Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
- ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
Author: admin
ಬೆಂಗಳೂರು: ಗಡಿ ವಿವಾದ ಕುರಿತು ಮಹಾರಾಷ್ಟ್ರ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮಿತ್ ಶಾ ಅವರನ್ನು ಭೇಟಿಯಾಗುವಂತೆ ಕರ್ನಾಟಕ ಸಂಸದರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ತಾವು ಕೂಡ ಸ್ವತಃ ದೆಹಲಿಗೆ ತೆರಳಿ ಮಾತುಕತೆ ನಡೆಸಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಗಡಿ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿ ಮಾಡುವಂತೆ ರಾಜ್ಯ ಸಂಸದರಿಗೆ ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು…
ಪತ್ನಿ ಮೋಸ ಮಾಡಿದಳೆಂದು ಪತಿ 42 ವರ್ಷಗಳಿಂದ ಮನೆಯಲ್ಲಿ ಅನ್ನ ತಿನ್ನದೆ ಚಹಾ ಕುಡಿದು ಜೀವನ ಸಾಗಿಸುತ್ತಿದ್ದಾನೆ. ಜೈಪುರದ ರಾಮಚಂದ್ರ ಮತ್ತು ಸೀತಾ ಗಂಡ ಹೆಂಡತಿ. ಆದರೆ ಒಂದು ದಿನ ರಾಮಚಂದ್ರ, ಸೀತೆಗೆ ಅನ್ನ ಹಾಕಲು ಹೇಳಿದ. ಸೀತೆ ಅಸ್ವಸ್ಥಳಾಗಿದ್ದರಿಂದ ಅನ್ನ ಹಾಕಲು ಸಾಧ್ಯವಾಗಿರಲಿಲ್ಲ. ಪತ್ನಿಯ ಮೇಲೆ ಸಿಟ್ಟಿಗೆದ್ದ ಪತಿ 42 ವರ್ಷಗಳಿಂದ ಅನ್ನ ತಿನ್ನದೆ ಕೇವಲ ಚಹಾ, ಇತರೆ ತಿಂಡಿಗಳನ್ನು ತಿನ್ನುತ್ತಿದ್ದಾನೆ. ಆದರೆ ಅವರು ಇವತ್ತಿಗೂ ಹೆಂಡತಿ ಜೊತೆ ಉತ್ತಮ ಸಂಬಂಧಹೊಂದಿದ್ದಾರೆ. ವಿಭಿನ್ನ ಅನ್ನಿಸಿದರು ವಿಚಿತ್ರ ನೈಜ ಘಟನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗ್ಗೆ ಎದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿ.ಕೆ.ಶಿವಕುಮಾರ್ ಒದ್ದಾಡುತ್ತಿದ್ದಾರೆ. ಆದರೆ ನಾವೆಲ್ಲರೂ ಇದ್ದೇವೆ, ಧೈರ್ಯವಾಗಿರಪ್ಪ ಎಂದು ಆತ್ಮಸ್ಥೆರ್ಯ ತುಂಬುತ್ತಿದ್ದೇವೆಂದು ಡಾ.ಜಿ.ಪರಮೇಶ್ವರ್ ಹೇಳಿದ್ದು, ಈ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಪಕ್ಷವೊಂದರ ಅಧ್ಯಕ್ಷ ಸ್ಥಾನ ನಿಭಾಯಿಸುವುದು ಸುಲಭವಲ್ಲ. ಟಿಕೆಟ್ ಕೊಡಬೇಕು, ಗೆಲ್ಲಿಸಬೇಕು, ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ನನಗೆ ಸಾಮರ್ಥ್ಯ ಇದೆ ಎಂದೇ 8 ವರ್ಷ ಅಧ್ಯಕ್ಷ ಸ್ಥಾನ ನೀಡಿದ್ದರು ಎಂದಿದ್ದಾರೆ. ತುಮಕೂರಿನ ಕೊರಟಗೆರೆಯಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್, ಯಾವುದೇ ವ್ಯಕ್ತಿ ಪಕ್ಷ ಬರಬೇಕಾದರೇ ಉದ್ದೇಶ, ಕ್ಷೇತ್ರದ ಕೆಲಸ ಆಗಬೇಕು. ಕೆಲಸ ಮಾಡುವ ಸಾಮರ್ಥ್ಯ ಇರಬೇಕು. ಆ ಸಾಮರ್ಥ್ಯ ನನಗಿದೆ ಅಂದುಕೊಂಡಿದ್ದೇನೆ. ಬೇರೆಯವರಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಸಮರ್ಥ ನಾಯಕ ಎಂದು ನನ್ನನ್ನ ಪಕ್ಷ ಗುರುತಿಸಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮ್ಯಾಂಡಸ್ ಚಂಡಮಾರುತ ಉಂಟಾಗಿದ್ದು, ರಾತ್ರಿ 1.30ರ ವೇಳೆಗೆ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಸುಮಾರು 70 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ತಮಿಳುನಾಡಿನ ಚೆಂಗಲ್ ಪೇಟೆ, ನಾಗಪಟ್ಟಣಂ, ಕೊಡೈಕೆನಾಲ್, ಪುದುಚೇರಿ ಸೇರಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು & ಪುದುಚೇರಿ ಶಾಲೆಗಳಿಗೆ ಇಂದೂ ರಜೆ ಘೋಷಿಸಲಾಗಿದೆ. ಇನ್ನು ಭಾರೀ ಮಳೆ ಪರಿಣಾಮ ನಗರದ ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕಾಂಗ್ರೆಸ್ ಪಕ್ಷ ಯಾರೊಬ್ಬರ ಮನೆ ಆಸ್ತಿಯಲ್ಲ, ಇದು ನಮ್ಮ ಶಕ್ತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಯಾಕೆ ಆಗ್ಬಾರ್ದು..? ನಮ್ಮ ಪಕ್ಷದಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಕಾಂಗ್ರೆಸ್ ನಲ್ಲಿ ಎಲ್ಲವೂ ಸಾಧ್ಯವಾಗುತ್ತದೆ. ನಾವು ಬೇರೆಯವರ ಹಾಗೆ ಮುಸ್ಲಿಂ ಸಿಎಂ ಮಾಡ್ತೀವಿ ಎಂದು ಹೇಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ನೀಡಿದರು. ದಲಿತ ಎಂತಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿಲ್ಲ. ಅವರು ಪಕ್ಷದಲ್ಲಿ ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ಹಾಗೂ ಸಮರ್ಥ ರಾಜಕಾರಣಿ ಎಂಬ ಕಾರಣಕ್ಕೆ ಅಧ್ಯಕ್ಷ ಹುದ್ದೆ ನೀಡಲಾಗಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆಗೆ ಸಭೆ ನಡೆಸಲಿದ್ದಾರೆ. ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಮುಖ್ಯಮಂತ್ರಿಗೆ ಸೂಚಿಸಬೇಕು ಎಂದು ಹೇಳಿದೆ. ಇನ್ನು ಗಡಿ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿರುವ ಗೃಹಸಚಿವ ಅಮಿತ್ ಶಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಶಾಲೆಗಳಲ್ಲಿ, ಹಾಗೂ ಒಂದೇ ಅಡುಗೆ ಮನೆ ಇರುವ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 1-5ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 1 ಗಂಟೆಯಿಂದ 1.45 ರವರೆಗೆ, 6 ರಿಂದ 10ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ 2 ಗಂಟೆಯಿಂದ 2.40 ರವರೆಗೆ ಪ್ರತ್ಯೇಕ ಸಮಯದಲ್ಲಿ ಬಿಸಿಯೂಟ ವಿತರಿಸಲು ತಿಳಿಸಲಾಗಿದೆ. ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಚರ್ಚಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ದೊಡ್ಡ ಮಕ್ಕಳೊಂದಿಗೆ ಚಿಕ್ಕ ಮಕ್ಕಳನ್ನು ಒಟ್ಟಿಗೆ ನಿಲ್ಲಿಸಿ ಆಹಾರ ವಿತರಿಸಿವುದು ಮತ್ತು ಕಡಿಮೆ ಸಮಯದಲ್ಲಿ ಊಟ ನೀಡುವುದು, ತಟ್ಟೆ – ಲೋಟ ತೊಳೆಯುವಾಗ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಬಿಸಿಯೂಟ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲು ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ನವದೆಹಲಿ : ರಾಜ್ಯದ ಬೆಟ್ಟ ಕುರುಬ ಸಮುದಾಯಕ್ಕೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕದ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಮಂಡಿಸಿದೆ. ಅನುಸೂಚಿತ ಬುಡಕಟ್ಟುಗಳು ಆದೇಶ, 1950 ರಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳ ಮೂಲಕ ತಮಿಳುನಾಡು, ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಛತ್ತೀಸ್ ಗಢದ ನಾಲ್ಕು ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳ ಪಟ್ಟಿಯನ್ನು ಮಾರ್ಪಡಿಸುವ ನಾಲ್ಕು ಮಸೂದೆಗಳನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ. ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಕೆಳಮನೆಯಲ್ಲಿ ದಿನದ ಕಲಾಪದ ಮೊದಲಾರ್ಧದಲ್ಲಿ ಈ ಮಸೂದೆಗಳನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. ಹೀಗಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆ ಅಂಗೀಕಾರವಾದ ಬಳಿಕ ಕಾಯ್ದೆಯಾಗಿ ಬದಲಾಗಲಿದೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಕೊರಟಗೆರೆ: ಕಲ್ಪತರು ನಾಡಿಗೆ ಅಕ್ಷರ ಜ್ಞಾನ ನೀಡಿದ ಶ್ರೀಮಠ ನಮ್ಮ ಹೆಮ್ಮೆಯ ಸಿದ್ದಗಂಗಾ ಕ್ಷೇತ್ರ.. ಟೀ ಅಂಗಡಿಯಲ್ಲಿ ಚಹಾ ಮಾಡುತ್ತಿದ್ದ ಸಾಮಾನ್ಯ ಮನುಷ್ಯ ಇಂದು ದೇಶದ ಪ್ರಧಾನಿ.. ನಮ್ಮ ಮಕ್ಕಳು ಸರಕಾರಿ ಕೆಲಸ ಪಡೆಯದಿದ್ರು ಪರವಾಗಿಲ್ಲ—ಭಾರತ ದೇಶವನ್ನು ಪೂಜಿಸುವ ಉತ್ತಮ ಪ್ರಜೆಯಾದ್ರೇ ಸಾಕು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ನರಸಾಪುರದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಮತ್ತು ಸಿ.ಎನ್.ದುರ್ಗ ಹೋಬಳಿಯ ನೇಗಲಾಲದ ಇಂದಿರಾ ಗಾಂಧಿ ವಸತಿಶಾಲೆಯ ನೂತನ ಕಟ್ಟಡದ ಉದ್ಘಾಟನೆ ನೇರವೇರಿಸಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಪವಾಡ ಪುರುಷ. ಗ್ರಾಮೀಣ ಮಕ್ಕಳ ಶಿಕ್ಷಣಕ್ಕಾಗಿ ಕೋಟಿಗಟ್ಟಲೆ ಸುರಿದು ಸರಕಾರ ಹೈಟೆಕ್ ಶಾಲೆ ನಿರ್ಮಾಣ ಮಾಡಿದೆ. ವಿಶ್ವಕ್ಕೆ ಮಾನವ ಸಂಪನ್ಮೂಲ ನೀಡುವ ದೇಶ ನಮ್ಮದು. ಶೈಕ್ಷಣಿಕ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡಿದೆ. ನಮ್ಮೂರಲ್ಲೆ ವ್ಯವಸಾಯಕ್ಕೆ ಜನರೇ ಸಿಗುತ್ತಿಲ್ಲ. ತಂತ್ರಜ್ಞಾನ ಹೆಚ್ಚಾಗಿದೆ ಆದರೇ ಶ್ರಮ ಇಲ್ಲದಿದ್ದರೇ ಆಗೋದಿಲ್ಲ ಎಂದು ಹೇಳಿದರು. ಕೊರಟಗೆರೆ ಶಾಸಕ…
ತುರುವೇಕೆರೆ: ಪಟ್ಟಣದಲ್ಲಿ ತಾಲೂಕು ಕಚೇರಿ ಮುಂಭಾಗ ಕೊಬ್ಬರಿಗೆ ಇಪ್ಪತ್ತು ಸಾವಿರ ನಿಗದಿ ಬೆಲೆಗೆ ಒತ್ತಾಯಿಸಿ ತೆಂಗು ಮತ್ತು ಬೆಳೆಗಾರರ ಸಂಘದ ಅಧ್ಯಕ್ಷರಾದ ಎನ್.ಆರ್.ಜಯರಾಮ್ ಗ್ರೇಡ್ 2 ತಹಶೀಲ್ದಾರ್ ಗೆ ಮನವಿ ಪತ್ರ ನೀಡಿದರು. ಈ ವೇಳೆ ಮಾತನಾಡಿದ ಜಯರಾಮ್, ಕೊಬ್ಬರಿ ಬೆಲೆ ಜನವರಿ ತಿಂಗಳಲ್ಲಿ ಕ್ವಿಂಟಾಲ್ ಗೆ 18ರಿಂದ 19 ಸಾವಿರದ ಆಸು ಪಾಸಿನಲ್ಲಿತ್ತು. ನಂತರದ ತಿಂಗಳುಗಳಲ್ಲಿ ಹಂತ ಹಂತವಾಗಿ ಇಳಿದು 11 ಸಾವಿರಕ್ಕೆ ಬಂದು ನಿಂತಿದೆ. ತೆಂಗಿನ ಮರಗಳಲ್ಲಿ ಹೊಂಬಾಳೆ ಹೊಡೆದು ಎಳೆನೀರು, ತೆಂಗಿನಕಾಯಿ ಕಿತ್ತು ಕೊಬ್ಬರಿ ಮಾಡುವ ಒಟ್ಟಿಗೆ ಎರಡು ವರ್ಷ ಕಾಲಾವಕಾಶ ಬೇಕಾಗುತ್ತದೆ.ಈ ಕಾರಣಕ್ಕಾಗಿ ರೈತರಿಗೆ ವರ್ಷಕ್ಕೆ 13 ರಿಂದ 14,000 ಖರ್ಚನ್ನು ಮಾಡುತ್ತಾರೆ ಇದರಿಂದ ಲಾಭಕ್ಕಿಂತ ಅಸಲು ಹೆಚ್ಚಾಗುತ್ತದೆ ಎಂದರು. ಸರ್ಕಾರ ಕೂಡಲೇ ರೈತ ಬೆಳೆದ ಕೊಬ್ಬರಿಯ ಖರೀದಿಯನ್ನು ನಪೆಡ್ ಮೂಲಕ ಖರೀದಿಸಿ, ಪ್ರತಿ ಕ್ವಿಂಟಾಲ್ ಗೆ 20,000 ನಿಗದಿತ ಬೆಲೆಯನ್ನು ನೀಡಬೇಕು. ಇಲ್ಲದಿದ್ದಲ್ಲಿ ತಾಲೂಕಿನ ಎಲ್ಲಾ ರೈತ ಸಂಘಟನೆಗಳ ಹಾಗೂ ವಿವಿಧ ರಾಜಕೀಯ ಪಕ್ಷಗಳ…