Subscribe to Updates
Get the latest creative news from FooBar about art, design and business.
- ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
- ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
- ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
- 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
- ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
- ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
- ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
- ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
Author: admin
ನವದೆಹಲಿ : ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸಂಜೆ 7 ಗಂಟೆಗೆ ಸಭೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಅಲ್ಲಿಂದ ನೇರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉಭಯ ರಾಜ್ಯಗಳ ನಡುವಿನ ಗಡಿಯಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಗಡಿ ವಿವಾದ ಸಂಬಂಧ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಗಡಿ ಪ್ರಕರಣ ಕುರಿತು ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕುರಿತಾದ ಕಾನೂನು ನಿಯಮಗಳ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಬೆಂಗಳೂರು : ಮಕ್ಕಳ ಕಲಿಕಾ ಕೊರತೆ ನೀಗಿಸಲು 2022-23 ನೇ ಸಾಲಿನಿಂದ 5 ಮತ್ತು 8 ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿ ಗಳನ್ನು ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಇನ್ನು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ…
ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪಿಎಂ ಪೋಷಣ್ ಯೋಜನೆಯಡಿ ಮಕ್ಕಳಿಗೆ ವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವು ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಿಕ್ಷಣ ಇಲಾಖೆಯು ಹಬ್ಬ ಹರಿದಿನಗಳಲ್ಲಿ ಹಬ್ಬದೂಟ ನೀಡಲು ಸೂಚನೆ ನೀಡಿದ್ದು, ಈ ಕಾರ್ಯಕ್ರಮದಡಿ ದಾನಿಗಳು, ಟ್ರಸ್ಟ್, ಸಂಘ, ಸಂಸ್ಥೆಗಳು, ಎಸ್ ಡಿಎಂಸಿಗಳು, ಸಾರ್ವಜನಿಕರು ಸೇರಿದಂತೆ ಸಮುದಾಯದವರು ತಮ್ಮದೇ ಆರ್ಥಿಕ ಅಥವಾ ಆಹಾರ ಸಹಕಾರ, ನೆರವಿನೊಂದಿಗೆ ಮಕ್ಕಳ ಸಂಪೂರ್ಣ ವಿಶೇಷ ಭೋಜನ ವ್ಯವಸ್ಥೆ ಅಥವಾ ಬಿಸಿಯೂಟಕ್ಕೆ ಪೂರಕವಾಗಿ ಪೌಷ್ಠಿಕ ಆಹಾರ ನೀಡಲು ಮುಂದಾಗಿದೆ. ಶಾಲೆಗಳಲ್ಲಿ ವಿಶೇಷವಾಗಿ ಊರಿನ ಹಬ್ಬ, ಜಾತ್ರೆ, ತೇರು, ರಾಷ್ಟ್ರೀಯ ಹಬ್ಬಗಳು, ಜನ್ಮದಿನ, ಜಯಂತಿ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ಸ್ಥಳೀಯವಾಗಿ ಸಮುದಾಯದಿಂದ ಸಾಮೂಹಿಕವಾಗಿ ಆಚರಿಸುವ ವಿಶೇಷ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಭೋಜನ, ವಿಶೇಷ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು : 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ. ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿ ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದೆ. ವಿಜಯಪುರ ಜಿಲ್ಲೆಯ ಕಪನಿಂಬರಗಿ ಜಿಎಚ್ಎಸ್ ಶಾಲೆಯ ಪ್ರತಾಪ್ ಸಿಂಗ್, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ. ಯೋಗೇಶ್ವರಪ್ಪ, ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸೋಮನಗೌಡ ಪಾಟೀಲ್ ಬಂಧಿತರಾಗಿದ್ದಾರೆ. ಸದ್ಯ ಬಂಧಿತರನ್ನು ವಿಚಾರಣೆ ನಡೆಸಲಾಗಿದ್ದು, ಬಳಿಕ ನ್ಯಾಯಾಲಯದ ಮುಂದೆ ಆರೋಪಿ ಶಿಕ್ಷಕರನ್ನು ಹಾಜರುಪಡಿಸಿರುವ ಕೋರ್ಟ್ ಆದೇಶದ ಮೇರೆಗೆ ಸಿಐಡಿ ಅಧಿಕಾರಿಗಳು ಬಂಧಿತ ಶಿಕ್ಷಕರನ್ನು ಜೈಲಿಗೆ ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯಪುರ: ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ. ಏತ ನೀರಾವರಿ ಕಾಲುವೆಗೆ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ತಾಯಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರೇಣುಕಾ ಅಮೀನಪ್ಪ ಕೋನಿನ್(26) ಹಾಗೂ ಮಕ್ಕಳಾದಂತ ಯಲ್ಲವ್ವ(2) ಅಮೃತಾ(1) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು ಶವಗಳ ಪತ್ತೆಕಾರ್ಯ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಗಡಿ ವಿವಾದದ ಮಧ್ಯೆಯೇ ಎನ್ಸಿಪಿ ಶಾಸಕ ರೋಹಿತ್ ಪವಾರ್ ಕದ್ದುಮುಚ್ಚಿ ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ.ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ರೋಹಿತ್ ಪವಾರ್ ಬೆಳಗಾವಿ ಭೇಟಿ ನೀಡಿದ್ದಾರೆ ಎನ್ನಲಾಗ್ತಿದೆ. ಗಡಿ ಉಸ್ತುವಾರಿ ಸಚಿವರ ಬೆಳಗಾವಿ ಭೇಟಿ ರದ್ದು ಖಂಡಿಸಿ ಮಹಾ ವಿಕಾಸ ಅಘಾಡಿ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ ರೋಹಿತ್ ಪವಾರ್ ಅವರಿಗೆ ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದು ರಾತ್ರೋರಾತ್ರಿ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ. ರೋಹಿತ್ ಪವಾರ್ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್ಸಿಪಿ ಶಾಸಕರಾಗಿದ್ದಾರೆ. ರೋಹಿತ್ ಪವಾರ್ ನಿನ್ನೆ ರಾತ್ರಿ ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ಬೆಳಗಾವಿಗೆ ಆಗಮಿಸಿದರು ಎಂದು ತಿಳಿದುಬಂದಿದೆ. ಮಂಗಳವಾರ ಬೆಳಗ್ಗೆ ಬೆಳಗಾವಿ ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿರುವ ಎಂಇಎಸ್ ಬೆಳಗಾವಿ ನಗರ ಅಧ್ಯಕ್ಷ ದೀಪಕ್ ದಳವಿ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಗಡಿ ಹೋರಾಟದಲ್ಲಿ…
ದಲಿತ ಸಿಎಂ ಬಳಿಕ ಕಾಂಗ್ರೆಸ್ ನಲ್ಲೀಗ ಮಹಿಳಾ ಸಿಎಂ ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ಎದ್ದಿತ್ತು. ಇದೀಗ ಈ ಬಳಿಕ ಮಹಿಳಾ ಮುಖ್ಯಮಂತ್ರಿ ಕೂಗು ಎದ್ದಿದೆ. ಈ ಬಗ್ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿಷಯವನ್ನು ಎತ್ತಿದ್ದಾರೆ. ಮಹಿಳಾ ಮುಖ್ಯಮಂತ್ರಿ ಬರಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಅದಕ್ಕೆ ತಕ್ಕ ವಾತಾವರಣ ನಿರ್ಮಾಣವಾಗಬೇಕಿದೆ. ನಾವು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಯಾಕೆ ಕೊಡಬಾರದು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಮಾತ್ರ ದಲಿತ ಸಿಎಂ ಸಾಧ್ಯ. ಬಿಜೆಪಿ ದಲಿತರನ್ನು ಒಡೆದು ಆಳುವ ನೀತಿ ಅನುರಸಿರುತ್ತಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವುದಕ್ಕೆ ಯೋಗ್ಯತೆ ಇರಲಿಲ್ಲ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಂಬೈ: 20 ಭಾರತೀಯ ನಕ್ಷತ್ರ ಆಮೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮೀರಾರೋಡ್ ಪಶ್ಚಿಮ ಉಪನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ನದೀಮ್ ಶುಜಾವುದ್ದೀನ್ ಶೇಖ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳ್ಳಸಾಗಣೆ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬೊರಿವಲಿಯ ಗಣಪತ್ ಪಾಟೀಲ್ ನಗರ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, 20 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಮೆಗಳ ಒಟ್ಟು ಮೊತ್ತ ಸುಮಾರು 3.5 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ ಎಂದು ಎಂಎಚ್ ಬಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಅಶ್ಲೀಲ ಚಿತ್ರ ಹಂಚಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಾಜ್ ಕುಂದ್ರಾ ಮಾತ್ರವಲ್ಲದೇ ಈ ಪ್ರಕರಣದಲ್ಲಿ ನಟಿಯರಾದ ಶೆರ್ಲಿನಾ ಚೋಪ್ರಾ, ಪೂನಂ ಪಾಂಡೆಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನು ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ನೀಡಲಾಗಿದೆ. ಮಗೆ ನಿರೀಕ್ಷಣಾ ಜಾಮೀನು ಸಿಗುವತನಕ ಮುಖಮುಚ್ಚಿಕೊಂಡೇ ಓಡಾಡುವುದಾಗಿ ಶಪಥ ಮಾಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹೆಚ್.ಡಿ.ಕೋಟೆ: ತಾಲೂಕಿನ ನುಗು ಬಿರ್ವಾಳು ಗ್ರಾಮದ ಶ್ರೀ ಕಾಳಮಂಟೇಶ್ವರ ದೇವಸ್ಥಾನ ಮುಂಭಾಗದಲ್ಲಿ ಶ್ರೀ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಹೋತ್ಸವದ ಅಂಗವಾಗಿ ದೇವಸ್ಥಾನವನ್ನು ವಿವಿಧ ಬಗೆಯ ಬಣ್ಣಗಳಿಂದ ಬಳಿದು ಸಿಂಗಾರಿಸಲಾಗಿತ್ತು. ದೇವಸ್ಥಾನವನ್ನು ವಿದ್ಯುತ್ ದೀಪಾಲಂಕಾರಗೊಳಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು ತೋರಣ ಕಟ್ಟಿ ಮಧುವಣಗಿತ್ತಿಯಂತೆ ಅಲಂಕೃತಗೊಳಿಸಲಾಗಿತ್ತು. ವಾದ್ಯಗೋಷ್ಠಿಗಳು ಮೊಳಗಿದವು. ಬೆಳಗ್ಗೆ 7 ಕ್ಕೆ ದೇವರಿಗೆ ಗಣಪತಿ ಪೂಜೆ, ವಿವಿಧ ಹೋಮ ಹವನಗಳು ನಡೆದವು. ದೇವರ ಉತ್ಸವ ಮೂರ್ತಿಯನ್ನು ಗಂಗೆಸ್ನಾನ ಮಾಡಿಸಿ, ನಂತರ ದೇವಸ್ಥಾನದ ಬಳಿಗೆ ಕರೆತಂದು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಬಸವೇಶ್ವರ ಮೂರ್ತಿಯನ್ನೂ ಪ್ರತಿಷ್ಠಾಪಿಸಿ, ಮಹಾಮಂಗಳಾರತಿ ನಡೆಸಲಾಯಿತು. ಭಕ್ತರು ದಾರಿಯುದ್ದಕ್ಕೂ ದೇವರ ಭಜನೆ ನಡೆಸಿಕೊಟ್ಟರು. ನುಗು ಜಲಾಶಯದ ನಾಲೆ ಸಮೀಪದಲ್ಲೇ ದೇವಸ್ಥಾನವಿರುವುದರಿಂದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹರಕೆ ತೀರಿಸಿದರು. ಬಿಜೆಪಿ ಮುಖಂಡ ಡಾ.ಎಚ್.ವಿ.ಕೃಷ್ಣಸ್ವಾಮಿ, ಆಪ್ತ ಕಾರ್ಯದರ್ಶಿ ಶಿವಕುಮಾರ್, ಹೊಸ ಬಿರ್ವಾಳು, ನುಗು ಬಿರ್ವಾಳು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ವರದಿ:…