Subscribe to Updates
Get the latest creative news from FooBar about art, design and business.
- 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
- ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
- ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
- ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
- ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
- ಮುಂದಿನ ಬಜೆಟ್ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
- ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
- ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
Author: admin
ತುಮಕೂರು : ಬೈಕ್ ನಲ್ಲಿ ನಾಗರಹಾವು ಇದ್ದರೂ ಸವಾರನಿಗೆ ತಿಳಿಯಲೇ ಇಲ್ಲ. ಒಂದೂವರೆ ಕಿಲೋಮೀಟರ್ ಪ್ರಯಾಣಿಸಿದ ಬಳಿಕ ಹಾವು ಇರುವುದು ಬೆಳಕಿಗೆ ಬಂದಿದ್ದು, ಬಳಿಕ ಹಾವನ್ನು ಹೊರ ತೆಗೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದ ರಂಗಾಪುರ ಬಡಾವಣೆಯಲ್ಲಿ ಶರತ್ ಎಂಬುವವರ ಬೈಕ್ ನಲ್ಲಿ ನಾಗರಹಾವು ಸೇರಿಕೊಂಡಿತ್ತು. ಹಾವನ್ನು ಕಂಡು ಭಯ ಭೀತರಾದ ಶರತ್, ವಾರಂಗಲ್ ವನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣೆ ಸಂಸ್ಥೆಗೆ ಕರೆ ಮಾಡಿದರು. ಸಂಸ್ಥೆಯ ಉರಗ ತಜ್ಞ ದಿಲೀಪ್ ಸ್ಥಳಕ್ಕೆ ಭೇಟಿ ನೀಡಿ ದ್ವಿಚಕ್ರ ವಾಹನವನ್ನು ಪರಿಶೀಲನೆ ಮಾಡಿದರು. ನಂತರ ಬೈಕ್ ಅನ್ನು ಒಂದು ಕಿಲೋಮೀಟರ್ ದೂರದಲ್ಲಿ ಇರುವ ಬೈಕ್ ಗ್ಯಾರೇಜ್ ಗೆ ಕೊಂಡೊಯ್ದುರು. ಬೈಕ್ ಪಾರ್ಟ್ಸ್ ಗಳನ್ನು ಬಿಚ್ಚಿ ಅರ್ಧಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಸೇರಿಕೊಂಡಿದ್ದ ಹಾವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ದೇವರಾಯನ ದುರ್ಗ ಅರಣ್ಯಕ್ಕೆ ರವಾನಿಸಿದರು. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಪಾವಗಡ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಅವರ ಪಾವಗಡ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬಳಿಕ ಪಾವಗಡ ಬೆಟ್ಟದ ಮೇಲೆ ಬಾವುಟ ಹಾರಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರು ಬೈಕ್ ರಾಲಿ ನಡೆಸಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ರಾಜಸಾಬ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಾವಗಡ ತಾಲೂಕು ಅಧ್ಯಕ್ಷ ಲಕ್ಷ್ಮಿನಾರಾಯಣ, ಪಾವಗಡ ತಾಲೂಕು ಉಪಾಧ್ಯಕ್ಷ ನರಸಿ ಪಾಟೀಲ್, ಪಾವಗಡ ತಾಲೂಕು ಗೌರವಾಧ್ಯಕ್ಷ ಅಮೀರ್, ಮಹಿಳಾ ಘಟಕದ ಅಧ್ಯಕ್ಷ ಶಶಿಕಲಾ, ಯೂಥ್ ಪ್ರೆಸಿಡೆಂಟ್ ಪ್ರಶಾಂತ್ ಮತ್ತು ಲಚ್ಚಿ ಹಾಗೂ ಮಿರ್ಚಿ, ರಂಗನಾಯಕ, ಮಂಜು, ಶ್ರೀನಿವಾಸ್, ಚಂದ್ರು, ನರಸಿಂಹಮೂರ್ತಿ ಸ್ಮಾರ್ಟ್ ತುಮಕೂರು ಪೇಪರ್ ವರದಿಗಾರರು ಅನಿಲ್, ನಾಗಲಮಡಿಕೆ ಹೋಬಳಿ ಅಧ್ಯಕ್ಷರು ರಾಮಮೂರ್ತಿ, ನಾಗಲಮಡಿಕೆ ಹೋಬಳಿ ಉಪಾಧ್ಯಕ್ಷರು ಅಧ್ಯಕ್ಷರು ಮಲ್ಲಿಕಾರ್ಜುನ ನಾಗಲಮಡಿಕೆ, ನಾಗಲಮಡಿಕೆ ಹೋಬಳಿ ಗೌರವ ಅಧ್ಯಕ್ಷರು ಮಲ್ಲಿಕಾರ್ಜುನ ಗ್ಯಾದಿಗುಂಟೆ, ವಿನಿತ್ ಹರ್ಷವರ್ಧನ್, ವಿನೋದ್ ಕುಮಾರ್, ಆಕಾಶ್ ಹಾಗೂ ಎಲ್ಲಾ ಘಟಕದ…
ತುಮಕೂರು: ಪತ್ನಿ ವಿದೇಶಕ್ಕೆ ತೆರಳಿದ್ದರಿಂದ ಬೇಸತ್ತು ಪತಿ, ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಪಿ.ಎಚ್ ಕಾಲೋನಿಯ ನಿವಾಸಿ ಸಮಿವುಲ್ಲಾ ಮೃತ ದುರ್ದೈವಿ, ಈತನೊಂದಿಗೆ ವಿಷ ಸೇವಿಸಿದ್ದ ಮೂವರು ಮಕ್ಕಳು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು, ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸಮಿವುಲ್ಲಾನ ಪತ್ನಿ ಸಾಹೆರಾಬಾನು ಪತಿಯ ವಿರೋಧದ ನಡುವೆಯೂ ಮನೆ ಕೆಲಸಕ್ಕೆಂದು ಸೌದಿ ಅರೆಬಿಯಾಕ್ಕೆ ತೆರಳಿದ್ದಳು. ವಿದೇಶಕ್ಕೆ ತೆರಳಿದ ಬಳಿಕ ಪತ್ನಿಯ ವರ್ತನೆ ಬದಲಾಗಿತ್ತು. ಮನೆ ಕೆಲಸಕ್ಕೆಂದು ಹೋಗಿದ್ದ ಪತ್ನಿ ಸಾಹೆರಾಬಾನು ವಾಪಸು ಭಾರತಕ್ಕೆ ಬರಲು ನಿರಾಕರಿಸಿದ್ದಳು. ಸಾಲದಕ್ಕೆ ಪತಿ ಕರೆ ಮಾಡಿದಾಗಲೆಲ್ಲಾ ಕರೆ ಸ್ವೀಕರಿಸುತ್ತಿರಲಿಲ್ಲ. ಅಲ್ಲದೇ ಮೋಜು ಮಸ್ತಿ ಮಾಡುತ್ತ ಪತಿಗೆ ವಿಡಿಯೋ ಕಾಲ್ ಮಾಡಿ ರೇಗಿಸುತ್ತಿದ್ದಳು ಎನ್ನಲಾಗಿದೆ. ಇದರಿಂದಾಗಿ ಬೇಸತ್ತ ಪತಿ, ಹಲವು ಬಾರಿ ಕರೆದರೂ ಪತ್ನಿ ವಾಪಾಸು ಬರುತ್ತಿಲ್ಲವೆಂದು ನೊಂದು ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿದ್ದಾನೆ. ಆಸ್ಪತ್ರೆಗೆ ಸಾಗಿಸುವ ವೇಳೆ ಸಮಿವುಲ್ಲಾ ಮೃತ…
ತುಮಕೂರು: ನಗರದ ಟೌನ್ ಹಾಲ್ ಸರ್ಕಲ್ ನಲ್ಲಿರುವ ಗಣಪತಿ ದೇವಸ್ಥಾನದ ಎದುರು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತ ಸಾವರ್ಕರ್ ಫ್ಲೆಕ್ಸ್ ಅಳವಡಿಸಿದ್ದು, ಫ್ಲೆಕ್ಸ್ ವಿವಾದ ಮುಂದುವರಿದಿದೆ. ಮೊನ್ನೆ ರಾತ್ರಿ ಸಾವರ್ಕರ್ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದಿದ್ದರು. ಇದೀಗ ಮತ್ತೆ ಫ್ಲೆಕ್ಸ್ ಹಾಕಲಾಗಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯುದಂತೆ ಕಟ್ಟೆಚ್ಚರ ವಹಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ವಾತಂತ್ರ್ಯೋತ್ಸವ ದಿನ ಮುಗಿದರೂ ಸಾವರ್ಕರ್ ಫ್ಲೆಕ್ಸ್ ವಿವಾದ ಮುಂದುವರಿದಿದೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಬೆಳಗಾವಿಯಿಂದ ಕಷ್ಟ ಪರಿಸ್ಥಿತಿಯಲ್ಲಿರುವ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಗೆ ಕ್ರೀಡಾ ಮಾಶಾಸನ ಮಂಜೂರಾತಿಗಾಗಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದ ಅಧೀಕೃತ ಪಂದ್ಯಾವಳಿಯಲ್ಲಿ ಭಾಗವಹಿಸಿದ/ಪದಕ ವಿಜೇತ 50 ವರ್ಷ ಮೇಲ್ಟಟ್ಟ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಅಧೀಕೃತ ಪಂದ್ಯಾವಳಿಯಲ್ಲಿ ಭಾಗವಹಿಸಿದ/ಪದಕ ವಿಜೇತ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿಅರ್ಜಿಯನ್ನು ಉಪ ನಿರ್ದೇಶಕರಕಚೇರಿ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಜಿಲ್ಲಾಕ್ರೀಡಾಂಗಣ, ಬೆಳಗಾವಿ ಇವರಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ. 8660184052 ಅಥವಾ 0831-2950306 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು ಬಯಲಾಗಿದೆ. ಜಿಲ್ಲೆಯಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಸಧ್ಯ ಈ ದೋಣಿಗಳನ್ನು ಪೊಲೀಸರು ವಶಪಡಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಪೊಲೀಸರು ರಾಯಗಢದಲ್ಲಿ ಮೊದಲನೆಯ ದೋಣಿಯನ್ನು ಶ್ರೀವರ್ಧನ್ ತೆಹಸಿಲ್ನ ಹರಿಹರೇಶ್ವರ ಬೀಚ್ನಲ್ಲಿ ಮತ್ತು ಎರಡನೆಯದು ಭರನ್ ಖೋಲ್ ದಡದಲ್ಲಿ ಪತ್ತೆಯಾಗಿವೆ.ಹರಿಹರೇಶ್ವರ ಕಡಲತೀರದಲ್ಲಿ ಪತ್ತೆಯಾದ ಬೋಟ್ನಲ್ಲಿ 3 ಎಕೆ-47 ಪತ್ತೆಯಾಗಿದ್ದು, ಇನ್ನೊಂದು ಬೋಟ್ನಲ್ಲಿ ಲೈಫ್ ಜಾಕೆಟ್ಗಳು ಮತ್ತು ಕೆಲವು ದಾಖಲೆಗಳು ಪತ್ತೆಯಾಗಿವೆ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಈ ಬೋಟ್ ಗಳ ಮಾಲೀಕರು ಯಾರು, ಇಲ್ಲಿಗೆ ಹೇಗೆ ತಲುಪಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಭದ್ರತಾ ಕಂಪನಿಯೊಂದಿಗೆ ಸಂಪರ್ಕ? ಪ್ರಾಥಮಿಕ ಮಾಹಿತಿ ಪ್ರಕಾರ ಇದು ಒಮಾನ್ ದೇಶದ ಭದ್ರತಾ ಬೋಟ್ ಆಗಿದ್ದು, ರಾಯಗಢ ಕರಾವಳಿಗೆ ಬಂದಿದೆ. ಇದೀಗ ನಿರುಪಯುಕ್ತವಾಗಿರುವ ಈ ಬೋಟ್ನಿಂದ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಈ ಬಗ್ಗೆ ಪೊಲೀಸರು…
ಕೈ ಚೀಲಕ್ಕೆ 20 ರೂ. ವಸೂಲಿ ಮಾಡಿ ಭಾರೀ ಮುಜುಗರಕ್ಕೀಡಾದ ದೈತ್ಯ ಐಕಿಯಾ! ಐಕಿಯಾ ಲೋಗೋ ಹೊಂದಿರುವ ಕ್ಯಾರಿ ಬ್ಯಾಗ್ಗೆ 20 ರೂ. ಶುಲ್ಕ ವಿಧಿಸಿದ್ದ ಹೈದರಾಬಾದ್ನ ಐಕಿಯಾ ಮಳಿಗೆಗೆ ಗ್ರಾಹಕ ನ್ಯಾಯಾಲಯ 6,000 ರೂ. ದಂಡ ವಿಧಿಸಿದೆ. 35 ವರ್ಷ ವಯಸ್ಸಿನ ಸಿಕಂದರಾಬಾದ್ನ ಕಾನೂನು ವಿದ್ಯಾರ್ಥಿ ಕೆವಿನ್ ಸುಕೀರ್ತಿ ಅವರು 2020ರ ಜನವರಿಯಲ್ಲಿ ಹೈದರಾಬಾದ್ನ ಐಕಿಯಾ ಮಳಿಗೆಗೆ ಭೇಟಿ ನೀಡಿ 1071 ರೂ. ಮೌಲ್ಯದ ವಸ್ತುಗಳನ್ನು ಖರೀದಿಸಿದ್ದರು. ಈ ವೇಳೆ ಐಕಿಯಾ ತನ್ನದೇ ಹೆಸರಿರುವ ಕೈ ಚೀಲವನ್ನು ನೀಡಿ ಅದಕ್ಕೆ 20 ರೂ. ವಸೂಲಿ ಮಾಡಿತ್ತು. ಇದರ ವಿರುದ್ಧ ಕೆವಿನ್ ಗ್ರಾಹಕ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 12ರ ಅಡಿಯಲ್ಲಿ ದೂರು ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ, ಕ್ಯಾರಿ ಬ್ಯಾಗ್ಗೆ 20 ರೂ. ಶುಲ್ಕ ವಿಧಿಸಿದ್ದರಿಂದ ಗ್ರಾಹಕರು “ಸೇವೆಯ ಕೊರತೆಯಿಂದ ಮಾನಸಿಕ ನೋವನ್ನು ಅನುಭವಿಸಿದ್ದಾರೆ.” ಮತ್ತು ಗ್ರಾಹಕರ ವೆಚ್ಚದಲ್ಲಿ ಐಕಿಯಾ ತನ್ನ ಬ್ರ್ಯಾಂಡ್ನ ಹೆಸರನ್ನು ಜಾಹೀರಾತು ಮಾಡುವುದು ಅನೈತಿಕ ವ್ಯಾಪಾರ…
ಭಾರತೀಯ ಜನತಾ ಪಕ್ಷವು ಭಾರತ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದೆ. ಒಂದು ವೇಳೆ, ಭಾರತ ಹಿಂದೂ ರಾಷ್ಟ್ರವಾದರೆ ಇಂದು ಪಾಕಿಸ್ತಾನಕ್ಕೆ ಬಂದಿರುವ ಸ್ಥಿತಿಯೇ ನಾಳೆ ಭಾರತಕ್ಕೆ ಬರುತ್ತದೆ ಎಂದು ರಾಜಸ್ಥಾನ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಎಚ್ಚರಿಕೆ ನೀಡಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ವೀಕ್ಷಕರಾಗಿ ಕೆಲಸ ಮಾಡುತ್ತಿರುವ ಅಶೋಕ್ ಗೆಹ್ಲೋಟ್, ಕೇವಲ ಧರ್ಮದ ಆಧಾರದ ಮೇಲೆ ಚುನಾವಣೆಗಳಲ್ಲಿ ಗೆಲ್ಲಲು ಬಿಜೆಪಿ ಸದಾ ಕಾಲ ಯತ್ನಿಸುತ್ತಿದೆ ಎಂದು ಕಿಡಿ ಕಾರಿದರು. ಬಿಜೆಪಿ ಆಡಳಿತದ ಗುಜರಾತ್ ರಾಜ್ಯಕ್ಕೆ 2 ದಿನಗಳ ಭೇಟಿಗೆ ಆಗಮಿಸಿರುವ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಸಭೆ, ಸಮಾಲೋಚನೆ ನಡೆಸಿದರು. ಮುಂದಿನ 3 ತಿಂಗಳಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ಎದುರಾಗಲಿದ್ದು, ಸಿದ್ದತೆಯ ಕುರಿತು ಅಶೋಕ್ ಗೆಹ್ಲೋಟ್ ಪರಾಮರ್ಶೆ ನಡೆಸಿದರು. ಇದೇ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ನಾಯಕರ ಜೊತೆಗಿನ ಸಭೆ…
ಆನೆಗಳು ಬುದ್ಧಿವಂತ ಪ್ರಾಣಿಗಳು. ಭಾವನೆಗಳನ್ನು ತೋರಿಸುವ ಬುದ್ಧಿವಂತ ಜೀವಿಗಳು. ಇದೀಗ, ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಆನೆಯೊಂದು ತನ್ನ ಆವರಣದೊಳಗೆ ಆಕಸ್ಮಿಕವಾಗಿ ಬಿದ್ದ ಮಗುವಿನ ಶೂ ಅನ್ನು ಹಿಂದಿರುಗಿಸುತ್ತದೆ. ಈ ವಿಡಿಯೋದಲ್ಲಿನ ಘಟನೆ ಚೀನಾದ ಶಾಂಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ. ಇದನ್ನು Instagram ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ಇದು ಇಲ್ಲಿಯವರೆಗೆ 1.3 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಆನೆಯು ತನ್ನ ಸೊಂಡಿಲಿನಿಂದ ಆಕಸ್ಮಿಕವಾಗಿ ತನ್ನ ಆವರಣದೊಳಗೆ ಬೀಳಿಸಿದ ಮಗುವಿನ ಶೂ ಅನ್ನು ಎತ್ತಿ ಕೊಡುತ್ತದೆ. ಆನೆಯು ತನ್ನ ಸೊಂಡಿಲಿನ ಸಹಾಯದಿಂದ ಶೂ ಅನ್ನು ಹಿಂದಿರುಗಿಸುತ್ತದೆ, ಅಲ್ಲಿ ಒಬ್ಬ ವ್ಯಕ್ತಿಯು ಈ ಹೃದಯ ಸ್ಪರ್ಶಿ ದೃಶ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಪಾದರಕ್ಷೆಯನ್ನು ಹಿಂತಿರುಗಿಸಿದ ನಂತರ, ಆನೆಯು ಮಗು ಹುಲ್ಲು ಕೊಡುವವರೆಗೂ ಕಾಯುತ್ತದೆ. ಮಗು ಹುಲ್ಲನ್ನು ನೀಡಿದ ಬಳಿಕ ತನ್ನ ಸೊಂಡಿಲನ್ನು ಹಿಂತೆಗ್ದುಕೊಳ್ಳುತ್ತದೆ. ಪೂರ್ವ ಚೀನಾದಲ್ಲಿನ ಮೃಗಾಲಯದ ಆವರಣದಲ್ಲಿ ಈ ದೃಶ್ಯ ಸೆರೆ ಹಿಡಿಯಲಾಗಿದೆ. ಪೋಸ್ಟ್ ಮಾಡಿದ ನಂತರ, ಈ ವಿಡಿಯೋ 1.22 ಲಕ್ಷಕ್ಕೂ…
ಎರಡನೇ ಹಂತದ ಮೆಟ್ರೋ ಕಾಮಗಾರಿ: ಸುರಂಗ ಕೊರೆದು ಹೊರಬಂದ ಟಿಬಿಎಂ ಮಿಷನ್ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಎರಡನೇ ಹಂತದ ಕಾಮಗಾರಿ ವೇಗವನ್ನ ಪಡೆದುಕೊಂಡಿದೆ. ಗೊಟ್ಟಗೆರೆ ನಾಗವಾರ ಮಾರ್ಗವಾಗಿ ನಡೆಯುತ್ತಿರುವ ಸುಮಾರು 13 ಕಿ.ಮೀ ಸುರಂಗ ಕಾರ್ಯ ನಡೆಯುತ್ತಿದ್ದು 2022 ಫೆಬ್ರವರಿ 2ರಂದು ಕಂಟೋನ್ಮೆಂಟ್ ನಿಲ್ದಾಣದಿಂದ ಪಾಟರಿ ಟೌನ್ ನಿಲ್ದಾಣದ ಕಡೆ ಸುರಂಗ ಪ್ರವೇಶಿಸಿದ್ದ ವಿಂಧ್ಯಾ ಹೆಸರಿನ ಟಿಬಿಎಂ ಮಿಷನ್ ಗುರುವಾರ ಬೆಳಗ್ಗೆ 10:30ಕ್ಕೆ ತನ್ನ ಕಾರ್ಯವನ್ನ ಯಶಸ್ವಿಯಾಗಿ ಪೂರ್ಣಗೊಳಿಸಿ ಹೊರಬಂದಿದೆ. 6 ತಿಂಗಳ ಹಿಂದೆ ಕಾಮಗಾರಿ ಪ್ರಾರಂಭಿಸಿದ್ದ ವಿಂಧ್ಯಾ; ಕೊರೊನಾದ ಬಳಿಕ ವೇಗದ ಮಿತಿ ಹೆಚ್ಚಿಸಿರುವ ಎರಡನೇ ಹಂತದ ಮೆಟ್ರೋ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ನಮ್ಮ ಮೆಟ್ರೋ ನಿಗಮ ಪಣತೊಟ್ಟಿದೆ. ಹೀಗಾಗಿ ಕಳೆದ ಫೆಬ್ರವರಿ 2ರಂದು ಸುರಂಗ ಪ್ರವೇಶಿದ್ದ ಟಿಬಿಎಂ ವಿಂಧ್ಯಾ 900ಮೀಟರ್ ಉದ್ದ ಕಲ್ಲು ಬಂಡೆಗಳನ್ನ ಕೊರೆದು ಪ್ಯಾಟರಿ ಟೌನ್ ಬಳಿ ಹೊರ ಬಂದಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ 13 ಕಿ.ಮೀ ಸುರಂಗ ಕಾರ್ಯ: ಎರಡನೇ ಹಂತದ…