Author: admin

ಚೆನ್ನೈ: ಚೆನ್ನೈನಲ್ಲಿ ಯುವತಿಯೊಬ್ಬಳು ಸಾಂಪ್ರದಾಯಿಕ ತಮಿಳು ಬ್ರಾಹ್ಮಣ ಸಂಪ್ರದಾಯಗಳ ಪ್ರಕಾರ ಬಾಂಗ್ಲಾದೇಶದ ಮಹಿಳೆಯನ್ನು ವಿವಾಹವಾಗಿದ್ದಾರೆ. ವರದಿಯ ಪ್ರಕಾರ, ಕೆನಡಾದ ಕ್ಯಾಲ್‌ಗರಿಯಲ್ಲಿ ನೆಲೆಸಿರುವ ತಮಿಳು ಬ್ರಾಹ್ಮಣ ಪೋಷಕರ ಮಗಳು ಸುಭಿಕ್ಷಾ ಸುಬ್ರಮಣಿ, ಬಾಂಗ್ಲಾದೇಶದ ಹಿಂದೂ ಕುಟುಂಬದಿಂದ ಬಂದ ಟೀನಾ ಅವರೊಂದಿಗೆ ವಿವಾಹವಾಗಿದ್ದಾರೆ. ಆರು ವರ್ಷಗಳ ಕಾಲ ರಿಲೇಷನ್‌ಶಿಪ್‌ನಲ್ಲಿ ಇದ್ದರು ವರದಿ ತಿಳಿಸಿದೆ. ಮದುವೆಗೆ ಕುಟುಂಬಸ್ಥರ ವಿರೋಧವನ್ನು ಸಹ ಎದುರಿಸಿದ್ದರು. ಆದ್ರೆ, ಇದೀಗ ಕುಟುಂಬಗಳ ಒಪ್ಪಿಗೆ ಮೇರೆಗೆ ತಮಿಳು ಬ್ರಾಹ್ಮಣ ಶೈಲಿಯಲ್ಲಿ ವಿವಾಹವಾದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಇತ್ತೀಚಿನ ಅತಿವೃಷ್ಟಿಯಿಂದ ಬೆಳೆಹಾನಿಯಾಗಿರುವ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಪರಿಹಾರ ಪೊರ್ಟಲ್ ನಲ್ಲಿ ಅಪ್ ಲೋಡ್ ಮಾಡಿ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಸಚಿವರಾದ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಶನಿವಾರ(ಸೆ.3) ನಡೆದ ಕೃಷಿ ಇಲಾಖೆಯ ಬೆಳಗಾವಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿಬ್ಬಂದಿ ಕೊರತೆ ಮತ್ತಿತರ ನೆಪ ಹೇಳಿ ಬೆಳೆಹಾನಿ ಪರಿಹಾರ ನೀಡುವ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಈಗಾಗಲೇ ನಿರ್ದೇಶನ ನೀಡಿರುವಂತೆ ಎಲ್ಲ ಜಿಲ್ಲೆಗಳಲ್ಲಿ ಹೆಸರು, ಉದ್ದು ಖರೀದಿ ಕೇಂದ್ರಗಳನ್ನು ಆರಂಭಿಸಿ ರೈತರ ನೋಂದಣ ಜತೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದರು. ರೈತರ ಮೂಲಕ ಬೆಳೆ ಸಮೀಕ್ಷೆಗೆ ನಡೆಸಲು ಸೂಚನೆ: ಇಲಾಖೆ ಅಭಿವೃದ್ಧಿಪಡಿಸಿರುವ ಆಪ್ ಮೂಲಕ ರೈತರೇ ಸ್ವತಃ ಬೆಳೆಸಮೀಕ್ಷೆ ಮಾಡಲು ಪ್ರೋತ್ಸಾಹ ನೀಡಬೇಕು. ಇದಕ್ಕಾಗಿ ಸೂಕ್ತ ಪ್ರಚಾರ ಕಾರ್ಯ ಕೈಗೊಳ್ಳಬೇಕು ಎಂದು ಸಚಿವ…

Read More

ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ಇನ್ನು ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಸ್ತಿರುವ ಪ್ರದೇಶದಲ್ಲಿ, ವಲಸೆ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 1,655 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ರಾಜ್ಯ ಸರ್ಕಾರ ಅಂಗನವಾಡಿಗಳಿಗೆ 268.98 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಪ್ರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ‌ ಆರೋಪದಡಿ ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ಮಾಡಿದ್ದು, ಇದೀಗ ವೈದ್ಯರ ವರದಿ ಬಹಿರಂಗವಾಗಿದೆ. ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಿನ್ನೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯರು ಶ್ರೀಗಳ ಪುರುಷತ್ವ ವೈದ್ಯಕೀಯ ಪರೀಕ್ಷೆ ನಡೆಸಿದರು. ಪುರುಷತ್ವ ಪರೀಕ್ಷೆ ವರದಿಯನ್ನು ಇಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ಬಳಿಕ ಪುರುಷತ್ವ ಪರೀಕ್ಷೆ ವರದಿಯಲ್ಲಿ ಮಗು ಜನ್ಮ ನೀಡಲು ಅರ್ಹತೆ ಹೊಂದಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ನಿನ್ನೆ ಮುರುಘಾ ಶ್ರೀಗಳ ರಕ್ತ, ಕೂದಲು ಮತ್ತು ಉಗುರು ಮಾದರಿಗಳನ್ನು ಸಧ್ಯ ಸಂಗ್ರಹಿಸಿ ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂಬ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಕೊರಟಗೆರೆ: 8 ವರ್ಷದಿಂದ ತೆಂಗಿನ ಗರಿಯ ಗುಡಿಸಲೇ ಇವರಿಗೆ ಅರಮನೆ.. ಮಳೆರಾಯನ ಆರ್ಭಟಕ್ಕೆ ನರಕ- ಸಿಡಿಲು-ಮಿಂಚಿನ ರಭಸಕ್ಕೆ ನಡುಕ.. ರಾತ್ರಿಯಾದ್ರೇ ಕರಡಿ-ಚಿರತೆಯ ಕಾಟದಿಂದ ಹೊರಗಡೆ ಬರುವುದೇ ಕಷ್ಟಸಾಧ್ಯ. ಬೆಳಕೇ ಇಲ್ಲದ ಅರಮನೆಯೊಳಗೆ ಪ್ರತಿನಿತ್ಯ ಜೀವನ. ಗಾಂಧಿನಗರದ ದಲಿತ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನವೇ ಮರೀಚಿಕೆಯಾಗಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬುಕ್ಕಾಪಟ್ಟಣ ಗ್ರಾಪಂ ವ್ಯಾಪ್ತಿಯ ಗಾಂಧಿನಗರ ಗ್ರಾಮದಲ್ಲಿ 55ಕ್ಕೂ ಅಧಿಕ ದಲಿತ ಕುಟುಂಬ ವಾಸವಿದ್ದಾರೆ. 200ಕ್ಕೂ ಅಧಿಕ ಮತದಾರರು ಇದ್ದಾರೆ. 20ಕ್ಕೂ ಅಧಿಕ ಮನೆಗಳಿಗೆ ಭದ್ರತೆಯೇ ಇಲ್ಲ. 8ಕ್ಕೂ ಅಧಿಕ ದಲಿತರು ಕಳೆದ 8 ವರ್ಷದಿಂದ ಗುಡಿಸಲಿನಲ್ಲೇ ವಾಸವಿದ್ದಾರೆ. ಗಾಂಧಿನಗರದ ಜನತೆ ಶುದ್ದ ಕುಡಿಯುವ ನೀರನ್ನೂ ಇಲ್ಲಿನ ಜನರು ಕಂಡೇ ಇಲ್ವಂತೆ. ದೀಪದಿಂದ ಬಡವನ ಗುಡಿಸಲೇ ಭಸ್ಮ .. ಸೀಮೆಎಣ್ಣೆಯ ದ್ವೀಪದಿಂದ ಮಾತ್ರವೇ ಇವರಿಗೆ ರಾತ್ರಿ ವೇಳೆ ಬೆಳಕು. ಮಳೆರಾಯನ ಆರ್ಭಟ ಮತ್ತು ಬಿರುಗಾಳಿಯಿಂದ ಗುಡಿನಲ್ಲಿ ಉರಿಯುತ್ತೀದ್ದ ಸೀಮೆಎಣ್ಣೆಯ ದ್ವೀಪ ಕೆಳಗೆ ಬಿದ್ದು ಗುಡಿಸಲಿನ ಅರ್ಧಭಾಗ ಸುಟ್ಟು ಹೋಗಿದೆ.…

Read More

‘ಶುಲ್ಕ ಕಡಿಮೆ ಪಾವತಿಸಿದೆವು ಎಂಬ ಕಾರಣಕ್ಕೆ ನಮಗೆ ಕಾಲೇಜಿನ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಕೋಲಾರದ ಇಟಿಎಂಸಿ ನರ್ಸಿಂಗ್ ಕಾಲೇಜಿನ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರು ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಅಧಿಕಾರಿ ಡಾ.ಜಾನ್ಸನ್ ಕುಂದಾರ್ ವಿರುದ್ಧ ಆರೋಪ ಮಾಡಿದ್ದು, ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಈ ಕುರಿತು ಎಫ್‌ ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಲೆಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ತೆರಳುತ್ತಿದ್ದ 6 ಚಕ್ರಕ್ಕಿಂತ ಅಧಿಕ ಚಕ್ರಗಳನ್ನು ಹೊಂದಿರುವ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿಂಬಂ ಘಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ನೀಷೇಧ ಇರುವುದರಿಂದ ತಮಿಳುನಾಡಿಗೆ ಸರಕು ಸಾಗಿಸುವ ಲಾರಿಗಳೆಲ್ಲಾ ಮಲೆಮಹದೇಶ್ವರ ಬೆಟ್ಟದ ಮೂಲಕ ನೆರೆ ರಾಜ್ಯಕ್ಕೆ ತಲುಪುತ್ತಿದ್ದವು. ಆದರೆ, ಬೆಟ್ಟದ ರಸ್ತೆ ಕಿರಿದು ಹಾಗೂ ಕಡಿದಾದ ಹಿನ್ನೆಲೆಯಲ್ಲಿ ಆಗಾಗ್ಗೆ ಲಾರಿಗಳು ಪಲ್ಟಿಯಾಗಿ ಗಂಟೆಗಟ್ಟಲೇ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಡಿಸಿ ಚಾರುಲತಾ ಸೋಮಲ್ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದು 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮಾತ್ರ ನಿರ್ಬಂಧಿಸಲಾಗಿದೆ. ಆದರೆ ಸಾರ್ವಜನಿಕರು, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು,…

Read More

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಸ್ವಾಮೀಜಿಗಳ ಪುರಷತ್ವ ಪರೀಕ್ಷೆಯ ವೈದ್ಯಕೀಯ ವರದಿ ಬಿಡುಗಡೆಯಾಗಿದ್ದು, ಪುರಷತ್ವ ಸಾಬೀತಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮಠದ ವಸತಿನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದು, ಶುಕ್ರವಾರ ಅವರನ್ನು2 ನೇ ಅಪರ ಜಿಲ್ಲಾ ಕೋರ್ಟ್ ನ್ಯಾಯಾಂಗ ಬಂಧನದಿಂದ ಸೆಪ್ಟೆಂಬರ್ 5ರವರೆಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಶುಕ್ರವಾರ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶರಣರನ್ನು ವೈದ್ಯಕೀಯ ಟೆಸ್ಟ್‌ಗೆ ಒಳಪಡಿಸಿದ್ದು, ಪುರುಷತ್ವ ಪರೀಕ್ಷೆಯಲ್ಲಿ ವೈದ್ಯರು ತಿಳಿಸಿದ ವರದಿಗಳಲ್ಲಿ ಶ್ರೀಗಳ ಗಂಡಸತ್ವ ಸಾಬೀತಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈಗಾಗಲೇ ಎಫ್‌ ಎಸ್‌ಎಲ್‌ ಪರೀಕ್ಷೆಗಾಗಿ ಕೂದಲು, ರಕ್ತ, ಉಗುರಿನ ಮಾದರಿಗಳನ್ನು ಪ್ರಯೋಗಾಲಯ ಪಡೆದುಕೊಂಡಿದೆ ಎಂಬ ಮಾಹಿತಿ ಇದೆ ತಿಳಿದು ಬಂದಿದೆ. ರಾತ್ರಿ ಪರೀಕ್ಷೆಗೆ ಒಳಪಡಿಸಿದ್ದು, ಶನಿವಾರ ಬೆಳಿಗ್ಗೆ ವರದಿಯನ್ನು ನೀಡಲಾಗಿದೆ. ಉಳಿದ ಮಾದರಿಗಳನ್ನು ಮಡಿವಾಳದ ಎಫ್‌ಎಸ್‌ಎಸ್‌ಲೆ ರವಾನಿಸಲಾಗಿದೆ. ಈ ಹಿಂದಿನ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ತಾನೂ…

Read More

ನವದೆಹಲಿ: ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ಮತ್ತೆ ದೆಹಲಿ ಪೊಲೀಸರ ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಈ ಹಿಂದೆ ಸುಕೇಶ್ ಚಂದಶೇಖರ್ ಮತ್ತು ಎಂಎಸ್ ಫತೇಹಿ ಅವರನ್ನು ಒಟ್ಟಿಗೆ ವಿಚಾರಣೆ ನಡೆಸಿತ್ತು. ಈ ವಿಚಾರಣೆಯು ಸುಲಿಗೆ ಪ್ರಕರಣದ ಹಣದ ಜಾಡು ಇಡಿಯ ಚಾರ್ಜ್ ಶೀಟ್‌ ನ ಭಾಗವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಶಿವಮೊಗ್ಗ ; ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಹೊಂದಿದ್ದೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರವಯುತವಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ರಾಜ್ಯಕ್ಕೆ ಆಹ್ವಾನ ನೀಡಿದಾಗ ಬರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಅಧಿಕಾರಕ್ಕೆ ತರುತ್ತೇವೆ. ಮೋದಿ ನೃತೃತ್ವದ ಕೋರ್ ಕಮಿಟಿ ಸಭೆಯಲ್ಲೂ ಇದೇ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲೇಬೇಕೆಂದು ಮೋದಿ ಅವರು ಹೇಳಿದ್ದಾರೆ. ನಾವು ಸಹ ಮೋದಿಗೆ ಭರವಸೆ ನೀಡಿದ್ದೇವೆ. ರಾಜ್ಯಕ್ಕೆ ಮೋದಿ ಬಂದು ಹೋದ ಮೇಲೆ ಉತ್ಸಾಹ ಬಂದಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More