Subscribe to Updates
Get the latest creative news from FooBar about art, design and business.
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
- ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
- ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
- ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
- ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
- ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
- ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
Author: admin
ಝೀ ಟಿವಿಯ ಜನಪ್ರಿಯ ಕಾಮಿಡಿ ಕಿಲಾಡಿಗಳು ಶೋ ಮೂಲಕ ಬೆಳಕಿಗೆ ಬಂದ ನಯನಾ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದನೆ ಹಾಗೂ ಜೀವ ಬೆದರಿಕೆ ಒಡ್ಡಿದ್ದಕ್ಕಾಗಿ ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನ ರೂಪದಲ್ಲಿ 3 ಲಕ್ಷ ರೂ. ಗಳಿಸಿತ್ತು. ತಂಡದಲ್ಲಿದ್ದ ಸೋಮಶೇಖರ್ ಸರಿಯಾದ ಪಾಲು ಕೊಟ್ಟಿಲ್ಲ ಎಂದು ಇಬ್ಬರ ನಡುವೆ ಮನಸ್ತಾಪ ಆಗಿತ್ತು. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಧಮ್ಕಿ ಹಾಕಿರುವ ನಯನಾ ಧ್ವನಿ ಎಂದು ಹೇಳಲಾಗಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…
ಬೆಂಗಳೂರು: ಈ ಬಾರಿ ಮಳೆಯ ಅಬ್ಬರದಂತೆಯೇ ಉತ್ತರ ಕರ್ನಾಟಕ ಭಾಗದಲ್ಲಿ ಮೈಕೊರೆಯುವ ಚಳಿಗೆ ಜನರು ತತ್ತರಿಸಲಿದ್ದಾರೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಹವಾಮಾನ ಮುನ್ಸೂಚನಾ ಕೇಂದ್ರದ ಡಾ.ಆರ್.ಹೆಚ್.ಪಾಟೀಲ್ ಈ ಬಾರಿ ಚಳಿ ಬಗ್ಗೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಚಳಿ ಡಿಸೆಂಬರ್ ಮೂರನೇ ವಾರದ ಬಳಿಕ ಹೆಚ್ಚಾಗಬೇಕಿತ್ತು. ಆದರೆ ಈ ಬಾರಿ ನವೆಂಬರ್ ಆರಂಭದಿಂದಲೇ ಶುರುವಾಗಿದೆ. ನವೆಂಬರ್ 24ರ ಬಳಿಕ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ಇನ್ನಷ್ಟು ಹೆಚ್ಚಾಗಲಿದ್ದು, ಜನರನ್ನು ನಡುಗಿಸಲಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಹುಬ್ಬಳ್ಳಿ-ಧಾರವಾಡ, ಗದಗ, ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವೆಡೆಗಳಲ್ಲಿ ಮೈ ಕೊರೆಯುವ ಚಳಿಗೆ ಜನರು ಬೆಳಿಗ್ಗೆ 10 ಗಂಟೆಯಾದರೂ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ನವೆಂಬರ್ 24ರ ಬಳಿಕ ಆರಂಭವಾಗಲಿರುವ ಚಳಿ ಜನರ ಇನ್ನಿಲ್ಲದಂತೆ ಕಾಡಲಿದೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಮಂಗಳೂರು ಆಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಕ್ ಜೊತೆ ಸಂಪರ್ಕದಲ್ಲಿದ್ದ ಮೂವರನ್ನ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ . ಶನಿವಾರ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆಟೋ ಚಾಲಕ ಮತ್ತು ಮತ್ತೋರ್ವ ಗಾಯಗೊಂಡಿದ್ದರು. ಈ ಇಬ್ಬರ ಪೈಕಿ 24 ವರ್ಷದ ಶಂಕಿತ ಆರೋಪಿ ಮೊಹಮ್ಮದ್ ಶಾರಿಕ್ ಕೂಡ ಒಬ್ಬನಾಗಿದ್ದು ಈತನನ್ನ ಕಂಕನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ಶಾರೀಕ್ ನ ಗುರುತನ್ನ ಕುಟುಂಬಸ್ಥರು ಪತ್ತೆಹಚ್ಚಿದ್ದಾರೆ. ಗುರುತು ಪತ್ತೆ ಹಚ್ಚುವ ಸಲುವಾಗಿ ಶಾರಿಕ್ ಸಹೋದರಿ ಮತ್ತು ಚಿಕ್ಕಮ್ಮನನ್ನ ಪೊಲೀಸರು ಕರೆತಂದಿದ್ದರು. ಮೈಸೂರಿನಿಂದ ಮಂಗಳೂರಿಗೆ ಬಂದಿದ್ದ ಶಾರಿಕ್ ಮಂಗಳೂರಿನ ಪಂಪ್ ವೆಲ್ ಬಳಿ ಇಳಿದಿದ್ದನು. ನಂತರ ಅಲ್ಲಿಂದ ಬೇರೆಡೆ ಆಟೋದಲ್ಲಿ ತೆರಳುವಾಗ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊಪ್ಪಳ : ಮದುವೆ ಮನೆಯಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದ್ದು, ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಕೊಪ್ಪಳದ ವನಬಳ್ಳಾರಿ ಗ್ರಾಮದ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಸಿದ್ದರಾಮಯ್ಯ ಕಾಣಿಸಿಕೊಂಡಿದ್ದು, ಮದುವೆ ಮನೆಯ ವೇದಿಕೆಯನ್ನೇ ಬಳಸಿಕೊಂಡು ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದಾರೆ. ಕೊಪ್ಪಳದ ಕನಕಗಿರಿಗೆ ಶಿವರಾಜ ತಂಗಡಗಿ, ಕುಷ್ಟಗಿ ಕ್ಷೇತ್ರಕ್ಕೆ ಅಮರೇಗೌಡ ಭಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ ರಾಯರೆಡ್ಡಿ, ಕೊಪ್ಪಳಕ್ಕೆ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಿಂದ ಇಕ್ವಾಲ್ ಅನ್ಸಾರಿಗೆ ಈ ಈ ಬಾರಿ ಚುನಾವಣೆಯಲ್ಲಿ ಮತ ನೀಡುವಂತೆ ಸಿದ್ದರಾಮಯ್ಯ ಜನರಿಗೆ ಮನವಿ ಮಾಡಿದ್ದಾರೆ. ಇನ್ನೂ, ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ನೋಡೋಕೆ ನೂಕುನುಗ್ಗಲು ಸಂಭವಿಸಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ನಡೆದಿದೆ.…
ನವದೆಹಲಿ: ಪುಣೆಯ ನವಲೆ ಸೇತುವೆಯಲ್ಲಿ ಭಾನುವಾರ ಟ್ಯಾಂಕರ್ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, 30 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪುಣೆ ಸಮೀಪದ ನವಲೆ ಬ್ರಿಡ್ಜ್ನಲ್ಲಿ ನಡೆದಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿವೆ ಎಂದು ಪುಣೆ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಟ್ಯಾಂಕರ್ನ ಬ್ರೇಕ್ ವಿಫಲವಾಗಿದ್ದು, ಟ್ಯಾಂಕರ್ ಚಾಲಕನ ನಿಯಂತ್ರಣಕ್ಕೆ ಬಾರದೇ ಮತ್ತು ರಸ್ತೆಯಲ್ಲಿ ತೈಲ ಚೆಲ್ಲಿದ ಕಾರಣ ಅದು ಜಾರುವಂತಾಗಿ ಒಂದಕ್ಕೊಂದು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮುಂಬೈಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, 2 ಕಿ.ಮೀ.ಗೂ ಹೆಚ್ಚು ಜಾಮ್ ಉಂಟಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದು, ಸ್ಥಳಕ್ಕೆ ತಡವಾಗಿ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದಲ್ಲದೇ ಬಟ್ಟೆಯನ್ನು ಹರಿದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ಗ್ರಾಮಕ್ಕೆ ಬಂದಿದ್ದಾರೆ. ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಅಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರನ್ನು ಹಿಡಿದು ಎಳೆದಾಡಿದ್ದಾರೆ. ಪರಿಸ್ಥಿತಿ ಕೈ ಮೀರಿದ ವೇಳೆ ಲಾಠಿ ಲಾಠಿ ಚಾರ್ಜ್ ಮಾಡಿ ಶಾಸಕರನ್ನು ಕರೆದುಕೊಂಡು ಬಂದ ಕಾರಿನಲ್ಲಿ ಕೂಡಿಸಿದ್ದಾರೆ. ಈ ಸಂದರ್ಭದಲ್ಲಿ ಎಂ.ಪಿ. ಕುಮಾರಸ್ವಾಮಿ ಅವರ ಬಟ್ಟೆ ಹರಿದಿಲ್ಲ. ಆದ್ರೆ, ಕುಮಾರಸ್ವಾಮಿ ಅವರು ಈ ಘಟನೆ ಬಗ್ಗೆ ವಿಡಿಯೋ ಹೇಳಿಕೆಯೊಂದನ್ನು ನೀಡಿದ್ದು, ಆ ವಿಡಿಯೋದಲ್ಲಿ ಶಾಸಕರ ಶರ್ಟ್ ಹರಿದಿದೆ.…
ಕೊರಟಗೆರೆ: ಪ್ರತಿನಿತ್ಯ ತಮ್ಮ ಕೂಲಿ ಕೆಲಸವನ್ನು ಬಿಟ್ಟು ಕಚೇರಿಗಳತ್ತ ಅಲೆದಾಡುವ ರೈತರ ಹಾಗೂ ಸಾರ್ವಜನಿಕರ ಕಷ್ಟಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಹಶೀಲ್ದಾರ್ ನಾಹಿದ ಜಮ್ ಜಮ್ ಹೇಳಿದರು. ತಾಲ್ಲೂಕಿನ ಕೋಳಾಲ ಹೋಬಳಿಯ ವೀರಪುರ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳೇ ಖುದ್ದಾಗಿ ಹಳ್ಳಿಹಳ್ಳಿಗೆ ತಲುಪಿ ಜನರ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದರಿಂದಾಗಿ ಜನರು ತಾಲೂಕು ಕಚೇರಿಗೆ ಅಲೆಯುವುದು , ಅಧಿಕಾರಿಗಳಿಗಾಗಿ ಕಾಯುವುದು ತಪ್ಪುತ್ತದೆ ಎಂದರು. ಸಹಾಯಕ ಕೃಷಿ ನಿರ್ದೇಶಕರು ಹೆಚ್ ನಾಗರಾಜು ಮಾತನಾಡಿ, ನಮ್ಮ ತಾಲೂಕಿನ ರೈತರು ಬುದ್ಧಿವಂತರಾಗಿದ್ದಾರೆ ಅವರ ಜಮೀನುಗಳಲ್ಲಿ ಬೆಳೆಯುವ ಬೆಳೆಗಳಿಗೆ ಯಾವ ಯಾವ ಕಾಲದಲ್ಲಿ ಯಾವ ಬೆಳೆ ಬೆಳೆಯಬೇಕು ಎನ್ನುವುದರ ಮಾಹಿತಿ ನಮ್ಮ ಬಳಿ ತಿಳಿದುಕೊಳ್ಳುತ್ತಾರೆ. ಅದರಲ್ಲೂ ಇತ್ತೀಚಿಗೆ ವಿದ್ಯಾವಂತ ಯುವಕರು ಕೂಡ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಅವರ ನೂತನ ಶೈಲಿಯ…
ಹೆಚ್.ಡಿ.ಕೋಟೆ: ಪುರಸಭಾ ವ್ಯಾಪ್ತಿಯಲ್ಲಿ ಬರುವ ವಡ್ಡರಗುಡಿ ಹಾಡಿಯನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಸೂಚನೆ ನೀಡಿದರು. ತಾಲೂಕಿನ ಹೊಸಹಳ್ಳಿ ಹಾಡಿ ವಿವೇಕಾನಂದ ಗಿರಿಜನ ಶೈಕ್ಷಣಿಕ ಕೇಂದ್ರದಲ್ಲಿ ಭಾನುವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಎರಡನೇ ದಿನದ ಗಿರಿಜನರ ಕುಂದುಕೊರತೆ ಸಮಾಲೋಚನೆ ಸಭೆಯಲ್ಲಿ ಗಿರಿಜನ ಮುಖಂಡರಿಂದ ಆಹುವಾಲು ಸ್ವೀಕರಿಸಿ ಮಾತನಾಡಿದರು. ವಡ್ಡರಗುಡಿ ಹಾಡಿಯನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತನೆ ಮಾಡದೆ ಪುರಸಭೆ ವ್ಯಾಪ್ತಿಗೆ ಸೇರಿಸಿರುವುದರಮದ ಹಾಡಿಯ ಜನರು ಮುಂದಿನ ದಿನಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ತೊಂದರೆ ಆಗುತ್ತದೆ ಹಾಗಾಗಿ ಶೀಘ್ರವಾಗಿ ಪರಿಶೀಲನೆ ನಡೆಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು. ಹಾಡಿಯ ಮುಖಂಡ ವಡ್ಡರಗುಡಿ ಚಿಕ್ಕಣ್ಣ ಮಾತನಾಡಿ, ಜಿಲ್ಲೆಯಲ್ಲಿ 125 ಹಾಡಿಗಳ ಪೈಕಿ ವಡ್ಡರಗುಡಿ ಹಾಡಿ ಒಂದನ್ನು ಪುರಸಭಾ ವ್ಯಾಪ್ತಿಗೆ ಸೇರಿಸಲಾಗಿದೆ. ಆದರೆ ಕಂದಾಯ ಗ್ರಾಮವನ್ನಾಗಿ ಸೇರ್ಪಡೆ ಮಾಡದೆ ಪುರಸಭೆ ಸೇರ್ಪಡೆ ಮಾಡಿರುವುದರಿಂದ 86 ಕುಟುಂಬಗಳಿಗೆ…
ಇಂದಿನ ಪತ್ರಿಕೆ ತಿರುವುತ್ತಿದ್ದೆ. ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಾರಣ ಪರೀಕ್ಷೆಯಲ್ಲಿ ಚೀಟಿ ಇಟ್ಟಿದ್ದಳೆಂದು ಕ್ಲಾಸ್ ಟೀಚರ್ ಬೈದಿದ್ದರು. ಅವಮಾನ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡಿದ್ದಳು. ಪೋಷಕರು ಮತ್ತು ಊರವರು ಶಾಲೆಯ ಮುಂದೆ ವಿದ್ಯಾರ್ಥಿನಿಯ ಶವ ಇಟ್ಟು ಧರಣಿ ಕೂತಿದ್ದರು. ಅವರ ಬೇಡಿಕೆ ಸ್ಪಷ್ಟ “ಹುಡುಗಿಯ ಸಾವಿಗೆ ಟೀಚರೇ ಕಾರಣ, ಅವರನ್ನು ನಮ್ಮ ಕೈಗೆ ಕೊಡಿ” ಬಹುಶಃ ಕೈಗೆ ಸಿಕ್ಕರೆ ಮಗುವಿನೊಂದಿಗೆ ಟೀಚರನ್ನೂ ಸಮಾಧಿ ಮಾಡುವ ಯೋಚನೆ ಇರಬಹುದು. ಸ್ವಲ್ಪ ದಿನದ ಮುಂಚೆ ಇದೇ ರೀತಿಯ ಪ್ರಸಂಗ ನಡೆದಿತ್ತು. ಪರೀಕ್ಷೆಯಲ್ಲಿ ಚೀಟಿ ಇಟ್ಟು ಸಿಕ್ಕಿಬಿದ್ದ ಹುಡುಗನೊಬ್ಬನನ್ನು ಶಿಕ್ಷಕಿ ಹೊರಗೆ ನಿಲ್ಲುವಂತೆ ಸೂಚಿಸಿದ್ದರು. ಹುಡುಗ ನೇರ ಅಪಾರ್ಟ್ ಮೆಂಟ್ ಗೆ ತೆರಳಿ, ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದ. ಕಾರಣ ಆತನಿಗೆ ಅದು ಸಹಿಸಲಾರದ ಅವಮಾನವಾಗಿತ್ತು. ಪೋಷಕರು ರೊಚ್ಚಿಗೆದ್ದು ಶಿಕ್ಷಕಿ ಮೇಲೆ ಕೇಸು ದಾಖಲಿಸಿದ್ದರು. ಈ ಎರಡೂ ಪ್ರಕರಣದಲ್ಲಿ ವಿದ್ಯಾರ್ಥಿಗಳು ಹತ್ತನೇ ತರಗತಿ ಕಲಿಯುತ್ತಿದ್ದರು. ಈ ಮೇಲಿನ ಎರಡು ಘಟನೆಗಳಲ್ಲದೆ ಇನ್ನೂ ನೂರಾರು ಘಟನೆಗಳು ನಮ್ಮ…
5 ಅಂತಸ್ತಿನ ವಸತಿ ಸಂಕೀರ್ಣ ಕುಸಿದ ಪರಿಣಾಮ 9 ಮಂದಿ ಮೃತಪಟ್ಟು ಒಬ್ಬರು ನಾಪತ್ತೆಯಾಗಿರುವ ಘಟನೆ ರಷ್ಯಾದ ಫೆಸಿಫಿಕ್ ದ್ವೀಪ ಸಕಲೇನ್ ನಲ್ಲಿ ಸಂಭವಿಸಿದೆ. ಗ್ಯಾಸ್ ಸ್ಫೋಟದಿಂದ ಕಟ್ಟಡ ಕುಸಿದಿದೆ ಎಂದು ಹೇಳಲಾಗಿದ್ದು, ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. 9 ಮೃತದೇಹಗಳು ಪತ್ತೆಯಾಗಿದ್ದು, ಒಬ್ಬರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 20 ಲೀಟರ್ ಅಡುಗೆ ಗ್ಯಾಸ್ ಸಿಲಿಂಡರ್ ಸಂಪರ್ಕ ಈ ಕಟ್ಟಡದ ವಸತಿಗಳಿಗೆ ಕಲ್ಪಿಸಲಾಗಿತ್ತು. ಸಿಲಿಂಡರ್ ಸ್ಫೋಟದಿಂದ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy