Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಳೇ ಹುಬ್ಬಳ್ಳಿಯ ನುರಾನಿ ಪ್ಲಾಟ್ನಲ್ಲಿರುವ ಎಸ್ ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾಬಂದ್ ಮನೆ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ಪಿಐ ರಾಜ್ಯ ಕಾರ್ಯದರ್ಶಿ ಶೆಫಿ ಬೆಳ್ಳಾರೆಯನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹೆಚ್.ಡಿ.ಕೋಟೆ: ತಾಲೂಕಿನ ಕ್ರೀಷ್ಣಾಪುರ ಗ್ರಾಮದ ಸರಕಾರಿ ಶಾಲ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಮಲ್ಲಿಗೆ ಜ್ಞಾನ ವಿಕಾಸಕೇಂದ್ರದಲ್ಲಿ ಸಿರಿಧಾನ್ಯಗಳ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೂಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಸಿದ್ದಾರ್ಥ ಕಾಲೇಜೀನ ಉಪನ್ಯಾಸಕರಾದ ಪುಷ್ಪಲತಾ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಶಶಿಧರ್ ಎಂ. ರವರು ದೀಪ ಬೇಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜ್ಞಾನವಿಕಾಸ ಕಾರ್ಯಕ್ರಮವು ಹೇಮಾವತಿ ಅಮ್ಮನವರ ಪ್ರೀತಿಯ ಕಾರ್ಯಕ್ರಮ ಜ್ಞಾನವಿಕಾಸ ಕೇoದ್ರದಡಿಯಲ್ಲಿ ಪ್ರತಿ ತಿoಗಳು ಸಹ ಆರೋಗ್ಯ ಶಿಕ್ಷಣ ಮತ್ತು ಕುಟುಂಬ ನಿರ್ವಹಣೆ ಬಗ್ಗೆ ಮಾಹಿತಿ ನೀಡಿ, ನಿಮ್ಮಲ್ಲರಲ್ಲಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಧೈರ್ಯ ತುoಬುವ ಕೆಲಸವನ್ನು ಮಾಡುತ್ತದೆ ಎಂದು ತಿಳಿಸಿದರು ಪುಷ್ಪಲತಾರವರು ಮಾತನಾಡಿ, ಸಿರಿಧಾನ್ಯಗಳ ಕುರಿತು ಮಾಹಿತಿ ನೀಡಿದರು. ಸಿರಿಧಾನ್ಯಗಳನ್ನು ಬಳಕೆ ಮಾಡುವುದರಿoದ ರಕ್ತ ಶುದ್ದಿ ಹಾಗೂ ಜೀರ್ಣಕ್ರಿಯೆಗೆ ಮತ್ತು ಕೊಬ್ಬು ನಿವಾರಣೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿ ಅಶ್ವಿನಿ ಹೆಚ್.ಜಿ. ಸೇವಾಪ್ರತಿ ನಿಧಿ ಮಂಗಳ ಮತ್ತು ಕೇಂದ್ರದ…
ಮಧುಗಿರಿ: ಪರಿಶಿಷ್ಟ ಜಾತಿ ನಿಂದನೆ ಪ್ರಕರಣದ ಅಡಿಯಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆಯಲ್ಲಿ ದಲಿತಪರ ಸಂಘಟನೆಗಳ ಹೋರಾಟ ಹಾಗೂ ಒತ್ತಾಯದ ಧ್ವನಿಯ ಮೇರೆಗೆ ಸಹ ಶಿಕ್ಷಕ ಕೆ ಸಿ ಜೀವನ್ ಪ್ರಕಾಶ್ ರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರಾದ ಕೆ.ಜಿ. ರಂಗಯ್ಯ ಅಮಾನತುಗೊಳಿಸಿದರು. ಉಪ ನಿರ್ದೇಶಕರಾದ ಕೆ.ಜಿ.ರಂಗಯ್ಯ ಮಾಧ್ಯಮದೊಂದಿಗೆ ಮಾತನಾಡಿ, ಕೆ.ಸಿ.ಜೀವನ್ ಪ್ರಕಾಶ್ ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆ ಪದ್ಮಪುರ ಸಿರಾ ತಾಲ್ಲೂಕು ಇವರು ಈ ಹಿಂದೆ ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಉದ್ದೇಶಪೂರ್ವಕ ಜಾತಿನಿಂದನೆ ಮಾಡಿ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಬೇರೆ ಶಿಕ್ಷಕರ ಹತ್ತಿರ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿ ಮಾತನಾಡಿ, ಸಂಭಾಷಣೆಯನ್ನು ಸಾರ್ವಜನಿಕವಾಗಿ ಮೊಬೈಲ್ ವಾಟ್ಸಪ್ ಮೂಲಕ ಹರಿಬಿಟ್ಟಿದ್ದು ಸಮುದಾಯವನ್ನೇ ಅವಹೇಳನಕಾರಿಯಾಗಿ ಮಾನಹಾನಿ ಮಾಡಿದ್ದು, ಈ ವಿಷಯಕ್ಕೆ ಸಂಬಂಧಿಸಿ ಶಿಕ್ಷಕ ಕೆ.ಸಿ.ಜೀವನ್ ಪ್ರಕಾಶ್ ಮೇಲೆ ಸಿರಾ ಟೌನ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ…
ತುಮಕೂರಿನಲ್ಲಿ ಗುರುವಾರ ನಡೆದ ಬಾಣಂತಿ ಮತ್ತು ಶಿಶುಗಳ ಸಾವಿಗೆ ಸಂಬಂಧ ಪಟ್ಟಂತೆ ಚಿಕಿತ್ಸೆ ನೀಡದೆ ನಿರ್ಲಕ್ಷಿಸಿದ ವೈದ್ಯ ಹಾಗೂ ನರ್ಸ್ ಗಳನ್ನು ತನಿಖೆ ಆಗುವವರಿಗೂ ಕೆಲಸದಿಂದ ಅಮಾನತುಗೊಳಿಸಲಾಗಿದೆ. ಮತ್ತೆ ಅದೇ ಆದೇಶ ಪ್ರತಿಯಲ್ಲಿ ಜೀವನ ಭತ್ಯೆಗಾಗಿ ಖಾಲಿಯಿರುವ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಕಣ್ಣೊರಿಸುವ ನಾಟಕವಾಡುತ್ತಿದ್ದೆಯಾ ತುಮಕೂರು ಜಿಲ್ಲಾ ಆಸ್ಪತ್ರೆ ಅನ್ನೋ ಪ್ರಶ್ನೆಗಳಿಗೆ ಕಾರಣವಾಗಿದೆ. ದಿನಾಂಕ: 02.11.2022 ರಂದು, ಜಿಲ್ಲಾ ಆಸ್ಪತ್ರೆ ತುಮಕೂರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಈ ಕೆಳಕಂಡ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞರು, ಹಾಗೂ ಶುಶ್ರೂಷಾಧಿಕಾರಿಗಳು ಕರ್ತವ್ಯ ಲೋಪ ಹಾಗೂ ದುರ್ನಡತೆ ತೋರಿಸಿರುವುದರಿಂದ, ಇವರುಗಳ ವಿರುದ್ಧ. ಇಲಾಖಾ ವಿಚಾರಣೆ ಬಾಕಿ ಇರಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ, ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಹಾಗೂ ಇವರುಗಳ ಅಮಾನತ್ತಿನ ಅವಧಿಯಲ್ಲಿ ಜೀವನಾಂಶ, ಭತ್ಯೆ ಪಡೆಯುವ ಸಲುವಾಗಿ ಲೀನ್ ನನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸ್ಥಳಾಂತರಿಸಿದೆ. ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞರು ಡಾ.ಉಷಾ…
ಕೃಷ್ಣರಾಜಪೇಟೆ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪೋಷಕರಿಗೆ ಮತ್ತು ಶಿಕ್ಷಕರಿಗೆ ಗೌರವ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ತಿಳಿಸಿದರು. ಕೃಷ್ಣರಾಜಪೇಟೆ ತಾಲ್ಲೂಕಿನ ಹಳೇ ಹರಳಕುಪ್ಪೆ ಗ್ರಾಮದಲ್ಲಿ ನಡೆದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಗೋವುಗಳಿಗೆ ಪೂಜಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಇಲ್ಲಿ ಕಲಿತ ಶಿಸ್ತು, ಸೌಹಾರ್ಧಯುತ ಬಾಳ್ವೆ, ನೀತಿ ಪಾಠ ಎಲ್ಲವನ್ನು ಮರೆಯದೆ ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು. ಕಲಿಯುವಂತಹ ವಿದ್ಯಾರ್ಥಿಗಳು ಉತ್ತಮ ರೀತಿಯ ಅವಕಾಶವಾದಿಗಳಾಗಿರಬೇಕು. ನನ್ನಿಂದ ಅಸಾಧ್ಯ ಎನ್ನುವಂತಹ ಮನೋಭಾವವನ್ನು ಇಂದೇ ತ್ಯಜಿಸಿ ಎಲ್ಲವನ್ನು ಎದುರಿಸಿ ಗೆಲ್ಲುವ ಧೈರ್ಯ ಬೆಳಸಿಕೊಳ್ಳಬೇಕು, ಮದುವೆಯಾಗಿ ಹೋದ ಮೇಲೆ ಅತ್ತೆ ಮಾವನನ್ನು ತಂದೆ ತಾಯಿ ಎಂದೇ ಭಾವಿಸಿ ಅವರ ಕಷ್ಟ ಸುಖಗಳಿಗೆ ಭಾಗಿಯಾಗಿ ಸಂಸಾರದ ಜವಾಬ್ದಾರಿ ಹೊತ್ತು ಉತ್ತಮ ನಾಗರಿಕರಾಗಿ ಉತ್ತಮ ಸಮಾಜ ನಿರ್ಮಾಣ ಮಾಡುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯ…
ಬೆಂಗಳೂರು: ಅನುಮತಿ ಇಲ್ಲದೆ ಮುಖ್ಯಮಂತ್ರಿಗಳ ಗೃಹ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಆರೋಪದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ. ಹೈಗ್ರೌಂಡ್ಸ್ ಪೊಲೀಸರ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸಿದ ನಗರದ 69ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರಹಿತ ವಾರಂಟ್ ಜಾರಿ ಮಾಡಿ ವಿಚಾರಣೆ ಮುಂದೂಡಿದ್ದಾರೆ.. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಈಗಾಗಲೇ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಈವರೆಗೂ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿಸಿದ್ದು, ವಿಚಾರಣೆಯನ್ನು ಡಿಸೆಂಬರ್ 27ಕ್ಕೆ ಮುಂದೂಡಿದೆ. 2021ರ ಮಾರ್ಚ್ 25ರಂದು ಪುಷ್ಪಾ ಅಮರನಾಥ್ ಸೇರಿದಂತೆ ಇತರ 7 ಮಂದಿ ಮಹಿಳೆಯರು ಅನುಮತಿ ಪಡೆಯದೇ ಮುಖ್ಯಮಂತ್ರಿಗಳ ಗೃಹ ಕಚೇರಿ ಗೇಟ್ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು. ಈ ಸಂಬಂಧ ಅಕ್ರಮವಾಗಿ ಗುಂಪು ಕೂಡಿದ್ದರಿಂದ ಗೃಹ ಕಚೇರಿ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಈ ಸಂಬಂಧ…
ಬೀದರ್ : ಟ್ರಕ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿದೆ. ಟ್ರಕ್ ಮತ್ತು ಆಟೋದ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಕೂಲಿ ಕಾರ್ಮಿಕ ಮಹಿಳೆಯರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಭಾವತಿ(36), ಜಕ್ಕಮ್ಮ(32), ರುಕ್ಮಿಣಿ (60), ಯಾದಮ್ಮ(40), ಗುಂಡಮ್ಮ(52) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಹೆಸರು ಪತ್ತೆಯಾಗಿಲ್ಲ. ಇದೇ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಈ ಅಪಘಾತದಲ್ಲಿ ಮೃತಪಟ್ಟಿರುವ ಚಿಟಗುಪ್ಪ ತಾಲೂಕಿನ ಉಡುಮನಳ್ಳಿ ಮೂಲದವರು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರೆಲ್ಲ ಕೂಲಿ ಕಾರ್ಮಿಕರೇ ಆಗಿದ್ದಾರೆ. ದಿನನಿತ್ಯದ ಕೂಲಿ ಕೆಲಸವನ್ನು ಮುಗಿಸಿಕೊಂಡು ಆಟೋದಲ್ಲಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಬೀದರ್ ಚಿಟಗುಪ್ಪ ತಾಲೂಕಿನ ಬೆಮ್ಮಳಖೇಡ ಬಳಿ ಟ್ರಕ್ ವಾಹನ ಆಟೋಗೆ ಬಂದು ಡಿಕ್ಕಿ ಹೊಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಚಿತ್ರದ ಹಾಡಿನ ಮ್ಯೂಸಿಕ್ ಬಳಸಿದ ಆರೋಪ ಹಿನ್ನೆಲೆಯಲ್ಲಿ ಸಂಸದ ರಾಹುಲ್ ಗಾಂಧಿ ಮೂವರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಸಿನಿಮಾ ಮ್ಯೂಸಿಕ್ ಬಳಸಿದ ಹಿನ್ನೆಲೆಯಲ್ಲಿ ಕಾಪಿ ರೈಟ್ಸ್ ಉಲ್ಲಂಘನೆಯಾಗಿದ್ದು, ಕಾಂಗ್ರೆಸ್ ವಿರುದ್ಧ ಎಂ.ಆರ್.ಟಿ ಸಂಸ್ಥೆ ಕಾನೂನು ಹೋರಾಟಕ್ಕೆ ಮುಂದಾಗಿದೆ. ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್ ಸಿನಿಮಾ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಉಸ್ತುವಾರಿ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಕೋರ್ಟ್ ನಿರ್ದೇಶನದ ಮೇರೆಗೆ ಯಶವಂತಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ರೂ. ಹೆಚ್ಚಲ್ಲ ಅಲ್ಲವೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಫೋಟೋ ಹಾಕಿ ಕರೆನ್ಸಿ ನೋಟೊಂದನ್ನು ರಾಜ್ಯ ಕಾಂಗ್ರೆಸ್ ಸಿದ್ದಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಶಾಸಕ ಸಂಗಮೇಶ್ಗೆ 500 ಕೋಟಿ ರೂ. ಆಫರ್ ನೀಡಿದ್ದೇನೆ ಎಂಬ ಈಶ್ವರಪ್ಪ ಅವರ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಈ ರೀತಿಯಾಗಿ ವ್ಯಂಗ ಮಾಡಿದೆ. ಈಶ್ವರಪ್ಪ ಅವರೇ, ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ? 500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಪೊಲೀಸ್ ಉಮೇಶ್ ರೆಡ್ಡಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಉಮೇಶ್ ರೆಡ್ಡಿಗೆ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಸಿಜೆಐ ಪೀಠ ಆದೇಶ ಹೊರಡಿಸಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಕ್ರೂರ ಶಿಕ್ಷೆಯಾಗಬೇಕು, ಆತನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು. ಉಮೇಶ್ ರೆಡ್ಡಿ ತಾಯಿ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದು ಅದು 2013ರಲ್ಲಿ ತಿರಸ್ಕರಿಸಲ್ಪಟ್ಟಿತ್ತು.ಆದರೆ ಈಗ ಸುಪ್ರೀಂ ಕೋರ್ಟ್ ಗಲ್ಲು…