Subscribe to Updates
Get the latest creative news from FooBar about art, design and business.
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
- ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
- ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
Author: admin
ಹೆಚ್.ಡಿ.ಕೋಟೆ: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಬಾರ್ ಗಳು ತೆರೆಯುವುದಕ್ಕೂ ಮೊದಲೇ ಅಕ್ರಮ ಮದ್ಯ ಮಾರಾಟಗಾರರು ಫೀಲ್ಡಿಗಿಳಿಯುತ್ತಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಾಟ ಆರಂಭಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಕುಡುಕರು ಮದ್ಯ ಖರೀದಿಗಾಗಿ ಮುಗಿ ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ತಾಲೋಕು ಕೇಂದ್ರ ಸ್ಥಾನದ ಬಸ್ ನಿಲ್ದಾಣದ ಎದುರಿನಲ್ಲೇ ಇಂತಹ ದೃಶ್ಯ ಕಂಡು ಬಂದರೆ, ಹಳ್ಳಿಗಳಲ್ಲಿ ಏನು ಸ್ಥಿತಿ ಇರಬಹುದು ಅನ್ನೋ ಮಾತುಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ. ಅಕ್ರಮ ಮದ್ಯ ಮಾರಾಟವನ್ನು ಕಂಡೂ ಕಾಣದಂತೆ ಅಬಕಾರಿ ಇಲಾಖೆ ಕುಳಿತಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಖಾಸಗಿ ವಾಹನಗಳ ನಿಲ್ದಾಣ ಬದಿಯಲ್ಲಿರುವ ರಸ್ತೆ ಬದಿ ಹೋಟೆಲ್ ಆಸುಪಾಸಿನಲ್ಲೇ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಅಬಕಾರಿ ಅಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ. ವರದಿ: ಮಲಾರ ಮಹದೇವಸ್ವಾಮಿ, ಹೆಚ್.ಡಿ.ಕೋಟೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ನೂತನ ಕಟ್ಟಡವು ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯ ಮುಖ್ಯ ಅಧಿಕಾರಿಗಳ ನೇತೃತ್ವದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ.ಜಿ.ಪರಮೇಶ್ವರ್ ಉಪಸ್ಥಿತಿಯಲ್ಲಿ ಶ್ರೀ ಇಂದಿರಾ ಗಾಂಧಿ ವಸತಿ ಶಾಲೆಯ ನೂತನ ಕಟ್ಟಡವು ಇಂದು ಉದ್ಘಾಟನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಗೃಹ ಸಚಿವ ಹಾಗೂ ತುಮಕೂರು ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಜಿ ಪರಮೇಶ್ವರ್, ತುಮಕೂರು ಲೋಕಸಭಾ ಸದಸ್ಯರಾದ ಜಿ.ಎಸ್. ಬಸವರಾಜ್, ಸಚಿವರಾದ ಬಿ.ಸಿ.ನಾಗೇಶ್ ಮಾಧುಸ್ವಾಮಿ, ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಕುಮಾರಿ, ಕೊರಟಗೆರೆ ತಹಸೀಲ್ದಾರ್ ನಾಹೀದಾ ಜಮ್…
ಬೆಂಗಳೂರು: ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ಡಿಸೆಂಬರ್ 9ರಂದು ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ’ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಎಸ್ ಅಧಿಕಾರಿಗಳಾದ ವಿ. ಬಾಲಸುಬ್ರಮಣ್ಯನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ಬಿ.ಎಸ್.ಮಲ್ಲಿಕಾರ್ಜುನಯ್ಯ, ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯದರ್ಶಿ ವಿ.ಆರ್.ಮರಾಠೆ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಪರಿವರ್ತನಾ ಸಮುದಾಯ ಧಾರವಾಡ ಇದರ ಎಸ್.ಎ.ಮಕ್ಕಾಭಿ, ತುಮಕೂರು ಜಿಲ್ಲಾ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್, ಬೆಂಗಳೂರು ಜನಾಧಿಕಾರ ಸಂಘರ್ಷ ಪರಿಷತ್ ನ ಪ್ರಕಾಶ್ ಬಾಬು, ಚಾಮರಾಜನಗರ ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿಕ ಹೋರಾಟಗಾರರಾದ ದೊರೆಸ್ವಾಮಿ, ಬೆಂಗಳೂರಿನ ನಿವೃತ್ತ ಸರ್ಕಾರಿ ನೌಕರ ಪಾಪೇಗೌಡ ಅವರನ್ನು ಸನ್ಮಾನಿಸಲಾಗುವುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಆಂಟೋನಿ ಬೇಗೂರು ಪ್ರತಿ ವರ್ಷ ಡಿಸೆಂಬರ್ 9 ರಂದು, UN ನಿಂದ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಇಂದು ಆಚರಿಸಲಾಗುವ ಈ ವಿಶೇಷ ದಿನದ ಮಾಹಿತಿ. ಅಕ್ಟೋಬರ್ 31, 2003 ರಂದು, ವಿಶ್ವಸಂಸ್ಥೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ನಿರ್ಣಯವನ್ನು ಅಂಗೀಕರಿಸಿತು. ಕೌನ್ಸಿಲ್ ಡಿಸೆಂಬರ್ 9 ಅನ್ನು ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ ಎಂದು ಘೋಷಿಸಿದೆ. ಅಂದಿನಿಂದ, ಈ ದಿನವನ್ನು ವಿಶ್ವಸಂಸ್ಥೆಯಿಂದ ವಾರ್ಷಿಕವಾಗಿ ಆಚರಿಸಲಾಗುತ್ತದೆ. ಭ್ರಷ್ಟಾಚಾರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮತ್ತು ಭ್ರಷ್ಟಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ವಿಶ್ವದ 180 ದೇಶಗಳನ್ನು ಅಧ್ಯಯನ ಮಾಡಿದ ನಂತರ ಅತ್ಯಂತ ಭ್ರಷ್ಟ ದೇಶಗಳ ಪಟ್ಟಿಯನ್ನು ಪ್ರಕಟಿಸುತ್ತದೆ. ಭಾರತವು 2016 ರಲ್ಲಿ 79 ನೇ, 2017 ರಲ್ಲಿ 81 ನೇ ಮತ್ತು 2018 ರಲ್ಲಿ 78 ನೇ ಸ್ಥಾನದಲ್ಲಿತ್ತು. ಭ್ರಷ್ಟಾಚಾರವು ಒಂದು ದೇಶದ ಸಂಘಟನೆಯ ತಳದಿಂದ ನಾಯಕತ್ವ, ಆಡಳಿತಾತ್ಮಕ ಅವ್ಯವಸ್ಥೆ ಮತ್ತು ಅಸ್ತವ್ಯಸ್ತತೆಯವರೆಗೆ ಕ್ಯಾನ್ಸರ್ನಂತೆ…
ಪ್ರೀತಿಸಿ ಮದುವೆಯಾಗಿರುವ ತಮ್ಮ ಆನಂದ್ ಚಾಲಕನಾಗಿದ್ದು ಇತ್ತೀಚೆಗೆ ಕಾಣೆಯಾಗಿದ್ದಾನೆಂದು ಸೋದರ ವೆಂಕಟೇಶ್ ಮಾಲೂರು ತಾಲೂಕು ಮಾಸ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಬೆನ್ನತ್ತಿ ಹೋದ ಪೊಲೀಸರಿಗೆ ಈ ನಾಪತ್ತೆ ಪ್ರಕರಣದ ಸುಳಿವು ಆರಂಭದಲ್ಲಿ ಸಿಗಲಿಲ್ಲ. ದೂರು ನೀಡಿದ್ದ ವೆಂಕಟೇಶ್ ಮತ್ತೆ ಠಾಣೆಗೆ ಹೋಗಿ ಕಾಣೆಯಾಗಿದ್ದ ಆನಂದ್ ಪತ್ನಿ ಹಾಗೂ ಆಕೆಯ ಕೆಲವು ಸ್ನೇಹಿತರ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಅಷ್ಟರಲ್ಲಿ ಹೊಸಕೋಟೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಮಾಕನಹಳ್ಳಿ ಗ್ರಾಮದ ಬಳಿಯ ನೀರಿನ ಹಳ್ಳದಲ್ಲಿ ಕೊಲೆ ಮಾಡಿ ಬಿಸಾಡಿದ್ದ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಪರಿಶೀಲಿಸಿದಾಗ ಆನಂದ್ ಕೊಲೆಯಾಗಿರುವುದು ಖಚಿತವಾಗಿದೆ. ಆನಂದ್ ಅಣ್ಣ ವೆಂಕಟೇಶ್ ಅನುಮಾನ ವ್ಯಕ್ತಪಡಿಸಿದ್ದಂತೆ ಆತನ ಪತ್ನಿ ಚೈತ್ರಾ ಸೇರಿದಂತೆ ಆಕೆಯ ಮೂರು ಸ್ನೇಹಿತರನ್ನು ವಶಕ್ಕೆ ಪಡೆದ ನಂದಗುಡಿ ಪೊಲೀಸರು ವಿಚಾರಣೆ ನಡೆಸಿದ ವೇಳೆ ಆಕೆಯೇ ಪ್ರಿಯಕನ ಜೊತೆಗೆ ಸೇರಿ ಗಂಡನನ್ನು ಕೊಲೆ ಮಾಡಿರುವುದು ತಿಳಿದು ಬಂದಿದೆ. ಡ್ರೈವರ್ ಆನಂದ್ ಕಾರಂಗುಟ್ಟೆ ಗ್ರಾಮದ ಚೈತ್ರಾ ಎಂಬ ಹುಡುಗಿಯನ್ನು ಪ್ರೀತಿಸಿ ಆರು…
ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರದ ಚಟ್ನಳ್ಳಿ ಪಾಳ್ಯ ಗ್ರಾಮದ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಬಸವಭವನ ಹಾಗೂ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತಿಂದ್ರ ಸಿದ್ದರಾಮಯ್ಯನವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ನಮ್ಮ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು ಹದಿಮೂರು ಕೋಟಿಗೂ ಹೆಚ್ಚು ರೂಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಮೊದಲಿಗೆ ನಮ್ಮ ಕ್ಷೇತ್ರಕ್ಕೆ ಸೇರುವ ಹಳ್ಳಿಕೆರೆಹುಂಡಿ ಚಟ್ನಳ್ಳಿ ಪಾಳ್ಯ ವಾಜಮಂಗಲ ಎಂ.ಸಿ ಹುಂಡಿ ಗ್ರಾಮಗಳ ರಸ್ತೆಯ ಅಭಿವೃದ್ಧಿ ಸೇರಿದಂತೆ ಸಮುದಾಯ ಭವನಗಳಿಗೆ ಸುಮಾರು ಎರಡುವರೆ ಕೋಟಿ ರೂಗಳ ವೆಚ್ಚದಲ್ಲಿ ಭೂಮಿ ಪೂಜೆ ನೆರವೇಸಲಾಗಿದೆ. ಇನ್ನುಳಿದ ಅಭಿವೃದ್ಧಿ ಕಾಮಗಾರಿಗಳನ್ನು ಸದ್ಯದಲ್ಲೇ ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ಉಪಾಧ್ಯಕ್ಷ ರವಿ, ಮಲೆಯ ಮಾದೇಶ್ವರ ಬೆಟ್ಟದ ಮಾಜಿ ಧರ್ಮದರ್ಶಿ ಕೀಳನಪುರ ಮಹಾದೇವಪ್ಪ, ಮೆಲ್ಲಹಳ್ಳಿ ಗಂಗತಿಮ್ಮಯ್ಯ ,ಚಿಕ್ಕದೇವಯ್ಯ, ಕಾಂಗ್ರೆಸ್ ಪಕ್ಷದ ಕಾನೂನು ವಿಭಾಗದ ಪಾಳ್ಯ ಸ್ವಾಮಿ…
ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಳಬಾಗಿಲಿನ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ಆಂಧ್ರ ಪ್ರದೇಶದ ರಾಮಸಮುದ್ರದ ನಿವಾಸಿ ಜ್ಯೋತಿ ಮಕ್ಕಳಾದ ಉದಯಶ್ರೀ (8) ಹಾಗೂ ಅಕ್ಷರ(6) ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಬೆಂಕಿ ಹಚ್ಚಿಕೊಂಡಿದ್ದ್ದಾದು, ಆರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಮತ್ತೊಂದು ಮಗು ಹಾಗೂ ತಾಯಿ ಸುಟ್ಟಗಾಯಗಳಿಂದ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಮುಳಬಾಗಿಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆತ್ತಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಪಿಎಸ್ ಐವೊಬ್ಬರು ಗಾಯಗೊಂಡಿದ್ದ ಮಗುವನ್ನು ಎತ್ತಿಕೊಂಡು ಓಡಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಮಗು ಜೀವನ್ಮರಣದ ನಡುವೆ ಹೋರಾಟ ನಡೆಸಿದೆ. ಗಂಡ ಬಿಟ್ಟು ಹೋಗಿರೋದಕ್ಕೆ ಮನನೊಂದು ಜ್ಯೋತಿ ಗಂಡನಿಲ್ಲದೇ ಜೀವನ ಸಾಗಿಸೋದಕ್ಕೆ ಕಷ್ಟವಾಗುತ್ತೆ ಎಂದು ನಿರ್ಧರಿಸಿ, ಮೊದಲು ಮಕ್ಕಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಇಬ್ಬರು ಮಕ್ಕಳೊಂದಿಗೆ…
ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ವಾಸು ಬರಬೇಕು ಹಾಗೂ ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಬರೆದಿಟ್ಟು ಕೆರೆಗೆ ಹಾರಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗುಬ್ಬಿ ಪಟ್ಟಣದ ನಿವಾಸಿ ಜಯಪ್ರಕಾಶ್ (39) ಆತ್ಮಹತ್ಯೆ ಮಾಡಿಕೊಂಡವರು. ಗ್ರಾನೆಟ್ ಕೆಲಸ ನಿರ್ವಹಿಸುತ್ತಾ ಜೀವನ ಸಾಗಿಸುತ್ತಿದ್ದ ಜಯಪ್ರಕಾಶ್ ಸಣ್ಣ ಪುಟ್ಟ ಸಾಲ ಮಾಡಿಕೊಂಡಿದ್ದು, ಗೋಮಾಳದಲ್ಲಿ ಜಮೀನು ಸಾಗುವಳಿ ಮಾಡಿಕೊಂಡು ಬಂದಿದ್ದು, ಸಾಗುವಳಿ ಚೀಟಿ ಸಹ ನೀಡಲಾಗಿತ್ತು. ಆದರೆ ಅದರ ಪಹಣಿ ಆತನ ಹೆಸರಿಗೆ ಬಂದಿರಲಿಲ್ಲ. ಈ ಬಗ್ಗೆ ನೊಂದಿದ್ದ ಜಯಪ್ರಕಾಶ್ ವಿಸ್ತೃತವಾದ ಡೆತ್ ನೋಟ್ ಬರೆದಿಟ್ಟು ಮನೆದೇವರಾದ ದೇವರ ಹೊಸಹಳ್ಳಿಯ ವೀರಭದ್ರ ಸ್ವಾಮಿಯ ಗ್ರಾಮದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ನಲ್ಲಿ ನನ್ನ ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ವಾಸು ಬರಬೇಕು ಹಾಗೂ ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಬರೆದಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಡಾಬಸ್ ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ…
ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಕರ್ನಾಟಕ –ಮಹಾರಾಷ್ಟ್ರ ನಡುವೆ ಉದ್ಭವಿಸಿರುವ ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿ ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಟೀಕಿಸಿದ್ದಾರೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.…
ಮದ್ಯ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಗಂಡನೊಬ್ಬ ಹೆಂಡತಿಯನ್ನೇ ಕೊಂದಿದ್ದು, ಇದಕ್ಕೆ ತಂದೆಯ ಮಗನೂ ಕೈಜೋಡಿಸಿರುವ ದುರಂತ ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ನಡೆದಿದೆ. ವಿಶ್ವೇಶ್ವರ ಭಟ್(69) ಮತ್ತು ಮಗ ಮಧುಕರ ಭಟ್(33) ಕುಡಿಯಲು ಹಣ ನೀಡಲಿಲ್ಲವೆಂದು ಗೀತಾ ಭಟ್ ಅವರನ್ನು (64) ಕೊಲೆ ಮಾಡಿದ್ದಾರೆ. ಆರೋಪಿ ಮಧುಕರ್ ಭಟ್ನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿತಕ್ಕೆ ಹಣ ನೀಡುವಂತೆ ಗೀತಾ ಭಟ್ಗೆ ಮಗ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಅವರ ಮನೆಯಲ್ಲಿ ದಿನವೂ ಜಗಳ ನಡೆಯುತ್ತಲೇ ಇತ್ತು. ಹಣ ನೀಡದ ಕಾರಣ ತಂದೆ-ಮಗ ಸೇರಿಕೊಂಡು ಗೀತಾ ಭಟ್ಅವರನ್ನು ಕಟ್ಟಿಗೆಯಿಂದ ಹೊಡೆದು ಕೊಂದ್ದಿದ್ದಾರೆ. ಕುಮಟಾ ಪಿಎಸ್ಐ ನವೀನಕುಮಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy