Author: admin

ಮಡಿಕೇರಿ: ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನೊಂದಿಗೆ ಪ್ರವಾಸಿತಾಣದಲ್ಲಿ ಅಡ್ಡಾಡುತ್ತಿರುವ ಕಂಡ ಪ್ರಿಯಕರ ಇಬ್ಬರಿಗೂ ಚಾಕುವಿನಿಂದ ಹಲ್ಲೆ‌ ಮಾಡಿದ ಘಟನೆ ಕುಶಾಲನಗರದ ಕಾವೇರಿ‌ ನಿಸರ್ಗಧಾಮದಲ್ಲಿ ಶನಿವಾರ ನಡೆದಿದೆ. ಕುಶಾಲನಗರ ಸರಕಾರಿ ಪ್ರಥಮ‌ ದರ್ಜೆ‌ ಕಾಲೇಜಿನ ವಿದ್ಯಾರ್ಥಿಗಳಾದ ಜೋಡಿ ಕಾವೇರಿ‌ ನಿಸರ್ಗಧಾಮಕ್ಕೆ ತೆರಳಿದೆ.ಈ ಪೈಕಿ ಮಾದಾಪಟ್ಟಣ ನಿವಾಸಿ ವಿದ್ಯಾರ್ಥಿನಿ ಪ್ರಿಯಕರ ಎನ್ನಲಾದ ಕುಶಾಲನಗರ ಹೋಟೆಲ್ ಸಿಬ್ಬಂದಿ ದೊಡ್ಡಹರವೆ ಗ್ರಾಮದ ವಿಜಯ್ (22) ಈ ಜೋಡಿಯನ್ನು ಹಿಂಬಾಲಿಸಿ ಚಾಕುವಿನಿಂದ ಇರಿಯಲು‌ ಮುಂದಾಗಿದ್ದಾನೆ. ಘಟನೆಯಿಂದ ಯುವತಿಯ ಭುಜ, ಕೈ, ಕುತ್ತಿಗೆ ಭಾಗದಲ್ಲಿ ಗಾಯ ಉಂಟಾಗಿದೆ. ತಡೆಯಲು ಬಂದ ಈಕೆಯ ಸಹಚರ ಹೆಬ್ಬಾಲೆಯ ಪ್ರವೀಣ್ ಎಂಬಾತನಿಗೂ‌ಕೂಡ ಎರಡು ಕೈಗಳಿಗೆ ಗಾಯ ಉಂಟಾಗಿದೆ. ಸ್ಥಳದಲ್ಲಿ ಇದ್ದ ಇತರೆ ಪ್ರವಾಸಿಗರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸಕಾಲದಲ್ಲಿ‌ ಮದ್ಯ ಪ್ರವೇಶಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.ಆರೋಪಿಯನ್ನು ವಶಕ್ಕೆ ಪಡೆದ ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಆಂಧ್ರಪ್ರದೇಶದಲ್ಲಿ ಕಳೆದ ಕೆಲ ವರ್ಷಗಳಿಂದ ತಾಯಿ-ಮಗು ಮರಣ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಎನ್ ಆರ್ ಐ ವೈದ್ಯರು ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಯೋಜನೆ ರೂಪಿಸಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರವು ಪರಿಚಯಿಸಲಿರುವ ‘ಫ್ಯಾಮಿಲಿ ಡಾಕ್ಟರ್’ ಪರಿಕಲ್ಪನೆಯನ್ನು ಬೆಂಬಲಿಸಲು ರಾಜ್ಯದ ಹಲವಾರು ಅನಿವಾಸಿ ಭಾರತೀಯರು ಆಸಕ್ತಿ ತೋರಿದ್ದಾರೆ. ಆರೋಗ್ಯ ಇಲಾಖೆಯ ಎನ್‌ಆರ್‌ಐ ವೈದ್ಯಕೀಯ ವ್ಯವಹಾರಗಳ ಸಲಹೆಗಾರ ಡಾ. ವಾಸುದೇವ ಆರ್. ನಲಿಪಿರೆಡ್ಡಿ, ಅಮೆರಿಕನ್ ಅಸೋಸಿಯೇಷನ್ ​​ಆಫ್ ಫಿಸಿಶಿಯನ್ಸ್ ಆಫ್ ಇಂಡಿಯನ್ ಒರಿಜಿನ್ಸ್ (ಎಎಪಿಐ) ಗೌರವಾಧ್ಯಕ್ಷ ಡಾ. ಕೊಲ್ಲಿ ರವಿ, ನಿಯೋನಾಟಾಲಜಿಸ್ಟ್ ಡಾ. ಪ್ರಕಾಶ್ ಎಂ. ಕಬ್ಬೂರು, ಟ್ರೈನ್ ಅಂಡ್ ಹೆಲ್ಪ್ ಬೇಬೀಸ್ ನಿರ್ದೇಶಕ ಡಾ. ಸಿಂಗಂ ಹರಿಬಾಬು. ಮತ್ತು ಇತರರು ಶುಕ್ರವಾರ ಮಂಗಳಗಿರಿಯ ಆರೋಗ್ಯ ಇಲಾಖೆ ಕಚೇರಿಯಲ್ಲಿ ಆರೋಗ್ಯ, ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವ ವಿಡದಾಳ ರಜಿನಿ ಅವರನ್ನು ಭೇಟಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ವಾಸುದೇವ, ಅನಿವಾಸಿ ಭಾರತೀಯ ವೈದ್ಯರ ತಂಡ ಕೆಲವು ಜಿಲ್ಲೆಗಳಲ್ಲಿ ತಾಯಿ ಮತ್ತು…

Read More

ಬೆಂಗಳೂರು : ಇತ್ತೀಚೆಗೆ ತಾಯಿಯೊಬ್ಬಳು ಸಿಲಿಕಾನ್ ಸಿಟಿಯ ಸಂಪಂಗಿರಾಮನಗರದಲ್ಲಿ 4ನೇಯ ಮಹಡಿಯಿಂದ ಬುದ್ಧಿಮಾಂದ್ಯ ಮಗುವನ್ನು ಎಸೆದು ತಾಯ್ತನಕ್ಕೆ ಅವಮಾನವಾಗುವ ಕೆಲಸ ಮಾಡಿದ್ಲು. ಆದರೆ ಈಗ ತಾಯಿಯ ಅಂತಃಕರಣ, ವಾತ್ಸಲ್ಯವನ್ನು ಎತ್ತಿ ಹಿಡಿಯುವ ಮನಮಿಡಿಯುವ ಪ್ರಸಂಗ ನಡೆದಿದೆ. ಚಿಕಿತ್ಸೆಗಾಗಿ ಕರೆತಂದಿದ್ದ ಬುದ್ಧಿಮಾಂದ್ಯ ಬಾಲಕ ನಾಪತ್ತೆಯಾಗಿದ್ದು, ಒರಿಸ್ಸಾ ಮೂಲದ ಪೋಷಕರ, ಗೋಳಾಟ ಅಲೆದಾಟ ಹೇಳತೀರದಾಗಿದೆ. ಅವರ ಕಣ್ಣೀರು ಎಂತಹ ಕಲ್ಲು ಹೃದಯದವರನ್ನೂ ಕರಗಿಸುವಂತಿದೆ. ಓರಿಸ್ಸಾ ಮೂಲದ ಪ್ರಸನ್ಜೀತ್ ದಾಸ್ (12) ಎನ್ನುವ ನಾಪತ್ತೆಯಾಗಿರುವ ಬಾಲಕನಾಗಿದ್ದಾನೆ. ನಿಮಾನ್ಸ್ ನಲ್ಲಿ ಈತನ ಚಿಕಿತ್ಸೆಗಾಗಿ ಒರಿಸ್ಸಾದ ಬಾದ್ರಕ್ ನಿಂದ ಪೋಷಕರು ಆಗಸ್ಟ್ 9ರಂದು ಬೆಂಗಳೂರಿಗೆ ಬಂದಿದ್ದರು. ಸಿದ್ಧಾಪುರ ಠಾಣಾ ವ್ಯಾಪ್ತಿಯ ಎಸ್.ಎಸ್.ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ರೂಮ್ ನಿಂದ ಬಾಲಕ ಏಕಾಏಕಿ ತಪ್ಪಿಸಿಕೊಂಡಿದ್ದು, ಬಾಲಕನನ್ನು ಹುಡುಕಿ ಕೊಡುವಂತೆ ಪೋಷಕರು ಪೊಲೀಸ್ ಆಯುಕ್ತರ ಕಚೇರಿಗೂ ಬಂದು ಅಳಲು ತೋಡಿಕೊಂಡಿದ್ದಾರೆ‌. ಅಬ್ದುಲ್ ಎನ್ನುವ ಆಟೋ ಚಾಲಕನ ಸಹಾಯದಿಂದ ನಿನ್ನೆಯಿಂದ ಅಲೆಯುತ್ತಿದ್ದಾರೆ. ಬಾಲಕ ಯಾರಿಗಾದ್ರೂ ಕಂಡಲ್ಲಿ 8792559232 ನಂಬರಿಗೆ ಕರೆ…

Read More

ಬೆಂಗಳೂರು : ರಾಜ್ಯ ಸರ್ಕಾರ ಬಿಬಿಎಂಪಿ ವಾರ್ಡ್ ಗಳ ಮೀಸಲಾತಿ ಪಟ್ಟಿ ಪ್ರಕಟಿಸಿದ ಬೆನ್ನಲೇ ಅಪರಾಧ ಲೋಕದಲ್ಲಿ ಗುರುತಿಸಿಕೊಂಡಿರುವ ಕ್ರಿಮಿನಲ್ ಗಳು ಚುನಾವಣೆಗೆ ನಿಲ್ಲಲು ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಚುನಾವಣೆಗೆ ನಿಲ್ಲಲು ಗುಪ್ತ ಸಿದ್ಧತೆಯಲ್ಲಿ ತೊಡಗಿರುವ ರೌಡಿಗಳ ಪಟ್ಟಿ ಸಂಗ್ರಹಿಸಿ ವರದಿ ನೀಡಲು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ರಮನ್ ಗುಪ್ತಾ ಸೂಚಿಸಿದ್ದಾರೆ. ಇದೇ ವರ್ಷ ಬಿಬಿಎಂಪಿ ಚುನಾವಣೆ‌ ನಡೆಯುವ ಸಾಧ್ಯತೆಯಿದೆ. ಇದಕ್ಕೆ‌ ಪೂರಕವಾಗಿ ಬಿಬಿಎಂಪಿಯು 198 ವಾರ್ಡ್ ಗಳಿಂದ 243 ವಾರ್ಡ್ ಗಳಿಗೆ ಏರಿಸಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ರೌಡಿಗಳು ಸಹ ರಾಜಕೀಯ ಪಕ್ಷಗಳ‌ ನಾಯಕರ ಮುಂದೆ ನಿಂತು ಗೆಲ್ಲುವ ಇರಾದೆಯಲ್ಲಿದ್ದಾರೆ. ಕೆಲ ರೌಡಿಗಳು ತಮ್ಮ ಕುಟುಂಬದ ಸದ್ಯಸರೊಬ್ಬರನ್ನ ಎಲೆಕ್ಷನ್ ಅಖಾಡಕ್ಕೆ ನಿಲ್ಲುವಂತೆ‌ ಪರೋಕ್ಷವಾಗಿ ಸೂಚಿಸುತ್ತಿದ್ದಾರೆ. ಅಲ್ಲದೆ ತಮ್ಮ ಆಪ್ತರಿಗೂ ಚುನಾವಣಾ ಕಣದಲ್ಲಿ ನಿಂತರೆ ಬೆಂಬಲಿಸುವುದಾಗಿ ಹೇಳುತ್ತಿದ್ದಾರೆ ಎನ್ನಲಾಗಿದೆ. ಚುನಾವಣೆ ವೇಳೆ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಿರಲು ಹಾಗೂ ಶಾಂತಿಯುತ ವಾತಾವರಣ ನಿರ್ಮಿಸಲು ನಗರ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ…

Read More

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ. ಮುಂದುವರೆದಿದ್ದು ಕೃಷ್ಣಾನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರವಾಹ ತಲೆದೋರಿದೆ. ಕಳೆದ 15 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿದ್ದ ಮಳೆಯಿಂದ ಹೈರಾಣಾಗಿದ್ದ ಉತ್ತರ ಕರ್ನಾಟಕದ ಜನ ಈಗ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಈಡಾಗಿದ್ದಾರೆ. ಬೆಳಗಾವಿ, ಬಾಗಲಕೋಟೆ, ಗೋಕಾಕ್ ಸೇರಿದಂತೆ ವಿವಿಧೆಡೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹೊಲಗದ್ದೆಗಳು ಜಲಾವೃತಗೊಂಡು ಮಾರುಕಟ್ಟೆಗಳಿಗೆ ನೀರು ನುಗ್ಗಿದೆ.ಕಳೆದ ಪ್ರವಾಹ ಸಂಕಷ್ಟದಿಂದ ಇನ್ನೂ ಜನ ಚೇತರಿಸಿಕೊಂಡಿಲ್ಲ. ಈಗ ಪ್ರವಾಹ ಎದುರಾಗುತ್ತಿರುವುದು ಜನರನ್ನು ಮತ್ತಷ್ಟು ಭೀತಿಗೆ ತಳ್ಳಿದೆ. ಯಾದಗಿರಿ ಜಿಲ್ಲೆಯ ಭೀಮಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಭೀಮಾ ತೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಬ್ಯಾರೇಜ್‍ನಿಂದ 35 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಆಲಮಟ್ಟಿಯಲ್ಲಿರುವ ಅಣೆಕಟ್ಟಿಗೆ 1.86 ಲಕ್ಷ ಕ್ಯೂಸೆಕ್ಸ್ ನೀರು ಬರುತ್ತಿದ್ದು, 2.25 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.ಮಹಾರಾಷ್ಟ್ರದಿಂದ ಇನ್ನು ಹೆಚ್ಚಿನ ನೀರು ಬಂದರೆ ಬಹುತೇಕ ಗ್ರಾಮಗಳು ಮುಳುಗಡೆ ಎದುರಿಸಬೇಕಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ,…

Read More

ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿ ದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋರೋನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅರಮನೆ ಆವರಣದಲ್ಲಿಯೇ ಆನೆಗಳ ತಾಲೀಮು ನಡೆಸಲಾಗಿತ್ತು. ಈ ಬಾರಿ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿದೆ. ಇಂದಿನಿಂದ ದಸರಾ ಗಜಪಡೆ ತಾಲೀಮು ಆರಂಭವಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆಆರ್ ಸರ್ಕಲ್ ,ಸಯ್ಯಾಜಿರಾವ್ ರಸ್ತೆ,ಆಯುರ್ವೇದಿಕ್ ಸರ್ಕಲ್, ಬಂಬೂಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ. ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ. ಅರಣ್ಯ ಅಧಿಕಾರಿ ಕರಿಕಾಳನ್ ಮಾತನಾಡಿ ದಸರಾ ಮಹೋತ್ಸವ ಹಿನ್ನಲೆ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳಿಗೆ ತೂಕ ಮಾಡಿಸಲಾಗಿದೆ. ಎಲ್ಲ ಆನೆಗಳು ಅರೋಗ್ಯವಾಗಿವೆ. ವಿಶೇಷವೆನೆಂದರೇ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿವೆ. ಒಂದು ವಾರದ ನಂತರ ಬಾರ ಹೊರುವ ತಾಲೀಮು ಪ್ರಾರಂಭ…

Read More

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪ್ರಸಿದ್ಧ ರಾಧಾನಗರ ಬೀಚ್ ಬಳಿ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಅಲರ್ಟ್ ಲೈಫ್ ಗಾರ್ಡ್ ರಕ್ಷಿಸಿದ್ದಾರೆ. ದಕ್ಷಿಣ ಅಂಡಮಾನ್ ಜಿಲ್ಲೆಯ ಹ್ಯಾವ್ಲಾಕ್ ದ್ವೀಪದ ರಾಧಾನಗರ ಬೀಚ್‍ನಲ್ಲಿ ಸ್ನಾನ ಮಾಡುತ್ತಿದ್ದಾಗ ಭಾರಿ ಆಲೆಗೆ ಸಿಲುಕಿ ತಂದೆ -ಮಗ ಮುಳುಗುತ್ತಿದ್ದರು ,ಇದನ್ನು ಗಮನಿಸಿದ ಜೀವರಕ್ಷಕ ಸಿಬ್ಬಂದಿ ನೀರಿಗೆ ಹಾರಿ ಅವರನ್ನು ಹೊರಗೆ ತಂದರು ಎಂದು ಅಕಾರಿಗಳು ತಿಳಿಸಿದ್ದಾರೆ. ಇವರು ಮುಂಬೈನಿಂದ ಬಂದಿದ್ದರು ,ರಾಧಾನಗರ ಬೀಚ್ ಪ್ರವಾಸಿಗರಿಗೆ ಪ್ರಮುಖ ಆಕರ್ಷಣೆಯಾಗಿದ್ದು ಜೂನ್ ನಿಂದ ಡಿಸೇಂಬರ್ ವರೆಗೆ ಹಚ್ಚು ಜನರು ಬರುತ್ತಾರೆ.ಅವರ ಸುರಕ್ಷತೆ ನಮಗೆ ದೊಡ್ಡ ಜವಾಬ್ದಾರಿ ಎಂದು ಲೈಫ್ ಗಾರ್ಡ್ ಅಧಿಕಾರಿಗಳು ತಿಳಿಸಿದ್ದಾರೆ . ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೆಲ್ಬೋರ್ನ್‌ನ ಭಾರತೀಯ ಚಲನಚಿತ್ರೋತ್ಸವದಲ್ಲಿ ಸಖತ್ ಗ್ಲಾಮರ್ ಅವತಾರಗಳಲ್ಲಿ ಬಾಲಿವುಡ್ ನಟಿಯರಾದ ತಾಪ್ಸಿ ಪನ್ನು, ತಮನ್ನಾ ಭಾಟಿಯಾ ದೋಬಾರಾ ಪ್ರೀಮಿಯರ್‌ಗೆ ಹಾಜರಾಗಿದ್ದಾರೆ.ತಾಪ್ಸಿ ಪನ್ನು, ತಮನ್ನಾ ಭಾಟಿಯಾ, ಅನುರಾಗ್ ಕಶ್ಯಪ್, ಋತ್ವಿಕ್ ಧಂಜನಿ ಮೆಲ್ಬೋರ್ನ್ ೨೦೨೨ ರ ಭಾರತೀಯ ಚಲನಚಿತ್ರೋತ್ಸವದ ಲ್ಲಿ ಭಾಗವಹಿಸಿ ಗಮನ ಸೆಳೆದರು.ದೋಬಾರಾ ನಿರ್ದೇಶಕ ಅನುರಾಗ್ ಕಶ್ಯಪ್ ಅವರೊಂದಿಗೆ ತಾಪ್ಸಿ ಚಿತ್ರದ ಪ್ರದರ್ಶನವನ್ನು ಅಲಂಕರಿಸಿದರು. ನೂರಾರು ಭಾರತೀಯ ಮತ್ತು ಆಸ್ಟ್ರೇಲಿಯಾದ ಪ್ರೇಕ್ಷಕರೊಂದಿಗೆ ನಟ ತಮನ್ನಾ ಭಾಟಿಯಾ ಮತ್ತು ರಿಥ್ವಿಕ್ ಧಂಜನಿ ಕೂಡ ಈವೆಂಟ್‌ಗೆ ಹಾಜರಿದ್ದರು. ತಾಪ್ಸಿ ಫಿಲ್ಮ್ ಫೆಸ್ಟಿವಲ್‌ಗೆ ಕಪ್ಪು ಬಣ್ಣದ ಗೌನ್‌ನಲ್ಲಿ ಮ್ಯಾಚಿಂಗ್ ಶ್ರಗ್‌ನೊಂದಿಗೆ ಆಗಮಿಸಿದ್ದರು. ಕೈಗವಸುಗಳೊಂದಿಗೆ ಜೋಡಿಯಾಗಿರುವ ಹಸಿರು ಮತ್ತು ಕಪ್ಪು ಗೌನ್‌ನಲ್ಲಿ ತಮನ್ನಾ ಕಾರ್ಯಕ್ರಮಕ್ಕೆ ಹಾಜರಾಗಿದ್ದರು.ಸ್ಕ್ರೀನಿಂಗ್ ನಂತರ ದೋಬಾರಾ ಉತ್ತಮ ಪ್ರತಿಕ್ರಿಯೆಯನ್ನು ಪಡೆಯಿತು. ಈವೆಂಟ್‌ನಲ್ಲಿ ಚಿತ್ರದ ಪ್ರಥಮ ಪ್ರದರ್ಶನದ ಕುರಿತು ಮಾತನಾಡಿದ ತಾಪ್ಸಿ, “ಭಾರತದಲ್ಲಿ ಬಿಡುಗಡೆಯಾಗುವ ಒಂದು ವಾರದ ಮೊದಲು ಆಸ್ಟ್ರೇಲಿಯಾದಲ್ಲಿ ಚಿತ್ರವನ್ನು ಇಲ್ಲಿ ಪ್ರದರ್ಶಿಸಲಾಗುತ್ತಿರುವುದು ಉತ್ಸುಕವಾಗಿದೆ. ಪ್ರತಿಯೊಬ್ಬರೂ ಚಲನಚಿತ್ರವನ್ನು ಮೆಚ್ಚುತ್ತಾರೆ ಎಂದು ನಾನು ಭಾವಿಸುತ್ತೇನೆ, ಇದು…

Read More

ಸರ್ಕಾರಿ ಕೆಲಸಕ್ಕೆ ಯುವತಿಯರು ಮಂಚ ಹತ್ತಬೇಕು ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕಖರ್ಗೆ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕಖರ್ಗೆ ಅವರೇ ನಿಮ್ಮ ಈ ಮಾತು ಅಷ್ಟೂ ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಬಿಜೆಪಿ ಒತ್ತಾಯಿಸಿದೆ. ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ್ದ ಬೆನ್ನಲ್ಲೆ ಜಲಮಾಲಾ ಅವರ ಲಂಚದ ಹಗರಣ ಬಯಲಾಗಿದೆ, ಹಾಗಾದರೆ ಲಂಚದ ಸರ್ಕಾರ ಯಾರದ್ದು ಎಂದು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತ ಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ, ಜ್ಯೂನಿಯರ್ ಖರ್ಗೆ ಅವರೇ ಸಭ್ಯಸ್ಥರ ಮುಖವಾಡ ಹಾಕಿ…

Read More

ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಧ್ವಜದ ಬಣ್ಣ ಗೊತ್ತಿಲ್ಲ. ಕೆಂಪು, ಬಿಳಿ, ಹಸಿರು ಎಂದು ಹೇಳುವ ಪರಿಸ್ಥಿತಿ ಅವರದ್ದಾಗಿದೆ. ಧ್ವಜದ ಬಣ್ಣದ ಕುರಿತು ನೀಡಿದ ಹೇಳಿಕೆಗೆ ಅವರು ಬಹಿರಂಗ ಕ್ಷಮೆಯಾಚಿಸಬೇಕು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರು ಅವರು ಭಾರತ ದೇಶವನ್ನು ಎರಡು ಭಾಗ ಮಾಡಿದ್ದರು. ಹೀಗಾಗಿ ನೆಹರು ಸಂತತಿ ಅಂದರೆ ಅದು ಜಿನ್ನಾ ಸಂತತಿ ಇದ್ದಂತೆ. ಈಗ ಅದೇ ಸಂತತಿಗೆ ಸೇರಿದ ರಾಹುಲ್ ಗಾಂಧಿ ಅವರಿಂದ ದೇಶ ಜೋಡೋ ಪಾದಾಯಾತ್ರೆ ಮಾಡಲಾಗುತ್ತಿದೆ. ದೇಶ ತುಂಡು ಮಾಡಿದವರು ರಾಷ್ಟಭಕ್ತರೋ ಅಥವಾ ರಾಷ್ಟ್ರದ್ರೋಹಿಗಳೋ ಎಂದು ದೇಶದ ಜನ ತೀರ್ಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಮಗೆ ರಾಷ್ಟ್ರಭಕ್ತಿ ಹೇಳಿಕೊಡುವ ಅವಶ್ಯಕತೆ ಕಾಂಗ್ರೆಸ್ ಗೆ ಇಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷದವರಿಗೆ ತ್ರಿವರ್ಣ ಧ್ವಜದ ಬಗ್ಗೆ ಅಭ್ಯಾಸವರ್ಗ ಮಾಡಲಿ. ತ್ರಿವರ್ಣ ಧ್ವಜದ ಬಗ್ಗೆ ಈಗಿನ ಕಾಂಗ್ರೆಸ್ ನಾಯಕರಿಗೆ ಯಾವುದೇ ಕಲ್ಪನೆಯಿಲ್ಲ. ವಿಧಾನಸಭೆ ಬಾವಿಗಳಿದು ಪ್ರತಿಭಟನೆ ಮಾಡುವ ಸಂದರ್ಭದಲ್ಲೂ…

Read More