Subscribe to Updates
Get the latest creative news from FooBar about art, design and business.
- ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
- ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
- 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
- ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
- ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
- ತಿಪಟೂರು: ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
- ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
- ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Author: admin
ಪಣಜಿ: ನಿರಂತರವಾಗಿ ಸುರಿದ ಭಾರೀ ಮಳೆಗೆ ದಕ್ಷಿಣ ಗೋವಾದ ಪ್ರಸಿದ್ಧ ದೂಧ್ ಸಾಗರ್ ಜಲಪಾತದಲ್ಲಿ ಕೇಬಲ್ ಸೇತುವೆ ಕುಸಿದು ಬಿದ್ದಿದ್ದು, 40ಕ್ಕೂ ಹೆಚ್ಚು ಪ್ರವಾಸಿಗರನ್ನ ರಕ್ಷಿಸಲಾಗಿದೆ. ಶುಕ್ರವಾರ ಸಂಜೆ ಘಟನೆ ಈ ನಡೆದಿದ್ದು, ಗೋವಾ – ಕರ್ನಾಟಕ ಗಡಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪಾತದ ನೀರಿನ ಮಟ್ಟ ಏರಿಕೆಯಾಗಿದೆ. ಪರಿಣಾಮ ಸೇತುವೆ ಕುಸಿದಿದ್ದು, 40ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಅಪಾಯದಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಕೂಡಲೇ ದೃಷ್ಟಿ ಲೈಫ್ ಸೇವರ್ಸ್ ಸಹಾಯದಿಂದ ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ದೃಷ್ಟಿ ಲೈಫ್ ಸೇವರ್ಸ್ನ ಪಿಆರ್ಒ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಸಿದರು. ಮೃತ ರಾಸುಗಳ ಪರಿಹಾರಕ್ಕೆ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ 8 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು: ಸಿರವಾರ ತಾಲೂಕು ಕವಿತಾಳ ಪಟ್ಟಣದಲ್ಲಿ. ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ಹೊಲಗಳಲ್ಲಿ ನೀರು ನುಗ್ಗಿ ಹತ್ತಿ ತೊಗರಿ ಬೆಳೆ ನಾಶವಾಗಿರುತ್ತದೆ. ಮೌನೇಶ್ ತಂದೆ ಅಯ್ಯಾಳಪ್ಪ ಹಿರೇಕುರುಬರು ಇವರಿಗೆ ಸಂಬಂಧಿಸಿದ ಹೊಲದಲ್ಲಿ ಹತ್ತಿ ಹೊಲಕ್ಕೆ ನೀರು ನುಗ್ಗಿ ಬೆಳೆ ನಾಶ ಆಗುವುದಲ್ಲದೇ ಆತಂಕ ಉಂಟು ಮಾಡಿದೆ. ಎಕರೆಗೆ 15 ಸಾವಿರ ಖರ್ಚು ಮಾಡಿರುತ್ತಾರೆ. ಒಟ್ಟು 10 ಎಕರೆ ಹತ್ತಿ ಮತ್ತು ತೊಗರಿ ಹೊಲಕ್ಕೆ ನೀರು ನುಗ್ಗಿ ಇರುತ್ತದೆ ರೈತ ಆತಂಕದಲ್ಲಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಪರಿಹಾರವನ್ನು ದೊರಕಿಸಿಕೊಡಬೇಕೆಂದು. ರೈತ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೊಡೋ ಪಾದಯಾತ್ರೆಯಲ್ಲಿ ಭಾಗವಹಿಸಲು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ತೆರಳಿದರು. 150ಕ್ಕೂ ಹೆಚ್ಚು ವಾಹನಗಳಲ್ಲಿ ಹೊರಟ ಕಾರ್ಯಕರ್ತರಿಗೆ ಚನ್ನರಾಜ ಹಟ್ಟಿಹೊಳಿ ಮಾರ್ಗದರ್ಶನ ಮಾಡಿ, ಕಾರ್ಯಕರ್ತರ ಜೊತೆಯೇ ತೆರಳಿದರು. ಎಲ್ಲರೂ ಸಂಜೆಯ ಹೊತ್ತಿಗೆ ಬಳ್ಳಾರಿಯಲ್ಲಿ ಪಾದಯಾತ್ರೆ ಸೇರಿಕೊಂಡರು. ಪಾದಯಾತ್ರೆ ಕರ್ನಾಟಕ ಪ್ರವೇಶಿಸಿದ ದಿನದಿಂದಲೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಚನ್ನರಾಜ ಹಟ್ಟಿಹೊಳಿ ಮತ್ತು ಗ್ರಾಮೀಣ ಕ್ಷೇತ್ರದ ಸಹಸ್ರಾರು ಕಾರ್ಯಕರ್ತರು ಸೇರಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ : ತಾಲ್ಲೂಕು ವ್ಯಾಪ್ತಿಯ ಕಂಬತ್ತನಹಳ್ಳಿ ಬೈಪಾಸ್ ಹೊರ ವಲಯದ ಹೆದ್ದಾರಿ ಪಕ್ಕದ ಸರ್ಕಾರಿ ಜಾಗದಲ್ಲಿ ಸುಮಾರು ಮೂರ್ನಾಲ್ಕು ಲಾರಿ ಲೋಡ್ ಗಳಷ್ಟು ಅಕ್ರಮ ಮರಳು ಶೇಖರಣೆ ಮಾಡಿರುವ ಸ್ಥಳ ನೆನ್ನೆ ಕಂಡುಬಂದಿದೆ. ಮಧುಗಿರಿ ಉಪ ವಿಭಾಗದ ಮರಳು ಸಮಿತಿ ಸದಸ್ಯರ ಗಮನಕ್ಕೆ ಸ್ಥಳೀಯರು ಈ ವಿಚಾರವನ್ನು ತಿಳಿಸಿದಾಗ, ಖುದ್ದು ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಹಾಗೂ ಮಧುಗಿರಿ ಉಪ ವಿಭಾಗದ ಮರಳು ಸಮಿತಿ ಸದಸ್ಯರಾದ ಹಂದ್ರಾಳ ನಾಗಭೂಷಣ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ. ಇದೇ ವೇಳೆ ಸ್ಥಳದಿಂದಲೇ ತಹಶೀಲ್ದಾರ್ ಮತ್ತು ಉಪ ವಿಭಾಗ ಅಧಿಕಾರಿಗಳ, ಅಪಾರ ಜಿಲ್ಲಾಧಿಕಾರಿಗಳ,ಡಿವೈಎಸ್ಪಿ, ಗಮನಕ್ಕೆ ವಿಷಯವನ್ನು ನಾಗಭೂಷಣ್ ತಿಳಿಸಿದ್ದಾರೆ. ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇವರೆಲ್ಲರೂ ಜಂಟಿ ಸಮೀಕ್ಷೆ ನಡೆಸಿದ್ದಾರೆ. ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರಿಂದ ಅಕ್ರಮ ಮರಳು ದಾಸ್ತಾನು ಮಾಡಿರುವವರನ್ನು ಪತ್ತೆ ಹಚ್ಚಿಸಿ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಸದರಿ ಮರಳನ್ನು ನಿಯಮಾನುಸಾರ ಸೂಕ್ತ…
ಬೆಂಗಳೂರು: 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರವಾಗಿ ರಾಜ್ಯ ಸರ್ಕಾರ 124 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕಂದಾಯ ಇಲಾಖೆ ಮೂಲಕ ಜಿಲ್ಲಾಧಿಕಾರಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ನೆರೆ, ಪ್ರವಾಹ ಕೂಡ ಉಂಟಾಗಿದ್ದು, ಅನೇಕ ಪ್ರಮಾಣದಲ್ಲಿ ಹಾನಿಯಾಗಿದೆ. ಹೀಗಾಗಿ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆಂದು ರಾಜ್ಯ ಸರ್ಕಾರ 124 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮಗೆ ಆದರ್ಶ ಹಾಗೂ ಪ್ರೇರಣೆ. ನಮ್ಮ ತೀರ್ಮಾನಗಳಿಗೆ ಈ ಮಹನೀಯರ ಬದುಕು, ವಿಚಾರಧಾರೆಯನ್ನು ಕೇಳಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಾಗಸೇನಾ ವಿದ್ಯಾಲಯದಲ್ಲಿ ಬುದ್ಧ, ಅಂಬೇಡ್ಕರ್ ಮಂಟಪ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದರಿಂದ ಅವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಡದವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಟ್ಟವರು ಕಾಲಸೀಮಿತವಾಗಿರುತ್ತಾರೆ ಎಂದರು. ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನ: ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನವನ್ನು ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು ನಾನು ಒಬ್ಬ ಅಂಬೇಡ್ಕರ್, ಬುದ್ದ, ಬಸವ, ವಾಲ್ಮೀಕಿ ಭಕ್ತ. ಅಂಬೇಡ್ಕರ್ ಅವರ ಇಚ್ಛೆಯಂತೆ ಸಂಸ್ಥೆ ಬೆಳೆದಿದೆ. ಇದು ಇನ್ನಷ್ಟು ಬೆಳೆಯಬೇಕು. ಇಲ್ಲಿ ಪ್ರಸ್ತಾಪಿಸಿರುವ 2-3 ವಿಚಾರಗಳಿಗೆ ಸಂಪೂರ್ಣ ಸಹಮತ ಮತ್ತು ಬೆಂಬಲ ನೀಡಲಾಗುವುದು ಸಂಸ್ಥೆಗೆ ಅಗತ್ಯವಿರುವ ಅನುದಾನವನ್ನು ಮುಂದಿನ ವರ್ಷ ಪಿಯುಸಿ ಅದರ…
ಬೆಂಗಳೂರು : ರಾಜ್ಯ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರೇತರದ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವ ಕುರಿತು ಸಮ್ಮತಿ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗ ಹಸ್ತಾಂತರಿಸಿದರು. ರಾಜ್ಯ ಸರ್ಕಾರಿ ನೌಕರರು ಮತ್ತು ಸರ್ಕಾರದ ಇತರ ಸಂಸ್ಥೆಗಳ ನೌಕರರು ಸ್ವ-ಇಚ್ಛೆಯಿಂದ ದೇಣಿಗೆ ನೀಡಲು ಮುಂದಾಗಿದ್ದು, ಗ್ರೂಪ್ ಎ ಅಧಿಕಾರಿಗಳು 11,000 ರೂ., ಗ್ರೂಪ್ ಬಿ ಅಧಿಕಾರಿಗಳು 4000 ರೂ. ಹಾಗೂ ಸಿ ವೃಂದದ ನೌಕರರು 400 ರೂ. ದೇಣಿಗೆಯನ್ನು ಒಂದು ಬಾರಿಗೆ ಪಾವತಿಸಲು ಸಮ್ಮತಿಸಿದ್ದಾರೆ. ಇದನ್ನು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ವೇತನದಲ್ಲಿ ತೆಗೆದುಕೊಳ್ಳಲು ಕೋರಿದ್ದಾರೆ. ಈ ಮೊತ್ತವು ಸುಮಾರು 80 ರಿಂದ 100 ಕೋಟಿ ರೂ. ಗಳಾಗಲಿದೆ ಎಂದು ಅಂದಾಜಿಸಲಾಗಿದೆ. ನೌಕರರ ಸಂಘದ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರದ ಗೋಶಾಲೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು…
ಮಧುಗಿರಿ: ಟೆಂಪೋ ಟ್ರಾವೆಲ್ಲರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅಪಘಾತದ ಬಳಿಕ ಟೆಂಪೋ ಟ್ರಾವೆಲರ್ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ತುಮಕೂರು ರಸ್ತೆಯ ಸಮೀಪವಿರುವ ಸಾಲು ಮರದ ತಿಮ್ಮಕ್ಕನ ಉದ್ಯಾವನದ ಬಳಿ ಘಟನೆ ನಡೆದಿದೆ ಎನ್ನಲಾಗಿದ್ದು, ಪಟ್ಟಣದ ಲಿಂಗೇನಹಳ್ಳಿ ವಾಸಿಗಳಾದ ಆಟೋಚಾಲಕ ಮನ್ಸೂರ್ ಪಾಷಾ (30) ಹೆಂಡತಿ ನಗ್ಮಾ (26) ಬೆನ್ನುಮೂಳೆ ಮುರಿತವಾಗಿದ್ದು, ಪತಿಗೆ ಗಂಭೀರ ಗಾಯವಾಗಿದೆ. ಮಕ್ಕಳಾದ ಜೋಯ (4)ಗೆ ತಲೆಗೆ ಪೆಟ್ಟುಬಿದ್ದಿದೆ, ಅಯಾನ್ (3)ಗೆ ಕಾಲು ಮುರಿತವಾಗಿದೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿದ್ದಾರೆ. ವರದಿ: ಅಬಿದ್ ಮಧುಗಿರಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಮಹಿಳೆಯ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ ಕಸಬಾ ಸಿದ್ದಾಪುರ ಕೆರೆ ಎಸೆದಿರುವ ಘಟನೆ ನಡೆದಿದ್ದು, ಬೇರೆ ಯಾವುದೋ ಪ್ರದೇಶದಲ್ಲಿ ಹತ್ಯೆ ಮಾಡಿ ಇಲ್ಲಿ ಮೃತದೇಹ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಎಸೆದು ನಾಲ್ಕೈದು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಚೀಲದಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರು ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 35ರಿಂದ 45 ವರ್ಷದ ಮಹಿಳೆಯ ಮೃತದೇಹ ಇದಾಗಿದ್ದು, ಹತ್ಯೆ ಮಾಡಿದ ಬಳಿಕ ಚೀಲಕ್ಕೆ ತುಂಬಿ ಕೆರೆಗೆ ಎಸೆದು ಹೋಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಕೆರೆಯಿಂದ ಮೇಲೆತ್ತಲಾಗಿದೆ. ಆದರೆ, ಮಹಿಳೆಯ ಗುರುತುಪತ್ತೆ ಸಾಧ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ : ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy