಿವಸೇನೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಬಳಸಬಾರದೆಂದು ಕೇಂದ್ರ ಚುನಾವಣಾ ಆಯೋಗವು ತಾತ್ಕಾಲಿಕ ಆದೇಶ ನೀಡಿದೆ. ಈ ನಿರ್ಣಯ ಮಹಾರಾಷ್ಟ್ರದ ರಾಜ್ಯ ರಾಜಕಾರಣದಲ್ಲಿ ಇದು ಒಂದು ಮಹತ್ವದ ಎಂದೇ ಭಾವಿಸಲಾಗುತ್ತಿದೆ. 25 ವರ್ಷಗಳ ಹಳೆಯ ಮೈತ್ರಿ ಬಿಜೆಪಿ ಪಕ್ಷ ಮತ್ತು ಶಿವಸೇನೆ ಮೈತ್ರಿಯನ್ನು ಮುರಿದು ರಾಷ್ಟ್ರವಾದಿ ಕಾಂಗ್ರೆಸ್, ಕಾಂಗ್ರೆಸ್ ಪಕ್ಷ, ಮತ್ತು ಶಿವಸೇನೆ ಮಹಾ ಘಟಬಂಧನ್ ರಚಿಸಿ ಮಹಾರಾಷ್ಟ್ರದಲ್ಲಿ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ ಶಿವಸೇನೆಯ ತನ್ನ ಆಂತರಿಕ ಭಿನ್ನಮತದಿಂದಾಗಿ ಪಕ್ಷ ವಿಭಾಗವಾಯಿತು. 52 ಶಾಸಕರ ಹೊಂದಿದ್ದ ಶಿವಸೇನೆ 40 ಶಾಸಕರು ಜೊತೆ ಸೇರಿ ಏಕನಾಥ್ ಶಿಂಧೆ ಪಕ್ಷದಲ್ಲಿ ಬಂಡಾಯವೆದ್ದು ಬಿಜೆಪಿ ಪಕ್ಷದ ಬೆಂಬಲ ಪಡೆದು ಸರ್ಕಾರ ರಚನೆ ಮಾಡಿದರು. ಮುಖ್ಯಮಂತ್ರಿ ಆಗಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ಆ ಬಳಿಕ ರಾಜಕೀಯ ಬೆಳವಣಿಗಳಲ್ಲಿ ಶಿಂಧೆ ಬಣ ಹಾಗೂ ಠಾಕ್ರೆ ಬಣ ಶಿವಸೇನೆ ಪಕ್ಷದ ಮಾಲೀಕತ್ವದ…
ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನ.22 1939ರಲ್ಲಿ ಜನಿಸಿದ ಅವರು, ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಜನರ ಮನಸ್ಸಿನಲ್ಲಿ ದಶಕಗಳ ಕಾಲ ಅಚ್ಚಳಿಯದೆ ಉಳಿದಿದ್ದು, ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಮುಲಾಯಂ ಸಿಂಗ್ ಯಾದವ್ ಹಿನ್ನೆಲೆ: ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದ ಸಾಧಾರಣ ಕುಟುಂಬದಲ್ಲಿ ನ.22, 1939 ಜನಿಸಿದರು. ಆಗ್ರಾ ವಿವಿಯಿಂದ M.A ಪದವಿ ಪಡೆಯುವ ಅವರು, ಲೋಹಿಯಾ & ರಾಜ್ ನಾರಾಯಣ್ ರಂತಹ ಮಹಾನಾಯಕರ ಮಾರ್ಗದರ್ಶನದಲ್ಲಿ 1967ರಲ್ಲಿ ಉತ್ತರಪ್ರದೇಶ ವಿಧಾನಸಭೆಗೆ ಚುನಾಯಿತರಾದರು. ಕಾಲಾನಂತರದಲ್ಲಿ ಸಮಾಜವಾದಿ ಪಕ್ಷವನ್ನು ಕಟ್ಟಿದರು. ಮೂರು ಬಾರಿ ಸಿಎಂ ಆಗಿಯೂ ಆಯ್ಕೆಯಾದರು. 1996ರಲ್ಲಿ ಲೋಕಸಭೆಗೆ ಆಯ್ಕೆಯಾದ ಅವರು ರಕ್ಷಣಾ ಸಚಿವರಾಗಿಯು ಕಾರ್ಯನಿರ್ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಮಧುಗಿರಿ: ಶಾಸಕ ಎಂ.ವಿ.ವೀರಭದ್ರಯ್ಯ ಅವರನ್ನೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಲು ಮಧುಗಿರಿ ಕ್ಷೇತ್ರದಿಂದ ಕಾರ್ಯಕರ್ತರು ಹಾಗೂ ಎಂ.ವಿ.ವೀರಭದ್ರಯ್ಯ ಅಭಿಮಾನಿಗಳು ಸಹಸ್ರಾರು ವಾಹನಗಳಲ್ಲಿ ಭಾನುವಾರ ಬೆಂಗಳೂರಿಗೆ ತೆರಳಿದರು. ಕ್ಷೇತ್ರದ ವಿವಿಧ ಗ್ರಾಮಗಳಿಂದ ವಾಹನಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ದಂಡಿನ ಮಾರಮ್ಮ ದೇವಾಲಯದ ಮುಂಭಾಗ ಜಮಾವಣೆಗೊಂಡು ಶಾಸಕ ಎಂ.ವಿ.ವೀರಭದ್ರಯ್ಯ ಅವರೇ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಯಾಗಬೇಕೆಂದು ಆಗ್ರಹಿಸಿ ಜೈ ಕಾರ ಹಾಕಿದರು. ಎಚ್.ಡಿ.ಕುಮಾರಸ್ವಾಮಿ ಅವರು ಈ ವಿಚಾರವಾಗಿ ಸೂಕ್ತ ತೀರ್ಮಾನ ಕೈ ಗೊಂಡರೆ ಕ್ಷೇತ್ರದಲ್ಲಿ ಯಾವುದೇ ಗೊಂದಲ ಉಂಟಾಗುವುದಿಲ್ಲ ಎಂದರು. ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ ಮಾತನಾಡಿ, ಕ್ಷೇತ್ರದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಅವರು ಉತ್ತಮವಾದ ಅಭಿವೃದ್ಧಿ ಕೆಲಸ – ಕಾರ್ಯಗಳನ್ನು ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಂ.ವಿ.ವೀರಭದ್ರಯ್ಯ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಬೇಕು. ಅವರನ್ನು ಗೆಲ್ಲಿಸುವುದಕ್ಕೆ ನಾವೆಲ್ಲರೂ ಶ್ರಮ ಹಾಕಬೇಕೆಂದು ತಿಳಿಸಿದರು. ಮುಖಂಡ ಬಿ.ಎಸ್.ಶ್ರೀನಿವಾಸ ಮಾತನಾಡಿ, ಎಂ.ವಿ.ವೀರಭದ್ರಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವವರೆಗೂ…
ಮಧುಗಿರಿ: ರಾಜ್ಯದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ತಿಳಿಸಿದರು. ಪಟ್ಟಣದ ಎಂ.ಎಸ್.ರಾಮಯ್ಯ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗದ ಸಮಾವೇಶದ ಪೂರ್ವಭಾವಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಬಿಜೆಪಿ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇಂದ್ರ ಸರ್ಕಾರದಲ್ಲಿ 27 ಮಂತ್ರಿ ಸ್ಥಾನ ನೀಡುವ ಮೂಲಕ ಹಿಂದುಳಿದ ಸಮುದಾಯ ಅಭಿವೃದ್ಧಿಗೆ ಮುಂದಾಗಿದೆ. ಅ.30ರಂದು ಕಲಬುರ್ಗಿಯಲ್ಲಿ ನಡೆಯುವ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಮಧುಗಿರಿ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಕಾರ್ಯಕರ್ತರು ಬಿಜೆಪಿ ಸರ್ಕಾರಗಳ ಸಾಧನೆಗಳನ್ನು ಜನರಿಗೆ ತಿಳಿಸಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು. ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಬಿಜೆಪಿ ಪಕ್ಷ ಜಿಲ್ಲೆಯಲ್ಲಿ ಸದೃಡವಾಗಿ ಬೆಳೆಯುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ 3 ಕ್ಷೇತ್ರವನ್ನು ಗೆಲ್ಲಲು ಪಣ ತೊಡಲಾಗಿದೆ. ಇದಕ್ಕೆ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದರು. ಮಾಜಿ…
ತುರುವೇಕೆರೆ: ‘ಭಾರತವನ್ನು ಒಂದುಗೂಡಿಸುವುದು ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ. ಹಿಂಸಾಚಾರ, ದ್ವೇಷದಿಂದ ಮಾನಸಿಕವಾಗಿ ವಿಭಜನೆಯಾಗುತ್ತಿರುವ ಭಾರತವನ್ನು ಒಗ್ಗೂಡಿಸುವುದು. ಆರ್ಥಿಕ ಅಸಮಾನತೆ ಮೂಲಕ ಕೆಲವರು ದೇಶದ ಶ್ರೀಮಂತರಾದರೆ, ಬಹುತೇಕರು ಬಡವರಾಗುತ್ತಿರುವುದರ ವಿರುದ್ಧ. ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಕುಸಿಯುತ್ತಿದ್ದು, ಕೆಲ ಉದ್ಯೋಮಿಗಳ ಬಳಿ ದೇಶದ ಸಂಪತ್ತು ಸೇರುತ್ತಿರುವುದರ ವಿರುದ್ಧ. ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಹೆಚ್ಚಾಗುತ್ತಿರುವುದರ ವಿರುದ್ಧ. ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಜನಸಾಮಾನ್ಯರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಈ ಯಾತ್ರೆಯ ಪ್ರಮುಖ ಉದ್ದೇಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತ ಐಕ್ಯತಾ ಯಾತ್ರೆ ಭಾಗವಾಗಿ ತುಮಕೂರಿನ ತುರುವೇಕೆರೆಯಲ್ಲಿ ಮಾಧ್ಯಮಗಳ ಜತೆ ರಾಹುಲ್ ಗಾಂಧಿ ಅವರು ಶನಿವಾರ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಜೈರಾಮ್ ರಮೇಶ್, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ…
ಕೊರಟಗೆರೆ: ನೈಸರ್ಗಿಕ ಬಂಡೆಗಳ ಮೇಲೆ ನೂರಾರು ವರ್ಷಗಳಿಂದ ಕೃಷಿ ಉತ್ಪನ್ನಗಳನ್ನು ಶುಚಿ ಮಾಡುತ್ತಿದ್ದ ರೈತರಿಗೆ ಕಳೆದ ಮೂರು ವರ್ಷಗಳಿಂದ ಮದ್ಯದ ಬಾಟಲ್ ನ ಚೂರುಗಳನ್ನು ಸ್ವಚ್ಚಗೊಳಿಸುವುದೇ ತಲೆ ನೋವಾಗಿದೆ. ಕೃಷಿಕರು ತಾವು ಬೆಳೆದ ರಾಗಿ,ತೊಗರಿ,ಜೋಳ ಸೇರಿದಂತೆ ಆಹಾರ ಬೆಳೆಗಳನ್ನು ನೈಸರ್ಗಿಕ ಬಂಡೆಯ ಮೇಲೆ ಶುಚಿ ಮಾಡುತ್ತಿದ್ದರು. ಜಮೀನುಗಳಲ್ಲಿ ಕಣ ಸಿದ್ಧ ಮಾಡುವ ಸಂಪ್ರದಾಯ ಕೈಬಿಟ್ಟ ನಂತರ ಮತ್ತು ರಸ್ತೆ ಮೇಲೆ ಸಂಸ್ಕರಣೆ ಮಾಡಿದರೆ ಶುಚಿಯಾಗಿರುವುದಿಲ್ಲ ಎಂದು ಬಂಡೆಗಳನ್ನೇ ರೈತರು ಅಶ್ರಯಿಸಿದ್ದರು. ಅನಂತರ ಬಂಡೆಗಳ ಮೇಲೆ ಜಾಗ ಕಾಯ್ದಿರಿಸಲು ಕೃಷಿಕರಲ್ಲಿ ಪೈಪೋಟಿ ಪ್ರಾರಂಭವಾಗಿತ್ತು. ತೋವಿನಕೆರೆ ಸಮೀಪ ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ತಿರುವಿನಲ್ಲಿರುವ ಬಂಡೆ ಮೇಲೆ ರಾಗಿ ತೆನೆಗಳನ್ನು ರಾಶಿ ಹಾಕಿ ಶುಚಿ ಮಾಡಲಾಗುತ್ತಿದೆ. ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ಆಲದ ಮರದ ಬಂಡೆ, ಮಲ್ಲಪುಡಿ ಬಂಡೆ, ಓಣಿ ಬಂಡೆ, ಜುಂಜರಾಮನಹಳ್ಳಿ ಬಂಡೆ, ಹೊಲತಾಳುವಿನ ಸೀಬಯ್ಯನ ಬಂಡೆ,ಗೊಲ್ಲರ ಹಟ್ಟಿ ಬಂಡೆ, ನವನಗರ ಬಂಡೆ, ಬಿಕ್ಕೆಗುಟ್ಟೆ ಬಂಡೆಗಳ ಮೇಲೆ ಹಲವು ಟನ್ ಗಳಷ್ಟು ರಾಗಿ,…
ಕೊರಟಗೆರೆ: ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಬೈಪಾಸ್ ನ ವಡ್ಡಗೆರೆ ಕ್ರಾಸ್ ನ ಬಳಿ ದುರ್ಘಟನೆ ಜರುಗಿದ್ದು, ಪಟ್ಟಣದ ನಿವಾಸಿಯಾದ ಬಸವರಾಜು ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮೃತ ಬಸವರಾಜು ವಡ್ಡಗೆರೆ ಮಾರ್ಗವಾಗಿ ಕೊರಟಗೆರೆಗೆ ಬರುವಾಗ ಬೈಪಾಸ್ ನಲ್ಲಿ ರಸ್ತೆ ದಾಟುವ ಸಂದರ್ಭದಲ್ಲಿ ಕಾರು ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸವರಾಜುವಿಗೆ ಗಂಭೀರವಾಗಿ ಗಾಯವಾಗಿದ್ದು, ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ನೆಲಮಂಗಲ: ರಾಜ್ಯ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಲಾವಣ್ಯ ಜಿ.ಎನ್.ರವರನ್ನು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ ಆದೇಶದಂತೆ ಹಾಗೂ ಸಭೆಯ ಒಮ್ಮತದ ನಿರ್ಣಯದಂತೆ ರಾಜ್ಯಾಧ್ಯಕ್ಷರು ಆದೇಶ ಪತ್ರ ನೀಡಿ ನೇಮಕ ಮಾಡಿದರು. ನೆಲಮಂಗಲದ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷೆಯಾಗಿ ಲಾವಣ್ಯ ಜಿ.ಎನ್. ಅವರಿಗೆ ಆದೇಶ ಪತ್ರ ನೀಡಲಾಯಿತು. ರಾಜ್ಯ ಮಹಿಳಾ ಘಟಕದ ಅಧಿಕಾರ ವಹಿಸಿಕೊಂಡು ನೊಂದವರ ಧ್ವನಿಯಾಗಿ ಸಂಘಟನೆಯ ಜವಾಬ್ದಾರಿಯನ್ನು ವೇದಿಕೆಯ ತತ್ವ ಸಿದ್ದಂತಾಗಳಾಡಿಯಲ್ಲಿ ಕೆಲಸ ಮಾಡುವಂತೆ ಇದೇ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್.ರವರು ಮಾರ್ಗದರ್ಶನ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಸಾಮಾಜಿಕ ಜಾಲತಾಣದ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಹೆಚ್.ಜಿ.ಗೌಡ, ರಾಜ್ಯ ಸಾಮಾಜಿಕ ಜಾಲತಾಣದ ಘಟಕದ ಸಂಘಟನಾ ಕಾರ್ಯದರ್ಶಿಯಾದ ಮಹೇಶ್ ಜಿ.ಗೌಡ ಹಾಗೂ ನೆಲಮಂಗಲ ತಾಲ್ಲೂಕು ಅಧ್ಯಕ್ಷರಾದ ಕಾಂತ್ ಕುಮಾರ್, ಉಪಾಧ್ಯಕ್ಷರಾದ ಗಂಗಾಧರ್, ಇನ್ನಿತರ ರಾಜ್ಯ ಸಮಿತಿಯ ಕಾರ್ಯಕರ್ತರು ಹಾಗೂ…
ಬೆಳಗಾವಿ: ಚಿನ್ನದ ವ್ಯಾಪಾರಿಯನ್ನು ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಕಾಂಬಳೆ(25), ಅವಧೂತ ಕೋಳಿ(25), ಅಕ್ಷಯ್ ಕೊಂಡಗೇರಿ(29), ಪಂಕಜ್ ಕೋಳಿ(25) ಎಂಬ ಬಂಧಿತ ಆರೋಪಿಗಳು. ಬಂಧಿತರಿಂದ ಸುಲಿಗೆ ಮಾಡಿದ 75 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಸಹಿತ ಕೃತ್ಯಕ್ಕೆ ಬಳಸಿದ 2 ಬೈಕ್ಗಳು, 4 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ನಲ್ಲಿ ದೋಂಡಿರಾಮ್ ವಿಷ್ಣು ಕಾಂಬಳೆ ಎಂಬುವರಿಂದ ಚಿನ್ನ-ಬೆಳ್ಳಿ ಕದ್ದು ಆರೋಪಿಗಳು ಪರಾರಿಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಸ್ರೇಲ್ ನಲ್ಲಿ ಭಾರತದ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿತ್ತು. ಇವರೆಲ್ಲರೂ 13 ರಿಂದ 15 ವರ್ಷದೊಳಗಿನವರು. 18 ವರ್ಷದ ಯೊಯೆಲ್ ಲೆಹಿಂಗ್ಹಾಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಚಾಕು ಹೊಡೆದಾಟಕ್ಕೆ ಬಲಿಯಾಗಿದ್ದಾನೆ. ಇಸ್ರೇಲ್ನ ಕಿರ್ಯಾತ್ ಸೊಮೊನಾ ನಗರದಲ್ಲಿ ಈ ಘಟನೆ ನಡೆದಿದೆ. ಯೊಯೆಲ್ ಒಂದು ವರ್ಷದ ಹಿಂದೆ ತನ್ನ ಕುಟುಂಬದೊಂದಿಗೆ ಭಾರತದಿಂದ ಇಸ್ರೇಲ್ಗೆ ವಲಸೆ ಬಂದಿದ್ದ. ಅವರು ನೋಫ್ ಹಗಲಿಲ್ ಎಂಬ ಊರಿನಲ್ಲಿದ್ದಾರೆ. ಹುಟ್ಟುಹಬ್ಬದ ಸಮಾರಂಭದಲ್ಲಿ ಸುಮಾರು 20 ಯುವಕರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಯೊಯೆಲ್ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಬಿನೈ ಮಿನಾಶೆ ಯಹೂದಿ ಸಮುದಾಯವು ಭಾರತದ ಮಣಿಪುರ ಮತ್ತು ಮಿಜೋರಾಂ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಗುಂಪಿಗೆ ಸೇರಿದ ಜನರು ಕಳೆದ ಎರಡು ದಶಕಗಳಿಂದ ಇಸ್ರೇಲ್ಗೆ ವಲಸೆ ಬರುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy