Subscribe to Updates
Get the latest creative news from FooBar about art, design and business.
- ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
- ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
- ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
- ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
- ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
- ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
- ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
- ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
Author: admin
ಮಧುಗಿರಿ: ತಾಲೂಕು ಕಸಬಾ ಹೋಬಳಿ ಕಂಬದಹಳ್ಳಿ ಗ್ರಾಮದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಮತ್ತು ತುಮುಲ್ ನಿರ್ದೇಶಕರಾದ ಕೊಂಡವಾಡಿ ಚಂದ್ರಶೇಖರ್ ಟೇಪ್ ಕತ್ತರಿಸುವ ಮೂಲಕ ಹಾಲು ಉತ್ಪಾದಕರ ನೂತನ ಸಂಘದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ.ವಿ.ವೀರಭದ್ರಯ್ಯ, ರೈತರು ಆರ್ಥಿಕವಾಗಿ ಮುಂದುವರಿಯಲು ಹಾಲು ಉತ್ಪಾದನೆ ಬಹಳ ಮುಖ್ಯವಾಗಿದ್ದು, ಬೇಸಾಯ ಕೈಕೊಟ್ಟ ಸಂದರ್ಭದಲ್ಲಿ ಉಪಕಸುಬುಗಳಿಂದ ಹಳ್ಳಿಗಳಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು. ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿ ಕೊಟ್ಟಿದೆ. ರೈತರಿಗೆ ವ್ಯವಸಾಯ ಕೈ ಕೊಟ್ಟಾಗ ಹಾಲು ಉತ್ಪಾದನೆಯು ಸಹಕಾರಿಯಾಗಿದೆ. ಕೊಂಡವಾಡಿ ಚಂದ್ರಶೇಖರ್ ರವರು ತುಮುಲ್ ಅಧ್ಯಕ್ಷರಾಗಿದ್ದ ಸಂಧರ್ಭದಲ್ಲಿ ಹಾಲು ಉತ್ಪಾದಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಹಾಗೂ ರೈತರು ಸಹಕಾರ…
ಕೊರಟಗೆರೆ: ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿ ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸದಂತೆ ರಾಜ್ಯ ರೈತ ಸಂಘ (ಪುಟ್ಟಣ್ಣ ನವರ ಬಣದಿಂದ) ಕೊರಟಗೆರೆ ತಹಶೀಲ್ದಾರ್ ಮುಖೇನ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ವಿದ್ಯುತ್ ಕ್ಷೇತ್ರದ ಖಾಸಗಿಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ರಂಗಹನುಮಯ್ಯ, ಕೃಷಿ ಪಂಪ್ಸೆಟ್ಟುಗಳಿಗೆ ಮೀಟರ್ ಅಳವಡಿಸುವ ಹುನ್ನಾರದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೆ ಸರಿಯಾಬೇಕು. ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಪ್ರಕರಣಗಳಲ್ಲಿ ಟ್ರಾನ್ಸ್ ಫಾರಂನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಹಾಗೂ ಬಾಕಿ ಎಲ್ಲಾ ವಿದ್ಯುತ್ ಬಿಲ್ಲುಗಳನ್ನು ಮನ್ನಾ ಮಾಡಬೇಕು. ಕೇಂದ್ರ ಸರ್ಕಾರ ಅಡಿಕೆ ಆಮದಿನ ಮೇಲೆ ಹೆಚ್ಚು ಸುಂಕ ವಿಧಿಸಿ, ಭೂತಾನ್ ಸೇರಿದಂತೆ ಬೇರೆ ಬೇರೆ ರಾಷ್ಟಗಳಿಂದ ಆಮದು ಮಾಡಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ತಿಳಿಸಿದರು. ನಂತರ ಕರ್ನಾಟಕ ರಾಜ್ಯ…
67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯಲಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಜ್ಯದ 25 ಲಕ್ಷ ವಿದ್ಯಾರ್ಥಿಗಳು ಮತ್ತು 2 ಲಕ್ಷ ಸ್ವಸಹಾಯ ಸಂಘಗಳ 29 ಲಕ್ಷ ಸದಸ್ಯರು ಸೇರಿದಂತೆ ತಮ್ಮ ಇಲಾಖೆಗಳ ವ್ಯಾಪ್ತಿಯಿಂದ 54 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಲಿದ್ದಾರೆ ಎಂದು ಉನ್ನತ ಶಿಕ್ಷಣ ಮತ್ತು ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲಕುಮಾರ್ ಅವರೊಂದಿಗೆ ಮಂಗಳವಾರ ಅವರು ಸಭೆ ನಡೆಸಿದರು. ಬಳಿಕ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆರಿಸಿರುವ 6 ಹಾಡುಗಳನ್ನು ರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಸರಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಹಾಡಲಾಗುವುದು. ಜತೆಗೆ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯೆಯರು ಕೂಡ ಈ ಸಂಭ್ರಮದ ಭಾಗವಾಗಲಿದ್ದಾರೆ ಎಂದರು. ಹೋದ ವರ್ಷದ ರಾಜ್ಯೋತ್ಸವದಲ್ಲಿ ‘ಮಾತಾಡ್ ಮಾತಾಡು ಕನ್ನಡ’ ಕಾರ್ಯಕ್ರಮದಲ್ಲಿ 22 ಲಕ್ಷ ಜನ ಪಾಲ್ಗೊಂಡಿದ್ದರು. ಈ ವರ್ಷ ‘ಕೋಟಿ…
ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಹೆಸರಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ. ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನ ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ ಮೂರು ಕೊಡುಗೆಗಳನ್ನ ಹೇಳಲಿ ಸಾಕು. ಟಿಪ್ಪುಗೆ ಮೈಸೂರಿಗೆ ಏನು ಸಂಬಂಧ. ಟಿಪ್ಪು ಏನ್ ಮೈಸೂರಿನವನಾ..? ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಒಂದು ಟ್ರೈನ್ ಗೆ ಇಟ್ಟ ಹೆಸರನ್ನ ಬದಲಾಯಿಸಿದ ಉದಾಹರಣೆಗಳೇ ಇಲ್ಲ. ಆದ್ರೆ ಇದನ್ನ ಉದ್ದೇಶ ಪೂರ್ವಕವಾಗಿಯೇ ಪ್ರಯತ್ನ ಪಟ್ಟು ಬದಲಾಯಿಸಿದ್ದೇನೆ ಎಂದರು. ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯ ಇಲ್ಲ. ಟಿಪ್ಪು ಹೆಸರನ್ನ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲಾ ಎನ್ನುವವರ ಹೆಸರನ್ನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ. ನಾನು ಮೈಸೂರಿಗೆ 10…
ಮೈಸೂರು: ರಜೆ ಮೇಲೆ ಊರಿಗೆ ಬಂದಿದ್ಧ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಚಿಟ್ಟಕ್ಯಾತನಹಳ್ಳಿ ಗ್ರಾಮದ ನಿವಾಸಿ ಯೋಧ ಮಹೇಶ್ (40) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮಹೇಶ್ ಸಾವನ್ನಪ್ಪಿದ್ದಾರೆ. ಮೃತ ಯೋಧ ಮಹೇಶ್ ಪಶ್ಚಿಮ ಬಂಗಾಳದ ಸೇನೆ ತುಕುಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಾಲ್ಕು ದಿನದ ಹಿಂದೆ ರಜೆ ಮೇಲೆ ಊರಿಗೆ ಆಗಮಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನ ಬಿಬಿಎಂಪಿ ಅಧಿಕಾರಿಗಳು ಮುಂದುವರೆಸಿದ್ದು, ಈ ನಡುವೆ ತಮ್ಮ ಮನೆ ಡೆಮಾಲಿಷ್ ಮಾಡಲು ಮುಂದಾದ ಹಿನ್ನೆಲೆ ದಂಪತಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ನಗರದ ಕೆಆರ್ ಪುರಂ ಗಾಯತ್ರಿ ಲೇಔಟ್ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಕ್ಕೆ ದಂಪತಿ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಮೇಲೆ ಪೆಟ್ರೋಲ್ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. 40 ಲಕ್ಷ ಲೋನ್ ಮಾಡಿ ಮನೆ ಕಟ್ಟಿದ್ದೇನೆ. ಹೇಗೆ ಡೆಮಾಲಿಷನ್ ಮಾಡುತ್ತೀರಾ. ನಾವು ನಮ್ಮ ಮನೆ ಬಿಡಲ್ಲ. ನಮ್ಮ ಮನೆಯನ್ನ ಡೆಮಾಲಿಷನ್ ಮಾಡಲು ಬಿಡಲ್ಲ ಎಂದು ಪೆಟ್ರೋಲ್ ಕ್ಯಾನ್ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ. ಪೊಲೀಸರು ದಂಪತಿ ಮನವೊಲಿಕೆಗೆ ಯತ್ನಿಸಿದ್ದು , ಸ್ಥಳಕ್ಕೆ ಸಿಎಂ ಬರುವಂತೆ ದಂಪತಿ ಪಟ್ಟು ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೊಸಪೇಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾಲ್ಲೂಕಿನ ಕಮಲಾಪುರದ ಡಾ.ಬಿ.ಆರ್.ಅಂಬೇಡ್ಕರ್ ಕಾಲೊನಿಯ ಪರಿಶಿಷ್ಟ ಜಾತಿಯ ಹಿರಾಳ್ ಕೊಲ್ಲಾರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು. ಒಗ್ಗರಣೆ, ಮಿರ್ಚಿ, ಉಪ್ಪಿಟ್ಟು ಸವಿದ್ದು,ಚಹಾ ಕುಡಿದರು. ಅವರೊಂದಿಗೆ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ ಇತರರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ನಾಲ್ಕುದಿನಗಳ ಕಾಲ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ ಮಹೋತ್ಸವ ನಡೆಯಲಿದ್ದು ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ಕುರಿತು ಜೆ ಎಸ್ ಎಸ್ ಶಾಖಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಎಸ್ಎಸ್ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಅ.13 ರಿಂದ ಅ.16 ರವರೆಗೆ ತ್ರಿವೇಣಿ ಸಂಗಮದಲ್ಲಿ ಮಲೆ ಮಹದೇಶ್ವರರ ಮಹಾ ಕುಂಭಮೇಳ ಜರುಗುತ್ತಿದೆ. ನಾಲ್ಕು ದಿನಗಳ ಕಾಲ ಮಹಾ ಕುಂಭಮೇಳಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ಮಹಾ ಕುಂಭಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಮಹದೇಶ್ವರರ ಜೀವನ ಚರಿತ್ರೆ ಕುರಿತು ಅಲ್ಲಿ ವಿಚಾರ ಸಂಕಿರಣ ಕೂಡ ನಡೆಯಲಿದೆ. ಮೈಸೂರು, ಚಾಮರಾಜನಗರ ಭಾಗಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 2013ರ ಬಳಿಕ 9 ವರ್ಷಗಳ ಬಳಿಕ ಈ…
ಬೆಂಗಳೂರು : ಗ್ರಾಮಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಓಗಳಿಗೆ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯಿತಿ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತಂದು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಮೊಟಕುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಭೆ ತೀರ್ಮಾನ ಕೈಗೊಂಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ. ಇತ್ತೀಚೆಗೆ ಸಚಿವ ಬಿ.ಸಿ.ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು. ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಈ ಮೂಲಕ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿ ಜಾರಿಗೆ ತರಲು ನಿರ್ಧರಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy