Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಹುಜನ ಸಮಾಜ ಪಾರ್ಟಿ(BSP)ಯ ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು ಅವರು ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಜಾನೆ ವೇಳೆಗೆ ಎದೆನೋವಿನಿಂದ ಅಸ್ವಸ್ಥರಾದ ದಾಸಪ್ಪ ಅವರನ್ನು ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಆಸ್ಪತ್ರೆಗೆ ತಲುಪುವ ಮೊದಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ. ದಾಸಪ್ಪ ಎಡಪದವು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಹುಜನ ಚಳುವಳಿಯ ಪ್ರಭಾವಿ ನಾಯಕರಾಗಿದ್ದು, ಜಿಲ್ಲೆಯ ದಲಿತ ಪರ ಹೋರಾಟ, ಸಂಘಟನೆಗಳ ಪೋಷಕರೂ ಆಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸುಮಾರು ಒಂದು ದಶಕದ ಹಿಂದೆ ಬರೋಬ್ಬರಿ ಅಂದಾಜು ರೂ.೪೫೦ ಕೋಟಿ ವೆಚ್ಚದಲ್ಲಿ ಅಂದಿನ ಸರ್ಕಾರದ ವತಿಯಿಂದ ನಿರ್ಮಾಣ ಮಾಡಿದಂತಹ ಬೆಳಗಾವಿಯ ಸುವರ್ಣ ವಿಧಾನ ಸೌಧ ಸರ್ಕಾರದ ಬೊಕ್ಕಸದ ಪಾಲಿಗೆ ಒಂದು ಬಿಳಿ ಆನೆ ಆದಂತಾಗಿದೆ. ಏಕೆಂದರೆ ಅಂದಿನಿಂದ ಈವರೆಗೆ ಬಂದು ಹೋಗಿರುವಂತಹ ವಿವಿಧ ಸರ್ಕಾರಗಳು ಸಚಿವಾಲಯ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರಿಸುವಲ್ಲಿ ವಿಫಲವಾಗಿವೆ. ರಾಜಕಾರಣಿಗಳ ಆರೋಪವೇನೆಂದರೆ ಇದೊಂದು ಕೇವಲ ಗೋಡೌನ್ ರೀತಿಯಿರುವ ಕಟ್ಟವಾಗಿದ್ದು, ಸಚಿವಾಲಯ ಮಟ್ಟದ ಕಚೇರಿಗಳನ್ನು ಸ್ಥಾಪಿಸುವ ಯಾವುದೇ ಸೂಕ್ತ ಸೌಲಭ್ಯಗಳಿಲ್ಲವಂತೆ. ಜೊತೆಗೆ, ಹಿರಿಯ ಅಧಿಕಾರಿಗಳು ಬೆಳಗಾವಿಗೆ ಸ್ಥಳಂತಾರವಾಗಲು ನಿರಾಕರಿಸುತ್ತಿರುವರಂತೆ. ಅದರೆ ಇದಕ್ಕೆ ತದ್ವಿರುದ್ಧ ಎನ್ನುವಂತೆ ಅಧಿಕಾರಿಗಳ ಆರೋಪವೇನೆಂದರೆ, ರಾಜಕಾರಣಿಗಳಿಗೆ ಅಧಿಕಾರಿಗಳು ಬೆಂಗಳೂರಿನಲ್ಲೇ ಇರಬೇಕು ಎನ್ನುವುದು ಮತ್ತು ವಿವಿಧ ಸಚಿವಾಲಯಗಳ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಂತಾರಿಸುವಲ್ಲಿ ಇರುವ ರಾಜಕೀಯ ಇಚ್ಛಾಶಕ್ತಿಯ ಕೊರತೆಗಳೇ ಸುವರ್ಣ ವಿಧಾನ ಸೌಧದ ಸಂಪೂರ್ಣ ಬಳಕೆಗೆ ಎದುರಾಗಿರುವ ಮುಖ್ಯ ಕಾರಣಗಳಂತೆ. ರಾಜ್ಯ ಸರ್ಕಾರ ಸುವರ್ಣ ವಿಧಾನ ಸೌಧದ ನಿರ್ವಹಣೆಗಾಗಿಯೇ ವಾರ್ಷಿಕ ಬರೋಬ್ಬರಿ ರೂ.೫ ಕೋಟಿ ವೆಚ್ಚ ಮಾಡುತ್ತಿದೆ.…
ನಾಪತ್ತೆಯಾಗಿದ್ದ ಟ್ರಾನ್ಸ್ಪೋರ್ಟ್ ಉದ್ಯಮಿ ಬಾಲಸುಬ್ರಮಣ್ಯನ್ ಮೃತದೇಹ ಬೆಂಗಳೂರಿನ ಜೆ.ಪಿ ನಗರ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಪುಟ್ಟೇನಹಳ್ಳಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು ಸಿಡಿಆರ್ ಪರಿಶೀಲಿಸಿ ಬಾಲಸುಬ್ರಮಣ್ಯನ್ ದೂರವಾಣಿ ಕರೆಗಳನ್ನು ವಿವರ ನೋಡಿದಾಗ ಮಹಿಳೆಯೊಬ್ಬಳ ಜೊತೆ ನಿರಂತರ ಸಂಪರ್ಕದಲ್ಲಿರುವ ವಿಚಾರ ತಿಳಿದುಬಂದಿದೆ. ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಕೊನೆಯ ಲೊಕೇಷನ್ ತೋರಿಸುತ್ತಿದೆ. ಹೀಗಾಗಿ ಬಾಲಸುಬ್ರಮಣ್ಯನ್ ಸಂಪರ್ಕದಲ್ಲಿದ್ದ ಆ ಮಹಿಳೆ ಯಾರು ಎನ್ನುವ ಬಗ್ಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ನವೆಂಬರ್ 16ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್ಗೆ ಕರೆದುಕೊಂಡು ಹೋಗಿದ್ದ ಬಾಲಸುಬ್ರಮಣ್ಯನ್ ಮನೆಗೆ ವಾಪಸ್ ಆಗದೇ ನಾಪತ್ತೆಯಾಗಿದ್ದರು. ನವೆಂಬರ್ 17ರಂದು ಬಾಲ ಸುಬ್ರಮಣಿಯನ್ ಮೃತ ದೇಹ ಪತ್ತೆಯಾಗಿದ್ದು,ಹಲವು ಅನುಮಾನಗಳು ಮೂಡಿತ್ತು. ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್ಗೆ ಕರೆದುಕೊಂಡು ಹೋಗಿದ್ದ ಬಾಲ ಸುಬ್ರಮಣಿಯನ್, ಸಂಜೆ 04-55ಕ್ಕೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸವಿದೆ ಎಂದು ತಿಳಿಸಿದ್ದರು. ಅನಂತರ ಕರೆ ಮಾಡಿದರೆ ಅವರ ನಂಬರ್ ಸ್ವಿಚ್ಡ್ ಆಫ್ ಬಂದಿದೆ. ಮಗ ತಕ್ಷಣವೇ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ತೆರಳಿ…
ನವದೆಹಲಿ : ರಾಜೀವ್ ಗಾಂಧಿ ಹಂತಕರ ಆರು ಜನರ ಬಿಡುಗಡೆ ಮಾಡುವಂತೆ ನವೆಂಬರ್ 11ರಂದು ಹೊರಡಿಸಿದ್ದ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳಿಗೆ ವಿನಾಯಿತಿ ನೀಡುವ ನವೆಂಬರ್ 11ರ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಈ ಪ್ರಕರಣವನ್ನ ವಾದಿಸಲು ತನಗೆ ಅವಕಾಶ ಸಿಗಲಿಲ್ಲ ಮತ್ತು ಸುಪ್ರೀಂ ಕೋರ್ಟ್ ಆದೇಶವು ಕಾನೂನಾತ್ಮಕವಾಗಿ ದೋಷಪೂರಿತವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ಇತ್ತಿಚಿಗೆ ಆರು ಜನ ರಾಜೀವ್ ಗಾಂಧಿ ಹಂತಕರು ಜೈಲಿನಿಂದ ಬಿಡುಗಡೆಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮುಂಬೈ : ಬಾಳಾಸಾಹೇಬ್ ಅವರು ಏಕೈಕ ಹಿಂದೂ ಹೃದಯ ಸಾಮ್ರಾಟ್ ಎಂದು ಹೇಳಿದ್ದು, ಪಕ್ಷದ ಸಂಸ್ಥಾಪಕರಿಗೆ ಭಾರತ ರತ್ನ ನೀಡುವಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ನಿಜವಾಗಿಯೂ ಹಿಂದುತ್ವದ ಬಗ್ಗೆ ಗೌರವವಿದ್ದರೆ, ವೀರ್ ಸಾವರ್ಕರ್ ಜೊತೆಗೆ ಬಾಳಾಸಾಹೇಬ್ ಠಾಕ್ರೆಯವರಿಗೂ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಬೇಕು. ಅವರು ಅದನ್ನು ಏಕೆ ಘೋಷಿಸುತ್ತಿಲ್ಲ.. ಕಳೆದ ಹದಿನೈದು ವರ್ಷಗಳಿಂದ ನಾವು ಈ ಬೇಡಿಕೆಯನ್ನು ಸಲ್ಲಿಸುತ್ತಿದ್ದೇವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ವಾಸ್ತವವಾಗಿ, ಭಾರತ ರತ್ನ ಪ್ರಶಸ್ತಿಯಿಂದ ವೀರ್ ಸಾವರ್ಕರ್ ಮತ್ತು ಬಾಳಾಸಾಹೇಬ್ ಠಾಕ್ರೆ ಅವರ ಸ್ಥಾನಮಾನವು ಹೆಚ್ಚಾಗುವುದಿಲ್ಲ. ಆದರೆ ಅಂತಹ ಮಹಾನ್ ನಾಯಕರಿಗೆ ನೀಡಿದ ನಂತರ ಪ್ರಶಸ್ತಿಯ ಮಹತ್ವವು ಹಲವು ಪಟ್ಟು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಕೆಲವು ಜನರ ರಾಜಕೀಯ ಲಾಭಕ್ಕಾಗಿ ಹಲವು ರಾಜ್ಯ ನಾಯಕರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ. ವೀರ್ ಸಾವರ್ಕರ್ ಬಗ್ಗೆ ನಕಲಿ ಪ್ರೀತಿ ಮತ್ತು ಗೌರವವನ್ನು ಪ್ರದರ್ಶಿಸುವುದನ್ನು ನಿಲ್ಲಿಸಿ, ಸಾಧ್ಯವಾದಷ್ಟು…
ಶಿರಸಿ: ಅತಿಕ್ರಮಣವಾಗಿರುವ ಮನೆ ಖಾಲಿ ಮಾಡಿಸಲು ಹೋದ ಸಂದರ್ಭದಲ್ಲಿ ಅರಣ್ಯ ಅಧಿಕಾರಿಯ ಕೈ ಬೆರಳು ಕತ್ತರಿಸಿದ ಘಟನೆ ಸಿದ್ದಾಪುರದ ಗವಿನಗುಡ್ಡದಲ್ಲಿ ನಡೆದಿದೆ. ವಿ ಟಿ ನಾಯ್ಕ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿ. ಮಹಾಬಲೇಶ್ವರ ಚಂದು ಮರಾಠಿ ಹಲ್ಲೆ ನಡೆಸಿದ ಆರೋಪಿ. ಇವರು ಹೊಸದಾಗಿ ನಿರ್ಮಾಣ ಮಾಡಿಕೊಂಡಿದ್ದ ಮನೆಯನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದರು. ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ಅರಣ್ಯ ಅಧಿಕಾರಿಯ ಕೈ ಬೆರಳನ್ನು ಮಹಾಬಲೇಶ್ವರ ಕತ್ತರಿಸಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮುಂಬೈ: ನವೆಂಬರ್ 19ರಂದು ಇಂದಿರಾ ಗಾಂಧಿ ಜನ್ಮ ದಿನ ಇರುವುದರಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರು ಮಾತ್ರ ಭಾಗವಹಿಸಲಿದ್ದಾರೆ. ಇಂದಿರಾ ಗಾಂಧಿ ನೆನಪಿನಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಇಂದಿರಾಗಾಂಧಿ ಜಯಂತಿಯಂದು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ. ಇಡೀ ದಿನ ಮಹಿಳೆಯರು ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಖಚಿತಪಡಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹಿಂದೆ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದರು. ನೀವು ಈ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದೀರಿ. ಆ ತ್ಯಾಗ ವ್ಯರ್ಥವಾಗಲು ನಾನು ಬಿಡುವುದಿಲ್ಲ. ಈ ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಕುರಿತು ಟ್ವೀಟ್ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ವಿಜಯಪುರ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ, ಅದಕ್ಕಾಗಿಯೇ ಈ ತರಹದ ಹೇಳಿಕೆ ನೀಡುತ್ತಿದ್ದಾರೆ. ನನಗೆ ಗೋಕಾಕ್ ಬರಲು ಆಹ್ವಾನ ನೀಡಿದ್ದರು. ಆದ್ದರಿಂದ ನಾನು ಗೋಕಾಕ್ ಗೆ ಹೋಗಿದ್ದೆ, ಆ ಕ್ಷೇತ್ರಕ್ಕೆ ಹೋಗಲು ಯಾರಿಗೂ ಧಮ್ ಇಲ್ಲ ಎನ್ನುವಂತಾಗಿತ್ತು ಎಂದರು. ಸತೀಶ್ ಜಾರಕಿಹೊಳಿ ಅವರ ತಪ್ಪನ್ನು ಸರಿಮಾಡಿಕೊಳ್ಳಬೇಕು, ಇಂತಹ ಹೇಳಿಕೆಗಳನ್ನು ನೀಡಬಾರದು. ಅವರ ಅಂತ್ಯ ಕಾಲ ಹತ್ತಿರವಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ : ಆರ್ಡರ್ ಮಾಡಿದ ಮಟನ್ ಸೂಪ್ನಲ್ಲಿ ಅನ್ನವನ್ನು ಕಂಡ ಇಬ್ಬರು ಯುವಕರು ವೇಟರ್ನನ್ನು ಹತ್ಯೆ ಮಾಡಿರುವ ಘಟನೆ ಪಿಂಪಲ್ ಸೌದಾಗರ್ನ ಸಾಸರವಾಡಿಯಲ್ಲಿ ನಡೆದಿದೆ. ಮೃತರನ್ನು ಮಂಗೇಶ್ ಸಂಜಯ್ ಪೋಸ್ತೆ(19) ಎಂದು ಗುರುತಿಸಲಾಗಿದೆ. ಆರೋಪಿಗಳಾದ ವಿಜಯರಾಜ್ ವಾಘಿರೆ ಮತ್ತು ಆತನ ಸಹಚರ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳಿಬ್ಬರು ಹೋಟೆಲ್ ಗೆ ತಿನ್ನಲು ಬಂದಿದ್ದರು. ವಿಜಯರಾಜ್ ಆರ್ಡರ್ ಮಾಡಿದ ಮಟನ್ ಸೂಪ್ನಲ್ಲಿ ಅನ್ನದ ಕಣಗಳಿದ್ದವು. ಇದರಿಂದಾಗಿ ವೇಟರ್ ಮತ್ತು ವಿಜಯರಾಜ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಮಂಗೇಶ್ ಜೊತೆ ಉಪಾಹಾರ ಗೃಹದ ಉದ್ಯೋಗಿ ಅಜಿತ್ ಮತ್ತು ಸಚಿನ್ನ್ನು ಮರದ ಕೋಲಿನಿಂದ ಹೊಡೆದಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಮಂಗೇಶ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಶ್ರೀಗಂಧ ನೀತಿ -2022ಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದ್ದು, ರೈತರು ತಮ್ಮ ಜಮೀನಿನಲ್ಲಿ ಶ್ರೀಗಂಧ ಬೆಳೆದು ಮಾರಾಟ ಮಾಡಬಹುದು ಎಂದು ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದು. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಲಾಗಿದೆ. ಶ್ರೀಗಂಧ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ರೈತರು ಬೆಳೆಯುವ ಶ್ರೀಗಂಧಕ್ಕೆ ರಕ್ಷಣೆ ಒದಗಿಸಲಾಗುವುದು. ಪ್ರಸ್ತುತ ದಿನಗಳಲ್ಲಿ ಶ್ರೀಗಂಧ ಲಭ್ಯತೆಯ ಕೊರತೆ ಇದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಶ್ರೀಗಂಧ ಬೇಕಾಗಿದೆ. ಹೀಗಾಗಿ ಶ್ರೀಗಂಧ ಮಾರಾಟಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy