Author: admin

ಧಾರವಾಡ : ಕ್ರಾಸ್‌ನಲ್ಲಿ ರೋಡ್‌ ಕ್ರಾಸ್‌ ಮಾಡುವಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ‌ ಬೆಳಗಲಿ ಕ್ರಾಸ್ ಬಳಿ ಸಂಭವಿಸಿದೆ. 29 ವರ್ಷದ ಮಹಮ್ಮದ್ ನವಾಜ್ ಮೃತ ದುರ್ದೈವಿ. ಲಾರಿ ಡಿಕ್ಕಿಗೆ ಬೈಕ್‌ ಬಹುದೂರಕ್ಕೆ ಹೋಗಿ ಬಿದ್ದಿದ್ದು, ನವಾಜ್‌ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಮೃತ ಮಹಮ್ಮದ್ ನವಾಜ್ ಹುಬ್ಬಳ್ಳಿಯ ತಬೀಬ್‌ಲ್ಯಾಂಡ್ ನಿವಾಸಿಯಾಗಿದ್ದು, ಕೆಲಸದ ನಿಮಿತ್ತ ಧಾರವಾಡ ಕಡೆಗೆ ಬಂದಿದ್ದರು. ಲಾರಿ ಡಿಕ್ಕಿ ಹೊಡೆದು ಬೈಕ್‌ ಪಲ್ಟಿಯಾಗಿ ನವಾಜ್‌ ಪ್ರಾಣ ಕಳೆದುಕೊಳ್ಳುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿಯಾಗೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನವೆಂಬರ್ 26ನೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ನವೆಂಬರ್ 26 ಈ ದಿನವನ್ನು ಭಾರತ ಸಂವಿಧಾನವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪತ್ರದಲ್ಲಿ ಸೂಚಿಸಿರುವಂತೆ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳ ಅರಿವನ್ನು ಮೂಡಿಸುವಂತಹ Know Your Constitution ಕಾರ್ಯಕ್ರಮವನ್ನು ಶಾಲಾ ಹಂತದಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಆಯೋಜಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಶಾಲೆಗಳಲ್ಲಿ ದಿನಾಂಕ:26.11.2022ರಂದು ಬೆಳಿಗ್ಗೆ 11:00 ಗಂಟೆಗೆ ಏಕಕಾಲಕ್ಕೆ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು, ಶಾಲಾ ಆವರಣದಲ್ಲಿನ ಪ್ರಮುಖ ಸ್ಥಳದಲ್ಲಿ ಭಾರತ ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಕರ್ತವ್ಯಗಳು ಮತ್ತು ಶಾಲೆಗಳಲ್ಲಿ ಸಂವಿಧಾನದ ವಿವಿಧ ಅಂಶಗಳ ಕುರಿತು ಚರ್ಚಾ ಸ್ಪರ್ಧೆ, ರಸಪ್ರಶ್ನೆಗಳು / ಪ್ರಬಂಧ ಸ್ಪರ್ಧೆಗಳು…

Read More

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೇ ನವೆಂಬರ್ 23 ರಂದು ನಡೆಯಲಿದೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ರಾಜ್ಯದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಕಾನೂನು ತಂಡಕ್ಕೆ ಸಹಕಾರ ನೀಡಲು ಮತ್ತು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ನೇಮಕ ಮಾಡಿದೆ. ಭಾಷಾವಾರು ಪ್ರಾಂತ್ಯ ರಚನೆಗಾಗಿ ಕೇಂದ್ರ ಸರ್ಕಾರ 1953ರಲ್ಲಿ ಫಸಲ್ ಅಲಿ ನೇತೃತ್ವದ ಸಮಿತಿ ರಚನೆಯಾಗಿತ್ತು, 1955ರಲ್ಲಿ ಫಸಲ್ ಅಲಿ ಆಯೋಗದ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂಬೈ ಪ್ರಾಂತ್ಯದಲ್ಲಿದ್ದ ಬೆಳಗಾವಿ ಸೇರಿ 865 ಗಡಿ ಪ್ರದೇಶಗಳು ಮೈಸೂರು ರಾಜ್ಯಕ್ಕೆ ಸೇರ್ಪಡೆಯಾಗಬೇಕೆಂದು ವರದಿಯಲ್ಲಿತ್ತು, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಮೆಹರ್ ಚಂದ್ ಮಹಾಜನ್ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿ 1967ರಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಮಹಾಜನ್ ವರದಿಯಲ್ಲೂ ಕೂಡ ಬೆಳಗಾವಿ…

Read More

ವಿಜಯಪುರ: ಮಂಗಳೂರಿನ ಆಟೋದಲ್ಲಿ ಉಂಟಾದ ಕುಕ್ಕರ್​ ಬಾಂಬ್​​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಬಾಯಿ ಮಾತಲ್ಲಿ ಕಠಿಣ ಕ್ರಮ ಎಂದು ಹೇಳಿದರೆ ಸಾಕಾಗಲ್ಲ, ಎನ್​​ ಕೌಂಟರ್​ ಮಾಡಿ ಬುದ್ಧಿ ಕಲಿಸಬೇಕು ಎಂದು ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದ ಮಾದರಿ ಇಲ್ಲೂ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರಿಗೆ ಫ್ರೀಹ್ಯಾಂಡ್ ಕೊಡಿ ಎಂದು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ಇಲ್ಲದಿದ್ದರೆ ಉಗ್ರರು ರಾಜಾರೋಷವಾಗಿ ದುಷ್ಕೃತ್ಯ ಎಸಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಒಳ್ಳೆಯವರು, ಆದರೆ ಕಠಿಣಕ್ರಮ ಕೈಗೊಳ್ಳುತ್ತಿಲ್ಲ. ಒಳ್ಳೆಯತನ ನಡೆಯಲ್ಲ, ಖಡಕ್​ ಆಗಿ ನಿರ್ಣಯ ಕೈಗೊಳ್ಳಬೇಕು. ಸಿಎಂ ಬೊಮ್ಮಾಯಿ ಅದನ್ನು ಮಾಡುತ್ತೇನೆ, ಇದನ್ನು ಮಾಡುತ್ತೇನೆ ಅಂತಾರೆ. ಆದರೆ ಆದಷ್ಟು ಬೇಗ ಒಳ್ಳೆಯ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ಖ್ಯಾತ ತಂಪು ಪಾನೀಯ ಬ್ರ್ಯಾಂಡ್ ರಸ್ನಾವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಸಮೂಹದ ಸಂಸ್ಥಾಪಕ ಅರೀಜ್ ಫಿರೋಜ್ ​ಶಾ ಖಂಬಾಟ್ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ಅರೀಜ್ ಖಂಬಾಟ್ ಬೆನಿವೊಲೆಂಟ್​ ಟ್ರಸ್ಟ್ ನ ಅಧ್ಯಕ್ಷರೂ ಆಗಿದ್ದರು. ಪಾರ್ಸಿ ಇರಾನಿ ಝಾರ್ಥೋಸ್ಟಿಸ್‌ ನ ವಿಶ್ವ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅರೀಜ್ ಫಿರೋಜ್​ಶಾ ಅವರು ಭಾರತೀಯ ಕೈಗಾರಿಕೆ, ಉದ್ಯಮ, ಸಾಮಾಜಿಕ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜ ಸೇವೆಯ ಮೂಲಕವೂ ಪ್ರಸಿದ್ಧರಾಗಿದ್ದರು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವಿಜಯವಾಡ: ವಿಧಿಯ ಆಟದಲ್ಲಿ ಮಗಳನ್ನು ಕಳೆದುಕೊಂಡ ತಂದೆಯೊಬ್ಬ ಬಳಿಕ ಆಕೆಯನ್ನು ಮರೆಯಲಾಗದೇ ಮಗಳ ಮೂರ್ತಿಯನ್ನು ಸ್ಥಾಪಿಸಿ, ದೇವಸ್ಥಾನ ನಿರ್ಮಿಸಿ ನಿತ್ಯವು ಪೂಜೆ ಮಾಡುತ್ತಿರುವ ಅಪರೂಪದ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ವೆಂಕಟಾಚಲಂ ಮಂಡಲದ ಕಾಕೂಟೂರಿನ ಚೆಂಚಯ್ಯ ಮತ್ತು ಲಕ್ಷ್ಮಮ್ಮ ದಂಪತಿಗೆ ಐವರು ಮಕ್ಕಳು. ಅದರಲ್ಲಿ ನಾಲ್ಕನೇ ಮಗಳ ಹೆಸರು ಸುಬ್ಬಲಕ್ಷ್ಮಮ್ಮ. ಈಕೆ ಹುಟ್ಟಿದ ಮೇಲೆ ಕುಟುಂಬ ಆರ್ಥಿಕವಾಗಿಯೂ ಸದೃಢವಾಯಿತು. ಹೀಗಾಗಿ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಅಲ್ಲದೆ, ಮಗಳಿಗೆ ಅರಣ್ಯ ಇಲಾಖೆಯಲ್ಲಿ ಕೆಲಸ ಸಿಕ್ಕಿದಾಗ ಅವರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿತ್ತು. ಆದರೆ, ಆ ಸಂತೋಷ ಹೆಚ್ಚು ದಿನ ಇರಲಿಲ್ಲ. 2011ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಬ್ಬಲಕ್ಷ್ಮಮ್ಮ ಪ್ರಾಣ ಕಳೆದುಕೊಂಡಿದ್ದಳು. ಆಕೆಯ ಸಾವಿನಿಂದಾಗಿ ಕುಟುಂಬಕ್ಕೆ ಬರಸಿಡಿಲು ಬಡಿದಂತಾಯಿತು. ಒಂದು ದಿನ ತಂದೆ ಚೆಂಚಯ್ಯಯ ಕನಸಿನಲ್ಲಿ ಮಗಳು ಸುಬ್ಬಲಕ್ಷ್ಮಮ್ಮ ಕಾಣಿಸಿಕೊಂಡಳಂತೆ. ಆಕೆಯ ಬಯಕೆಯಂತೆ ದೇವಸ್ಥಾನ ಕಟ್ಟಿದ್ದಾಗಿ ಚೆಂಚಯ್ಯ ಹೇಳಿದ್ದಾನೆ. ಮಗಳ ಮೂರ್ತಿಯನ್ನು ಸ್ಥಾಪಿಸಿ, ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಅಲ್ಲದೆ, ಪ್ರತಿ…

Read More

ಕೊರಟಗೆರೆ: ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ 1120ನೇ ಮದ್ಯವರ್ಜನ ಶಿಬಿರವನ್ನು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮುರುಳೀಧರ ಹಾಲಪ್ಪ  ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಗಳಾದರೂ ತಮ್ಮ ಕುಟುಂಬಕ್ಕೆ ಅಲ್ಲಿ ಬಡವ ಶ್ರೀಮಂತ ಎಂದು ಬರುವುದಿಲ್ಲ, ಮದ್ಯಪಾನ, ಧೂಮಪಾನ ಇತರೆ ದುಶ್ಚಟಗಳಿಗೆ ದಾಸರಾದರೆ ಅವರ ಕುಟುಂಬ ಬೀದಿ ಪಾಲಾಗುತ್ತದೆ. ಅದರಲ್ಲೂ ಬಡ ಕುಟುಂಬಗಳು ಪ್ರತಿನಿತ್ಯ ಕೂಲಿ ಮಾಡಿ ಜೀವನ ಸಾಗಿಸಬೇಕು, ಕೂಲಿ ಮಾಡಿ ಸಂಪಾದಿಸುವ ಹಣವನ್ನು ಮದ್ಯಪಾನ ಇನ್ನಿತರ ಚಟಗಳಿಗೆ ದಾಸರಾದರೆ, ಕುಟುಂಬದ ಪಾಡೇನು, ಆದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಪರಮ ಪೂಜ್ಯ ಶ್ರೀ ವೀರೇಂದ್ರ ಹೆಗಡೆಯವರ ಈ ಒಂದು ಮಧ್ಯವರ್ಜನ ಶಿಬಿರ ಕಾರ್ಯಕ್ರಮದ ಅಡಿಯಲ್ಲಿ ಇಲ್ಲಿ ಬಂದಿರುವ ಮದ್ಯ ವೇಸನಿಗಳು ತಮ್ಮ ದುಶ್ಚಟಗಳನ್ನು ಬಿಟ್ಟು ತಮ್ಮ ಕುಟುಂಬದ ಜೊತೆ ಆನಂದವಾಗಿರುವುದನ್ನ ಒಮ್ಮೆ ಆಲೋಚಿಸಿ ನೋಡಿ, ತಮ್ಮ ಕುಟುಂಬದ ಹೆಣ್ಣು ಮಕ್ಕಳ…

Read More

ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರ ನನಗಾಗಲಿ, ಸಿದ್ಧರಾಮಯ್ಯರಿಗಾಗಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಿನ್ನೆ ಅಭ್ಯರ್ಥಿಯನ್ನ ಸಿದ‍್ಧರಾಮಯ್ಯ ಘೋಷಿಸಿದ್ಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿ.ಕೆ ಶಿವಕುಮಾರ್, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರ ನನಗಾಗಲಿ ಸಿದ‍್ಧರಾಮಯ್ಯರಿಗಾಗಲಿ ಇಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರವಿದೆ. ಮಲ್ಲಿಕಾರ್ಜುನ ಖರ್ಗೆಯೇ ನಮ್ಮ ಹೈಕಮಾಂಡ್ ಎಂದರು. ಸಿದ್ದರಾಮಯ್ಯ ಅವರು ಗಂಗಾವತಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಬಾರಿ ಸೋಲು ಕಂಡವರಿಗೆ ಉತ್ತೇಜನ ನೀಡುವ ಉದ್ದೇಶದಿಂದಲೂ ಹೇಳಿರಬಹುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವಿಶೇಷ ವರದಿ : ಚಂದ್ರಶೇಖರ ಮದ್ಲಾಪೂರ ಮಾನವಿ: ತಾಲೂಕಿನ ನೀರಮಾನವಿ ಗ್ರಾಮದ ಅಶ್ವಥಾಮ ( ಪೂಜಾ ) ತಂದೆ ಮಾರೆಪ್ಪ ಇವರು ತೃತೀಯ ಲಿಂಗ ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ರಾಜ್ಯ ಶಿಕ್ಷಣ ಮಾರ್ಚ್ ತಿಂಗಳಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಧಿಕೃತ ತೃತೀಯ ಲಿಂಗ ಮೀಸಲಾತಿಯಲ್ಲಿ ಪರೀಕ್ಷೆ ಬರೆದು ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಆಯ್ಕೆಯಾಗಿದ್ದು, ನೀರಮಾನವಿ ಗ್ರಾಮದ ಜನರು ಹರ್ಷ ವ್ಯಕ್ತಪಡಿಸಿದರು. ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನೀರಮಾನವಿ ಗ್ರಾಮದಲ್ಲಿ ಜನಿಸಿದ ಇವರು, 1 ರಿಂದ 10ನೇ ತರಗತಿಯವರೆಗೆ ನೀರಮಾನವಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದರು. ನಂತರ ಮಾನವಿ ಪಟ್ಟಣದಲ್ಲಿ ಪದವಿ ಪೂರ್ವ, ಪದವಿಯನ್ನು ಪೂರ್ಣಗೊಳಿಸಿದ ಇವರು, ರಾಯಚೂರಿನ ಸರ್ವೋದಯ ಕಾಲೇಜಿನಲ್ಲಿ ಬಿ ಇ ಎಡ್ ಪೂರ್ಣಗೊಳಿಸಿ ಇಂದು ತೃತೀಯ ಲಿಂಗಿಯ ಮೀಸಲಾತಿಯಲ್ಲಿ ರಾಜ್ಯದ ಮೂರು ಜನರಲ್ಲಿ ಇವರೊಬ್ಬರಾಗಿ ಆಯ್ಕೆಯಾಗಿ ತಮ್ಮ ಜೀವನದ ಗುರಿಯನ್ನು ತಲುಪಿ ಎಲ್ಲರಲ್ಲೂ ಅಚ್ಚರಿಯುಟ್ಟು ಮಾಡಿದ್ದಾರೆ. ಈ ಬಗ್ಗೆ ಅವರ…

Read More

ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ರೂವಾರಿಯೇ ಶಾರಿಕ್. ಶಾರಿಕ್ ವಿದೇಶಿ ಉಗ್ರ ಸಂಘಟನೆ ಪ್ರಭಾವಕ್ಕೆ ಒಳಗಾಗಿದ್ದ. ಸದ್ಯ ಒಂದು ದೊಡ್ಡ ಅನಾಹುತ ತಪ್ಪಿದಂತಾಗಿದೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಪ್ರಕರಣ ಕುರಿತು ಮಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ನವೆಂಬರ್ 19ರಂದು ಸಂಜೆ 4.40ರಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕ, ಆಟೋ ಚಾಲಕನಿಗೆ ಗಾಯಗಳಾಗಿವೆ. ತಕ್ಷಣ ಪೊಲೀಸ್ ಅಧಿಕಾರಿಗಳಿಂದ ಗುರುತು ಪತ್ತೆ ಮಾಡುವ ಕೆಲಸ ನಡೆದಿದೆ. ಆರೋಪಿ ಶಾರಿಕ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಶಾರಿಕ್ ಸಂಬಂಧಿಕರು ಆಗಮಿಸಿ ಗುರುತು ಪತ್ತೆ ಹಚ್ಚಿದ್ದಾರೆ. ಮೈಸೂರಿನಲ್ಲಿ ಮೋಹನ್ ಕುಮಾರ ಮನೆಯಲ್ಲಿ ಆರೋಪಿ ಶಾರಿಕ್ ವಾಸವಾಗಿದ್ದ. ಶಾರಿಕ್ ವಿಚಾರ ಮೋಹನ್ ಗೂ ಗೊತ್ತಿಲ್ಲ. ಶಂಕಿತ ವಾಸವಿದ್ದ ಮನೆಯಲ್ಲಿ ಹಲವು ಸ್ಪೋಟಕ ವಸ್ತು ಸಿಕ್ಕಿವೆ. ಆರೋಪಿ ಮೈಸೂರಿನಿಂದ ಮಂಗಳೂರಿಗೆ ಬಂದಿದ್ದಾನೆ. ಮತ್ತೊಂದು ನಕಲಿ ಐಡಿ ಪಡೆದು ಕೊಯಮುತ್ತೂರಿನಲ್ಲೂ ಶಾರಿಕ್ ವಾಶವಿದ್ದ ಎಂದು ಮಾಹಿತಿ ನೀಡಿದರು. ಆರೋಪಿ…

Read More