Author: admin

ಶಿವಸೇನೆ ನಾಯಕ ಸಂಜಯ್ ರಾವತ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಈಗಾಗಲೇ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇಡಿ ಅವರ ವಿಚಾರಣೆ ನಡೆಸಿತ್ತು. ಭಾನುವಾರ ಬೆಳಗ್ಗೆ ಮುಂಬೈನಲ್ಲಿರುವ ಸಂಜಯ್ ರಾವತ್ ಮನೆ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸಂಜಯ್‌ ರಾವತ್‌ಗೆ ಸೇರಿದ 1034 ಕೋಟಿ ರೂ. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಮತ್ತೆ ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೀದರ್ : ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಡಿಸೆಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಸೂಚಿಸುತ್ತದೆ. ನಾವು ಬಲವಾದ ನೆಲೆಯನ್ನು ಹೊಂದಿರುವ 134 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ’ ಎಂದು ತಿಳಿಸಿದರು. ಜೆಡಿಎಸ್  ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಬೀದರ್ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಇನ್ನೂ 10 ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ಪಟ್ಟಣದ ಶಿವಗಂಗಾ ಚಿತ್ರ ಮಂದಿರದಲ್ಲಿ ಕೊರಟಗೆರೆ ಪೊಲೀಸ್ ಅಧಿಕಾರಿಗಳಾದ ಯೋಗೀಶ್ ಮತ್ತು ಮಂಜುನಾಥ್ ರವರಿಗೆ ರಜತ ಕಿರೀಟಧಾರಣೆ ಸಮಾರಂಭದ ಪ್ರಯುಕ್ತ ತುಮಕೂರಿನ ಹೆಸರಾಂತ ಶ್ರೀ ಬಸವೇಶ್ವರ ಡ್ರಾಮಾ ಸೀನ್ಸ್ ಮತ್ತು ಶ್ರೀ ರಾಮೇಶ್ವರ ಕೃಪಾ ಪೋಷಿತ ನಾಟಕ ಮಂಡಳಿಯ ವತಿಯಿಂದ ವಿದ್ಯುತ್ ದೀಪಗಳಿಂದ ಅಲಂಕೃತವಾದ ರಂಗ ಸಜ್ಜಿಗೆಯಲ್ಲಿ ಐತಿಹಾಸಿಕ ಭಗವದ್ಗೀತೆ ಅಥವಾ ಶ್ರೀ ಕೃಷ್ಣ ಸಂಧಾನವೆಂಬ ಪೌರಾಣಿಕ ನಾಟಕ ಪ್ರದರ್ಶನ ಕಾಣಲಿದೆ. ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳ ಮತ್ತು ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿರವರ ಆಶೀರ್ವಾದಗಳೊಂದಿಗೆ ತಾಲೂಕಿನ ಮತ್ತು ಜಿಲ್ಲೆಯ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಹಿರಿಯ ಮತ್ತು ಕಿರಿಯ ನುರಿತ ಕಲಾವಿದರ ತಂಡದಿಂದ ದಿನಾಂಕ 31-7-2022ರ ಭಾನುವಾರ ಬೆಳಿಗ್ಗೆ ಸುಮಾರು 10 : 30 ಗಂಟೆಗೆ ಈ ಅದ್ಭುತವಾದ ನಾಟಕವು ಪ್ರದರ್ಶನ ಕಾಣಲಿದ್ದು ತಾಲೂಕಿನ ಕಲಾಭಿಮಾನಿಗಳು, ಕಲಾರಸಿಕರ, ಕಲಾಪೋತ್ಸಾಹಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕವನ್ನು ಯಶಸ್ವಿಗೊಳಿಸಬೇಕೆಂದು ಕಲಾತಂಡ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.…

Read More

ಸಿರಾ:  ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಹೇಮಾವತಿ ನೀರು ಹರಿಸಿದ ಹಿನ್ನೆಲೆಯಲ್ಲಿ ಶಿರಾ ನಗರದಲ್ಲಿರುವ ದೊಡ್ಡಕೆರೆ ತುಂಬಿ ಕೋಡಿ ಹರಿದಿದೆ. ದೊಡ್ಡಕೆರೆ ತುಂಬಿ ಕೋಡಿ ಹರಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ  ದೊಡ್ಡಕೆರೆ ಗೆ ಭೇಟಿ ನೀಡಿ ಕೆರೆ ವೀಕ್ಷಿಸಿ, ಸಾರ್ವಜನಿಕರು ಮತ್ತು ಕಾರ್ಯಕರ್ತರೊಂದಿಗೆ ಸಂತಸ ಹಂಚಿಕೊಂಡರು. ಈ ಸಂದರ್ಭದಲ್ಲಿ ಯುವ ಮುಖಂಡರು ಹಾಗೂ ಮಾಜಿ ನಗರ ಸಭೆ ಸದಸ್ಯರಾದ ಸಂತೆಪೇಟೆ ನಟರಾಜು, ನಾಮ ನಿರ್ದೇಶಿತ ಸದಸ್ಯರಾದ ನರೇಂದ್ರ, ಮಾಜಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಈರಣ್ಣ ಪಟೇಲ್, ಗ್ರಾಮ ಪಂಚಾಯ್ತಿ ಸದಸ್ಯರಾದ ಎಂ.ಶಿವಲಿಂಗಯ್ಯ, ವಿ.ಎಸ್.ಎಸ್.ಎನ್ ನಿರ್ದೇಶಕರಾದ ಕೊಟ್ಟ ಶ್ರೀನಿವಾಸ್, ಮಾಜಿ ಸುಡಾ ಅಧ್ಯಕ್ಷರಾದ ಈರಣ್ಣ, ಮಂಡಿ ಮರ್ಚಂಟ್ ರವಿ, ಹುಳಿಗೆರೆ ತಿಮ್ಮರಾಜು, ಯುವ ಮುಖಂಡರಾದ ಕರೆದಾಸರಹಳ್ಳಿ ಹೇಮಂತ್, ಚಿನ್ನೆನಹಳ್ಳಿ ನಾಗರಾಜು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ವರದಿ: ಪ್ರವೀಣ್, ಶಿರಾ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಕೊರಟಗೆರೆ: ಸಾರ್ವಜನಿಕವಾಗಿ ಹಿಂದು ಸ್ಮಶಾನವಾಗಿ ಎಲ್ಲಾ ಸಮುದಾಯದವರಿಗೂ ಒಂದೇ ಸ್ಮಶಾನ ಎಂಬ ಸರ್ಕಾರದ ಆದೇಶದಂತೆ ಮುಂದಿನ ದಿನಗಳಲ್ಲಿ ಪಟ್ಟಣ ಹಾಗೂ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸರ್ಕಾರಿ ಜಮೀನುಗಳಲ್ಲಿ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಲಾಗುವುದು ಹಾಗೂ ದಲಿತ ಮುಖಂಡರ ಮನವಿ ಮೇರೆಗೆ ಪ್ರತ್ಯೇಕ ಸ್ಮಶಾನ ಮಂಜೂರಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಹಶೀಲ್ದಾರ್ ನಾಹಿದಾ ಜಮ್ ಜಮ್ ತಿಳಿಸಿದರು. ಕೊರಟಗೆರೆ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗದ ಹಿತರಕ್ಷಣಾ ಸಮಿತಿ ಸಬೆಯ ಅಧ್ಯಕ್ಷತೆ ವಹಿಸಿದ್ದ ಅವರು,  ದಲಿತ ಮುಖಂಡ ದಾಡಿ ವೆಂಕಟೇಶ್ ರವರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಪ್ರತ್ಯೇಕ ಸ್ಮಶಾನಕ್ಕೆ ಮನವಿಯ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದರು. ಸಾರ್ವಜನಿಕವಾಗಿ ಎಲ್ಲಾ ಸಮುದಾಯದವರಿಗೂ ಒಂದೇ ಸ್ಮಶಾನ ಎಂಬ ಸರ್ಕಾರದ ಆದೇಶವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಪಟ್ಟಣ ಹಾಗೂ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗ ಳೊಂದಿಗೆ ಸರ್ಕಾರಿ ಜಮೀನುಗಳಲ್ಲಿ ಹಿಂದು ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಲಾಗುವುದು ಹಾಗೂ…

Read More

ತುಮಕೂರು: ಹಿಂದೂ ಸಂಘಟನೆಯ ಹೋರಾಟಗಾರ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ತುರುವೇಕೆರೆ ತಾಲೂಕಿನ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ನಿರತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮೂಲಕ ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಘಟನೆಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು. ಬೆಳಗಿನಿಂದಲೇ ಪ್ರಾರಂಭವಾದ ಪ್ರತಿಭಟನೆಯಿಂದಾಗಿ ಭಾಗಶಃ ಅಂಗಡಿ ಮುಂಗಟ್ಟು ಗಳು ಮುಚ್ಚಿದವು. ಪ್ರತಿಭಟನಾಕಾರರು ಹಿಂದೂಪರ ಸಂಘಟನೆಯ ಸಂಚಾಲಕರಾದ ನವೀನ್ ಬಾಬು ಮತ್ತು ಬಿಜೆಪಿ ಶಾಸಕ ಮಸಾಲ ಜಯರಾಮ್ ನೇತೃತ್ವದಲ್ಲಿ ಬಾಣಸಂದ್ರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆ ಗಳ ಪ್ರತಿ ಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ 40ಕ್ಕೂ ಹೆಚ್ಚು ಪೊಲೀಸರು ಹಾಗೂ…

Read More

ತಿಪಟೂರು:  ಊಟ ಮಾಡಿ ತಟ್ಟೆ ತೊಳೆಯಲು ಹೋದ ವಿದ್ಯಾರ್ಥಿಗಳಿಬ್ಬರು ಮರಳಿ ಬಾರದೇ ನಾಪತ್ತೆಯಾಗಿರುವ ಘಟನೆ ತಿಪಟೂರಿನ ಕೋಟನಾಯಕನಹಳ್ಳಿ ರುದ್ರಮುನಿ ಸ್ವಾಮೀಜಿಯವರ ಶಾಲಾ ಆವರಣದಲ್ಲಿ ನಡೆದಿದೆ. ಜುಲೈ 28ರಂದು ರಾತ್ರಿ ಸುಮಾರು 9:30ರ ವೇಳೆಗೆ ಈ ಘಟನೆ ನಡೆದಿದೆ.  ಊಟ ಮಾಡಿದ ತಟ್ಟೆಯನ್ನು ತೊಳೆಯಲು ಹೋದ ಇಬ್ಬರು  ವಿದ್ಯಾರ್ಥಿಗಳು ಪರಾರಿಯಾಗಿದ್ದು, ಹೊನ್ನವಳ್ಳಿ ಹೋಬಳಿಯ ಗೋಪಿ. ಬಿ.ಎಲ್.  ಬಸವರಾಜಪುರ ಹಾಗೂ ಬಿಸಿಲೆಹಳ್ಳಿ ನೊಣವಿನಕೆರೆ ಹೋಬಳಿಯ ಯತೀಶ್. ಬಿ.ಎನ್. ನಾಪತ್ತೆಯಾದ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಘಟನೆ ಸಂಬಂಧ ತಿಪಟೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ವಿದ್ಯಾರ್ಥಿಗಳ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಪೂರ್ವ ಯೋಜಿತವಾಗಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಹುಚ್ಚಗೊಂಡನಹಳ್ಳಿ ಗ್ರಾಪಂ ಸದಸ್ಯ ಹಿಂಡಿಸ್ಕೆರೆ ಸೋಮಶೇಖರ್ ಸೇರಿದಂತೆ, ಬೆಂಬಲಿಗರು ಮಾಜಿ ಶಾಸಕ ಕೆ. ಷಡಕ್ಷರಿ ಮತ್ತು ತಾಪಂ ಮಾಜಿ ಸದಸ್ಯ ಜಯಣ್ಣ ನೇತೃತ್ವದಲ್ಲಿ  ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ತಾ.ಪಂ. ಮಾಜಿ ಅಧ್ಯಕ್ಷ ಎನ್. ಎಂ.ಸುರೇಶ್, ಗ್ರಾಪಂ ಸದಸ್ಯರಾದ ಬಿ.ಬಿ.ಬಸವರಾಜ್, ಜಗನ್ನಾಥ್ ಮತ್ತು ನರಸಿಂಹಯ್ಯ, ಮುಖಂಡರಾದ ರವೀಂದ್ರ, ವಸಂತ, ಮಹದೇವಣ್ಣ, ಗಂಗಣ್ಣ ರಾಜಶೇಖರ್, ಅಶೋಕ್, ರಾಜು, ಉಮಾಶಂಕರ್, ಜಗದೀಶ್,  ರಘು, ಕುಮಾರ್, ರವಿಕುಮಾರ್, ತರಕಾರಿ ನಾಗಣ್ಣ, ರಂಗನಾಥಸ್ವಾಮಿ, ಎಎಸ್ ಡಿ ಎಂಸಿ ಅಧ್ಯಕ್ಷ ರವಿಕುಮಾರ್, ಜಯಣ್ಣ, ರೇಣುಕ ಮತ್ತು ಲೋಕೇಶ್ ಸೇರಿದಂತೆ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಹಾಜರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸರಗೂರು:  ತಾಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ಬಲದಂಡೆ ಕಾಲುವೆಗೆ ಕಾರು ಬಿದ್ದಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕಬಿನಿ ಬಲದಂಡ ನಾಲೆಗೆ ಬಿದ್ದು ಇಬ್ಬರು  ವಕೀಲರು ನೀರು ಪಾಲಾಗಿದ್ದು, ಒಬ್ಬ ವಕೀಲ ದಡ ಸೇರಿರುವ ಘಟನೆ ಶುಕ್ರವಾರ ನಡೆದಿದೆ. ಹುಣಸೂರು ತಾಲ್ಲೂಕಿನ ನಿಲುವಾಗಿಲು ಗ್ರಾಮದ ಲೇ.ಸ್ವಾಮಿ ನಾಯಕ ಅವರ ಮಗ ಗಿರೀಶ್ (40), ಹುಂಡುವಾಡಿ ಗ್ರಾಮದ ಬುಂಡಯ್ಯ ಅವರ ಮಗ ಸಿ. ದಿನೇಶ್ (50) ನದಿಯಲ್ಲಿ ಕೊಚ್ಚಿ ಹೋದವರು. ಮತ್ತೊಬ್ಬ ವಕೀಲ ಕಟ್ಟೇಮಳಲವಾಡಿ ಗ್ರಾಮದ ಅಶೋಕ ನದಿ ಈಜಿ ದಡ ಸೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ವಕೀಲರು ಹುಣಸೂರು ತಾಲ್ಲೂಕಿನಿಂದ ಎಚ್.ಡಿ.ಕೋಟೆ ನ್ಯಾಯಾಲಯಕ್ಕೆ ತಮ್ಮ ಕಕ್ಷಿದಾರರ ಮೊಕದ್ದಮೆ ನ್ಯಾಯಲಯದ ವಿಚಾರಣೆ ಮೇಲೆ ಬಂದಿದ್ದರು. ಈ ಸಂದರ್ಭದಲ್ಲಿ ವಿಚಾರಣೆ ಮುಗಿದ ನಂತರ ಮೂವರು ತಮ್ಮ ಕಾರಿನಲ್ಲಿ ಕಬಿನಿ ಜಲಾಶಯ ವೀಕ್ಷಣೆ ಮಾಡಲು ಸರಗೂರು ಮಾರ್ಗವಾಗಿ ತೆರಳಿ, ಜಲಾಶಯ ವೀಕ್ಷಣೆ ಮಾಡಿದ ನಂತರ ಅದೇ ಮಾರ್ಗವಾಗಿ ವಾಪಸ್ ಸಾಗರೆ…

Read More

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ  ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಯತ್ನಿಸಿದರು. ಆದರೂ ಮನೆಯ ಗೇಟ್ ತಳ್ಳಿ ಬಾಗಿಲ ಬಳಿಗೆ ಧಾವಿಸಿದ ಎಬಿವಿಪಿ ಕಾರ್ಯಕರ್ತರು, ಪ್ರವೀಣ್ ಸಾವಿಗೆ ನ್ಯಾಯ ಬೇಕು. ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಗೃಹ ಸಚಿವರ ನಿವಾಸದೊಳಗೆ ಪ್ರವೇಶಿಸಲು ಪ್ರತಿಭಟನಾಕಾರರು ಯತ್ನಿಸಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ. 50ಕ್ಕೂ ಅಧಿಕ ಪ್ರತಿಭಟನಾಕಾರರು ಇದ್ದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಎಬಿವಿಪಿ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಲಾಯಿತು. ಘಟನೆಯಲ್ಲಿ 50ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ …

Read More