Subscribe to Updates
Get the latest creative news from FooBar about art, design and business.
- ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ
- ಬಳ್ಳಾರಿ: SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
- ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ
- ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ
- ‘ಸೆರಗ ಸರ್ಸೆ’ ಹಾಡಿನ ವಿವಾದ: ಫಿಲ್ಮ್ ಚೇಂಬರ್ ಗೆ ಮಹಿಳಾ ಆಯೋಗದಿಂದ ಪತ್ರ
- ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್ ಗಾಗಿ ಗ್ರಾಹಕರ ಹೈರಾಣು
- ತುಮಕೂರು: ರಂಜಾನ್ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್ ಕೊರತೆ; ದುಬಾರಿಯಾದ ಸಮೋಸ!
- ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
Author: admin
ಕೊರಟಗೆರೆ: ಪ್ರಿಯದರ್ಶಿನಿ ಫಾರ್ಮಸಿ ಕಾಲೇಜ್ ಆ್ಯಂಡ್ ಪಿ.ಜಿ. ಅವ್ಯವಸ್ಥೆಯ ಆಗರವಾಗಿದ್ದು, ಯಾರೂ ಹೇಳುವವರು ಕೇಳುವವರು ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಕಾಲೇಜಿನ ವಿದ್ಯಾರ್ಥಿಗಳ ವರ್ತನೆಯ ವಿರುದ್ಧ ಸುತ್ತಮುತ್ತಲಿನ ನಿವಾಸಿಗಳು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ಪ್ರಿಯದರ್ಶಿನಿ ಫಾರ್ಮಸಿ ಕಾಲೇಜ್ ಹಾಗೂ ಪಿ.ಜಿ. ಕುರಿತಾಗಿ ನಮ್ಮತುಮಕೂರು ವಾಹಿನಿಯ ಎಕ್ಸ್ ಕ್ಲೂಸಿವ್ ಸ್ಟೋರಿ… ಈ ಕಾಲೇಜಿಗೆ ವಿದ್ಯಾರ್ಥಿಗಳು ಎಕ್ಸಾಂ ಟೈಮ್ ನಲ್ಲಿ ಬಂದ್ರೆ ಸಾಕು. ದಿನ ನಿತ್ಯ ಕಾಲೇಜಿಗೆ ಬರಬೇಕೆಂದಿಲ್ಲ, ಕಾಲೇಜಿಗೆ ಯಾರು ಯಾವಾಗ ಬೇಕಾದ್ರೂ ಬರಬಹುದು, ಹೋಗಬಹುದು. ಕಾಲೇಜಿಗೆ ಕನಿಷ್ಠ ಸೆಕ್ಯೂರಿಟಿ ಗಾರ್ಡ್ ಕೂಡ ಇಲ್ಲ. ಸಿಸಿ ಕ್ಯಾಮರಾಗಳಂತೂ ಇಲ್ವೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಲೇಜಿಗೆ ಗೇಟುಗಳಿವೆ ಆದ್ರೆ, ಕಾಂಪೌಂಡ್ ಇಲ್ಲ. ಈ ಬಗ್ಗೆ ಕೇಳಿದ್ರೆ, ಕಾಲೇಜ್ ಪ್ರಾಂಶುಪಾಲನಿಗೆ ದೊಡ್ಡ ದೊಡ್ಡ ರಾಜಕೀಯ ವ್ಯಕ್ತಿಗಳ ಬೆಂಬಲವಿದೆ ಹಾಗಾಗಿ ಅವರು ಆಡಿದ್ದೇ ಆಟ ಅಂತಾರೆ ಇಲ್ಲಿನ ಜನ. ಕಾಲೇಜಿನ ಪ್ರಾಂಶುಪಾಲರಿಗೆ ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳೇ ಟಾರ್ಗೆಟ್, ಲಕ್ಷ ಲಕ್ಷ ದುಡ್ಡು ಕೊಟ್ರೆ ಸಾಕು…
ಪ್ರಧಾನಿ ನರೇಂದ್ರ ಮೋದಿ ಅವರು ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ದ 93 ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು. ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದು ಇದೇ ವೇಳೆ ಘೋಷಿಸಿದರು. ಈ ದಿನದಂದು, ನಾವು ಭಾರತ ಮಾತೆಯ ಧೈರ್ಯಶಾಲಿ ಪುತ್ರ ಭಗತ್ ಸಿಂಗ್ ಅವರ ಜಯಂತಿಯನ್ನು ಆಚರಿಸಲಿದ್ದೇವೆ ಎಂದು ಪ್ರಧಾನಿ ಇದೇ ವೇಳೆ ತಿಳಿಸಿದರು. ದೀನ್ ದಯಾಳ್ ಉಪಾಧ್ಯಾಯ ಸ್ಮರಣೆ: ದೀನ್ ದಯಾಳ್ ಉಪಾಧ್ಯಾಯ ಅವರು ದೇಶದ ಪ್ರಗತಿಯ ಪ್ರಮಾಣವು ಕೊನೆಯ ಹಂತದ ವ್ಯಕ್ತಿ ಎಂದು ಹೇಳುತ್ತಿದ್ದರು. ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ದೀನದಯಾಳ್ ಜೀ ಅವರನ್ನು ನಾವು ಹೆಚ್ಚು ಹೆಚ್ಚು ತಿಳಿದುಕೊಂಡಷ್ಟೂ, ಅವರಿಂದ ನಾವು ಹೆಚ್ಚು ಹೆಚ್ಚು ಕಲಿಯುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಿಷ ದಸರಾ ಆಚರಣೆ ಮಾಡಬಾರದು ಎಂದು ಚಾಮುಂಡೇಶ್ವರಿ ಏನಾದ್ರು ಕಂಪ್ಲೇಟ್ ಕೊಟ್ರಿದ್ರಾ? ಸಾವರ್ಕರ್ ಫೋಟೋ ಹಾಕಿ ಗಣೇಶನ ಮೆರವಣಿಗೆ ಮಾಡ್ತಾರೆ. ಗೋಡ್ಸೆ ಫೋಟೋ ಇಟ್ಟು ಮೆರವಣಿಗೆ ಮಾಡ್ತಾರೆ. ಮಹಿಷ ಅವರಿಗಿಂತ ಕೆಟ್ಟವನ? ಎಂದು ಇತಿಹಾಸ ತಜ್ಞ ಪ್ರೊ. ನಂಜೇರಾಜ ಅರಸ್ ಅಸಮಾಧಾನ ವ್ಯಕ್ತಪಡಿಸಿದರು. ಮಹಿಷ ದಸರಾ ಆಚರಣೆಗೆ ಅವಕಾಶ ನೀಡದ ಜಿಲ್ಲಾಡಳಿತ ಹಾಗೂ ಪೊಲೀಸರ ನಡೆಗೆ ಅವರು ಆಕ್ರೋಶ ವ್ಯಕ್ತಪಡಿಸಿದರು. ಮಹಿಸೂರು ಎಂದು ಹಿಂದಿನ ರಾಜರು ಪತ್ರಗಳಲ್ಲಿ ನಮೂದು ಮಾಡುತ್ತಿದ್ದರು. ಆದರೀಗ ಪುರಾಣದ ಕಥೆ ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಚಾಮುಂಡಿ ಕಾಲ್ಪನಿಕ. ಮಕ್ಕಳಿಗೆ ಹೇಳುವ ಚಂದಮಾಮ ಕತೆ ಇದ್ದಂಗೆ. ಕಾಲ್ಪನಿಕ ವ್ಯಕ್ತಿ ಜೀವಂತ ವ್ಯಕ್ತಿಯನ್ನ ಹೇಗೆ ಕೊಲ್ಲಲು ಸಾಧ್ಯ. ಸುರ ಅಂದ್ರೆ ಶೋಕಿ ಮಾಡಿ ಕಾಲ ಕಳೆಯುವವರು. ಅಸುರ ಅಂದ್ರೆ ಅ+ಸುರು, ಪ್ರಾಣವನ್ನ ಯಾರು ರಕ್ಷಿಸುತ್ತಾರೋ ಅವರು ಅಸುರ. ಸುರ’ನಲ್ಲದವನು ಅಸುರ. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವನಿಗೆ ಇಲ್ಲಿನ ಬಗ್ಗೆ ಏನು ಗೊತ್ತು ಎಂದು ಪಶ್ನಿಸಿದರು. ಇಲ್ಲಿನ ಎಂಪಿ ಮೋದಿ ಬಗ್ಗೆ…
ರಾಜ್ಯ ರಾಜಧಾನಿಯಲ್ಲಿ ಆಗಸ್ಟ್ ಅಂತ್ಯದಿಂದ ಸೆಪ್ಟಂಬರ್ ಮೊದಲ ವಾರದವರೆಗೆ ಭಾರಿ ಮಳೆ ದಾಖಲಾಗಿ ಪ್ರವಾಹ ಸೃಷ್ಟಿಯಾಗಿತ್ತು. ಸಾವಿರಾರು ಮನೆಗಳು ಹಾನಿಗೀಡಾಗಿದ್ದು, ನೂರಾರು ಕೋಟಿ ರೂ. ನಷ್ಟವಾಗಿದೆ. ಕೇವಲ ರಸ್ತೆ ಹಾನಿಯಿಂದ 337 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಬಿಬಿಎಂಪಿ ಅಂದಾಜಿಸಿದೆ. ಬೆಂಗಳೂರಿನ ಐಟಿ ಬಿಟಿ ಕಂಪನಿಗಳು ಇರುವ ಪ್ರದೇಶಗಳಲ್ಲಿಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದಾಗಿ ಸುಮಾರು 7,700 ಮನೆಗಳು ಜಲಾವೃತಗೊಂಡಿದ್ದರೆ, ಅದರಲ್ಲಿ 170 ಮನೆಗಳಿಗೆ ಭಾಗಶಃ ಧಕ್ಕೆ ಉಂಟಾಗಿದೆ. ಒಟ್ಟು ಮನೆಗಳಿಂದ ಸುಮಾರು 16 ಕೋಟಿ ರೂ. ಮತ್ತು 170ಮನೆಗಳಿಂದ 2ಕೋಟಿ ರೂ. ಆರ್ಥಿಕ ನಷ್ಟವಾಗಿದೆ ಎಂದು ಬಿಬಿಎಂಪಿ ವರದಿ ಮಾಹಿತಿ ನೀಡಿದೆ. ಸೆಪ್ಟಂಬರ್ ಆರಂಭಿಕ ವಾರದಲ್ಲಿ ನಿರಂತರ ಮಳೆಗೆ ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಯಾಗಿತ್ತು. ಪ್ರವಾಹಕ್ಕೆ ತತ್ತರಿಸಿದ ಸಂತ್ರಸ್ತರಿಗೆ ಬಿಬಿಎಂಪಿ ಪರಿಹಾರ ವಿತರಿಸುತ್ತಿದೆ. ಈ ನಿಟ್ಟಿನಲ್ಲಿ ಈವರೆಗೆ ನಾಗರಿಕರಿಗೆ 14ಕೋಟಿ ರೂಪಾಯಿ ಮೃತರ ಕುಟುಂಬಕ್ಕೆ ಪರಿಹಾರ ವಿತರರಣೆ ಸೇರಿ ಒಟ್ಟು ಪರಿಹಾರವನ್ನು 18.4 ಕೋಟಿ ನೀಡಲು ಸರ್ಕಾರ ಅಂದಾಜು ಮಾಡಿದೆ. ಐದು…
ಮಂಗಳೂರಿನ ಪ್ರತಿಷ್ಠಿತ ಪಿಯು ಕಾಲೇಜಿನ ಹಾಸ್ಟೆಲ್ನಿಂದ ಪರಾರಿಯಾಗಿದ್ದು, ಇದೀಗ ಎಲ್ಲಾ ಮೂವರು ವಿದ್ಯಾರ್ಥಿನಿಯರು ಪತ್ತೆಯಾಗಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಪತ್ತೆ ಹಚ್ಚಲಾಗಿದೆ.ಸೆಪ್ಟೆಂಬರ್ 21ರಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್ ನಿಂದ ಈ ವಿದ್ಯಾರ್ಥಿಗಳು ಪರಾರಿಯಾಗಿದ್ದರು. ವಿದ್ಯಾರ್ಥಿಗಳು ಕಿಟಕಿಯ ಸಲಾಕೆಯನ್ನು ಮುರಿದು ಹೊರ ಹೋಗಿದ್ದರು. ಹೊರ ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.ಆ ದೃಶ್ಯದಿಂದ ಸಣ್ಣ ಸುಳಿವು ಸಿಕ್ಕಿತ್ತು. ಮೊದಲು ಕೊಯಮತ್ತೂರಿನತ್ತ ಹೋಗಿದ್ದರು ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಬೆಂಗಳೂರು ಮೂಲದ ಯಶಸ್ವಿನಿ, ದಕ್ಷತಾ ಹಾಗೂ ಚಿಕ್ಕಮಗಳೂರಿನ ಸಿಂಚನಾ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು. ಇತ್ತೀಚೆಗೆ ನಡೆದ ಪ್ರಥಮ ಪಿಯುಸಿಯ ಯುನಿಟ್ ಪರೀಕ್ಷೆಯೊಂದರಲ್ಲಿ ಕಡಿಮೆ ಅಂಕ ಪಡೆದಿದ್ದರು. ಇದರಿಂದ ಮನೆಯವರಿಗೆ ಯಾವ ರೀತಿ ಉತ್ತರಿಸುವುದು ಎಂದು ತಿಳಿಯದೆ ಪರಾರಿಯಾಗಲು ನಿರ್ಧರಿಸಿದ್ದರು. ಮೂವರಲ್ಲಿ ಓರ್ವ ವಿದ್ಯಾರ್ಥಿನಿಯ ಸಂಬಂಧಿಕರು ಚೆನ್ನೈನಲ್ಲಿ ಇರುವುದರಿಂದ ಇವರು ರೈಲಿನಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಿದ್ದಾರೆ. ಆದರೆ ಚೆನ್ನೈಗೆ ಹೋದ ಬಳಿಕ ಅವರಿಗೆ ಮನೆಯವರು ಆತಂಕಗೊಂಡಿರಬಹುದು ಎಂಬುದು ಅರಿವಾಗಿದೆ. ಅಲ್ಲೇ ಸುತ್ತಾಡಿ ರಿಕ್ಷಾದಲ್ಲಿ…
ನವದೆಹಲಿ, ಸೆಪ್ಟೆಂಬರ್ 26: ಭಾರತದ ಮುಂದಿನ ಅಟಾರ್ನಿ ಜನರಲ್ ಆಗುವಂತೆ ಕೇಂದ್ರ ಸರ್ಕಾರವು ನೀಡಿದ ಆಫರ್ ಅನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ತಿರಸ್ಕರಿಸಿದ್ದಾರೆ. ಸರ್ಕಾರವು ನೀಡಿದ ಪ್ರಸ್ತಾಪವನ್ನು ಮುಕುಲ್ ರೋಹಟಗಿ ತಿರಸ್ಕರಿಸುವುದಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ರೋಹಟಗಿ 2014 ಮತ್ತು 2017ರ ನಡುವೆ ಬಿಜೆಪಿ ನೇತೃತ್ವದ ಸರ್ಕಾರದ ಉನ್ನತ ವಕೀಲರಾಗಿದ್ದು, ಇವರ ನಂತರದಲ್ಲಿ ವಕೀಲ ಕೆ. ಕೆ. ವೇಣುಗೋಪಾಲ್ ಭಾರತದ ಅಟಾರ್ನಿ ಜನರಲ್ ಆಗಿದ್ದರು. ಮುಕುಲ್ ರೋಹಟಗಿ ಅಕ್ಟೋಬರ್ 1 ರಿಂದ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ತಮ್ಮ ಅವಧಿಯನ್ನು ಪ್ರಾರಂಭಿಸಬೇಕಿತ್ತು. ಕೆ. ಕೆ. ವೇಣುಗೋಪಾಲ್ ಅಧಿಕಾರಾವಧಿ ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳಲಿದ್ದು, ಅವರ ಸ್ಥಾನವನ್ನು ರೋಹಟಗಿ ವಹಿಸಬೇಕಿತ್ತು. ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಮುಕುಲ್ ರೋಹಟಗಿ: ಮುಕುಲ್ ರೋಹಟಗಿ ಭಾರತದ ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲರಾಗಿದ್ದಾರೆ. ಇವರು ಈ ಹಿಂದೆ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ರೋಹಟಗಿ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಗುಜರಾತ್…
ರಾಷ್ಟ್ರಪತಿಗಳು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ್ದು ನಮಗೆ ಸಂತಸ ತಂದಿದೆ. ದೇಶದ ಶ್ರೇಯೋಭಿವೃದ್ಧಿಗೆ ಪ್ರಾರ್ಥಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಬಾರಿ ದಸರಾ ಮಹೋತ್ಸವ ಹಲವಾರು ವಿಶೇಷತೆಗಳಿಂದ ಕೂಡಿದೆ. ಗತವೈಭವನ್ನ ನೆನಪು ಮಾಡಿಕೊಳ್ಳುತ್ತಿದ್ದೇವೆ. ನಾಡಿನಲ್ಲಿ ಎಲ್ಲರು ನಾಡಹಬ್ಬವನ್ನ ಆಚರಣೆ ಮಾಡುತ್ತಿದ್ದೇವೆ. ಕಾಲ ಕಾಲಕ್ಕೆ ಆ ದೇವತೆ ಮಳೆ ಬೆಳೆಯನ್ನ ಕೊಟ್ಟು. ಈ ಶಕ್ತಿ ಪೀಠದಿಂದ ನಾಡಿಗೆ ಸುಭೀಕ್ಷೇ ನೀಡುತ್ತಿದ್ದಾಳೆ. ನಮ್ಮ ಗತಕಾಲದ ವೈಭದ ಜೊತೆಗೆ ಇಂದಿನ ಹತ್ತು ಹಲವಾರು ನೈಸರ್ಗಿಕ ಸವಾಲುಗಳನ್ನು ಎದುರಿಸಿದ್ದೇವೆ. ಈ ವೇಳೆ ರಾಷ್ಟ್ರಪತಿಗಳು ಈ ಕಾರ್ಯಕ್ರಮಕ್ಕೆ ಬಂದಿರೋದು ಬಹಳ ಘನೆತೆ ಹೆಚ್ಚಿಸಿದೆ. ರಾಷ್ಟ್ರಪತಿಗಳನ್ನ ದಸರಾ ಮಹೋತ್ಸವಕ್ಕೆ ಆಹ್ವಾನಿಸಿದ ಕೂಡಲೇ ಒಪ್ಪಿಗೆ ಕೊಟ್ಟರು. ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕದ ಮೂಲಕ ರಾಜ್ಯಗಳ ಪ್ರವಾಸ ಮಾಡುತ್ತಿದ್ದೇನೆ ಅಂದರು. ಇವತ್ತು ಮಹಿಷಾಸುರ ಇಲ್ಲ, ನಮ್ಮ ಮನಗಳಲ್ಲಿರುವ ದುಷ್ಟ…
ಹುಬ್ಬಳ್ಳಿ : ಬಾದಾಮಿ, ರಾಯಚೂರು ಸೇರಿದಂತೆ ರಾಜ್ಯದ ಐದು ಕಡೆ 18 ತಿಂಗಳಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಾದಾಮಿ, ರಾಯಚೂರು, ದಾವಣಗೆರೆ, ಚಿಕ್ಕಮಗಳೂರು, ಕೊಪ್ಪಳದಲ್ಲಿ ಮುಂಬರುವ 18 ತಿಂಗಳಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು. ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭಿಸುವ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದ ಎಸ್ಸಿ, ಎಸ್ ಟಿ ಜನಾಂಗದವರಿಗೆ ಕೈಗಾರಿಕೆ ಸ್ಥಾಪಿಸಲು ಶೇ. 75 ರಷ್ಟು ಸಬ್ಸಿಡಿಯನ್ನು ಇತರ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಕಾರು ಮತ್ತು ಬೈಕ್ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು ಚಾಲಕ ನಿಖಿಲ್ ಕದಂ(24), ಬೈಕ್ನಲ್ಲಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ದುರ್ದೈವಿಗಳು. ಕುಡಚಿ ಪೊಲೀಸ್ ಠಾಣೆಯ ಎಎಸ್ಐ ವೈ.ಎಂ.ಹಲಕಿರವರ ಪತ್ನಿ ರುಕ್ಮಿಣಿ ಸಾವನ್ನಪ್ಪಿದ್ದಾರೆ. ಬೆಳಗಾವಿ-ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಬೆಳಗಾವಿಯತ್ತ ಬರುತ್ತಿತ್ತು. ಈ ವೇಳೆ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ಗೆ ಡಿಕ್ಕಿ ಹೊಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿದ್ದಾರೆ.ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60 ವರ್ಷಗಳ ಕಾಂಗ್ರೆಸ್ ಪಕ್ಷ ದೇಶ ನೀಡಿರುವ ಕೊಡುಗೆಗಳ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಪರವಾಗಿರುವ ಪಕ್ಷ, ದೇಶದ ಅಖಂಡತೆಯನ್ನು ಕಾಪಾಡಿರುವಂತ ಪಕ್ಷವಾಗಿದೆ. ಬೆಳಗಾವಿ ಭಾಷೆ ರಾಜಕಾರಣವಾಗಿತ್ತು. ಆದರೆ ಈಗ ಶಾಸಕಿ ಅಂಜಲಿ ನಿಂಬಾಳ್ಕರ್ ಅಭಿವೃದ್ಧಿ ಕಾರ್ಯದಿಂದಾಗಿ ಕ್ಷೇತ್ರದಲ್ಲಿ ಜನ ಅಭಿವೃದ್ಧಿ ಪರವಾಗಿ ನಿಂತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಮೂರು ಪಕ್ಷಗಳಿಂದ ಕಾರ್ಯಕರ್ತರು ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಡಾ. ಅಂಜಲಿ ನಿಂಬಾಳ್ಕರ್ ಮಾತನಾಡಿ, ನನ್ನ ಕ್ಷೇತ್ರ ಯಾವುದೇ ಭಾಷೆ ಮತ್ತು ಜಾತಿ ರಾಜಕಾರಣ ಮಾಡಿಲ್ಲ ನನಗೆ ಕನ್ನಡ ಮತ್ತು ಮರಾಠಿ ಜನರ ಅಪಾರ ಪ್ರೀತಿ ನನಗೆ ಸಿಕ್ಕಿದೆ. ಅವರ ಆಶೀರ್ವಾದದಿಂದಾಗಿ ನಾನು ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿಯ ಮಾಡಲು ಸಾಧ್ಯವಾಗಿದೆ. 100 ಹಾಸಿಗೆಗಳ ಆಸ್ಪತ್ರೆ ಆಗಿರಬಹುದು ಬಸ್ ನಿಲ್ದಾಣವಾಗಿರಬಹುದು…