Subscribe to Updates
Get the latest creative news from FooBar about art, design and business.
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
- ಎಸ್ ಐಆರ್ | ಬಿಎಲ್ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್ ಗೌಡ ಗಂಭೀರ ಆರೋಪ
- ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
- ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
- ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
Author: admin
ಮಧುಗಿರಿ: ಶಿವಸೇನೆ ಪುಂಡರ ಅಟ್ಟಹಾಸವನ್ನು ಖಂಡಿಸುತ್ತಾ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದ ಘಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣ ಮಧುಗಿರಿ ತಾಲೂಕು ಘಟಕದ ವತಿಯಿಂದ.ತಾಲೂಕು ಅಧ್ಯಕ್ಷರಾದ ಶ್ರೀ ಪಾಂಡುರಂಗಯ್ಯನವರ ನೇತೃತ್ವದಲ್ಲಿ ಖಂಡಿಸಲಾಯಿತು. ಎಂಇ ಎಸ್ ಸಂಘಟನೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಮಧ್ಯವಸ್ತಿಕೆ ವಹಿಸಿ ಕೂಡಲೇ ಮಹಾರಾಷ್ಟ್ರ ಬೆಳಗಾವಿ ಗಡಿ ಭಾಗದ ಸಮಸ್ಯೆಯನ್ನು ಅತೀ ಶೀಘ್ರದಲ್ಲಿ ಬಗೆಹರಿಸಿ ಕೊಡಬೇಕೆಂದು ಉಪಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಗಡಿ ಭಾಗದಲ್ಲಿ ಮೊನ್ನೆ ಮಹಾರಾಷ್ಟ್ರ ರಾಜ್ಯದ ಶಿವಸೇನೆ ಪುಂಡರು, ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದು, ಕಲ್ಲುತೂರಾಟ ನಡೆಸಿ ಗಾಜುಗಳನ್ನು ಹೊಡೆದಿರುವಂತ ಘಟನೆ ಖಂಡನೀಯ, ಶಿವಸೇನೆ ಪುಂಡರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹಾಕಿ ಕೂಡಲೇ ಬಂಧಿಸಬೇಕು ಉಪ ವಿಭಾಗಾಧಿಕಾರಿಗಳಾದಂತ ರಿಷಿ ಆನಂದ್ ಅವರಿಗೆ ಮನವಿ ನೀಡಲಾಯಿತು. ಕ ರ ವೇ ಅಲ್ಪಸಂಖ್ಯಾತರ ತಾಲೂಕು ಅಧ್ಯಕ್ಷರಾದ…
ಬೆಂಗಳೂರು/ನೆಲಮಂಗಲ : ಕರ್ನಾಟಕ ರಣಧೀರರ ವೇದಿಕೆ ರಾಜ್ಯ ಸಮಿತಿ ವತಿಯಿಂದ ನವೆಂಬರ್ 29ರಂದು ಮೂರನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ಶ್ರೀ ಭುವನೇಶ್ವರಿ ಹಬ್ಬ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ ಸಮಾರಂಭ ಮತ್ತು ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪವಾಡ ಶ್ರೀ ಬಸವಣ್ಣ ದೇವರ ಮಠ ನೆಲಮಂಗಲದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ರವರು ಮತ್ತು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಟ ವಿನೋದ್ ರಾಜ್, ನಿವೃತ್ತ ಪ್ರಸ್ತುತಿ ತಜ್ಞರಾದ ಡಾಕ್ಟರ್ ಚೌಡಯ್ಯ, ಅಗ್ನಿಶಾಮಕ ದಳ ನೆಲಮಂಗಲ ನಿರೀಕ್ಷಕರಾದ ಸಿದ್ದಪ್ಪ, ರಾಣಿ ಚೆನ್ನಮ್ಮ ದೇವಿ ಬಿರುದಂಕಿತರು ಹಾಗೂ ಖ್ಯಾತ ನಟಿ ಹಿರಿಯ ಕಲಾವಿದರಾದ ಡಾ.ಲೀಲಾವತಿರವರಿಗೆ, ಕನ್ನಡ…
ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮದ ಕೆರೆಗೆ ಈಜಾಡಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ ಗ್ರಾಮದ ಹೊಸಕೆರೆಯಲ್ಲಿ ನಡೆದಿದೆ. ತುಮಕೂರು ನಗರದ ಅಂತರಸಹಳ್ಳಿಯ ನಿತೀನ್(11) ಮತ್ತು ಸತ್ಯಮಂಗಲದ ದಿವಾಕರ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಈಜಾಡುತ್ತಿದ್ದ ವೇಳೆ ಮುಳುಗುತ್ತಿದ್ದ ಸ್ನೇಹಿತ ಮಗ ನಿತೀನ್ ನನ್ನು ರಕ್ಷಿಸಲು ದಿವಾಕರ ಅವರು ಮುಂದಾಗಿದ್ದಾರೆ. ಈ ವೇಳೆ ಅವರು ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗಿದ ಇಬ್ಬರನ್ನೂ ತುಂಬಾಡಿ ಗ್ರಾಮಸ್ಥರು ತಕ್ಷಣ ನೀರಿನಿಂದ ಮೇಲೆತ್ತುವ ಕೆಲಸ ಮಾಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡ ಹೆಚ್ಚಿನ ಚಿಕಿತ್ಸೆಗೆ ಪ್ರಯತ್ನಪಟ್ಟರೂ ಚಿಕಿತ್ಸೆ ಫಲಕಾರಿ ಆಗಿಲ್ಲ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಉತ್ತರ ಪ್ರದೇಶದ ಮೀರತ್ನಲ್ಲಿ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಬಗ್ಗೆ ವಿದ್ಯಾರ್ಥಿಗಳು ಅಶ್ಲೀಲ ಕಾಮೆಂಟ್ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಕಿಥೌರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಧನಾ ಇನಾಯತ್ಪುರ್ ಹಳ್ಳಿಯ ಶಾಲೆಯಲ್ಲಿ ಘಟನೆ ನಡೆದಿದ್ದು, ಈ ಗುಂಪಿನಲ್ಲಿ ಒಬ್ಬ ವಿದ್ಯಾರ್ಥಿನಿಯೂ ಇದ್ದಾರೆ. 12ನೇ ತರಗತಿಯ ವಿದ್ಯಾರ್ಥಿಗಳು ಬಹಳ ಸಮಯದಿಂದ ತಮಗೆ ಕಿರುಕುಳ ನೀಡುತ್ತಿರುವುದಾಗಿ ಶಿಕ್ಷಕಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ವಿದ್ಯಾರ್ಥಿಗಳು ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ. ಶಿಕ್ಷಕಿ ಹಲವು ಬಾರಿ ತಿಳಿ ಹೇಳಿದ್ದರೂ ಪ್ರಯೋಜನವಾಗಿಲ್ಲ ಎಂದು ಠಾಣಾಧಿಕಾರಿ ಅರವಿಂದ್ ಮೋಹನ್ ಶರ್ಮಾ ಹೇಳಿದ್ದಾರೆ. ಶಾಲಾ ಆವರಣದಲ್ಲಿ ಶಿಕ್ಷಕಿಗೆ ಐ ಲವ್ ಯೂ ಎಂದಿದ್ದಾರೆ. ಆ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳು 16 ವರ್ಷದ ಆಸುಪಾಸಿನಲ್ಲಿದ್ದು, ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಪಂಜಾಬ್ನ ಕಿರಾತ್ಪುರ ಸಾಹಿಬ್ ಬಳಿ ರೈಲು ಹಳಿ ಮೇಲೆ ಆಟವಾಡುತ್ತಿದ್ದಾಗ ವಲಸೆ ಕಾರ್ಮಿಕರ ಮೂವರು ಮಕ್ಕಳಿಗೆ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ನಗರದ ಸಟ್ಲೆಜ್ ನದಿಯ ಸೇತುವೆ ಸಮೀಪವಿರುವ ರೈಲು ಹಳಿ ಮೇಲೆ ವಲಸೆ ಕಾರ್ಮಿಕರ 4 ಮಕ್ಕಳು ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದೆ. ನಾಲ್ಕನೇ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಪಂಜಾಬ್ ಸರ್ಕಾರ ತನಿಖೆಗೆ ಆದೇಶಿಸಿದೆ. ಮೃತಪಟ್ಟಿರುವ ಮಕ್ಕಳು 7 ರಿಂದ 11 ವರ್ಷದೊಳಗಿನವರು. ಈ ದುರಂತದ ಬಗ್ಗೆ ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ದುಃಖ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಅಪಘಾತದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವಂತೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೋರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭೋಪಾಲ್ನಲ್ಲಿ ಸಂಚರಿಸುತ್ತಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಬಿದ್ದು ಕೈ ಮುರಿದುಕೊಂಡಿದ್ದಾರೆ. ಇಂದೋರ್ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಾಗ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್ರ ಬಿದ್ದು ಮೊಣಕಾಲು ಮತ್ತು ಕೈಗೆ ಗಾಯವಾಗಿದೆ. ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ ಫ್ಯಾಕ್ಚರ್ ಆಗಿರುವುದು ಪತ್ತೆಯಾಗಿದೆ. ವೈದ್ಯರ ತಂಡ ನಿಗಾ ವಹಿಸಿದ್ದು, ಚಿಕಿತ್ಸೆ ನೀಡಿದೆ. ಅಭಿಮಾನಿಗಳ ಗುಂಪನ್ನು ಪೊಲೀಸರು ನಿಯಂತ್ರಿಸಲು ವಿಫಲವಾದ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನ ಸದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪನ್ನಪಾಳ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನೇಣಿಗೆ ಶರಣಾದ ಮಹಿಳೆಯನ್ನು ಕತೀಜಾ ಕೂಬ್ರ(29) ಎಂದು ಗುರುತಿಸಲಾಗಿದೆ. ಗಂಡನ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮಗಳು ಮದುವೆಯಾಗಿಂದ ಗಂಡ ಜಗಳ ಮಾಡುತ್ತಿದ್ದ. ದೈಹಿಕವಾಗಿ ಹಲ್ಲೆ ಮಾಡುತ್ತಿದ್ದ. ಅವನಿಗೆ ಬೇರೊಬ್ಬಳೊಂದಿಗೆ ಸಂಬಂಧವಿತ್ತು. ಹೀಗಾಗಿ ಕತೀಜಾಳನ್ನ ಪತಿ ಮಹೆಬೂಬ್ ಪರೀಷನೇ ಕೊಂದಿದ್ದಾನೆ ಎಂದು ಕತೀಜಾ ತಂದೆ ಆರೋಪಿಸಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೊಲೆಯಾಗಿದ್ದು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಮೃತ ಕತೀಜಾ ಅವರ ಗಂಡ , ಮಾವ ಮತ್ತು ನಾದಿನಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಬರಿಮಲೆ ವಾವರ್ ಮಸೀದಿ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಹಿಂದೂಗಳು ವಾವರ್ ಮಸೀದಿಗೆ ಹೋಗದಂತೆ ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಂಚಾಲಕ ಮೋಹನ್ ಗೌಡ ಮನವಿಯನ್ನು ಮಾಡಿದ್ದಾರೆ. ಈಗಾಗಲೇ ಶಬರಿಮಲೆ ಅಯ್ಯಪ್ಪ ಸ್ವಾಮೀಯ ವ್ರತ ಆರಂಭವಾಗಿದೆ. ನಾವು ಶಬರಿಮಲೆಗೆ ಹೋಗುವಾಗ ಘೋರ ತಪ್ಪನ್ನು ಮಾಡ್ತಿದ್ದೀವಿ.ವಾವರ್ ಮಸೀದಿಗೆ ಹೋಗುವಂತಹ ಕೆಟ್ಟ ಸಂಪ್ರದಾಯ ಇತ್ತೀಚೆಗೆ ಶುರುವಾಗಿದೆ. ಹಿಂದೂಗಳು ಕೋಟಿಗಟ್ಟಲೇ ಹಣವನ್ನು ಆ ಮಸೀದಿಗೆ ಸುರಿಯುತ್ತಿದ್ದಾರೆ. ವಾವರ್ ಒಬ್ಬ ಬಾಬರ್ ಆಗಿದ್ದ, ಒಬ್ಬ ಮುಸ್ಲಿಂ ಆಗಿದ್ದನು. ಒಬ್ಬ ಕಳ್ಳನನ್ನ ಅಯ್ಯಪ್ಪ ಸ್ವಾಮೀಯ ಸ್ನೇಹಿತ ಎಂದು ಬಿಂಬಿಸಿದ್ದಾರೆ. ಅವನ ಘೋರಿಯನ್ನು ಮಸೀದಿಯನ್ನಾಗಿ ಮಾಡಿದ್ದಾರೆ. ಇದು ಹಿಂದೂ ಧರ್ಮಕ್ಕೆ ಅಯ್ಯಪ್ಪನಿಗೆ ಮಾಡಿದ ಅಪಮಾನವಾಗಿದೆ. ಹಿಂದೂಗಳ ಮೂರ್ತಿ ಪೂಜೆಯನ್ನು ಒಪ್ಪದ ಒಬ್ಬ ಮುಸ್ಲಿಂ ವಾವರ್, ಹೇಗೆ ಅಯ್ಯಪ್ಪ ಸ್ವಾಮಿ ಭಕ್ತ ಆಗಲು ಸಾಧ್ಯವಿದೆ..? ಯಾವುದೇ ಕಾರಣಕ್ಕೂ ಹಿಂದೂಗಳು ವಾವರ್ ಮಸೀದಿಗೆ ಕಾಣಿಕೆ ನೀಡಬಾರ್ದು.ಶಬರಿಮಲೆಗೆ ಹೋಗಿ ಅಯ್ಯಪ್ಪಸ್ವಾಮಿ ದರ್ಶನ ಮಾತ್ರ ಪಡೆಯಬೇಕು ಎಂದು ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ನಿನ್ನೆ ಮದುವೆ ಆಗ್ತೇನೆ, ಎಂಗೇಜ್ಮೆಂಟ್ ಕ್ಯಾನ್ಸಲ್ ಮಾಡಿಕೊಂಡು ಬಾ ಎಂದು ಕಾಡ್ತಿದ್ದ ಯುವತಿ ಕಾಟಕ್ಕೆ ಬೇಸತ್ತು ಯುವಕ ಮನೆ ಬಿಟ್ಟು ತೆರಳಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದಲ್ಲಿ ನಡೆದಿದೆ. ಹೆಣ್ಣು ನೋಡೊಕೆ ಹೋದಾಗ ಹುಡುಗ ಇಷ್ಟವಿಲ್ಲ ಎಂದು ಮರೆಪ್ಪನನ್ನು ಯುವತಿ ತಿರಸ್ಕರಿಸಿದ್ಲು. ಬಳಿಕ ಯುವತಿ ಮತ್ತೊಂದು ಹುಡುಗಿಯನ್ನ ನೋಡಿ ಎಂಗೆಜ್ಮೆಂಟ್ ಆದ ಹುಡುಗನಿಗೆ ಕಾಟ ಕೊಡಲು ಶುರು ಮಾಡಿದ್ದಾಳೆ. ನಿನ್ನೇ ಮದುವೆ ಆಗ್ತೇನೆ, ನಿನ್ನ ಎಂಗೇಜ್ಮೆಂಟ್ ಕ್ಯಾನ್ಸಲ್ ಮಾಡಿಕೊಂಡು ಬಾ ಎಂದು ಯುವತಿ ನಿರಂತರವಾಗಿ ಕಾಡಲು ಶುರು ಮಾಡಿದ್ದಾಳೆ. ಯುವತಿಯ ಕಾಟಕ್ಕೆ ಬೇಸತ್ತು ಮರೆಪ್ಪ ಮನೆ ಬಿಟ್ಟೇ ಹೋಗಿದ್ದಾನೆ. ಯವತಿಯ ಕಾಟಕ್ಕೆ ಬೇಸತ್ತ ಯುವಕ ನವೆಂಬರ್ 13 ರಂದು ಮನೆ ಬಿಟ್ಟು ತೆರಳಿದ್ದಾನೆ. ಐದು ಪುಟಗಳ ಪತ್ರ ಬರೆದು, ಮೊಬೈಲ್ ಫೋನ್ ಮನೆಯಲ್ಲೇ ಬಿಟ್ಟು ನಾಪತ್ತೆಯಾಗಿದ್ದಾನೆ. ಇತ್ತ ವೃದ್ಧ ತಂದೆ ತಾಯಿ ಬಿಟ್ಟು ಹೋದ ಮಗನಿಗಾಗಿ ಕಣ್ಣಿರು ಹಾಕುತ್ತಾ ಕಾಯುತ್ತಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಮಹಿಪಾಲುಪರ್ ಮೇಲ್ಸುತುವೆ ಬಿಎಂಡಬ್ಲ್ಯೂ ಐಷಾರಾಮಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗುರುವಾಂವ್ ನಿವಾಸಿ ಸುಭೇಂದು ಚಟರ್ಜಿ (50) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಟಯರ್ ಸ್ಫೋಟಗೊಂಡ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರು ಡಿಕ್ಕಿ ಹೊಡೆದಿದ್ದರಿಂದ ಗಾಯಗೊಂಡಿದ್ದ ಸೈಕ್ಲಿಸ್ಟ್ ಅನ್ನು ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದರು. ಗುರ್ ಗಾಂವ್ ನಿಂದ ದೆಹಲಿಯ ದೌಲಾ ಕೌನ್ ಗೆ ಸೈಕಲ್ ನಲ್ಲಿ ಸುಭೇಂದು ಚಟರ್ಜಿ ಹೊರಟಿದ್ದರು. ಡಿಕ್ಕಿ ಹೊಡೆದ ಕಾರು ಚಾಲಕ ಯಾರು ಎಂಬುದು ತಿಳಿದು ಬಂದಿಲ್ಲ. ಆದರೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy