Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ನಟಿ ರಶ್ಮಿಕಾ ಮಂದಣ್ಣ ಮಾಡಿರುವ ಪೋಸ್ಟ್ ಕುರಿತು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಶ್ಮಿಕಾ ಟ್ರೋಲ್ ಮತ್ತು ನೆಗೆಟಿವಿಟಿ ಕಾರಣದಿಂದ ನಮಗೆ ಆಗಿರುವ ತೊಂದರೆ ಕುರಿತು ಅವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕುರಿತು ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಟ್ರೋಲಿಂಗ್ ಕೆಟ್ಟದ್ದು. ಜನರ ಜೀವನದ ಬಗ್ಗೆ ನಾವು ಅಭಿಪ್ರಾಯಗಳನ್ನು ಹೇರೋಕೆ ಆಗಲ್ಲ. ವಾಸ್ತವ ಆ ವ್ಯಕ್ತಿಗೆ ಮಾತ್ರ ಗೊತ್ತಿರುತ್ತದೆ. ಅವರ ಪಾಡಿಗೆ ಅವರನ್ನು ಇರಲು ಬಿಡಿ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಅಂದಹಾಗೆ ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್ ಬ್ಯಾಗ್ ರೀತಿ ಆಗಿದ್ದೇನೆ ಎಂದು ಬರೆದುಕೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಡಿಕೇರಿ; ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಶ್ರೀನಾಥ್ ಬಂಧಿತ ಆರೋಪಿ. ಶ್ರೀನಾಥ್ ಎಂಬಾತ 60 ಕ್ಕೂ ಹೆಚ್ಚು ಜನರಿಗೆ ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ ವಂಚನೆ ಮಾಡಿದ್ದ. ಪ್ರತಿಯೊಬ್ಬರಿಂದ 1 ಲಕ್ಷ ರೂ. ಸಂಗ್ರಹ ಮಾಡಿದ್ದ ಎನ್ನಲಾಗಿದೆ. ಕೊಡಗು, ದಕ್ಷಿಣ ಕನ್ನಡ ಕೇರಳಾದಲ್ಲೂ ಆರೋಪಿ ವಂಚನೆ ಮಾಡಿದ್ದು, ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಾಜಿ ವಿಶ್ವ ಸುಂದರಿ, ನಟಿ ಪ್ರಿಯಾಂಕಾ ಚೋಪ್ರಾ ಹಲವು ವರ್ಷಗಳ ಬಳಿಕ ಭಾರತಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ತಾರತಮ್ಯವನ್ನು ಕೊನೆಗೊಳಿಸಲು ಯುನಿಸೆಫ್ ಕಾರ್ಯಗಳ ಪ್ರಗತಿಯನ್ನು ನೋಡಲು ಅವರು ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಿದ್ದಾರೆ. ಅಂದಹಾಗೆ ಪ್ರಿಯಾಂಕಾ ಚೋಪ್ರಾ ಯುನಿಸೆಫ್ನ ಸದ್ಭಾವನಾ ರಾಯಭಾರಿಯಾಗಿದ್ದು ಅವರು ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವಿಷಯವನ್ನು ಪ್ರಿಯಾಂಕಾ ಚೋಪ್ರಾ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ತಮ್ಮ ಭೇಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು “ಸದ್ಯ, ನಾನು ಯುನಿಸೆಫ್ನೊಂದಿಗೆ ಭಾರತದ ಲಕ್ನೋದಲ್ಲಿದ್ದೇನೆ. ನಾನು ಈ ಕ್ಷೇತ್ರ ಭೇಟಿಗಾಗಿ ನಿಜವಾಗಿಯೂ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಯುದ್ಧಕ್ಕೆ ಸಜ್ಜಾಗಿ ಗೆಲುವಿಗೆ ಹೋರಾಡಿ ಎಂದು ಸೇನೆಗೆ ಚೀನಾ ಅಧ್ಯಕ್ಷ ಕ್ಸಿಜಿನ್ ಪಿಂಗ್ ಕರೆ ನೀಡಿದ್ದಾರೆ. ಸತತ ಮೂರನೇ ಬಾರಿ 5 ವರ್ಷಗಳ ಅವಧಿಯ ಚೀನಾ ನ್ಯಾಷನಲ್ ಸೆಕ್ಯೂರೆಟಿ ಮುಖ್ಯಸ್ಥರಾಗಿ ನೇಮಕಗೊಂಡ ನಂತರ ಸೇನೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಸೇನೆಯಲ್ಲಿ ಅತ್ಯಂತ ಅಸ್ಥಿರ ಕಾಡುತ್ತಿದ್ದು, ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದರು. ಪಕ್ಷದ ಮೂರು ಪ್ರಮುಖ ಹುದ್ದೆಗಳನ್ನು ಹೊಂದಿರುವ ಕ್ಸಿ ಜಿನ್ ಪಿಂಗ್, ಚೀನಾ ಸೇನೆ ಹಿಂದೆದಿಗಿಂತಲೂ ಹೆಚ್ಚು ಸವಾಲುಗಳನ್ನು ಎದುರಿಸುತ್ತಿದ್ದು, ಅದರ ವಿರುದ್ಧ ಹೋರಾಡಿ ಗೆಲ್ಲಬೇಕಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಎಎಸ್ ಐ ನಾರಾಯಣಸ್ವಾಮಿ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಪೇರೇಸಂದ್ರ ಗ್ರಾಮದಲ್ಲಿನ ಎಎಸ್ ಐ ನಾರಾಯಣ ಸ್ವಾಮಿ ಮನೆಯಲ್ಲಿ ಈ ಘಟನೆ ನಡೆದಿದೆ. ನಾರಾಯಣ ಸ್ವಾಮಿ ಅವರ ಪುತ್ರ ಶರತ್ ಗೆ ಮೂರು ಗುಂಡು ತಗುಲಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ನಾಲ್ವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಶರತ್ ಮೇಲೆ ಗುಂಡು ಹಾರಿಸಿ ಪತ್ನಿ ಹಾಗೂ ಸೊಸೆ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕನ್ನಡ ಚಿತ್ರರಂಗದ ಹಿರಿಯ ನಟಿ ತಾರಾ ಅವರ ಕಾರು ಚಾಲಕನ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾರಾ ಅವರ ಕಾರು ಚಾಲಕ ಅಕ್ಷಯ್ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅಕ್ಟೋಬರ್ 29ರಂದು ನಟಿ ತಾರಾ ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕ ಅಕ್ಷಯ್ ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿದ್ದಾರೆ. ಮುಂದೆ ಇದ್ದ ಕಾರು ಜಖಂಗೊಂದಿತ್ತು, ಅಕ್ಷಯ್ ಅವರ ಅಜಾಗರೂಕ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎಂದು ಮುಂದಿನ ಕಾರಿನಲ್ಲಿದ್ದ ಗಿರೀಶ್ ಅವರು ಆರೋಪಿಸಿದ್ದರು. ಘಟನಾ ನಂತರ ಕಾರು ರಿಪೇರಿ ಮಾಡಿಸುವುದಾಗಿ ಅಕ್ಷಯ್ ಭರವಸೆ ನೀಡಿದ್ದರು. ಆದರೆ ರಿಪೇರಿ ಮಾಡಿಸದೇ ನಂತರ ಸಾಕಷ್ಟು ಬಾರಿ ಅಲೆದಾಡಿಸಿದ್ದಾರೆ ಎಂದು ಮತ್ತೊಂದು ಕಾರಿನ ಗಿರೀಶ್ ದೂರು ನೀಡಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ‘ಅಜಾಗರೂಕ ಚಾಲನೆ’ ಎಂದು ಪ್ರಕರಣ ದಾಖಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ದೇವರ ಹರಕೆ ತೀರಿಸಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ಮೂವರು ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಂಭವಿಸಿದೆ. ಗೋಗಿ ತಾಂಡ ನಿವಾಸಿಗಳಾದ ದೀಪಕ್ (45), ಯುವರಾಜ್ (17) ಮತ್ತು ರಾಹುಲ್ (17) ಮೃತಪಟ್ಟ ದುರ್ದೈವಿಗಳು. ಗೋಗಿ ತಾಂಡಾದಿಂದ ಸಾವಳಗಿ ತಾಂಡಗೆ ದೇವರಿಗೆ ಹರಕೆ ತೀರಿಸಲು ಕುಟುಂಬ ಸಮೇತರಾಗಿ ತೆರಳಿದ್ದರು. ಕುಟುಂಬದವರು ಬೇರೆ ವಾಹನದಲ್ಲಿ ಮರಳಿದರೆ, ಈ ಮೂವರು ಬೈಕ್ ನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಾಗಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ವಾರ್ಡ್ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ಮತದಾರರ ಪಟ್ಟಿ ಪರಿಶೀಲಿಸಲು ಅವಕಾಶ ನೀಡಲಾಗಿದೆ. ತಮ್ಮ ಮೊಬೈಲ್ನಲ್ಲಿ VHA ಆ್ಯಪ್ ಅಥವಾ NVSP ವೆಬ್ಸೈಟ್ ಮೂಲಕ ಮಾಹಿತಿ ಪಡೆಯಬಹುದಾಗಿದೆ. e-EPIC download ಮಾಡಿಕೊಳ್ಳಲು ಇನ್ನಿತರ ಮತಗಟ್ಟೆ, ಶೇಕಡಾವಾರು ಮತದಾನದ ಮಾಹಿತಿ ಪಡೆಯಬಹುದು. ಈ ಹಿಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8614 ಮತಗಟ್ಟೆಗಳಿದ್ದವು. ಪ್ರಸ್ತುತ 8615 ಮತಗಟ್ಟೆಗಳಿವೆ. ಮತದಾರರ ಪಟ್ಟಿಯಲ್ಲಿ ದೋಷಗಳಿದ್ದರೆ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳು ಅವಕಾಶ ಇದೆ. ಅಂದರೆ 8-12-22 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಅಂತಿಮ ಮತದಾರರ ಪಟ್ಟಿಯನ್ನು 5-1-2023 ಕ್ಕೆ ಪ್ರಕಟಿಸಲಾಗುತ್ತೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು. ಇ-ಲಿಸ್ಟ್ ಇಂದು ಪ್ರಕಟನೆ ಮಾಡಿದ್ದೇವೆ. ಅದರ ಆಧಾರದ…
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪ್ರಚೋದನೆ ನೀಡಿದ್ದಾರೆ ಎಂಬ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಜೆಪಿ ಹಿರಿಯ ಮುಖಂಡರಾದ ಎಲ್ ಕೆ ಆಡ್ವಾಣಿ, ಉಮಾಭಾರತಿ, ಮನೋಹರ್ ಜೋಷಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಸರೋಜ್ ಯಾದವ್ ಅವರನ್ನೊಳಗೊಂಡ ಪೀಠ, ಅಡ್ವಾಣಿ, ಉಮಾ ಭಾರತಿ, ದಿವಂಗತ ಕಲ್ಯಾಣ್ ಸಿಂಗ್, ಮನೋಹರ್ ಜೋಷಿ ಸೇರಿದಂತೆ 32 ಮಂದಿ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದೆ. ಅಯೋಧ್ಯೆಯ ಇಬ್ಬರು ಮುಸ್ಲಿಮ್ ಮುಖಂಡರು ಬಾಬ್ರಿ ಮಸೀದಿ ಧ್ವಂಸಗೊಳಿಸಿ ರಾಮ ಮಂದಿರ ಸ್ಥಾಪನೆಗೆ ಪ್ರಚೋದನೆ ನೀಡಿ ಗಲಭೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಇವರ ಮೇಲಿದ್ದ ಆರೋಪಗಳನ್ನು ವಜಾಗೊಳಿಸಿದ್ದ ಸಿಬಿಐ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. 2020ರಲ್ಲಿ ಸಿಬಿಐ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ಯೋಜಿತ ಕೃತ್ಯ ಎಂದು ಹೇಳಿತ್ತು. ಆದರೆ ಅದೇ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆ ಹಾಗೂ ಸುಪ್ರೀಂಕೋರ್ಟ್ ವಿವಾದ ಬಗೆ…
ಭಾರತ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ ಹೆಸರು ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದ್ದು, ಸಂಭಾವ್ಯ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಹಲವು ಘಟಾನುಘಟಿಗಳ ಜೊತೆ ರವೀಂದ್ರ ಜಡೇಜಾ ಅವರ ಪತ್ನಿ ಕೂಡ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಜಡೇಜಾ ಪತ್ನಿ ರಿವಾಬಾ ಜಡೇಜಾ ಮೆಕಾನಿಕಲ್ ಇಂಜಿನಿಯರ್ ವಿದ್ಯಾಭ್ಯಾಸ ಮಾಡಿದ್ದು, ರಿವಾಬಾ ಅವರ ಸಂಬಂಧಿ ಹರಿ ಸಿಂಗ್ ಸೋಲಾಂಕಿ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದಾರೆ. ಕರ್ಣಿಸೇನಾ ಮುಖಂಡರಲ್ಲಿ ಒಬ್ಬರಾಗಿರುವ ರಿವಾಬಾ ಜಡೇಜಾ ರಜಪುತ್ ಸಮುದಾಯದವರಾಗಿದ್ದಾರೆ. ರವೀಂದ್ರ ಜಡೇಜಾ ಅವರನ್ನು 2016ರಲ್ಲಿ ವಿವಾಹ ಆಗಿದ್ದಾರೆ. ಗುಜರಾತ್ ನಲ್ಲಿ 27 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ ತವರೂರಾದ ಈ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿಗೆ ಪ್ರಮುಖವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…