Subscribe to Updates
Get the latest creative news from FooBar about art, design and business.
- ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
- ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
- ಎನ್ ಎಸ್ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
- ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
- ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
- ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ: ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್ಐಆರ್ ದಾಖಲು
- ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
- ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
Author: admin
ಕೊರಟಗೆರೆ: ಸಾರ್ವಜನಿಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ನವೀನ್ ಕೆ.ಎನ್. ಅವರನ್ನು ಚಿಕ್ಕನಾಯಕನಹಳ್ಳಿಗೆ ಎತ್ತಂಗಡಿ ಮಾಡಲಾಗಿದೆ. ಸಾರ್ವಜನಿಕರ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ.ನವೀನ್ ಕೆ.ಎನ್. ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಾತ್ಕಾಲಿಕವಾಗಿ ಚಿಕ್ಕನಾಯಕನಹಳ್ಳಿಗೆ ವರ್ಗಾವಣೆ ಮಾಡಿದ್ದಾರೆ. ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ನವೀನ ಕೆ.ಎನ್. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತಾತ್ಕಾಲಿಕ ವರ್ಗಾವಣೆ ಮಾಡಿ ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ, ಆಸ್ಪತ್ರೆಗಳಿಗೆ ಅಲೆದಾಡಬೇಕಿಲ್ಲ. ಕಂದಾಯ ಇಲಾಖೆ ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಇನ್ನುಮುಂದೆ ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ನಲ್ಲಿ ನಿಮ್ಮ ಮನೆಗೆ ಬರಲಿದೆ. ಆನ್ಲೈನ್ & ಆಫ್ಲೈನ್ನಲ್ಲಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅಂಚೆ ಇಲಾಖೆಯೇ ಸಂಬಂಧಪಟ್ಟ ಕಚೇರಿಗಳಿಂದ ಅದನ್ನು ಸಂಗ್ರಹಿಸಿ ನಿಖರವಾದ ವಿಳಾಸಕ್ಕೆ ತಲುಪಿಸಲಿದೆ. ರಾಜ್ಯದ ಎಲ್ಲಾ ಅಂಚೆ ಕಚೇರಿಗಳು ಕೂಡ ಈ ಸೇವೆಯನ್ನು ಒದಗಿಸಲಿವೆ. ಹೇಗಿದೆ ಈ ಸೇವೆ? ಹಾಗೆಯೇ ವಿವಿಧ ಕಾರಣಗಳಿಗಾಗಿ ಒಂದೊಮ್ಮೆ ಮರಣ ಸಂಭವಿಸಿದ್ದಲ್ಲಿ, ಅಂತಹವರು ಮರಣ ಪ್ರಮಾಣ ಪತ್ರಕ್ಕಾಗಿ ನಗರದ ಸ್ಥಳೀಯ ಸಂಸ್ಥೆಗಳಿಂದಲೋ ಅಥವಾ ಸರಕಾರಿ ಆಸ್ಪತ್ರೆಯಿಂದಲೋ ಪ್ರಮಾಣ ಪತ್ರಗಳನ್ನು ಪಡೆಯಬೇಕಾಗಿರುತ್ತದೆ. ಇನ್ಮುಂದೆ ಇರಲ್ಲ ಅಲೆದಾಟ: ಆದರೆ ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗ ಇದಕ್ಕಾಗಿ ನಡೆಯುತ್ತಿದ್ದ ಅಲೆದಾಟವನ್ನು ತಪ್ಪಿಸಿದೆ. ಸುಲಭವಾಗಿ ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ವಿಳಾಸಕ್ಕೆ ಜನನ ಇಲ್ಲವೇ ಮರಣ ಪ್ರಮಾಣ ಪತ್ರಗಳನ್ನು ತಲುಪಿಸುತ್ತಿದೆ. ಅರ್ಜಿ ಸಲ್ಲಿಸುವುದು…
ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(RPI) ರಾಜ್ಯ ಮಂಡಳಿ ಸಭೆಯು ಅಕ್ಟೋಬರ್ 13ರ ಗುರುವಾರ ಬೆಂಗಳೂರಿನ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಆರ್ ಪಿಐ ಮುಖಂಡರು ತಿಳಿಸಿದರು. ಕಾರ್ಯಕ್ರಮದಲ್ಲಿ ಆರ್ ಪಿಐಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವರಾದ ರಾಂದಾಸ್ ಅಠವಳೆ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ರಾಜ್ಯ ಮಂಡಳಿಯ ನಿರ್ಣಯಗಳನ್ನು ಅಂಗೀಕರಿಸಲಿದ್ದಾರೆ. ಬೆಳಗ್ಗೆ 10:30ರಿಂದ 12ಗಂಟೆಯವರೆಗೆ ಸಕ್ರಿಯ ಸದಸ್ಯರ ನೋಂದಣಿ ನಡೆಯಲಿದೆ. ಮಧ್ಯಾಹ್ನ 12ರಿಂದ ಮಧ್ಯಾಹ್ನ 1:30ರವರೆಗೆ ಉದ್ಘಾಟನಾ ಗೋಷ್ಠಿ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮತ್ತೋರ್ವ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಜೆ.ಸಿ.ವೆಂಕಟರಮಣಪ್ಪ ಅವರು ಕಾರ್ಯಕ್ರಮ ನಿರೂಪಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರ ಚುನಾವಣೆ ನಡೆಯಲಿದೆ. ಚುನಾವಣಾಧಿಕಾರಿಗಳಾಗಿ ಹೈಕೋರ್ಟ್ ವಕೀಲರಾದ ವಿ.ಉಮಾಶಂಕರ್ ಹಾಗೂ ಬೆಂಗಳೂರಿನ ಹಿರಿಯ ವಕೀಲರಾದ ಸಣ್ಣಾ…
ಬೆಳಗಾವಿ: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ರಾಮದುರ್ಗ ಪಟ್ಟಣದ ಗಾಂಧಿ ನಗರದಲ್ಲಿ ನಡೆದಿದೆ. ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಒಂದು ಕೋಮಿನ ಐದಕ್ಕೂ ಅಧಿಕ ಯುವಕರು ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್ಗೆ ಚಾಕು ಇರಿಯಲಾಗಿದೆ. ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್ನಿಂದ ಹಲ್ಲೆ ಮಾಡಲಾಗಿದೆ. ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ್ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹಾದೇವಪ್ಪ ಯಾದವಾಡ ಅವರು ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ಕುಮಾರಸ್ವಾಮಿ ಲೇಔಟ್ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಹಿತಾಶ್ವ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ ಶರತ್ ಲೋಹಿತಾಶ್ವ, ‘ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಯಾವ ರೀತಿ ಸ್ಪಂದನೆ ಮಾಡ್ತಾರೆ ಅನ್ನೋದು ಗೊತ್ತಾಗಬೇಕಿದೆ’ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಮೂರು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿ, ತಾಯಿ ಹಾಗೂ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಹತ್ತಿರ ರವಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಲಹೊಂಗಲ ತಾಲೂಕಿನ ಭಾರತಿ (28) ಹಾಗೂ ವೇದಾಂತ ಪೂಜೇರಿ (6) ಇವರಿಬ್ಬರು ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಇವರು ದ್ವಿಚಕ್ರ ವಾಹನ ಮೇಲೆ ಸಂಚರಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ಕಾರು ಘಟಪ್ರಭಾದಿಂದ ಹುಕ್ಕೇರಿ ಕಡೆ ಬರುತ್ತಿದ್ದವು ಒಂದು ಕಾರು ಗೋಕಾಕದಿಂದ ಹುಕ್ಕೇರಿ ಕಡೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಮುಖ್ಯಮಂತ್ರಿ ಬೊಮ್ಮಾಯಿ ನಿಂತಿದ್ದಾರೆ ಎಂದು ಸಚಿವ ಶ್ರೀರಾಮಲು ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಮುಖ್ಯಮಂತ್ರಿ ಬೊಮ್ಮಾಯಿ ನಿಂತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಅಂದು ನಾನು ಅವತ್ತೇ ಹೇಳಿದ್ದೆ. ಮೀಸಲಾತಿ ಹೆಚ್ಚಳ ಮಾಡುತ್ತೇನೆ ಎಂದು ಅದು ಈಗ ಈಡೇರಿದೆ ಎಂದರು. ಮೀಸಲಾತಿ ಕೊಡಲು ನಮ್ಮ ಸರ್ಕಾರ ಬರಬೇಕು ಅಂದಿದ್ದೆ. ಆದರೆ ನನ್ನನ್ನು ಕೆಲವರು ಗೇಲಿ ಮಾಡಿದರು. ಆದರೂ ತಾಳ್ಮೆಯಿಂದ ಇದ್ದಿದ್ದಕ್ಕೆ ನಮ್ಮ ಸಮಾಜಕ್ಕೆ ಫಲ ಸಿಕ್ಕಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂದೂ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಸಿಪಿಐ ಕರೆಪ್ಪ ಬನ್ನೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್ 6 ರಂದು ಗಣಪತಿ ಮೆರವಣಿಗೆ ವೇಳೆ ಸಿಪಿಐ, ಬೇಗ ಗಣೇಶ ಮೆರವಣಿ ಸಾಗಿಸಿ ಎಂದು ಹೇಳಿದ್ದಕ್ಕೆ ಸಿಪಿಐ ಸೇರಿದಂತೆ ಇಬ್ಬರು ಕಾನ್ಸ್’ಟೇಬಲ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ಸಿಪಿಐ ಕರೆಪ್ಪ ಬನ್ನೆ ಈ ಆರು ಮಂದಿಗೆ ಜೈಲಿನಲ್ಲಿ ಟಾರ್ಚರ್ ನೀಡಿದ್ದರು ಎಂದು ಹಿಂದೂ ಜಾಗರಣಾ ವೇದಿಕೆ ಕೆರೂರು ಚಲೋ ಪ್ರತಿಭಟನೆ ನಡೆಸಿದ್ದರು. ಸುಳ್ಳು ಪ್ರಕರಣ ದಾಖಲಿಸಿದ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಸಿಪಿಐ ಕರೆಪ್ಪ ಬನ್ನೆ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ನವದೆಹಲಿ : ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಬಣಗಳಿಗೆ ಶಿವಸೇನೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಬಳಸಬಾರದೆಂದು ಕೇಂದ್ರ ಚುನಾವಣಾ ಆಯೋಗವು ತಾತ್ಕಾಲಿಕ ಆದೇಶ ನೀಡಿದೆ. ಈ ನಿರ್ಣಯ ಮಹಾರಾಷ್ಟ್ರದ ರಾಜ್ಯ ರಾಜಕಾರಣದಲ್ಲಿ ಇದು ಒಂದು ಮಹತ್ವದ ಎಂದೇ ಭಾವಿಸಲಾಗುತ್ತಿದೆ. 25 ವರ್ಷಗಳ ಹಳೆಯ ಮೈತ್ರಿ ಬಿಜೆಪಿ ಪಕ್ಷ ಮತ್ತು ಶಿವಸೇನೆ ಮೈತ್ರಿಯನ್ನು ಮುರಿದು ರಾಷ್ಟ್ರವಾದಿ ಕಾಂಗ್ರೆಸ್, ಕಾಂಗ್ರೆಸ್ ಪಕ್ಷ, ಮತ್ತು ಶಿವಸೇನೆ ಮಹಾ ಘಟಬಂಧನ್ ರಚಿಸಿ ಮಹಾರಾಷ್ಟ್ರದಲ್ಲಿ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ ಶಿವಸೇನೆಯ ತನ್ನ ಆಂತರಿಕ ಭಿನ್ನಮತದಿಂದಾಗಿ ಪಕ್ಷ ವಿಭಾಗವಾಯಿತು. 52 ಶಾಸಕರ ಹೊಂದಿದ್ದ ಶಿವಸೇನೆ 40 ಶಾಸಕರು ಜೊತೆ ಸೇರಿ ಏಕನಾಥ್ ಶಿಂಧೆ ಪಕ್ಷದಲ್ಲಿ ಬಂಡಾಯವೆದ್ದು ಬಿಜೆಪಿ ಪಕ್ಷದ ಬೆಂಬಲ ಪಡೆದು ಸರ್ಕಾರ ರಚನೆ ಮಾಡಿದರು. ಮುಖ್ಯಮಂತ್ರಿ ಆಗಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ಆ ಬಳಿಕ ರಾಜಕೀಯ ಬೆಳವಣಿಗಳಲ್ಲಿ ಶಿಂಧೆ ಬಣ ಹಾಗೂ ಠಾಕ್ರೆ ಬಣ ಶಿವಸೇನೆ ಪಕ್ಷದ ಮಾಲೀಕತ್ವದ…
ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನ.22 1939ರಲ್ಲಿ ಜನಿಸಿದ ಅವರು, ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಜನರ ಮನಸ್ಸಿನಲ್ಲಿ ದಶಕಗಳ ಕಾಲ ಅಚ್ಚಳಿಯದೆ ಉಳಿದಿದ್ದು, ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಮುಲಾಯಂ ಸಿಂಗ್ ಯಾದವ್ ಹಿನ್ನೆಲೆ: ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದ ಸಾಧಾರಣ ಕುಟುಂಬದಲ್ಲಿ ನ.22, 1939 ಜನಿಸಿದರು. ಆಗ್ರಾ ವಿವಿಯಿಂದ M.A ಪದವಿ ಪಡೆಯುವ ಅವರು, ಲೋಹಿಯಾ & ರಾಜ್ ನಾರಾಯಣ್ ರಂತಹ ಮಹಾನಾಯಕರ ಮಾರ್ಗದರ್ಶನದಲ್ಲಿ 1967ರಲ್ಲಿ ಉತ್ತರಪ್ರದೇಶ ವಿಧಾನಸಭೆಗೆ ಚುನಾಯಿತರಾದರು. ಕಾಲಾನಂತರದಲ್ಲಿ ಸಮಾಜವಾದಿ ಪಕ್ಷವನ್ನು ಕಟ್ಟಿದರು. ಮೂರು ಬಾರಿ ಸಿಎಂ ಆಗಿಯೂ ಆಯ್ಕೆಯಾದರು. 1996ರಲ್ಲಿ ಲೋಕಸಭೆಗೆ ಆಯ್ಕೆಯಾದ ಅವರು ರಕ್ಷಣಾ ಸಚಿವರಾಗಿಯು ಕಾರ್ಯನಿರ್ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…