Author: admin

ಬೆಳಗಾವಿ : ಮಡದಿಯ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಸಂಶಯದಲ್ಲಿ ಚೂರಿಯಿಂದ ಇರಿದು ಅಣ್ಣನನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಅಕ್ಬರ್ ಶೇಖ್ ಮೃತ ದುರ್ದೈವಿ. ಅಜ್ಮದ್ ಶೇಖ್ ಕೊಲೆ ಆರೋಪಿ. ತನ್ನ ಹೆಂಡತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಲ್ಲಿ ಅಕ್ಬರ್ ಶೇಖ್ನನ್ನು ಸಹೋದರ ಅಜ್ಮದ್ ಶೇಖ್ ಕೊಲೆ ಮಾಡಿದ್ದಾನೆ. ಗ್ರಾಮದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಮೊದಲಿಗೆ ಹಿಂಬಾಲಿಸಿಕೊಂಡು ಹೋಗಿರುವ ಅಜ್ಮದ್ ಶೇಖ್, ಅಪಘಾತ ಮಾಡಿ ಬೈಕ್ ನಲ್ಲಿ ತೆರಳುತ್ತಿದ್ದ ಅಣ್ಣ ಅಕ್ಬರ್ ಶೇಖ್ನನ್ನು ಕೆಳಗೆ ಬೀಳಿಸಿದ್ದಾನೆ. ಬಳಿಕ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ಮಾಡಿದ ನಂತರ ಆರೋಪಿ ಅಜ್ಮದ್ ಶೇಖ್ ಚಿಕ್ಕೋಡಿ ಪೊಲೀಸರಿಗೆ ಶರಣಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಕಾಂತಾರ ಚಿತ್ರದ ‘ವರಾಹ ರೂಪಂ’ಹಾಡು ಯೂಟ್ಯೂಬ್​​ನಲ್ಲಿ ಪ್ರತ್ಯಕ್ಷವಾಗಿದೆ. ಈ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಬಳಿಕ ಹಾಡನ್ನು ಪ್ರಸಾರ ಮಾಡದಂತೆ ಕೇರಳದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿತ್ತು. ಹಾಗಾಗಿ ಯೂಟ್ಯೂಬ್, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮೊದಲಾದ ಪ್ಲಾಟ್​ಫಾರ್ಮ್​ಗಳಿಂದ ಈ ಹಾಡನ್ನು ಡಿಲಿಟ್‌ ಮಾಡಲಾಗಿತ್ತು. ವರಾಹ ರೂಪಂ ಹಾಡು ಕಾನೂನು ಹೋರಾಟದಲ್ಲಿ ಕಾಂತಾರ ಚಿತ್ರಕ್ಕೆ ಗೆಲುವು ಸಿಕ್ಕಿದೆ. ವರಾಹ ರೂಪಂ ಹಾಡಿನ ಕುರಿತು ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ ’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಚಿತ್ರತಂಡವು ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಯೂಟ್ಯೂಬ್​ನ ಹೊಂಬಾಳೆ ಫಿಲಂಸ್​ನ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮುಂತಾದ ಕಡೆಗಳಿಂದ ಡಿಲಿಟ್‌​ ಮಾಡಿತ್ತು. ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸಿದ್ದು,…

Read More

ರಾಜ್ಯದ 10 ಜಿಲ್ಲೆಗಳಲ್ಲಿ ಸರ್ಕಾರ ಮುಸ್ಲಿಮರಿಗಾಗಿ ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ಮುಂದಾಗಿದೆ ಎಂದು ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಪ್ರಮೋದ್ ಮುತಾಲಿಕ್ ಸೇರಿದಂತೆ ಹಿಂದೂ ಪರ ಸಂಘಟನೆಗಳು ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಆ ಬಗ್ಗೆ ಚರ್ಚೆಯೇ ನಡೆದಿಲ್ಲ, ಅಂಥ ವಿಚಾರ ಸರ್ಕಾರದ ಮುಂದಿಲ್ಲ ಎಂದಿದ್ದರು. ಸಚಿವೆ ಶಶಿಕಲ್ಲಾ ಜೊಲ್ಲೆ ಇದು ಸತ್ಯಕ್ಕೆ ದೂರವಾದ ಮಾತು ಎಂದು ಟ್ವೀಟ್​ ಮಾಡಿದ್ದರು. ಇದೀಗ ಹಿಂದೂ ಮುಖಂಡರೊಬ್ಬರು ಮುಸ್ಲಿಂ ಕಾಲೇಜು ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿರುವ ಆದೇಶದ ಪ್ರತಿಯನ್ನು ಬಿಡುಗಡೆ ಮಾಡಿ ಸಿಎಂ ಬೊಮ್ಮಾಯಿಯನ್ನು ಉತ್ತರಿಸಿ ಎಂದು ಹೇಳಿದ್ದಾರೆ. ಹಿಂದೂ ಪರ ಹೋರಾಟಗಾರ ಮೋಹನ ಗೌಡ ಸರ್ಕಾರದ ಆದೇಶ ಪ್ರತಿ ಟ್ವೀಟ್​ ಮಾಡಿ ಸರ್ಕಾರ ಜುಲೈ ತಿಂಗಳಿನಲ್ಲಿ 10 ಪ್ರತ್ಯೇಕ ಮುಸಲ್ಮಾನ್ ಕಾಲೇಜು ಸ್ಥಾಪನೆ ಮಾಡಲು ಆದೇಶ ನೀಡಿ, ಅದಕ್ಕೆ ಹಣ ಸಹ ಮಂಜೂರು ಮಾಡಲು ಮಾಡಲು ಆದೇಶ ನೀಡಿ, ಈಗ ಸರಕಾರದ ಮುಂದೆ…

Read More

ವೆಸ್ಟ್ ಇಂಡೀಸ್ ಮೂಲದ ಆಲ್ ರೌಂಡರ್ ಡ್ವೈನ್ ಬ್ರಾವೊ ಐಪಿಎಲ್ ಗೆ ವಿದಾಯ ಘೋಷಿಸಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿ ತಂಡದಲ್ಲಿ ಮುಂದುವರಿಯಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಳೆದ ವರ್ಷ ಬೌಲಿಂಗ್ ಕೋಚ್ ಆಗಿದ್ದ ಎಲ್. ಬಾಲಾಜಿ ವೈಯಕ್ತಿಕ ಕಾರಣಗಳಿಗಾಗಿ ಈ ವರ್ಷ ಬಿಡುವು ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಡ್ವೈನ್ ಬ್ರಾವೊ ಈ ಜವಾಬ್ದಾರಿ ಹೊರಲಿದ್ದಾರೆ ಎನ್ನಲಾಗಿದೆ. ನನ್ನ ಆಡುವ ದಿನಗಳು ಸಂಪೂರ್ಣವಾಗಿ ಮುಗಿಯಿತು ಎಂದು ನನಗೆ ಅನಿಸುತ್ತಿದೆ. ಆದ್ದರಿಂದ ಹೊಸ ಪ್ರಯಾಣವನ್ನು ಆರಂಭಿಸಲು ಉತ್ಸುಕನಾಗಿದ್ದೇನೆ ಎಂದು ಡ್ವೈನ್ ಬ್ರಾವೊ ಹೇಳಿದ್ದಾರೆ. ನಾನು ಐಪಿಎಲ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆ ಬರೆಯುತ್ತೇನೆ ಎಂದು ಊಹಿಸಿರಲಿಲ್ಲ. ಇನ್ನು ಮುಂದೆ ಮೈದಾನದಲ್ಲಿ ಮಿಡಾಫ್ ಅಥವಾ ಮಿಡಾನ್ ನಲ್ಲಿ ನಾನು ಕಾಣಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಶಕ್ತೀಕರಣ ನಿರ್ದೇಶನಾಲಯದಿಂದ ಆಯೋಜಿಸಿದ್ದ ವಿಶ್ವಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಿದ್ದು, 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ. ಅಂಗವಿಕಲರು ಯಶಸ್ವಿಯಾಗಿ ಬದುಕು ನಡೆಸಲು ಸರಕಾರ ನಿರ್ಮಿಸುವ ಮನೆಗಳಲ್ಲಿ ಶೇ. 3ರಷ್ಟು ಮೀಸಲಾತಿ ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ವರ್ಕ್‌ ಶಾಪ್‌ ಸ್ಥಾಪಿಸಲು ಸರಕಾರ ಬದ್ಧವಾಗಿದೆ. ಜತೆಗೆ ಅಂಗ ವಿಕಲರಿಗೆ ಮಾ. 31ರೊಳಗೆ ಎರಡು ಸಾವಿರ ವಿದ್ಯುತ್ಛಕ್ತಿಚಾಲಿತ ಟ್ರೈಸಿಕಲ್‌ ನೀಡಲಾಗುತ್ತದೆ. ಅದಕ್ಕಾಗಿ ಈಗಾಗಲೇ 15 ಕೋಟಿ ರೂ. ನೀಡ ಲಾಗಿದ್ದುಎಂದು ಬೊಮ್ಮಾಯಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಗ ಚುರುಕಿಲ್ಲ, ಮಕ್ಕಳಾಗುವುದು ಅನುಮಾನ, ಹಾಗಾಗಿ ತನ್ನಿಂದಲೇ ವಂಶ ಬೆಳೆಯಲಿ ಎಂದು ಸೊಸೆಯ ಮೇಲೆ ಕಣ್ಣು ಹಾಕಿದ ಮಾವನನ್ನು ಸುಪಾರಿ ಕೊಟ್ಟು ಬೀಗರೇ ಹತ್ಯೆ ಮಾಡಿಸಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ದೊಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಮ್ಮೇಗೌಡ (55) ಕೊಲೆಯಾದ ವ್ಯಕ್ತಿ. ನ.13 ರಂದು ರಾಗಿಕಾವಲು ಗ್ರಾಮದ ಹೊಸಕೆರೆಯಲ್ಲಿ ತಮ್ಮೇ ಗೌಡನ ಶವ ಪತ್ತೆಯಾಗಿತ್ತು. ಮುಖವನ್ನು ಪ್ಲಾಸ್ಟಿಕ್ ಚೀಲದಿಂದ ಮುಚ್ಚಿ ಕೆರೆಗೆ ಎಸೆಯಲಾಗಿತ್ತು. ಮೃತನ 3ನೇ ಮಗ ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು. ಮಾವ ತಮ್ಮೇಗೌಡ ಸೊಸೆ ನಾಗರತ್ನಾಳಿಗೆ ತನ್ನಿಂದಲೇ ವಂಶ ಬೆಳೆಯಲಿ ಎಂದು ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ. ಮಾವನ ನೀಚ ಬುದ್ಧಿ ಬಗ್ಗೆ ತನ್ನ ಪೋಷಕರ ಬಳಿ ಸೊಸೆ ಹೇಳಿಕೊಂಡ ನಂತರ ನಾಗರತ್ನಾಳ ಪೋಷಕರಾದ ಮೈಲಾರಗೌಡ ಹಾಗೂ ತಾಯಮ್ಮ 50 ಸಾವಿರಕ್ಕೆ ಕೊಲೆ ಸುಪಾರಿ ನೀಡಿದ್ದಾರೆ. ತಮ್ಮ ಮನೆಯಲ್ಲೇ ಮದ್ಯ ಕುಡಿಸಿ ರಾಡ್‌ನಿಂದ ಬಲವಾಗಿ ಹೊಡೆದು ಕೊಲೆ ಮಾಡಿಸಿ ಶವವನ್ನ ಕೆರೆಗೆ ಬಿಸಾಡಿದ್ದಾರೆ. ಕೇಸ್ ದಾಖಲಿಸಿ ತನಿಖೆ…

Read More

ಈಗಾಗಲೇ ಚುನಾವಣೆಗೆ ಮೂರು ಪಕ್ಷಗಳಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ವರುಣ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಶೀಲನೆ ನೆಪದಲ್ಲಿ ವರುಣ ಕ್ಷೇತ್ರಕ್ಕೂ ಕನ್ನ ಬೀಳುವ ಸಂಭವ ಇದೆ ಎಂದು ವರುಣ ಕ್ಷೇತ್ರದ ಶಾಸಕ ಯತಿಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಠದ ಅಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು. ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟರು ಪದಾಧಿಕಾರಿಗಳ ಸಭೆಯನ್ನು ನಂಜನಗೂಡಿನ ಮಾದೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಈಗಾಗಲೇ ಚುನಾವಣೆ ಹತ್ತಿರವಾಗುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವುದರಿಂದ ಎಲ್ಲೆಲ್ಲಿ ಕಾಂಗ್ರೆಸ್ ಪಕ್ಷದ ಮತದಾರರ ಸಂಖ್ಯೆ ಹೆಚ್ಚಿದೆಯೋ ಅಂತಹ ಕಡೆಗಳಲ್ಲಿ ಬಿಜೆಪಿ ಪಕ್ಷದವರು ಸೋಲಿನ ಭೀತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ನೆಪದಲ್ಲಿ ಇರುವಂತ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮತದಾರ…

Read More

ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ವಿದ್ಯುತ್ ದರ ಹೆಚ್ಚಳ ಮಾಡಲಾಗಿತ್ತು. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಂತ ಜನತೆಗೆ ಮತ್ತಷ್ಟು ಹೊರೆ ಬಿದ್ದಂತೆ ಆಗಿತ್ತು. ಈ ಬೆನ್ನಲ್ಲೇ ಹೊಸ ವರ್ಷಕ್ಕೆ ವಿದ್ಯುತ್ ದರ ಕಡಿತಕ್ಕೆ ರಾಜ್ಯ ಸರ್ಕಾರ ಮುಂದಾಗಿ ಎನ್ನಲಾಗಿದೆ. ಈ ಬಗ್ಗೆ ಇಂಧನ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್, ವಿದ್ಯುತ್ ದರ ಕಡಿತ ಪ್ರಸ್ತಾವನೆ ಸಿದ್ಧಪಡಿಸುವಂತೆ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಸೂಚನೆಯ ಮೇರೆಗೆ ಇಂಧನ ಇಲಾಖೆಯಿಂದ ವಿದ್ಯುತ್ ದರ ಇಳಿಕೆಯ ಪ್ರಸ್ತಾವನೆಯನ್ನು ಎಲ್ಲಾ ಎಸ್ಕಾಂಗಳು ಸಿದ್ಧಪಡಿಸಿ ಕೆ ಇ ಆರ್ ಸಿಗೆ ಸಲ್ಲಿಸಿವೆ ಎಂದು ಹೇಳಲಾಗುತ್ತಿದೆ. ಸಲ್ಲಿಕೆಯಾಗಿರುವಂತ ಪ್ರಸ್ತಾವನೆಯಲ್ಲಿ ವಿದ್ಯುತ್ ಬಳಕೆದಾರರ ಶುಲ್ಕ ಕಡಿತ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ. ಪ್ರತಿ ಯೂನಿಟ್ ಗೆ 70 ಪೈಸೆಯಿಂದ 2 ರೂವರೆಗೆ ಶುಲ್ಕ ಇಳಿಕೆ ಆಗಲಿದೆ ಎನ್ನಲಾಗಿದೆ. ಈ ಪ್ರಸ್ತಾವನೆಯನ್ನು ಎಲ್ಲಾ ಎಸ್ಕಾಂಗಳಿಂದ ಕೆ ಇ ಆರ್ ಸಿಗೆ ಸಲ್ಲಿಸಿರುವ ನಿರ್ಧಾರವನ್ನು ಕೈಗೊಂಡಿವೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ನನ್ನ 40 ರೂಪಾಯಿ ತೆಗೆದುಕೊಂಡಿದ್ದೀಯಾ ಎಂದು ಅತ್ತೆ ಭೀಮವ್ವ ಗುಳ್ಳಣ್ಣವರು ಸೊಸೆ ರಂಗವ್ವ ಗುಳ್ಳಣ್ಣವರ ಮೇಲೆ ಆರೋಪ ಮಾಡಿದ್ದಾಳೆ. ಈ ವಿಚಾರವಾಗಿ ಅತ್ತೆ, ಸೊಸೆಯ ಜಗಳ ತಾರಕಕ್ಕೇರಿದೆ. ಪತ್ನಿ ಹಾಗೂ ತಾಯಿ ಜಗಳದಿಂದ ಕೋಪಗೊಂಡ ಮಗ ಮಳಿಯಪ್ಪ ಜಗಳ ಬಿಡಿಸುವ ವೇಳೆ ಪತ್ನಿ ಕಪಾಳಕ್ಕೆ ಪತಿ ಹೊಡೆದಿದ್ದಾನೆ. ಅಸ್ತಮಾ, ಬಿ.ಪಿಯಿಂದ ಬಳಲುತ್ತಿದ್ದ ಪತ್ನಿ, ಒಂದೇ ಹೊಡೆತಕ್ಕೆ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಇನ್ನು 12 ವರ್ಷದ ಹಿಂದೆ ತನ್ನ ಸೋದರ ಮಾವನ ಮಗಳನ್ನೇ ಮದುವೆಯಾಗಿದ್ದ ಮಳಿಯಪ್ಪ ಹಮಾಲಿ ಕೆಲಸ ಮಾಡುತ್ತಿದ್ದ, ಕೇವಲ 40 ರೂಪಾಯಿ ಜಗಳ ಒಂದು ಜೀವವನ್ನೇ ಬಲಿ ತೆಗೆದುಕೊಂಡಿದ್ದು, ಬಾಗಲಕೋಟೆ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಲಯದಲ್ಲಿ ಇಂದು ಮಾತನಾಡಿರುವ ನಟ ಶಿವರಾಜ್ ಕುಮಾರ್, ನಾಡು ನುಡಿ ಗಡಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿರಬೇಕು. ನಾವು ಎಲ್ಲಿದ್ದೇವೆ. ಯಾವ ಮಣ್ಣಿನಲ್ಲಿ ಇದ್ದೇವೆಂಬುದು ಮುಖ್ಯ. ನಮ್ಮ ನೆಲೆ ಜಲ ಭಾಷೆಗೆ ಗೌರವ ನೀಡುವುದು ನಮ್ಮೆಲ್ಲರ ಧರ್ಮ ಎಂದಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಇತ್ತ ಕಳೆದ ಎರಡು ದಿನಗಳ ಹಿಂದೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿದ ಘಟನೆಗೆ ನಾಡಿನಲ್ಲಿ ಆಕ್ರೋಶದ ಕಿಡಿ ಹೊತ್ತಿ ಉರಿದಿತ್ತು. ಹಾಗೆಯೇ ಡಿಸೆಂಬರ್ 6ಕ್ಕೆ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿದ್ದು ಇದಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More