Author: admin

ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಪ್ರತಿ ವರ್ಷ ಭಾರತದಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಯುಕೆ-ಭಾರತ ಯುವ ವೃತ್ತಿಪರರ ಯೋಜನೆಯನ್ನು ದೃಢೀಕರಿಸಲಾಗಿದೆ. ಜಿ20 ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 18-30 ವರ್ಷ ವಯಸ್ಸಿನ ಪದವಿ-ಶಿಕ್ಷಿತ ಭಾರತೀಯ ಪ್ರಜೆಗಳಿಗೆ ಯುಕೆಗೆ ಬರಲು ಮತ್ತು ಎರಡು ವರ್ಷಗಳವರೆಗೆ ಕೆಲಸ ಮಾಡಲು 3,000 ವೀಸಾಗಳನ್ನು ನೀಡುತ್ತದೆ ಎಂದು ಯುಕೆ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. 17ನೇ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಸುನಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ನಂತರ ಡೌನಿಂಗ್ ಸ್ಟ್ರೀಟ್ ರೀಡೌಟ್‌ನಲ್ಲಿ ಈ ಪ್ರಕಟಣೆ ಹೊರಬಿದ್ದಿದೆ. ಸುನಕ್‌ ಬ್ರಿಟಿಷ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಸಭೆಯಾಗಿದೆ. ಈ ಯೋಜನೆಯು ಭಾರತದೊಂದಿಗಿನ ನಮ್ಮ ದ್ವಿಪಕ್ಷೀಯ ಸಂಬಂಧ ಮತ್ತು ಎರಡೂ ದೇಶಗಳ ಆರ್ಥಿಕತೆಯನ್ನು ಬಲಪಡಿಸಲು…

Read More

ಚಳಿಗಾಲದಲ್ಲಿ ಎಳ್ಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಅದರಲ್ಲೂ ಕಪ್ಪು ಎಳ್ಳಿಗೆ ಆದ್ಯ. ಚಳಿಗಾಲದಲ್ಲಿ ಎಳ್ಳು ಉಂಡೆ ಸೇವನೆ ಮೂಳೆಗಳನ್ನು ಬಲಪಡಿಸುತ್ತದೆ, ನೋವನ್ನು ಉಂಟು ಮಾಡುವುದಿಲ್ಲ ಎಂದು ಹಿರಿಯರು ಹೇಳುತ್ತಾರೆ. ಕಪ್ಪು ಎಳ್ಳು ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಷಿಯಮ್, ತಾಮ್ರ, ಮ್ಯಾಂಗನೀಸ್ ಮತ್ತು ಫೈಬರ್ ಮೊದಲದ ಅಂಶಗಳನ್ನು ಹೊಂದಿರುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಚಳಿಗಾಲ ಬಂದ ತಕ್ಷಣ, ಮೂಳೆಗಳಲ್ಲಿ ನೋವು ಉಂಟಾಗುತ್ತದೆ. ಸಂಧಿವಾತದಿಂದ ಬಳಲುತ್ತಿರುವ ಜನರಿಗೆ ಚಳಿಗಾಲವು ತುಂಬಾ ನೋವಿನಿಂದ ಕೂಡಿರುತ್ತೆ. ಕಪ್ಪು ಎಳ್ಳನ್ನು ತಿನ್ನುವುದು ಅಥವಾ ಅದರ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಈ ನೋವಿಗೆ ಪರಿಹಾರ ಸಿಗುತ್ತದೆ. ಸಂಧಿವಾತದ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಎಳ್ಳು ಬೀಜಗಳಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಇದೆ. ತಾಮ್ರ ಮತ್ತು ಕ್ಯಾಲ್ಸಿಯಂ ಒಟ್ಟಿಗೆ ಮೂಳೆಗಳನ್ನು ಬಲಪಡಿಸುತ್ತವೆ. ಕಪ್ಪು ಎಳ್ಳು ಬೆಳೆಯುತ್ತಿರುವ ಮಕ್ಕಳಿಗೆ ತುಂಬಾ ಪ್ರಯೋಜನಕಾರಿ. ಕಪ್ಪು ಎಳ್ಳು ಹೃದಯದ ಆರೋಗ್ಯಕ್ಕೂ ಉತ್ತಮವಂತೆ. ಚಳಿಗಾಲದಲ್ಲಿ ರಕ್ತ ಪರಿಚಲನೆ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ ಹೃದಯದ ಸಮಸ್ಯೆಯ ಸಾಧ್ಯತೆ ಹೆಚ್ಚಾಗುತ್ತದೆ. ಕಪ್ಪು ಎಳ್ಳು ದೇಹವನ್ನು…

Read More

ಮಧುಗಿರಿ: ಬಹುಜನ ಸಮಾಜ ಪಾರ್ಟಿ(BSP) ವತಿಯಿಂದ ಮಧುಗಿರಿ ತಾಲೂಕಿನ ರಾಜ ಬೀದಿಗಳಲ್ಲಿ ‘ಸಂವಿಧಾನ ಸಂರಕ್ಷಣಾ ಜನಜಾಗೃತಿ’ ಜಾಥಾ ನಡೆಯಿತು. ಜಾಥಾವನ್ನುದ್ದೇಶಿಸಿ ಮಾತನಾಡಿದ ಬಿಎಸ್ ಪಿ ಮುಖಂಡರು,  ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಕ್ಕೆ ಇಷ್ಟು ವರ್ಷ ಮತ ನೀಡಿ ತೊಂದರೆಗೆ ಅನುಭವಿಸಿದ್ದೀರಿ, ಇನ್ನು ಮುಂದೆ ಬಿಎಸ್ ಪಿ ಪಕ್ಷಕ್ಕೆ ಮತ ನೀಡಿ, ರೈತರಿಗೆ ಸಾಲ ಮನ್ನಾ, ಬಡವರಿಗೆ ಗುಡಿಸಲು ಮುಕ್ತ ಯೋಜನೆ ಮೂಲಕ ಮನೆ ಮಂಜೂರು ಮಾಡುತ್ತೇವೆ. ಬಡವರ ಅಭಿವೃದ್ಧಿಯಾಗಬೇಕಾದರೆ ಕರ್ನಾಟಕದಲ್ಲಿ  ಬಿಎಸ್ ಪಿ ಅಧಿಕಾರ ವಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ರಾಮ್ ಜಿ. ಗೌತಮ್ , ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ,  ರಾಜ್ಯ ಕಾರ್ಯದರ್ಶಿ ವಾಸು,  ನಾಗೇಂದ್ರಪ್ಪ, ಮಂಜುನಾಥ,  ರಾಜಸಿಂಹ ಬೆಲ್ಲದ  ಮಡುಗು ಶಿವಕುಮಾರ್,  ತಾಲೂಕ್ ಅಧ್ಯಕ್ಷರು ಗೋಪಾಲ್ ಚಂದ ಪಾಶ,  ನಾಗರಾಜು, ಶಿವು ಸೇರಿದಂತೆ ಹಲವು  ಬಿಎಸ್ಪಿ ಮುಖಂಡರು ಜಾಥಾದಲ್ಲಿ ಭಾಗವಹಿಸಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಪಾವಗಡ : ಕೆ.ಎಸ್.ಆರ್. ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮಾಪುರ ಗೇಟ್ ಬಳಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ಪವನ್ ಕುಮಾರ್ (26) ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. KA 06, KSRTC ಬಸ್ ಸಂಖ್ಯೆ F1168 ಮತ್ತು ಬೈಕ್ ಸಂಖ್ಯೆ KA64 F3422 ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸರಗೂರು : ತಾಲ್ಲೂಕಿನ ಪಟ್ಟಣದ ಬಸ್ ನಿಲ್ದಾಣ ಎದುರು ಬಳಿ ತಾಲ್ಲೂಕಿನ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಹಾಗೂ ಅಪ್ಪಾಜಿ ಕ್ಯಾಂಟಿನ್ ಸಂಸ್ಥಾಪಕ ಹಾಗೂ ಜೆಡಿಎಸ್ ಮುಖಂಡ ಕೆ ಎಂ ಕೃಷ್ಣನಾಯಕ ರವರ ಉಪಸ್ಥಿತಿಯಲ್ಲಿ ನಮ್ಮ ಅಪ್ಪಾಜಿ ಕ್ಯಾಂಟಿನ್ ಉದ್ಘಾಟನೆ ನೆರವೇರಿತು. ಸರಗೂರು ತಾಲ್ಲೂಕಿನ ನಾಗದೇವತೆ ಚಿಕ್ಕದೇವಮ್ಮನ ಸನ್ನಿಧಾನಕ್ಕೆ ಹೋಗಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಅಂಬೇಡ್ಕರ್ ಭವನದಿಂದ ವಾದ್ಯ ನಗರಿ ಮತ್ತು ಪೂಜೆ ಕುಣಿತ ವೀರಗಾಸೆ ನೃತ್ಯ ಪ್ರದರ್ಶನ ದೊಂದಿಗೆ ಬಂದ ಮೆರವಣಿಗೆ ಬಸ್ ನಿಲ್ದಾಣ ಬಳಿ ತಲುಪಿತು. ಅಪ್ಪಾಜಿ ಕ್ಯಾಂಟಿನ್ ಉದ್ಘಾಟನೆ ಬಳಿಕ ಪಡಗಲು ವಿರಕ್ತಮಠದ ಶ್ರೀ ಮಹದೇವಸ್ವಾಮಿ ಸ್ವಾಮೀಜಿ ಮಾತನಾಡಿ, ಈ ಕ್ಯಾಂಟಿನ್ ನಿಂದಾಗಿ ಬಡವರು ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಅನುಕೂಲವಾಗಲಿದೆ. ಎಂ ಕೃಷ್ಣನಾಯಕರವರು ಅಪ್ಪಾಜಿ ಕ್ಯಾಂಟೀನ್ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಯಾಂಟಿನ್ ಸಂಸ್ಥಾಪಕ ಕೆ.ಎಂ.ಕೃಷ್ಣನಾಯಕ ಮಾತನಾಡಿ, ನಾನು ತಾಲ್ಲೂಕಿಗೆ ಬಡವರ ಸೇವೆ ಮಾಡಲು ಬಂದಿದ್ದೇನೆಯೇ ಹೊರತು ರಾಜಕೀಯ ಮಾಡಲು ಅಲ್ಲ.…

Read More

ಪಾವಗಡ: ತಾಲ್ಲೂಕಿನ ಯ.ನಾ.ಹೊಸಕೋಟೆ ಹೋಬಳಿಯ ಚಿಕ್ಕಜಾಲೋಡು ಗ್ರಾಮದಲ್ಲಿ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಮಂಗಳವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಚಿಕ್ಕಜಾಲೋಡು ಗ್ರಾಮದ ಸರಕಾರಿ ಶಾಲೆಯ ಸುತ್ತಮುತ್ತ ಮಳೆ ನೀರು, ಚರಂಡಿ ನೀರು ಸಂಗ್ರಹಗೊಂಡು ಪರಿಸರ ಮಾಲಿನ್ಯವಾಗುತ್ತಿದೆ. ಕ್ರಿಮಿಕೀಟಗಳು ಹೆಚ್ಚಾಗಿದ್ದು, ದುರ್ವಾಸನೆ ಬರುತ್ತಿದೆ. ಶಾಲಾ ಮಕ್ಕಳು, ಸಾರ್ವಜನಿಕರು ಕೊಳಚೆ ನೀರಿನಲ್ಲೇ ಓಡಾಡಬೇಕಾಗಿದೆ. ಈ ನೀರು ಖಾಸಗಿ ಜಮೀನಿನಲ್ಲಿ ಹರಿಯಬೇಕಾಗಿದೆ. ಆದರೆ ಖಾಸಗಿಯವರು ಇದಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದ ರಸ್ತೆ ಮೇಲೆ ನೀರು ಸಂಗ್ರಹಗೊಂಡು ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ದೂರು ನೀಡಿದ್ದೇವೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಚರಂಡಿ ಕಾಮಗಾರಿ ಆರಂಭಿಸುವುದಾಗಿ ಪಿಡಿಒ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಗಿದೆ. ಕಾಮಗಾರಿ ಆರಂಭಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಇದೇ ವೇಳೆ ದೊಡ್ಡಜಾಲೋಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ…

Read More

ಕೊರಟಗೆರೆ: ಕೊರಟಗೆರೆ ತಾಲೂಕ್ ಕವರ್ಗಲ್ ಕಂಬದಹಳ್ಳಿ ಕೆರೆ ಕಟ್ಟೆ ಒಡೆದ ಪರಿಣಾಮ ನೀರು ಕೊರಟಗೆರೆ ಜಂಪೇನಹಳ್ಳಿ, ಅಗ್ರಹಾರ ಕೆರೆಗೆ ಹರಿಯುತ್ತಿದ್ದು, ಇದರಿಂದಾಗಿ ಎರಡೂ ಕೆರೆಗೂ ಅಪಾಯವಾಗುವ ಸಾಧ್ಯತೆ ಇದ್ದು, ಸ್ಥಳಕ್ಕೆ ತಹಶೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯ ಕಟ್ಟೆ ಒಡೆದ ಪರಿಣಾಮ ನೀರು ರಭಸವಾಗಿ ನುಗುತ್ತಿದ್ದು, ರೈತರ ನೂರಾರು ಎಕರೆ ಜಮೀನು ನಷ್ಟವಾಗುವ ಭೀತಿ ಸೃಷ್ಟಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ್ ನಹೀದಾ ಜಮ್ ಜಮ್ ಸ್ಥಳಕ್ಕೆ ಭೇಟಿ ನೀಡಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ, ದೊಡ್ಡ ಗಾತ್ರದಲ್ಲಿ ಕುಸಿದು ಬಿದ್ದ ಪರಿಣಾಮ 2 ಗಂಟೆಯಲ್ಲಿ ನೀರು ಖಾಲಿಯಾಗಿತ್ತು. ಘಟನಾ ಸ್ಥಳಕ್ಕೆ ಅಧಿಕಾರಿಗಳ ಸ್ಥಳಕ್ಕೆ ದೌಡಾಯಿಸಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಆರ್ಥಿಕವಗಿ ಹಿಂದುಳಿದ ಬಡವರಿಗೆ ಶೇ.10 ರಷ್ಟು ಮೀಸಲಾತಿಗೆ ಸಿದ್ಧರಾಮಯ್ಯ ವಿರೋಧಿಸಿದ್ದಾರೆ. ಅವರು ತಮ್ಮನ್ನ ಹಿಂದುಳಿದ ವರ್ಗದ ಚಾಂಪಿಯನ್ ಎಂದುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಮೀಸಲಾತಿ ಬಗ್ಗೆ ಬಿಜೆಪಿ ಸಾಮಾಜಿಕ ನ್ಯಾಯದ ಕಳಕಳಿ ತೋರಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸ್ವಾಗತ ಮಾಡಿದ್ದಾರೆ. ಆದರೆ ಸಿದ್ಧರಾಮಯ್ಯ ಮಾತ್ರ ಇದನ್ನು ಟೀಕೆ ಮಾಡುತ್ತಾರೆ. ಬಡವರ ಮೇಲೆ ನಿಮಗೆ ಎಷ್ಟು ಕಾಳಜಿ ಎಂದು ಸ್ಪಷ್ಟಪಡಿಸಿ. ಕೇವಲ ಬಡವರ ಬಗ್ಗೆ ಭಾಷಣ ಮಾಡಿದರೇ ಪ್ರಯೋಜವಿಲ್ಲ. ಮಾಜಿ ಸಿಎಂ ಸಿದ್ಧರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಪಾಠ ಮಾಡಬೇಕು. ಸಿದ್ದರಾಮುಯ್ಯ ಸರ್ವಜ್ಞ ಅಲ್ಲ ಎಂದು ವಾಗ್ದಾಳಿ ನಡೆಸಿದರು. ಡಿಕೆ ಶಿವಕುಮಾರ್ ಅವರ ಆದೇಶವನ್ನ ಸಿದ್ಧರಾಮಯ್ಯ ಪಾಲಿಸುತ್ತಿಲ್ಲ ಚುನಾವಣೆಗೆ ಕ್ಷೇತ್ರವಿಲ್ಲದೇ ಒದ್ದಾಡುತ್ತಿದ್ದಾರೆ. ಸಿದ್ಧರಾಮಯ್ಯಗೆ ರಾಜಕೀಯ ಬದ್ಧತೆ ಇಲ್ಲ ಎಂದು ನುಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಬೆಂಗಳೂರು ಮಹಾನಗರದ ಅಂದಿನ ಜನಪ್ರಿಯ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿ ಒಂದು ದಶಕಕ್ಕಿಂತಲೂ ಹೆಚ್ಚಿನ ಸಮಯವಾಗಿದೆ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರುವವರಿಗೆ ಕೃಷ್ಣರಾಜಸಾಗರದ ಅತ್ಯಂತ ದೊಡ್ಡ ಜನಪ್ರಿಯತೆಯನ್ನು ಪಡೆದಂತಹ ಬೃಂದಾವನ ಉದ್ಯಾನವನದಲ್ಲಿರುವ ಸಂಗೀತ ಕಾರಂಜಿಯ ಬಗ್ಗೆ ತಿಳಿದೇ ಇರುತ್ತದೆ. ಬೆಂಗಳೂರಿಗರು ಒಂದು ಕಾಲದಲ್ಲಿ ಅಲ್ಲಿನ ಸಂಗೀತ ಕಾರಂಜಿಯನ್ನು ನೋಡಲು ಇಲ್ಲಿಂದ ಮಂಡ್ಯದಲ್ಲಿರುವ ಬೃಂದಾವನ ಉದ್ಯಾನವನಕ್ಕೆ ತೆರಳುತ್ತಿದ್ದರು. ಹಾಗಾಗಿ, ಸಂಬಂಧಪಟ್ಟ ಪ್ರಾಧಿಕಾರಗಳು ನಮ್ಮ ಬೆಂಗಳೂರಿನಲ್ಲಿಯೂ ಅದೇ ರೀತಿಯ ಒಂದು ಸಂಗೀತ ಕಾರಂಜಿಯನ್ನು ಸ್ಥಾಪಿಸಲು ನಿರ್ಧರಿಸಿದರು. ಇದರ ಫಲವಾಗಿ ೧೯೯೪ರಲ್ಲಿ ಬೆಂಗಳೂರಿನ ಇಂದಿರಾ ಗಾಂಧಿ ಸಂಗೀತ ಕಾರಂಜಿ ಅಸ್ತಿತ್ವಕ್ಕೆ ಬಂತು. ಈ ಕಾರಂಜಿ ೬೦ ಅಡಿ ಉದ್ದ ಹಾಗೂ ೧೫ ಅಡಿ ಅಗಲವಿದೆ. ಈ ಕಾರಂಜಿಯೂ ಸಹ ಬೆಂಗಳೂರಿಗರ ಪೈಕಿ ದೊಡ್ಡ ಹಟ್ ಆಗಿತ್ತು. ಆದರೆ ೨೦೧೨ರಲ್ಲಿ ಈ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತ್ತು. ಅಂದಿನಿಂದ ಇದನ್ನು ಸರಿಪಡಿಸಲಾಗಿಲ್ಲ. ಜೊತೆಗೆ, ಇಲ್ಲಿ ಒಂದು ಪುಟಾಣಿ ರೈಲು (ಟಾಯ್ ಟ್ರೇನ್) ಸಹ ಇದ್ದು, ಇದೂ ಸಹ ಈ…

Read More

ಹೆಸರಾಂತ ಲೇಖಕ ಸಿ. ಮೇರಿ ಜೋಸೆಫ್ ಅವರಿಗೆ ನವಂಬರ್ 26 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕುಮಾರ ಕೃಪಾ ರಸ್ತೆಯ ಗಾಂಧಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ “ರೆವೆರೆಂಡ್ ಕಿಟ್ಟಲ್” ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಬಿ.ವಿ. ಪಿಂಟೋ ಅವರು ಸಿ. ಮೇರಿ ಜೋಸೆಫ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು ಈ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ರೆವೆರೆಂಡ್ ಫರ್ಡಿನೆಂಡ್ ಕಿಟ್ಟಲ್ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More