Author: admin

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯ ವೇಳೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಯುವತಿಯರಿಗೆ ಬ್ರಾ ಗಳನ್ನು ತೆಗೆಯುವಂತೆ ಸೂಚಿಸಿದ ಪ್ರಕರಣ ಕುರಿತು ತನಿಖೆಗೆ ಆದೇಶಿಸಲಾಗಿದೆ. ಮಾನವ ಹಕ್ಕುಗಳ ಆಯೋಗ ಈ ಬಗ್ಗೆ ತನಿಖೆ ನಡೆಸಿ ೧೫ ದಿನಗಳಲ್ಲಿ ಕೊಲ್ಲಂ ಗ್ರಾಮಾಂತರ ಎಸ್ಪಿಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಬ್ರಾ ಗಳನ್ನು ತೆಗೆಯುವಂತೆ ಸಿಬ್ಬಂದಿ ಒತ್ತಾಯಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪೋಷಕರೂ ಕೂಡ ಸಿಡಿಮಿಡಿಗೊಂಡಿದ್ದಾರೆ. ಈ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನೀಟ್ ಪರೀಕ್ಷೆ ಬರೆದ ಮಹಿಳೆಯ ತಂದೆ ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದರು. ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಪುತ್ರಿ ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳ ಉಡುಪನ್ನು ತೆಗೆಯುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಇದರಿಂದಾಗಿ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕ ಹಿಂಸೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಾಥಮಿಕ ತಪಾಸಣೆಯ ಬಳಿಕ…

Read More

ವಿಜಯಪುರದಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣ ಇದೀಗ ಬಹಿರಂಗಗೊಂಡಿದೆ. ಈ ಪ್ರಕರಣ ಇಡೀ ಜಿಲ್ಲೆಯನ್ನೇ ಬೆಚ್ಚಿ ಬಿಳಿಸುವಂತೆ ಮಾಡಿದೆ. ವಿಜಯಪುರ ನಗರದ ಬಸವರಾಜ ಮಮದಾ ಪುರ ಇವರ ಪುತ್ರಿ ಪ್ರಿಯಾಂಕಾ ಇವಳನ್ನು, ತಮ್ಮ ಸಂಬಂಧಿಕ ರಲ್ಲಿಯೇ ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಹುಚ್ಚಪ್ಪಗೌಡ ಪಾಟೀಲ ಎನ್ನುವ ನೊಂದಿಗೆ 2008 ರಲ್ಲಿ ಮದುವೆ ಮಾಡಿ ಕೊಡಲಾಗಿತ್ತು. ಮದುವೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ನಂತರದ ದಿನಗಳಲ್ಲಿ ಇಬ್ಬರಲ್ಲಿಯೂ ಮನಸ್ತಾಪ ಉಂಟಾಗಿ ಪದೇಪದೇ ತವರು ಮನೆಗೆ ಬರುತ್ತಿ ದ್ದಳು, ಇತ್ತ ಕಡೆಪೋಷಕರೂ ಅವಳ ಮನವೊಲಿಸಿ ಗಂಡನ ಮನೆಗೆ ಬಿಟ್ಟು ಬರುತ್ತಿ ದ್ದರು. 2011ರ ವರೆಗೂ ಹೀಗೆಯೇ ಮುಂದು ವರೆದಿತ್ತು. ಒಂದು ದಿನ ಪ್ರಿಯಾಂಕ ನನಗೆ ಗಂಡನ ಜೊತೆಗೆ ಸಂಸಾರ ಮಾಡಲು ಇಷ್ಟವಿಲ್ಲ, ನಾನು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದೇನೆ ಎಂದು ಪೋಷಕರ ಬಳಿ ಹೇಳಿದ್ದಾಳೆ. ಆಗ ನಿನಗೆ ಮದುವೆಯಾಗಿದ್ದು, ಈ ರೀತಿಯಾಗಿ ಮಾಡು ವುದು ಸರಿಯಲ್ಲ ಎಂದು ಸಂಬಂಧಿಕರು ಎಲ್ಲ ರೀತಿಯ ಬುದ್ಧಿವಾದ…

Read More

ದೇಶದಲ್ಲಿ ೨ನೇ ಮಂಕಿಪಾಕ್ಸ್ ರೋಗ ದೃಢಪಟ್ಟಿದ್ದು, ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಂಡು ಬಂದ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ರಾಜ್ಯ ಪ್ರವೇಶಿಸುವವರ ಮೇಲೆ ಕಣ್ಗಾವಲು ಇಡಲಾಗಿದ್ದು, ಪ್ರತಿಯೊಬ್ಬರನ್ನು ತಪಾಸಣೆ ಮಾಡಲಾಗುತ್ತಿದೆ. ಕಳೆದ ಜುಲೈ ೧೩ ರಂದು ದುಬೈನಿಂದ ಮಂಗಳೂರು ಮೂಲಕ ಕಣ್ಣೂರಿಗೆ ಆಗಮಿಸಿದ ೩೧ ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಖಚಿತ ಪಟ್ಟಿತ್ತು. ಈತ ಮಂಗಳೂರಿಗೆ ವಿಮಾನದಲ್ಲಿ ಬಂದು ನಂತರ ಕಣ್ಣೂರಿಗೆ ತೆರಳಿದ್ದು, ಈತನ ಜತೆ ಮಂಗಳೂರಿಗೆ ಆಗಮಿಸಿದ್ದ ವಿಮಾನದಲ್ಲಿದ್ದ ೩೦ ಸಹ ಪ್ರಯಾಣಿಕರನ್ನು ಹೋಂ ಐಸೋಲೇಷನ್‌ನಲ್ಲಿಡಲಾಗಿದೆ.ಈತನ ಜತೆ ವಿಮಾನದಲ್ಲಿ ಒಟ್ಟು ೧೯೧ ಪ್ರಯಾಣಿಕರಿದ್ದು, ಅವರಲ್ಲಿ ಶಿಷ್ಟಾಚಾರದ ಪ್ರಕಾರ ಮುಂದಿನ ಮೂರು ಸೀಟು ಮತ್ತು ಹಿಂದಿನ ಸೀಟುಗಳ ೩೪ ಪ್ರಯಾಣಿಕರನ್ನು ತಪಾಸಣೆ ಮಾಡಬೇಕಿದ್ದು, ಇವರಲ್ಲಿ ೧೦ ಮಂದಿ ಮಂಗಳೂರು, ೧೫ ಮಂದಿ ಕಣ್ಣೂರು ಮತ್ತು ೯ ಮಂದಿ ಉಡುಪಿಯವರಾಗಿದ್ದು, ಇವರಲ್ಲಿ ೩೦ ಮಂದಿಯನ್ನು ಪತ್ತೆಹಚ್ಚಿ, ೨೧ ದಿನಗಳವರೆಗೆ ಹೋಂಐಸೋಲೇಷನ್‌ನಲ್ಲಿಡಲಾಗಿದೆ. ಉಳಿದ ೪ ಮಂದಿಯ ಪತ್ತೆಕಾರ್ಯ ನಡೆದಿದೆ.…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಮಧ್ಯಭಾಗದಲ್ಲಿ ಸಭೆ, ಸಮಾರಂಭಗಳು, ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ಪುರಭವನವನ್ನು ಕೆಡವಿ, ಸುಮಾರು 5 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ನಗರಸಭೆ ಕಟ್ಟಡ ನಿರ್ಮಿಸಲಾಗಿದ್ದು, ಈ ಕೆಲಸ ಪೂರ್ಣಗೊಂಡಿದ್ದರೂ, ಈ ಕಟ್ಟಡ ಉದ್ಘಾಟನಾ ಭಾಗ್ಯ ಕಂಡಿರುವುದಿಲ್ಲ, ಇದನ್ನು ಆದಷ್ಟು ಬೇಗ ಉದ್ಘಾಟಿಸಬೇಕು ಎಂಬುದಾಗಿ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಮನವಿ ಮಾಡಿದರು. ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ರಾಜ್ಯ ರೈತಸಂಘದ ನೇತೃತ್ವದಲ್ಲಿ ನೂತನ ನಗರಸಭಾ ಕಾರ್ಯಾಲಯವನ್ನು ಉದ್ಘಾಟನೆ ಮಾಡುವಂತೆ ಒತ್ತಾಯಿಸಿ, ನಗರಸಭೆ ಅಧ್ಯಕ್ಷರು ಹಾಗೂ ಪೌರಾಯುಕ್ತರ ಮೂಲಕ ಪೌರಾಡಳಿತ ಸಚಿವರಾದ ಎಂ.ಟಿ.ಬಿ.ನಾಗರಾಜ್ ರವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಮೂಲಕ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ ಸಿ ಹೊರಕೇರಪ್ಪ,  ಈ ನೂತನ ಕಟ್ಟಡ ಉದ್ಘಾಟನೆಗೆ ಪೀಠೋಪಕರಣಗಳು ಹಾಗೂ ಲಿಫ್ಟ್ ಅಳವಡಿಸುವ ಸಬೂಬು ಹೇಳುತ್ತಾ, ಕಾಲಹರಣ ಮಾಡುತ್ತಿರುವ ಅಧಿಕಾರಿಗಳ ನಡೆ ನಾಗರಿಕರಲ್ಲಿ ಅನುಮಾನ ಮೂಡಿಸುತ್ತಿದ್ದು,…

Read More

ಮಧುಗಿರಿ:  ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ದೊಡ್ಡೇರಿ ಗ್ರಾಮದ ಜಮೀನಿನಲ್ಲಿ ಮೇಯುತಿದ್ದ ಎರಡು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಎರಡು ಮೇಕೆ ಸ್ಥಳದಲ್ಲೇ ಮೃತಪಟ್ಟಿವೆ. ತಾಲೂಕಿನ ದೊಡ್ಡೇರಿ ಗ್ರಾಮದ ರಂಗನಾಥಪ್ಪನವರಿಗೆ ಸೇರಿದ ಮೇಕೆಗಳಾಗಿದ್ದು, ಸುಮಾರು ಮೂವತ್ತು ಸಾವಿರ ನಷ್ಟವಾಗಿದೆ ಎಂದು ಮಾಲೀಕ ಊರಿನ ಗ್ರಾಮಸ್ಥರು  ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದರು. ಈ ವೇಳೆ ನಮಗೆ ಪರಿಹಾರ ನೀಡಬೇಕು  ಎಂದು ಮಾಲೀಕರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಊರಿನ ಗ್ರಾಮಸ್ಥರಾದ ರಂಗನಾಥಪ್ಪ ಜಯಕುಮಾರ್ ರವೀಶ್ ಅಪ್ಪು ಕಾಂತು ಕಾಟ್ಮೆ ಲಿಂಗಯ್ಯ ಮೊದಲಾದವರು  ಪರಿಹಾರ ಕೋರಿ ಮನವಿ ಸಲ್ಲಿಸಿದ್ದಾರೆ. ವರದಿ: ದೊಡ್ಡೇರಿ ಮಹಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

‘ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಎಸ್.ಎಂ. ಕೃಷ್ಣ ಅವರ ನಂತರ ನಾನು ಪಕ್ಷದ ಅಧ್ಯಕ್ಷನಾಗಿದ್ದು, ಒಕ್ಕಲಿಗ ಸಮಾಜ ನನ್ನ ಬೆನ್ನ ಹಿಂದೆ ನಿಲ್ಲಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಪತ್ರಕರ್ತರು, ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಹೇಳುವ ಮೂಲಕ ತಾವು ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದೀರಾ ಎಂದು ಪ್ರಶ್ನಿಸಿದಾಗ ಅವರು ಉತ್ತರಿಸಿದರು. ‘ನಾನೇನು ಸನ್ಯಾಸಿನಾ? ನಾನು ಖಾದಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ ಹೊರತು, ಕಾವಿ ಬಟ್ಟೆ ಹಾಕಿ ಬಂದಿಲ್ಲ. ಆದರೆ ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರವನ್ನು ಪಕ್ಷ ತೀರ್ಮಾನ ಮಾಡಲಿದೆ. ನಾನು ಮುಖ್ಯಮಂತ್ರಿ ಆಗುವುದಕ್ಕಿಂತ ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ…

Read More

ಉಡುಪಿ: ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡಿರುವ ಕರ್ನಾಟಕದ ಕರಾವಳಿಯ ಕುವರಿ ಸಿನಿ ಶೆಟ್ಟಿಗೆ ಹುಟ್ಟೂರು ಉಡುಪಿಯಲ್ಲಿ ಮಂಗಳವಾರ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಅದ್ಧೂರಿಯ ಸ್ವಾಗತ ಕೋರಲಾಯಿತು. ಈ ಸಂದರ್ಭ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹುಟ್ಟೂರು ಕರಾವಳಿಯಲ್ಲಿ ಸಿಕ್ಕ ಅದ್ಧೂರಿ ಸ್ವಾಗತದಿಂದ ಖುಷಿಯಾಗಿದೆ. ತವರಿನಲ್ಲಿ ಅಜ್ಜಿಯನ್ನು ಭೇಟಿಯಾಗಿದ್ದು ಸಂತಸವನ್ನು ಹೆಚ್ಚಿಸಿದೆ. ನನ್ನ ಸಾಧನೆಯ ಹಿಂದೆ ಅಜ್ಜಿಯ ಸ್ಪೂರ್ತಿ ತುಂಬಿದ ಮಾತುಗಳು ಹಾಗೂ ಪ್ರೇರಣೆ ಇದೆ ಎಂದರು. ಇದೇ ವೇಳೆ ಮಿಸ್ ವರ್ಲ್ಡ್ ಸ್ಪರ್ಧೆಗೆ ತಯಾರಾಗುತ್ತಿದ್ದು, ಕರಾವಳಿಯ ಜನರ ಪ್ರೀತಿ ಹಾಗೂ ಇಲ್ಲಿನ ದೈವ ದೇವರ ಆಶೀರ್ವಾದ ಬೇಕು ಎಂದರು. ಸಿನಿ ಶೆಟ್ಟಿ ಜೊತೆಗೆ ತಂದೆ ಸದಾನಂದ ಶೆಟ್ಟಿ ಹಾಗೂ ತಾಯಿ ಹೇಮಾ ಶೆಟ್ಟಿ ಜತೆಗಿದ್ದರು. ಸಾರೋಟು ಸಮಾರಂಭದ ಅಂಗಳ ತಲುಪುತ್ತಿದ್ದಂತೆ ಅಭಿಮಾನಿಗಳು ಫೋಟೊ ಕ್ಲಿಕ್ಕಿಸಿ, ಸೆಲ್ಫಿ ತೆಗೆದುಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬೆಂಗಳೂರು:  ನಾಡ ಹಬ್ಬ ಮೈಸೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ. ಇಂದು ಮೈಸೂರು ದಸರಾ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ  ಉನ್ನತ ಮಟ್ಟದ ಸಭೆಯಲ್ಲಿ  ದಸರಾ ಹಬ್ಬದ ಉದ್ಘಾಟಕರಾಗಿ ಯಾರನ್ನು ಆಹ್ವಾನ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ದಸರಾ ಆಚರಣೆಯ ಸಮಿತಿ, ದಸರಾ ಉದ್ಘಾಟನೆಗೆ ಆಹ್ವಾನಿತರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಸರಾ ಬಗ್ಗೆ ಪ್ರಚಾರ ಮಾಡಲಾಗುವುದು. ದಸರಾ ಬ್ರ್ಯಾಂಡ್ ಆಗಬೇಕು ಎಂದರು. ಸೆಪ್ಟೆಂಬರ್ 26 ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ 5 ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಈ ವಸ್ತು ಪ್ರದರ್ಶನ 15 ದಿನ ಮೊದಲೇ ಆರಂಭಿಸಲು ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.…

Read More

ಮಂಡ್ಯ: ಸಾಹಿತಿ ದೇವನೂರು ಮಹಾದೇವ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಜಿಲ್ಲೆಯ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಧರಣಿ ನಡೆಸಿ, ಸಂಸದ ಪ್ರತಾಪ ಸಿಂಹ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ಹೊರಹಾಕಿದರು. ದೇವನೂರು ಮಹಾದೇವ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಪ್ರತಾಪ ಸಿಂಹ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇದೇ ವೇಳೆ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸರಗೂರು: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬಾಬು ಜಗಜೀವನರಾಂ ವಿಚಾರ ವೇದಿಕೆಯ ನೂತನ ಅಧ್ಯಕ್ಷರಾಗಿ ಕಲ್ಲಂಬಾಳು ನಾಗಣ್ಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯ ವಹಿಸಿ ಮಾತನಾಡಿದ ವೈಕುಂಠಯ್ಯ, ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಎರಡು ತಾಲ್ಲೂಕಿನಿಂದ ಒಬ್ಬರೇ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಸರಗೂರು ತಾಲ್ಲೂಕು ವಿಂಗಡನೆಯಾದ ಬಳಿಕ ಇದೆ ಮೊದಲ ಬಾರಿಗೆ ನೂತನ ಸರಗೂರು ತಾಲ್ಲೂಕಿನ ಬಾಬು ಜಗಜೀವನರಾಂ ವಿಚಾರ ವೇದಿಕೆ ನೂತನ ಅಧ್ಯಕ್ಷರನ್ನು ಎಲ್ಲಾ ಊರಿನ ಯಾಜಮಾರು ಮತ್ತು ಗ್ರಾಮಸ್ಥರು ಸಮ್ಮುಖದಲ್ಲಿ ಈ ಸಭೆ ನೂತನ ಅಧ್ಯಕ್ಷರನ್ನು ಆಯ್ಕೆ ನಡೆಯಿತು. ಮುಂದಿನ ಸಭೆಯಲ್ಲಿ ಪದಾಧಿಕಾರಿಗಳು ಆಯ್ಕೆ ಮಾಡುತ್ತೇವೆ ಎಂದರು. ನೂತನ ಅಧ್ಯಕ್ಷ ಕಲ್ಲಂಬಾಳು ಎನ್.ಕೆ.ನಾಗಣ್ಣ, ನಾಗಯ್ಯ(ದಾಸಿ).ಹೆಚ್ ಹನು ನಾಗಣ್ಣ, ವೆಂಕಟಪ್ಪ, ಸ್ವಾಮಿ, ಪುಟ್ಟಸ್ವಾಮಿ, ಶಿವರಾಜು, ಸುರೇಶ್, ಹೆಚ್ಚೂಪ್ರಸಾದ್, ಅಪಾಜ್ಜಿ, ನಾಗರಾಜು, ಜವರಯ್ಯ, ರಾಮಚಂದ್ರ ಡಿ ಆರ್ ಸಿ.ಇವರು ಅಧ್ಯಕ್ಷರನ್ನು ಅಭಿನಂದಿಸಿದರು. ಮುಖಂಡರ ಜಯರಾಮ್, ಗುಂಠಪ್ಪ, ಸಣ್ಣಕರಿಯ, ಆಟೋ ರಮೇಶ್, ಜಯರಾಂ ಜೆಪಿ.ನಂಜುಂಡ, ಗೊವಿಂದ, ವೆಲ್ಡಿಂಗ್ ಸ್ವಾಮಿ, ಶಿವರಾಜು,…

Read More