Subscribe to Updates
Get the latest creative news from FooBar about art, design and business.
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
- ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
- ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
- ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
- ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
- ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
Author: admin
ಇಂಡೋನೇಷ್ಯಾ: ಶನಿವಾರ ತಡರಾತ್ರಿ ಫುಟ್ಬಾಲ್ ಪಂದ್ಯದ ವೇಳೆ ನಡೆದ ಹಿಂಸಾಚಾರದಿಂದ ಕನಿಷ್ಠ 127 ಮಂದಿ ಸಾವಿಗೀಡಾದ ಘಟನೆ ಜಕಾರ್ತದ ಪೂರ್ವ ಜಾವದ ಮಲಂಗ್ ನಲ್ಲಿ ನಡೆದಿದೆ. ಪಂದ್ಯದಲ್ಲಿ ಎದುರಾಳಿ ತಂಡ ಗೆಲುವು ಸಾಧಿಸಿದ್ದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಮೈದಾನಕ್ಕೆ ಇಳಿದು ದಾಂಧಲೆ ನಡೆಸಿದ್ದಾರೆ. ಪ್ರೇಕ್ಷಕರ ನೂಕುನುಗ್ಗಲು ಉಂಟಾಗಿ 129 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅರೆಮಾ ಎಫ್ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಬೆಂಬಲಿಗರು ಮೈದಾನಕ್ಕೆ ನುಗ್ಗಿದರು ಮತ್ತು ಪೊಲೀಸರು ಅಶ್ರುವಾಯು ಹಾರಿಸಿದರು, ಕಾಲ್ತುಳಿತ ಮತ್ತು ಉಸಿರುಗಟ್ಟಿ ಹಲವರು ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉತ್ತರ ಪ್ರದೇಶ: ಕಾನ್ಪುರದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ 26 ಜನ ಸಾವನ್ನಪ್ಪಿದ ದಾರುಣ ಘಟನೆ ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ನಡೆದಿದೆ. ಭಕ್ತರನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿ ಉನ್ನಾವೋದಿಂದ ಹಿಂತಿರುಗುತ್ತಿತ್ತು. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 26 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಯಾತ್ರಿಕರು ಫತೇಪುರದ ಚಂಡಿಕಾ ದೇವಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಭಾರೀ ಮಳೆಗೆ ಮಹಾದೇವ ಲಕ್ಷ್ಮಪ್ಪ ಬಾಗಿಲದ ಇವರಿಗೆ ಸೇರಿದ ಮನೆ ಕುಸಿದು ತಾಯಿ – ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಯರಗಟ್ಟಿ ಸಮೀಪದ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ. ತಾಯಿ ಯಲ್ಲವ್ವ ಮಹಾದೇವ ಬಾಗಿಲದ(40), ಪ್ರಜ್ವಲ್(5) ಮಗು ಹಾಗೂ ಸಾವನಪ್ಪಿದ ದುರ್ದೈವಿಗಳು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಹಾಂತೇಶ ಮಠದ, ಸಿಪಿಐ ಮೌನೇಶ್ವರ ಮಾಲಿಪಾಟೀಲ, ಪಿಎಸ್ ಐ ಬಸನಗೌಡ ನಿರ್ಲಿ, ಎಎಸ್ ಐ ವಾಯ್ ಎಂ. ಕಡಕೋಳ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು : ಕವಿತಾಳ ಪಟ್ಟಣದ ಸಮೀಪದ ಮಾನ್ವಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಕಾಪುರದ ಶಾಲೆಯ ವಿದ್ಯಾರ್ಥಿಗಳು ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕರ ಥ್ರೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಗುಲ್ಬರ್ಗ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಕುರಿತು ಶಾಲೆಯ ಮುಖ್ಯ ಗುರುಗಳಾದ ಮಲ್ಲಪ್ಪ ಕವಲೂರು ಮಾತನಾಡುತ್ತಾ, ನಮ್ಮ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇಲ್ಲದಿದ್ದರು ಶಾಲೆಯ ಶಿಕ್ಷಕರ ಮತ್ತು ಹಳೆ ವಿದ್ಯಾರ್ಥಿಗಳು ಮಾರ್ಗದರ್ಶನದಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾದದ್ದು ತುಂಬಾ ಹೆಮ್ಮೆಯ ವಿಷಯ. ಕಳೆದ ಎರಡು ವರ್ಷದ ಹಿಂದೆ ಕೊರೊನ ಲಾಕ್ ಡೌನ್ ಮುಂಚೆ ನಮ್ಮ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದರು. ನಮ್ಮ ಶಾಲೆಯ ಮಕ್ಕಳು ದೈಹಿಕ ಶಿಕ್ಷಕರ ಕೊರತೆಯಲು ಕ್ರೀಡಾ ಪ್ರೇಮಿಗಳ ಪ್ರೋತ್ಸಾಹದಿಂದ ವಿಭಾಗ ಮಟ್ಟಕ್ಕೆ ಆಯ್ಕೆಯಾಗುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು. ಶಾಲೆಯ ವಿಧ್ಯಾರ್ಥಿಗಳ ಸಾಧನೆಗೆ ಎಸ್.ಡಿ.ಎಮ್.ಸಿ. ಅಧ್ಯಕ್ಷರು ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರಾದ ರವಿಚಂದ್ರ ,…
ಕೊರಟಗೆರೆ : ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಹೂಲೀಕುಂಟೆ ಗ್ರಾಮದಲ್ಲಿ ಪ್ರಯಾಣಿಕರ ತಂಗುದಾಣವನ್ನು ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಹೂಲೀಕುಂಟೆ ಗ್ರಾಪಂ ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ತಂಗುದಾಣ ಸ್ವಚ್ಚತೆ ಇಲ್ಲದ ಕಾರಣ ಮಳೆ ಬಂದಾಗ ಪ್ರಯಾಣಿಕರು ರಸ್ತೆಯಲ್ಲಿಯೇ ನಿಂತು ಹೋಗುವಂತಹ ಅನಿವಾರ್ಯತೆ ಎದುರಾಗಿತ್ತು , ಆದ್ದರಿಂದ ಗಾಂಧಿ ಜಯಂತಿ ಅಂಗವಾಗಿ ಗ್ರಾ.ಪಂ.ನ ಸದಸ್ಯರು ಹಾಗೂ ಅಧಿಕಾರಿ ವರ್ಗದೊಂದಿಗೆ ತಂಗುದಾಣವನ್ನು ಸ್ವಚ್ಚತೆ ಮಾಡಿದ್ದೇವೆ ಎಂದರು. ಪ್ರಯಾಣಿಕರು ಪ್ರಯಾಣಿಸುವಾಗ ಉಗುಳುವುದು, ಗಲೀಜು ಮಾಡುವಂತಹ ಕೆಲಸ ಯಾರು ಮಾಡಬಾರದು, ಇದನ್ನು ನಿರ್ಮಿಸಿರುವುದೇ ನಿಮಗಾಗಿ ಆಗಾಗಿ ಗಲೀಜು ಮಾಡದಂತೆ ಗ್ರಾ.ಪಂ.ಯವರ ಜೊತೆ ಕೈಜೋಡಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಿಡಿಓ ಪೃಥ್ವಿಭಾ, ಸದಸ್ಯರಾದ ಪ್ರೇಮಲತಾ, ಜಯಮ್ಮ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್ ., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನೇ ಜೋಡಿಸಲು ಸಾಧ್ಯವಿಲ್ಲ: ಭಾರತ್ ಜೋಡೋ ಬಗ್ಗೆ ಸಚಿವ ಎ.ನಾರಾಯಣಸ್ವಾಮಿ ಹೇಳಿಕೆ
ಕೊರಟಗೆರೆ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮವು ಅವರ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರವರನ್ನು ಜೋಡಿಸಲು ಸಾಧ್ಯವಿಲ್ಲ ಇನ್ನು ದೇಶವನ್ನು ಜೋಡಿಸಲು ಸಾಧ್ಯವೇ? ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಟೀಕಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ರವರ ಹುಟ್ಟು ಹುಬ್ಬದ ಅಂಗವಾಗಿ ಕೊರಟಗೆರೆ ವಿಧಾನ ಸಭಾ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಡಾ.ಲಕ್ಷೀಕಾಂತ್ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯವಾಳಿಗಳ ಕಾರ್ಯಕ್ರಮದ ಉದ್ಘಾಟನೆಗೂ ಮುಂಚಿತವಾಗಿ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಡನೆ ಮಾತನಾಡಿದರು. ಭಾರತ್ ಜೋಡೋ ಕಾರ್ಯಕ್ರಮ ರಾಹುಲ್ ಗಾಂಧಿಯವರು ಯಾವ ಕಾರಣಕ್ಕಾಗಿ ಮಾಡುತ್ತಿದ್ದರೂ ತಿಳಿಯುತ್ತಿಲ್ಲ,ಕರ್ನಾಟಕದಲ್ಲೇ ಕಾಂಗ್ರೆಸ್ ಪಕ್ಷನ್ನು ಜೋಡಿಸಲಾಗದ ಸ್ಥಿತಿ ಇದ್ದು ದೇಶ ಜೋಡಿಸಲು ಹೋಗುವುದು ಪ್ರಯೋಜನವಿದೆಯಾ ಎಂದು ಪ್ರಶ್ನಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಬೆಳ್ಳಿಗೆ ಎದ್ದಾಗ ಅವರು ಮೊದಲು ಜಪ ಮಾಡುವುದು ಆರ್.ಎಸ್.ಎಸ್. ಸಂಘಟನೆ ಬಗ್ಗೆಯೇ, ಈ ಸಂಘಟನೆಯನ್ನು ಕಾಂಗ್ರೆಸ್ ಪಕ್ಷ ತಮ್ಮ ಅಧಿಕಾರ ಅವಧಿಗಳಲ್ಲಿ ದುರುದ್ದೇಶ ಪೂರ್ವಕವಾಗಿ…
ಚಾಮರಾಜನಗರ: ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಚಾಮರಾಜನಗರ ಆರಂಭಗೊಂಡಿದೆ. ಆದರೆ ಮೊದಲವೇ ದಿನ ದೊಡ್ಡ ಯಡವಟ್ಟು ಮಾಡಿಕೊಂಡಿದ್ದಾರೆ. ತಮಿಳುನಾಡಿನಿಂದ ಆಗಮಿಸಿದ ರಾಹುಲ್ ಗಾಂಧಿ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನವನದ ಒಳಗಡೆ ಅರಣ್ಯ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಚಾಮರಾಜನಗರ ಮಂಡಲ ಬಿಜೆಪಿ ಅಧ್ಯಕ್ಷ ಡಿ.ಪಿ. ಜಗದೀಶ್ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳಿಗೆ ದೂರು ನೀಡೆಲಾಗಿದೆ. ಬಂಡೀಪುರದಿಂದ ಗುಂಡ್ಲುಪೇಟೆಗೆ ಬರುವ ಹುಣಸೆಮರದ ರಸ್ತೆಯ ಬಳಿ ಅರಣ್ಯದೊಳಗೆ ನಿಂತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್, ಎಚ್. ಸಿ. ಮಹದೇವಪ್ಪ, ರಾಹುಲ್ ಗಾಂಧಿ ಅರಣ್ಯ ನಿಯಮವನ್ನು ಗಾಳಿಗೆ ತೂರಿದ್ದಾರೆ ಎಂದು ದೂರಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲು ಅಕ್ಟೋಬರ್ 7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈಗಾಗಲೇ ರಾಜ್ಯದ ಸಮಸ್ಯೆ ಕುರಿತಂತೆ ಚರ್ಚಿಸೋ ಸಂಬಂಧ ಸರ್ವಪಕ್ಷಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅಧಿವೇಶನದ ಸಂದರ್ಭದಲ್ಲಿ ವಿಪಕ್ಷಗಳ ನಾಯಕರಿಗೆ ಭರವಸೆಯನ್ನು ನೀಡಿದ್ದರು. ತಾವು ನೀಡಿದಂತ ಭರವಸೆಯಂತೆ ಅಕ್ಟೋಬರ್ 7ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕರು, ಕಾಂಗ್ರೆಸ್, ಜೆಡಿಎಸ್ ನಾಯಕರು, ಪರಿಷತ್ ವಿಪಕ್ಷ ನಾಯಕರು ಭಾಗವಹಿಸಲಿದ್ದಾರೆ. ಈ ಸರ್ವಪಕ್ಷಗಳ ಸಭೆಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ಮೋಹನ್ ದಾಸ್ ಸಮಿತಿ ಸಲ್ಲಿಸಿದ್ದಂತ ವರದಿಯ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವೃದ್ಧೆಯನ್ನು ಆಸ್ಪತ್ರೆ ಐಸಿಯುನಿಂದ ಸಹಿ ಮಾಡಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಿಬ್ಬಂದಿ ಕರೆಸಿಕೊಂಡಂತಹ ಅಮಾನವೀಯ ಘಟನೆ ಬೆಳಗಾವಿ ದಕ್ಷಿಣ ವಿಭಾಗದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದಿದೆ. ಆಸ್ತಿಹಂಚಿಕೆ ಪತ್ರಕ್ಕೆ ಸಹಿ ಹಾಕುವ ವಿಚಾರಕ್ಕೆ ಐಸಿಯುನಿಂದ ಸ್ಟ್ರೆಚರ್ನಲ್ಲೇ 80 ವರ್ಷದ ವೃದ್ಧೆ ಮಹಾದೇವಿಯನ್ನು ಕುಟುಂಬಸ್ಥರು ಕರೆತಂದಿದ್ದಾರೆ. ವೃದ್ಧೆ ಐಸಿಯುನಲ್ಲಿದ್ದ ಕಾರಣ ಆಸ್ಪತ್ರೆಗೆ ಬರಲು ಉಪನೋಂದಣಾಧಿಕಾರಿ ಪದ್ಮನಾಭ್ ಗುಡಿ ಅವರಿಗೆ ಮನವಿ ಮಾಡಲಾಗಿದೆ. ಆದರೆ ಮನವಿ ನಿರಾಕರಿಸಿದ್ದಾರೆ. ಆಸ್ಪತ್ರೆಗೆ ಬಂದು ವೃದ್ಧೆ ಸಹಿ ಪಡೆಯಲು ಹಣಕ್ಕೆ ಬೇಡಿಕೆ ಆರೋಪ ಮಾಡಿದ್ದು, ಹಣ ನೀಡಲು ಒಪ್ಪದೇ ವೃದ್ಧೆಯನ್ನು ಕುಟುಂಬಸ್ಥರು ಕಚೇರಿಗೆ ಕರೆತಂದಿದ್ದಾರೆ. ಅಂಧ ಅಧಿಕಾರಿಯ ನಡುವಳಿಕೆಯಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಬೆಳಗಾವಿಗಷ್ಟೇ ಸೀಮಿತವಾಗಿದ್ದ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಈ ಬಾರಿ ರಾಜ್ಯ ಮಟ್ಟದ ಮನ್ನಣೆ ಸಿಕ್ಕಿದ್ದು, ಅಕ್ಟೋಬರ್ 23ರಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿದೆ. ಈ ಹಿನ್ನೆಲೆ ಐತಿಹಾಸಿಕ ಕೇಂದ್ರಗಳಿಗೆ ವೀರಜ್ಯೋತಿ ಸಂಚರಿಸಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಪುರಭವನದಲ್ಲಿ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಕಿತ್ತೂರು ಉತ್ಸವಕ್ಕೆ 2 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕನ್ನಡ & ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಹಯೋಗದಲ್ಲಿ ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾಹಿತಿ ನೀಡಿದರು. ಕಿತ್ತೂರು ಉತ್ಸವದ ವೀರಜ್ಯೋತಿ ಯಾತ್ರೆಯು ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಂಚರಿಸುತ್ತಿತ್ತು. ಆದರೆ ಈ ವರ್ಷ ವಿಶೇಷವಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಕೇಂದ್ರ ಸ್ಥಾನಗಳಿಗೆ ವೀರಜ್ಯೋತಿ ಯಾತ್ರೆ ತಲುಪಲಿದ್ದು, ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…