Author: admin

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್​ ಎಂಬ ಗ್ರಾಮದಲ್ಲಿ ಶುಕ್ರವಾರ ಅವಳಿ ಸಹೋದರಿಯರು ಗುರು ಹಿರಿಯರು ಹಾಗೂ ಎರಡೂ ಕುಟುಂಬಗಳ ಒಪ್ಪಿಗೆ ಮೇರೆಗೆ ಶಾಸ್ತ್ರೋಕ್ತವಾಗಿ ಮದುವೆ ಆಗಿದ್ದಾರೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದು, ಇತ್ತೀಚೆಗಷ್ಟೇ ತಂದೆ ನಿಧನರಾಗಿದ್ದರಿಂದ ತಾಯಿ ಜೊತೆ ವಾಸವಾಗಿದ್ದರು. ತಾಯಿಗೂ ಅನಾರೋಗ್ಯ ಕಾಡುತ್ತಿದ್ದು, ಮುಂದೆ ಒಬ್ಬರು ಮದುವೆ ಆದರೆ ಮತ್ತೊಬ್ಬಾಕೆಗೆ ಆಗಲಿಲ್ಲ ಅಂದರೆ ಹೇಗೆ ಬಿಟ್ಟು ಇರುವುದು ಎಂದು ಸಹೋದರಿಯರು ಅತುಲ್ ಎಂಬಾತನನ್ನು ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅತುಲ್​ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಯುವತಿಯರ ತಾಯಿಗೆ ಅನಾರೋಗ್ಯ ಕಾಡಲು ಆರಂಭಿಸಿದಾಗ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್​ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ…

Read More

ಆಂಟೋನಿ ಬೇಗೂರು ಅಂತರಾಷ್ಟ್ರೀಯ ಸ್ವಯಂಸೇವಕರ ದಿನದ ಮುಖ್ಯ ಉದ್ದೇಶವೆಂದರೆ ಪ್ರಪಂಚದಾದ್ಯಂತ ಶಾಂತಿ ಮತ್ತು ಅಭಿವೃದ್ಧಿಗೆ ಬೆಂಬಲ ನೀಡುವ ಸ್ವಯಂಸೇವಕತೆಯನ್ನು ಉತ್ತೇಜಿಸುವುದು … ಮತ್ತು ಯಾವುದೇ ಲಾಭವಿಲ್ಲದೆ ಅಗತ್ಯವಿರುವವರನ್ನು ಉಳಿಸಲು ಸ್ವಯಂಸೇವಕರಾಗಿರುವ ಎಲ್ಲರ ಸೇವೆಯನ್ನು ಗುರುತಿಸುವುದು. ಅನೇಕ ದೇಶಗಳು ಅಭಿವೃದ್ಧಿ ಗುರಿಗಳನ್ನು ಪೂರೈಸಲು ಸ್ವಯಂಸೇವಕ ಕಾರ್ಮಿಕರ ಸೇವೆಗಳ ಮೇಲೆ ಕೇಂದ್ರೀಕರಿಸಿವೆ. ಬಡತನ, ಹಸಿವು, ಅಸ್ವಸ್ಥತೆಗಳು, ಅನಕ್ಷರತೆ, ಹವಾಮಾನ ದೋಷಗಳು ಮತ್ತು ಮಹಿಳೆಯರ ವಿರುದ್ಧದ ತಾರತಮ್ಯದಂತಹ ಸಮಸ್ಯೆಗಳನ್ನು ಎದುರಿಸಲು ಗುರಿಗಳನ್ನು ಹೊಂದಿಸಲು ಸ್ವಯಂಸೇವಕರನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ವಯಂಸೇವಕ ಕಾರ್ಯಕರ್ತರು, ಸಮಿತಿಗಳು, ಸಂಸ್ಥೆಗಳು, ಸ್ಥಳೀಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಗಾಗಿ ತಮ್ಮ ಅತ್ಯುತ್ತಮ ಕೊಡುಗೆಯನ್ನು ನೀಡುತ್ತವೆ. ಸರ್ಕಾರಿ ಏಜೆನ್ಸಿಗಳು, ಲಾಭೋದ್ದೇಶವಿಲ್ಲದ ಸಂಸ್ಥೆಗಳು, ಸಮುದಾಯ ಗುಂಪುಗಳು ಮತ್ತು ಶೈಕ್ಷಣಿಕ ಖಾಸಗಿ ವಲಯದೊಂದಿಗೆ ಅಭಿವೃದ್ಧಿಯಲ್ಲಿ ಹಂಚಿಕೊಳ್ಳಲು ಜನರು ಮತ್ತು ಸ್ವಯಂಸೇವಕರಿಗೆ ಇಂದು ಉತ್ತಮ ಅವಕಾಶವಾಗಿದೆ. ನವೆಂಬರ್ 20, 1997 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2001 ಅನ್ನು ಸ್ವಯಂಸೇವಕರ ಅಂತರರಾಷ್ಟ್ರೀಯ ವರ್ಷವೆಂದು ಘೋಷಿಸಿತು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್…

Read More

ಬೆಂಗಳೂರು; ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ರ್ಯಾಂಕ್ ಗಳಿಸಿದ ಒಟ್ಟು 7 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಲಾಯಿತು. ಘಟಿಕೋತ್ಸವದಲ್ಲಿ ಪದವಿ ವಿಭಾಗದ 222 ಮತ್ತು ಸ್ನಾತಕೋತ್ತರ ವಿಭಾಗದ 52 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 274 ವಿದ್ಯಾರ್ಥಿಗಳು ಪದವಿ, ಪ್ರಮಾಣ ಪತ್ರ ಪಡೆದರು. ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಪ್ರೊ. ಪಿ. ಬಲರಾಮ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ವಿಜ್ಞಾನ ಪ್ರತಿಯೊಬ್ಬರ ಜೀವನದಲ್ಲೂ ಬಹು ಮುಖ್ಯ. ನೀವೆಲ್ಲಾ ಕೋವಿಡ್ ಕಾಲದ ಪದವೀಧರರು. ಆ ಸಮಯದಲ್ಲಿ ವಿಜ್ಞಾನ ಲೋಕದಲ್ಲಿ ಅನೇಕ ಸಂಶೋಧನೆಗಳನ್ನು ಕಂಡಿದ್ದೀರಿ. ಈ ಪ್ರಕೃತಿಯಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರಿಗೂ ವಿಜ್ಞಾನದ ಮಹತ್ವ ತಿಳಿದಿರಬೇಕು” ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಿ ವೈಜ್ಞಾನಿಕ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ಬದುಕಿಗೂ ಅನಿವಾರ್ಯ ಮತ್ತು ಡಾ. ಎಚ್. ನರಸಿಂಹಯ್ಯನವರ ಕನಸೂ ಹೌದು” ಎಂದರು. ಪ್ರಥಮ ರ್ಯಾಂಕ್ ಪಡೆದ ಪದವಿ ವಿದ್ಯಾರ್ಥಿಗಳಾದ ಪ್ರಿಯಾಂಕ…

Read More

ಕಾರವಾರ: ಜಿಲ್ಲಾ ಪಂಚಾಯಿತಿ ನೌಕರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕಾಳಿ ನದಿ ಸೇತುವೆ ಬಳಿ ನಡೆದಿದೆ. ಶ್ರೀಕಾಂತ ಮೇಲಿನಮನೆ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಕಾರವಾರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿದ್ದ ಶ್ರೀಕಾಂತ ಕಾಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕ ಕೆಲಸದ ಒತ್ತಡ, ಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತಮ್ಮಣ್ಣ ಚನ್ನಬಸಪ್ಪ ಮೇಲಿನಮನೆ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ, ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತ ಬಾಲಕಿಯ ತಾಯಿ ಪತ್ರ ಬರೆದಿದ್ದಾರೆ. ಈ ಕುರಿತು ಪತ್ರ ಬರೆದಿರುವ ಸಂತ್ರಸ್ತ ಬಾಲಕಿಯ ತಾಯಿ, ‘ನನಗೆ ಹಾಗೂ ನನ್ನ ಮಕ್ಕಳಿಗೆ ದಯಾ ಮರಣ ನೀಡಿ. ನನ್ನ ಹಾಗೂ ಮಕ್ಕಳ ಜೀವನದ ಘನತೆ ಉಳಿಸುವಂತೆ ಪತ್ರದಲ್ಲಿ ಕೋರಿದ್ದಾರೆ. ಪ್ರಧಾನಿಯವರ ‘ಭೇಟಿ ಬಚಾವೋ, ಭೇಟಿ ಪಡಾವೋ’ ಎಲ್ಲಿ ಹೋಯ್ತು. 20 ದಿನಗಳ ಕಾಲ ನಾನು ನರಕ ನೋಡಿದ್ದೇನೆ. ನನಗೆ ಈ ನರಕದಿಂದ ಮುಕ್ತಿಕೊಡಿ. ಒಡಲ ಉರಿಯಿಂದ ಈ ಕಣ್ಣೀರ ಪತ್ರ ಬರೆಯುತ್ತಿರುವೆ. ನಮ್ಮಂತಹವರು ನ್ಯಾಯ ಕೇಳಲು ಹೊರಗೆ ಬರಬಾರದು ಎಂದು ತೀವ್ರ ಮನನೊಂದು ಸಂತ್ರಸ್ತ ಬಾಲಕಿಯ ತಾಯಿ ಅಳಲು ತೋಡಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದ್ದು, ಜನರು ಹಾಗೂ ರಾಜಕೀಯ ನಾಯಕರು ಗಣ್ಯರು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ. ಅಹಮದಾಬಾದ್ ​ನ ಸಬರಿಮತಿ ಕ್ಷೇತ್ರದ ರಾಣಿಪ್ ಮತಗಟ್ಟೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು. ಗುಜರಾತ್ ಚುನಾವಣೆ ಜೊತೆಗೆ ದೇಶಾದ್ಯಂತ ಹಲವೆಡೆ ಉಪಚುನಾವಣೆಗಳು ಕೂಡ ನಡೆಯುತ್ತಿವೆ. ಈ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಮನವಿ ಮಾಡಿದರು. ಹಾಗೆಯೇ ಮತದಾನ ಪ್ರಕ್ರಿಯೆಯೆಲ್ಲಿ ಭಾಗಿಯಾಗುತ್ತಿರುವ ಜನತೆಗೆ ಧನ್ಯವಾದ . ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಎಲ್ಲರ ಹಕ್ಕು. ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನ ವಿದ್ಯಾರ್ಥಿ ಭವನ ಯಾರಿಗೆ ಗೊತ್ತಿಲ್ಲ. ಸುಮಾರು ಎಂಟು ದಶಕಗಳಷ್ಟು ಹಳೆಯ ಬೆಂಗಳೂರಿನ ಈ ಹೊಟೆಲ್ ಬೆಂಗಳೂರು ಮಾತ್ರವಲ್ಲದೇ, ಇಡೀ ದೇಶ ಹಾಗೂ ವಿದೇಶಗಳಲ್ಲಿಯೂ ಪ್ರಖ್ಯಾತಿಯನ್ನು ಗಳಿಸಿದೆ. ಅದರಲ್ಲಿಯೂ ವಿದ್ಯಾರ್ಥಿ ಭವನದ ಮಸಾಲೆ ದೋಸೆಗೆ ಮಾರು ಹೋಗುವವರೇ ಇಲ್ಲ ಎನ್ನಬಹುದು. ಅನೇಕ ಗಣ್ಯರು ಆಗಾಗ ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಉಪಹಾರ ಸೇವಿಸುವುದು ಸಾಮಾನ್ಯವಾಗಿದೆ. ಬೆಂಗಳೂರು ಮೂಲದ ಅನಿವಾಸಿ ಭಾರತೀಯರು ಬೆಂಗಳೂರಿಗೆ ಬಂದಾಗಿ ಇಲ್ಲಿಗೆ ಬರದೇ ಇರುವುದಿಲ್ಲ. ಬ್ರಿಟಿಷ್ ಡೆಪ್ಯೂಟಿ ಹೈ ಕಮೀಷನರ್ ಚಂದ್ರ ಅಯ್ಯರ್ ಅವರು ಬೆಂಗಳೂರಿನಲ್ಲಿ ಒಂದು ವಾರದ ಕಾಲ ತಂಗಿದ್ದರು. ಶನಿವಾರದಂದು ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ರುಚಿಯಾದ ಮಸಾಲೆ ದೋಸೆ, ಕಾಫಿ ಸವಿದರು. ವಿದ್ಯಾರ್ಥಿ ಭವನದ ಅರುಣ್ ಅಡಿಗ ಅವರು ಅಯ್ಯರ್ ಹಾಗೂ ರಾಜಕೀಯ ಆರ್ಥಿಕ ಸಲಹಾಗಾರರಾದ ಮಂಜುನಾಥ್ ಕೆ.ಎಸ್ ಅವರನ್ನು ಉಪಚರಿಸಿದರು. ಜೊತೆಗೆ ಹೋಟೆಲ್ ಚರಿತ್ರೆ ಹಾಗೂ ಖಾದ್ಯದ ವಿಶೇಷತೆಗಳ ಕುರಿತು ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕೊರಟಗೆರೆ: ಪಂಚರತ್ನ ಯೋಜನೆಯಿಂದ ಕರ್ನಾಟಕ ರಾಜ್ಯದ ಅಭಿವೃದ್ದಿ ಸಾಧ್ಯ. ಗ್ರಾಮೀಣ ಜನತೆಯ ಆರ್ಥಿಕ ಸದೃಢತೆಗೆ ಶಿಕ್ಷಣ, ವಸತಿ, ಆರೋಗ್ಯ, ರೈತ ಚೈತನ್ಯ ಮತ್ತು ಯುವ ನವಮಾರ್ಗ, ಮಹಿಳಾ ಸಬಲೀಕರಣ ಅಗತ್ಯ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸ್ತ್ರೀ ಶಕ್ತಿ ಸಂಘದ ಸಾಲದಿಂದ ಋಣಮುಕ್ತ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವಾರ, ಹೊಳವನಹಳ್ಳಿ, ಕೋಳಾಲ, ಕಸಬಾ, ತೋವಿನಕೆರೆ ಮತ್ತು ಕೊರಟಗೆರೆ ಪಟ್ಟಣದಲ್ಲಿ ಜಾತ್ಯಾತೀತ ಜನತಾ ದಳ ಪಕ್ಷದಿಂದ ಶನಿವಾರ ಏರ್ಪಡಿಸಲಾಗಿದ್ದ ಪಂಚರತ್ನ ರಥಯಾತ್ರೆ ಸಂಚಾರದ ವೇಳೆ ಮಾತನಾಡಿದರು. ಗುಣಮಟ್ಟದ ಶಿಕ್ಷಣವೇ ಆಧುನಿಕ ಶಕ್ತಿ, ಬಡವರಿಗೆ ವಸತಿಯ ಆಸರೆ, ಪ್ರತಿ ಗ್ರಾ.ಪಂ.ಗೆ ಹೈಟೆಕ್ ಆಸ್ಪತ್ರೆ, ಆಧುನಿಕ ತಂತ್ರಜ್ಞಾನದ ಕೃಷಿ ಚೈತನ್ಯ, ಯುವ ಜನತೆಗೆ ನವಮಾರ್ಗ ಮತ್ತು ಮಹಿಳೆಯರಿಗೆ ಉದ್ಯೋಗಕ್ಕಾಗಿ ಜೆಡಿಎಸ್ ಪಕ್ಷವು ಪಂಚರತ್ನ ಯೋಜನೆ ರೂಪಿಸಿದೆ. ರಾಜ್ಯ ಸರಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ, ಕಾರ್ಯಕ್ರಮದ ಹೆಸರಿನಲ್ಲಿ ಜನರ ಹಣವು ಲೂಟಿ ಆಗುತ್ತಿದೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ…

Read More

ಶಿವಮೊಗ್ಗ : ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ಸಂಬಂಧ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಂ ಕಾಲೇಜಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜಿಗೆ ಅವಕಾಶ ಇಲ್ಲ. ನಾನು ಯಾವುದೇ ಇಲಾಖೆ ಅಧಿಕಾರಿ, ಅಂಟೆಂಡರ್ ನಂಬುವುದಿಲ್ಲ. ಮುಸ್ಲಿಂ ಕಾಲೇಜು ವಿಚಾರದಲ್ಲಿ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲ್ಲ ಎಂದು ಹೇಳಿದ್ದಾರೆ ಎಂದರು. ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಮುಸ್ಲಿಂರಿಗಾಗಿ ಪ್ರತ್ಯೇಕ ಮಹಿಳಾ ಕಾಲೇಜು ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎನ್ನಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಗಡಿ ವಿವಾದದ ಹೊತ್ತಲ್ಲೇ ಮಹಾರಾಷ್ಟ್ರ ಸಚಿವರು ನಾಳೆ ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಶಾಂತಿ ಕದಡಲು ಬಿಡುವುದಿಲ್ಲ. ಭಾವನಾತ್ಮಕವಾಗಿ ಕೆರಳಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದು ಏನು ಮಾಡಬಹುದು ಎಂದು ನೋಡೋಣ. ಬೆಳಗಾವಿ ಎರಡು ರಾಜ್ಯಗಳ ಯುದ್ಧರಂಗ ಅಲ್ಲ. ನೆಲ, ಜಲ ಕಾಪಾಡುವ ದೃಷ್ಟಿಯಿಂದ ನಾವು ಕ್ರಮಕ್ಕೆ ಮುಂದಾಗಿದ್ದೇವೆ. ಮಹಾರಾಷ್ಟ್ರ ಸಚಿವರು ಕಾನೂನು ಉಲ್ಲಂಘನೆ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಮತ್ತು ಗಡಿ ವಿವಾದದ ಮಹಾರಾಷ್ಟ್ರ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ಧೈರ್ಯಶೀಲ್ ಮಾನೆ ಅವರು ಡಿಸೆಂಬರ್ 6 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…

Read More