Subscribe to Updates
Get the latest creative news from FooBar about art, design and business.
- ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ
- ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
- ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
- ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
- ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್ ಲಾರ್ಡ್ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
- ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ
- ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು
- ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ
Author: admin
ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ಬಣಗಾರ ಹಳ್ಳಿ ಮತ್ತು ಪೆಮ್ಮನಹಳ್ಳಿ ಮಾರ್ಗದಲ್ಲಿ ಸೇತುವೆ ಕುಸಿದು ಕಾರಣ.ಸುಮಾರು 40 ಮನೆಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.ಎರಡು ಕಡೆಯಿಂದಲೂ ಸಂಚಾರ ಸ್ಥಗಿತಗೊಂಡಿದ್ದು, ಪೇಮ್ಮೇನಹಳ್ಳಿ ಶಾಲಾ ಮಕ್ಕಳು ನಾಲ್ಕು ದಿನದಿಂದ ಶಾಲೆಗೆ ಬರದೆ ಸೇತುವೆ ಬಳಿ ಬಂದು ಮನೆಗೆ ವಾಪಸ್ ಹೋಗುತ್ತಿರುವ ಘಟನೆ ನಡೆದಿದೆ. ಹಿರಿಯರು ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ಮುಖಂಡ ರವಿ ಯಾದವ್, ಒಂದುವಾರದಿಂದ ಮಕ್ಕಳು ಶಾಲೆಗೆ ಹೋಗುತ್ತಿಲ್ಲ, ಸೇತುವೆ ಕೊಚ್ಚಿ ಹೋಗಿದೆ, ತುಂಬಾನೇ ರಭಸದಿಂದ ನೀರು ಹರಿಯುತ್ತಿದೆ. ಮಕ್ಕಳನ್ನು ರಭಸವಾಗಿ ಹರಿಯುತ್ತಿರುವ ಹಳ್ಳ ದಾಟಿಸುವುದು ತುಂಬಾನೆ ಅಪಾಯಕಾರಿ. ಈ ವಿಚಾರಅರಿತು ಮಕ್ಕಳ ಪೋಷಕರು ಶಾಲೆಗೆ ಕಳುಹಿಸುತ್ತಿಲ್ಲ. ನಮ್ಮ ಊರಿಗೆ ಇದುವರೆಗೂ ಯಾವ ಅಧಿಕಾರಿಗಳು ಸಹ ಬಂದಿಲ್ಲ. ದಯಮಾಡಿ ಸಂಬಂಧಪಟ್ಟ ಇಲಾಖೆಯವರು ಬಂದು ಇಲ್ಲಿರುವ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ಮಾಧ್ಯಮ ಮೂಲಕ ತಮ್ಮ ಅಳಲು ತೋಡಿಕೊಂಡರು. ಶಾಲಾ ಮಕ್ಕಳು ಮಾತನಾಡಿ, ಶಾಲೆಗೆ ಹಾದುಹೋಗುವ ದಾರಿ…
ತುಮಕೂರು: ನಗರದ 1ನೇ ವಾರ್ಡ್ ವ್ಯಾಪ್ತಿಗೆ ಸೇರುವ ಪ್ರಸ್ತುತ ತಿಮ್ಮಲಾಪುರ ಕೆರೆಯಲ್ಲಿ ಸುಮಾರು 15 ಹಂದಿಜೋಗಿ ನಿವೇಶನ/ವಸತಿ ರಹಿತ ಕುಟುಂಬಗಳು ವಾಸವಿರುವ ಗುಡಿಸಲುಗಳಿದ್ದು, ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಗುಡಿಸಲುಗಳು ಜಲಾವೃತವಾಗಿವೆ. ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ವಸತಿ ರಹಿತ ಗುಡಿಸಲು ನಿವಾಸಿಗಳ ಪಾಡು ಹೇಳತೀರದಂತಾಗಿದೆ. ಇನ್ನೊಂದೆಡೆ ಮಳೆಯ ಕಾರಣ ಕೂಲಿ ಸಿಗದೇ ಜನರು ಸಂಕಷ್ಟಕ್ಕೀಡಾಗಿದ್ದರು. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮಾಡಿದ್ದ ಮನವಿಯ ಮೇರೆಗೆ ವರಮಹಾಲಕ್ಷ್ಮಿ ಹಬ್ಬದ ಈ ದಿನದಂದು ಸದರಿ ಸ್ಥಳಕ್ಕೆ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಸಿಬ್ಬಂದಿ ಮತ್ತು ಒಂದನೇ ವಾರ್ಡ್ ನ ಕಾರ್ಪೊರೇಟರ್ ಇಂದ್ರ ಕುಮಾರ್ ಮತ್ತು ಸ್ನೇಹಿತರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪಾಲಿಕೆಯ JCB ಯಂತ್ರದಿಂದ ಜಾಗದಲ್ಲಿ ಸ್ವಚ್ಛ ಮಾಡಿಸುವುದರೊಂದಿಗೆ ಪ್ರತಿ ಕುಟುಂಬಕ್ಕೆ ಒಂದೊಂದು ಟಾರ್ಪಾಲ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದೀಗ ಮತ್ತೆ ಹೊಸ ಸಮಸ್ಯೆ ಸೃಷ್ಟಿಯಾಗಿದ್ದು, ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಲ್ಲಿ…
ಪಾವಗಡ: ತಾಲ್ಲೂಕಿನ ನಿಡಗಲ್ಲು ಹೋಬಳಿಯ ಸಿ.ಕೆ.ಪುರ ಗ್ರಾಮದ ಹನುಮಂತ ದೇವರ ಕೆರೆಯು ಕಳೆದ 18 ವರ್ಷಗಳಲ್ಲಿ 2 ನೇ ಬಾರಿ ಕೋಡಿ ಹರಿಯುತ್ತಿದ್ದು, ಶಾಸಕರಾದ ವೆಂಕಟರಮಣಪ್ಪ ಹಾಗೂ ಸಿ.ಎನ್.ಆನಂದರಾವ್ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ನಂತರ ಮಾತನಾಡಿದ ಅವರು, ಈ ಕೆರೆ ಕೊಡಿ ಬಿದ್ದು ಸುಮಾರು18 ವರ್ಷಗಳಾಗಿದೆ. ಈ ಊರಿನ ಗ್ರಾಮಸ್ಥರಿಗೆ ಎಲ್ಲರಿಗೂ ಒಳ್ಳೆಯದಾಗಲಿ ರೈತರು ಜಮೀನುಗಳಲ್ಲಿ ಎಲ್ಲರೂ ಬೆಳೆ ಬೆಳೆಯಲು ಇಂದು ನಾನು ಶುಭ ಹಾರೈಸುತ್ತೇನೆ ಎಂದು ತಿಳಿಸಿದರು. ಶಾಸಕರಾದ ವೆಂಕಟರಮಣಪ್ಪನವರು ಮಾತನಾಡಿ, 2018ರಲ್ಲಿ ಕೆರೆ ಕೋಡಿ ಬಿದ್ದಿದ್ದು, ಆಗ ಬಂದು ನಾನು ಈ ಕೆರೆಗೆ ಬಾಗಿನ ಅರ್ಪಿಸಿದ್ದೆ. ಇಂದು ಈ ಕೆರೆ ಕೊಡಿ ಬಿದ್ದಿರುವುದರಿಂದ ನನಗೆ ಸಂತೋಷವಾಗಿದೆ. ಸಿ.ಕೆ.ಪುರ ಕೆರೆ, ಬ್ಯಾಡನೂರ ಕೆರೆ, ಇವೆಲ್ಲ ನೀರು ಸೇರಿ ಪಳವಳ್ಳಿ ಕೆರೆಗೆ ನೀರು ಹೋದರೆ, ಆ ಕೆರೆ ಸಹ ಕೋಡಿ ಬೀಳುತ್ತದೆ. ತುಂಬಿದ ಕೆರೆ ಕಟ್ಟೆಗಳಿಗೆ , ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ ಎಂದರು.…
ನಾಳೆಯ ಮೇಷ ರಾಶಿ ಭವಿಷ್ಯ : ಕೆಲವು ಸಮಸ್ಯೆಗಳಿರುತ್ತವೆ ಆದರೆ ಸಂಭಾಷಣೆಯ ಮೂಲಕ ನೀವು ಅನೇಕ ಸಮಸ್ಯೆಗಳನ್ನು ಪರಿಹರಿಸುತ್ತೀರಿ. ನಿಮ್ಮ ಸಮಯವು ಸಂಬಂಧಿಕರಿಗೆ ಸಹಾಯ ಮಾಡಲು ಸಹ ವ್ಯಯಿಸುತ್ತದೆ. ಇದನ್ನು ಮಾಡುವುದರಿಂದ ನೀವು ಸಂತೋಷವಾಗಿರುತ್ತೀರಿ. ಒಂಟಿತನ ಹೆಚ್ಚಾಗಬಹುದು. ನಿಮ್ಮ ಕೋಪವು ಇತರರಿಂದ ಹೆಚ್ಚಾಗಬಹುದು, ಆದರೆ ಅದು ನಿಮಗೆ ಹಾನಿ ಮಾಡಬಾರದು ಎಂಬುದನ್ನು ನೆನಪಿನಲ್ಲಿಡಿ. ನಿಮ್ಮ ಹಿಡಿತದಲ್ಲಿರುವ ವಿಷಯಗಳನ್ನು ಮಾತ್ರ ನೆನಪಿನಲ್ಲಿಟ್ಟುಕೊಳ್ಳಬೇಕು. ನಿರೀಕ್ಷೆಯಂತೆ ನಿಮ್ಮ ಪರವಾಗಿ ವಿಷಯಗಳನ್ನು ಮಾಡಲು ಇಚ್ಛಾಶಕ್ತಿಯನ್ನು ಇಟ್ಟುಕೊಳ್ಳಿ. ನಾಳೆಯ ವೃಷಭ ರಾಶಿ ಭವಿಷ್ಯ : ಯಾವುದೇ ಆಸ್ತಿ, ಹಂಚಿಕೆ ಸಂಬಂಧಿತ ಸಮಸ್ಯೆಗಳು ನಡೆಯುತ್ತಿದ್ದರೆ, ಅದು ಪರಸ್ಪರ ಸಾಮರಸ್ಯದಿಂದ ಸುಲಭವಾಗಿ ಪರಿಹರಿಸಲ್ಪಡುತ್ತದೆ. ಕಾರ್ಯನಿರತತೆಯ ಹೊರತಾಗಿಯೂ, ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಸಂಪರ್ಕವಿರುತ್ತದೆ. ಕುಟುಂಬ ಸಮೇತ ಯಾವುದೇ ಧಾರ್ಮಿಕ ಸ್ಥಳಕ್ಕೆ ಹೋಗುವುದರಿಂದ ಎಲ್ಲರಿಗೂ ಸುಖ ಶಾಂತಿ ಸಿಗುತ್ತದೆ. ಕುಟುಂಬದ ಸದಸ್ಯರ ಒತ್ತಡದಿಂದಾಗಿ ನೀವು ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ವೈಯಕ್ತಿಕ ಜೀವನದಲ್ಲಿ ಸ್ಥಿರತೆ ಇರುತ್ತದೆ. ಆದರೂ, ವಿಷಯಗಳು ಪ್ರಗತಿಯಾಗಲು ಸಮಯ ತೆಗೆದುಕೊಳ್ಳಬಹುದು. ನಾಳೆಯ…
ಐದು ರಾಜ್ಯಗಳಲ್ಲಿ 164 ದರೋಡೆಗಳನ್ನು ಮಾಡಿರುವ 54 ವರ್ಷದ ವ್ಯಕ್ತಿ ಮತ್ತು ಆತನಿಗೆ ಸಹಕಾರ ನೀಡಿದ ಆತನ ಕುಟುಂಬದವರನ್ನು ಬೆಂಗಳೂರಿನ ರಾಜಾಜಿನಗರದ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳಲ್ಲಿ ಅಪರಾಧ ಚಟುವಟಿಕೆ ನಡೆಸಿದ್ದು, 40 ವರ್ಷಗಳ ಅಪರಾಧದ ಇತಿಹಾಸ ಹೊಂದಿರುವ ಆರೋಪಿ ಪ್ರಕಾಶ್ ಎಂಬುವವನನ್ನು ಬಂಧಿಸಿದ್ದಾರೆ. ಆರೋಪಿ ಪ್ರಕಾಶ್ ಜೊತೆಗೆ ಅವರ ಪುತ್ರರು, ಅಳಿಯ ಮತ್ತು ಸಹೋದರನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. 10ನೇ ವಯಸ್ಸಿನಿಂದಲೂ ಕಳ್ಳನಾಗಿದ್ದ ಪ್ರಕಾಶ್ಗೆ 20ಕ್ಕೂ ಹೆಚ್ಚು ಬಾರಿ ಜೈಲು ಶಿಕ್ಷೆಯಾಗಿದೆ. ವರದಿಯ ಪ್ರಕಾರ ಆರೋಪಿ ಪ್ರಕಾಶ್ ತನ್ನ 10 ನೇ ವಯಸ್ಸಿನಿಂದಲೂ ಕ್ರಿಮಿನಲ್ ಚಟುವಟಿಕೆ ಪ್ರಾರಂಭಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ 20 ಕ್ಕೂ ಹೆಚ್ಚು ಬಾರಿ ಜೈಲು ಶಿಕ್ಷೆ ಅನುಭವಿಸಿದ್ದಾನೆ. ಆತನ ಕುಟುಂಬದ ಸದಸ್ಯರ ವಿರುದ್ಧವೂ ಅನೇಕ ಪ್ರಕರಣಗಳಿವೆ. ಪ್ರಕಾಶ್ ಅವರಿಗೆ ಮೂರು ಬೇರೆ ಬೇರೆ ಊರುಗಳಲ್ಲಿ (ಬಳ್ಳಾರಿ, ಕೋಲಾರ ಮತ್ತು ಶಿವಮೊಗ್ಗ) ಮೂವರು ಪತ್ನಿಯರಿದ್ದು, ಏಳು ಮಂದಿ…
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಮೆಮು ರೈಲಿನ ಬಳಕೆಯನ್ನು ಉತ್ತೇಜಿಸಲು ನಾಗರಿಕ ಗುಂಪುಗಳು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ಕೆಐಎಗೆ 100ಕ್ಕೂ ಹೆಚ್ಚು ಜನರು ರೈಲಿನಲ್ಲಿ ಪ್ರಯಾಣಿಸಿದರು. ರೈಲಿನಲ್ಲಿ ಸವಾರಿ ಮಾಡಿದ ಸಿಟಿಜನ್ಸ್ ಫಾರ್ ಸಿಟಿಜನ್ಸ್ನ ರಾಜ್ಕುಮಾರ್ ದುಗರ್ ಅವರು, ಮೆಮು ರೈಲುಗಳು ವಿಮಾನ ನಿಲ್ದಾಣಕ್ಕೆ ಉತ್ತಮ ಸಾರಿಗೆ ವಿಧಾನವಾಗಿದೆ. 30 ರೂ. ಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದು. ಇದು ಕ್ಯಾಬ್ಗಳು ಮತ್ತು ಬಸ್ಗಳಿಗಿಂತ ಹೆಚ್ಚು ಮಿತವ್ಯಯಕಾರಿಯಾಗಿದೆ. ಅಲ್ಲದೆ ಇದು ಸುರಕ್ಷಿತವಾಗಿದೆ. ವಾಶ್ರೂಮ್ಗಳು ಮತ್ತು ಬ್ಯಾಗ್ಗಳಿಗೆ ಸಾಕಷ್ಟು ಸ್ಥಳಾವಕಾಶವಿರುವ ಏಕೈಕ ಸಾರಿಗೆ ವಿಧಾನವಾಗಿದೆ. ಯಲಹಂಕ ನಿಲ್ದಾಣದಿಂದ ಸುಮಾರು 30 ವಿದ್ಯಾರ್ಥಿಗಳು ರೈಲನ್ನು ಹತ್ತಿದ್ದಾರೆ. 19 ವರ್ಷದ ದಿವ್ಯಾಕುಮಾರಿ ಮೊದಲ ಬಾರಿಗೆ ಮೆಮು ರೈಲಿನಲ್ಲಿ ಪ್ರಯಾಣಿಸಿ, ನಾನು ಸ್ಥಳೀಯ ರೈಲಿನಲ್ಲಿ ಪ್ರಯಾಣಿಸುತ್ತಿರುವುದು ಇದು ಮೊದಲು. ಈ ರೈಲು ಸೇವೆ ವಿದ್ಯಾರ್ಥಿಗಳಿಗೆ ಪಾಕೆಟ್ ಸ್ನೇಹಿಯಾಗಿದೆ. ಅಲ್ಲದೆ ನಾನು ಸುರಕ್ಷಿತವಾಗಿರುತ್ತೇನೆ. ಮುಖ್ಯವಾಗಿ ನಾನು ಟ್ರಾಫಿಕ್ ಜಾಮ್ಗಳಲ್ಲಿ ಸಿಲುಕಿಕೊಳ್ಳಬೇಕಾಗಿಲ್ಲ ಎಂದು ಹರ್ಷ ವ್ಯಕ್ತಪಡಿಸಿದರು. ಬೆಂಗಳೂರಿನ ಖಾಸಗಿ ಸಂಸ್ಥೆಯ…
ನವದೆಹಲಿ: ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು ಇಂದು , ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು.ಆದರೇ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ, ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಂಪಾಜೆ: ಪಯಶ್ವಿನಿ ನದಿಯಲ್ಲಿ ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಡಿಡೀರ್ ಪ್ರವಾಹ ಉಂಟಾಗಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ, ಬೃಹತ್ ಗಾತ್ರದ ಮರಗಳೂ ಕೊಚ್ಚಿ ಬಂದ ಘಟನೆ ಆ.29ರ ಬೆಳಿಗ್ಗಿನ ಜಾವ ಸಂಪಾಜೆ ಸುತ್ತಮುತ್ತ ನಡೆದಿದೆ. ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ನೀರು ತುಂಬಿ ಹರಿದು ಹಲವು ಕಡೆಗಳಲ್ಲಿ ನದೀ ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತವಾಯಿತು. ಬಳಿಕ ಈ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಭಾರೀ ಗಾತ್ರದ ಮರಗಳು ಪ್ರವಾಹ ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ. ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಸಂಪಾಜೆ ಭಾಗದಲ್ಲಿ ಮಳೆ ಕಡಿಮೆ ಇದ್ದರೂ ಪ್ರವಾಹ ಬಂದು ನದಿ ಉಕ್ಕಿ ಹರಿದು ನೀರು ನುಗ್ಗಿದ ಕಾರಣ ಜನರಲ್ಲಿ ಆತಂಕ ಸೃಷ್ಠಿಯಾಯಿತು. ಕಲ್ಮಕಾರು , ಕೊಲ್ಲಮೊಗ್ರುನಲ್ಲೂ ಇಂತಹದೇ ಪರಿಸ್ಥಿತಿ ನಿರ್ಮಾಣವಾಗಿದೆ.…
* 1612- ಸೂರತ್ ಕದನದಲ್ಲಿ ಬ್ರಿಟಿಷರು ಪೋರ್ಚುಗೀಸರನ್ನು ಸೋಲಿಸಿದರು. * 1947- ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಡಿ ಭಾರತದಲ್ಲಿ ‘ಶಿಕ್ಷಣ ಇಲಾಖೆ’ಯನ್ನು ಮರುಸ್ಥಾಪಿಸಲಾಯಿತು. * 1947- ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ರಚಿಸಲು ಭಾರತದ ಸಂವಿಧಾನ ಸಭೆಯಿಂದ ಕರಡು ಸಮಿತಿ ರಚಿಸಲಾಯಿತು. * 1947 – ಚೌಧರಿ ಚರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಲೋಕದಳ ಪಕ್ಷದ ಸ್ಥಾಪನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೇಶಾದ್ಯಂತ ಇಂದು ರಾಷ್ಟ್ರೀಯ ಕ್ರೀಡಾದಿನ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಆಗಸ್ಟ್ 29ರಂದು ಈ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ದಿನವನ್ನೇ ಕ್ರೀಡಾ ದಿನವಾಗಿ ಆಯ್ಕೆ ಮಾಡಿರುವುದಕ್ಕೆ ಒಂದು ವಿಶೇಷವಾದ ಕಾರಣವಿದೆ. ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ಏಕೆ? ಭಾರತದ ಹಾಕಿ ದಂತಕತೆ ಮೇಜರ್ ಧ್ಯಾನ್ ಚಂದ್ ಅವರು ಆಗಸ್ಟ್ 29 ರಂದು ಜನಿಸಿರುವುದರಿಂದ, ಅವರ ಹುಟ್ಟುಹಬ್ಬವನ್ನು ಪ್ರತಿವರ್ಷ ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಆಗಸ್ಟ್ 29, 1905ರಂದು ಮೇಜರ್ ಧ್ಯಾನ್ ಚಂದ್ ಅಹಮದಾಬಾದ್ನಲ್ಲಿ ಜನ್ಮ ತಾಳಿದರು. ವಿಶ್ವ ಕಂಡ ಅಪರೂಪದ, ಅತ್ಯುತ್ತಮ ಹಾಕಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವರು ಸುಮಾರು 400ಕ್ಕೂ ಅಧಿಕ ಅಂತಾರಾಷ್ಟ್ರೀಯ ಗೋಲು ಗಳಿಸಿ ವಿಶೇಷ ದಾಖಲೆಯನ್ನೂ ತನ್ನ ಹೆಸರಿಗೆ ಬರೆದುಕೊಂಡಿದ್ದರು. 2012 ರಲ್ಲಿ ಭಾರತ ಸರ್ಕಾರ ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಪರಿಚಯಿಸಿತ್ತು. ಇದು ದೇಶದಲ್ಲಿ ಕ್ರೀಡಾಭಿಮಾನಿಗಳನ್ನು ಆಕರ್ಷಿಸುತ್ತಿದೆ. ಕ್ರೀಡೆಯಿಂದಾಗುವ ಅನುಕೂಲಗಳನ್ನು ತಿಳಿಸಿ ಯುವಜನತೆಯಲ್ಲಿ ಕ್ರೀಡಾಪ್ರೇಮ ಹೆಚ್ಚಿಸುವುದೇ ಈ ದಿನದ ಉದ್ದೇಶ.. *…