Subscribe to Updates
Get the latest creative news from FooBar about art, design and business.
- ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
- ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
- ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
- DIGITAL ARREST ಬಗ್ಗೆ ಎಚ್ಚರವಿರಲಿ!
- ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
- ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
- ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
- “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
Author: admin
ತುಮಕೂರು: ತಾಲ್ಲೂಕು ದೊಡ್ಡಸಾರಂಗಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಶುದ್ಧಗಂಗಾ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗೂಳೂರು ಜಿ.ಪಂ. ಉಸ್ತುವಾರಿ ಅಧ್ಯಕ್ಷ ಹಾಗೂ ಜೆಡಿಎಸ್ ನಾಯಕ ಜಿ. ಫಾಲನೇತ್ರಯ್ಯ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಎಪಿಎಂಸಿ ಉಪಾಧ್ಯಕ್ಷೆ ವಿಜಯಕುಮಾರಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತುಮಕೂರು ಗ್ರಾಮಾಂತರ ವಿಸ್ತರಣಾಧಿಕಾರಿ ಸುನಿತಾ ಪ್ರಭು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ನಗರದಲ್ಲಿ ಮುಸ್ಲಿಂ ಸಮುದಾಯದ ಶಬ್-ಎ-ಬಾರಾತ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಯಿತು. ಈ ವೇಳೆ ಸಮಾಜ ಸೇವಕರಾದ ಮುಹಮ್ಮದ್ ಇಷ್ಟಿಯಾಕ್ (ಬಾಬು) ರವರು ಸುದ್ದಿಗಾರರ ಜೊತೆ ಮಾತನಾಡಿ, ತುಮಕೂರು ನಗರ ಹಾಗೂ ಜಿಲ್ಲಾದ್ಯಂತ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲಾಗಿದೆ. ಹಬ್ಬವನ್ನು ಆಚರಿಸಲು ಸಹಕಾರ ನೀಡಿದ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ನಾಡಿನ ಸಮಸ್ತ ಜನರಿಗೆ ಶಬ್-ಎ-ಬಾರಾತ್ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ ಎಂದು ಇದೇ ವೇಳೆ ಅವರು ಹಬ್ಬದಸ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕ ಸಯ್ಯದ್ ವಾಸೀಂ, ಫಯಾಜ್ ಪಾಷಾ, ಮತ್ತು ಇತರರು ಜೊತೆಗಿದ್ದರು. ವರದಿ : ಉದಯ್ (ಫೋಟೋಗ್ರಾಫರ್) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸ ಸಾಗರಕ್ಕೆ 10 ಟಿ ಎಂ ಸಿ ನೀರು ಮೀಸಲಿಟ್ಟು, ಧರ್ಮಪುರ ಮತ್ತು ಜೆಜಿ ಹಳ್ಳಿ ಹೋಬಳಿಗಳ ಎಲ್ಲಾ ಕೆರೆಗಳನ್ನು ತುಂಬಿಸಬೇಕು ಎಂದು ತಾಲ್ಲೂಕು ರೈತಸಂಘದ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಗೆ ಸೇರಿಸಲು ಹಾಗೂ ಹಿರಿಯೂರು ನಗರದ ಸಕ್ಕರೆ ಕಾರ್ಖಾನೆಯನ್ನು ಪುನಃ ಪ್ರಾರಂಭಿಸಲು ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆ ಈ ಹಿಂದಿನ ಬಿಜೆಪಿ ಸರ್ಕಾರ ತಾತ್ಕಾಲಿಕವಾಗಿ 5 ಟಿಎಂಸಿ ನೀರನ್ನು ಮಂಜೂರು ಮಾಡಲಾಗಿತ್ತು. ಆದರೆ ತದ ನಂತರ ಬಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇದನ್ನು 2ಟಿಎಂಸಿ ನೀರಿಗೆ ಸೀಮಿತಗೊಳಿಸಲಾಯಿತು. ಈಗಾಗಲೇ ಸರ್ಕಾರ ಕುಡಿಯುವ ಸಲುವಾಗಿ ಹಿರಿಯೂರು ನಗರಕ್ಕೆ ಹಾಗೂ ತಾಲೂಕಿನ 168 ಗ್ರಾಮಗಳಿಗೆ, ಚಳ್ಳಕೆರೆನಗರಕ್ಕೆ ಹಾಗು ಹಳ್ಳಿಗಳಿಗೆ ಡಿ.ಆರ್.ಡಿ.ಓ ಹಾಗೂ ಚಿತ್ರದುರ್ಗ ನಗರಕ್ಕೆ ಹೊಳಲ್ಕೆರೆ ಗ್ರಾಮ ಮತ್ತು ತಾಲ್ಲೂಕಿನ 198 ಗ್ರಾಮಗಳಿಗೆ ಕುಡಿಯುವ ನೀರು ಹರಿಸಬೇಕಿದೆ. ಅಲ್ಲದೆ ತಾಲ್ಲೂಕಿನ…
ಬೆಂಗಳೂರು: ಶ್ರೀ ಪ್ರಸನ್ನ ನಂದ ವಾಲ್ಮೀಕಿ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ 37 ನೇ ದಿನಕ್ಕೆ ಮುಂದುವರಿದಿದೆ. ಬೆಂಗಳೂರು ಸ್ವಾತಂತ್ರ ಉದ್ಯಾನವನ ಆವರಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಕೊರಟಗೆರೆ ತಾಲೂಕು ಬಹುಜನ ಜನ ಸಮಾಜ ಪಾರ್ಟಿ ಕಾರ್ಯಕರ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಾಲ್ಮೀಕಿ ಶ್ರೀಗಳಿಗೆ ಬೆಂಬಲ ಸೂಚಿಸಿದರು. ಈ ವೇಳೆ ಮಾತನಾಡಿದ ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ಅಭ್ಯರ್ಥಿ ಜೆಟ್ಟಿ ಅಗ್ರಹಾರ ನಾಗರಾಜ್, ಸರ್ಕಾರ ಕೂಡಲೇ ನಾಗಮೋಹನದಾಸ್ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಸಂವಿಧಾನ, ರಾಮಾಯಣ ಬರೆದ ವಂಶ ನಮ್ಮದು. ನಾವಿಂದು ರಸ್ತೆಗಿಳಿದು ಹೋರಾಟ ಮಾಡುವ ಅನಿವಾರ್ಯ ಎದುರಾಗಿದೆ. ಶ್ರೀಗಳ ಧರಣಿ ಸತ್ಯಾಗ್ರಹ ಇಂದಿಗೆ 37ನೇ ದಿನಕ್ಕೆ ತಲುಪಿದೆ. ಸರ್ಕಾರದ ಮಂತ್ರಿಗಳಾಗಲಿ, ಮುಖ್ಯಮಂತ್ರಿಗಳಾಗಲಿ, ಸ್ಥಳಕ್ಕಾಗಮಿಸಿ ವರದಿ ಜಾರಿಗೊಳಿಸುವ ಭರವಸೆ ನೀಡಿಲ್ಲ. ಪ್ರತಿಭಟನೆ 37 ಸಂಖ್ಯೆ 336 ಆದರೂ ಸರಿಯೇ ಈ ಹೋರಾಟ ನಿರಂತರ ಇವರೊಂದಿಗೆ ಬಹುಜನ…
ಸರಗೂರು: ಉನ್ನತ ಮಟ್ಟದ ಚಿಕಿತ್ಸೆ ನೀಡುವುದೇ ನಮ್ಮ ಸಂಸ್ಥೆಯ ಗುರಿ ಎಂದು ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಮುಖ್ಯಾಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಜಿ.ಎಸ್ ಅವರು ತಿಳಿಸಿದರು. ಇಂದು ಹೆಚ್.ಡಿ.ಬಿ ಫೈನಾನ್ಸ್ ವತಿಯಿಂದ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ನೀಡಿದ ಆರೋಗ್ಯ ತಪಾಸಣಾ ಯಂತ್ರೋಪಕರಣಗಳಿಗೆ ಚಾಲನೆ ನೀಡಿ ಅವರು ಮಾತನಾಡಿ, ಆಸ್ಪತ್ರೆಯ ನಿರಂತರ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿಯೂ ಸಹ ಗ್ರಾಮೀಣಾ ಭಾಗದ ಜನರಿಗೆ ಉನ್ನತ ಮಟ್ಟದ ಸೇವೆಯನ್ನು ನೀಡಲಾಗುವುದು ಎಂದರು. ಹಾಗೆಯೇ ಗ್ರಾಮೀಣಾಭಿವೃದ್ಧಿಯಲ್ಲಿ ಉಂಟಾಗುವ ಸಮಸ್ಯೆಗಳನ್ನು ತಟೆಗಟ್ಟಲು ಐ.ಸಿ.ಓ. ವನ್ನು ಸಹ ಶುರು ಮಾಡಲಾಗುವುದು. ಹಾಗೂ ಸರ್ಜಿಕಲ್ ಸ್ಪೇಷಲಿಟಿ ಒಳಗೊಂಡಂತೆ ಕಣ್ಣಿನ ಸಮಸ್ಯೆ ಮತ್ತು ದಂತದ ಸಮಸ್ಯೆಗಳಿಗೆ ವಿವೇಕಾನಂದ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಒದಗಿಸಲಾಗುವುದು ಎಂದು ತಿಳಿಸಿದರು. ಗ್ರಾಮೀಣ ವ್ಯವಸ್ಥೆಗೆ ಬೇಕಾದ ವ್ಯಕ್ತಿಗಳನ್ನು ತಯಾರಿಸಲು ಪೂರ್ಣ ಪ್ರಮಾಣದ ನರ್ಸಿಂಗ್ ಕಾಲೇಜ್, ಮತ್ತು ಟಿ.ಎನ್.ಬಿ ಕೋರ್ಸ್ಗಳನ್ನು ತೆರೆಯಲಾಗುವುದು ಹಾಗೂ ಹೆಚ್.ಡಿ.ಬಿ ಫೈನಾನ್ಸ್ ಕಂಪನಿಯು ಆಸ್ಪತ್ರೆಗೆ ಒತ್ತು ನೀಡಿದಂತೆ, ಗ್ರಾಮೀಣಾ ಭಾಗದಲ್ಲಿ ಶಿಕ್ಷಣವನ್ನು ಅಭಿವೃದ್ಧಿಪಡಿಸಲು ಹೊಸ ಹೊಸ ಯೋಜನೆಗಳನ್ನು…
ಬಳ್ಳಾರಿ: ಜಿಲ್ಲೆಯ ಬಿಟಿಪಿಎಸ್(Ballary Thermal Power Station) ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. ಬಳ್ಳಾರಿಯ ಕುಡತಿನಿ ಬಳಿಯ ಬಿಟಿಪಿಎಸ್ ಆಕ್ಸಿಜನ್ ಪ್ಲ್ಯಾಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಆಕ್ಸಿಜನ್ ಫಿಲ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರ್ಮಿಕರ ಮೈಗೆಲ್ಲ ಹತ್ತಿಕೊಂಡಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಕಾರ್ಮಿಕರಿಗೆ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮುರುಳಿಧರನ್ ಆರ್., ಹಿರಿಯೂರು.. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಶನಿವಾರ ಪಾವಗಡದಲ್ಲಿ ನಡೆದ ಬಸ್ ದುರಂತಕ್ಕೆ ಚಾಲಕನ ಅಜಾಗರೂಕತೆ ಹಾಗೂ ಬಸ್ ಓವರ್ಲೋಡ್ ಕಾರಣ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಶನಿವಾರ ಸಂಜೆ ಶ್ರೀರಾಮುಲು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು ಇದೇ ಸಂದರ್ಭದಲ್ಲಿ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸಚಿವ ಶ್ರೀರಾಮುಲು ರವರು ವೈಯಕ್ತಿಕವಾಗಿ ತಲಾ 25 ಸಾವಿರ ರೂ. ನೆರವು ನೀಡಿದರು. ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದು, ಘಟನೆ ನಡೆದ ಸ್ಥಳವನ್ನು ಕೂಡಲೇ ಅಪಘಾತ ವಲಯ(BLACK SPOT) ಎಂದು ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಘಟನೆಯಲ್ಲಿ ಈಗಾಗಲೇ ಆರು ಮಂದಿ ಮೃತಪಟ್ಟಿದ್ದು ಅಪಘಾತದಲ್ಲಿ ಮೃತಪಟ್ಟ ಗಾಯಾಳುಗಳಿಗೆ ಸರ್ಕಾರದಿಂದ ತಲಾ ಐದು ಲಕ್ಷ ರೂಗಳ ಪರಿಹಾರವನ್ನು ನೀಡಲಾಗುವುದು ಎಂದರು. ಇನ್ನು ರಾಜ್ಯದಲ್ಲಿ ಇರುವ ಅಪಘಾತ ವಲಯಗಳನ್ನು ಗುರುತಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ರಸ್ತೆ ಸುರಕ್ಷತಾ ಅನುದಾನದಡಿ ಅಪಘಾತ ವಲಯಗಳನ್ನು ಗುರುತಿಸಿ…
ಸರಗೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಎಂದು ಕಾರ್ಯಕ್ರಮ ಮಾಡುತ್ತೀರಿ, ಆದರೆ, ಜಿಲ್ಲಾಧಿಕಾರಿಗಳೇ ಕಾರ್ಯಕ್ರಮದಲ್ಲಿ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಬದಲು ತಹಶೀಲ್ದಾರ್ ಬರುತ್ತಿದ್ದಾರೆ ಎಂದು ತಹಶೀಲ್ದಾರ್ ನ್ನು ಗ್ರಾಮಸ್ಥರು ತರಾಟೆಗೆತ್ತಿಕೊಂಡ ಘಟನೆ ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ಯ ಅವರಣದಲ್ಲಿನಡೆಯಿತು. ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಲ್ಲಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೇ ಬರಬೇಕು. ಒಂದೋ ಜಿಲ್ಲಾಧಿಕಾರಿಗಳನ್ನು ಕರೆಸಿ ಇಲ್ಲವಾದರೆ, ಕಾರ್ಯಕ್ರಮ ರದ್ದುಪಡಿಸಿ ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ತರಾಟೆಗೆತ್ತಿಕೊಂಡರು. ಜಿಲ್ಲಾಧಿಕಾರಿಗಳು ಆಗಮಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು. ಈ ವೇಳೆ ತಹಶೀಲ್ದಾರ್ ಚಲುವರಾಜು ಅವರು ಪ್ರತಿಭಟನಾಕಾರರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರೂ ಪ್ರತಿಭಟನಾಕಾರರು ಪಟ್ಟು ಹಿಡಿದು, ಜಿಲ್ಲಾಧಿಕಾರಿಗಳು ಬಾರದೇ ಕಾರ್ಯಕ್ರಮ ನಡೆಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಡಂಚಿನ ಭಾಗವಾಗಿರುವ ಈ ಗ್ರಾಮದಲ್ಲಿ ಕಾಡಾನೆ ಹಾವಳಿ ಜಾಸ್ತಿಯಾಗಿದೆ ಅರಣ್ಯ ಇಲಾಖೆ ಅಧಿಕಾರಿಗಳು ಜನರ ರಕ್ಷಣೆಗೂ ಮುಂದಾಗುತ್ತಿಲ್ಲ. ಇದರ ಜೊತೆಗೆ ನಷ್ಟ…
ಪಾವಗಡ: ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಕೇಂದ್ರ ಸಚಿವರದ ಎ.ನಾರಾಯಣಸ್ವಾಮಿ ಪಾವಗಡ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಧೈರ್ಯ ತುಂಬಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿ, ಅಪಘಾತ ನಡೆದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ತೆರಳಿ ಮಾಹಿತಿ ಪಡೆದರು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಚಿಕಿತ್ಸೆ ಪಡೆಯುತ್ತಿರುವ 25ಕ್ಕೂ ಹೆಚ್ಚು ಗಾಯಾಳುಗಳು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ವರದಿ: ನಂದೀಶ್ ನಾಯ್ಕ ಪಿ. ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ,ಹೋಬಳಿ ಸೊರವನಹಳ್ಳಿ ಗ್ರಾಮದಲ್ಲಿ , ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ, ಮಾತನಾಡಿದ ತಾಲ್ಲೂಕು ಪಂಚಾಯ್ತಿ ಕಾರ್ಯನಿರವಾಹಣಾಧಿಕಾರಿ ಸತೀಶ್, ಆಧುನಿಕತೆ ಬೆಳೆದ ಹಾಗೆ, ಈ ದೇಶದಲ್ಲಿ ಪ್ರಜಾಪ್ರಭುತ್ವ ಸರ್ಕಾರಗಳು ಜಾರಿಗೆ ಬಂದ ಮೇಲೆ ಎಲ್ಲಾ ಸರ್ಕಾರಗಳು ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದವು. ಅದರಲ್ಲಿ ನಮ್ಮ ಈಗಿನ ರಾಜ್ಯ ಸರ್ಕಾರ ತಂದ ಕಾರ್ಯಕ್ರಮಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ’ ಕಾರ್ಯಕ್ರಮ ವಿನೂತನ ಕಾರ್ಯಕ್ರಮ ಎಂದರು. ಜಿಲ್ಲಾಧಿಕಾರಿಗಳೇ ,ಹಳ್ಳಿಗಳಿಗೆ ತೆರಳಿ ಜನ ಸಾಮಾನ್ಯರ , ರೈತರ , ಶೋಷಿತರ ಇನ್ನು ಮುಂತಾದವರ ಸಮಸ್ಯೆ ಆಲಿಸಿ ಸಾಧ್ಯವಾಗುವ ಸಮಸ್ಯೆಗಳನ್ನ, ಸ್ಥಳದಲ್ಲೇ ಬಗೆಹರಿಸುವುದು ಈ ಕಾರ್ಯಕ್ರಮದ ಉದ್ದೇಶ, ಆದುದರಿಂದ ಜಿಲ್ಲಾಧಿಕಾರಿಗಳು ಕೇವಲ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಸ್ಯೆ ಆಲಿಸಲು ಮಾತ್ರ ಸಾಧ್ಯ, ಇನ್ನುಳಿದ ಕಾರ್ಯಕ್ರಮಗಳನ್ನು ಆಯಾ ತಾಲೂಕಿನ ತಹಶೀಲ್ದಾರರು ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿ, ಸಮಸ್ಯೆ ಆಲಿಸಿ ಸ್ಥಳದಲ್ಲಿ ಸಾಧ್ಯವಾಗುವ ಸಮಸ್ಯೆಯನ್ನು, ಬಗೆಹರಿಸ ಬೇಕಾಗುತ್ತದೆ…