Subscribe to Updates
Get the latest creative news from FooBar about art, design and business.
- 45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ
- ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ
- ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ
- ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ
- ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ
- ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ
- ಜ.27ರಂದು ಸವಿತಾ ಮಹರ್ಷಿ ಜಯಂತಿ
- ಒಲಂಪಿಯಾಡ್ ಪರೀಕ್ಷೆ: ವರಿನ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
Author: admin
ತುಮಕೂರು: ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸರಣಿ ಕಳತನ ನಡೆಸಿರುವ ಘಟನೆ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಡೆದಿದೆ. ಎಪಿಎಂಸಿಯಲ್ಲಿನ 4 ಅಂಗಡಿಗಳ ರೋಲಿಂಗ್ ಷಟರ್ ಮೀಟಿ ಕಳ್ಳತನ ನಡೆಸಲಾಗಿದ್ದು, ಗಡಾರಿಯಿಂದ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ಗಳನ್ನೇ ಟಾರ್ಗೆಟ್ ಮಾಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸಪ್ತಗಿರಿ ಎಂಟರ್ಪ್ರೈಸಸ್, ಏಳುಕೋಟಿ ಮೈಲಾರಲಿಂಗೇಶ್ವರ ಸ್ವಾಮಿ ಟ್ರೇಡರ್ಸ್, ಸಂಜಯ್ ಟ್ರೇಡರ್ಸ್ , ಚಂದನ ಟ್ರೇಡರ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ. ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಆವಣದಲ್ಲಿ ಆವರಣದಲ್ಲಿ 40ಕ್ಕೂ ಹೆಚ್ಚು ಅಂಗಡಿಗಳಿವೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹುಳಿಯಾರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ತುಮಕೂರಿನ ಹೀರೇಹಳ್ಳಿಯ ಓಂಕಾರೇಶ್ವರ ದೇವಸ್ಥಾನದ ಅರ್ಚಕ ಎಚ್.ಆರ್.ಚಂದ್ರಶೇಖರ್ ಅವರು ಇಸ್ಲಾಮ್ ಗೆ ಮತಾಂತರವಾಗಲು ನಿರ್ಧರಿಸಿದ್ದು, ಆದರೆ ಸಕ್ಕರೆ ಕಾಯಿಲೆ ಹಿನ್ನೆಲೆಯಲ್ಲಿ ಮುಂಜಿ ಮಾಡಿಸಲು ಸಾಧ್ಯವಾಗದೇ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ತುಮಕೂರು ಗ್ರಾಮಾಂತರದ ಹೀರೇಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಪತ್ರಿಕೆಯಲ್ಲಿ ಅಧಿಕೃತ ಪ್ರಕಟಣೆ ಕೊಟ್ಟು ಮತಾಂತರವಾಗಿದ್ದ ಎಚ್.ಆರ್.ಚಂದ್ರಶೇಖರಯ್ಯ, ಮತಾಂತರ ಗೊಂಡು, ಮುಬಾರಕ್ ಪಾಷಾ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರು. ಆದರೆ ಸಕ್ಕರೆ ಕಾಯಿಲೆ ಇರೋದ್ರಿಂದಾಗಿ ಮುಂಜಿ ಮಾಡಿಸಿಕೊಳ್ಳಲು ಸಾಧ್ಯವಾಗದೇ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮುಂಜಿ ಮಾಡಿದ್ರೆ ಮಾತ್ರ ಮುಸ್ಲಿಂಮರಲ್ಲಿ ಸರಿಯಾಗಿ ಶವ ಸಂಸ್ಕಾರ ಮಾಡೋದು ಎಂದ ಚಂದ್ರಶೇಖರ್, ಸೊಗಡು ಶಿವಣ್ಣರ ಮನವೊಲಿಕೆ ಹಾಗೂ ಮುಂಜಿಗೆ ಅಂಜಿ ತಾನು ವಾಪಸ್ ಬಂದಿದ್ದೇನೆ ಎಂದು ತಿಳಿಸಿದರು. ಅಣ್ಣತಮ್ಮಂದಿರರ ನಡುವಿನ ಆಸ್ತಿ ಜಗಳದಿಂದ ಬೇಸತ್ತಿದ್ದ ಚಂದ್ರಶೇಖರ್, ತನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ ಎಂದು ನೊಂದಿದ್ದರು. ಹೀಗಾಗಿ ಮತಾಂತರದ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಮತಾಂತರ ಸುದ್ದಿ ಕೇಳುತಿದ್ದಂತೆ ಮನೆಗೆ ದೌಡಾಯಿಸಿದ ಮಾಜಿ ಸಚಿವ ಸೊಗಡು ಶಿವಣ್ಣ…
‘ಸಿದ್ದರಾಮಯ್ಯ ಅವರು ಮಾಂಸ ಸೇವಿಸಿ, ದೇವಸ್ಥಾನಕ್ಕೆ ತೆರಳಿರುವುದು ತಪ್ಪಲ್ಲ. ಆ ವಿಚಾರ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡುವುದು ಸರಿಯಲ್ಲ’ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿ, ‘ಹಿಂದೂಗಳಲ್ಲಿ ಸಾಕಷ್ಟು ಜನ ಮಾಂಸಹಾರಿಗಳಿದ್ದಾರೆ. ಬಿಜೆಪಿಯವರಿಗೆ ಚರ್ಚೆ ಮಾಡಲು ಬೇರೆ ವಿಷಯಗಳಿಲ್ಲ. ಇಂತಹ ವಿಷಯಗಳನ್ನು ಬಿಟ್ಟು, ಸಾವರ್ಕರ್ ಅವರ ಬಗ್ಗೆ ಚರ್ಚಿಸಲಿ’ ಎಂದಿದ್ದಾರೆ. ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ’ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡರು. ನಾವು ಮನೆಮನೆಗೆ ತೆರಳಿ ಸಾವರ್ಕರ್ ಬಗ್ಗೆ ತಿಳವಳಿಕೆ ನೀಡುತ್ತೇವೆ. ಪ್ರತಿ ಗಣೇಶ ಪೆಂಡಾಲ್ನಲ್ಲೂ ಸಾವರ್ಕರ್ ಫೋಟೊ ಇಡುತ್ತೇವೆ ಎಂದರು. ‘ನಮ್ಮಲ್ಲಿ ಎಲ್ಲಾ ರೀತಿಯ ಭಕ್ತರಿದ್ದಾರೆ. ಮಾಂಸ ಸೇವನೆ ವಿವಾದದ ಬಗ್ಗೆ ನಾನು ಮಾತನಾಡುವುದಿಲ್ಲ’ ಎಂದು ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಒಂದರ ಮೇಲೊಂದು ಮತ್ತೊಂದು ಎಂಬಂತೆ ಒಟ್ಟು 4 ಚಿರತೆಗಳು ಪ್ರತ್ಯಕ್ಷವಾಗಿವೆ. ಸದ್ಯ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಸಮೀಪ ಮೊಳವಾಡದ ಹೊಲದಲ್ಲಿ ಭಾನುವಾರ ಕಾಣಿಸಿಕೊಂಡಿದೆ. ಮೊಳವಾಡ – ಶಿರಗುಪ್ಪಿ ರಸ್ತೆಯ ಪಕ್ಕದಲ್ಲಿರುವ ಹೊಲದಲ್ಲಿ ಚಿರತೆ ಕಾಣಿಸಿದೆ. ರೈತರು ಹೊಲದಲ್ಲಿ ನೋಡಿದಾಗ ಹೆಜ್ಜೆ ಗುರುತುಗಳು ಕಾಣಿಸಿವೆ. ಹೀಗಾಗಿ ಗ್ರಾಮದಲ್ಲಿ ಆತಂಕ ಮನೆಮಾಡಿದೆ. ಗ್ರಾಮದಲ್ಲಿ ಡಂಗೂರ ಹೊಡೆಸಿ,ಗ್ರಾಮದ ಹೊಲದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಹೊಲಕ್ಕೆ ಹೋಗುವವರು ಎಚ್ಚರಿಕೆ ವಹಿಸಬೇಕು ಎಂದು ಗ್ರಾಮದ ಎಲ್ಲೆಡೆ ಡಂಗೂರ ಎಚ್ಚರಿಸಲಾಗಿದೆ. ಈ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಮಾಹಿತಿ ನೀಡಿದ್ದು, ಮೊಳವಾಡದಲ್ಲಿ ಚಿರತೆ ಕಾಣಿಸಿಕೊಂಡಿರುವ ಮಾಹಿತಿ ಬಂದಿದ್ದು, ತಕ್ಷಣದಿಂದಲೇ ನಾವು ಚಿರತೆ ಶೋಧದಲ್ಲಿ ತೊಡಗಿದ್ದೇವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯಪುರ : ನಗರದಲ್ಲಿ ಸಾವರ್ಕರ್ ಫೋಟೋ ವಿವಾದ ತಾರಕ್ಕೇರಿದ್ದು, ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿ ಅಪರಿಚಿತರು ಪರಾರಿಯಾಗಿರುವ ಘಟನೆ ನಡೆದಿದೆ. ವಿಜಯಪುರದ ಜಲನಗರದ ಕಾಲೋನಿಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಅಪರಿಚಿತರು ತಡರಾತ್ರಿ ಕಾಂಗ್ರೆಸ್ ಕಚೇರಿಯ ಪ್ರವೇಶದ್ವಾರ ಹಾಗೂ ಕಿಟಕಿಗಳಿಗೆ ಸಾವರ್ಕರ್ ಫೋಟೋ ಅಂಟಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಂಗ್ರೆಸ್ ಕಚೇರಿಯಲ್ಲಿ ಅಂಟಿಸಿದ್ದ ಸಾವರ್ಕರ್ ಫೋಟೋ ತೆರವುಗೊಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 23, 24 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 24 ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಬಳ್ಳಾಪುರ : ವಿವಿಧ ಕಾರಣಗಳಿಗಾಗಿ ಎರಡು ಬಾರಿ ಮುಂದೂಡಿಕೆಯಾಗಿದ್ದ ಬಿಜೆಪಿ ಜನೋತ್ಸವಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಸೆಪ್ಟೆಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ಎರಡರಿಂದ ಮೂರು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಬೇಕಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಕಾರಣಕ್ಕೆ ಮುಂದೂಡಿಕೆಯಾಗಿತ್ತು. ಬಳಿಕ ಅಗಸ್ಟ್ 28ರಂದು ಜನೋತ್ಸವಕ್ಕೆ ದಿನಾಂಕ ನಿಗದಿಯಾಗಿತ್ತಾದರೂ ಆ ಸಂದರ್ಭದಲ್ಲಿ ಗೌರಿ – ಗಣೇಶ ಹಬ್ಬ ಸಮೀಪದಲ್ಲಿರುವುದರಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲು ಕಷ್ಟವಾಗುತ್ತದೆ ಎಂಬ ಕಾರಣದಿಂದ ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಮೈಸೂರಿನ ವಿಶ್ವ ಮಾನವ ಸಂಗೀತ ಪ್ರತಿಷ್ಠಾನವು ಉತ್ತರ ಪ್ರದೇಶದ ವಾರಣಾಸಿ ಯ ಬನಾರಸ್ ಹಿಂದೂ ವಿವಿ ಯಲ್ಲಿ ನಾಲ್ವಡಿ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ರಾದ ಹೆಚ್ ಎಲ್ ಯಮುನಾ ತಿಳಿಸಿದ್ದಾರೆ. ಬನಾರಸ್ ವಿವಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಾಯ ಮಾಡಿದ್ದರು.ಮತ್ತು ಸಹ ಸ್ಥಾಪಕ ರಾಗಿದ್ದಾರೆ ಹಾಗಾಗಿ ಅವರನ್ನು ಸ್ಮರಿಸಲು ಈ ಕಾರ್ಯಕ್ರಮ ಮಾಡುತಿದ್ದು ,ಕನ್ನಡದ ಖ್ಯಾತ ಗಾಯಕ ಲಕ್ಷ್ಮಿರಾಮ್ ರವರು 350 ಜನ ಕಲಾವಿದರನ್ನು ಜಾನಪದ ಅಕಾಡೆಮಿಯ ಸದಸ್ಯರಾದ ಲಕ್ಷ್ಮಿ ದೇವಮ್ಮ ರವರ ಸಹಕಾರ ದೊಂದಿಗೆ ನಾಲ್ವಡಿಗೀತೆ,ಶಿವನಗೀತೆ ದೇಶ ಭಕ್ತಿ ಗೀತೆ.ಕಂಸಾಳೆ. ಕೊಂಬು.ಕಹಳೆ.ಕೊಲಾಟ ಮುಂತಾದವುಗಳನ್ನು ಸಂಯೋಜನೆ ಮಾಡಿದ್ದಾರೆ. ಕಾರ್ಯಕ್ರಮ 26 ಆಗಸ್ಟ್ ಮಧ್ಯಾಹ್ನ 3 ಗಂಟೆಗೆ ಬನಾರಸ್ ವಿವಿಯ ಪಂಡಿತ್ ರವಿ ಶಂಕರ್ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ ಎಂದರು. ಅತಿಥಿಗಳಾಗಿ ಬಿಜಿಎಸ್ ವಾರಣಾಸಿ ಯ ಶ್ರೀ ವಿಜಯೆಂದರ್ ನಾಥ ಸ್ವಾಮೀಜಿ.ವಿಹನ್ಗಮ ಯೋಗ ದ ಮುಖ್ಯಸ್ಥ ರಾದ ಶ್ರೀಮತಿ ಸುನೀತಾ ಸಿಂಗ್.ಕರ್ನಾಟಕ ಖಾದಿ ಮಂಡಳಿ ಯ ಆಡಳಿತ…
ಪುನೀತ್ ರಾಜ್ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರುವ ‘ಲಕ್ಕಿಮ್ಯಾನ್’ ಚಿತ್ರ ಸೆ.9ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಸದ್ಯ ಚಿತ್ರ ಪ್ರಚಾರದಲ್ಲಿ ಬ್ಯುಸಿ ಆಗಿರುವ ಡಾರ್ಲಿಂಗ್ ಕೃಷ್ಣ, ‘ಅಪ್ಪು ಸರ್ ಜತೆಗೆ ನಟಿಸಿದ್ದು, ಮರೆಯಲಾಗದ ಅನುಭವ’ ಎಂದು ಹೇಳಿದ್ದಾರೆ. ‘ಜಾಕಿ’ ಸಿನಿಮಾದ ಮೂಲಕ ನನ್ನ ಕೆರಿಯರ್ ಶುರುವಾಯಿತು. ಪುನೀತ್ ಅವರು ನಾನು ತುಂಬ ಇಷ್ಟಪಡುವ ನಟ. ಈ ಚಿತ್ರದುದ್ದಕ್ಕೂ ನಮ್ಮಿಬ್ಬರ ಮಾತು, ದೃಶ್ಯಗಳಿವೆ. ಇದು ನನಗೆ ಬಹಳ ಖುಷಿ ನೀಡಿತು’ ಎಂದು ಅಭಿಪ್ರಾಯಪಟ್ಟರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯ ಪತ್ರಕರ್ತ, ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರು ನಿಧನರಾಗಿದ್ದಾರೆ. 45 ವರ್ಷದ ಅವರು, ಇಂದು ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕುಸಿದು ಬಿದ್ದಿದ್ದರು. ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸುಮಾರು 20 ವರ್ಷಗಳ ಕಾಲ ನಾಡಿನ ಹಲವು ಕನ್ನಡದ ಪತ್ರಿಕೆಗಳು ಹಾಗೂ ಟಿವಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ವರ್ಷದಿಂದ ಬೊಮ್ಮಾಯಿ ಅವರ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.ಬೊಮ್ಮಾಯಿ ಸಿಎಂ ಆದ ಬಳಿಕ 2021ರ ಆಗಸ್ಟ್ ನಲ್ಲಿ ಅವರ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy