Author: admin

ನ್ಯಾಯಬೆಲೆ ಅಂಗಡಿಯಲ್ಲಿ ಬಲವಂತವಾಗಿ ತ್ರಿವರ್ಣ ಧ್ವಜ ಹಾರಾಟ ಮಾಡುತ್ತಿರುವುದು, ಅದಕ್ಕಾಗಿ ಬಡ ಜನರಿಂದ ಹಣ ವಸೂಲಿ ಮಾಡುವುದು ನಾಚಿಕೆಗೇಡು ಎಂದು ಬಿಜೆಪಿಯ ಸಂಸದ ವರುಣ್ಗಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಬೆಲೆ ಅಂಗಡಿ ಮುಂದೆ ಬಡವರ ಅಸಹಾಯಕ ಹೇಳಿಕೆಗಳ ಮಾಧ್ಯಮ ವರದಿಯನ್ನು ಟ್ವೀಟರ್ನಲ್ಲಿ ಪೊೀಸ್ಟ್ ಮಾಡಿರುವ ಅವರು, 75ನೇ ವರ್ಷದ ಸ್ವಾತಂತ್ರ್ಯೋತ್ಸವ ಬಡವರಿಗೆ ಹೊರೆಯಾಗುತ್ತಿರುವುದು ದುರಾದೃಷ್ಟ ಎಂದಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ 20ರೂ.ಗೆ ರಾಷ್ಟ್ರಧ್ವಜವನ್ನು ಮಾರಾಟ ಮಾಡಲಾಗುತ್ತಿದೆ.ಧ್ವಜ ಖರೀದಿ ಮಾಡದೇ ಇರುವವರಿಗೆ ಪಡಿತರ ನೀಡುವುದಿಲ್ಲ ಎಂದು ಅಂಗಡಿಯವನು ಹೇಳಿಕೆ ನೀಡಿದ್ದಾನೆ. ಆಹಾರ ಇಲಾಖೆಯ ಇನ್ಸ್ಪೆಕ್ಟರ್ ಅವರು ನೀಡಿರುವ ಸೂಚನೆ ಪ್ರಕಾರ ಪಡಿತರ ಬೇಕಾದರೆ ಧ್ವಜ ಖರೀದಿಸಲೇ ಬೇಕು ಎಂದಿದ್ದಾನೆ. ಆದರೆ, ನಮಗೆ ಕಷ್ಟ ಕಲಾದಲ್ಲಿ ಆಹಾರ ಖರೀದಿಸಲೇ ಹಣವಿಲ್ಲ. ಇನ್ನು ಧ್ವಜಕ್ಕೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದು ದುಬಾರಿಯಾಗಿದೆ ಎಂದು ಕೂಲಿಕಾರ್ಮಿಕರು ಹೇಳಿಕೆ ನೀಡಿದ್ದಾರೆ. ಇದನ್ನು ಪೊೀಸ್ಟ್ ಮಾಡಿರುವ ವರುಣ್ಗಾಂ ತಿರಂಗಗಾಗಿ ಹಣ ವಸೂಲಿ ಮಾಡುವುದು ನಾಚಿಕೆಗೇಡು. ಜೀವನ ನಿರ್ವಹಣೆ ಮಾಡಲು ಸಮಸ್ಯೆ ಎದುರಿಸುತ್ತಿರುವ ಬಡವರ…

Read More

ಕಾಶ್ಮೀರದ ರಜೌರಿ ಜಿಲ್ಲೆಯ ಪರ್ಗಲ್ ಸೇನಾ ಶಿಬಿರದ ಮೇಲೆ ಇಂದು ಮುಂಜಾನೆ ಆತ್ಮಾಹುತಿ ಭಯೋತ್ಪಾದಕರ ಗುಂಪು ದಾಳಿ ನಡೆಸಿ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.ಕ್ಷಿಪ್ರ ಕಾರ್ಯಾಚರನೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಶಸ್ತ್ರ ಸಜ್ಜಿತ ಭಯೋತ್ಪಾದಕರು ಮೂದಲು ಸೇನಾ ಶಿಬಿರದ ಬೇಲಿಯನ್ನು ದಾಟಲು ಪ್ರಯತ್ನಿಸಿದಾಗ ಎಚ್ಚೆತ ಕಾವಲುಗಾರ ಯೋಧ ಎಚ್ಚರಿಸಿ ಪ್ರತಿರೋಧಿಸಿದ್ದಾನೆ. ಈ ನಡುವೆ ಭಯೋತ್ಪಾದಕರ ಗುಂಡು ಹಾರಿಸಿದ್ದಾರೆ ನಂತರ ಗುಂಡಿನ ಚಕಮಕಿ ನಡೆಯಿತು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ಹೇಳಿದ್ದಾರೆ. ಕತ್ತಲೆಯಲ್ಲಿ ಜಾಗದಲ್ಲಿ ಒಳ ನುಸುಳಲು ಪ್ರಯತ್ನಿಸುವಾಗ ಇಬ್ಬರು ಭಯೋತ್ಪಾದಕರು ಪತ್ತೆಯಾಗಿದ್ದಾರೆ. ಅವರನ್ನು ಸದೆಬಡಿಯಲಾಗಿದೆ. ಇದರ ನಡುವೆ ಐವರು ಯೋದರು ಗಾಯಗೊಂಡರು ಅದರಲ್ಲಿ ಮೂವರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ. ದರ್ಹಾಲ್ ಪೊಲೀಸ್ ಠಾಣೆಯಿಂದ ಸುಮಾರು ಆರು ಕಿಲೋಮೀಟರ್ ಈ ಸೇನಾ ಶಿಬಿರವಿದ್ದು ಸಂಚು ಮಾಡಿ ಈ ದಾಳಿ ನಡೆಸಲಾಗಿದೆ.ಕಣಿವೆಯಾದ್ಯಂತ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಹೆಚ್ಚುವರಿ ಪಡೆಗಳು ಸ್ಥಳಕ್ಕೆ…

Read More

ಹಣಕಾಸು ಅವ್ಯವಹಾರ ಆರೋಪ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ)ನಡೆಸುತ್ತಿರುವ ತನಿಖೆಯನ್ನು ಪ್ರಶ್ನಿಸಿ ಕೇರಳದ ಐವರು ಎಲ್‍ಡಿಎಫ್ ಶಾಸಕರು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಿಪಿಐ(ಎಂ) ಶಾಸಕರಾದ ಕೆ ಕೆ ಶೈಲಜಾ, ಐ ಬಿ ಸತೀಶ್ ಮತ್ತು ನಟ ಎಂ ಮುಖೇಶ, ಸಿಪಿಐ ಶಾಸಕ ಇ ಚಂದ್ರಶೇಖರನ್ ಮತ್ತು ಕಾಂಗ್ರೆಸ್ (ಜಾತ್ಯತೀತ) ಶಾಸಕ ಕಡನಪ್ಪಲ್ಲಿ ರಾಮಚಂದ್ರನ್ ಅವರು ಇಡಿ ತನಿಖೆಯನ್ನು ವಿರೋಧಿಸಿ ಹೈಕೋರ್ಟ್‍ನಲ್ಲಿ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎಸ್ ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರ ಪೀಠದ ಮುಂದೆ ಈ ಅರ್ಜಿಯ ವಿಚಾರಣೆಗೆ ನಡೆಯಲಿದೆ. ವಿದೇಶಿ ವಿನಿಮಯ, ಮೂಲಸೌಕರ್ಯ ನಿ ಹೊಡಿಕೆಯಲ್ಲಿ ನಡೆದಿರುವ ಅಕ್ರಮ ಕುರಿತು ತನಿಖೆಗೆ ಹಾಜರಾಗ ಬೇಕೆಂದು ನೀಡಿದ ಸಮನ್ಸ್‍ ಗಳನ್ನು ಕೂಡ ಪ್ರಶ್ನಿಸಿ ಪ್ರತ್ಯೇಕ ಮನವಿಯಲ್ಲಿ ಮಾಜಿ ರಾಜ್ಯ ಹಣಕಾಸು ಸಚಿವ ಥಾಮಸ್ ಐಸಾಕ್ ಸಲ್ಲಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆಯ ಕುರಿತು ಟ್ವೀಟ್ ಮಾಡಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿರುವ ಕಾಂಗ್ರೆಸ್, ಇಂದು ಕೂಡ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ವಿರುದ್ಧ ಮತ್ತಷ್ಟು ವಾಗ್ದಾಳಿ ನಡೆಸಿದೆ. ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಮುಖ್ಯಮಂತ್ರಿಗಳೆಂದರೆ ಪೊಪೆಟ್‍ಗಳು ಇದ್ದ ಹಾಗೆ, ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ. ಬಿ.ಎಸ್.ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ ಬಸವರಾಜ ಬೊಮ್ಮಾಯಿ ಅವರು ಯಾವ ಲೆಕ್ಕ ಎಂದು ಲೇವಡಿ ಮಾಡಿದೆ. ಸಂತೋಷ ಕೂಟಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ ವೈಫಲ್ಯಗಳ ಕೊಡ ತುಂಬಿದೆ ಎಂದು ಕಾಂಗ್ರೆಸ್ ಕಾಲೆಳೆದಿದೆ. ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಮನೆಗೆ ಕಳಿಸಲಾಗಿತ್ತು. ಈಗ ಬಸವರಾಜ ಬೊಮ್ಮಾಯಿ ಅವರನ್ನು ಒಂದನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. ಒಂದೇ ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ ಪೊಪೆಟ್ ಸಿಎಂಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂದು…

Read More

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿರುವ ಹಿನ್ನಲೆಯಲ್ಲಿ ಈ ಬಾರಿ ಅದ್ದೂರಿ ಅಮೃತ ಮಹೋತ್ಸವ ಆಚರಿಸಲು ಇಡೀ ದೇಶ ಸಜಾಗಿದೆ. ಹರ್ ಘರ್ ತಿರಂಗಾ ಯೋಜನೆಯಡಿ ಪ್ರತಿ ಮನೆ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಿಸಲು ತೀರ್ಮಾನಿಸಲಾಗಿದೆ. ಇಂತಹ ಸಂದರ್ಭದಲ್ಲೇ ಕೆಲವು ಕಿಡಿಗೇಡಿಗಳು ರಾಷ್ಟ್ರ ಧ್ವಜವನ್ನು ಬೀದಿಗೆ ಎಸೆಯುವ ಮೂಲಕ ಅಪಮಾನವೆಸಗಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲೇ ಕಿಡೆಗೇಡಿಗಳು ಚಾಮರಾಜಪೇಟೆಯಲ್ಲಿ ರಾಷ್ಟ್ರ ಧ್ವಜವನ್ನು ಬೀದಿಗೆ ಎಸೆಯುವ ಮೂಲಕ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈಗಾಗಲೇ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಭುಗಿಲೆದ್ದಿರುವ ಸಮಯದಲ್ಲೇ ಕಸದ ರಾಶಿಯಲ್ಲಿ ನಾಡಿನ ಹೆಮ್ಮೆಯ ಸಂಕೇತವಾದ ರಾಷ್ಟ್ರ ಧ್ವಜ ಬೀದಿಯಲ್ಲಿ ಬಿದ್ದಿರುವುದು ರಾಷ್ಟ್ರ ಪ್ರೇಮಿಗಳನ್ನು ಆತಂಕಕ್ಕೀಡು ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಹರ್ ಘರ್ ತಿರಂಗಾ ಯೋಜನೆಯನ್ನು ಜಾರಿಗೆ ತಂದು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಾಳೆಯಿಂದ ಆ.15ರವರೆಗೆ ದೇಶದ ಎಲ್ಲಾ ಮನೆಗಳ ಮೇಲೂ ರಾಷ್ಟ್ರ ಧ್ವಜ ಹಾರಿಸುವಂತೆ…

Read More

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬೊಮ್ಮಾಯಿ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಗುಸುಗುಸು ಹಬ್ಬಿರುವ ಸಂದರ್ಭದಲ್ಲೇ ಸ್ಪಷ್ಟನೆ ನೀಡಿರುವ ಅವರು ಹಾಲಿ ಮುಖ್ಯಮಂತ್ರಿ ನಾಯಕ್ವದಲ್ಲೇ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ನನಸಾಗುವುದಿಲ್ಲ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. 2022 ಆಗಸ್ಟ್ 21ರಿಂದ ರಾಜ್ಯದ ಎಲ್ಲೆ ಕಡೆ ಪ್ರವಾಸ ಹಮ್ಮಿಕೊಳ್ಳಲಾಗುವುದು. ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಹುಡುಕಿ ಕೆಲಸ ಮಾಡಲು ಹೈಕಮಾಂಡ್ ಸೂಚನೆ ನೀಡಿದ್ದು, ಪ್ರವಾಸದ ಮೂಲಕ ಪಕ್ಷ ಸಂಘಟನೆ ಮಾಡಲಾಗುವುದು ಎಂದರು. ಇತ್ತೀಚಿಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ಜತೆ ಚರ್ಚೆ ವೇಳೆ ರಾಜ್ಯ ರಾಜಕೀಯ ವಿದ್ಯಮಾನದ ಕುರಿತು ವಿಷಯ ಮಂಡನೆ ಮಾಡಲಾಗಿದೆ. ಸಾಮೂಹಿಕ ನೇತೃತ್ವದಲ್ಲೇ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು. ನಾನು ರಾಜೀನಾಮೆ ಕೊಟ್ಟ ನಂತರವೇ…

Read More

ಪ್ರೀತಿಯ ಅಮಲಿನಲ್ಲಿ ಮಗಳು ಪೋಷಕರನ್ನು ಕೊಂದಿದ್ದಾಳೆ. ಜಾರ್ಖಂಡ್‌ನ ಮ್ಯಾನಿಫಿಟ್ ಟೆಲ್ಕೊ ಪೊಲೀಸ್ ಠಾಣೆಯ ಜೆಮ್‌ಶೆಡ್‌ಪುರದಲ್ಲಿ ಭಾನುವಾರ ರಾತ್ರಿ ಈ ಭಯಾನಕ ಘಟನೆ ನಡೆದಿದೆ. 15 ವರ್ಷದ ಬಾಲಕಿಯೊಬ್ಬಳು 37 ವರ್ಷದ ಯುವಕನನ್ನು ಕೆಲ ದಿನಗಳಿಂದ ಪ್ರೀತಿಸುತ್ತಿದ್ದಳು. ಈ ಕ್ರಮದಲ್ಲಿ ಇಬ್ಬರೂ ಮದುವೆಯಾಗಲು ಬಯಸಿದ್ದರು. ಇದಕ್ಕಾಗಿ ಕಳೆದ ಭಾನುವಾರ ರಾತ್ರಿ ಬಾಲಕಿ ಮನೆಯಿಂದ ಓಡಿ ಹೋಗಲು ನಿರ್ಧರಿಸಿದ್ದಾಳೆ. ತಡರಾತ್ರಿ ತಂದೆ-ತಾಯಿ ಮಲಗಿದ ಬಳಿಕ ಮನೆಯಿಂದ ಹೊರಬರಲು ಯತ್ನಿಸಿದ್ದಾಳೆ. ಶಬ್ಧ ಕೇಳಿದ ಪೋಷಕರು ಎಚ್ಚರಗೊಂಡರು. ಮಗಳು ಹೊರಗೆ ಹೋಗಲು ಪ್ರಯತ್ನಿಸುತ್ತಿರುವುದನ್ನು ನೋಡಿ ಅವರು ಕೇಳಿದರು. ಆಗ ತನ್ನ ಪ್ರೀತಿಯ ಬಗ್ಗೆ ಹೇಳಿದ್ದಾಳೆ ಹಾಗೂ ತಾನು ಅವನನ್ನು ಮದುವೆಯಾಗಲಿದ್ದೇನೆ ಎಂದು ಹೇಳಿದ್ದಾಳೆ. ಇದರಿಂದ ಗಾಬರಿಗೊಂಡ ಪೋಷಕರು ಮಗಳನ್ನು ತಡೆಯಲು ಯತ್ನಿಸಿದ್ದಾರೆ. ಬಾಲಕಿಯನ್ನು ಮನೆಯಿಂದ ಹೊರಗೆ ಹೋಗದಂತೆ ತಡೆದಿದ್ದಾರೆ. ತಡೆದಿದ್ದಕ್ಕೆ ಕೋಪಗೊಂಡ ಬಾಲಕಿ ಪೋಷಕರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾಳೆ. ಮನೆಯಲ್ಲಿದ್ದ ಸುತ್ತಿಗೆಯ ಜೊತೆಗೆ ಪ್ರೆಶರ್ ಕುಕ್ಕರ್ ನಿಂದ ಪೋಷಕರ ತಲೆಗೆ ಹೊಡೆದಿದ್ದಾಳೆ. ಇದರಿಂದ ಇಬ್ಬರೂ ಸ್ಥಳದಲ್ಲೇ…

Read More

ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ಘೋಷಿಸಿದ್ದು, ಬಿಜೆಪಿ ಜೊತೆಗಿನ ಮೈತ್ರಿಗೆ ಗುಡ್ ಬೈ ಹೇಳಿದ್ದಾರೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಮತ್ತೊಮ್ಮೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿತೀಶ್ ಕುಮಾರ್ ಅವರು ಪ್ರಧಾನಿಯಾಗಲು ಸಾಧ್ಯವಾಗದೇ ಬೇರೆಯವರೊಂದಿಗೆ ಮೈತ್ರಿಗಾಗಿ ಬಿಜೆಪಿ ತೊರೆದಿದ್ದಾರೆ ಎಂದು ಕಮಲ ಪಕ್ಷ ಟೀಕಿಸಿದೆ. ತಾವು ಧರ್ಮದಲ್ಲಿ ನಂಬಿಕೆ ಇಟ್ಟಿದ್ದು, ನಿತೀಶ್ ಪಕ್ಷದೊಂದಿಗಿನ ಮೈತ್ರಿಯನ್ನು ಮುರಿಯುವುದಿಲ್ಲ ಎಂದು ಬಿಜೆಪಿ ಘೋಷಿಸಿದೆ. ಏತನ್ಮಧ್ಯೆ, ತಮ್ಮ ರಾಜಕೀಯ ಜೀವನದಲ್ಲಿ ಏನೇ ಏರಿಳಿತಗಳ ನಡುವೆಯೂ 8ನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಮೊದಲ ಬಾರಿಗೆ: ಮಾರ್ಚ್, 2000 ಎರಡನೇ ಬಾರಿ: ನವೆಂಬರ್, 2005 ಮೂರನೇ ಬಾರಿ: ನವೆಂಬರ್, 2010 ನಾಲ್ಕನೇ ಬಾರಿ: ಫೆಬ್ರವರಿ, 2015 ಐದನೇ ಬಾರಿ: ನವೆಂಬರ್, 2015 ಆರನೇ ಬಾರಿ: ಜುಲೈ, 2017 ಏಳನೇ ಬಾರಿ: ನವೆಂಬರ್, 2020 ಎಂಟನೇ ಬಾರಿ: 10, ಆಗಸ್ಟ್, 2022 ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಮಾಧ್ಯಮಗಳಿಗೆ…

Read More

ದೇಶದಲ್ಲಿ ಮಣ್ಣು ಮುಕ್ಕುತ್ತಿರುವ ಕಾಂಗ್ರೆಸ್‍ಗೆ ಬಿಜೆಪಿ ಬದಲಾವಣೆ ಬಗ್ಗೆ ಮಾತನಾಡಲು ಯಾವ ಅಧಿಕಾರವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ಗೆ ದೇಶದಲ್ಲಿ ತಳವಿಲ್ಲದಂತಾಗಿದೆ. ಆಗಿದ್ದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿಯಲ್ಲಿನ ಬದಲಾವಣೆ ಬಗ್ಗೆ ಮಾತನಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು. ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಸಮಾವೇಶದ ಬಳಿಕ ಕಾಂಗ್ರೆಸ್‍ನಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಸಿದ್ದರಾಮಯ್ಯ ಅವರ ನಡುವೆ ಒಳ ಜಗಳ ನಡೆಯುತ್ತಿದೆ. ಮೂಲ ಕಾಂಗ್ರೆಸಿಗರು ಸಭೆ ಮಾಡಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಹೇಳಿದರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಒಳ ಜಗಳ ಸಮಾವೇಶದ ನಂತರ ಬೀದಿಗೆ ಬಂದಿದೆ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಮೇಶ್‍ಕುಮಾರ್, ಎಂ.ಬಿ.ಪಾಟೀಲ್ ಅವರ ನಡುವಿನ ಅಸಮಾಧಾನವೂ ಬಹಿರಂಗಗೊಂಡಿದೆ. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಪಾದಯಾತ್ರೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ ಎಂದರು.…

Read More

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಗಜಪಡೆಗೆ ಇಂದು ಅರಮನೆ ಆವರಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆದಿದ್ದು, ನಗರದಲ್ಲಿನ ಅಶೋಕಾಪುರಂನಲ್ಲಿರುವ ಅರಣ್ಯ ಭವನದಲ್ಲಿ ಬೀಡುಬಿಟ್ಟಿದ್ದ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಣ್ಯ ಇಲಾಖೆ ವತಿಯಿಂದ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ನಂತರ ದಸರಾ ಗಜಪಡೆ ಅರಮನೆ ಆವರಣ ಪ್ರವೇಶಿಸಿತು. ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆ ಆವರಣಕ್ಕೆ ಅರಣ್ಯ ಭವನದಿಂದ 3.5 ಕಿಮೀ ಕಾಲ್ನಡಿಗೆ ಮೂಲಕ ಆಗಮಿಸಿವೆ. ಅರಮನೆ ಆಡಳಿತಮಂಡಳಿ ವತಿಯಿಂದ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. 9.20ರಿಂದ 10ರ ಶುಭ ಲಗ್ನದಲ್ಲಿ ದಸರಾ ಗಜಪಡೆಗಳಿಗೆ ಅರಮನೆ ಆಡಳಿತ ಮಂಡಳಿ ವತಿಯಿಂದ ಪೂಜೆ ನೆರವೇರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕ ರಾಮದಾಸ್, ಡಿಸಿಎಫ್ ಡಾ.ಕರಿಕಾಳನ್ ಪೂಜೆಯಲ್ಲಿ ಭಾಗಿಯಾಗಿದ್ದರು. ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಜಿಲ್ಲಾಡಳಿತ ವತಿಯಿಂದ ಪುಷ್ಪಾರ್ಚನೆ ಸಲ್ಲಿಸಿ ದಸರಾ ಗಜಪಡೆಗಳಿಗೆ…

Read More