Subscribe to Updates
Get the latest creative news from FooBar about art, design and business.
- ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ
- ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
- ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
- ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್
- ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ
- ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ
- ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್ಗಳ ಸಂಖ್ಯೆ
Author: admin
ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿ ನೀರ್ ಕಲ್ಲು ಗ್ರಾಮದಲ್ಲಿ ಸಿರಿ ಗೆಜ್ಜೆ ಗೆಳೆಯರ ಬಳಗ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಗಣಪತಿ ವಿಸರ್ಜನೆ ಕಾರ್ಯಕ್ರಮಕ್ಕೆ ಜನಮುಖಿ ಸಂಸ್ಥೆಯ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ಎಲ್. ಸಿ.ನಾಗರಾಜ್ ಅವರು ಭಾಗವಹಿಸಿದ್ದರು. ಎಲ್.ಸಿ.ನಾಗರಾಜ್ ರವರನ್ನು ಊರಿನ ಯುವಕರು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಮಾಡಿ ಬರಮಾಡಿಕೊಂಡರು. ಎಲ್.ಸಿ.ನಾಗರಾಜು ಮಾತನಾಡಿ, ನೀರ್ ಕಲ್ಲು ಬಗ್ಗೆ ದೊಡ್ಡ ಚರಿತ್ರೆ ಇದೆ, ರೈತರ ಸಂಘದಿಂದ ದೊಡ್ಡ ಹೋರಾಟ ಕಟ್ಟಿಕೊಂಡು ಬಂದ ಇತಿಹಾಸ ಈ ಊರಿಗೆ ಇದೆ, ಯಾವ ರೀತಿ ರಾಮಕೃಷ್ಣ ಎಸ್. ಜೊತೆ ನೀರು ಕಲ್ಲು ಸೇರುತ್ತೆ ಅದೇ ರೀತಿ ಮಧುಗಿರಿ ತಾಲೂಕಿನ ಸ್ಥಳೀಯನಾದ ನನ್ನ ಬಾಂಧವ್ಯ ಮಧುಗಿರಿಗೆ ಅಂಟಿಕೊಂಡಿದೆ ಎಂದರು. ಸ್ಥಳೀಯರನ್ನು ಪ್ರತಿನಿಧಿಯನ್ನಾಗಿ ಮಾಡಿದಾಗ ತಾಲೂಕು ಬೆಳಕಾಗುತ್ತದೆ. ನಮ್ಮ ಜೀವನ ನಮ್ಮ ಹುಟ್ಟು ನಮ್ಮ ಹೋರಾಟ ನಮ್ಮ ಬದುಕು ಎಲ್ಲ ಈ ಸ್ಥಳೀಯ ಭೂಮಿಯಲ್ಲೆ, ನಾವೇನು ಹೊರಗಡೆಯಿಂದ ಇಲ್ಲಿ ವಿಹಾರಕ್ಕೆ ಬಂದಿಲ್ಲ, ಮುಂದಿನ…
ತುರುವೇಕೆರೆ: ತಾಲೂಕಿನ ಹೊಣಕೆರೆ ಗೊಲ್ಲರಟ್ಟಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಇಂದು ಮಾತೃಶ್ರೀ ಸಂಘದ ವತಿಯಿಂದ ಸಿರಿ ಧಾನ್ಯ ಬಳಕೆಯ ಕುರಿತು ವಿಚಾರಗೋಷ್ಠಿ ನಡೆಯಿತು. ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷ ಜ್ಯೋತಿ ಸಿರಿಧಾನ್ಯ ಮಾರುಕಟ್ಟೆ ಮುಖ್ಯಸ್ಥ ರಾಜೇಶ್, ತಾಲೂಕು ಯಾದವ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಸ್ವಾಮಿ, ಒಕ್ಕೂಟ ಅಧ್ಯಕ್ಷ ಭಾಗೀರಥಮ್ಮ ಸಪ್ತಗಿರಿ ವಿದ್ಯಾ ಸಂಸ್ಥೆ ಬೆಂಗಳೂರು ಶ್ರೀನಿವಾಸ್ ಮತ್ತು ಎಸ್ ಡಿಎಂಸಿ ಅಧ್ಯಕ್ಷರಾದ ರಂಗಸ್ವಾಮಿ ಇವರು ವಿಚಾರಗೋಷ್ಠಿಯನ್ನು ಉದ್ಘಾಟನೆ ಮಾಡಲಾಯಿತು. ಸಿರಿಧಾನ್ಯ ಮಾರುಕಟ್ಟೆ ಮುಖ್ಯಸ್ಥ ರಾಜೇಶ್ ಮಾತನಾಡಿ, ನಾವು ಬಳಸುವ ಎಲ್ಲಾ ಸಿರಿ ಧಾನ್ಯದಲ್ಲೂ ಕೃತಕ ಗೊಬ್ಬರ ಬಳಕೆ ಮಾಡಿ ಜನರಿಗೆ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ಆದುದರಿಂದ ಉತ್ತಮ ಆರೋಗ್ಯ ದೃಷ್ಟಿಯಿಂದ ಒಳ್ಳೆಯ ಗುಣಮಟ್ಟದಲ್ಲಿ ಯಾವುದೇ ತರಹದ ಫರ್ಟಿಲೈಜರ್ ಬಳಸದೆಸಿರಿಧಾನ್ಯವನ್ನು ಉತ್ತಮ ರೀತಿಯಲ್ಲಿ ಬೆಳೆಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು. ಪ್ರತಿಯೊಂದು ಜಿಲ್ಲೆಯಲ್ಲೂ ಈ ಸಿರಿಧಾನ್ಯ ಆಹಾರ ಪದಾರ್ಥಗಳ ಬಗ್ಗೆ ಅರಿವು ಮೂಡಿಸಿ ಮನೆ ಮನೆಗಳಿಗೆ ತಲುಪುವಂತ ಕೆಲಸ…
ಕೊರಟಗೆರೆ: ಪಟ್ಟಣದ ತಾಲ್ಲೂಕು ಆಡಳಿತ ಕಛೇರಿ ಪಕ್ಕದಲ್ಲಿ ಇರುವ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೆ ಸುಮಾರು 4 ತಿಂಗಳಿನಿಂದ ವೇತನ ನೀಡಿಲ್ಲ, ಮಾತ್ರವಲ್ಲದೇ ಆಹಾರ ಸಾಮಗ್ರಿ ಕೂಡ ಸರಬರಾಜು ಮಾಡುತ್ತಿಲ್ಲವೆಂದು ಸಿಬ್ಬಂದಿ ವರ್ಗ ಕ್ಯಾಂಟೀನ್ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು. 5 ವರ್ಷಗಳ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಲ್ಲಿ ಇದ್ದಾಗ ಆರಂಭವಾದ ಇಂದಿರಾ ಕ್ಯಾಂಟೀನ್ ಗಳು, ಕಡಿಮೆ ಬೆಲೆಯಲ್ಲಿ ಸಾರ್ವಜನಿಕರ ಹಸಿವು ನೀಗಿಸುತ್ತಿತ್ತು. ಕ್ಯಾಂಟೀನ್ ಮುಂದೆ ಜನರ ಉದ್ದುದ್ದ ಸಾಲುಗಳಿದ್ದವು. ಅಪಾರ ಸಂಖ್ಯೆಯಲ್ಲಿ ಜನರು ಇದರ ಸದುಪಯೋಗ ಪಡೆಯುತ್ತಿದ್ದರು. ರೈತರು, ಶಾಲಾ ಮಕ್ಕಳು, ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರಿಗೆ ಕ್ಯಾಂಟಿನ್ ಸಹಕಾರಿಯಾಗಿತ್ತು. ಆದರೆ ಇತ್ತೀಚೆಗೆ ಇಂದಿರಾ ಕ್ಯಾಂಟೀನ್ ಚಿತ್ರಣ ಬದಲಾಗಿದೆ ಎಂದು ಧರಣಿ ನಿರತರು ಬೇಸರ ವ್ಯಕ್ತಪಡಿಸಿದರು. ಕೊರಟಗೆರೆ ಪಟ್ಟಣದ ತಾಲೂಕು ಕಛೇರಿಯ ಬಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ನಡೆಸಲು ಗುತ್ತಿಗೆ ಪಡೆದ ಬೆಂಗಳೂರು ಮೂಲಕ ಗುತ್ತಿಗೆದಾರ ಇಂದಿರಾ ಕೊರಟಗೆರೆ ಪಟ್ಟಣದ ಕ್ಯಾಂಟೀನ್ ಗೆ ಕಳೆದ 8 ತಿಂಗಳಿನಿಂದ ಸಮರ್ಪಕವಾಗಿ ಆಹಾರ ಸಾಮಗ್ರಿಗಳನ್ನು,…
ಮಧುಗಿರಿ: ಜಲಜೀವನ್ ಮಿಷನ್ ಅಡಿ ನಡೆಸುತ್ತಿರುವ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಶಾಸಕ ಎಂ.ವಿ.ವೀರಭದ್ರಯ್ಯ ಸೂಚಿಸಿದರು. ತಾಲ್ಲೂಕಿನ ಕಸಬ ವ್ಯಾಪ್ತಿಯ ಕಂಬದಹಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜಮೆಯಡಿಯಲ್ಲಿ 49 ಲಕ್ಷ ರೂ ವೆಚ್ಚದ ಓವರ್ ಹೆಡ್ ಟ್ಯಾಂಕ್ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದ ಅವರು. ಕೇಂದ್ರ ಸರಕಾರದ ಯೋಜನೆಯಾಗಿದ್ದು, ಗ್ರಾಮದ ಪ್ರತಿ ಮನೆ ಮನೆಗೂ ಕೊಳಾಯಿ ನೀರು ಸರಬರಾಜು ಮಾಡಲಾಗುತ್ತದೆ. ಯಾದಗಿರಿ ಮೂಲದ ಗುತ್ತಿಗೆದಾರ ಬಸವರಾಜು ಗೌಡ ರವರು ಆನ್ ಲೈನ್ ಮೂಲಕ ಟೆಂಡರ್ ಪಡೆದಿದ್ದು ಉತ್ತಮವಾದ ಕಾಮಗಾರಿಯನ್ನು ನಡೆಸುವಂತೆ ಸೂಚಿಸಿದರು. ಪುರಸಭಾ ಸದಸ್ಯರಾದ ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್ ಬಾಬು, ಜೆಡಿಎಸ್ ಮುಖಂಡ ತುಂಗೋಟಿ ರಾಮಣ್ಣ, ತಾಪಂ ಮಾಜಿ ಸದಸ್ಯ ನಾಗಭೂಷಣ್, ಗುಂಡಗಲ್ಲು ಶಿವಣ್ಣ, ಗ್ರಾಪಂ ಅಧ್ಯಕ್ಷ ರವಿಕುಮಾರ್, ರವೀಶಾರಾಧ್ಯ, ತಿಮ್ಮಣ್ಣ, ಡಿ.ವಿ.ಹಳ್ಳಿ ಪ್ರಭು, ಎಇಇ ರಾಮದಾಸು ಹಾಗೂ ಗ್ರಾಮಸ್ಥರು ಇದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಮಧುಗಿರಿ: ಸಕಾಲಕ್ಕೆ ಆಂಬುಲೆನ್ಸ್ ಸಿಗದೇ ಮಹಿಳೆಯೊಬ್ಬರು ಮನೆಯಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಐಡಿಹಳ್ಳಿ ಗ್ರಾಮದ ಬಡ ಕುಟುಂಬದ 65 ವರ್ಷದ ಜಯಮ್ಮ ಮೃತಪಟ್ಟವರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲು 108ಕ್ಕೆ ಕುಟುಂಬಸ್ಥರು ಕರೆ ಮಾಡಿದ್ದರು. ಆದರೆ ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಮಹಿಳೆ ಸಕಾಲಕ್ಕೆ ಚಿಕಿತ್ಸೆ ಲಭಿಸದೇ ಅನ್ಯಾಯವಾಗಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಟಿಎಚ್ ಓ ಗೆ ಕರೆ ಮಾಡಿದ ಬಳಿಕ ಆಂಬುಲೆನ್ಸ್ ಬಂದಿದೆ. ಆದರೆ ಆಂಬುಲೆನ್ಸ್ ಬರುವಷ್ಟರಲ್ಲಿ ಜಯಮ್ಮ ಕೊನೆಯುಸಿರೆಳೆದಿದ್ದರು. ಆಂಬುಲೆನ್ಸ್ ಸಕಾಲಕ್ಕೆ ದೊರಕುತ್ತಿದ್ದರೆ, ಮಹಿಳೆಯ ಪ್ರಾಣ ಉಳಿಸಬಹುದಿತ್ತು ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಮಧುಗಿರಿ: ತಾಲೂಕಿನ ಮಿಡಿಗೇಶಿಯಲ್ಲಿ ನಡೆದ ಜೋಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಕೆ.ಎನ್.ರಾಜಣ್ಣ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಮಧುಗಿರಿಯ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಕುಟುಂಬಸ್ಥರಿಗೆ ಧೈರ್ಯ ತಂಬಿದ ಅವರು, ಈ ಪ್ರಕರಣದ ಸೂಕ್ತ ತನಿಖೆಗೆ ಒತ್ತಾಯಿಸಿದರು. ಈ ಪ್ರಕರಣದಲ್ಲಿ ಯಾರೇ ಬಾಗಿಯಾಗಿರಲಿ ಅವರ ವಿರುದ್ಧ ತನಿಖೆ ಮಾಡಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಇದೇ ವೇಳೆ ಒತ್ತಾಯಿಸಿದರು. ಈ ವೇಳೆ ಹಿರಿಯ ಮುಖಂಡರುಗಳಾದ ಎಂ.ಎಸ್.ಮಲ್ಲಿಕಾರ್ಜುನಯ್ಯ, ಜಿ.ಜೆ.ರಾಜಣ್ಣ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೆಚ್.ಡಿ.ಕೋಟೆ: ತಾಲೂಕು ವ್ಯವಸಾಯೋತ್ಪನ್ನ, ಮಾರಾಟ ಸಹಕಾರ ಸಂಘದ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಹೆಚ್.ಡಿ.ಕೋಟೆ ಪಟ್ಟಣದ ಸಂಘದ ಅಕ್ಕಿಗಿರಣಿ ಆವರಣದಲ್ಲಿ ಆಯೋಜಿಸಲಾಗಿತ್ತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮೊತ್ತಬಸವರಾಜಪ್ಪ, ಸದಸ್ಯರ ಸರ್ವಾನುಮತದಿಂದ ಸಹಕಾರ ಸಂಘವನ್ನು ಅಭಿವೃದ್ಧಿಪಡಿಸುವಲ್ಲಿ ಸರ್ವಸದಸ್ಯರ ಸಹಕಾರ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಒಕ್ಕೊರಳಿಂದ ಸರ್ವ ಸದಸ್ಯರು ಒತ್ತಾಯಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಆಡಳಿತ ಮಂಡಳಿ ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿತು. ಕಾರ್ಯದರ್ಶಿ ಬೊಪ್ಪನಹಳ್ಳಿ ನಿಂಗರಾಜು ಸಭೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಸದಸ್ಯರಾದ ಎಂ.ಮಹದೇವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಅಧ್ಯಕ್ಷರಾದ ಬಸವರಾಜಪ್ಪ, ಉಪಾಧ್ಯಕ್ಷ ನೂರ್ ಅಹಮದ್, ಮಾದಪ್ಪ, ಯೋಗನರಸಿಂಹಗೌಡ, ಗುಣಪಾಲ, ಭುಜಂಗನಾಯಕ, ಶಿವಸ್ವಾಮಿ, ಈಶ್ವರ, ಮಾದಯ್ಯ, ಲಲಿತಮ್ಮ ಕೆಂಚಮ್ಮ, ರಾಜಣ್ಣ ಶಿವರಾಜು, ಸಿಬ್ಬಂದಿಗಳಾದ ಕಾರ್ಯದರ್ಶಿ ನಿಂಗರಾಜು, ಮಲ್ಲಪ್ಪ, ದೀಪಕ್, ಸೋಮು, ಗುರು ಹಾಗೂ ನೂರಾರು ಸಂಖ್ಯೆಯ ಸದಸ್ಯರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಚಿತ್ರದುರ್ಗ: ಪೌರಕಾರ್ಮಿಕರ ಬದುಕನ್ನು ಹಸನಾಗಿಸುವುದು ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಲೇ ಬಂದಿದ್ದೇವೆ ಎಂದು ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಹಿರಿಯೂರು ತಾಲ್ಲೂಕಿನ ನೆಹರು ಕ್ರೀಡಾಂಗಣದ ಹಳೇ ಕಡಲೆಕಾಯಿ ಮಂಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕರಲ್ಲಿ 11,133 ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲಾಗಿದೆ. ರಾಜ್ಯದ ಎಲ್ಲಾ ರೀತಿಯ ಖಾಯಂ ಹೊರಗುತ್ತಿಗೆ ಮತ್ತು ಇತರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಸರ್ಕಾರಿ ನೌಕರರರೆಂದು ಪರಿಗಣಿಸಲಾಗುವುದು, ಪೌರಕಾರ್ಮಿಕರಿಗೆ ಸರ್ಕಾರ ಊಟ ನೀಡುವಲ್ಲಿ ಅನುಕೂಲಕರವಾಗಿ ಬದಲಾವಣೆ ತರಲಾಗಿದೆ ಎಂದು ಅವರು ಹೇಳಿದರು. ಪೌರಕಾರ್ಮಿಕರು ದುರಾಭ್ಯಾಸಗಳಿಂದ ದೂರವಿದ್ದು, ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಲ್ಲಿ ಹೆಚ್ಚು ಗಮನ ಕೊಡಬೇಕು. ಎಲ್ಲಂದರಲ್ಲಿ ಕಸ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ನಗರದಲ್ಲಿ ಪೌರಕಾರ್ಮಿಕರಿಗೆ 624+1,148 ಮನೆ ನಿರ್ಮಾಣ ಮಾಡಲು ತಯಾರಿ ನಡೆದಿದ್ದು, ಪೌರಕಾರ್ಮಿಕರಿಗೆ ಪ್ರತ್ಯೇಕ ಸೂರು ಕಲ್ಪಿಸಲಾಗುವುದು, ನಗರಕ್ಕೆ ಒಳಚರಂಡಿ ವ್ಯವಸ್ಥೆಗಾಗಿ 100 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಇದು…
ಮಧುಗಿರಿ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕೋಡ್ಲಾಪುರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಯುವಬಳಗ ಹಾಗೂ ಮುರಳೀಧರ ಹಾಲಪ್ಪ ಅಭಿಮಾನಿಗಳ ಬಳಗದ ವತಿಯಿಂದ ಮುರಳೀಧರ ಹಾಲಪ್ಪ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಕೇಕ್ ಕತ್ತರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ಜಿಲ್ಲಾಧ್ಯಕ್ಷ ಮುರಳಿ ರಾಚಯ್ಯ, ಕರ್ನಾಟಕ ಕಾರ್ಮಿಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಮಾರುತಿ ಕೆ.ಎನ್., ರಂಗನಾಥ್, ಪುಟ್ನಂಜ, ರಾಜು, ಚಂದನ್, ಚಂದ್ರಕಾಂತ್, ಮಾದೇಶ್, ಪ್ರವೀಣ್ ಇನ್ನು ಮುಂತಾದ ಯುವಕರು ಉಪಸ್ಥಿತರಿದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಜಮೀನು ವಿಚಾರವಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಬನಹಟ್ಟಿ ಕೆರೆ ಬಡಾವಣೆಯಲ್ಲಿ ನಡೆದಿದೆ. 65 ವರ್ಷದ ಮಾಳಪ್ಪ ಹಳ್ಳೂರ ಮೃತ ದುರ್ದೈವಿ. ಎರಡು ಗುಂಟೆ ಜಾಗಕ್ಕಾಗಿ ತಂದೆ ಮಾಳಪ್ಪ ಅವರನ್ನು ಮಗನಾದ ತುಕ್ಕಪ್ಪ ಶೆಡ್ ಮನೆಯಲ್ಲಿ ಕಟ್ಟಿಗೆಯಿಂದ ತಲೆಗೆ ಹೊಡೆದು ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 2.30ರ ಸುಮಾರಿಗೆ ಘಟನೆ ನಡೆದಿದ್ದು, ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy